Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಿದೆ. ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು,ವಿಚಾರಣೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಪರವಾಗಿ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಸರ್ಕಾರದ ಪರ ಕಪಿಲ್ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ವಾದಿಸಲಿದ್ದಾರೆ. ಹಿಂದಿನ ಭೂಮಾಲೀಕ ದೇವರಾಜು ಪರ ದುಷ್ಯಂತ್ ದವೆ ವಾದಿಸಲಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ. ರಾಘವನ್ ವಾದ ಮಂಡಿಸಲಿದ್ದಾರೆ. ಡಿಸೆಂಬರ್ 19 ರಂದು ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯಪೀಠ 2025 ಜನವರಿ 15 ಕ್ಕೆ ವಿಚಾರಣೆ ಮುಂದೂಡಿತ್ತು. ಆಕ್ಷೇಪಣೆ…
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ 6 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಹಾಸನ, ಚಾಮರಾಜನಗರ, ಮೈಸೂರು, ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜನವರಿ 15 ರಿಂದ ಮಳೆಯಾಗುವ ಸಾಧ್ಯತೆ ಇದೆ. ಇನ್ನು ರಾಜ್ಯದಲ್ಲಿ ಶೀತಾಗಾಳಿ ಬೀಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಳವಾಗುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, 5 ದಿನ ವಿಪರೀತ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ ಸೇರಿದಂತೆ ದಕ್ಷಿಣ ವಲಯದಲ್ಲಿ ಚಳಿ ಹೆಚ್ಚಿರಲಿದೆ. ತಾಪಮಾನ 2 ರಿಂದ…
ಬೃಂದಾವನ : ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಯಾತ್ರಿಕರ ಬಸ್ ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಓರ್ವ ಪ್ರಯಾಣಿಕ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಬೃಂದಾವನದಲ್ಲಿ ನಡೆದಿದೆ. ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ ಸುಟ್ಟು ಕರಕಲಾಗಿದೆ. ಆ ಸಮಯದಲ್ಲಿ 50 ಯಾತ್ರಿಕರು ಇದ್ದರು ಎಂದು ಹೇಳಲಾಗುತ್ತಿದೆ. ಕುಂಭಮೇಳಕ್ಕೆ ತೆರಳುವ ಮಾರ್ಗದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿ 50 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುರಂತದಲ್ಲಿ ಕುಭಿರ್ ಮಂಡಲದ ಪಾಲ್ಸಿ ಗ್ರಾಮದ ವೃದ್ಧರೊಬ್ಬರು ಸಜೀವ ದಹನವಾಗಿದ್ದಾರೆ. https://twitter.com/i/status/1879332676228026616
