Author: kannadanewsnow57

ಹಾವೇರಿ : ಮನೆಯಲ್ಲಿ ಮಕ್ಕಳನ್ನು ಒಂಟಿಯಾಗಿ ಬಿಡುವ ಪೋಷಕರೇ ಎಚ್ಚರ. ಸ್ನಾನದ ಮನೆಯಲ್ಲಿ ಇಟ್ಟಿದ್ದ ನೀರಿನ ಡ್ರಮ್ ನಲ್ಲಿ ಬಿದ್ದು ಎರಡು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ನೀರಲಕಟ್ಟಿ ಗ್ರಾಮದಲ್ಲಿ ನೀರಿನ ಡ್ರಮ್ ಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದೆ. ಗ್ರಾಮದ ಆದಿತ್ಯಾ ಲಮಾಣಿ ಮೃತಪಟ್ಟ ಮಗು. ಮೃತಪಟ್ಟ ಆದಿತ್ಯಾ ಲಮಾಣಿ ಪೋಷಕರು ಕೆಲಸಕ್ಕೆಂದು ಹೊರಗಡೆ ಹೋಗಿದ್ದಾಗ ಮಗು ಆಟವಾಡುತ್ತಾ ಸ್ನಾನದ ಮನೆಗೆ ಹೋಗಿದ್ದು, ಈ ವೇಳೆ ನೀರಿನ ಡ್ರಮ್ ನಲ್ಲಿ ಬಿದ್ದು ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ.

Read More

ಚಾಮರಾಜನಗರ : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅಕ್ರಮ-ಸಕ್ರಮ ಯೋಜನೆ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವವರು, ಅಕ್ರಮ ಸಕ್ರಮ ಯೋಜನೆ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ. ಮೊದಲ ಆದ್ಯತೆ ಮೇರೆಗೆ 1,500 ಅರ್ಜಿಗಳನ್ನು ತೆಗೆದುಕೊಳ್ಳಲಿದ್ದು, ಎರಡು ವರ್ಷದೊಳಗೆ ಬಾಕಿ ಎಲ್ಲಾ ಅರ್ಜಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ರೈತರ ಕೃಷಿ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ.  ವಿದ್ಯುತ್ ಕಳವು ತಪ್ಪಿಸಲು ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಕಡ್ಡಾಯ ಮಾಡಲಾಗಿದ್ದು, ಇದರಿಂದ ರೈತರಿಗೆ ಅನುಕೂಲವಾಗುತ್ತದೆ. ಆಧಾರ್ ಜೋಡಣೆಯಿಂದ ವಿದ್ಯುತ್ ಕಳ್ಳತನ ತಪ್ಪಲಿದೆ ಹೇಳಿದ್ದಾರೆ. ಕೃಷಿ ಪಂಪ್ ಸೆಟ್ ಅಕ್ರಮ ಸಕ್ರಮದಡಿ 4 ಲಕ್ಷ ಅರ್ಜಿಗಳು ಬಾಕಿ ಉಳಿದಿದ್ದು, ಅವುಗಳೆಲ್ಲ ಕಡಿಮೆಯಾಗಿದೆ. ವಿದ್ಯುತ್ ಲೈನ್ ನಿಂದ 500 ಮೀಟರ್ ಒಳಗೆ ಇರುವ ಕೃಷಿ ಪಂಪ್ಸೆಟ್ ಗಳ ಸಕ್ರಮಕ್ಕೆ ಕ್ರಮ ವಹಿಸಲಾಗುವುದು. 500 ಮೀ.ಗಿಂತ…

Read More

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ ಇಂದು ಮದ್ಯ ಮಾರಾಟಗಾರರಿಂದ ಎಣ್ಣೆ ಮಾರಾಟ ಬಂದ್ ಮಾಡಿ ಪ್ರತಿಭಟನೆ ನಿರ್ಧರಿಸಲಾಗಿತ್ತು. ನಿನ್ನೆ ಸಿಎಂ ಸಿದ್ಧರಾಮಯ್ಯ ಜೊತೆಗಿನ ಮಾತುಕತೆ ಸಕ್ಸಸ್ ಆದ ಪರಿಣಾಮ, ಇಂದು ರಾಜ್ಯಾಧ್ಯಂತ ಬಾರ್ ಬಂದ್ ಮಾಡದೇ, ಮದ್ಯ ಮಾರಾಟ ಮಾಡಲು ನಿರ್ಧರಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸ್ವಚ್ಛ ಅಬಕಾರಿ ಅಭಿಯಾನದಡಿ ನ. 20ರ ಇಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್‌ ಅಸೋಸಿಯೇಶನ್ ಕರ್ನಾಟಕ ಕರೆ ನೀಡಿತ್ತು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಂತ  ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ, ಅಬಕಾರಿ ಇಲಾಖೆ ಯನ್ನು ಆರ್ಥಿಕ ಸಚಿವರೇನಿರ್ವಹಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಬೇಕು. ವ್ಯಾಪಾರಿಗಳು ಪರವಾನಗಿ ಪಡೆಯುವಾಗ ಹಾಗೂ ಮರು ನೋಂದಣಿ ಮಾಡಿಕೊಳ್ಳುವಾಗ ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಗೃಹ ಕಚೇರಿ…

