Author: kannadanewsnow57

ಕೋಲಾರ : ತಮಿಳುನಾಡಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತಮಿಳುನಾಡಿನ ರಾಣಿಪೇಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಬಸ್ ಕ್ಯಾಂಟರ್ ಲಾರಿ ನಡುವೆ ಡಿಕ್ಕಿಯಾಗಿ ಕ್ಯಾಂಟರ್ ನಲ್ಲಿ ನಾಲ್ವರು ಹಾಗೂ ಸಾರಿಗೆ ಬಸ್ ನಲ್ಲಿದ್ದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ರಾಣಿಪೇಟೆಯ ರಾಣಿಪೇಟೆ ಬಳಿ ಮೇಲ್ಮರುವತ್ತೂರಿನ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಚೆನ್ನೈ ಕಡೆಗೆ ತರಕಾರಿ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಲಾರಿ ಚಾಲಕ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ 30ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ವಾಲಾಜಪೇಟೆಗೆ ರವಾನಿಸಲಾಗಿದೆ

Read More

ನವದೆಹಲಿ : ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ದೇಶದ 20 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮುಂದಿನ 2 ದಿನ ಶೀತಗಾಳಿ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ ಮೊದಲ ವಾರಗಳಲ್ಲಿ ಹವಾಮಾನವು ವೇಗವಾಗಿ ಬದಲಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮತ್ತು ಶೀತಗಾಳಿ ಬೀಸುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. 20 ರಾಜ್ಯಗಳಲ್ಲಿ ದಟ್ಟವಾದ ಮಂಜು ಮತ್ತು ಶೀತಗಾಳಿ ಬೀಸುವ ಸಾಧ್ಯತೆಯಿದೆ, ಇದು ಸಾರ್ವಜನಿಕ ಜೀವನದ ಮೇಲೆ ಪರಿಣಾಮ ಬೀರಬಹುದು. ಭಾರೀ ಮಳೆ ಮತ್ತು ಹಿಮಪಾತದ ಎಚ್ಚರಿಕೆ ಜನವರಿ 10 ಮತ್ತು 12 ರ ನಡುವೆ ವೆಸ್ಟರ್ನ್ ಡಿಸ್ಟರ್ಬೆನ್ಸ್ ಸಕ್ರಿಯಗೊಳ್ಳುವುದರಿಂದ, ಉತ್ತರ ಭಾರತದ ಗುಡ್ಡಗಾಡು ಮತ್ತು ಬಯಲು ಪ್ರದೇಶಗಳಲ್ಲಿ ಹವಾಮಾನದಲ್ಲಿ ಪ್ರಮುಖ ಬದಲಾವಣೆ ಕಂಡುಬರಲಿದೆ. ಮುಂದಿನ ದಿನಗಳ ಮುನ್ಸೂಚನೆ: ಜನವರಿ 10 ರಿಂದ 13 ರವರೆಗೆ ಉತ್ತರಾಖಂಡ,…

