Author: kannadanewsnow57

ಬೆಳಗಾವಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕರ್ನಾಟಕದ ಸೈನಿಕರ ಪಾರ್ಥಿವ ಶರೀರಗಳು ಆಗಮಿಸಿದ್ದು, ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ 9:30 ಕ್ಕೆ ಬೆಳಗಾವಿಯ ರೆಜೆಮೆಂಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯೋಧರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ. ಬಳಿಕ ಯೋಧರ ಸ್ವಗ್ರಾಮಗಳಿಗೆ ಪಾರ್ಥಿವ ಶರೀರ ಕಳುಹಿಸಲಾಗುತ್ತದೆ. ಇಂದು ಸರ್ಕಾರಿ ಶಾಲೆ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಆಪ್ತರು, ಸಾರ್ವಜನಿಕರು, ಜನಪ್ರತಿನಿಧಿಗಳಿಗೆ ಅಂತಿಮ ನಮನಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್‌ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಹುತಾತ್ಮರಾಗಿದ್ದಾರೆ.

Read More

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಡಿಸೆಂಬರ್ 31 ರವರೆಗೆ ಅವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ…

Read More

ಬೆಂಗಳೂರು : ರಾಜ್ಯ ಸರ್ಕಾರಿ ಕೆಲಸಕ್ಕೆ ಸೇರುವ ನೌಕರರು ಕೆಲವು ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಸಿವಿಲ್ ಸೇವಾ ನಡತೆ ನಿಯಮಗಳಲ್ಲಿ ಸರ್ಕಾರಿ ನೌಕವರರು ಹೇಗೆ ಇರಬೇಕೆಂದು ತಿಳಿಸಲಾಗಿರುತ್ತದೆ. ಅದಕ್ಕೆ ಸಂಬಂಧಪಟ್ಟ ಒಂದಿಷ್ಟು ಮಾಹಿತಿ ಇಲ್ಲಿದೆ. (1) ಪ್ರತಿಯೊಬ್ಬ ಸರ್ಕಾರಿ ನೌಕರನು, ಎಲ್ಲ ಕಾಲಗಳಲ್ಲಿಯೂ;- (i) ಸಂಪೂರ್ಣ ನೀತಿ ನಿಷ್ಠೆಯನ್ನು ಹೊಂದಿರತಕ್ಕದ್ದು, (ii) ಕರ್ತವ್ಯ ಶ್ರದ್ಧೆಯನ್ನು ಹೊಂದಿರತಕ್ಕದ್ದು; (iii) ಸರ್ಕಾರಿ ನೌಕರನಿಗೆ ತಕ್ಕದ್ದಲ್ಲದ ಯಾವುದನ್ನೂ ಮಾಡತಕ್ಕದ್ದಲ್ಲ; (iv) ಯಾವುದೇ ಅಪರಾಧಿಕ ಚಟುವಟಿಕೆಯಲ್ಲಿ ತೊಡಗತಕ್ಕದ್ದಲ್ಲ. (2) ಪ್ರತಿಯೊಬ್ಬ ಸರ್ಕಾರಿ ನೌಕರನು;- (i) ಉನ್ನತ ನೈತಿಕ ಆದರ್ಶಗಳನ್ನು ಹೊಂದಿರತಕ್ಕದ್ದು; (ii) ರಾಜಕೀಯವಾಗಿ ತಟಸ್ಥನಾಗಿರತಕ್ಕದ್ದು; (iii) ತನ್ನ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ, ಅರ್ಹತಾದಾಯಕ, ನ್ಯಾಯ ಸಮ್ಮತ ಮತ್ತು ನಿಷ್ಪಕ್ಷಪಾತತೆಯ ಮೂಲ ತತ್ವಗಳನ್ನು ಅಳವಡಿಸಿಕೊಂಡಿರತಕ್ಕದ್ದು; (iv) ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ನಿರ್ವಹಿಸತಕ್ಕದ್ದು; (v) ಸಾರ್ವಜನಿಕರಿಗೆ ಸ್ಪಂದನಾಶೀಲನಾಗಿರತಕ್ಕದ್ದು ಹಾಗೂ; (vi) ಸಾರ್ವಜನಿಕರೊಂದಿಗೆ ಸೌಜನ್ಯ ಹಾಗೂ ವಿನಯದಿಂದ ವರ್ತಿಸತಕ್ಕದ್ದು. (3) ಮೇಲ್ವಿಚಾರಣಾ ಹುದ್ದೆಯನ್ನು ಹೊಂದಿರುವ ಪ್ರತಿಯೊಬ್ಬ ಸರ್ಕಾರಿ ನೌಕರನು, ತತ್ಕಾಲದಲ್ಲಿ ತನ್ನ…

