Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಹೊಸ ಪ್ಲಾನ್ ಮಾಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗುತ್ತಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ವಸೂಲಿ ಮಾಡಲಾಗುತ್ತಿದೆ. ಕಾನೂನು ಕೈಗೆತ್ತಿಕೊಳ್ಳಲು ನಿಮಗೆ ಅನುಮತಿ ಕೊಟ್ಟವರು ಯಾರು,? ಸಾಲ ವಸೂಲಿಗೆ ರೌಡಿಗಳನ್ನು ಇಟ್ಟುಕೊಂಡಿದ್ದೀರಾ? ಎಂದು ಗರಂ ಆಗಿದ್ದಾರೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ. ಪಾಟೀಲ್. ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಬಳ್ಳಾರಿ : ರಾಜ್ಯದಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಬಳ್ಳಾರಿಯಲ್ಲಿ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣಕಾರು ಅಪಹರಿಸಿರುವ ಘಟನೆ ನಡೆದಿದೆ. ಬಳ್ಳಾರಿ ನಗರದ ಸೂರ್ಯನಾರಾಯಣ ನಗರದ ಶನೇಶ್ವರ ಗುಡ ಬಳಿ ವಾಕಿಂಗ್ ಗೆ ಹೋಗಿದ್ದ ಡಾ. ಸುನೀಲ್ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದು, 6 ಕೋಟಿ ರೂ. ಒತ್ತೆ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರನ್ನು ತಕ್ಷಣ ಬಾಯಿಮುಚ್ಚಿ ಕಾರಿನಲ್ಲಿ ಕೂಡಿಸಿಕೊಂಡು ತೆರಳಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ವಾಕಿಂಗ್ ಮಾಡುವಾಗ ಅಪರಿಚಿತ ವ್ಯಕ್ತಿಗಳು ಶನಿವಾರ ಬೆಳಗ್ಗೆ ಕಿಡ್ನಾಪ್ ಮಾಡಿದ್ದು, 6ಕೋಟಿ ರೂಗಳಿಗೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ.
ಬಳ್ಳಾರಿ : ರಾಜ್ಯದಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಬಳ್ಳಾರಿಯಲ್ಲಿ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣಕಾರು ಅಪಹರಿಸಿರುವ ಘಟನೆ ನಡೆದಿದೆ. ಬಳ್ಳಾರಿ ನಗರದ ಸೂರ್ಯನಾರಾಯಣ ನಗರದ ಶನೇಶ್ವರ ಗುಡ ಬಳಿ ವಾಕಿಂಗ್ ಗೆ ಹೋಗಿದ್ದ ಡಾ. ಸುನೀಲ್ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದು, 6 ಕೋಟಿ ರೂ. ಒತ್ತೆ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರನ್ನು ತಕ್ಷಣ ಬಾಯಿಮುಚ್ಚಿ ಕಾರಿನಲ್ಲಿ ಕೂಡಿಸಿಕೊಂಡು ತೆರಳಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ವಾಕಿಂಗ್ ಮಾಡುವಾಗ ಅಪರಿಚಿತ ವ್ಯಕ್ತಿಗಳು ಶನಿವಾರ ಬೆಳಗ್ಗೆ ಕಿಡ್ನಾಪ್ ಮಾಡಿದ್ದು, 6ಕೋಟಿ ರೂಗಳಿಗೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ.