Read More

ಬೆಂಗಳೂರು : ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಭಾರತ್ ಜೋಡೋ ಭವನದಲ್ಲಿರುವ ಇಂದಿರಾಗಾಂಧಿ ಅಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳೆಯರಿಗೆ ಮೀಸಲಾತಿಯನ್ನು 2028 ರಲ್ಲಿ ಕೊಡುವುದಾಗಿ ಹೇಳುವ ನರೇಂದ್ರ ಮೋದಿ ಅವರು ಅದನ್ನು ಈಗಲೇ ಮಾಡಬಹುದಿತ್ತು. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಹಾಗೂ ಬದ್ಧತೆ ಅಗತ್ಯವಿದೆ. ಸಂಸತ್ತಿನಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ನಮ್ಮ ತಕರಾರೇನಿಲ್ಲ, ನಾವೇ ಇದನ್ನು ಜಾರಿಗೆ ತರಬೇಕು ಎಂದಿದ್ದೆವು. ಜಿಲ್ಲಾ ಪಂಚಾಯತಿ, ಪಟ್ಟಣ ಪಂಚಾಯತಿಗಳಲ್ಲಿ 50% ಮೀಸಲಾತಿ ಇದೆ. ಮಹಿಳೆಯರಿಗೆ ಸಮಾನ ಅವಕಾಶಗಳು ದೊರಕಬೇಕು. ಸಂಸತ್ತು, ವಿಧಾನಸಭೆಯಲ್ಲಿಯೂ ಮೀಸಲಾತಿ ನೀಡಲು ನಮ್ಮ ತಕರಾರು ಇಲ್ಲ ಎಂದರು. ದೇಶದ ಐಕ್ಯತೆಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಇಂದಿರಾ ಗಾಂಧಿಯವರ ಬದುಕು ನಮ್ಮೆಲ್ಲರಿಗೂ ಆದರ್ಶ. ಅವರು…

Read More

ನವದೆಹಲಿ : ಇಂದು ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬೆಳಗ್ಗೆ 7 ಗಂಟೆಗೆ ಮತದಾನಕ್ಕೆ ಚುನಾವಣಾ ಆಯೋಗವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ಇಂದು ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್, ಕೇರಳ ಮತ್ತು ಉತ್ತರಾಖಂಡದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಶಿವಸೇನೆ ಮತ್ತು ಎನ್‌ಸಿಪಿ ಕ್ರಮವಾಗಿ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ನೇತೃತ್ವದ ಪ್ರತಿಸ್ಪರ್ಧಿ ಬಣಗಳಾಗಿ ವಿಭಜನೆಯಾದ ನಂತರ ಇದು ಮೊದಲ ವಿಧಾನಸಭಾ ಚುನಾವಣೆಯಾಗಿದೆ. ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. 2,086 ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ ಒಟ್ಟು 4,136 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಜ್ಯದಲ್ಲಿ ಸುಮಾರು 9.70 ಕೋಟಿ ಮತದಾರರಿದ್ದಾರೆ. ಬಿಜೆಪಿ 149, ಶಿವಸೇನೆ 81, ಎನ್‌ಸಿಪಿ 59 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿವೆ. ಕಾಂಗ್ರೆಸ್ 101 ಅಭ್ಯರ್ಥಿಗಳು, ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಎಸ್‌ಪಿ) 86 ಅಭ್ಯರ್ಥಿಗಳನ್ನು…

Read More

ಬೆಂಗಳೂರು : ನವೆಂಬರ್ 17 ರಂದು ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನಡೆಸಿದ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ. ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ನಲ್ಲಿ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ನವೆಂಬರ್ 26ರಂದು ಸಂಜೆ 5:30ರ ಒಳಗೆ ಅಂಚೆಯ ಮೂಲಕ ಪರೀಕ್ಷಾ ನಿಯಂತ್ರಕರಿಗೆ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ನವೆಂಬರ್.20, 2024ರ ಇಂದು, ನವೆಂಬರ್.21, 2024ರ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್.20ರ ನಾಳೆಯ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇಂದು ಈ ಏರಿಯಾಗಳಲ್ಲಿ ಪವರ್ ಕಟ್ ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್​ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ರಾಮಾಂಜನೇಯ ನಗರ, ನಂದ ಕುಮಾರ್ ಲೇಔಟ್, ಉತ್ತರಹಳ್ಳಿ ಮೇನ್ ರೋಡ್, ಉದಯ ನಗರ, ಗೌಡನ ಪಾಳ್ಯ, ಟೆಲಿಕಾಂ ಲೇಔಟ್, ಮುನೇಶ್ವರ ನಗರ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್, ಹನುಮ ಆದಶð ಅಪಾಟ್ðಮೆಂಟ್ 1 & 2, ಹಿಲ್ಸ್ ಲೇಔಟ್, ಕಾಮಾಕ್ಯ ಲೇಔಟ್, ಹೊಸಕೆರೆಹಳ್ಳಿ, ಟಾಟಾ…

