Author: kannadanewsnow57

ಬೆಂಗಳೂರು : SATS ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ಆಧಾರ್ ಮೌಲೀಕರಣ ಸಂಬಂಧಿಸಿದ ಕಾರ್ಯಗಳನ್ನು ತುರ್ತಾಗಿ ಪೂರ್ಣಗೊಳಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಮಾರು 2 ವರ್ಷಗಳಿಂದ SATS ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ಆಧಾರ್ ಮೌಲೀಕರಣವನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಇದುವರೆಗೂ ರಾಜ್ಯದಲ್ಲಿ ಒಟ್ಟಾರೆ 1.04 ಕೋಟಿ ವಿದ್ಯಾರ್ಥಿಗಳಲ್ಲಿ 78 ಲಕ್ಷ ವಿದ್ಯಾರ್ಥಿಗಳ ಆಧಾರ್ ಮೌಲೀಕಣ ಮಾತ್ರ ಯಶಸ್ವಿಯಾಗಿ ಪೂರ್ಣಗೊಂಡಿರುತ್ತದೆ, 18 ಲಕ್ಷ ವಿದ್ಯಾರ್ಥಿಗಳ ಆಧಾರ್ ಮೌಲೀಕರಣ ಇದುವರೆಗೂ ತಂತ್ರಾಂಶದಲ್ಲಿ ಮೌಲೀಕರಿಸಲಾಗಿರುವುದಿಲ್ಲ. ಹಾಗೂ ಸುಮಾರು 8 ಲಕ್ಷ ವಿದ್ಯಾರ್ಥಿಗಳ ಆಧಾರ್ ಮೌಲೀಕರಿಸಲಾಗಿದ್ದರು ಆಧಾರ್ ಮತ್ತು SATS ನಲ್ಲಿ ವಿದ್ಯಾರ್ಥಿಯ ಹೆಸರು ತಾಳೆಯಾಗದ ಕಾರಣ ಮೌಲೀಕರಣ ವಿಫಲವೆಂದು ಪರಿಗಣಿಸಲಾಗಿದೆ. ಈ ಅಂತರವನ್ನು ಪೂರ್ಣಗೊಳಿಸಲು ಉಲ್ಲೇಖ-4 ರ ಈ ಕಚೇರಿಯ ಸುತ್ತೋಲೆಯಲ್ಲಿ ಶಾಲೆಗಳಲ್ಲಿ ವಿಶಿಷ್ಟ ಆಧಾ‌ರ್ ಶಿಬಿರಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿರುತ್ತದೆ. ಇದುವರೆಗೂ ಒಟ್ಟಾರೆ 26 ಲಕ್ಷ ವಿದ್ಯಾರ್ಥಿಗಳ ಆಧಾರ್ ಮೌಲೀಕರಣ ತಂತ್ರಾಂಶದಲ್ಲಿ ಬಾಕಿಯಿರುವುದರಿಂದ, ವಿವಿಧ ಇಲಾಖೆಯ ವಿದ್ಯಾರ್ಥಿವೇತನ ಮತ್ತು ಇತರೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಜನವರಿ 23 ರ ಇಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ಹೊರಡಿಸಿದೆ. ಜಲಮಂಡಳಿ 4ನೇ ಹಂತ, 2ನೇ ಹಂತದ ಹೆಗ್ಗನಹಳ್ಳಿಯಿಂದ ಜಿಕೆವಿಕೆ ಕಡೆಗೆ ಸಾಗುವ ಕೊಳವೆ ಕಾಮಗಾರಿಯನ್ನು ಕೈಗೊಂಡಿರುವ ಹಿನ್ನಲೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜನವರಿ 23ರ ಬೆಳಗ್ಗೆ 5ರಿಂದ ಜನವರಿ 24 ರ ಬೆಳಗ್ಗೆ 5ರವರೆಗೆ 24 ಗಂಟೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲ ಮಂಡಳಿ ತಿಳಿಸಿದೆ. ಎಲ್ಲೆಲ್ಲಿ ವ್ಯತ್ಯಯ ನಾಗರಭಾವಿ, ಎಸ್.ಎಂ.ವಿ ಲೇಔಟ್ – 1 ರಿಂದ 9 ನೇ ಬ್ಲಾಕ್, ಮಲ್ಲತಹಳ್ಳಿ, ಕೊಟ್ಟಿಗೆಪಾಳ್ಯ, ಹೇರೋಹಳ್ಳಿ, ಹೆಗ್ಗನಹಳ್ಳಿ, ಸುಂಕದಕಟ್ಟೆ, ರಾಜಗೋಪಾಲನಗರ, ಲಕ್ಷ್ಮಿ ದೇವಿನಗರ, ಲೆಗ್ಗೇರೆ, ಪೀಣ್ಯ ಕೈಗಾರಿಕಾ ಪ್ರದೇಶ, ಪೀಣ್ಯ, ಆರ್.ಆರ್. ನಗರ, ಐಡಿಯಲ್ ಹೋಮ್ಸ್, ಕೆಂಚೇನಹಳ್ಳಿ, ಹಲಗೆ ವಡೇರನಹಳ್ಳಿ, ಕೋಡಿಪಾಳ್ಯ, ಚನ್ನಸಂದ್ರ, ಕೆಂಗೇರಿ, ಕೆಂಗೇರಿ ಉಪನಗರ, ನಾಗದೇವನಹಳ್ಳಿ, ಮರಿಯಪ್ಪನ ಪಾಳ್ಯ, ಟಿ.ದಾಸರಹಳ್ಳಿ, ನೆಲಗದರನಹಳ್ಳಿ, ಹೆಚ್.ಎಂ.ಟಿ ಲೇಔಟ್, ಬಗಲಗುಂಟೆ, ಎಂ.ಇ.ಐ ಲೇಔಟ್, ಅಬ್ಬಿಗೇರೆ, ಬ್ಯಾಟರಾಯನಪುರ, ಅಮೃತಹಳ್ಳಿ, ಜಕ್ಕೂರು,…

