Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಪ್ರಸ್ತುತ ನಡೆಯುತ್ತಿರುವ ಕೆ.ಪಿ.ಎಸ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ದ್ವಿಭಾಷಾ ಮಾಧ್ಯಮ ತರಗತಿಗಳ ಜೊತೆಗೆ ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮದ ವಿಭಾಗಗಳನ್ನು ಪ್ರಾರಂಭಿಸುವ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ. ವಿಷಯಾನ್ವಯವಾಗಿ ಉಲ್ಲೇಖ-1ರನ್ವಯ ಸರ್ಕಾರಿ ಶಾಲೆಗಳ ಬಲವರ್ಧನೆ ಸಂಬಂಧ ಪ್ರಸ್ತುತ ನಡೆಯುತ್ತಿರುವ 286 ಕೆ.ಪಿ.ಎಸ್ ಶಾಲೆಗಳ ಪೈಕಿ ಮಕ್ಕಳ ದಾಖಲಾತಿ ಹೆಚ್ಚಿರುವ ಕೆಲವು ಆಯ್ದ ಶಾಲೆಗಳಲ್ಲಿ 42 ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) ಮತ್ತು 51 ಒಂದನೇ ತರಗತಿ ಶಾಲೆಗಳಲ್ಲಿ ಹಾಲಿ ನಡೆಯುತ್ತಿರುವ ಮಾಧ್ಯಮದಲ್ಲಿ ಹೆಚ್ಚುವರಿಯಾಗಿ ಅಂಗ್ಲ ಮಾಧ್ಯಮದ ವಿಭಾಗಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಅನುಮೋದನೆ ಕೋರಲಾಗಿರುತ್ತದೆ. ಉಲ್ಲೇಖ-2ರನ್ವಯ ಸರ್ಕಾರವು ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಒಟ್ಟು 286 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ ಈ ಆದೇಶದ ಅನುಬಂಧ-1ರಲ್ಲಿನ 42 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿಯಾಗಿ ಎಲ್.ಕೆ.ಜಿ ತರಗತಿಗಳನ್ನು ಪ್ರಾರಂಭಿಸಲು ಮತ್ತು ಅನುಬಂಧ. 2ರಲ್ಲಿನ 51 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ 1ನೇ ತರಗತಿಯ ಅಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿ ವಿಭಾಗವನ್ನು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಕೊಲೆ ನಡೆದ ಸ್ಥಳದ ಫೋಟೋವನ್ನು ಪೊಲೀಸರು ಇದೀಗ ರಿಕವರಿ ಮಾಡಿದ್ದಾರೆ. ಹೌದು ಪ್ರತ್ಯಕ್ಷದರ್ಶಿ ಮೊಬೈಲ್ ಫೋನಿನಿಂದ ಎರಡು ಫೋಟೋಗಳನ್ನು ಪೊಲೀಸರು ರಿಕವರಿ ಮಾಡಿದ್ದಾರೆ. ಆರೋಪಿ ಪುನೀತ್ ಮೊಬೈಲ್ ನಲ್ಲಿದ್ದ ಎರಡು ಫೋಟೋಗಳನ್ನು ಇದೀಗ ಪೊಲೀಸರು ರಿಕವರಿ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ನಡೆದ ಶೆಡ್ ನಲ್ಲಿ ದರ್ಶನ್ ನಿಂತಿರುವ ಫೋಟೋ ಇದಾಗಿದ್ದು, ಬ್ಲಾಕ್ ಜೀನ್ಸ್ ಪ್ಯಾಂಟ್ ಹಾಗೂ ಬ್ಲೂ ಟಿ-ಶರ್ಟ್ ಧರಿಸಿ ದರ್ಶನ್ ನಿಂತಿದ್ದರು. ಎಲ್ಲಾ ಆರೋಪಿಗಳ ಜೊತೆಗೆ ದರ್ಶನ್ ನಿಂತಿರುವ ಫೋಟೋವನ್ನು ರಿಕವರಿ ಮಾಡಿದ್ದಾರೆ. ಕೊಲೆ ಬಳಿಕ ತನ್ನ ಮೊಬೈಲ್ ನಲ್ಲಿದ್ದ ಫೋಟೋಗಳನ್ನು ಆರೋಪಿ ಪುನೀತ್ ಡಿಲೀಟ್ ಮಾಡಿದ್ದ. ಪುನೀತ್ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ಎಫ್ ಎಸ್ ಎಲ್ ಗೆ ರವಾನೆ ಮಾಡಿದ್ದರು. ಚಾರ್ಜ್ ಶೀಟ್ ನಲ್ಲಿ ಎರಡು ಫೋಟೋ ಬಗ್ಗೆ ಪೊಲೀಸರು ಉಲ್ಲೇಖಿಸಿದ್ದಾರೆ.
