Author: kannadanewsnow57

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರುಗಳಿಗೆ ದಿನಾಂಕ 01-06-2016ರಿಂದ ಅನ್ವಯವಾಗುವಂತೆ ಮಂಜೂರು ಮಾಡಲಾದ ಒಂದು ಹೆಚ್ಚುವರಿ ವೇತನ ಬಡ್ತಿಯನ್ನು ದಿನಾಂಕ 01-11-2018ಕ್ಕೆ ಮೂಲವೇತನದೊಂದಿಗೆ ವಿಲೀನಗೊಳಿಸುವಾಗ ಉಂಟಾದ ಗೊಂದಲದ ಬಗ್ಗೆ ಮಹತ್ವದ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆ ಹಂಚಿಕೊಂಡಿದೆ. ಸರ್ಕಾರಿ/ಅನುದಾನಿತ ಪ್ರೌಢಶಾಲಾ ಸಹ ಶಿಕ್ಷಕರು/ಮುಖ್ಯ ಶಿಕ್ಷಕರುಗಳಿಗೆ ಉಲ್ಲೇಖ(2)ರ ಅನ್ವಯ ದಿನಾಂಕ: 01-06-2016 ರಿಂದ ಮಂಜೂರು ಮಾಡಲಾದ ಒಂದು ಹೆಚ್ಚುವರಿ ವೇತನ ಬಡ್ತಿಯನ್ನು ದಿನಾಂಕ: 01-11-2018 ಲವೇತನದೊಂದಿಗೆ ವಿಲೀನಗೊಳಿಸುವಾಗ ಉಂಟಾದ ಗೊಂದಲಗಳ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಉಲ್ಲೇಖ(1)ರ ಉಡುಪಿ ಜಿಲ್ಲಾ ಉಪನಿರ್ದೇಶಕರು ಕೋರಿರುತ್ತಾರೆ. ಈ ಸಂಬಂಧ ಉಲ್ಲೇಖ(3)ರ ಅನ್ವಯ ಈ ಕಛೇರಿಯಿಂದ ಅಗತ್ಯ ಸ್ಪಷ್ಟಿಕರಣ ನೀಡಲಾಗಿರುತ್ತದೆ. ಉಲ್ಲೇಖ(3)ರ ಸ್ಪಷ್ಟಿಕರಣದ ನಂತರದಲ್ಲಿ ಇತರೆ ಜಿಲ್ಲೆಗಳಿಂದಲೂ ಸಹ ನೀಡಲಾದ ಸ್ಪಷ್ಟಿಕರಣಕ್ಕೆ ವಿರುದ್ಧವಾಗಿ ವೇತನ ನಿಗದಿಗೊಳಿಸಲಾಗಿದ್ದು, ಈ ಹಿನ್ನಲೆಯಲ್ಲಿ ಉಲ್ಲೇಖ(3)ರಂತೆ ಕ್ರಮವಹಿಸುವ ಬಗ್ಗೆ ಸ್ಪಷ್ಠಿಕರಿಸುವಂತೆ ದೂರವಾಣಿ ಕರೆಗಳು ಸ್ವೀಕೃತವಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಹ ಅನ್ವಯಿಸುವಂತೆ ಸಮಗ್ರ ಸುತ್ತೋಲೆಯನ್ನು ಹೊರಡಿಸುವುದು…