Read More

ಬೆಂಗಳೂರು : ಮಕ್ಕಳು ಸುಲಭವಾಗಿ ಕನ್ನಡದೊಂದಿಗೆ ಆಂಗ್ಲ ಭಾಷೆಯನ್ನೂ ಕಲಿಯಲು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ದ್ವಿಭಾಷಾ ನಿಘಂಟು ಅನ್ನು ಪರಿಚಯಿಸಿದೆ. ವಿದ್ಯಾರ್ಥಿಗಳು ಕನ್ನಡ ಅಥವಾ ಇಂಗ್ಲಿಷ್‌ ಕಲಿಯುವಾಗ, ಕನ್ನಡದಲ್ಲಿ ಅಥವಾ ಇಂಗ್ಲಿಷ್‌ನಲ್ಲಿ ಯಾವುದೇ ಪದದ ಅರ್ಥವನ್ನು ತಿಳಿಯಲು ಈ ದ್ವಿಭಾಷಾ ನಿಘಂಟನ್ನು ಬಳಸಬಹುದು. ಮಕ್ಕಳಲ್ಲಿ ಶಬ್ಧ ಸಂಪತ್ತು ಮತ್ತು ಭಾಷಾ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಹಾಗೂ ಎರಡೂ ಭಾಷೆಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಹಕಾರಿಯಾಗಿದೆ. 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿರುವ ನಿಘಂಟಿಗಾಗಿ ಈ ಕೆಳಗಿನ ಪೋಸ್ಟರ್‌ನಲ್ಲಿರುವ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ.

