Author: kannadanewsnow57

ಬೆಳಗಾವಿ : ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ವಿದ್ಯುಕ್ತ್ ಚಾಲನೆ ನೀಡಿದರು. ಬೆಳಗ್ಗೆ ನಗರದ ಟಿಳಕವಾಡಿಯಲ್ಲಿನ ವೀರಸೌಧದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ನೇರವಾಗಿ ಸರ್ದಾರ್ ಹೈಸ್ಕೂಲ್ ಮೈದಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಹಾಗೂ ಇನ್ನೀತರ ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು. ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸಚಿವರಾದ ಎಚ್.ಕೆ.ಪಾಟೀಲ್ , ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಲಕ್ಷ್ಮಿ ಹೆಬ್ಬಾಳಕರ, ಎಂ.ಬಿ.ಪಾಟೀಲ, ಡಾ. ಎಂ.ಸಿ.ಸುಧಾಕರ, ದಿನೇಶ್ ಗುಂಡೂರಾವ್, ಭೈರತಿ ಸುರೇಶ, ಶಾಸಕರಾದ ಆರ್ ವಿ ದೇಶಪಾಂಡೆ, ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯ್ಲಿ ಸೇರಿದಂತೆ…

Read More

ಥಾಣೆ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿ 12-13 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿ ಆಕೆಯ ಶವವನ್ನು ಎಸೆದಿರುವ ಘಟನೆ ನಡೆದಿದೆ. ಮುಂಬೈ ಪಕ್ಕದ ಥಾಣೆಯ ಕಲ್ಯಾಣ್‌ನಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮಾಡಿ ಬಳಿಕ ಹತ್ಯೆ ಮಾಡಲಾಗಿದ್ದು, ಬುಧವಾರ (ಡಿಸೆಂಬರ್ 25) ದಿನವಿಡೀ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಸ್ಥಳೀಯರು ಪ್ರತಿಭಟನಾ ಮೆರವಣಿಗೆಯನ್ನೂ ನಡೆಸಿದ್ದಾರೆ. ಸೋಮವಾರ (ಡಿಸೆಂಬರ್ 23) ಮಧ್ಯಾಹ್ನ 12.00 ರ ಸುಮಾರಿಗೆ, 13 ವರ್ಷದ ಬಾಲಕಿ ಕಲ್ಯಾಣ್ ಕೊಲ್ಸೆವಾಡಿ ಪ್ರದೇಶದಲ್ಲಿನ ತನ್ನ ಮನೆಯಿಂದ ಅಂಗಡಿಗೆ ಹೋಗಿದ್ದಳು. ಎಷ್ಟೋ ಹೊತ್ತಾದರೂ ಮನೆಗೆ ಬಾರದೆ ಇದ್ದಾಗ ಮನೆಯವರು ಆತಂಕಗೊಂಡರು. ಬಳಿಕ ಬಾಲಕಿಗಾಗಿ ಹುಡುಕಾಟ ನಡೆಸಲಾಗಿತ್ತಾದರೂ ಪತ್ತೆಯಾಗಿರಲಿಲ್ಲ. ಪೊಲೀಸರಿಂದ ಸಹಾಯ ಕೇಳಿದ ನಂತರ ತನಿಖೆ ಪ್ರಾರಂಭವಾಯಿತು. ಪೊಲೀಸರು ಶೋಧ ಕಾರ್ಯ ಆರಂಭಿಸಿದರು. ಇದಾದ ನಂತರ ಮಂಗಳವಾರ ಬೆಳಗ್ಗೆ ಕಲ್ಯಾಣ್‌ನ ಭಿವಂಡಿ ಬಾಪಗಾಂವ್ ಬಳಿಯ ಸ್ಮಶಾನದ…

Read More

ಬೆಳಗಾವಿ : “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗುರುವಾರ (ಡಿ.26) ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗೆಯಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ ಉದ್ಯಾನವನ ನಿರ್ಮಿಸಲಾಗಿದೆ. ಈ ಸಂದರ್ಭದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಎಚ್.ಕೆ ಪಾಟೀಲ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು ವೀರಪ್ಪ ಮೊಯ್ಲಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಸಚೇತಕ…