ಬೆಂಗಳೂರು : ಪಡಿತರ ಚೀಟಿ ಹೊಂದಿರುವವರಾಗಿದ್ದರೆ, ಡಿಸೆಂಬರ್ 1 ರ ಮೊದಲು ನಿಮ್ಮ ಇ-ಕೆವೈಸಿ ಪೂರ್ಣಗೊಳಿಸುವುದು ಬಹಳ ಮುಖ್ಯ. ಇದನ್ನು ಮಾಡದಿದ್ದರೆ ನಿಮ್ಮ ಪಡಿತರ ಚೀಟಿ ರದ್ದಾಗಬಹುದು. ಕೇಂದ್ರ ಸರ್ಕಾರವು ಈಗಾಗಲೇ ಎಲ್ಲಾ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡುವಂತೆ ಸೂಚನೆಗಳನ್ನು ನೀಡಿದ್ದು, ಸೆಪ್ಟೆಂಬರ್ 1 ಕೊನೆಯ ದಿನಾಂಕವಾಗಿತ್ತು. ಆದರೆ, ಇ-ಕೆವೈಸಿ ಮಾಡದವರಿಗೆ ಸರ್ಕಾರ ಒಂದು ತಿಂಗಳು ವಿಸ್ತರಿಸಿತ್ತು. ಈಗ ಈ ದಿನಾಂಕವನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಈ ದಿನಾಂಕದೊಳಗೆ ಇ-ಕೆವೈಸಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗದಿದ್ದರೆ, ನಿಮ್ಮ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುತ್ತದೆ. ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್…
ನವದೆಹಲಿ : ಒಂದು ಪ್ರೇಮ ಸಂಬಂಧವು ಲೈಂಗಿಕ ಸಂಭೋಗವು ಒಪ್ಪಿಗೆಯಿಂದ ಕೂಡಿರುತ್ತದೆ ಮತ್ತು ದೈಹಿಕ ಸಂಬಂಧಗಳು ಸಹ ಸ್ಥಾಪಿಸಲ್ಪಡುತ್ತವೆ ಮತ್ತು ಈ ಸಂಬಂಧವು ಮುರಿದುಹೋಗುತ್ತದೆ; ಅಂತಹ ಪರಿಸ್ಥಿತಿಯಲ್ಲಿ, ಪುರುಷನ ವಿರುದ್ಧ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯದ ಅಪರಾಧವನ್ನು ದಾಖಲಿಸಲಾಗುವುದಿಲ್ಲ. ಇಂತಹ ಪ್ರಕರಣಗಳನ್ನು ಯಾವುದೇ ರೀತಿಯಲ್ಲಿ ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ, ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 2019 ರಲ್ಲಿ, ದೂರುದಾರ ಮಹಿಳೆ ತನ್ನ ಗೆಳೆಯ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ, ಲೈಂಗಿಕವಾಗಿ ಶೋಷಿಸಿದನು ಮತ್ತು ಮದುವೆಯಾಗುವುದಾಗಿ ಭರವಸೆ ನೀಡಿದ ನಂತರ ತನ್ನೊಂದಿಗೆ ಬಲವಂತವಾಗಿ ದೈಹಿಕ ಸಂಬಂಧವನ್ನು ಹೊಂದಿದ್ದಾನೆ ಎಂದು ಆರೋಪಿಸಿದ್ದಳು. ನೀವು ಲೈಂಗಿಕ ಸಂಬಂಧ ಹೊಂದಿಲ್ಲದಿದ್ದರೆ ನಿಮ್ಮ ಕುಟುಂಬಕ್ಕೆ ಹಾನಿ ಮಾಡುತ್ತೇನೆ ಎಂದು ಮಹಿಳೆಗೆ ಬೆದರಿಕೆ ಹಾಕಿದ್ದರು. ಮಹಿಳೆ ಆತನ ವಿರುದ್ಧ ಅಪರಾಧ ದಾಖಲಿಸಿದ್ದಳು. ಆ ಬಳಿಕ ಆರೋಪಿಯು ಆರೋಪವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣವು ದೆಹಲಿ ಹೈಕೋರ್ಟ್ಗೆ ಹೋದಾಗ, ನ್ಯಾಯಾಲಯವು ಈ ಬೇಡಿಕೆಯನ್ನು ತಿರಸ್ಕರಿಸಿತು, ತರುವಾಯ ಈ ಪ್ರಕರಣವು…
