Author: kannadanewsnow57

ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರೆವಾದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳು ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (1) ರಲ್ಲಿ ರಾಜ್ಯ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ದಿನಾಂಕ:01-01-2016 ರಿಂದ 31-12-2020 ರವರೆಗೆ ನಿಧನ, ನಿವೃತ್ತಿ, ರಾಜಿನಾಮೆ ಮತ್ತು ಇತರ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಸದರಿ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಲಾಗಿದೆ. ಸದರಿ ಆದೇಶದಲ್ಲಿ ಅನುದಾನಿತ ಪ್ರೌಢ ಶಾಲೆಗಳ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆಯನ್ನು ಆನ್ ಲೈನ್ ತಂತ್ರಾಂಶದ ಮೂಲಕ ನಿರ್ವಹಿಸಲು ತಂತ್ರಾಂಶವನ್ನು ಅಭಿವೃದಿ ಪಡಿಸಿ ಪುಸ್ತಾವನೆಗಳನ್ನು ವ್ಯವಹರಿಸಲು ನಿರ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ನೇಮಕಾತಿ ಪ್ರಕ್ರಿಯೆಯನ್ನು ಆನ್ ಲೈನ್ ಮುಖಾಂತರ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ. ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜಿನಾಮೆ ಮತ್ತು ಇತರೆ…

Read More

ನವೆಂಬರ್‌ 12ಕ್ಕೆ ದೇವೋತ್ಥಾನ ಏಕಾದಶಿ: ಉಳಿದ 23 ಏಕಾದಶಿಗಿಂತ ತುಂಬಾ ವಿಶೇಷವಾದ ಏಕಾದಶಿಯಿದು, ಏಕೆ? ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ದೇವೋತ್ಥಾನ ಏಕಾದಶಿ ಧಾರ್ಮಿಕ ಕಾರಣಗಳಿಂದ ತುಂಬಾನೇ ಮಹತ್ವದ ದಿನ, ಇತರ 23 ಏಕಾದಶಿಗಿಂತೀ ಏಕಾದಶಿ ತುಂಬಾನೇ ವಿಶೇಷವಾದದ್ದು. ದೇವೋತ್ಥಾನ ಏಕಾದಶಿ ನವೆಂಬರ್ 12ರಂದು ಆಚರಿಸಲಾಗುತ್ತಿದೆ, ಈ ಏಕಾದಶಿಯ ಮಹತ್ವವೇನು , ಪೂಜಾ ಸಮಯವೇನು, ಕಾರ್ತಿಕ ಮಾಸದಲ್ಲಿ ಬರುವ ಈ ಏಕಾಶಿಯಂದು ಏನು ಮಾಡಿದರೆ ಒಳ್ಳೆಯದು ಎಂದು ನೋಡೋಣ ಬನ್ನಿ: ದೀಪಾವಳಿ ನಂತರ ಬರುವ ಮೊದಲ ಏಕಾದಶಿ ಈ ಏಕಾದಶಿ ದೀಪಾವಳಿ ಬಳಿಕ ಬರುವ ಮೊದಲ ಏಕಾದಶಿಯಾಗಿದೆ. ಕಾರ್ತಿಕ ಮಾಸದಲ್ಲಿ ಬರುವ ಈ ಏಕಾದಶಿಯಂದು ಶ್ರೀ ವಿಷ್ಣುವು ಯೋಗ ನಿದ್ದೆಯಿಂದ ಎಚ್ಚೆರವಾಗುತ್ತಾನೆ ಎಂಬುವುದು ಧಾರ್ಮಿಕ ನಂಬಿಕೆ. ಶ್ರೀವಿಷ್ಣು ನಾಲ್ಕು ತಿಂಗಳ ಕಾಲ ಯೋಗ ನಿದ್ದೆಯಲ್ಲಿರುತ್ತಾನೆ, ಈ ಅವಧಿಯಲ್ಲಿ ಮಹೇಶ್ವರನು ಭೂಮಂಡಲದ ಜವಾಬ್ದಾರಿ ಹೊತ್ತಿರುತ್ತಾನೆ, ದೇವೋತ್ಥಾನ ಏಕಾದಶಿಯಂದು ಶ್ರೀ…