ಬೆಂಗಳೂರು: ರಾಜ್ಯದ ಎಲ್ಲಾ ಪರೀಕ್ಷಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕೆ-ಸೆಟ್ ಪರೀಕ್ಷೆ ಸೇರಿ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ಸಲ್ಲಿಸುವ ದಾಖಲೆಗಳು ಮುಂದಿನ ಎಲ್ಲಾ ಪರೀಕ್ಷೆಗಳಿಗೂ ಅನ್ವಯವಾಗುವಂತೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಚ್ಚುವರಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಕೆ – ಸೆಟ್ 2024 ಅರ್ಹ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಸಚಿವ ಡಾ.ಎಂ.ಸಿ. ಸುಧಾಕರ್, ಪರೀಕ್ಷಾರ್ಥಿಗಳು ಪ್ರತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ದಾಖಲೆಗಳನ್ನು ನೀಡುವ ಬದಲು ಒಮ್ಮೆ ನೀಡಿದ ದಾಖಲೆಗಳನ್ನು ಎಲ್ಲಾ ಪರೀಕ್ಷೆಗಳಿಗೂ ಬಳಕೆಯಾಗುವಂತಹ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಕೆ-ಸೆಟ್ ಪರೀಕ್ಷೆ ಅಥವಾ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ದಾಖಲಿ ಸಲ್ಲಿಸಿದವರು ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ದಾಖಲೆ ಸಲ್ಲಿಸಬೇಕಿಲ್ಲ. ಈ ರೀತಿಯಾದ ತಂತ್ರಜ್ಞಾನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಳವಡಿಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಇದೇ ವೇಳೆ…
ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಲೈಂಗಿಕತೆ ಮತ್ತು ಸಂಬಂಧಗಳ ಬಗ್ಗೆ ಮುಕ್ತ ಚರ್ಚೆ ನಡೆಯುತ್ತಿದೆ. ಇತ್ತೀಚೆಗೆ ನಡೆಸಲಾದ ‘ಲೇಡ್ ಇನ್ ಇಂಡಿಯಾ 2025’ ಸಮೀಕ್ಷೆಯು ಭಾರತೀಯರ ಲೈಂಗಿಕ ಜೀವನದ ಬಗ್ಗೆ ಹಲವು ಆಸಕ್ತಿದಾಯಕ ಮತ್ತು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. ಈ ಸಮೀಕ್ಷೆಯಲ್ಲಿ 10,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಮತ್ತು ಅದರ ಫಲಿತಾಂಶಗಳು ಭಾರತೀಯರ ಸಂಬಂಧಗಳು ಮತ್ತು ಲೈಂಗಿಕ ಆರೋಗ್ಯದ ಬಗ್ಗೆ ಹೊಸ ಮಾಹಿತಿಯನ್ನು ನೀಡಿವೆ. ಭಾರತೀಯರ ಲೈಂಗಿಕ ಜೀವನದ ಬಗ್ಗೆ ದೊಡ್ಡ ಬಹಿರಂಗಪಡಿಸುವಿಕೆ ಈ ಸಮೀಕ್ಷೆಯ ಪ್ರಕಾರ, 55% ಭಾರತೀಯರು ತಮ್ಮ ಲೈಂಗಿಕ ಜೀವನದಲ್ಲಿ ತೃಪ್ತರಾಗಿಲ್ಲ ಮತ್ತು ಅವರು ಹೆಚ್ಚಿನ ಲೈಂಗಿಕತೆಯನ್ನು ಬಯಸುತ್ತಾರೆ. ಈ ಅಂಕಿ ಅಂಶವು ಕೇವಲ ವಿವಾಹಿತರಿಗೆ ಸೀಮಿತವಾಗಿಲ್ಲ, ಅವಿವಾಹಿತರು, ದಂಪತಿಗಳು ಮತ್ತು ವಿವಾಹಿತರು ಸಹ ಈ ಅಸಮಾಧಾನವನ್ನು ಎದುರಿಸುತ್ತಿದ್ದಾರೆ. ಸಮೀಕ್ಷೆಯ ಪ್ರಕಾರ, ಶೇ. 59 ರಷ್ಟು ವಿವಾಹಿತರು ತಮ್ಮ ಲೈಂಗಿಕ ಜೀವನದ ಬಗ್ಗೆ ಅತೃಪ್ತರಾಗಿದ್ದಾರೆ. ನಿರ್ದಿಷ್ಟವಾಗಿ ಮಹಿಳೆಯರು (60%), ಪುರುಷರಿಗಿಂತ (53%) ಸ್ವಲ್ಪ ಹೆಚ್ಚು ಅತೃಪ್ತರಾಗಿದ್ದಾರೆ. ಲೈಂಗಿಕತೆ…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಿದೆ. ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು,ವಿಚಾರಣೆ ನಡೆಸಲಿದ್ದಾರೆ. ಡಿಸೆಂಬರ್ 19 ರಂದು ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯಪೀಠ 2025 ಜನವರಿ 15 ಕ್ಕೆ ವಿಚಾರಣೆ ಮುಂದೂಡಿತ್ತು. ರಲ್ಲಿ ಆಕ್ಷೇಪಣೆ ಸಲ್ಲಿಸಲು ಪ್ರತಿ ವಾದಿಗಳಿಗೆ ಸೂಚನೆ ನೀಡಿತು. ಅಲ್ಲದೆ ಜನವರಿ 15 ಇಂದು ಅಂತಿಮ ವಿಚಾರಣೆ ನಡೆಸಲು ಹೈಕೋರ್ಟ್ ನಿರ್ಧರಿಸಿದೆ ಎನ್ನಲಾಗಿದೆ.