Read More

ಬೆಳಗಾವಿ : ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು. ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು. ನಾಲ್ಕು ಮಂದಿ ನಮ್ಮ ಯೋಧರು ಅಪಘಾತದಲ್ಲಿ ಮರಣ ಹೊಂದಿರುತ್ತಾರೆ. ದಯಾನಂದ ತಿರುಕಣ್ಣನವರ್ ಬೆಳಗಾವಿ, ಧನರಾಜ್ ಸುಭಾಷ್ ಚಿಕ್ಕೋಡಿ, ಮಹೇಶ್ ನಾಗಪ್ಪ ಬಾಗಲಕೋಟೆ ಹಾಗೂ ಅನೂಪ್ ಪೂಜಾರಿ ಕುಂದಾಪುರ ಇವರ ಆತ್ಮಕ್ಕೆ ಚಿರಶಾಂತಿ…

Read More

ಆಗ್ರಾ : ಬೀದಿ ನಾಯಿಗಳ ಅಟ್ಟಹಾಸ ಮುಂದುವರೆದಿದ್ದು, ವಾಕಿಂಗ್ ಗೆ ಹೋಗಿದ್ದ ಮಹಿಳೆ ಮೇಲೆ ನಡುರಸ್ತೆಯಲ್ಲೇ 8 ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ವಾಕಿಂಗ್‌ಗೆ ತೆರಳಿದ್ದ ಮಹಿಳೆ ಮೇಲೆ ಎಂಟು ನಾಯಿಗಳ ದಂಡು ದಾಳಿ ಮಾಡಿದೆ. ಮಹಿಳೆ ಕೈಯಲ್ಲಿ ನಾಯಿಗಳನ್ನು ಓಡಿಸಿ ತನ್ನನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಳೆ. ಆದರೆ ನಾಯಿಗಳ ದಂಡು ಆಕೆಯ ಮೇಲೆ ದಾಳಿ ಮಾಡಿದೆ. ಮಹಿಳೆ ಕಿರುಚುತ್ತಾ ನೆಲದ ಮೇಲೆ ಬೀಳುತ್ತಾಳೆ ಮತ್ತು ನಾಯಿಗಳು ಅವಳ ಬಟ್ಟೆಗಳನ್ನು ಹಲ್ಲುಗಳಿಂದ ಎಳೆದುಕೊಂಡು ಖಾಲಿ ಜಾಗಕ್ಕೆ ಕರೆದೊಯ್ಯುತ್ತವೆ. ಆಗ್ರಾದ ಈದ್ಗಾ ಕಾಲೋನಿಯಲ್ಲಿ ಬೆಳಗ್ಗೆ 8:30ರ ಸುಮಾರಿಗೆ ಮಹಿಳೆ ಮನೆಯಿಂದ ವಾಕಿಂಗ್ ಹೋಗಿದ್ದರು. ದಾರಿಯಲ್ಲಿ ಕಂಡು ಬಂದ ಬೀದಿ ನಾಯಿಗಳ ದಂಡು ಅವಳನ್ನು ಸುತ್ತುವರೆದಿತ್ತು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. https://twitter.com/coolfunnytshirt/status/1871583546936365106?ref_src=twsrc%5Etfw%7Ctwcamp%5Etweetembed%7Ctwterm%5E1871583546936365106%7Ctwgr%5Eb0e27aa8cca4da41dc74c53aeb59b20a7912c47b%7Ctwcon%5Es1_c10&ref_url=https%3A%2F%2Fapi-news.dailyhunt.in%2F