Read More

ಚನ್ನಪಟ್ಟಣ: ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡ್ತದೆ ಎಂದು ದೇವೇಗೌಡರು ಪರಮ ಸುಳ್ಳು ಹೇಳಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಸಲ್ಲ, ನಿಲ್ಸಲ್ಲ, ನಿಲ್ಸಲ್ಲ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದರು. ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಅಧಿಕೃತ ಘೋಷಣೆ ಮಾಡಿದ್ದೇವೆ ಎಂದು ಪುನರುಚ್ಚರಿಸಿದರು. ಮೋದಿಯಂಥಾ ಸುಳ್ಳುಗಾರ ಇಲ್ಲ ಅಂದಿದ್ದ ದೇವೇಗೌಡರು ಭಾರತ ಮೋದಿಯವರಂತಹಾ ಸುಳ್ಳ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ದೇವೇಗೌಡರು ಹೇಳಿದ್ದರು. ಈಗ ಮೋದಿಯವರನ್ನು ಯದ್ವಾತದ್ವಾ ಹೊಗಳುತ್ತಿದ್ದಾರೆ ಎಂದು ಛೇಡಿಸಿದರು.‌ ನಾನು, ಜಾಲಪ್ಪ ಅವರು ಇಲ್ಲದೇ ಹೋಗಿದ್ದರೆ 1994 ರಲ್ಲಿ ದೇವೇಗೌಡರು ಮುಖ್ಯಮಂತ್ರಿ ಆಗಲು ಸಾಧ್ಯವೇ ಇರಲಿಲ್ಲ. ದೇವೇಗೌಡರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು…

Read More

ನವದೆಹಲಿ : ಇಂದಿನ ಜಗತ್ತಿನಲ್ಲಿ ಹೆಚ್ಚಿನ ಜನರು ಡಿಜಿಟಲ್ ವಿಧಾನಗಳ ಮೂಲಕ ಹಣದ ವಹಿವಾಟು ನಡೆಸುತ್ತಿದ್ದಾರೆ, ಆದರೆ ಇನ್ನೂ ಅನೇಕ ಜನರು ಚೆಕ್ ಮೂಲಕ ದೊಡ್ಡ ಮೊತ್ತದ ಪಾವತಿ ಅಥವಾ ವಹಿವಾಟುಗಳನ್ನು ಮಾಡುತ್ತಾರೆ. ಚೆಕ್ ಬೌನ್ಸ್ ಸಮಸ್ಯೆ ಸಾಕಷ್ಟು ಸಾಮಾನ್ಯವಾಗಿದೆ, ಇದರಲ್ಲಿ ಚೆಕ್ ಅನ್ನು ನಗದು ಮಾಡಲಾಗುವುದಿಲ್ಲ. ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಹಳೆಯ ಚೆಕ್ ಬೌನ್ಸ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದೆ. ಚೆಕ್ ಬೌನ್ಸ್‌ಗೆ ಸಂಬಂಧಿಸಿದ ವಿಷಯಗಳ ಮೇಲೆ ಈ ನಿರ್ಧಾರವು ದೊಡ್ಡ ಪರಿಣಾಮವನ್ನು ಬೀರಬಹುದು, ಆದ್ದರಿಂದ ಅದನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ. ಚೆಕ್ ಬೌನ್ಸ್ ಪ್ರಕರಣವು ಭಾರತದಲ್ಲಿ ಅಪರಾಧದ ವರ್ಗದಲ್ಲಿ ಬರುತ್ತದೆ ಮತ್ತು ಅದಕ್ಕೆ ಕಠಿಣ ಶಿಕ್ಷೆಯ ನಿಬಂಧನೆ ಇದೆ. ಒಬ್ಬ ವ್ಯಕ್ತಿಯು ಯಾರಿಗಾದರೂ ಚೆಕ್ ಅನ್ನು ನೀಡಿದರೆ ಮತ್ತು ಆ ಚೆಕ್ ಬ್ಯಾಂಕಿನಲ್ಲಿ ಬೌನ್ಸ್ ಆಗಿದ್ದರೆ, ಅದು ವ್ಯಕ್ತಿಯ ಮೇಲಿನ ನಂಬಿಕೆಯನ್ನು ಮುರಿಯುವುದಕ್ಕೆ ಸಮಾನವೆಂದು ಪರಿಗಣಿಸಲಾಗುತ್ತದೆ. ಚೆಕ್ ಬೌನ್ಸ್ ಆಗಿದ್ದಲ್ಲಿ ದೂರುದಾರರು ಆರೋಪಿಯ ವಿರುದ್ಧ ನ್ಯಾಯಾಲಯದಲ್ಲಿ…