Read More

ಲಾಸ್ ಏಂಜಲೀಸ್: ಲಾಸ್ ಏಂಜಲೀಸ್ ಸುತ್ತಮುತ್ತ ಭುಗಿಲೆದ್ದಿರುವ ಕಾಡ್ಗಿಚ್ಚಿಗೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಅಮೆರಿಕದ ಎರಡನೇ ಅತಿದೊಡ್ಡ ನಗರದ ಸುತ್ತಲೂ ಸಂಭವಿಸಿದ ಬೆಂಕಿಯಲ್ಲಿ 1,000 ಕ್ಕೂ ಹೆಚ್ಚು ಕಟ್ಟಡಗಳು ಸುಟ್ಟುಹೋಗಿವೆ, ಸಾವಿರಾರು ಜನರು ತಮ್ಮ ಮನೆಗಳಿಂದ ಹೊರಹೋಗಬೇಕಾಯಿತು. ಚಂಡಮಾರುತ-ಬಲದ ಗಾಳಿಯು ಪೆಸಿಫಿಕ್ ಪಾಲಿಸೇಡ್ಸ್ ಪ್ರದೇಶದಲ್ಲಿ ಮನೆ ಮನೆಗೆ ಹಾರಿದ ಫೈರ್ಬಾಲ್ಗಳನ್ನು ಸ್ಫೋಟಿಸಿತು, ಕ್ಯಾಲಿಫೋರ್ನಿಯಾದ ಅತ್ಯಂತ ಅಪೇಕ್ಷಣೀಯ ರಿಯಲ್ ಎಸ್ಟೇಟ್ ಅನ್ನು ಹಾಲಿವುಡ್ ಸೆಲೆಬ್ರಿಟಿಗಳು ಇಷ್ಟಪಡುವ ಪ್ರದೇಶವನ್ನು ಸುಟ್ಟುಹಾಕಿತು. ಲಾಸ್ ಏಂಜಲೀಸ್ ಕೌಂಟಿ ಅಗ್ನಿಶಾಮಕ ಮುಖ್ಯಸ್ಥ ಆಂಥೋನಿ ಮರೋನ್ ಅವರು ತಮ್ಮ ಸಿಬ್ಬಂದಿಗಳು ವಿಪತ್ತುಗಳ ಪ್ರಮಾಣ ಮತ್ತು ವೇಗದಿಂದ ಮುಳುಗಿದ್ದಾರೆ ಎಂದು ಹೇಳಿದರು. “ನಾವು ನಮ್ಮಿಂದ ಸಾಧ್ಯವಾದಷ್ಟು ಉತ್ತಮವಾಗಿ ಮಾಡುತ್ತಿದ್ದೇವೆ. ಆದರೆ , ಇದನ್ನು ನಿರ್ವಹಿಸಲು ಎಲ್ಲಾ ಇಲಾಖೆಗಳ ನಡುವೆ ಲಾಸ್ ಏಂಜಲೀಸ್ ಕೌಂಟಿಯಲ್ಲಿ ಸಾಕಷ್ಟು ಅಗ್ನಿಶಾಮಕ ಸಿಬ್ಬಂದಿ ಇಲ್ಲ” ಎಂದು ಅವರು ಹೇಳಿದರು. ಪೆಸಿಫಿಕ್ ಪಾಲಿಸೇಡ್ಸ್ನಲ್ಲಿ ಬುಧವಾರ ಮಧ್ಯಾಹ್ನದ ವೇಳೆಗೆ ಸುಮಾರು 16,000 ಎಕರೆ…

