Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಛತ್ತೀಸ್ಗಢದಲ್ಲಿ 17 ಸ್ಥಳಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ದಾಳಿಗೊಳಗಾದ ಸ್ಥಳಗಳಲ್ಲಿ ಮಾಜಿ ಸಿಎಂ ಭೂಪೇಶ್ ಬಾಘೇಲ್ ಅವರ ನಿವಾಸವೂ ಒಂದು. ತನಿಖೆ ನಡೆಸಲು ಸಿಬಿಐ ತಂಡ ರಾಯ್ಪುರ ಮತ್ತು ಭಿಲೈ ತಲುಪಿದೆ. ಸಿಬಿಐಗೂ ಮುನ್ನ ಇಡಿ ತಂಡ ಭೂಪೇಶ್ ಬಾಘೇಲ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ಇಲ್ಲಿಯವರೆಗೆ ಬಂದಿರುವ ಮೂಲಗಳ ಪ್ರಕಾರ, ಸಿಬಿಐ ತಂಡಗಳು ಮಾಜಿ ಸಿಎಂ ಅವರ ರಾಯ್ಪುರ ಮತ್ತು ಭಿಲೈ ನಿವಾಸದ ಮೇಲೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಮಾಜಿ ಸಿಎಂ ಅವರಿಗೆ ಆಪ್ತರಾಗಿದ್ದ ಉದ್ಯಮಿಯೊಬ್ಬರ ಮನೆಯ ಮೇಲೆ ದಾಳಿ ನಡೆಸಿವೆ. ಮಹಾದೇವ್ ಆ್ಯಪ್ ಪ್ರಕರಣದಲ್ಲಿ ಈ ದಾಳಿ ನಡೆಸಲಾಗಿದೆ. ಪೊಲೀಸ್ ಅಧಿಕಾರಿಗಳ ಮನೆ ಮೇಲೆ ದಾಳಿ ಮಹಾದೇವ್ ಬೆಟ್ಟಿಂಗ್ ಆ್ಯಪ್ಗೆ ಸಂಬಂಧಿಸಿದಂತೆ ನಡೆಸಿದ ದಾಳಿಯ ಸಂದರ್ಭದಲ್ಲಿ, ಸಿಬಿಐ ಕೆಲವು ಪೊಲೀಸ್ ಅಧಿಕಾರಿಗಳ ನಿವಾಸಗಳ ಮೇಲೂ ದಾಳಿ ನಡೆಸಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಿರುವ ಪೊಲೀಸ್ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ…
ಮಂಗಳೂರು : ಊಟ ಮಾಡಿ ಮಲಗಿದ್ದ ಎರಡೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಣಾಜೆ ಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ರಾಜಾ ಸಿಂಗ್ ಮತ್ತು ದಿವ್ಯಾಂಶಿ ಸಿಂಗ್ ದಂಪತಿಯ ಎರಡೂವರೆ ವರ್ಷದ ಪುತ್ರ ರುದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ. ಈ ದಂಪತಿ ಕೊಣಾಜೆಯ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿತ್ತು. ಮಂಗಳವಾರ ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಮಗುವನ್ನು ಎಬ್ಬಿಸಲೆಂದು ನೋಡುವಾಗ ಏಳದೇ ಇದ್ದುದರಿಂದ ತಕ್ಷಣವೇ ಕಡಬದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದ ವೇಳೆ ಮಗು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಮಗು ಸಾವಿನ ಬಗ್ಗೆ ನಿಖರ ಕಾರಣ ತಿಳಿಯಲಿದೆ ಎಂದು ವೈದ್ಯರು ತಿಳಿಸಿದ್ದು, ತಾಯಿ ದಿವ್ಯಾಂಶಿ ಸಿಂಗ್ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಬೆನ್ನಲ್ಲೇ ಇದೀಗ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದಾರೆ. ದೆಹಲಿಯ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಸತೀಶ್ ಜಾರಕಿಹೊಳಿ ಭೇಟಿ ನೀಡಿದ್ದು, ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಇದಕ್ಕೂ ಮುನ್ನ ಇಂದು ಬೆಳಗ್ಗೆ ದೆಹಲಿಯ ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಡಿನ್ನರ್ ನಲ್ಲಿ ಭಾಗಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ. ಡಿನ್ನರ್ ಗೆ ಬರುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರೇ ಸತೀಶ್ ಜಾರಕಿಹೊಳಿ ಅವರನ್ನು ಆಹ್ವಾನಿಸಿದ್ದರು ಎನ್ನಲಾಗಿದ್ದು, ಈ ವೇಳೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ನಮ್ಮ ಸರ್ಕಾರ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳ ಕಾರಣದಿಂದ ರಾಜ್ಯದಲ್ಲಿ ಬಾಣಂತಿಯರ ಮರಣ ಪ್ರಮಾಣ ಶೇಕಡಾ 30 ರಷ್ಟು ಇಳಿಕೆ ಕಂಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಪ್ರಸವ ಪೂರ್ವ ಗರ್ಭಿಣಿಯರಿಗೆ ಕಡ್ಡಾಯ ತಪಾಸಣೆಗಳು, ಸಹಜ ಹೆರಿಗೆಗೆ ಆದ್ಯತೆ, ಅಧಿಕ ರಕ್ತಸ್ರಾವ ತಡೆಗಟ್ಟಲು ಕ್ರಮಗಳು, ಪ್ರಸೂತಿ ತಜ್ಞರಿಗೆ ಪುನರ್ ಮನನ ಸೇರಿದಂತೆ ಸೂಕ್ತ ಕ್ರಮಗಳನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಎಂದರು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಮನ್ವಯದ ಕೊರತೆ ನಿವಾರಿಸಲು ರಾಜ್ಯ ಮಟ್ಟದಿಂದ ತಾಲೂಕು ಮಟ್ಟದವರೆಗೆ ಒಂದು ಮಾರ್ಗಸೂಚಿಯನ್ನು ಅನುಸರಿಸಲಾಗುತ್ತಿದೆ. ಜೊತೆಗೆ ತಾಲೂಕು ಆಸ್ಪತ್ರೆಗಳಲ್ಲಿ ಇಬ್ಬರು ಪ್ರಸೂತಿ ತಜ್ಞರು, ಇಬ್ಬರು ಅರವಳಿಕೆ ತಜ್ಞರು ಮತ್ತು ಓರ್ವ ಮಕ್ಕಳ ತಜ್ಞರು ಲಭ್ಯವಿರುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ನುಡಿದಂತೆ ನಡೆಯುವ ನಮ್ಮ ಸರ್ಕಾರ ಬಾಣಂತಿಯರ ಮರಣ ಪ್ರಮಾಣ ತಗ್ಗಿಸಲು ಕಠಿಣ ಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಪ್ರತಿ ಜೀವವು ಅಮೂಲ್ಯವಾಗಿದ್ದು, ಜನರ ಆರೋಗ್ಯ ರಕ್ಷಣೆಗೆ…
ಬೆಳಗಾವಿ : ಬೆಳಗಾವಿಯ ಬಸವನ ಕುಡುಚಿ ಗ್ರಾಮದಲ್ಲಿ ಎತ್ತಿನ ಬಂಡಿ ಹರಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿಯ ಬಸವನ ಕುಡುಚಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಬಸವಣ್ಣನ ಜಾತ್ರೆಯಲ್ಲಿ 27 ವರ್ಷದ ಅಪ್ಪಣ್ಣ ಪಾಟೀಲ್ ಎಂಬ ಯುವಕನ ಮೇಲೆ ಎತ್ತಿನ ಬಂಡಿ ಹರಿದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಇಂದು ಕೊನೆಯುಸಿರೆಳೆದಿದ್ದಾನೆ.