ಪೇಶಾವರ: ವಾಯುವ್ಯ ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಕುರ್ರಾಮ್ ಜಿಲ್ಲೆಯ ಅಲಿಜೈ ಮತ್ತು ಬಗಾನ್ ಬುಡಕಟ್ಟು ಜನಾಂಗದವರ ನಡುವೆ ಗುರುವಾರ ಪ್ರಯಾಣಿಕರ ವ್ಯಾನ್ಗಳ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ನಂತರ ಘರ್ಷಣೆಗಳು ನಡೆದಿದ್ದು, ಇದರಲ್ಲಿ 47 ಜನರು ಸಾವನ್ನಪ್ಪಿದ್ದಾರೆ. ಬಲಿಷ್ಖೇಲ್, ಖಾರ್ ಕಾಳಿ, ಕುಂಜ್ ಅಲಿಜೈ ಮತ್ತು ಮಕ್ಬಾಲ್ನಲ್ಲಿಯೂ ಗುಂಡಿನ ದಾಳಿ ಮುಂದುವರೆದಿದೆ. ಬುಡಕಟ್ಟು ಜನಾಂಗದವರು ಭಾರಿ ಮತ್ತು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಪರಸ್ಪರ ಗುರಿಯಾಗಿಸುತ್ತಿದ್ದಾರೆ. ಘರ್ಷಣೆಯಲ್ಲಿ ಈವರೆಗೆ 18 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ. ಘರ್ಷಣೆಯಲ್ಲಿ 37 ಸಾವುಗಳು ಸಂಭವಿಸಿವೆ ಎಂದು ಸ್ವತಂತ್ರ ಮತ್ತು ಮಾಧ್ಯಮ ಮೂಲಗಳು ವರದಿ ಮಾಡಿವೆ. ಘರ್ಷಣೆಯಲ್ಲಿ ಮನೆಗಳು ಮತ್ತು ಅಂಗಡಿಗಳು ಸಹ ಹಾನಿಗೊಳಗಾಗಿವೆ. ವಿವಿಧ ಗ್ರಾಮಗಳ ಜನರು ಸುರಕ್ಷಿತ ಸ್ಥಳಗಳಿಗೆ ಪಲಾಯನ ಮಾಡಿದ್ದಾರೆ. ಪರಿಸ್ಥಿತಿ ಹದಗೆಡುತ್ತಿರುವ ಕಾರಣ,…
ಬೆಂಗಳೂರು : 2025ನೇ ಮಾರ್ಚ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ / ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ನವೆಂಬರ್ 30 ರವರೆಗೆ ಅವಕಾಶ ನೀಡಲಾಗಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದ್ದು, 2025ನೇ ಮಾರ್ಚ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ಲೈನ್ ಮುಖಾಂತರ ನೋಂದಾಯಿಸಲು ಅವದಿಯನ್ನು ದಿನಾಂಕ:20.11.2024ರವರೆಗೆ ವಿಸ್ತರಿಸಲಾಗಿತ್ತು. ಆದರೆ, ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಮಂಡಳಿಗೆ ದೂರವಾಣಿಯ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಮಾಡಲು ದಿನಾಂಕವನ್ನು ಪುನ: ವಿಸ್ತರಿಸಲು ಕೋರಿಕೆಗಳು ಬಂದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ನೋಂದಣಿಗಾಗಿ ದಿನಾಂಕಗಳನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ. ಪುನ: ದಿನಾಂಕ ವಿಸ್ತರಣೆಯನ್ನು ಮಾಡಲಾಗುವುದಿಲ್ಲ. ಈ ಸಂಬಂಧ ವಿಸ್ತರಿಸಿರುವ ದಿನಾಂಕದವರೆಗೆ ವಿದ್ಯಾರ್ಥಿಗಳ ನೋಂದಣಿ ಮಾಡತಕ್ಕದ್ದು. ಈ ಕುರಿತು ತಮ್ಮ ವ್ಯಾಪ್ತಿಯಲ್ಲಿ ಬರುವ…
