Subscribe to Updates
Get the latest creative news from FooBar about art, design and business.
Author: kannadanewsnow57
ಆಗ್ರಾ : ಬೀದಿ ನಾಯಿಗಳ ಅಟ್ಟಹಾಸ ಮುಂದುವರೆದಿದ್ದು, ವಾಕಿಂಗ್ ಗೆ ಹೋಗಿದ್ದ ಮಹಿಳೆ ಮೇಲೆ ನಡುರಸ್ತೆಯಲ್ಲೇ 8 ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ವಾಕಿಂಗ್ಗೆ ತೆರಳಿದ್ದ ಮಹಿಳೆ ಮೇಲೆ ಎಂಟು ನಾಯಿಗಳ ದಂಡು ದಾಳಿ ಮಾಡಿದೆ. ಮಹಿಳೆ ಕೈಯಲ್ಲಿ ನಾಯಿಗಳನ್ನು ಓಡಿಸಿ ತನ್ನನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಳೆ. ಆದರೆ ನಾಯಿಗಳ ದಂಡು ಆಕೆಯ ಮೇಲೆ ದಾಳಿ ಮಾಡಿದೆ. ಮಹಿಳೆ ಕಿರುಚುತ್ತಾ ನೆಲದ ಮೇಲೆ ಬೀಳುತ್ತಾಳೆ ಮತ್ತು ನಾಯಿಗಳು ಅವಳ ಬಟ್ಟೆಗಳನ್ನು ಹಲ್ಲುಗಳಿಂದ ಎಳೆದುಕೊಂಡು ಖಾಲಿ ಜಾಗಕ್ಕೆ ಕರೆದೊಯ್ಯುತ್ತವೆ. ಆಗ್ರಾದ ಈದ್ಗಾ ಕಾಲೋನಿಯಲ್ಲಿ ಬೆಳಗ್ಗೆ 8:30ರ ಸುಮಾರಿಗೆ ಮಹಿಳೆ ಮನೆಯಿಂದ ವಾಕಿಂಗ್ ಹೋಗಿದ್ದರು. ದಾರಿಯಲ್ಲಿ ಕಂಡು ಬಂದ ಬೀದಿ ನಾಯಿಗಳ ದಂಡು ಅವಳನ್ನು ಸುತ್ತುವರೆದಿತ್ತು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. https://twitter.com/i/status/1871583546936365106
ಉತ್ತರ ಕನ್ನಡ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ತಡರಾತ್ರಿ ಚಿರತೆ ನುಗ್ಗಿದ್ದು, ಸಾಕು ನಾಯಿ ಮೇಲೆ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಾಗೇರಿಯಲ್ಲಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತೋಟದ ಮನೆಗೆ ತಡರಾತ್ರಿ 11 ಗಂಟೆ ಸುಮಾರಿಗೆ ಚಿರತೆ ನುಗ್ಗಿದೆ. ತೋಟದ ಮನೆಯಲ್ಲಿ ಸಾಕು ನಾಯಿಯನ್ನು ಅಟ್ಟಾಡಿಸಿಕೊಂಡು ಚಿರತೆ ಬಂದಿದೆ. ಸಾಕು ಚಿರತೆ ದಾಳಿಯಿಂದ ತಪ್ಪಿಸಿಕೊಂಡಿದೆ. ಚಿರತೆ ದಾಳಿಯ ದೃಶ್ಯಗಳು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತೋಟದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪ್ರಯಾಗ್ ರಾಜ್ : ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಮಹಾ ಕುಂಭಮೇಳದಲ್ಲಿ ಇಂದು ಬೆಳಿಗ್ಗೆ 10 