Read More

ನವದೆಹಲಿ:ಬಿಟ್ಕಾಯಿನ್ನ ದಾಖಲೆಯ ರ್ಯಾಲಿಯು ಡಿಜಿಟಲ್ ಆಸ್ತಿಯನ್ನು 89,000 ಡಾಲರ್ ದಾಟಿಸಿತು ಮತ್ತು ಕ್ರಿಪ್ಟೋ ಮಾರುಕಟ್ಟೆಯ ಒಟ್ಟಾರೆ ಮೌಲ್ಯವನ್ನು ಸಾಂಕ್ರಾಮಿಕ ಯುಗದ ಉತ್ತುಂಗಕ್ಕಿಂತ ಮೇಲಕ್ಕೆ ಏರಿಸಿತು. ನವೆಂಬರ್ 5 ರಂದು ಯುಎಸ್ ಚುನಾವಣೆಯ ನಂತರ ಅತಿದೊಡ್ಡ ಟೋಕನ್ ಸುಮಾರು 30% ಜಿಗಿದಿದೆ ಮತ್ತು ಮಂಗಳವಾರದ ಆರಂಭಿಕ ಏಷ್ಯಾದ ವಹಿವಾಟಿನಲ್ಲಿ ಸಾರ್ವಕಾಲಿಕ ಗರಿಷ್ಠ 89,599 ಡಾಲರ್ ತಲುಪಿದೆ. ಟ್ರಂಪ್ ಸ್ನೇಹಪರ ಕ್ರಿಪ್ಟೋ ನಿಯಮಗಳನ್ನು ಪ್ರತಿಜ್ಞೆ ಮಾಡಿದ್ದಾರೆ ಮತ್ತು ಅವರ ರಿಪಬ್ಲಿಕನ್ ಪಕ್ಷವು ತನ್ನ ಕಾರ್ಯಸೂಚಿಯನ್ನು ಮುಂದುವರಿಸಲು ಕಾಂಗ್ರೆಸ್ ಮೇಲೆ ತನ್ನ ಹಿಡಿತವನ್ನು ಬಿಗಿಗೊಳಿಸುತ್ತಿದೆ. ಇತರ ಭರವಸೆಗಳಲ್ಲಿ ಕಾರ್ಯತಂತ್ರದ ಯುಎಸ್ ಬಿಟ್ ಕಾಯಿನ್ ಸಂಗ್ರಹವನ್ನು ಸ್ಥಾಪಿಸುವುದು ಮತ್ತು ಟೋಕನ್ ನ ದೇಶೀಯ ಗಣಿಗಾರಿಕೆಯನ್ನು ಹೆಚ್ಚಿಸುವುದು ಸೇರಿವೆ. ಅಧ್ಯಕ್ಷ ಜೋ ಬೈಡನ್ ಅವರ ಆಡಳಿತದ ಅಡಿಯಲ್ಲಿ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಕಮಿಷನ್ ವಿಭಜಕ ಉದ್ಯಮದ ಮೇಲೆ ನಡೆಸಿದ ದಬ್ಬಾಳಿಕೆಯಿಂದ ಅವರ ನಿಲುವು ತೀಕ್ಷ್ಣವಾದ ವಿರಾಮವಾಗಿದೆ. ಈ ಬದಲಾವಣೆಯು ದೊಡ್ಡ ಮತ್ತು ಸಣ್ಣ ಟೋಕನ್ಗಳ ಊಹಾತ್ಮಕ ಖರೀದಿಗೆ ಶಕ್ತಿ…

