Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದು, ಈ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಮ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡಿದ್ದಾರೆ. https://twitter.com/CMofKarnataka/status/1881951558176510042?ref_src=twsrc%5Etfw
ನವದೆಹಲಿ : ಪ್ರತಿ ವರ್ಷ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು AISSEE ಗೆ ಹಾಜರಾಗುತ್ತಾರೆ. ಸೈನಿಕ ಶಾಲೆಗಳು ತಮ್ಮ ಗುಣಮಟ್ಟದ ಶಿಕ್ಷಣಕ್ಕೆ ಪ್ರಸಿದ್ಧವಾಗಿವೆ. ಸೈನಿಕ ಶಾಲೆಯಲ್ಲಿ ಪಡೆದ ತರಬೇತಿಯಿಂದ ಭವಿಷ್ಯದಲ್ಲಿ ಸೇನೆಯಲ್ಲಿ ಕೆಲಸ ಮಾಡಲು ಬಯಸುವ ವಿದ್ಯಾರ್ಥಿಗಳು ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. 2025-26 ರ ಶೈಕ್ಷಣಿಕ ವರ್ಷದ ಪ್ರವೇಶ ಅರ್ಜಿ ಸಲ್ಲಿಸಲು ಜನವರಿ 23 ರ ನಾಳೆಯ ಕೊನೆಯ ದಿನವಾಗಿದೆ. ಸೈನಿಕ್ ಶಾಲೆಯ ಪ್ರವೇಶ ಮಾನದಂಡ: ಸೈನಿಕ ಶಾಲೆಯ 6 ಮತ್ತು 9 ನೇ ತರಗತಿಗಳಿಗೆ ಪ್ರವೇಶಕ್ಕಾಗಿ, ಅಖಿಲ ಭಾರತ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ (AISSEE) ಉತ್ತೀರ್ಣರಾಗುವುದು ಅವಶ್ಯಕ. ಅಖಿಲ ಭಾರತ ಸೈನಿಕ್ ಶಾಲಾ ಪ್ರವೇಶ ಪರೀಕ್ಷೆ ವೇಳಾಪಟ್ಟಿ ಪರೀಕ್ಷೆಯ ದಿನಾಂಕ : ನಂತರ ಎನ್ಟಿಎ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಪರೀಕ್ಷಾ ವಿಧಾನ : ಪೆನ್ ಪೇಪರ್ (OMR ಶೀಟ್ ಆಧಾರಿತ) ಕಾಗದದ ಮಾದರಿ : ಬಹು ಆಯ್ಕೆ ಪ್ರಶ್ನೆಗಳು ಪರೀಕ್ಷಾ ನಗರಗಳು: ಭಾರತದಾದ್ಯಂತ 190 ನಗರಗಳು ಅಪ್ಲಿಕೇಶನ್: ಅರ್ಜಿಯನ್ನು ಆನ್ಲೈನ್ನಲ್ಲಿ…
ನವದೆಹಲಿ: ಭಾರತ ಸರ್ಕಾರ, ರೈಲ್ವೆ ಸಚಿವಾಲಯ, ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಪಾಯಿಂಟ್ಸ್ಮನ್, ಅಸಿಸ್ಟೆಂಟ್, ಟ್ರ್ಯಾಕ್ ಮೆಂಟೇನರ್ ಮತ್ತು ಇತರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಮುಖ ದಿನಾಂಕಗಳು: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23-01-2025 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22-02-2025 ರೈಲ್ವೆ ಗ್ರೂಪ್ ಡಿ ಹುದ್ದೆಗಳ ವಿವರ ಹೀಗಿದೆ ಟ್ರ್ಯಾಕ್ ಮೇಂಟೆನರ್ ಗ್ರೇಡ್ IV ತಾಂತ್ರಿಕ ವಿಭಾಗದ ಸಹಾಯಕ ಅಸಿಸ್ಟಂಟ್ ಪಾಯಿಂಟ್ಸ್ಮನ್ ಟ್ರ್ಯಾಕ್ ಮನ್ ಅಸಿಸ್ಟಂಟ್ ಬ್ರಿಡ್ಜ್ ಇತರೆ ಹಲವು ವಿಭಾಗಗಳ ಲೆವೆಲ್ 1 ಪೋಸ್ಟ್ಗಳು: ಆರ್ಆರ್ಬಿ ಗ್ರೂಪ್ ಡಿ ಅರ್ಹತಾ 2025 ಎನ್ಸಿವಿಟಿ / ಎಸ್ಸಿವಿಟಿಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪ್ರೌಢಶಾಲಾ (10 ನೇ ತರಗತಿ) ಪೂರ್ಣಗೊಳಿಸಿದ ಅಥವಾ ಎನ್ಸಿವಿಟಿ ಒದಗಿಸಿದ ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ಪ್ರಮಾಣಪತ್ರ (ಎನ್ಎಸಿ) ಹೊಂದಿರುವ…
ಅಡೆತಡೆಗಳನ್ನು ನಾಶಪಡಿಸುವ ಶಕ್ತಿಶಾಲಿ ಗಣೇಶ ಮಂತ್ರ ದಿನವೂ ಕಷ್ಟ, ಪ್ರತಿ ದಿನ ಸಮಸ್ಯೆ, ದಿನವೂ ಹೋರಾಟ, ಇದೇ ಈ ಕಲಿಯುಗದಲ್ಲಿ ಜನರ ಬದುಕು ಆಗುತ್ತಿದೆ. ಜೀವನ ಎಷ್ಟೇ ಹೋರಾಟದಿಂದ ಕೂಡಿದ್ದರೂ ಒಂದಲ್ಲ ಒಂದು ಹಂತದಲ್ಲಿ ಸ್ವಲ್ಪ ಸುಖ ಬರಲೇ ಬೇಕು, ಸ್ವಲ್ಪವೂ ಸುಖವನ್ನು ಅನುಭವಿಸದ ಜನರ ಮನದಲ್ಲಿ ದ್ವೇಷ ತುಂಬಿಕೊಂಡಿರುತ್ತದೆ. ನೀವೂ ಸಹ ನಿಮ್ಮ ಜೀವನದಲ್ಲಿ ಕಷ್ಟದಿಂದ ಮುಕ್ತಿ ಹೊಂದಬೇಕೆಂದರೆ ಈ ಮಂತ್ರವನ್ನು ಪಠಿಸಿ. ಯಾವುದೇ ಸಮಯದಲ್ಲಿ ಈ ಮಂತ್ರವನ್ನು ಪಠಿಸುವ ಅಗತ್ಯವಿಲ್ಲ. ಕಷ್ಟದಲ್ಲಿದ್ದಾಗ ಹೇಳು. ಕಷ್ಟ ತಾನಾಗಿಯೇ ನಿನ್ನನ್ನು ಬಿಟ್ಟು ಹೋಗುತ್ತದೆ, ಅಡೆತಡೆಗಳು ಬಂದಾಗ ಹೇಳು. ಅಡೆತಡೆಗಳು ನಿಮ್ಮಿಂದ ಸ್ವಯಂಚಾಲಿತವಾಗಿ ದೂರವಾಗುತ್ತವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು…
ಬೆಂಗಳೂರು : ರಾಜ್ಯದಲ್ಲಿ ಇತ್ತೀಚಿಗೆ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಡುವೆ ಬೆಂಗಳೂರಿನಲ್ಲಿ ದರೋಡೆ ಗ್ಯಾಂಗ್ ವೊಂದು ಯುವಕನನ್ನು ಅಪಹರಿಸಿ ಬಳಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಆನೇಕಲ್ ನ ಹೊಸೂರು ಮುಖ್ಯರಸ್ತೆಯಲ್ಲಿ ಯುವಕನನ್ನು ದರೋಡೆ ಗ್ಯಾಂಗ್ ವೊಂದು ಅಪಹರಿಸಿದ್ದು, ಬಳಿಕ ಆತನ ಮೊಬೈಲ್ ಕಸಿದುಕೊಂಡು ಹಲ್ಲೆ ಮಾಡಿ ಪರಾರಿಯಾಗಿದೆ. ಗಾಂಜಾ ಹಾಗೂ ಕುಡಿದ ಮತ್ತಿನಲ್ಲಿ ಮನಬಂದಂತೆ ಥಳಿಸಿದ್ದು, ಸದ್ಯ ಯುವಕ ಮುರುಳಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುರಳಿ ಆನೇಕಲ್ ಮುತ್ತಗಟ್ಟಿ ಕುವೆಂಪು ನಗರದ ನಿವಾಸಿಯಾಗಿದ್ದು, ಸಂಜೆ ಅಕ್ಕನ ಮಗಳನ್ನು ಕಾಲೇಜಿನಿಂದ ಕರೆದುಕೊಂಡ ಬರಲು ಹೋದಾಗ ದರೋಡೆ ಗ್ಯಾಂಗ್ ಯುವಕನನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಥಳಿಸಿ ಮೊಬೈಲ್, ಪರ್ಸ್ ಕಿತ್ತುಕೊಂಡು ಪರಾರಿಯಾಗಿದೆ.