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಾರು ರಿವರ್ಸ್ ತೆಗೆದುಕೊಳ್ಳುವಾಗ ಕಾರಿನ ಚಕ್ರಕ್ಕೆ ಸಿಲುಕಿ 2 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿಇ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಜಗೌಡನಟ್ಟಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಕಾರು ರಿವರ್ಸ್ ತೆಗೆದುಕೊಳ್ಳುವಾಗ ಕಾರಿನ ಗಾಲಿಗೆ ಸಿಲುಕಿ 2 ವರ್ಷದ ಮಗು ಸಾವನ್ನಪ್ಪಿದೆ. ಖಜಗೌಡನಟ್ಟಿ ಗ್ರಾಮದ ಮಂಜುನಾಥ್ ಖೋತ ಎಂಬುವರು ಕಾರು ರಿವರ್ಸ್ ತೆಗೆದುಕೊಳ್ಳುವಾಗ ಮಗು ಆಕಸ್ಮಿಕವಾಗಿ ಕಾರಿನ ಹಿಂದಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. ಅನುಶ್ರೀ ರಾಮಕೃಷ್ಣ ಖೋತ(2) ಮೃತಪಟ್ಟ ಮಗು. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ನಿಯಮಿತವಾಗಿ ಚಹಾ ಮತ್ತು ಕಾಫಿ ಕುಡಿಯುವವರು ತಲೆ ಮತ್ತು ಕತ್ತಿನ ಕ್ಯಾನ್ಸರ್ ಅನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಸ್ವಲ್ಪ ಕಡಿಮೆ ಇರುತ್ತದೆ ಎಂದು ಇತ್ತೀಚಿನ ಅಧ್ಯಯನವು ಕಂಡುಹಿಡಿದಿದೆ. ಕ್ಯಾನ್ಸರ್ ರಿಸರ್ಚ್ ಯುಕೆ ಪ್ರಕಾರ, ಯುಕೆಯಲ್ಲಿ ವಾರ್ಷಿಕವಾಗಿ ಸುಮಾರು 12,800 ತಲೆ ಮತ್ತು ಕತ್ತಿನ ಕ್ಯಾನ್ಸರ್ ಪ್ರಕರಣಗಳು ರೋಗನಿರ್ಣಯ ಮಾಡಲ್ಪಡುತ್ತವೆ, ಇದು ಸುಮಾರು 4,100 ಸಾವುಗಳಿಗೆ ಕಾರಣವಾಗುತ್ತದೆ. ಹೊಸ ಸಂಶೋಧನೆಯು ಈ ಜನಪ್ರಿಯ ಪಾನೀಯಗಳಿಂದ ನೇರವಾದ ರಕ್ಷಣಾತ್ಮಕ ಪರಿಣಾಮವನ್ನು ಸಾಬೀತುಪಡಿಸುವುದನ್ನು ನಿಲ್ಲಿಸುತ್ತದೆ, ತಜ್ಞರು ಸಂಶೋಧನೆಗಳು ದೀರ್ಘ-ಚರ್ಚಿತ ಆದರೆ ಅನಿರ್ದಿಷ್ಟ ಅಧ್ಯಯನದ ಪ್ರದೇಶದಲ್ಲಿ ಮೌಲ್ಯಯುತವಾದ ಒಳನೋಟಗಳನ್ನು ನೀಡುತ್ತವೆ ಎಂದು ನಂಬುತ್ತಾರೆ. ಫಲಿತಾಂಶಗಳು