Read More

ಚೀನಾ : ಇಂದು ಬೆಳ್ಳಂಬೆಳಗ್ಗೆ ಚೀನಾದಲ್ಲಿ ಮತ್ತೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ ಎಂದು ವರದಿಯಾಗಿದೆ. ಜನವರಿ 7 ರಂದು ಟಿಬೆಟ್ ಮತ್ತು ನೇಪಾಳದಲ್ಲಿ ಸಂಭವಿಸಿದ ಭೂಕಂಪದ ಅನುಭವ ಚೀನಾದಲ್ಲಿಯೂ ಆಯಿತು. ಇದರ ನಂತರ, ಚೀನಾ-ನೇಪಾಳ ಮತ್ತು ಟಿಬೆಟ್‌ನಲ್ಲಿ ನಿರಂತರವಾಗಿ ನಂತರದ ಕಂಪನಗಳು ಸಂಭವಿಸುತ್ತಿವೆ. ಇದಾದ ನಂತರ, ಇಂದು ಜನವರಿ 9 ರ ಬೆಳಿಗ್ಗೆ, ಚೀನಾದ ಕ್ಸಿನ್‌ಜಿಯಾಂಗ್‌ನಲ್ಲಿ ಮತ್ತೊಂದು ಭೂಕಂಪ ಸಂಭವಿಸಿತು, ಅದರ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ. ಭಾರತೀಯ ಕಾಲಮಾನ ಬೆಳಿಗ್ಗೆ 6 ಗಂಟೆಗೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು 50 ಕಿಲೋಮೀಟರ್ ಆಳದಲ್ಲಿ ಪತ್ತೆಯಾಗಿದೆ. ಶಿಗಾಟ್ಸೆ ನಗರದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದ ಎರಡು ದಿನಗಳ ನಂತರ ಚೀನಾದ ಕ್ಸಿನ್‌ಜಿಯಾಂಗ್ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ. ಇಡೀ ನಗರವು ನಾಶವಾಗಿ 126 ಜನರು ಸಾವನ್ನಪ್ಪಿದರು. ಜನವರಿ 7 ರಂದು ಸಂಭವಿಸಿದ ದುರಂತದಲ್ಲಿ ಸಂಭವಿಸಿದ ನಂತರದ ಭೂಕಂಪಗಳ ನಂತರ, ಇಂದು ಬೆಳಿಗ್ಗೆ ಮತ್ತೆ ಭೂಕಂಪ ಸಂಭವಿಸಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಬಹುಮಹಡಿ ಖಾಸಗಿ ಆ ಅಪಾರ್ಟ್ಮೆಂಟ್ ನ 7ನೇ ಮಹಡಿಯಿಂದ ಆಯತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಗಡೆ ನಗರ ಮುಖ್ಯರಸ್ತೆಯ ಕೆ ನಾರಾಯಣಪುರದ ಕ್ರಿಸಾಂತಮ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ. ವೈಟ್ ಫೀಲ್ಡ್ ನ ಗಾಂಧಿಪುರ ನಿವಾಸಿ ಕೃಷ್ಣ(43) ಮೃತಪಟ್ಟ ಕಾರ್ಮಿಕ. ಕೃಷ್ಣ ಅವರು 20 ವರ್ಷಗಳಿಂದ ಪೇಟಿಂಗ್‌ ಹಾಗೂ ಕಾಂಕ್ರೀಟ್‌ ಕೆಲಸ ಮಾಡುತ್ತಿದ್ದರು. ಹೆಗಡೆ ನಗರದ ಮುಖ್ಯ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ನ 6 ಹಾಗೂ 7ನೇ ಮಹಡಿಯಲ್ಲಿ ಮಂಗಳವಾರ ಸಿಮೆಂಟ್‌ ಕೆಲಸ ಮಾಡುತ್ತಿದ್ದರು. ಆಗ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಘಟನೆ ಸಂಬಂಧ ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ಖಚಿತ ಗೌರವಧನ ಬದಲಾಗಿ 9500 ರೂಪಾಯಿಗಳನ್ನ ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ  ಭೇಟಿ ನೀಡಿದ ಸಚಿವರು, ಪ್ರತಿಭಟನೆ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಆಶಾ ಕಾರ್ಯಕರ್ತೆಯರಲ್ಲಿ ಮನವಿ ಮಾಡಿದರು. 15 ಸಾವಿರ ವೇತನ ಫಿಕ್ಸ್ ಮಾಡುವಂತೆ ಆಶಾ ಕಾರ್ಯಕರ್ತೆಯರು ಈ ವೇಳೆ ಸಚಿವರಿಗೆ ಒತ್ತಾಯಿಸಿದರು. ಈ ಕುರಿತಂತೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ 8 ಸಾವಿರ ಗೌರವಧನ ಖಚಿತವಾಗಿ ಸಿಗುತ್ತಿದೆ. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರ್ಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ. ಆರ್.ಸಿ.ಎಚ್ ಪೊರ್ಟಲ್ ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟುಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುವಂತದ್ದು. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ…