Read More

ನವದೆಹಲಿ: ಜಾತಿ, ಧಾರ್ಮಿಕ ಮತ್ತು ಭಾಷಾ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಪಟ್ಟಭದ್ರ ಹಿತಾಸಕ್ತಿಗಳ ಪ್ರಯತ್ನಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಎಚ್ಚರಿಕೆ ನೀಡಿದ್ದು, 2047 ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿಗೆ ರಾಷ್ಟ್ರೀಯ ಏಕತೆ ಮತ್ತು ಸಾಮಾಜಿಕ ಒಗ್ಗಟ್ಟು ಅತ್ಯಗತ್ಯ ಎಂದು ಒತ್ತಿ ಹೇಳಿದರು ಗುಜರಾತ್ನ ಶ್ರೀ ಸ್ವಾಮಿನಾರಾಯಣ ದೇವಾಲಯದ 200 ನೇ ವಾರ್ಷಿಕೋತ್ಸವದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಮೋದಿ, ವಿಭಜಕ ಕಾರ್ಯಸೂಚಿಗಳ ಹಿನ್ನೆಲೆಯಲ್ಲಿ ಏಕತೆಯ ಮಹತ್ವವನ್ನು ಒತ್ತಿ ಹೇಳಿದರು, ರಾಷ್ಟ್ರೀಯ ಸಮಗ್ರತೆಯನ್ನು ರಕ್ಷಿಸಲು ಸಾಮೂಹಿಕ ಕ್ರಮವನ್ನು ಒತ್ತಾಯಿಸಿದರು. “2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ನಾಗರಿಕರಲ್ಲಿ ಏಕತೆ ಮತ್ತು ರಾಷ್ಟ್ರದ ಸಮಗ್ರತೆ ಮುಖ್ಯ. ಜಾತಿ, ನಂಬಿಕೆ, ಭಾಷೆ, ಸಾಮಾಜಿಕ ಸ್ಥಾನಮಾನ, ಲಿಂಗ ಮತ್ತು ಗ್ರಾಮೀಣ-ನಗರ ವಿಭಜನೆಯ ಆಧಾರದ ಮೇಲೆ ನಮ್ಮ ಸಮಾಜವನ್ನು ವಿಭಜಿಸಲು ಕೆಲವು ಶಕ್ತಿಗಳು ಕೆಲಸ ಮಾಡುತ್ತಿವೆ. ನಮ್ಮ ರಾಷ್ಟ್ರಕ್ಕೆ ಹಾನಿ ಮಾಡಲು ಪ್ರಯತ್ನಿಸುವವರ ಈ ಪ್ರಯತ್ನಗಳ…