ಗಂಟೆಯವರೆಗೆ ಸುಮಾರು 1.38 ಕೋಟಿ ಜನರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಮಾಹಿತಿ ನೀಡಿದೆ. ಪೌಷ ಪೂರ್ಣಿಮೆಯಂದು ಭಜನೆಗಳು ಮತ್ತು ಘೋಷಣೆಗಳೊಂದಿಗೆ ಪ್ರಯಾಗರಾಜ್ ನಲ್ಲಿ ಪ್ರಾರಂಭವಾದ ಮಹಾಕುಂಭದ ಎರಡನೇ ದಿನದಂದು ಸನಾತನ ಧರ್ಮದ ಅಖಾಡಗಳ ಮೊದಲ ‘ಅಮೃತ ಸ್ನಾನ'(ರಾಜ ಸ್ನಾನ)ಕ್ಕೆ ಸಾಕ್ಷಿಯಾಗಿದೆ. ಮಕರ ಸಂಕ್ರಾಂತಿಯು ದಕ್ಷಿಣದಿಂದ ಉತ್ತರ ಗೋಳಾರ್ಧಕ್ಕೆ ಸೂರ್ಯನ ಚಲನೆಯನ್ನು ಆಚರಿಸುತ್ತದೆ. ಈ ಪರಿವರ್ತನೆಯನ್ನು ಶುದ್ಧೀಕರಣ ಮತ್ತು ಆಧ್ಯಾತ್ಮಿಕ ನವೀಕರಣಕ್ಕೆ ಶುಭ ಸಮಯವೆಂದು ನೋಡಲಾಗುತ್ತದೆ. ಮುಂಬೈನ ಭಕ್ತೆ ಅಲ್ಕಾ ದದ್ವಾಲ್ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ. “ಏಕತೆಯಲ್ಲಿ ವೈವಿಧ್ಯತೆ ಇದೆ… ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲು ದೇಶದಾದ್ಯಂತದ ಜನರು ಬಂದಿದ್ದಾರೆ. ನಾನು ಇಲ್ಲಿಗೆ ಬಂದಿರುವುದಕ್ಕೆ ನನಗೆ ನಿಜವಾಗಿಯೂ ಸಂತೋಷವಾಗಿದೆ. ಮಕರ ಸಂಕ್ರಾಂತಿಯನ್ನು ಆಚರಿಸುವ ಸಂದರ್ಭವೂ ನನಗೆ ಸಿಕ್ಕಿತು” ಎಂದು ಅವರು ಎಎನ್ಐಗೆ ತಿಳಿಸಿದರು. ಸರ್ಕಾರವು ಇಲ್ಲಿ ನಿಜವಾಗಿಯೂ ಉತ್ತಮ ವ್ಯವಸ್ಥೆಗಳನ್ನು…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಬೆಳಗಾವಿ ಗಲಾಟೆಯಿಂದಲೇ ಬೀಳಲಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಗಲಾಟೆಯಿಂದಲೇ ಈ ಕಾಂಗ್ರೆಸ್ ಸರ್ಕಾರ ಸರ್ವನಾಶ ಆಗಲಿದೆ. ಈ ಹಿಂದೆ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದ್ದು, ಬೆಳಗಾವಿಯಿಂದಲೇ, ಈ ರಾಜ್ಯ ಕಾಂಗ್ರೆಸ್ ಸರ್ಕಾರವು ಅದೇ ರೀತಿ ಪತನವಾಗಲಿದೆ. ಈಗಾಗಲೇ ಬೆಳಗಾವಿ ಗಲಾಟೆ ಶುರುವಾಗಿದ್ದು, ಯಾವಾಗ ಬೇಕಾದ್ರೂ ಸರ್ಕಾರ ಬೀಳಬಹುದು ಎಂದು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಒಡೆದ ಮನೆಯಂತಾಗಿದೆ. ಆ ಮುಖ್ಯಮಂತ್ರಿ ಕುರ್ಚಿಯ ಕಾಲು ಮುರಿಯ ಬೇಡಿ. ಕರ್ನಾಟಕದಲ್ಲಿ ಇನ್ನು ಕಾಂಗ್ರೆಸ್ ಪಕ್ಷದ ಕಥೆ ಮುಗಿಯಿತು. ಸಿಎಂ ಸಿದ್ದರಾಮಯ್ಯ ನಿನ್ನೆ ತ್ಯಾಗದ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದು ಹೇಳಿದ್ದಾರೆ.