Read More

ಬಾಲ್ಕೊಂಡ : ಬೀದಿ ನಾಯಿ ಕಚ್ಚಿದ ಒಂದು ತಿಂಗಳ ಬಳಿಕ ರೇಬಿಸ್ ಸೋಂಕಿನಿಂದ 10 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬಾಲ್ಕೊಂಡ ಮಂಡಲ ಕೇಂದ್ರದಲ್ಲಿ ಒಂದು ತಿಂಗಳ ಹಿಂದೆ ಗ್ರಾಮದ ಬಾಲಕಿ ಲಕ್ಷಣ (10) ಮೇಲೆ ಬೀದಿ ನಾಯಿ ದಾಳಿ ಮಾಡಿತ್ತು. ಪರಿಣಾಮವಾಗಿ, ನಾಯಿ ಅವಳನ್ನು ಕೆರೆದು ತಲೆಗೆ ಸಣ್ಣಪುಟ್ಟ ಗಾಯವಾಯಿತು. ಭಯದಿಂದ ಮಗು ತನ್ನ ಕುಟುಂಬ ಸದಸ್ಯರಿಗೆ ಘಟನೆಯ ಬಗ್ಗೆ ತಿಳಿಸಲಿಲ್ಲ. ಆದರೆ, ಮೂರು ದಿನಗಳ ಹಿಂದೆ, ಮಗು ನಾಯಿಯಂತೆ ಬೊಗಳುತ್ತಾ ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದ ನಂತರ ಕುಟುಂಬ ಸದಸ್ಯರು ಮಗುವನ್ನು ನಿಜಾಮಾಬಾದ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ವೈದ್ಯರು ಈಗಾಗಲೇ ಬಾಲಕಿಗೆ ತೀವ್ರ ರೇಬೀಸ್ ಇರುವುದು ಪತ್ತೆ ಮಾಡಿದ್ದರು. ಉತ್ತಮ ಚಿಕಿತ್ಸೆಗಾಗಿ ಬಾಲಕಿಯನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಪಡೆಯುತ್ತಿರುವಾಗ ಬಾಲಕಿ ಶನಿವಾರ ಬೆಳಿಗ್ಗೆ ನಿಧನರಾದರು.

Read More

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ.01 ರಿಂದ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ. ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡುವುದು, ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು ರೂ.17000 ಗಳಿಂದ ರೂ. 27000 ಸಾವಿರಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ. ಮಾಸಿಕ ವಂತಿಕೆಯನ್ನು ನೀಡಲು ಇಚ್ಛಿಸದೇ ಇರುವ ನೌಕರರು ಲಿಖಿತವಾಗಿ ಅ.18 ರೊಳಗೆ ಸಂಬಂಧಿಸಿದ ಡಿ.ಡಿ.ಓ.ಗಳಿಗೆ ನೀಡುವುದು. ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ದಿಷ್ಟಪಡಿಸಿರುವ ವಂತಿಕೆಯನ್ನು ಅಕ್ಟೋಬರ್-2025ನೇ ಮಾಹೆಯಿಂದ ನೀಡುವುದು. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ 25 ಲಕ್ಷ ಕುಟುಂಬ ಸದಸ್ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ…

Read More

ಮೈಸೂರು : ರಾಜ್ಯದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ ಅವರು, ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿ ವಿತರಣೆ ಮಾಡುತ್ತಿದ್ದು, ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮ ವಹಿಸಲಾಗುತ್ತಿದೆ. ಪರಿಷ್ಕರಣೆಯಲ್ಲಿ ಅರ್ಹರ ಕಾರ್ಡ್ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆಗೊಂಡಿದ್ದರೆ, ಎರಡು ದಿನಗಳಲ್ಲಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದರು. ಇಂದಿರಾ ಕಿಟ್ ವಿತರಿಸಲು ರಾಜ್ಯ ಸರ್ಕಾರವು ಈಗಾಗಲೇ ಪ್ರಕ್ರಿಯೆ ಆರಂಭಿಸಲಾಗಿದೆ. ತೊಗರಿ ಬೇಳೆ, ಅಡುಗೆ ಎಣ್ಣೆ, ಹೆಸರು ಕಾಳು, ಸಕ್ಕರೆ, ಉಪ್ಪು ಖರೀದಿಗೆ ಪ್ರತ್ಯೇಕ ಟೆಂಡರ್ ಕರೆದು, ಪ್ಯಾಕಿಂಗ್ ಮಾಡುವುದು, ಗೋದಾಮಿನಿಂದ ನ್ಯಾಯಬೆಲೆ ಅಂಗಡಿಗೆ ಸಾಗಾಣೆ ಮಾಡಲು ಖಾಸಗಿ ಏಜೆನ್ಸಿಗೆ ಹೊಣೆ ವಹಿಸುವುದು ಸೇರಿ ಇತ್ಯಾದಿ ಕಾರ್ಯ ಚಟುವಟಿಕೆಗಳ ರೂಪುರೇಷೆ…

