Subscribe to Updates
Get the latest creative news from FooBar about art, design and business.
Author: kannadanewsnow57
ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತ 45 ದಿನಗಳ ಉಚಿತ ತರಬೇತಿಯು ಜುಲೈ 10 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉಯೊಂದಿಗೆ ಆಂಗ್ಲ ಭಾμÉಯನ್ನು ಸಹ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ…
ನವದೆಹಲಿ : ಎಲ್ಲಾ ಮತಗಟ್ಟೆಗಳಲ್ಲಿ ಮತದಾನದ ಬಗ್ಗೆ ಅಂತಿಮ ಅಧಿಕೃತ ದತ್ತಾಂಶವನ್ನು ಪ್ರಕಟಿಸುವಂತೆ ಒತ್ತಾಯಿಸಲು ಯಾವುದೇ ಕಾನೂನು ಅರ್ಹತೆ ಇಲ್ಲ ಎಂದು ಭಾರತದ ಚುನಾವಣಾ ಆಯೋಗ (ಇಸಿಐ) ಮೇ 22 ರಂದು ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ, ಚುನಾವಣಾ ಆಯೋಗವು ಫಾರ್ಮ್ 17 ಸಿ (ಪ್ರತಿ ಮತಗಟ್ಟೆಯಲ್ಲಿ ಚಲಾವಣೆಯಾದ ಮತಗಳು) ಯಿಂದ ಪಡೆದ ಮತದಾನದ ಮಾಹಿತಿಯನ್ನು ಬಿಡುಗಡೆ ಮಾಡುವುದರಿಂದ ಮತದಾರರ ಗೊಂದಲಕ್ಕೆ ಕಾರಣವಾಗಬಹುದು, ಏಕೆಂದರೆ ಇದು ಅಂಚೆ ಮತಪತ್ರಗಳ ಎಣಿಕೆಗಳನ್ನು ಸಹ ಒಳಗೊಂಡಿರುತ್ತದೆ ಎಂದು ಪ್ರತಿಪಾದಿಸಿದೆ. ಅಫಿಡವಿಟ್ನಲ್ಲಿ, ಚುನಾವಣಾ ಆಯೋಗವು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ನ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದೆ ಮತ್ತು “ಸಾಧ್ಯವಿರುವ ಎಲ್ಲ ರೀತಿಯಲ್ಲಿ ಅನುಮಾನ ಮತ್ತು ಅನುಮಾನವನ್ನು ಎತ್ತುತ್ತಲೇ ಇರಲು ಮತ್ತು ಭಾರತದ ಚುನಾವಣಾ ಆಯೋಗವು ಚುನಾವಣೆಗಳನ್ನು ನಡೆಸುವ ಬಗ್ಗೆ ದಾರಿತಪ್ಪಿಸುವ ಪ್ರತಿಪಾದನೆಗಳು ಮತ್ತು ಆಧಾರರಹಿತ ಆರೋಪಗಳ ಮೂಲಕ ನಿರಂತರ ದುರುದ್ದೇಶಪೂರಿತ ಅಭಿಯಾನ / ವಿನ್ಯಾಸ / ಪ್ರಯತ್ನಗಳನ್ನು ಕೈಗೊಳ್ಳುತ್ತದೆ” ಎಂದು ಆರೋಪಿಸಿದೆ.…
ನವದೆಹಲಿ:ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಗಣನೀಯ ಲಾಭಾಂಶವನ್ನು, ಬಹುಶಃ ಸುಮಾರು 1 ಲಕ್ಷ ಕೋಟಿ ರೂ.ಗಳನ್ನು ಸರ್ಕಾರಕ್ಕೆ ವರ್ಗಾಯಿಸುವ ನಿರೀಕ್ಷೆಯಿದೆ, ಇದು ಕಳೆದ ವರ್ಷದ ಪಾವತಿಗಿಂತ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ದಿ ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಇತ್ತೀಚೆಗೆ, ಆರ್ಬಿಐ ಖಜಾನೆ ಬಿಲ್ಗಳ ಮೂಲಕ ಸರ್ಕಾರದ ಸಾಲದಲ್ಲಿ ಗಮನಾರ್ಹ ಕಡಿತವನ್ನು ಘೋಷಿಸಿತು, ನಿರೀಕ್ಷಿತ ನಿಧಿಯನ್ನು 60,000 ಕೋಟಿ ರೂ.ಗೆ ಕಡಿತಗೊಳಿಸಿತು. ಹೆಚ್ಚುವರಿಯಾಗಿ, ಹಿಂದಿನ ಸಾಲಗಳ 60,000 ಕೋಟಿ ರೂ.