2024-25 ನೇ ಸಾಲಿನಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್ನಿಂದ ಮಾನ್ಯತೆ ಪಡೆದಿರುವ ಧಾರವಾಡ ಜಿಲ್ಲೆಯಲ್ಲಿನ ಸರ್ಕಾರಿ, ಅರೇಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25,000 ರೂ. ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಜನವರಿ 20, 2025 ರೊಳಗಾಗಿ https://sevasindu.karanataka. gov.in ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2971590 ಗೆ ಸಂಪರ್ಕಿಸಬಹುದು ಎಂದು ಧಾರವಾಡ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ : ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕನೊಬ್ಬ ಭೀಕರವಾಗಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿ ಅಪರಿಚಿತನೊಬ್ಬ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಹೌದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಐದು ವರ್ಷದ ಬಾಲಕಿ ಮೇಲೆ ಸೋಮವಾರ ಅಪರಿಚಿತನೊಬ್ಬ ಅತ್ಯಾಚಾರವೆಸಗಿದ್ದಾನೆ.ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ಹತ್ತು ವರ್ಷಗಳ ಹಿಂದೆ ತೋರಣಗಲ್ಲಿಗೆ ಬಂದು ನೆಲೆಸಿದ್ದ ಉತ್ತರ ಭಾರತ ದಂಪತಿಯ ಮಗು ಸೋಮವಾರ ಮಕ್ಕಳೊಂದಿಗೆ ಮನೆ ಬಳಿ ಆಟವಾಡುತ್ತಿತ್ತು. ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ದೌರ್ಜನ್ಯ ವೆಸಗಿದ್ದಾನೆ. ಲೈಂಗಿಕ ದಾಳಿಯಿಂದಾಗಿ ಮಗುವಿಗೆ ಆಂತರಿಕ ಗಾಯವಾಗಿದ್ದು, ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯೊಂದಕ್ಕೆ ಮಗುವನ್ನು ದಾಖಲಿಸಲಾಯಿತು ಎಂದು ಗೊತ್ತಾಗಿದೆ. ಸೋಮವಾರ ರಾತ್ರಿಯೇ ಮಗುವಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದ್ದು ಮಗು ಅಪಾಯದಿಂದ ಪಾರಾಗಿದೆ.ಘಟನೆ ಸಂಬಂಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ…