Read More

ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರೇ ಗಮನಿಸಿ, ಆನ್ಲೈನ್ ಮೂಲಕ ಬಿ ಯಿಂದ ಎ-ಖಾತಾಗೆ ಹೇಗೆ ಪರಿವರ್ತಿಸಬೇಕೆಂಬುದರ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ವಿವರಣೆಗಳನ್ನು ಬಿಡುಗಡೆ ಮಾಡಿದೆ.  ನ.1 ರಿಂದ ಪ್ರಾರಂಭವಾಗುವ ಕರ್ನಾಟಕ ಸರ್ಕಾರದ 100 ದಿನಗಳ ಅಭಿಯಾನದಿಂದ ಬೆಂಗಳೂರಿನಲ್ಲಿ ಸುಮಾರು 15 ಲಕ್ಷ ಆಸ್ತಿ ಮಾಲೀಕರಿಗೆ ಪ್ರಯೋಜನವಾಗುವ ನಿರೀಕ್ಷೆಯಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ಲೈನ್ ವ್ಯವಸ್ಥೆಗೆ  ಚಾಲನೆ ದೊರೆತಿದೆ. ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ 2000 ಚ.ಮೀ.ಗಳ ವರೆಗೆ * ನಿಮ್ಮ ಮೊಬೈಲ್ ಮತ್ತು ಓಟಿಪಿ ಬಳಸಿ https://bbmp.karnataka.gov.in/BtoAKhata ರಲ್ಲಿ ಲಾಗಿನ್ ಆಗಿ * ನಿಮ್ಮ ಅಂತಿಮ ಬಿ-ಖಾತೆಯ ಇಪಿಐಡಿ ಸಂಖ್ಯೆಯನ್ನು ನಮೂದಿಸಿ ವಿವರಗಳನ್ನು ಪಡೆಯಿರಿ * ಮಾಲೀಕರ ಆಧಾರ್ ದೃಢೀಕರಿಸಿ * ನಿವೇಶನವಿರುವ ಸ್ಥಳವನ್ನು ಮತ್ತು ನಿವೇಶನ ಮುಂಭಾಗದ…

Read More

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ಲೈನ್ ವ್ಯವಸ್ಥೆಗೆ  ಚಾಲನೆ ದೊರೆತಿದೆ. ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ 2000 ಚ.ಮೀ.ಗಳ ವರೆಗೆ * ನಿಮ್ಮ ಮೊಬೈಲ್ ಮತ್ತು ಓಟಿಪಿ ಬಳಸಿ https://bbmp.karnataka.gov.in/BtoAKhata ರಲ್ಲಿ ಲಾಗಿನ್ ಆಗಿ * ನಿಮ್ಮ ಅಂತಿಮ ಬಿ-ಖಾತೆಯ ಇಪಿಐಡಿ ಸಂಖ್ಯೆಯನ್ನು ನಮೂದಿಸಿ ವಿವರಗಳನ್ನು ಪಡೆಯಿರಿ * ಮಾಲೀಕರ ಆಧಾರ್ ದೃಢೀಕರಿಸಿ * ನಿವೇಶನವಿರುವ ಸ್ಥಳವನ್ನು ಮತ್ತು ನಿವೇಶನ ಮುಂಭಾಗದ ರಸ್ತೆಯ ಪ್ರಕಾರವನ್ನು ದೃಢಪಡಿಸಿ * ಭೂ ಪರಿವರ್ತನೆಯಾದ ಮತ್ತು ಭೂ ಪರಿವರ್ತನೆಯಾಗದ ಎರಡೂ ನಿವೇಶನಗಳು ಅರ್ಹ (ಫ್ಲಾಟ್‌ಗಳಿಗೆ ಅರ್ಹತೆಯಿಲ್ಲ) + ಸ್ವೀಕೃತಿಯನ್ನು ಪಡೆಯಿರಿ * ನಗರ ಪಾಲಿಕೆ ವತಿಯಿಂದ ನಿವೇಶನಕ್ಕೆ ಭೇಟಿ ಮತ್ತು ದೃಢೀಕರಣ * ಮಾರುಕಟ್ಟೆ ಮೌಲ್ಯದ ಶೇ. 5% ರಷ್ಟು ಮೊತ್ತವನ್ನು “ಏಕ ನಿವೇಶನ”…