ಹೈದರಾಬಾದ್ : ದೇಶದಲ್ಲಿ ಆನ್ ಲೈನ್ ಬೆಟ್ಟಿಂಗ್ ಗೆ ಮತ್ತೊಂದು ಬಲಿಯಾಗಿದ್ದು, ವಾಟ್ಸಪ್ ಸ್ಟೇಟಸ್ ಹಾಕಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಚೋಡವರಂ ಮಂಡಲದ ಭೋಗಪುರಂ ಗ್ರಾಮದ ರಮಣ ಮತ್ತು ಕನಕಮ್ಮ ದಂಪತಿ ಮಗ ಸೋಮೇಶ್ ಕುಮಾರ್ ಎಂಬಾತ (29) ಆತ್ಮಹತ್ಯೆ ಮಾಡಿಕೊಮಡ ಯುವಕ ಕೊಂಪಲ್ಲಿ ಬಳಿಯ ಕಂಪನಿಯ ಗೋದಾಮಿನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ಗೆ ವ್ಯಸನಿಯಾಗಿದ್ದ ಸೋಮೇಶ್ ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡರು. ತನ್ನ ಸಹೋದರಿಯ ಮದುವೆಗಾಗಿ ತನ್ನ ಕುಟುಂಬವು ಉಳಿಸಿದ್ದ ಹಣವನ್ನೂ ಬೆಟ್ಟಿಂಗ್ನಲ್ಲಿ ಕಳೆದುಕೊಂಡನು. ವಿಷಯ ತಿಳಿದ ಮನೆಯವರು ಮಗನನ್ನು ಬೈದಿದ್ದಾರೆ. ಬೆಟ್ಟಿಂಗ್ನಿಂದಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದ ಸೋಮಶ್ ಕುಮಾರ್ ಗೆ ಪೋಷಕರು 3.5 ಲಕ್ಷ ರೂಪಾಯಿಗಳನ್ನು ಪಾವತಿಸಿದ್ದರು. ಇನ್ನು ಮುಂದೆ ಬೆಟ್ಟಿಂಗ್ನಲ್ಲಿ ತೊಡಗುವುದಿಲ್ಲ ಎಂದು ಹೇಳಿದ್ದ ಸೋಮೇಶ್ ಕುಮಾರ್, ಇತ್ತೀಚೆಗೆ ಐಪಿಎಲ್ ಕ್ರಿಕೆಟ್ ಆರಂಭವಾದಾಗ ಮತ್ತೆ ಬೆಟ್ಟಿಂಗ್ನತ್ತ ಮುಖ ಮಾಡಿದರು. ಕಳೆದ ಸೋಮವಾರ ರಾತ್ರಿ…
ತುಮಕೂರು : ಮಲತಂದೆಯೇ 4 ವರ್ಷದ ಮಗುವನ್ನು ಹೊಡೆದು ಕೊಲೆ ಮಾಡಿರುವ ಘಟನೆ ತುಮಕೂರಿನ ಸಿದ್ದಲಿಂಗಯ್ಯಪಾಳ್ಯದಲ್ಲಿ ನಡೆದಿದೆ. ತುಮಕೂರಿನ ಸಿದ್ದಲಿಂಗಯ್ಯನಪಾಳ್ಯದಲ್ಲಿ ವಿವಾಹಿತೆ ಮಹಿಳೆ ಕಾನ್ಯ ಚಂದ್ರಶೇಖರ್ ಎಂಬುವರ ಜೊತಗೆ ಓಡಿ ಹೋಗಿ ಮದುವೆಯಾಗಿದ್ದರು. ಈ ವೇಳೆ ಕಾವ್ಯ ಗರ್ಭಿಣಿಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಈ ಮಗು ನನ್ನದಲ್ಲ ಎಂದು ಚಂದ್ರಶೇಖರ್ ಪದೇ ಪದೇ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಮಗುವನ್ನು ಹೊಡೆದು ಕೊಂದು ಬಳಿಕ ಮಗು ಹಾವು ಕಚ್ಚಿ ಸಾವನ್ನಪ್ಪಿದೆ ಎಂದು ಹೇಳಿ ಅಂತ್ಯಸಂಸ್ಕಾರ ಮಾಡಿದ್ದರು. ಆದರೆ ಮಗುವಿನ ಸಾವಿನ ಬಗ್ಗೆ ಸಂಶಯ ಮೂಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮಗುವಿನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿ ಚಂದ್ರಶೇಖರ್ ರನನ್ನು ಬಂಧಿಸಲಾಗಿದೆ.