Read More

ನವದೆಹಲಿ: ಮಧ್ಯಾಹ್ನ 3.30 ರ ಸುಮಾರಿಗೆ ಟ್ಯಾಂಕ್ ಸಂಖ್ಯೆ 68 – 1,000 ಕೆಎಲ್ ಬೆಂಜೀನ್ ಶೇಖರಣಾ ಟ್ಯಾಂಕ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಡೋದರಾ ಜಿಲ್ಲೆಯ ನಂದೇಸಾರಿ ಪಟ್ಟಣದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್) ಸಂಸ್ಕರಣಾಗಾರದಲ್ಲಿ ಸೋಮವಾರ ಮಧ್ಯಾಹ್ನ ಬೆಂಜೀನ್ ಶೇಖರಣಾ ಟ್ಯಾಂಕ್ ಸ್ಫೋಟಗೊಂಡ ನಂತರ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಓರ್ವ ಉದ್ಯೋಗಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಐಒಸಿಎಲ್ ಹೇಳಿಕೆಯ ಪ್ರಕಾರ, ಮಧ್ಯಾಹ್ನ 3.30 ರ ಸುಮಾರಿಗೆ ಟ್ಯಾಂಕ್ ಸಂಖ್ಯೆ 68 – 1,000 ಕೆಎಲ್ ಬೆಂಜೀನ್ ಶೇಖರಣಾ ಟ್ಯಾಂಕ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಮೂವರು ಉದ್ಯೋಗಿಗಳಲ್ಲಿ ಒಬ್ಬರು ಚಿಕಿತ್ಸೆಯ ಸಮಯದಲ್ಲಿ ನಿಧನರಾದರು; ಇನ್ನಿಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಡೋದರಾ ಪೊಲೀಸ್ ಆಯುಕ್ತ ನರಸಿಂಹ ಕೊಮರ್ ಅವರು ಮಾತನಾಡಿ, “ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಐಒಸಿಎಲ್ನ ಒಬ್ಬ ಉದ್ಯೋಗಿ ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ನಾವು ದೃಢಪಡಿಸಬಹುದು. ಬೆಂಕಿಯ ಹರಡುವಿಕೆಯನ್ನು…

Read More

ಚಿಕ್ಕಮಗಳೂರು : ಮನುಷ್ಯ ಎಷ್ಟು ಕಿಳು ಮಟ್ಟಕ್ಕೆ ಇಳಿದಿದ್ದಾನೆ ಎಂದರೆ ಇಷ್ಟು ದಿನ ಬಾಲಕಿಯರು, ಯುವತಿಯರು, ಮಹಿಳೆಯರು ಹಾಗೂ ವೃದ್ಧೆಯರ ಮೇಲು ಸಹ ಅತ್ಯಾಚಾರ ಎಸಗಲಾಗುತ್ತಿತ್ತು. ಇದೀಗ ಚಿಕ್ಕಮಂಗಳೂರಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು ನಾಯಿಯ ಮೇಲೆ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಅಕ್ಟೋಬರ್‌ 18 ರಂದು ಜಯಪುರ ಬಸ್‌ನಿಲ್ದಾಣದಲ್ಲಿ ವ್ಯಕ್ತಿಯ ಕೃತ್ಯ ಸೆರೆಯಾಗಿದೆ. ಕೊಪ್ಪ ತಾಲೂಕಿನ ಜಯಪುರ ಎಂಬಲ್ಲಿ ಈ ಒಂದು ಕೃತ್ಯ ನಡೆದಿದೆ ಇನ್ನೂ ನಾಯಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಶಿವರಾಜ್ ಎಂದು ಗುರುತಿಸಲಾಗಿದೆ. ಇದೀಗ ಶಿವರಾಜ್‌ ಎಂಬ ವ್ಯಕ್ತಿಯ ವಿರುದ್ಧ ಜಯಪುರ ಠಾಣೆ ಪೊಲೀಸರು ಸುಮೋಟೋ ಕೇಸ್‌ ದಾಖಲಿಸಿಕೊಂಡಿದ್ದಾರೆ. ಆರೋಪಿ ಬೆಳಗ್ಗಿನ ಜಾವ 4 ಗಂಟೆ ವೇಳೆಗೆ ಕೃತ್ಯ ಎಸಗಿರುವುದು ಕಂಡುಬಂದಿದೆ. ಅಂಗಡಿಯ ಮುಂಭಾಗದ ಕಟ್ಟೆಯ ಮೇಲೆ ಕುಳಿತುಕೊಂಡ ವ್ಯಕ್ತಿ ಬೀದಿ ನಾಯಿಯನ್ನು ಹಿಡಿದುಕೊಂಡು ಆದರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ.ಈ ಕೃತ್ಯದ ಬಗ್ಗೆ ನವೆಂಬರ್‌ 9 ರಂದು ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯಗಳನ್ನು…