Read More

ಬೆಂಗಳೂರು: ರಾಜ್ಯದಲ್ಲಿನ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1200 ಚದುರ ಅಡಿ ವಿಸ್ತರೀಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಿರುವ ನೆಲ+ 2 ಅಂತಸ್ತು ಅಥವಾ Stilt + 3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ ( Occupancy Certificate-OC) ಪಡೆಯುವುದರಿಂದ ವಿನಾಯ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಮಾನ್ಯ ಮುಖ್ಯ ಮಂತ್ರಿಯವರು ಅಧ್ಯಕ್ಷತೆ ಹಾಗೂ ಮಾನ್ಯ ಉಪ ಮುಖ್ಯಮಂತ್ರಿಯವರು ಮತ್ತು ಸಂಬಂಧಿಸಿದ ಇತರ ಮಾನ್ಯ ಸಚಿವರುಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ, ಅನ್ವಯವಾಗುವ ಎಲ್ಲಾ ಕಾಯ್ದೆಗಳಲ್ಲಿಯೂ ಕೆಲವೊಂದು ವರ್ಗದ ನಿವೇಶನಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ಸ್ವಾಧೀನಾನುಭವ ಪಮಾಣ ಪತ್ರ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ, ಸಮಾನ ಅವಕಾಶಗಳಿರುವುದು ಸೂಕ್ತವೆಂದು ಅಭಿಪ್ರಾಯಿಸಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಸೂಚಿಸಲಾಗಿತ್ತು ಎಂದಿದ್ದಾರೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ…

Read More

ನವದೆಹಲಿ : ನವೆಂಬರ್ 1, 2025 ರಿಂದ ದೇಶಾದ್ಯಂತ ಹಲವಾರು ಪ್ರಮುಖ ನಿಯಮಗಳು ಬದಲಾಗಲಿವೆ, ಇದು ನಿಮ್ಮ ದೈನಂದಿನ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಈ ಬದಲಾವಣೆಗಳಲ್ಲಿ ಆಧಾರ್ ಕಾರ್ಡ್‌ಗಳಿಂದ ಹಿಡಿದು ಬ್ಯಾಂಕಿಂಗ್, ಗ್ಯಾಸ್ ಸಿಲಿಂಡರ್‌ಗಳು ಮತ್ತು ಮ್ಯೂಚುವಲ್ ಫಂಡ್‌ಗಳವರೆಗೆ ಎಲ್ಲವೂ ಸೇರಿವೆ. ನವೆಂಬರ್‌ 1 ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು `LPG’ ಸಿಲಿಂಡರ್ ಗಳ ಬೆಲೆ ಪ್ರತಿ ತಿಂಗಳಂತೆ, ನವೆಂಬರ್ 1 ರಂದು LPG, CNG ಮತ್ತು PNG ಬೆಲೆಗಳು ಬದಲಾಗಬಹುದು. ಅದೇ ರೀತಿ, CNG ಮತ್ತು PNG ಅನಿಲ ಬೆಲೆಗಳಿಗೂ ಹೊಂದಾಣಿಕೆಗಳನ್ನು ಮಾಡಬಹುದು. ಆಧಾರ್ ಕಾರ್ಡ್ ನವೀಕರಣ ನವೆಂಬರ್ 1 ರಿಂದ, UIDAI ಆಧಾರ್ ಕಾರ್ಡ್ ನವೀಕರಣ ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ. ನೀವು ಈಗ ಆಧಾರ್ ಕೇಂದ್ರಕ್ಕೆ ಭೇಟಿ ನೀಡದೆಯೇ ನಿಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯಂತಹ ಪ್ರಮುಖ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ನವೀಕರಿಸಬಹುದು. ಫಿಂಗರ್‌ಪ್ರಿಂಟ್‌ಗಳು ಅಥವಾ ಐರಿಸ್ ಸ್ಕ್ಯಾನ್‌ಗಳಂತಹ ಬಯೋಮೆಟ್ರಿಕ್…