ನವದೆಹಲಿ : ವಿಮೆ ತೆಗೆದುಕೊಳ್ಳುವುದು ಒಳ್ಳೆಯದು, ಆದರೆ ಒಂದು ವಿಷಯವನ್ನು ಯಾವಾಗಲೂ ನೆನಪಿಟ್ಟುಕೊಳ್ಳುವುದು ಮುಖ್ಯ. ನೀವು ಕಂಪನಿಯ ವಿಮೆ ಫಾರ್ಮ್ ಅನ್ನು ಭರ್ತಿ ಮಾಡುವಾಗ, ಅದನ್ನು ಎಚ್ಚರಿಕೆಯಿಂದ ಓದಿ, ಅರ್ಥಮಾಡಿಕೊಳ್ಳಿ ಮತ್ತು ನಿಮ್ಮ ಎಲ್ಲಾ ವಿವರಗಳನ್ನು ಮುಕ್ತವಾಗಿ ಹೇಳಿ. ಕೆಲವರು ಮದ್ಯಪಾನ ಮಾಡುತ್ತಾರೆ ಅಥವಾ ತಂಬಾಕು ಬಳಸುತ್ತಾರೆ, ಆದರೆ ವಿಮೆ ತೆಗೆದುಕೊಳ್ಳುವಾಗ ಈ ಸಂಗತಿಯನ್ನು ಮರೆಮಾಡುತ್ತಾರೆ. ಹೀಗೆ ಮಾಡುವುದರಿಂದ ಭವಿಷ್ಯದಲ್ಲಿ ಸಮಸ್ಯೆಗಳು ಉಂಟಾಗಬಹುದು ಎಂದು ಅವರಿಗೆ ಬಹುಶಃ ತಿಳಿದಿರುವುದಿಲ್ಲ. ನೀವು ಅಥವಾ ನಿಮ್ಮ ಕುಟುಂಬವು ವಿಮಾ ಹಣವನ್ನು ಪಡೆಯದಿರಬಹುದು ಮತ್ತು ನಿಮ್ಮ ಕ್ಲೈಮ್ ಅನ್ನು ತಿರಸ್ಕರಿಸಬಹುದು. ಸುಪ್ರೀಂ ಕೋರ್ಟ್ ಕೂಡ ಈ ಬಗ್ಗೆ ಸ್ಪಷ್ಟವಾಗಿ ಹೇಳಿದೆ. ಆರೋಗ್ಯ ವಿಮೆಯನ್ನು ಖರೀದಿಸುವಾಗ ಯಾರಾದರೂ ತಮ್ಮ ಕುಡಿಯುವ ಅಭ್ಯಾಸವನ್ನು ಮರೆಮಾಡಿದರೆ, ಸಾವಿಗೆ ಕಾರಣ ನೇರವಾಗಿ ಮದ್ಯಪಾನಕ್ಕೆ ಸಂಬಂಧಿಸಿಲ್ಲದಿದ್ದರೂ ಸಹ, ವಿಮಾ ಕಂಪನಿಯು ಅವರ ಕ್ಲೈಮ್ ಅನ್ನು ತಿರಸ್ಕರಿಸಬಹುದು. ಭಾರತೀಯ ಜೀವ ವಿಮಾ ನಿಗಮ (LIC) ಕ್ಲೈಮ್ ಅನ್ನು ತಿರಸ್ಕರಿಸಿದ ಪ್ರಕರಣದಿಂದ ಇದು ಸ್ಪಷ್ಟವಾಯಿತು. ನ್ಯಾಯಾಧೀಶರಾದ…
ನವದೆಹಲಿ : ಹಾಲು ಉತ್ಪಾದನೆಯಲ್ಲಿ ಭಾರತ ಇಡೀ ವಿಶ್ವದಲ್ಲೇ ಮುಂಚೂಣಿಯಲ್ಲಿದೆ. ಪ್ರಸ್ತುತ ನಮ್ಮ ದೇಶದಲ್ಲಿ 239 ಮಿಲಿಯನ್ ಮೆಟ್ರಿಕ್ ಟನ್ ಹಾಲು ಉತ್ಪಾದಿಸಲಾಗುತ್ತಿದೆ. ಇದನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಭಾರತೀಯ ಪಶುಸಂಗೋಪನಾ ಸಚಿವಾಲಯವು ಮುಂದಿನ 5 ವರ್ಷಗಳಲ್ಲಿ ಹಾಲು ಉತ್ಪಾದನೆಯನ್ನು 300 ಮಿಲಿಯನ್ ಮೆಟ್ರಿಕ್ ಟನ್ಗಳಿಗೆ ಹೆಚ್ಚಿಸುವ ಗುರಿಯನ್ನು ಹೊಂದಿದೆ. ಇದು