Read More

ಹಾರ್ವರ್ಡ್ ವೈದ್ಯಕೀಯ ಶಾಲೆ ನಡೆಸಿದ ಹೊಸ ಅಧ್ಯಯನದ ಪ್ರಕಾರ, ತೆಳ್ಳಗಿನ ಜನರಿಗೆ ಮಾರಕ ಹೃದಯಾಘಾತದ ಅಪಾಯ ಹೆಚ್ಚು ಎಂದು ತಿಳಿಸಿದ್ದು, ಸಂಶೋಧಕರ ಪ್ರಕಾರ, ಅವರ ಸ್ನಾಯುಗಳಲ್ಲಿ ಅಡಗಿರುವ ಕೊಬ್ಬಿನ ಪಾಕೆಟ್‌ಗಳಿಂದಾಗಿ ಇದು ಸಂಭವಿಸಬಹುದು ಎಂದು ಹೇಳಿದೆ. ವಿಜ್ಞಾನಿಗಳು ಈ ರೀತಿಯ ಇಂಟ್ರಾಮಸ್ಕುಲರ್ ಕೊಬ್ಬನ್ನು ಗೋಮಾಂಸದಲ್ಲಿನ ಮಾರ್ಬ್ಲಿಂಗ್‌ಗೆ ಹೋಲಿಸಿದ್ದಾರೆ, ಇದು ಅದನ್ನು ರಸಭರಿತ ಮತ್ತು ರುಚಿಕರವಾಗಿಸುತ್ತದೆ. ಈ ಐಷಾರಾಮಿ ಕತ್ತರಿಸಿದ ವಾಗ್ಯು ಮಾಂಸವು ಅತ್ಯಂತ ಬೇಡಿಕೆಯಾಗಿದ್ದರೂ ಇದು ಗಂಭೀರ ಆರೋಗ್ಯ ಪರಿಣಾಮಗಳನ್ನು ಬೀರುತ್ತದೆ. ಈ ರೀತಿಯ ಕೊಬ್ಬನ್ನು ಹೊಂದಿರುವ ಮಹಿಳೆಯರು ತಮ್ಮ ದೇಹದ ದ್ರವ್ಯರಾಶಿ ಸೂಚ್ಯಂಕವನ್ನು ಲೆಕ್ಕಿಸದೆ ಹೃದಯಾಘಾತ ಅಥವಾ ಹೃದಯಾಘಾತದಿಂದ ಸಾಯುವ ಅಪಾಯ ಹೆಚ್ಚು ಎಂದು ಸಂಶೋಧಕರು ಹೇಳಿದ್ದಾರೆ. ವಾಸ್ತವವಾಗಿ, ಸ್ನಾಯುಗಳಲ್ಲಿ ಸಂಗ್ರಹವಾಗಿರುವ ಕೊಬ್ಬಿನ ಪ್ರಮಾಣದಲ್ಲಿ ಪ್ರತಿ ಒಂದು ಶೇಕಡಾ ಹೆಚ್ಚಳವು ಗಂಭೀರ ಹೃದಯ ಸ್ಥಿತಿಗಳ ಅಪಾಯವನ್ನು ಶೇಕಡಾ 7 ರಷ್ಟು ಹೆಚ್ಚಿಸುತ್ತದೆ. ಹೆಚ್ಚಿನ ಪ್ರಮಾಣದ ತೆಳ್ಳಗಿನ ಸ್ನಾಯುಗಳನ್ನು ಹೊಂದಿರುವವರು ಕಡಿಮೆ ಅಪಾಯವನ್ನು ಹೊಂದಿರುತ್ತಾರೆ ಎಂದು ಅಧ್ಯಯನವು ಹೇಳಿದೆ. ಆದಾಗ್ಯೂ, ಚರ್ಮದ…

Read More

ಬೆಂಗಳೂರು : ನೋಂದಾಯಿತ ಕಾರ್ಮಿಕರ ಪತಿ ಅಥವಾ ಪತ್ನಿಗೆ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತದೆ. ಪಿಂಚಣಿದಾರರು ಮಂಡಳಿಯಿಂದ ಪಿಂಚಣಿ ಪಡೆಯುತ್ತಿದ್ದ ಅವಧಿಯಲ್ಲಿ ಮರಣ ಹೊಂದಿದ್ದಲ್ಲಿ ಮಾತ್ರ ಅವರ ಪತಿ/ ಪತ್ನಿ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿಯೊಂದಿಗೆ ಸಲ್ಲಿಸಬೇಕಾದ ಅಗತ್ಯ ದಾಖಲೆಗಳು ಮಂಡಳಿಯಿಂದ ನೀಡಿರುವ ಮೃತ ಫಲಾನುಭವಿಯ ಗುರುತಿನ ಚೀಟಿಯ ನಕಲು ಪ್ರತಿ ಪಿಂಚಣಿ ಮಂಜೂರಾತಿ ಆದೇಶ ರೇಷನ್ ಕಾರ್ಡ್ ಪ್ರತಿ ನೋಂದಣಿದಾರರ ಆಧಾರ್ ಕಾರ್ಡ್ ಪ್ರತಿ ಅವಲಂಬಿತರ ಬ್ಯಾಂಕ್ ಖಾತೆ ವಿವರ ಮರಣ ಪ್ರಮಾಣ ಪತ್ರ ಮೃತರ ಪತಿ ಅಥವಾ ಪತ್ನಿಯ ಆಧಾರ್ ಕಾರ್ಡ್ ಪ್ರತಿ ಅವಲಂಬಿತರ ವಾಸಸ್ಥಳ ಪ್ರಮಾಣ ಪತ್ರ ಅರ್ಜಿದಾರರ ಕೋರಿಕೆ ಪತ್ರ