ಕ್ಯಾನ್ಸರ್ ಅಪಾಯಗಳ ಮೇಲೆ ಪ್ರಭಾವ ಬೀರುವ ಸಂಭಾವ್ಯ ಆಹಾರ ಮತ್ತು ಜೀವನಶೈಲಿಯ ಅಂಶಗಳನ್ನು ಅರ್ಥಮಾಡಿಕೊಳ್ಳಲು ಕೊಡುಗೆ ನೀಡುತ್ತವೆ, ಆದಾಗ್ಯೂ ಸಂಶೋಧಕರು ಸಂಘವನ್ನು ಅತಿಯಾಗಿ ಅರ್ಥೈಸಿಕೊಳ್ಳುವುದರ ವಿರುದ್ಧ ಎಚ್ಚರಿಕೆ ನೀಡುತ್ತಾರೆ. ಮೆಡಿಕಲ್ ನ್ಯೂಸ್ ಪ್ರಕಾರ, ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್ ಪ್ರಪಂಚದಾದ್ಯಂತ ಏಳನೇ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿದೆ ಮತ್ತು ಕಡಿಮೆ ಮತ್ತು ಮಧ್ಯಮ-ಆದಾಯದ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ರಾಮನಾಥ ಸ್ವಾಮಿ ಅಥವಾ ರಾಮೇಶ್ವರ ದೇವಾಲಯ ಭಾರತ ದೇಶದಲ್ಲಿನ ತಮಿಳುನಾಡು ರಾಜ್ಯದಲ್ಲಿದೆ. ಈ ದೇವಾಲಯವು ರಾಮೇಶ್ವರ ದ್ವೀಪದಲ್ಲಿ ಇರುವ ಪ್ರಸಿದ್ಧ ಹಿಂದೂ ಶೈವ ಕ್ಷೇತ್ರ. ಈ ದೇವಾಲಯದಲ್ಲಿರುವ ಲಿಂಗವು 12 ಜ್ಯೋತಿರ್ ಲಿಂಗ ಒಂದಾಗಿದೆ. ಈ ದೇವಾಲಯವನ್ನು 12 ನೇ ಶತಮಾನದಲ್ಲಿ ಪಾಂಡ್ಯಂ ಎಂಬ ರಾಜವಂಶವು ಈ ದೇವಾಲಯವನ್ನು ಅಭಿವೃದ್ಧಿ ಪಡಿಸಿದರು. ವಿಶೇಷವೆನೆಂದರೆ ಈ ದೇವಾಲಯವು ಭಾರತದಲ್ಲಿನ ಎಲ್ಲಾ ಹಿಂದೂ ದೇವಾಲಯಗಳಿಗಿಂತ ಉದ್ದವಾದ ಕಾರಿಡಾರ್ ಹೊಂದಿದೆ. ರಾಮೇಶ್ವರದಲ್ಲಿನ ಈ ದೇವಾಲಯವು ಶೈವ, ವೈಷ್ಣವರ ಪವಿತ್ರವಾದ ಯಾತ್ರಾ ಸ್ಥಳವೆಂದು ಪರಿಗಣಿಸಲಾಗಿದೆ. ರಾಮನಾಥೇಶ್ವರ ರಾಮಶ್ವೇರದಲ್ಲಿನ ರಾಮನಾಥಸ್ವಾಮಿ ದೇವಾಲಯದಲ್ಲಿನ ಮುಖ್ಯ ದೇವತೆ. ಇಲ್ಲಿನ ಲಿಂಗವು 12 ಜ್ಯೋತಿರ್ ಲಿಂಗಗಳಲ್ಲಿ ಒಂದಾಗಿದೆ. ವಿಶೇಷವೆನೆಂದರೆ ಶಿವನನ್ನು ಇಲ್ಲಿ ರಾಮನಾಥೇಶ್ವರನಾಗಿ ಪೂಜಿಸಲಾಗುತ್ತದೆ. ದೇವಾಲಯಕ್ಕೆ ಒಂದು ಸುಂದರವಾದ ಕಥೆ ಇದೆ. ಅದೆನೆಂದರೆ ರಾಮನ ಪತ್ನಿ ಸೀತೆಯನ್ನು ರಾವಣ ಅಪಹರಿಸುತ್ತಾನೆ. ರಾಮಾಯಣದ ಪ್ರಕಾರ…