Read More

ಬೆಂಗಳೂರು: ದಿನಾಂಕ 13.11.2024 (ಬುಧವಾರ) ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 03:30 ಗಂಟೆಯವರೆಗೆ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಇನ್ನೂ ಬಿ.ಹೆಚ್.ಕೆ. ಇಂಡಸ್ಟ್ರೀಸ್, ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ,…

Read More

ಬೆಂಗಳೂರು: ರಾಜ್ಯದಲ್ಲಿ ಇ-ಖಾತಾ ವ್ಯವಸ್ಥೆ ಕಡ್ಡಾಯಗೊಳಿಸಿದ ನಂತ್ರ ಹಲವು ಸಮಸ್ಯೆಗೆ ಕಾರಣವಾಗಿತ್ತು. ಈ ಸಮಸ್ಯೆ ನಿವಾರಣೆಗಾಗಿ ನವೆಂಬರ್.13ರಂದು ಕಂದಾಯ, ಗ್ರಾಮೀಣಾಭಿವೃದ್ಧಿ ಹಾಗೂ ನಗರಾಭಿವೃದ್ಧಿ ಸಚಿವ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಸಭೆಯಲ್ಲಿ ಇ-ಖಾತಾ ಸಮಸ್ಯೆಯಲ್ಲಿನ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಇಂದು ಕಂದಾಯ ಸಚಿವ ವಿಶೇಷ ಕರ್ತವ್ಯಾಧಿಕಾರಿ ನಿಶ್ಚಯ್ ಎನ್.ಕೆ ಅವರು ಸಭಾ ಸೂಚನಾ ಪತ್ರವನ್ನು ಹೊರಡಿಸಿದದಾರೆ. ಅದರಲ್ಲಿ ಸ್ಥಿರಾಸ್ತಿಗಳ ನೋಂದಣಿಗಾಗಿ, ಗ್ರಾಮಪಂಚಾಯಿತಿ ಮತ್ತು ಸ್ಥಳೀಯ ನಗರ ಸಂಸ್ಥೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇ-ಖಾತೆಗಳನ್ನು ಶೀಘ್ರವಾಗಿ ವಿತರಿಸುವ ಕುರಿತು ಚರ್ಚಿಸಲು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ, ಮಾನ್ಯ ನಗರಾಭಿವೃದ್ಧಿ ಸಚಿವರ ಹಾಗೂ ಪೌರಾಡಳಿತ ಮತ್ತು ಹಜ್ ಸಚಿವರ ಉಪಸ್ಥಿತಿಯಲ್ಲಿ ದಿನಾಂಕ:13/11/2024 ರಂದು ಬೆಳಿಗ್ಗೆ 11:00 ಗಂಟೆಗೆ ಕೊಠಡಿ ಸಂಖ್ಯೆ:222, ವಿಕಾಸ ಸೌಧ, ಬೆಂಗಳೂರು ಇಲ್ಲಿ ಸಭೆಯನ್ನು ಏರ್ಪಡಿಸಿದ್ದು, ಸದರಿ ಸಭೆಗೆ ಹಾಜರಾಗುವಂತೆ ತಮ್ಮನ್ನು ಕೋರಲು ಮಾನ್ಯ ಸಚಿವರಿಂದ ನಿರ್ದೇಶಿತನಾಗಿದ್ದೇನೆ…

Read More