ಭಾರತೀಯ ಆರ್ಥಿಕತೆಗೆ ಮಾತ್ರವಲ್ಲದೆ ಪಶುಸಂಗೋಪನಾ ರೈತರಿಗೂ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಮಂಗಳವಾರ, ಭಾರತದ ಪಶುಸಂಗೋಪನಾ ಸಚಿವಾಲಯದ ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಅವರು ಲೋಕಸಭೆಯಲ್ಲಿ ಭಾರತೀಯ ಹಾಲು ಉತ್ಪಾದನೆಗೆ ಸಂಬಂಧಿಸಿದ ಹಲವು ವಿಷಯಗಳನ್ನು ಹೇಳಿದರು. ಭಾರತೀಯ ಪಶುಸಂಗೋಪನಾ ಸಚಿವಾಲಯ ಏನು ಹೇಳಿದೆ? ನಿನ್ನೆ ಅಂದರೆ ಮಂಗಳವಾರ ನಡೆದ ಲೋಕಸಭಾ ಸಭೆಯಲ್ಲಿ, ಭಾರತದ ಪಶುಸಂಗೋಪನಾ ಸಚಿವಾಲಯದ ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್, ಹಾಲು ಉತ್ಪಾದನೆಗೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಹೇಳಿದರು. ಮೋದಿ ಸರ್ಕಾರ ರಾಷ್ಟ್ರೀಯ ಗೋಕುಲ್ ಮಿಷನ್ ಅನ್ನು ಪ್ರಾರಂಭಿಸಿದಾಗಿನಿಂದ ರಾಜೀವ್ ಹೇಳಿದರು. ಅಂದಿನಿಂದ, ಭಾರತೀಯ ಹಾಲು…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಪತ್ನಿಯನ್ನು ಕೊಂದು ಬಳಿಕ ಪತಿಯೇ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಗ್ಗಡೆ ನಗರದಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಮೇಲಾರಮಣಿ (35) ಕೊಲೆಯಾದ ಮಹಿಳೆ. ಚಂದ್ರಶೇಖರ್ ಪತ್ನಿಯನ್ನೇ ಕೊಲೆಗೈದ ಪತಿ. ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿದ್ದ ಪತ್ನಿ ಯಾವಾಗಲೂ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದರಿಂದ ಹೆಂಡತಿ ಮೇಲೆ ಅನುಮಾನಗೊಂಡು ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಸಂಪಿಗೆಹಳ್ಳಿ ಪೊಲಿಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.