Read More

ಬೆಂಗಳೂರು: ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಕಾರ್ಯಕ್ರಮಕ್ಕೆ ಹೋಗುವಾಗ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಬಳಿಕ ಅವರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಜಚಾರ್ಜ್ ಆಗಿದ್ದಾರೆ. ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ದೂರು ಆಧರಿಸಿ ನಂದಿನಿ ಲೇಔಟ್ ಠಾಣೆಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ನಿನ್ನೆ ಬೆಳಿಗ್ಗೆ 11.30ರ ಸುಮಾರಿಗೆ ಮೊಟ್ಟೆ ಎಸೆಯಲಾಗಿದೆ. ಶಾಸಕರು ಕಾರ್ಯಕ್ರಮ ಮುಗಿಸಿ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ

Read More

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟ ಎಸೆದ ಪ್ರಕರಣ ಸಂಬಂಧ ನಂದಿನಿ ಲೇಔಟ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ದೂರು ಆಧರಿಸಿ ನಂದಿನಿ ಲೇಔಟ್ ಠಾಣೆಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ನಿನ್ನೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಕಾರ್ಯಕ್ರಮಕ್ಕೆ ಹೋಗುವಾಗ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಬಳಿಕ ಅವರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಜಚಾರ್ಜ್ ಆಗಿದ್ದಾರೆ.

Read More

ಕಜಕಿಸ್ತಾನ : ಕಜಕಿಸ್ತಾನದ ಅಕ್ಟೌ ನಗರದ ಬಳಿ ಪ್ರಯಾಣಿಕ ವಿಮಾನವೊಂದು ಪತನವಾಗಿದ್ದು,ಅಪಘಾತದಲ್ಲಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಪಘಾತಕ್ಕೂ ಮುನ್ನ ಅಕ್ಟೌ ವಿಮಾನ ನಿಲ್ದಾಣದ ಮೇಲೆ ವಿಮಾನ ಹಲವು ಬಾರಿ ಸುತ್ತು ಹಾಕಿತ್ತು. ಈ ವಿಮಾನ ಅಜರ್‌ಬೈಜಾನ್ ಏರ್‌ಲೈನ್ಸ್‌ಗೆ ಸೇರಿತ್ತು. ಕಝಾಕಿಸ್ತಾನ್‌ನ ತುರ್ತು ಸಚಿವಾಲಯವು ವಿಮಾನವು ಬಾಕುದಿಂದ ಡ್ರೊಜ್ನಿ (ಗ್ರೋಜ್ನಿ) ಗೆ ವಿಮಾನದಲ್ಲಿತ್ತು ಮತ್ತು ಅಕ್ಟೌ ಬಳಿ ಪತನಗೊಂಡಿದೆ ಎಂದು ದೃಢಪಡಿಸಿದೆ. https://twitter.com/i/status/1871885832250155318 ಟೇಕ್ ಆಫ್ ಆದ ನಂತರ, ಅಕ್ಟೌ ವಿಮಾನ ನಿಲ್ದಾಣದ ಬಳಿ ವಿಮಾನವು ಹಲವಾರು ಬಾರಿ ಸುತ್ತುತ್ತಿರುವುದು ಕಂಡುಬಂದಿದೆ. ಶಂಕಿತ ತಾಂತ್ರಿಕ ದೋಷದ ಕಾರಣ, ವಿಮಾನವು ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿತು, ಆದರೆ ಯಶಸ್ವಿಯಾಗಲಿಲ್ಲ. https://twitter.com/blogclub_org/status/1871813464936833517?ref_src=twsrc%5Etfw%7Ctwcamp%5Etweetembed%7Ctwterm%5E1871813464936833517%7Ctwgr%5Ee73057b6ca634439fe6a0abcc6646d6e1a8522a2%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Fdainiktribunehindi-epaper-dh4ad49e5a479e4e4cb59b53c2be7329c0%2Fplanecrashinkazakhstankajakistanmevimandurghatanagrastkailogokimautkiaashanka-newsid-n644848932

Read More

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ರೌಡಿಶೀಟರ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ನಲ್ಲಿ ಪೊಲೀಸರು ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಂಡು ಹೋಗುತ್ತಿದ್ದ ವೇಳೆ ರೌಡಿಶೀಟರ್ ಸುನೀಲ್ ಅಲಿಯಾಸ್ ಹಾವೇರಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಅತ್ತಿಬೆಲೆಯ ಬಂಡಾಪುರ ಬಳಿ ಪೊಲೀಸರು ರೌಡಿಶೀಟರ್ ರೌಡಿಶೀಟರ್ ಸುನೀಲ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ಆತನನ್ನು ವಶಕ್ಕೆ ಪಡೆದುಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ.

Read More