ಗಳನ್ನು ಅಕಾಲಿಕವಾಗಿ ಮರುಪಾವತಿಸಲು ಸರ್ಕಾರಕ್ಕೆ ಅವಕಾಶ ನೀಡುವ ಕಾರ್ಯಾಚರಣೆಯನ್ನು ಕೇಂದ್ರ ಬ್ಯಾಂಕ್ ಬೆಂಬಲಿಸುತ್ತಿದೆ. ಈ ಕ್ರಮಗಳು ಚುನಾವಣೆಗೆ ಸಂಬಂಧಿಸಿದ ವೆಚ್ಚದ ನಿರ್ಬಂಧಗಳಿಂದ ಸೀಮಿತವಾಗಿರುವ ನಿಷ್ಕ್ರಿಯ ಸರ್ಕಾರಿ ಹಣವನ್ನು ಬಳಸಿಕೊಳ್ಳುವ ಪ್ರಯತ್ನವನ್ನು ಸೂಚಿಸುತ್ತವೆ, ಇದು ಕೇಂದ್ರದ ಆರ್ಥಿಕ ಪರಿಸ್ಥಿತಿಯಲ್ಲಿ ತಕ್ಷಣದ ಸುಧಾರಣೆಯನ್ನು ಸೂಚಿಸುತ್ತದೆ. ಆರ್ಬಿಐ ತನ್ನ ಹೆಚ್ಚುವರಿ ನಿಧಿಯ ವರ್ಗಾವಣೆಯನ್ನು ಮೇ ಅಂತ್ಯದ ವೇಳೆಗೆ ಘೋಷಿಸುವ ನಿರೀಕ್ಷೆಯಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಆರ್ಥಿಕ ಸಲಹೆಗಾರ ಕನಿಕಾ ಪಾಸ್ರಿಚಾ ಅವರು ಸಂಶೋಧನಾ…
ಧಾರವಾಡ : ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ 2024-25ನೇ ಸಾಲಿನಲ್ಲಿ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ(ಎನ್ಓಎಸ್)ಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕೋತ್ತರ ಪದವಿ, ಪಿಹೆಚ್.ಡಿ ಉನ್ನತ ವ್ಯಾಸಂಗ ಮಾಡುವಂತಹ ವಿದ್ಯಾರ್ಥಿಗಳು ಮೇ 31, 2024 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಿಲ್ಲೆಯ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಮತ್ತು ದೂರವಾಣಿ ಸಂಖ್ಯೆ. 0836-2447201 ಹಾಗೂ ವೆಬ್ಸೈಟ್ https://overseas.tribal.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ; ರಾಜ್ಯದಲ್ಲಿರುವ ಅಧಿಕೃತ ಖಾಸಗಿ ಶಾಲೆಗಳ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಟಿಸಿದೆ. ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರು ಶಿಕ್ಷಣ ಇಲಾಖೆ ಅಧಿಕೃತ ವೆಬ್ ಸೈಟ್ https://schooleducation.karnataka.gov.in ಗೆ ಭೇಟಿ ನೀಡಿ ಅಧಿಕೃತ ಖಾಸಗಿ ಶಾಲೆಗಳ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ. ಪೋಷಕರು ತಮ್ಮ ಮಕ್ಕಳನ್ನು ದಾಖಲಿಸುವ ಅಥವಾ ದಾಖಲಿಸಿರುವ ಶಾಲೆಗಳು ಅಧಿಕೃತವೇ, ಅನಧಿಕೃತವೇ ಎಂದು ಪರಿಶೀಲಿಸಿಕೊಳ್ಳಬಹುದು. ಇನ್ನು ಕಳೆದ ಶೈಕ್ಷಣಿಕ ವರ್ಷದಲ್ಲಿ ಅನಧಿಕೃತ ಶಾಲೆಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ ತಯಾರಿಸಿದ್ದು, ಸುಮಾರು ೧,೬೦೦ ಅನಧಿಕೃತ ಶಾಲೆಗಳನ್ನು ಪತ್ತೆ ಹಚ್ಚಿತ್ತು. ಆದರೆ ಅವುಗಳ ಸಣ್ಣಪುಟ್ಟ ಲೋಪಗಳಿದ್ದಲ್ಲಿ ಸರಿಪಡಿಸಿಕೊಳ್ಳು ಅವಕಾಶ ನೀಡಿತ್ತು.