ನವದೆಹಲಿ : ಹೊಸ ಖರೀದಿಸುವವರಿಗೆ ಮಾರುತಿ ಸುಜುಕಿ ಕಂಪನಿ ಬಿಗ್ ಶಾಕ್ ನೀಡಿದೆ. ಮಾರುತಿ ಸುಜುಕಿ ಇಂಡಿಯಾ ಕಂಪನಿ ವಿವಿಧ ಮಾಡೆಲ್ನ ಕಾರುಗಳ ಬೆಲೆಯನ್ನು ಫೆ. 1ರಿಂದ ಸುಮಾರು 32,500 ರೂ.ವರೆಗೆ ಹೆಚ್ಚಳ ಮಾಡಲಿದೆ ಎಂದು ತಿಳಿಸಿದೆ. ಕಾರ್ಯಾಚರಣೆ ವೆಚ್ಚ ಮತ್ತು ತಯಾರಿಕೆ ವೆಚ್ಚ ಹೆಚ್ಚಾಗಿರುವುದರಿಂದ ಈ ಕ್ರಮಕ್ಕೆ ಮುಂದಾಗಿರುವುದಾಗಿ ಕಂಪನಿ ಗುರುವಾರ ತಿಳಿಸಿದೆ. ಸೆಲೆರಿಯೊ 32,500 ರೂ., ಇನ್ಕ್ಟೋ 30 ಸಾವಿರ ರೂ., ವ್ಯಾಗನ್ ಆರ್ 15 ಸಾವಿರ ರೂ., ಸ್ವಿಫ್ಟ್ 5 ಸಾವಿರ ರೂ., ಬ್ರೆಜಾ ಮತ್ತು ಗ್ರಾಂಡ್ ವಿತಾರಾ ಕ್ರಮವಾಗಿ 20 ಸಾವಿರ ಮತ್ತು 25 ಸಾವಿರ ರೂ., ಆಲ್ಲೊ ಕೆ10 ಸುಮಾರು 19,500 ರೂ., ಎಸ್-ಪ್ರೆಷ್ಟೊ 5 ಸಾವಿರ ರೂ., ಬಲೆನೊ 9 ಸಾವಿರ ರೂ., ಫ್ರಾಂಕ್ಸ್ 5,500 ರೂ., ಡಿಜೈರ್ 10 ಸಾವಿರ ರೂ. ಹೆಚ್ಚಾಗಲಿದೆ ಎಂದು ಕಂಪನಿ ತಿಳಿಸಿದೆ. ಕಂಪನಿ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಗ್ರಾಹಕರ ಮೇಲಿನ ಪರಿಣಾಮವನ್ನು ಕಡಿಮೆ ಮಾಡಲು…
ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭ ಧರಿಸಿದಂತಹ ಹಸುವಿನ ತಲೆಕೆಡಿದು ಮಾಂಸ ಕದ್ದು ದುರುಳರು ವಿಕೃತಿ ಮೇರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಹೊನ್ನಾವರ ತಾಲೂಕಿನ ವಲ್ಕಿಯ ತೌಫಿಕ್ ಅಹ್ಮದ್ ಜಿದ್ದಾ ಬಂಧಿತ ಆರೋಪಿ. ಜನವರಿ 19ರಂದು ಹಸುವಿನ ಹತ್ಯೆ ನಡೆದಿತ್ತು. ಹಸುವಿನ ರುಂಡ ಬೇರ್ಪಡಿಸಿ, ಕಾಲು ಕತ್ತರಿಸಿ ದೇಹದ ಭಾಗವನ್ನು ದುಷ್ಕರ್ಮಿಗಳು ಹೊತ್ತೊಯ್ದಿದ್ದರು. ಈ ಘಟನೆ ಖಂಡಿಸಿ ಜಿಲ್ಲೆಯಾದ್ಯಂತ ಅಕ್ರೋಶ ವ್ಯಕ್ತವಾಗಿತ್ತು. ಘಟನೆ ಹಿನ್ನೆಲೆ? ಜನವರಿ 19ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಹಸುವಿನ ತಲೆ ಕಡೆದು ದುಷ್ಕರ್ಮಿಗಳು ಮಾಂಸವನ್ನು ಕದ್ದು ಒಯ್ದಿದ್ದರು. ಕೃಷ್ಣ ಆಚಾರಿ ಎಂಬುವವರ ಹಸುವನ್ನು ಮೇಯಲು ಕಾಡಿಗೆ ಬಿಟ್ಟಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹುಡಕಾಡಿದರೂ ಪತ್ತೆ ಆಗಿಲಿಲ್ಲ. ಆದರೆ ಮರುದಿನ ಬೆಳಗ್ಗೆ ಮಾಲೀಕರಿಗೆ ಆಘಾತ ಕಾದಿತ್ತು. ಮನೆಯಿಂದ ಅನತಿ ದೂರದಲ್ಲೇ ಹಸುವಿನ ತಲೆ ಕತ್ತರಿಸಿ ಬಿದ್ದಿತ್ತು. ಹಸುವಿನ ಕಾಲು ಕಾಣಸಿತ್ತು. ದುಷ್ಟರು…
ಬೆಂಗಳೂರು : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು. ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು. ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ…
ಮೈಸೂರು : ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಬಡ ಕುಟುಂಬಗಳ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷಿö್ಮ ಯೋಜನೆಯನ್ನು ಜಾರಿಗೆ ತಂದು, ಸಂಕಷ್ಟದಲ್ಲಿದ್ದವರಿಗೆ ನೆರವಾಗುವುದು, ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಯೋಜನೆಯ ಆಶಯವಾಗಿದ್ದು, ಮಹಿಳಾ ಕೂಲಿ ಕಾರ್ಮಿಕರು, ಬಡ ಕುಟುಂಬದ ಮಹಿಳೆಯರಿಗೆ ರಾಜ್ಯ ಸರ್ಕಾರದ ಗೃಹಲಕ್ಷ್ಮಿಯೋಜನೆಯು ಆಸರೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವ ಕ್ಷೇತ್ರ ವರುಣಾ ವಿಧಾನಸಭಾ ಕ್ಷೇತ್ರಕ್ಕೆಸೇರಿದ ರಾಂಪುರದಲ್ಲಿ ಮಹಿಳೆಯೊಬ್ಬರು ತಮ್ಮ ಖಾತೆಗೆ ಬಂದಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಳಸಿಕೊಂಡು ಶೌಚಾಲಯ ನಿರ್ಮಿಸಿಕೊಂಡಿದ್ದಾರೆ. ಹೌದು, ಗ್ರಾಮದ ನಿವಾಸಿ ಮಂಜುಳಾ ಎಂಬುವರು ಟೈಲರಿಂಗ್ ವೃತ್ತಿ ಮಾಡಿ ಕೊಂಡಿದ್ದು, ಹೊಲಿಗೆ ಯಂತ್ರ ಖರೀದಿ ಸುವ ಉದ್ದೇಶದಿಂದ ಪ್ರತಿ ತಿಂಗಳು ಬರುತ್ತಿದ್ದ 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಶೌಚಾಲಯ ನಿರ್ಮಿಸಿಕೊಂಡಿದ್ದಾರೆ. ಡಿಸೆಂಬರ್ನಲ್ಲಿ ಗ್ರಾಮದಲ್ಲಿ ನಡೆದ ಶೌಚಾಲಯ ಬಳಕೆ ಜಾಗೃತಿ ಜಾಥಾವು ಸ್ವಂತಕ್ಕೆ ಶೌಚಗೃಹ ಕಟ್ಟಿಸಿಕೊಳ್ಳಲು ಪ್ರೇರಣೆಯಾಯಿತು ಎಂದು ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾವು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದಂತ ಡಾ.ಶಿವ ಶಂಕರ್.ಎನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಕೂಡಲೇ ಜಾರಿಗೆ ಬರುವಂತೆ ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್, ಬೆಂಗಳೂರು ಇದರ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಮಹಾಂತೇಶ್ ಬಿಳಗಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಹಾಂತೇಶ್ ಬಿಳಗಿ ಅವರನ್ನು ಬಿಇಎಸ್ ಸಿ ಎಲ್ ನ ಎಂಡಿ ಹುದ್ದೆಯಿಂದ ವರ್ಗಾವಣೆ ಮಾಡಿ ಮ್ಯಾನೇಜಿಂಗ್ ಡೈರೆಕ್ಟರ್, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್, ಬೆಂಗಳೂರು ಇಲ್ಲಿಗೆ ನೇಮಿಸಲಾಗಿದೆ. ಇಲ್ಲಿದ್ದಂತ ಜಯವಿಭವಸ್ವಾಮಿ ಅವರನ್ನು ವರ್ಗಾವಣೆ ಮಾಡಿದೆ. ಧಾರವಾಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟಿ.ಕೆ., ಐಎಎಸ್ (ಕೆಎನ್: 2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ…
ಬೆಂಗಳೂರು :ಜನವರಿ 26 ರ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ. ಮುಂದುವರೆದು, ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.
ಬೆಂಗಳೂರು : ಬೆನ್ನು ನೋವಿನಿಂದ ಬಳಲುತ್ತಿದ್ದ ನಟ ದರ್ಶನ್ ಗೆ ಸದ್ಯಕ್ಕೆ ಆಪರೇಷನ್ ಮಾಡಲಾಗುವುದಿಲ್ಲ. ಅವರಿಗೆ ಕೊಟ್ಟ ಎಪಿಡೂರಲ್ ಇಂಜಕ್ಷನ್ ವರ್ಕ್ ಆಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದ ದರ್ಶನ್ ಅವರಿಗೆ ಸರ್ಜರಿ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಕಳೆದ ವಾರ ಕೊಟ್ಟ ಎಪಿಡೂರಲ್ ಇಂಜಕ್ಷನ್ ವರ್ಕ್ ಆಗಿದ್ದು, ದರ್ಶನ್ ಬೆನ್ನು ನೋವಿನಲ್ಲಿ ಸಾಕಷ್ಟು ಸುಧಾರಣೆಯಾಗಿದ್ದು, ಸದ್ಯಕ್ಕೆ ಬೆನ್ನು ನೋವಿನ ಆಪರೇಷನ್ ಬೇಡ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ಬೆನ್ನು ನೋವಿನ ಹಿನ್ನೆಲೆಯಲ್ಲಿ ನಟ ದರ್ಶನ್ ಗೆ ಈಗಾಗಲೇ ಹಲವು ಟೆಸ್ಟ್ ಗಳನ್ನು ನಡೆಸಲಾಗಿದ್ದು, ಬೆನ್ನು ನೋವಿಗೆ ಆಪರೇಷನ್ ಮಾಡಲೇಬೇಕು ಎಂದು ನಿರ್ಧರಿಸಲಾಗಿತ್ತು. ಆದರೆ ಇದೀಗ ನಟ ದರ್ಶನ್ ಇಂಜಕ್ಷನ್ ನೀಡಿದ್ದು, ವರ್ಕ್ ಆಗಿದೆ ಹೀಗಾಗಿ ಸದ್ಯಕ್ಕೆ ಆಪರೇಷನ್ ಮಾಡದಿರಲು ವೈದ್ಯರು ನಿರ್ಧರಿಸಿದ್ದಾರೆ ಎನ್ನಲಾಗಿದೆ.