ಬೆಳಗಾವಿ : ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಒಂದು ತಿಂಗಳ ಕಾಳ ಬೆಡ್ ರೆಸ್ಟ್ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯದ ಬಗ್ಗೆ ವೈದ್ಯ ಡಾ.ರವಿ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆನ್ನಿಗೆ ಗಂಭೀರವಾದ ಪೆಟ್ಟು ಬಿದ್ದಿದೆ. ಭುಜಕ್ಕೂ ಗಾಯಗಳಾಗಿವೆ. ಬೆನ್ನಿನ ಭಾಗದಲ್ಲಿ ಪ್ಯಾಕ್ಚರ್ ಆಗಿದೆ. ಚಿಕಿತ್ಸೆ ಮುಂದುವರೆದಿದೆ, ಆಪರೇಷನ್ ಅಗತ್ಯವಿಲ್ಲ. ಚಿಕಿತ್ಸೆ ಮೂಲಕ ಸರಿಪಡಿಸಲಾಗುವುದು. ಲಕ್ಷ್ಮೀ ಹೆಬ್ಬಾಳಕರ್ ಒಂದು ತಿಂಗಳು ವಿಶ್ರಾಂತಿ ಪಡೆಯುವ ಅಗತ್ಯವಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಎರಡು ದಿನಗಳ ಬಳಿಕ ಸಚಿವೆ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿ ಪರಿಗಣಿಸಿ ಡಿಸ್ಚಾರ್ಜ್ ಮಾಡಲಾಗುತ್ತದೆ. ಸಚಿವೆ ಹೆಬ್ಬಾಳ್ಕರ್ ಅವರಿಗೆ ಒಂದು ತಿಂಗಳು ಬೆಡ್ ರೆಸ್ಟ್ ಬೇಕಾಗುತ್ತದೆ ಚನ್ನರಾಜಟಿಹೊಳಿ ತಲೆಗೆ ಪೆಟ್ಟಾಗಿದ್ದು ಹೆಚ್ಚಿನ ಗಾಯಗಳಾಗಿಲ್ಲ ಎಂದು ಬೆಳಗಾವಿಯ ವಿಜಯ ರವಿ ಪಾಟೀಲ್ ಕುರಿತು ಹೇಳಿಕೆ ನೀಡಿದರು.…
ತಾಯಿಯಾಗುವ ಸಂತೋಷವನ್ನು ಜಗತ್ತಿನ ಅತ್ಯಂತ ದೊಡ್ಡ ಸಂತೋಷವೆಂದು ಪರಿಗಣಿಸಲಾಗಿದೆ. ಒಬ್ಬ ಮಹಿಳೆ ಗರ್ಭಿಣಿಯಾದಾಗ, ಅವಳ ಸಂತೋಷಕ್ಕೆ ಮಿತಿಯಿಲ್ಲ. ಅವಳು ತನ್ನ ಮುಂಬರುವ ಮಗುವನ್ನು ಕಾತರದಿಂದ ಕಾಯುತ್ತಿದ್ದಾಳೆ. ಗರ್ಭಾವಸ್ಥೆಯಲ್ಲಿ, ಮಹಿಳೆ ತನ್ನ ಆಹಾರದ ಬಗ್ಗೆ ಚೆನ್ನಾಗಿ ಕಾಳಜಿ ವಹಿಸುತ್ತಾಳೆ. ತನ್ನ ಮಗು ಆರೋಗ್ಯವಾಗಿ ಜನಿಸುವುದನ್ನು ಖಚಿತಪಡಿಸಿಕೊಳ್ಳುವುದು ಅವಳ ಪ್ರಯತ್ನ. ಸಾಮಾನ್ಯವಾಗಿ, ಮಗು ಜನಿಸಿದಾಗ, ಅದರ ತೂಕ ಎರಡೂವರೆ ಕಿಲೋಗ್ರಾಂಗಳಿಂದ ಮೂರೂವರೆ ಕಿಲೋಗ್ರಾಂಗಳವರೆಗೆ ಇರುತ್ತದೆ. ಒಳ್ಳೆಯ ಮತ್ತು ಆರೋಗ್ಯವಂತ ಹೆಣ್ಣು ಮಗು ಜನಿಸಿದಾಗ ಪೋಷಕರು ಸಹ ಸಂತೋಷಪಡುತ್ತಾರೆ. ಇದೀಗ ಅಸ್ಸಾಂನಲ್ಲಿ ಬರೋಬ್ಬರಿ 5.2 ಕೆಜಿ ತೂಕವಿರುವ ಮಗುವಿಗೆ ಮಹಿಳೆಯೊಬ್ಬರು ಜನ್ಮ ಕೊಟ್ಟಿದ್ದಾರೆ. ಮಗುವಿನ ತೂಕ ಐದು ಕಿಲೋ ಅಥವಾ ಅದಕ್ಕಿಂತ ಹೆಚ್ಚಿರುವ ಇಂತಹ ಪ್ರಕರಣಗಳು ಅಪರೂಪಕ್ಕೆ ಕಂಡುಬರುತ್ತವೆ. ಇಷ್ಟು ಭಾರವಾದ ಮಗುವಿಗೆ ಜನ್ಮ ನೀಡುವಾಗ ಕೆಲವು ತೊಂದರೆಗಳಿವೆ. ಈಗ ಅಸ್ಸಾಂನ ಕ್ಯಾಚರ್ ಜಿಲ್ಲೆಯ ಮಹಿಳೆಯೊಬ್ಬ 5.2 ಕೆಜಿ ತೂಕದ ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿನ ಭಾರವಾದ ತೂಕವನ್ನು ನೋಡಿ, ಕುಟುಂಬ ಸದಸ್ಯರು ಹಾಗೂ ವೈದ್ಯರು…