Read More

ಬಳ್ಳಾರಿ : ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ 7 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭೀಕರ ಕಾಲ್ತುಳಿತದಲ್ಲಿ ಕರ್ನಾಟಕದ ಬಳ್ಳಾರಿ ಮೂಲದ ಮಹಿಳೆ ನಿರ್ಮಲಾ (50) ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಉಳಿದಂತೆ ಆಂಧ್ರಪ್ರದೇಶದ ನರಸೀಪಟ್ಟಣದ ಬಿ.ನಾಯ್ಡು ಬಾಬು (51), ರಜಿನಿ (47), ಲಾವಣ್ಯ (40), ವಿಶಾಖಪಟ್ಟಣದ ಶಾಂತಿ (34) ಮತ್ತು ತಮಿಳುನಾಡಿನ ಸೇಲಂ ಪ್ರದೇಶದ ಮಲ್ಲಿಗಾ (49) ಶವವಾಗಿ ಪತ್ತೆಯಾಗಿದ್ದಾರೆ. . ಇನ್ನೂ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರುಯು ಆಸ್ಪತ್ರೆಗೆ ಕರೆದೊಯ್ಯಲಾಯಿತು. https://twitter.com/ANI/status/1877032963084267986?ref_src=twsrc%5Etfw%7Ctwcamp%5Etweetembed%7Ctwterm%5E1877033211131474261%7Ctwgr%5Ee963e45b54a314276ea68d3bbcede64d8ecf9897%7Ctwcon%5Es3_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalangchange%3Dtruelaunch%3Dtrue ವೈಕುಂಠ ದರ್ಶನಕ್ಕೆ ಬಂದ ಭಕ್ತರನ್ನು ಪದ್ಮಾವತಿ ಉದ್ಯಾನವನದಲ್ಲಿ ಇರಿಸಲಾಗಿತ್ತು. ಅಷ್ಟರಲ್ಲಿ ಮಹಿಳೆಯೊಬ್ಬರು ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಿಬ್ಬಂದಿ ಗೇಟ್ ತೆರೆದಿದ್ದಾರೆ. ಆದರೆ ಟೋಕನ್ ನೀಡಲು ಗೇಟ್ ತೆರೆಯಲಾಗಿದೆ ಎಂದು ಭಾವಿಸಿದ ಭಕ್ತರು ಏಕಾಏಕಿ ಮುನ್ನುಗ್ಗಿದರು. ಇದರಿಂದ ಕಾಲ್ತುಳಿತ ಉಂಟಾಗಿತ್ತು. ಅಲ್ಲದೆ, ಸರತಿ ಸಾಲಿನಲ್ಲಿದ್ದ ಸಿಬ್ಬಂದಿಯ ಓವರ್ ಆ್ಯಕ್ಷನ್ ಕೂಡ ಕಾಲ್ತುಳಿತಕ್ಕೆ ಕಾರಣ…

Read More

ತಿರುಪತಿ : ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ 7 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭೀಕರ ಕಾಲ್ತುಳಿತದಲ್ಲಿ ನರಸೀಪಟ್ಟಣದ ಬಿ.ನಾಯ್ಡು ಬಾಬು (51), ರಜಿನಿ (47), ಲಾವಣ್ಯ (40), ವಿಶಾಖಪಟ್ಟಣದ ಶಾಂತಿ (34), ಕರ್ನಾಟಕದ ಬಳ್ಳಾರಿಯ ನಿರ್ಮಲಾ (50) ಮತ್ತು ತಮಿಳುನಾಡಿನ ಸೇಲಂ ಪ್ರದೇಶದ ಮಲ್ಲಿಗಾ (49) ಶವವಾಗಿ ಪತ್ತೆಯಾಗಿದ್ದಾರೆ. . ಇನ್ನೂ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರುಯು ಆಸ್ಪತ್ರೆಗೆ ಕರೆದೊಯ್ಯಲಾಯಿತು. https://twitter.com/ANI/status/1877032963084267986?ref_src=twsrc%5Etfw%7Ctwcamp%5Etweetembed%7Ctwterm%5E1877033211131474261%7Ctwgr%5Ee963e45b54a314276ea68d3bbcede64d8ecf9897%7Ctwcon%5Es3_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalangchange%3Dtruelaunch%3Dtrue ವೈಕುಂಠ ದರ್ಶನಕ್ಕೆ ಬಂದ ಭಕ್ತರನ್ನು ಪದ್ಮಾವತಿ ಉದ್ಯಾನವನದಲ್ಲಿ ಇರಿಸಲಾಗಿತ್ತು. ಅಷ್ಟರಲ್ಲಿ ಮಹಿಳೆಯೊಬ್ಬರು ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಿಬ್ಬಂದಿ ಗೇಟ್ ತೆರೆದಿದ್ದಾರೆ. ಆದರೆ ಟೋಕನ್ ನೀಡಲು ಗೇಟ್ ತೆರೆಯಲಾಗಿದೆ ಎಂದು ಭಾವಿಸಿದ ಭಕ್ತರು ಏಕಾಏಕಿ ಮುನ್ನುಗ್ಗಿದರು. ಇದರಿಂದ ಕಾಲ್ತುಳಿತ ಉಂಟಾಗಿತ್ತು. ಅಲ್ಲದೆ, ಸರತಿ ಸಾಲಿನಲ್ಲಿದ್ದ ಸಿಬ್ಬಂದಿಯ ಓವರ್ ಆ್ಯಕ್ಷನ್ ಕೂಡ ಕಾಲ್ತುಳಿತಕ್ಕೆ ಕಾರಣ ಎಂದು ಕೆಲ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು. ನಿನ್ನೆ…