Read More

ಬೆಂಗಳೂರು : ಗ್ರಾಮೀಣ ಭಾಗದ ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಾಮ ಪಂಚಾಯತಿಗಳಲ್ಲಿ ಜನನ, ಮರಣ ನೋಂದಣಿ ಸೇವೆ ಲಭ್ಯ. ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಸದುಪಯೋಗ ಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಜನನ, ಮರಣ, ನಿರ್ಜೀವ ಜನನನಗಳನ್ನು ನಿಮ್ಮ ಗ್ರಾಮಪಂಚಾಯಿತಿಯಲ್ಲೇ ನೋಂದಣಿ ಮಾಡಿಸುವುದು ಈಗ ಮತ್ತಷ್ಟು ಸುಲಭವಾಗಿದ್ದು, ಕೆಳಕಂಡ 9 ಸೇವೆಗಳು ಈಗ ಗ್ರಾಮಪಂಚಾಯಿತಿಯಲ್ಲೇ ಲಭ್ಯ. 1. ಜನನ ನೋಂದಣಿ 2. ಜನನ ಪ್ರಮಾಣ ತಿದ್ದುಪಡಿ 3.ಜನನ ಪ್ರಮಾಣ ಪತ್ರ ವಿತರಣೆ 4. ಮಗುವಿನ ಹೆಸರು ಸೇರ್ಪಡೆ 5.ಮರಣ ನೋಂದಣಿ 6.ಮರಣ ಪ್ರಮಾಣ ಪತ್ರ ತಿದ್ದುಪಡಿ 7. ಮರಣ ಪ್ರಮಾಣ ಪತ್ರ ವಿತರಣೆ 8. ನಿರ್ಜೀವ ಜನನ ನೋಂದಣಿ 9.ನಿರ್ಜೀವ ಜನನ ಪ್ರಮಾಣ ಪತ್ರ ವಿತರಣೆ

Read More

ಬೆಂಗಳೂರು : ಕೃಷಿ ಇಲಾಖೆ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 23 ನಾಳೆಯಿಂದ ಜನವರಿ 25ರ ವರೆಗೆ ʼಸಾವಯವ ಮತ್ತು ಸಿರಿಧಾನ್ಯ ಅಂತಾರಾಷ್ಟ್ರೀಯ ವಾಣಿಜ್ಯ ಮೇಳʼವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ 23 ರಿಂದ 25ರ ವರೆಗೆ ʼಸಾವಯವ ಮತ್ತು ಸಿರಿಧಾನ್ಯ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2025’ ಅನ್ನು ಹಮ್ಮಿಕೊಳ್ಳಲಾಗಿದೆ. ಮೂರು ದಿನ ನಡೆಯುವ ಈ ಮೇಳದಲ್ಲಿ 300ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುವುದು. 30ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ತಜ್ಞರು ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದು, ಈ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಮ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡಿದ್ದಾರೆ. https://twitter.com/CMofKarnataka/status/1881951558176510042?ref_src=twsrc%5Etfw