ಅನಂತಪುರ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗರ್ದಲದಿನ್ನೆ ಮಂಡಲದ ತಲಗಾಸುಪಲ್ಲಿ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಕೃಷಿ ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಪ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ವರಲು ಮಾತನಾಡಿ, 12 ಮಂದಿ ಕೃಷಿ ಕಾರ್ಮಿಕರು ಗದ್ದೆಯಲ್ಲಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದರು. ವೇಗವಾಗಿ ಬಂದ ಆರ್ ಟಿಸಿ ಬಸ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏಳು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಐವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರನ್ನು ತಾತಯ್ಯ (55), ಚಿನ್ನಗಮ್ಮ (48), ರಾಮಾಂಜನಮ್ಮ (48), ಪೆದ್ನಾಗಮ್ಮ (60), ಕೊಂಡಮ್ಮ (50), ಜಮರಮುಡು (40) ಮತ್ತು ಚಿನ್ನಕಣ್ಣ (37) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಜಿಜಿಎಚ್ಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಆರ್ಟಿಸಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಆರ್ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿಯಾಗಿ ಏಳು ಕೃಷಿ…
ನವದೆಹಲಿ : ಆಭರಣ ಪ್ರಿಯರಿಗೆ ಬಿಗ್ ಶಾಕ್, ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಒಂದೇ ವಾರದಲ್ಲಿ 24 ಕ್ಯಾರೆಟ್ ಚಿನ್ನದ ದೇಶೀಯ ಬೆಲೆ 3990 ರೂ.ಏರಿಕೆಯಾಗಿದೆ. ನವೆಂಬರ್ 24 ರ ಭಾನುವಾರದಂದು ರಾಜಧಾನಿ ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 79790 ರೂ. ತಲುಪಿದೆ. ಮುಂಬೈನಲ್ಲಿ 10 ಗ್ರಾಂಗೆ 79640 ರೂ.ಗೆ ತಲುಪಿದೆ. ದೇಶದ ವಿವಿಧ ನಗರಗಳಲ್ಲಿ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ. ದೆಹಲಿಯಲ್ಲಿ ಚಿನ್ನದ ಬೆಲೆ ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 79,790 ರೂ. 22 ಕ್ಯಾರೆಟ್ ಬೆಲೆ 10 ಗ್ರಾಂಗೆ 73,150 ರೂ. ಕೋಲ್ಕತ್ತಾ ಮತ್ತು ಮುಂಬೈನಲ್ಲಿ ಬೆಲೆ ಪ್ರಸ್ತುತ ಮುಂಬೈ, ಕೋಲ್ಕತ್ತಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 73,000 ರೂ.ಗಳಾಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 79,640 ರೂ. ಚೆನ್ನೈನಲ್ಲಿ ಚಿನ್ನದ ಬೆಲೆ ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ…