ತಮಕೂರು : ರಾಜ್ಯದ ಹಲವಡೆ ಮೈಕ್ರೋ ಫೈನಾನ್ಸ್ ಕಿರುಕುಳ ನಡೆಸುತ್ತಿರುವ ಕುರಿತು ದೂರುಗಳು ಬರುತ್ತಿವೆ. ಸಂತ್ರಸ್ತರು ದೂರು ನೀಡಿದ್ರೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನ ಸಿದ್ದಗಂಗಾಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ. ಹಲವಡೆ ಮೈಕ್ರೋ ಫೈನಾನ್ಸ್ ಕಂಪನಿಗಳು ಗೈಡ್ ಲೈನ್ಸ್ ಉಲ್ಲಂಘನೆ ಮಾಡುತ್ತಿದ್ದಾರೆ. ಫೈನಾನ್ಸ್ ಕಂಪನಿಗಳ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತದೆ. ಲೈಸೆನ್ಸ್ ಇಲ್ಲದವರ ಬಗ್ಗೆ ಹಣಕಾಸು ಇಲಾಖೆ ಸರ್ವೆ ಮಾಡಬೇಕು ಎಂದರು. ರಾಜ್ಯದಲ್ಲಿ ಎಲ್ಲಿಯಾದರೂ ಮೈಕ್ರೋ ಫೈನಾನ್ಸ್ ಕಂಪನಿಯವರು ಕಿರುಕುಳ ನೀಡಿದ್ರೆ ಸಂತ್ರಸ್ತರು ದೂರು ನೀಡಿದ್ರೆ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದು, ಈ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. https://twitter.com/CMofKarnataka/status/1881925034496631195
ಉತ್ತರ ಕನ್ನಡ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಉತ್ತರ ಕನ್ನಡ ಜಿಲ್ಎಲಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತರಕಾರಿ ತುಂಬಿದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಈ ವೇಳೆ ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರು ಹಾವೇರಿ ಜಿಲ್ಲೆಯ ಸವಣೂರು ಮೂಲದವರೆಂಬ ಮಾಹಿತಿ ಲಭ್ಯವಾಗಿದೆ. ಮೃತಪಟ್ಟ ದುರ್ದೈವಿಗಳು ಫಯಾಜ್ ಜಮಖಂಡಿ (45) ವಾಸಿಂ ಮುಡಗೇರಿ (45) ಇಜಾಜ್ ಮುಲ್ಲಾ (20) ಸಾದಿಕ್ ಬಾಷಾ (30) ಗುಲಾಮ್…
ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಜನವರಿ 22 ರ ಇಂದು ಸುಪ್ರೀಂಕೋರ್ಟ್ ನಡೆಸಲಿದೆ. ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿರುವುದನ್ನು ಹಿಂಪಡೆದಿದ್ದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌದ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಡಿಸೆಂಬರ್ 16 ರಂದು ಸುಪ್ರೀಂ ಕೋರ್ಟ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆ ನಡೆಸಿತು. ವಿಚಾರಣೆ ವೇಳೆ, ಕೌಂಟರ್ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದ್ದು, ಜನವರಿ 22 ಕ್ಕೆ ವಿಚಾರಣೆ ಮುಂದೂಡಲಾಗಿತ್ತು. ಡಿಕೆಶಿ ಮೇಲಿನ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್ ಹಾಗೂ ಸಿಬಿಐ ಇಬ್ಬರೂ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಬೆಂಗಳೂರು : ಬೆಂಗಳೂರಿನಲ್ಲಿ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳು ಪುಂಡಾಟ ನಡೆಸಿದ್ದು, ವೇಗವಾಗಿ ಕಾರು ಚಲಾಯಿಸಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಅನೇಕಲ್-ಚಂದಾಪುರ ರಸ್ತೆಯ ಮರಸೂರಿನಲ್ಲಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳು ರಸ್ತೆಯಲ್ಲಿ ಕಾರಿನ ಸನ್ ರೂಫ್ ಓಪನ್ ಮಾಡಿ ರ್ಯಾಶ್ ಡ್ರೈವಿಂಗ್ ಮಾಡಿದ್ದಾರೆ. ವೇಗವಾಗಿ ಕಾರು ಚಲಾಯಿಸಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾರೆ. ನಂತರ ಹಳ್ಳಕ್ಕೆ ಕಾರು ಪಲ್ಟಿಯಾಗಿದೆ. ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳು ಕುಡಿದು ಗಾಡಿ ಚಲಾಯಿಸಿ ಅಪಘಾತ ಮಾಡಿದ್ದಾರೆ. ವಿದ್ಯಾರ್ಥಿಗಳ ವರ್ತನೆಗೆ ಸಾರ್ವಜನಿಕರು ಆಕ್ರೋಶ ಹೊರ ವ್ಯಕ್ತಪಡಿಸಿದ್ದಾರೆ.