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳ ಅಂತಿಮ ದರ್ಶನ ಪಡೆದು ಮಾತನಾಡಿದ ಸಚಿವ ಸಂತೋಷ್ ಲಾಡ್, ದುರಂತದಲ್ಲಿ ಮೃತಪಟ್ಟ ನಿಜಲಿಂಗಪ್ಪ ಬೇಪುರಿ ಹಾಗೂ ಸಂಜಯ್ ಸವದತ್ತಿ ಅವರಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಯ್ಯಪ್ಪ ಮಾಲಾಧಿಕಾರಿಗಳು ಗಾಯಗೊಂಡಿರುವ ಘಟನೆ ನಡೆದಿತ್ತು. ಈಶ್ವರ ದೇವಸ್ಥಾನದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಈ ಪೈಕಿ ನಿಜಲಿಂಗಪ್ಪ ಬೇಪುರಿ (58) ಹಾಗೂ ಸಂಜಯ್ ಸವದತ್ತಿ (18)ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಉಳಿದ 6 ಮಂದಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

Read More

ನೀವು ಸೋಡಾ ಪಾನೀಯಗಳನ್ನು ಕುಡಿಯಲು ಇಷ್ಟಪಡುತ್ತಿದ್ದರೆ, ಜಾಗರೂಕರಾಗಿರಿ, ಏಕೆಂದರೆ ಇದು ಹೃದಯದ ಆರೋಗ್ಯಕ್ಕೆ ಅಪಾಯಕಾರಿ. ಇದು ಇತ್ತೀಚಿನ ಅಧ್ಯಯನದಲ್ಲಿ ಬಹಿರಂಗವಾಗಿದೆ. ಸ್ವೀಡನ್‌ನಲ್ಲಿ 70,000 ವಯಸ್ಕರ ಅಧ್ಯಯನವು ಸಕ್ಕರೆ ಸೋಡಾ ಪಾನೀಯಗಳನ್ನು (ಹೃದಯ ಆರೋಗ್ಯಕ್ಕಾಗಿ ಸೋಡಾ) ನಿರಂತರವಾಗಿ ಸೇವಿಸುವುದರಿಂದ ಪಾರ್ಶ್ವವಾಯು, ಹೃದಯಾಘಾತ, ಅನಿಯಮಿತ ಹೃದಯ ಬಡಿತ ಮತ್ತು ರಕ್ತನಾಳಗಳ ಊತ (ರಕ್ತನಾಳಗಳ ಊತ) ನಂತಹ ಅಪಾಯಕಾರಿ ಅಂಶಗಳಿಗೆ ಕಾರಣವಾಗಬಹುದು ಎಂದು ಕಂಡುಹಿಡಿದಿದೆ . ಸೋಡಾ ಕುಡಿಯುವುದು ಅಪಾಯಕಾರಿ ಸ್ವೀಡನ್‌ನಲ್ಲಿ ನಡೆಸಿದ ಈ ಅಧ್ಯಯನದಲ್ಲಿ ಭಾಗವಹಿಸಿದ ಎಲ್ಲಾ ಜನರು 1997 ರಿಂದ 2009 ರವರೆಗೆ ಆಹಾರಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಇದರಲ್ಲಿ ಅವರು ತಂಪು ಪಾನೀಯಗಳು ಅಂದರೆ ಸೋಡಾ, ಸಕ್ಕರೆ ಪಾನೀಯಗಳು, ಜಾಮ್ ಅಥವಾ ಜೇನುತುಪ್ಪ, ಕ್ಯಾಂಡಿ-ಐಸ್ ಕ್ರೀಮ್ ಅಥವಾ ಸಿಹಿತಿಂಡಿಗಳಿಂದ ಎಷ್ಟು ಕ್ಯಾಲೊರಿಗಳನ್ನು ಪಡೆಯುತ್ತಾರೆ ಎಂದು ಕೇಳಲಾಯಿತು. 20 ವರ್ಷಗಳ ನಂತರ, ಸುಮಾರು 26,000 ಜನರು ಹೃದ್ರೋಗದಿಂದ ಬಳಲುತ್ತಿದ್ದರು. ತಂಪು ಪಾನೀಯಗಳನ್ನು ಸೇವಿಸುವವರಲ್ಲಿ ಈ ಅಪಾಯ ಹೆಚ್ಚು ಎಂದು ಅಧ್ಯಯನದಲ್ಲಿ ಹೇಳಲಾಗಿದೆ. ಸೋಡಾದಿಂದ…