ಚೆನ್ನೈ : ವಿಲ್ಲುಪುರಂ ರೈಲು ನಿಲ್ದಾಣದ ಬಳಿ ವಿಲ್ಲುಪುರಂನಿಂದ ಪುದುಚೇರಿಗೆ ಹೋಗುತ್ತಿದ್ದ ಪ್ಯಾಸೆಂಜರ್ ರೈಲಿನ ಐದು ಬೋಗಿಗಳು ಹಳಿತಪ್ಪಿರುವ ಘಟನೆ ನಡೆದಿದೆ. ದೊಡ್ಡ ಶಬ್ದ ಕೇಳಿದ ತಕ್ಷಣ ರೈಲು ನಿಂತಿದ್ದರಿಂದ ದೊಡ್ಡ ಅಪಘಾತ ತಪ್ಪಿತು. ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ರೈಲ್ವೆ ಸಿಬ್ಬಂದಿ ಮತ್ತು ಎಂಜಿನಿಯರ್ಗಳು ಸ್ಥಳಕ್ಕೆ ಧಾವಿಸಿ ಹಳಿತಪ್ಪಿದ ರೈಲನ್ನು ಸರಿಪಡಿಸಲು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. https://twitter.com/ANI/status/1879033475615088663 ರೈಲ್ವೆ ಸಿಬ್ಬಂದಿ ಕೆಲಸ ಮಾಡಿದರು ಮತ್ತು ಇತರ ರೈಲುಗಳಿಗೆ ಮಾರ್ಗವನ್ನು ತೆರವುಗೊಳಿಸಲಾಯಿತು, ಘಟನೆ ತಾಂತ್ರಿಕ ದೋಷದಿಂದ ಉಂಟಾಗಿದೆಯೇ ಅಥವಾ ವಿಧ್ವಂಸಕ ಕೃತ್ಯದಿಂದ ಉಂಟಾಗಿದೆಯೇ ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವಿಲ್ಲುಪುರಂ ರೈಲ್ವೆ ಪೊಲೀಸರು ಈ ವಿಷಯದ ಬಗ್ಗೆ ಆಳವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಬೆಳಗಾವಿ : ರಸ್ತೆ ಮೇಲೆ ನಾಯಿ ಅಡ್ಡ ಬಂದಿದ್ದಕ್ಕೆ ಅದನ್ನು ತಪ್ಪಿಸಲು ಹೋಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿದ್ದು, ಈ ಒಂದು ಅಪಘಾತದಲ್ಲಿ ಅವರ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಈ ಕುರಿತು ಆಸ್ಪತ್ರೆಯ ವೈದ್ಯ ರವಿ ಪಾಟೀಲ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನಿನ ಎಲ್ 1 ಹಾಗೂ ಎಲ್ 4 ಮೂಳೆ ಮುರಿದಿದೆ ಎಂದು ಹೇಳಿಕೆ ನೀಡಿದ್ದಾರೆ. ಬೆಳಗಾವಿಯ ಹಿರಿಯ ಆಸ್ಪತ್ರೆಯ ವೈದ್ಯರದಂತಹ ಡಾ. ರವಿ ಪಾಟೀಲ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಎರಡು ದಿನಗಳ ಬಳಿಕ ಸಚಿವೆ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿ ಪರಿಗಣಿಸಿ ಡಿಸ್ಚಾರ್ಜ್ ಮಾಡಲಾಗುತ್ತದೆ. ಸಚಿವೆ ಹೆಬ್ಬಾಳ್ಕರ್ ಅವರಿಗೆ ಒಂದು ತಿಂಗಳು ಬೆಡ್ ರೆಸ್ಟ್ ಬೇಕಾಗುತ್ತದೆ ಚನ್ನರಾಜಟಿಹೊಳಿ ತಲೆಗೆ ಪೆಟ್ಟಾಗಿದ್ದು ಹೆಚ್ಚಿನ ಗಾಯಗಳಾಗಿಲ್ಲ ಎಂದು ಬೆಳಗಾವಿಯ ವಿಜಯ ರವಿ ಪಾಟೀಲ್ ಕುರಿತು ಹೇಳಿಕೆ…