Read More

ನವದೆಹಲಿ : ಪ್ರತಿ ವರ್ಷ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು AISSEE ಗೆ ಹಾಜರಾಗುತ್ತಾರೆ. ಸೈನಿಕ ಶಾಲೆಗಳು ತಮ್ಮ ಗುಣಮಟ್ಟದ ಶಿಕ್ಷಣಕ್ಕೆ ಪ್ರಸಿದ್ಧವಾಗಿವೆ. ಸೈನಿಕ ಶಾಲೆಯಲ್ಲಿ ಪಡೆದ ತರಬೇತಿಯಿಂದ ಭವಿಷ್ಯದಲ್ಲಿ ಸೇನೆಯಲ್ಲಿ ಕೆಲಸ ಮಾಡಲು ಬಯಸುವ ವಿದ್ಯಾರ್ಥಿಗಳು ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. 2025-26 ರ ಶೈಕ್ಷಣಿಕ ವರ್ಷದ ಪ್ರವೇಶ ಅರ್ಜಿ ಸಲ್ಲಿಸಲು ಜನವರಿ 23 ರ ನಾಳೆಯ ಕೊನೆಯ ದಿನವಾಗಿದೆ. ಸೈನಿಕ್ ಶಾಲೆಯ ಪ್ರವೇಶ ಮಾನದಂಡ: ಸೈನಿಕ ಶಾಲೆಯ 6 ಮತ್ತು 9 ನೇ ತರಗತಿಗಳಿಗೆ ಪ್ರವೇಶಕ್ಕಾಗಿ, ಅಖಿಲ ಭಾರತ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ (AISSEE) ಉತ್ತೀರ್ಣರಾಗುವುದು ಅವಶ್ಯಕ. ಅಖಿಲ ಭಾರತ ಸೈನಿಕ್ ಶಾಲಾ ಪ್ರವೇಶ ಪರೀಕ್ಷೆ ವೇಳಾಪಟ್ಟಿ ಪರೀಕ್ಷೆಯ ದಿನಾಂಕ : ನಂತರ ಎನ್ಟಿಎ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಪರೀಕ್ಷಾ ವಿಧಾನ : ಪೆನ್ ಪೇಪರ್ (OMR ಶೀಟ್ ಆಧಾರಿತ) ಕಾಗದದ ಮಾದರಿ : ಬಹು ಆಯ್ಕೆ ಪ್ರಶ್ನೆಗಳು ಪರೀಕ್ಷಾ ನಗರಗಳು: ಭಾರತದಾದ್ಯಂತ 190 ನಗರಗಳು ಅಪ್ಲಿಕೇಶನ್: ಅರ್ಜಿಯನ್ನು ಆನ್‌ಲೈನ್‌ನಲ್ಲಿ…

Read More

ನವದೆಹಲಿ: ಭಾರತ ಸರ್ಕಾರ, ರೈಲ್ವೆ ಸಚಿವಾಲಯ, ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಪಾಯಿಂಟ್ಸ್ಮನ್, ಅಸಿಸ್ಟೆಂಟ್, ಟ್ರ್ಯಾಕ್ ಮೆಂಟೇನರ್ ಮತ್ತು ಇತರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಮುಖ ದಿನಾಂಕಗಳು: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23-01-2025 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22-02-2025 ರೈಲ್ವೆ ಗ್ರೂಪ್‌ ಡಿ ಹುದ್ದೆಗಳ ವಿವರ ಹೀಗಿದೆ ಟ್ರ್ಯಾಕ್ ಮೇಂಟೆನರ್ ಗ್ರೇಡ್‌ IV ತಾಂತ್ರಿಕ ವಿಭಾಗದ ಸಹಾಯಕ ಅಸಿಸ್ಟಂಟ್‌ ಪಾಯಿಂಟ್ಸ್‌ಮನ್ ಟ್ರ್ಯಾಕ್‌ ಮನ್ ಅಸಿಸ್ಟಂಟ್ ಬ್ರಿಡ್ಜ್‌ ಇತರೆ ಹಲವು ವಿಭಾಗಗಳ ಲೆವೆಲ್‌ 1 ಪೋಸ್ಟ್‌ಗಳು: ಆರ್ಆರ್ಬಿ ಗ್ರೂಪ್ ಡಿ ಅರ್ಹತಾ 2025 ಎನ್ಸಿವಿಟಿ / ಎಸ್ಸಿವಿಟಿಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪ್ರೌಢಶಾಲಾ (10 ನೇ ತರಗತಿ) ಪೂರ್ಣಗೊಳಿಸಿದ ಅಥವಾ ಎನ್ಸಿವಿಟಿ ಒದಗಿಸಿದ ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ಪ್ರಮಾಣಪತ್ರ (ಎನ್ಎಸಿ) ಹೊಂದಿರುವ…

Read More