Read More

ನವದೆಹಲಿ : ಭಾರತೀಯ ರೈಲ್ವೆಯ ಇ-ಟಿಕೆಟಿಂಗ್ ಪ್ಲಾಟ್‌ಫಾರ್ಮ್ ಭಾರತೀಯ ರೈಲ್ವೆ ಪ್ರವಾಸೋದ್ಯಮ ನಿಗಮದ (IRCTC) ಆನ್‌ಲೈನ್ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಗುರುವಾರ (ಡಿಸೆಂಬರ್ 26) ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಟಿಕೆಟ್ ಬುಕ್ ಮಾಡಲು ಪ್ರಯಾಣಿಕರು ಪರದಾಟ ನಡೆಸಿದ್ದಾರೆ. https://twitter.com/iamavim/status/1872141095838327188?ref_src=twsrc%5Etfw%7Ctwcamp%5Etweetembed%7Ctwterm%5E1872141095838327188%7Ctwgr%5E6022030ebceff92e275da5556fa75891348a225a%7Ctwcon%5Es1_c10&ref_url=https%3A%2F%2Fapi-news.dailyhunt.in%2F ತ್ವರಿತ ಟಿಕೆಟ್ ಬುಕಿಂಗ್ ಸಮಯದಲ್ಲಿ ಐಆರ್ಸಿಟಿಸಿ ಸೈಟ್ ಸ್ಥಗಿತಗೊಂಡಿದೆ. ಈ ಸ್ಥಳದಲ್ಲಿ ನಿರ್ವಹಣಾ ಕಾರ್ಯಗಳು ನಡೆಯುತ್ತಿವೆ, ಆದ್ದರಿಂದ ಮುಂದಿನ 1 ಗಂಟೆಯವರೆಗೆ ಯಾವುದೇ ಬುಕಿಂಗ್ ಇರುವುದಿಲ್ಲ ಎಂದು ಐಆರ್ಸಿಟಿಸಿ ಮಾಹಿತಿ ಹಂಚಿಕೊಂಡಿದೆ.ಐಆರ್ಸಿಟಿಸಿ ಸರ್ವರ್ ಡೌನ್ ಆಗಿರುವುದರಿಂದ ಮತ್ತು ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸಲು ಸಾಧ್ಯವಾಗದ ಕಾರಣ ರೈಲು ಪ್ರಯಾಣಿಕರು ಪರದಾಟ ನಡೆಸಿದ್ದಾರೆ.

Read More

ಬೆಳಗಾವಿ : ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಸಿಎಂ ಸಿದ್ದರಾಮಯ್ಯ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದ್ದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ. ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. https://twitter.com/siddaramaiah/status/1872141501339508899?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಚಿತ್ರದುರ್ಗ : ಚಿತ್ರದುರ್ಗ ನಗರದ ಖಾಸಗಿ ಶಾಲೆ ಬಳಿ ನವಜಾತ ಶಿಶುವಿನ ಶವ ಪತ್ತೆಯಾಗಿದ್ದು, ಹೂತಿದ್ದ ಶಿಶುವಿನ ಶವವನ್ನು ನಾಯಿಗಳು ಕಚ್ಚಿ ತಂದಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿಯ ವೆಂಕಟೇಶ್ವರ್ ಶಾಲೆಯ ಮೈದಾನದಲ್ಲಿ ಶಿಶುವಿನ ಶವ ಪತ್ತೆಯಾಗಿದ್ದು, ಹೂತಿದ್ದ ಶಿಶುವನ್ನು ನಾಯಿಗಳು ಕಚ್ಚಿ ತಿಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಅರೆಬರೆ ಹೂತಿದ್ದ ನವಜಾತ ಶಿಶುವನ್ನು ನಾಯಿಗಳು ಕಚ್ಚಿ ಅರ್ಧ ತಿಂದು ಬಿಟ್ಟುಹೋಗಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More