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ 29ರವರೆಗೂ ರಾಜ್ಯದ ಕೆಲವೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಹೇಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಅದೇ ರೀತಿಯಾಗಿ ಉಡುಪಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಕೋಲಾರ, ಶಿವಮೊಗ್ಗ ಹಾಗೂ ರಾಮನಗರ ಜಿಲ್ಲೆಯ ಹಲವೆಡೆ ಗುಡುಗು ಹಾಗೂ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ…
ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಗದಿಪಡಿಸಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಎಲ್ ಕೆಜಿ ದಾಖಲಾತಿಗೆ ಆಯಾ ಶೈಕ್ಷಣಿಕ ವರ್ಷದ ಜೂನ್ 1 ಕ್ಕೆ ಕಡ್ಡಾಯವಾಗಿ 4 ವರ್ಷ ಪೂರ್ಣಗೊಂಡಿರಬೇಕೆಂದು 2023-24 ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 1 ನೇ ತರಗತಿ ಪ್ರವೇಶಕ್ಕೆ 2024-25 ನೇ ಸಾಲಿನಿಂದ ಆಯಾ ಸಾಲಿನ ಜೂನ್ 1 ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂದು ಆದೇಶಿಸಲಾಗಿದೆ. ಆದರೆ ನಿಗದಿತ ವಯೋಮಿತಿಗೆ ಒಂದು ದಿನ ಕಡಿಮೆ ಆದರೂ ಮಕ್ಕಳೂ ದಾಖಲಾತಿ ವಂಚಿತರಾಗುತ್ತಿದ್ದಾರೆ. ಹೀಗಾಗಿ ಒಂದು ವರ್ಷ ಶಾಲಾ ಪ್ರವೇಶದಿಂದ ಮಕ್ಕಳು ವಂಚಿತರಾಗುವುದನ್ನು ತಡೆಯಲು ನಿಗದಿತ ವಯೋಮಿತಿಯಲ್ಲಿ ಕೆಲ ತಿಂಗಳ ಸಡಿಲ ಅಥವಾ ವಿನಾಯಿತಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಪೋಷಕರು ಒತ್ತಾಯಿಸಿದ್ದಾರೆ.
ಬೆಂಗಳೂರು : 2024-25 ನೇ ಸಾಲಿನಲ್ಲಿ ಸೇತುಬಂಧ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತಂತೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಮಕ್ಕಳ ವಯೋಮಾನ ಮತ್ತು ತರಗತಿಗೆ ಅನುಗುಣವಾಗಿ ಕಲಿಕಾಮಟ್ಟ ಮತ್ತು ಸಾಮರ್ಥ್ಯಗಳನ್ನು ಗುರುತಿಸಿ ಮುಂದಿನ ಕಲಿಕೆಗೆ ಸಿದ್ಧಗೊಳಿಸಲು ಕಲಿತಿರುವ ಮತ್ತು ಕಲಿಯುತ್ತಿರುವ ಪರಿಕಲ್ಪನೆಗಳ ಅಂತರದ ನಡುವೆ ಸಹ ಸಂಬಂಧ ಕಲ್ಪಿಸುವುದು ಸೇತುಬಂಧ ಶಿಕ್ಷಣದ ಮೂಲ ಉದ್ದೇಶವಾಗಿದೆ. 2024-25ನೇ ಸಾಲಿಗೆ ಸೇತುಬಂಧ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು 1 ರಿಂದ 3 ನೇ ತರಗತಿಗಳಿಗೆ (ಕಲಿ-ನಲಿ) ಶಾಲಾ ಪ್ರಾರಂಭದ ಮೊದಲ 30 ದಿನಗಳು ಹಾಗೂ 4 ರಿಂದ 10 ನೇ ತರಗತಿಗಳಿಗೆ ಮೊದಲ 15 ದಿನಗಳನ್ನು ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ 1 ರಿಂದ 10 ನೇ ತರಗತಿವರೆಗೆ ತರಗತಿವಾರು ಮತ್ತು ವಿಷಯವಾರು ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಹಾಗೂ ಪ್ರಥಮ ಭಾಷೆಗಳಾದ ಉರ್ದು, ಮರಾಠಿ, ತೆಲುಗು ಮತ್ತು ತಮಿಳಿಗೆ ಸಂಬಂಧಿಸಿದ ಕಲಿಕಾ ಸಾಮಗ್ರಿಯು DSERT website ನಲ್ಲಿ ಲಭ್ಯವಿದ್ದು, ಇವುಗಳನ್ನು ಬಳಸಿಕೊಂಡು ಈ…