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವಿದ್ಯುತ್ ಗ್ರಿಡ್ನಲ್ಲಿ ಅಗತ್ಯ ನಿರ್ವಹಣಾ ಕಾರ್ಯಗಳನ್ನು ನಡೆಸಲು ಸಜ್ಜಾಗಿರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನವೆಂಬರ್ 24, 2024 ರ ಇಂದು ವಿದ್ಯುತ್ ಕಡಿತವಾಗಲಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ, ಇದು ನಗರದ ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ವಲಯಗಳ ಮೇಲೆ ಪರಿಣಾಮ ಬೀರುತ್ತದೆ. ಸ್ಥಗಿತಗಳು ಮುಂಜಾನೆ ಪ್ರಾರಂಭವಾಗುತ್ತವೆ ಮತ್ತು ಕೆಲವು ಪ್ರದೇಶಗಳಲ್ಲಿ ಒಂಬತ್ತು ಗಂಟೆಗಳವರೆಗೆ ಇರುತ್ತದೆ. ಸಬ್ಸ್ಟೇಷನ್ಗಳು, ಟ್ರಾನ್ಸ್ಫಾರ್ಮರ್ಗಳು ಮತ್ತು ವಿದ್ಯುತ್ ಮಾರ್ಗಗಳ ನಿರ್ವಹಣೆಗೆ ಅಡಚಣೆಗಳು ಅಗತ್ಯ ಎಂದು ಬೆಸ್ಕಾಂ ಹೇಳಿದೆ. ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ -ಶಿವ ಫಾರ್ಮ್, ಕುಳ್ಳೇಗೌಡ ಇಂಡಿಲ್ ಎಸ್ಟೇಟ್, ಚೈತನ್ಯ ಹೈಟೆಕ್, ಭಾರತಿ ಇಂಜಿನಿಯರಿಂಗ್, ಶಕ್ತಿ ಟಿಸಿ, ಕಾಮಾಕ್ಷಿಪಾಳ್ಯ ಬಸ್ ನಿಲ್ದಾಣ ಟಿಸಿ ಸಮಯ: 10:00 AM ನಿಂದ 12:00 PM (2:00 ಗಂಟೆಗಳು) -ಮಾರುತಿ ಕಾಂಪ್ಲೆಕ್ಸ್ ಟಿಸಿ, ಮಯೂರ ಪ್ಲಾಸ್ಟಿಕ್ಸ್, ಕರೆಕಲ್ಲು, ನಂಜಪ್ಪ ಫ್ಲೋರ್ ಮಿಲ್, ಮಣಿವಿಲಾಸ್, ವೀರಭದ್ರಯ್ಯ ಟಿಸಿ, ಕೆಂಪರಾಜು…
ರಾಮನಗರ : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಸೋಲನುಭವಿಸಿದ್ದು, ಇದರಿಂದ ಮನನೊಂದ ನಿಖಿಲ್ ಕುಮಾರಸ್ವಾಮಿ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ. ಗ್ರಾಮದ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ. ನಾನು ನಿಖಿಲ್ ಅಭಿಮಾನಿ. ನನ್ನ ಸಾವಿಗೆ ನಾನೇ ಕಾರಣ. ಜೈ ಜೆಡಿಎಸ್ ಎಂದು ಪತ್ರ ಪರೆದಿಟ್ಟು ವಿಷ ಸೇವಿಸಿದ್ದಾನೆ. ಈತನನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಧ್ಯಕ್ಕೆ ಪ್ರಾಣಪಾಯದಿಂದ ಪರಾಗಿದ್ದಾನೆ. ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಸೋಲು ಕಂಡಿದ್ದಾರೆ. ಅವರ ಸೋಲಿನಿಂದ ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು 25,413 ಮತಗಳಿಂದ ಸೋಲಿಸಿ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ 87,229 ಮತ ಪಡೆದಿದ್ದು, ಯೋಗೇಶ್ವರ್ 1,12,642 ಮತ ಪಡೆದಿದ್ದಾರೆ.