ಬೆಂಗಳೂರು : ನಾಡಿನಾದ್ಯಂತ ಇಂದು ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಋತು ಮನ್ವಂತರದ ಹಬ್ಬವಾದ ಮಕರ ಸಂಕ್ರಾಂತಿಯು ಸರ್ವರ ಕಷ್ಟಗಳನ್ನು ಕಳೆದು, ಸುಖ, ಶಾಂತಿ, ಸಮೃದ್ಧಿಯ ಹೊಸ ದಿಕ್ಕಿನೆಡೆಗೆ ಮುನ್ನಡೆಸಲಿ ಎಂದು ಆಶಿಸುತ್ತೇನೆ. ಎಳ್ಳು- ಬೆಲ್ಲದ ಜೊತೆ ಪ್ರೀತಿ, ಬಾಂಧವ್ಯ ಮಿಳಿತಗೊಳ್ಳಲಿ, ನಾಡಿನಲ್ಲಿ ಸ್ನೇಹ, ಸೌಹಾರ್ದತೆ ಶಾಶ್ವತವಾಗಿ ಮನೆಮಾಡಲಿ. ನಾಡಬಂಧುಗಳಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು ಎಂದು ತಿಳಿಸಿದ್ದಾರೆ. https://twitter.com/siddaramaiah/status/1879016818003898682?ref_src=twsrc%5Egoogle%7Ctwcamp%5Eserp%7Ctwgr%5Etweet
ಧಾರವಾಡ : ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಧಾರವಾಡದಲ್ಲಿ ಡೆತ್ ನೋಟ್ ಬರೆದಿದ್ದು, ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ (35) ಎಂದು ತಿಳಿದುಬಂದಿದೆ. ಕಳೆದ ನವೆಂಬರ್ 16ರಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೊದಲಿಗೆ ಗರಗ ಪೊಲೀಸರು ಇದೊಂದು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಡೆತ್ನೋಟ್ ಶಿವರಾಜನೇ ಬರೆದಿದ್ದು ಎಂದು ಎಫ್ಎಸ್ಎಲ್ ವರದಿ ಬಂದ ಹಿನ್ನೆಲೆಯಲ್ಲಿ ಪತ್ನಿಯೇ ಸಾವಿಗೆ ಕಾರಣ ಎಂದು ಗರಗ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. ಶಿವರಾಜ್ ಎತ್ತಿನಗುಡ್ಡ ಕಳೆದ 2024 ರ ಜುಲೈನಲ್ಲಿ ಮದುವೆಯಾಗಿದ್ದರು. ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಹೈಸ್ಕೂಲ್ ಶಿಕ್ಷಕಿ ಯಲ್ಲವ್ವ ಬೆಂಗೇರಿ ಎಂಬುವವಳ ಜೊತೆ ಮದುವೆಯಾಗಿದ್ದರು.ಮದುವೆಯಾದ 15 ದಿನದಲ್ಲೇ ಯಲ್ಲವ್ವ ಪೋಷಕರ ಮನೆಗೆ ಹೋಗಿದ್ದರು. ಶಿವರಾಜ್ ಆಗ ಪತ್ನಿಗೆ ಮನೆಗೆ ಕರೆ…