ನವದೆಹಲಿ : ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿಯ ರಾಜಕೀಯ ವಾತಾವರಣ ಬಿಸಿಯಾಗಿದೆ. ಏತನ್ಮಧ್ಯೆ, ಗುಪ್ತಚರ ಸಂಸ್ಥೆಗಳು ಎಚ್ಚರಿಕೆಯನ್ನು ನೀಡಿವೆ. ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ದಾಳಿಯನ್ನು ಪಂಜಾಬ್ ಮೂಲದ ಖಲಿಸ್ತಾನಿ ಭಯೋತ್ಪಾದಕರು ನಡೆಸಬಹುದು. ಅರವಿಂದ್ ಕೇಜ್ರಿವಾಲ್ ಅವರ ಭದ್ರತೆಯನ್ನು ಏಜೆನ್ಸಿಗಳ ಮೂಲಕ ಪರಿಶೀಲಿಸಲಾಗಿದೆ. ಕೇಜ್ರಿವಾಲ್ ಮೇಲೆ ದಾಳಿ ನಡೆಯುವ ಸಾಧ್ಯತೆಯ ನಂತರ, ಗುಪ್ತಚರ ಸಂಸ್ಥೆಗಳು ದೆಹಲಿ ಪೊಲೀಸರಿಗೆ ಮಾಹಿತಿ ನೀಡಿವೆ. ಕೆಲವು ಅನುಮಾನಾಸ್ಪದ ಜನರ ಚಲನವಲನಗಳನ್ನು ಸಹ ಪತ್ತೆಹಚ್ಚಲಾಗಿದೆ ಎಂದು ಇನ್ಪುಟ್ನಲ್ಲಿ ತಿಳಿಸಲಾಗಿದೆ. ಅರವಿಂದ್ ಕೇಜ್ರಿವಾಲ್ ಪ್ರಸ್ತುತ Z ಪ್ಲಸ್ ಭದ್ರತೆಯನ್ನು ಪಡೆಯುತ್ತಿದ್ದಾರೆ ಎಂದು ನಾವು ನಿಮಗೆ ಹೇಳೋಣ. ಆದಾಗ್ಯೂ, ವಿವಿಐಪಿಗಳ ಬಗ್ಗೆ ಅಂತಹ ಎಚ್ಚರಿಕೆಗಳನ್ನು ಸ್ವೀಕರಿಸಿದ ನಂತರ, ಪೊಲೀಸರು ಅಸ್ಟ್ರಾ ಎಚ್ಚರಿಕೆ ಮೋಡ್ನಲ್ಲಿದ್ದಾರೆ.
ಲಡಾಖ್ : ಲಡಾಖ್ನ ಕಾರ್ಗಿಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಶಿಲಿಕ್ಚೇ ಬೈಪಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಕಾರ್ಗಿಲ್ನಿಂದ ಡ್ರಾಸ್ಗೆ ಹೋಗುತ್ತಿದ್ದ ಟಿಪ್ಪರ್ ಮತ್ತು ಸ್ಕಾರ್ಪಿಯೋ ಶಿಲಿಕ್ಚೇ ಸಂಚಾರ ನಿಯಂತ್ರಣ ಬಿಂದು (ಟಿಸಿಪಿ) ಬಳಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮವಾಗಿ ಐದು ಜನರು ದುರಂತವಾಗಿ ಸಾವನ್ನಪ್ಪಿದರು, ಇದರಿಂದಾಗಿ ಎರಡೂ ವಾಹನಗಳು ಆಳವಾದ ಕಂದಕಕ್ಕೆ ಉರುಳಿದವು. ಮೃತರನ್ನು ಸ್ಟಕ್ಪಾದ ಮುಹಮ್ಮದ್ ಹುಸೇನ್ ಅವರ ಪುತ್ರ ಮುಹಮ್ಮದ್ ಹಸನ್; ಚೋಸ್ಕೋರ್ನ ಎಕೆ ರಜಾ ಅವರ ಪುತ್ರ ಲಿಯಾಕತ್ ಅಲಿ; ಮತ್ತು ಬದ್ಗಾಮ್ನ ಹಾಜಿ ಮುಹಮ್ಮದ್ ಅವರ ಪುತ್ರ ಮುಹಮ್ಮದ್ ಇಬ್ರಾಹಿಂ ಎಂದು ಅಧಿಕಾರಿಗಳು ಹೆಸರಿಸಿದ್ದಾರೆ. ಸ್ಥಳೀಯರಲ್ಲದವರೆಂದು ಭಾವಿಸಲಾದ ಉಳಿದ ಇಬ್ಬರು ಮೃತರನ್ನು ಇನ್ನೂ ಗುರುತಿಸಲಾಗಿಲ್ಲ. ತುರ್ತು ಸಿಬ್ಬಂದಿ ತ್ವರಿತವಾಗಿ ಪ್ರದೇಶಕ್ಕೆ ಧಾವಿಸಿ ಬಲಿಪಶುಗಳನ್ನು ಡ್ರಾಸ್ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ಅವರು ಹೇಳಿದರು. ವರದಿಗಳ ಪ್ರಕಾರ, ಬಲಿಪಶುಗಳ…