ಬೆಂಗಳೂರು : 2024-25ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ನಿಗದಿಪಡಿಸಿರುವ ಶುಲ್ಕದ ವಿವರ ಪ್ರಕಟಿಸುವಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಖಾಸಗಿ ಅನುದಾನರಹಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಮತ್ತು ಶುಲ್ಕ ವಸೂಲಾತಿ ಪ್ರಕ್ರಿಯೆ ಪ್ರಾರಂಭವಾಗಿರುತ್ತದೆ. ದಾಖಲಾತಿ ಪ್ರಕ್ರಿಯೆ, ದಾಖಲಾತಿ ಶುಲ್ಕ ಮತ್ತು ಇನ್ನಿತರೆ ಶುಲ್ಕವನ್ನು ಪಡೆಯುವ ಸಂಬಂಧ ಉಲ್ಲೇಖದ ಶಿಕ್ಷಣ ಹಕ್ಕು ಕಾಯಿದೆ -2009 ರನ್ವಯ ಈ ಕೆಳಕಂಡಂತೆ ತಿಳಿಸಲಾಗಿದೆ. Section 2(b) capitaton fee” means any kind of donation or contribution or payment other than the fee notified by the school; Section 13 No capitation fee and screening procedure for admission.- (1) No school or person shall, while admitting a child, collect any capitation fee and subject the child or his or…
ಬೆಂಗಳೂರು : ಬೆಳೆ ಹಾನಿ, ಬೆಳೆ ಪರಿಹಾರ ಜಮೆ ಅಗದೆ ಇರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪಡೆಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ ಹೊಂದಿರುವ ಬಗ್ಗೆ ಪರಿಶೀಲಿಸಿ, ಖಾತರಿ ಮಾಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು, ಅಕೌಂಟ್ಗಳನ್ನು ನಿರ್ಬಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಕೌಂಟ್ ರಿ ಓಪನ್ ಮಾಡಿಸಬೇಕು. ಫ್ರೂಟ್ಸ್ ಅಪ್ಡೇಟ್ನಲ್ಲಿ ಆಧಾರ್ ಹೆಸರು ಹೊಂದಿಕೆಯಾಗುತ್ತಿಲ್ಲ ಆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ಅಪ್ಡೇಟ ಮಾಡಿಸಬೇಕು. ಆಧಾರ್ ಅನ್ನು ಬ್ಯಾಂಕ್ನೊಂದಿಗೆ ಸೀಡ್, ಖಾತೆಗೆ ಆಧಾರ್ ಮ್ಯಾಪ್, ಕುಸಿದ ಪಾವತಿ ಹಾಗೂ ಎನ್.ಪಿ.ಸಿ.ಐ ಸೀಡಿಂಗ್ ಸಮಸ್ಯೆ ಇರುವಂತ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಎನ್.ಪಿ.ಸಿ.ಐ (ಓPಅI) ಮಾಡಿಸಬೇಕು. ಅಮಾನ್ಯ ಸ್ವೀಕೃತ ಐ.ಎಫ್.ಎಸ್.ಸಿ ಕೋಡ್ ಹೊಂದಿರುವ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಐ.ಎಫ್.ಎಸ್.ಸಿ ಕೋಡ್ ಅಪ್ಡೇಟ್ ಮಾಡಿಸಿ…