Read More

ಬೆಂಗಳೂರು : ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಹೃದಯಾಘಾತದಿಂದ ಗ್ರಾಮಲೆಕ್ಕಿಗರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಲಕ್ಕೂರಿನಲ್ಲಿ ಹೃದಯಾಘಾತದಿಂದ ಮಾಧವ್ ರಾವ್ (53) ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

Read More

ನವದೆಹಲಿ : ಇತ್ತೀಚಿನ ದಿನಗಳಲ್ಲಿ, ಮೊಬೈಲ್ ಫೋನ್‌ಗಳಿಂದಾಗಿ ಮಕ್ಕಳು ಮತ್ತು ಹದಿಹರೆಯದವರಲ್ಲಿ ಗಂಭೀರ ಕಾಯಿಲೆಗಳು ಹೆಚ್ಚಾಗುತ್ತಿವೆ ಮತ್ತು ಪರದೆಯ ಸಮಯದ ಅಭ್ಯಾಸವು ವೇಗವಾಗಿ ಹೆಚ್ಚುತ್ತಿದೆ, ಇದು ಅವರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. AIIMS ಭೋಪಾಲ್‌ನ ಇತ್ತೀಚಿನ ಸಂಶೋಧನೆ ಮತ್ತು OPD ವಿಶ್ಲೇಷಣೆಯು ಮಧ್ಯಪ್ರದೇಶದಲ್ಲಿ 33.1% ಹದಿಹರೆಯದವರು ಖಿನ್ನತೆಯಂತಹ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಮತ್ತು 24.9% ಹದಿಹರೆಯದವರು ಆತಂಕದಿಂದ ಬಳಲುತ್ತಿದ್ದಾರೆ ಎಂದು ಬಹಿರಂಗಪಡಿಸಿದೆ. 7 ವರ್ಷದ ಮಗುವಿನ ಮೇಲೆ ಮೊಬೈಲ್ ಚಟದ ಅಪಾಯಕಾರಿ ಪರಿಣಾಮ ಭೋಪಾಲ್‌ನ 7 ವರ್ಷದ ಸೂರ್ಯಾಂಶ್ ದುಬೆ ಮೊಬೈಲ್ ಫೋನ್‌ಗಳಲ್ಲಿ ಹೆಚ್ಚಿನ ಸಮಯವನ್ನು ಕಳೆಯುವ ಕಾರಣದಿಂದಾಗಿ ವರ್ಚುವಲ್ ಆಟಿಸಂ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ. ಸೂರ್ಯಾಂಶ್ ದಿನಕ್ಕೆ 8 ಗಂಟೆಗಳ ಕಾಲ ಮೊಬೈಲ್ ಬಳಸುತ್ತಿದ್ದರು, ಇದರಿಂದಾಗಿ ಅವರು ಮಾತನಾಡುವ ಸಾಮರ್ಥ್ಯವನ್ನು ಕಳೆದುಕೊಂಡರು ಮತ್ತು ವಿಚಿತ್ರವಾದ ಶಬ್ದಗಳನ್ನು ಮಾಡಲು ಪ್ರಾರಂಭಿಸಿದರು. ಆತನ ಮನೆಯವರು ಲಕ್ಷಗಟ್ಟಲೆ ಹಣ ಖರ್ಚು ಮಾಡಿ ಚಿಕಿತ್ಸೆ ಕೊಡಿಸಿದ್ದು, ಇದೀಗ ಸೂರ್ಯಾಂಶ್‌ನ ಸ್ಥಿತಿ ಸ್ವಲ್ಪ ಸುಧಾರಿಸಿದೆ. ಈಗ…

Read More

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸ್ವಚ್ಛ ಅಬಕಾರಿ ಅಭಿಯಾನದಡಿ ನ. 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್‌ ಅಸೋಸಿಯೇಶನ್ ಕರ್ನಾಟಕ ಕರೆ ನೀಡಿದೆ. ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದ ಅಸೋಶಿ ಯೇಶನ್ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ, ಅಬಕಾರಿ ಇಲಾಖೆ ಯನ್ನು ಆರ್ಥಿಕ ಸಚಿವರೇನಿರ್ವಹಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಬೇಕು. ವ್ಯಾಪಾರಿಗಳು ಪರವಾನಗಿ ಪಡೆಯುವಾಗ ಹಾಗೂ ಮರು ನೋಂದಣಿ ಮಾಡಿಕೊಳ್ಳುವಾಗ ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಅಬಕಾರಿ ಕಾಯ್ದೆಯ ಕಲಂ 29 ಪುನರ್ ವಿಮರ್ಶಿಸಿ, ತಿದ್ದುಪಡಿ ಮಾಡಬೇಕು. ಚಿಲ್ಲರೆ ಲದೆ ಮಾರಾಟದ ಮೇಲೆ ಮದ್ಯ ಕನಿಷ್ಠ ಶೇ 20 ರಷ್ಟು ಲಾಭಾಂಶ ನೀಡಬೇಕು. ನಕಲಿ ಮದ್ಯ ತಯಾರಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮದ್ಯದ ಪಾರ್ಸಲ್‌ಗೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ…

Read More