Read More

ಶಿವಮೊಗ್ಗ: ಇನ್ನು ಮುಂದೆ ಎಲ್ಲಾ ಪಡಿತರ ಅಂಗಡಿಗಳಲ್ಲೂ ಆಯಾ ತಿಂಗಳ 10ನೇ ತಾರೀಕು ಪಡಿತರ ನೀಡುವಂತೆ ಕ್ರಮವಹಿಸಲಾಗುವುದು. ‘ಒನ್ ನೇಷನ್ ಒನ್ ಕಾರ್ಡ್’ ಯೋಜನೆಯಡಿ ವಲಸಿಗ ಕಾರ್ಮಿಕರಿಗೂ ತಕ್ಷಣ ರೇಷನ್ ಕಾರ್ಡ್ ನೀಡಲಾಗುತ್ತದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಲಿವೆ. ಆದರೆ ಅರ್ಹರು ಆತಂಕ ಪಡುವುದು ಬೇಡ. ರಾಜ್ಯದಲ್ಲಿ ಒಂದೇ ಒಂದು ಬಿಪಿಎಲ್ ಕಾರ್ಡ್ ಕೂಡ ರದ್ದಾಗಲ್ಲ. ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದಾಗಲಿವೆ. ಅನರ್ಹರ ಕಾರ್ಡ್ ರದ್ದು ಮಾಡಿ ಎಪಿಎಲ್ ಕಾರ್ಡ್ ಮಾಡುತ್ತೇವೆ ಎಂಬುದಾಗಿ ತಿಳಿಸಿದರು. ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ದಾರರರಷ್ಟೇ ರದ್ದು ಮಾಡಲಾಗಿದೆ. ಇದನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕ್ಯಾನ್ಸಲ್ ಮಾಡಲಾಗಿದೆ. ಯಾವುದೇ ಫಲಾನುಭವಿಗಳಿಗೂ ಮೋಸವಾಗುತ್ತಿಲ್ಲ. ಶೀಘ್ರದಲ್ಲಿಯೇ ಎಣ್ಣೆ, ಬೇಳೆ, ಕಾಳುಗಳು ಸೇರಿದಂತೆ ಪೌಷ್ಟಿಕಾಂಶ ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತದೆ ಎಂದರು. ಪಡಿತರ ವಿತರಕರಿಗೆ ಮೇ ತಿಂಗಳಿಂದ…

Read More

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ ಜನರು ತಾಲ್ಲೂಕು, ಜಿಲ್ಲಾ ಮಟ್ಟಕ್ಕೆ ಅಲೆಯುವುದನ್ನು ಸರ್ಕಾರ ತಪ್ಪಿಸಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಸಿಗುವಂತ ಸೇವೆಗಳ ಸಂಪೂರ್ಣ ಮಾಹಿತಿ ಮುಂದಿದೆ ಓದಿ ತಿಳಿದುಕೊಳ್ಳಿ. ಬಾಪೂಜಿ ಸೇವಾ ಕೇಂದ್ರ (ಬಿ.ಎಸ್.ಕೆ.)(bsk.karnataka.gov.in) ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪಿಸಿರುವ ಕೇಂದ್ರವೇ ‘ಬಾಪೂಜಿ ಸೇವಾ ಕೇಂದ್ರ’. ಪಂಚತಂತ್ರ, ನಾಡಕಛೇರಿ ತಂತ್ರಾಂಶ ಹಾಗೂ ಭೂಮಿ ತಂತ್ರಾಂಶಗಳನ್ನು ಸಮ್ಮಿಲನಗೊಳಸಿ ಗ್ರಾಮ ಪಂಚಾಯಿತಿಗಳು ಈ ಸೇವೆಯನ್ನು ನೀಡುತ್ತಿವೆ. ಈಗ ನೀಡುತ್ತಿರುವ 19 ಸೇವೆಗಳ ಜೊತೆಗೆ ಕಂದಾಯ ಇಲಾಖೆಯಿಂದ ಪಹಣಿ ಪತ್ರ ಒಳಗೊಂಡಂತೆ 40 ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಗುತ್ತದೆ.ಇದರಿಂದ ಸಾರ್ವಜನಿಕರು ತಮ್ಮ ದಾಖಲೆಗಳಗಾಗಿ ಕಛೇರಿಯಿಂದ…

Read More