Read More

ಶಿವಮೊಗ್ಗ :ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷೇಣಾಧಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳು ನೇರ ಸಂದರ್ಶನ ಏರ್ಪಡಿಸಲಾಗಿದೆ. ಎನ್‌ಪಿಹೆಚ್‌ಸಿಇ ಕಾರ್ಯಕ್ರಮದಡಿ ತಜ್ಞವೈದ್ಯರು(ಎಂ.ಡಿ. ಇಂಟರ್ನಲ್ ಮೆಡಿಸಿನ್/ಜಿಎಂ) ಹುದ್ದೆ 01, ವಿದ್ಯಾರ್ಹತೆ ಎಂಬಿಬಿಎಸ್, ಎಂ.ಡಿ, ಸ್ಪೆಷಲಿಸ್ಟ್ ಹುದ್ದೆಯಲ್ಲಿ 2 ವರ್ಷ ಕಾರ್ಯ ನಿರ್ವಹಿಸಿರಬೇಕು. ಸಿಪಿಹೆಚ್‌ಸಿ-ಯುಹೆಚ್‌ಸಿ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ ಸಂಯೋಜಕರ ಹುದ್ದೆ 01, ವಿದ್ಯಾರ್ಹತೆ ಬಿಡಿಎಸ್/ಬಿಎಎಂಎಸ್/ಬಿಯುಎAಎಸ್/ಬಿಹೆಚ್‌ಎAಎಸ್/ಬಿವೈಎನ್‌ಎಸ್/ಎAಎಸ್‌ಸಿ ನರ್ಸಿಂಗ್/ಎAಎಸ್‌ಸಿ ಲೈಫ್ ಸೈನ್ಸ್/ಬಿಎಸ್‌ಸಿ ನರ್ಸಿಂಗ್ ಎಲ್ಲ ಪದವಿಯೊಂದಿಗೆ ಎಂಪಿಹೆಚ್ ಅಥವಾ ಎಂಬಿಎ ಕಡ್ಡಾಯವಾಗಿ ಪೂರ್ಣಗೊಂಡಿರಬೇಕು. ಐಡಿಎಸ್‌ಪಿ ಕಾರ್ಯಕ್ರಮದಡಿ ಜಿಲ್ಲಾ ಎಪಿಡೆಮಿಯಾಲಜಿಸ್ಟ್ ಹುದ್ದೆ 01, ವಿದ್ಯಾರ್ಹತೆ ಮೆಡಿಕಲ್ ಗ್ರಾಜುಯೇಟ್, ಎಂಬಿಬಿಎಸ್ ಜೊತೆಗೆ ಪೋಸ್ಟ್ ಗ್ರಾಜುಯೇಟ್ ಪದವಿ/ಡಿಪ್ಲೊಮ ಇನ್ ಪ್ರಿವೆಂಟಿವ್ ಅಂಡ್ ಸೋಷಿಯಲ್ ಮೆಡಿಸಿನ್/ಪಬ್ಲಿಕ್ ಹೆಲ್ತ್ ಅಥವಾ ಎಪಿಡೆಮಿಯಾಲಜಿ(ಎಂ.ಡಿ, ಎಂಪಿಹೆಚ್, ಡಿಪಿಹೆಚ್, ಎಂಎಇ ಇತ್ಯಾದಿ) ಅಥವಾ ಯಾವುದೇ ಮೆಡಿಕಲ್ ಗ್ರಾಜುಯೇಟ್(ಎಂಬಿಬಿಎಸ್ ಹೊರತುಪಡಿಸಿ) ಜೊತೆಗೆ ಎಂಪಿಹೆಚ್ ಜೊತೆಗೆ ಕನಿಷ್ಟ ಒಂದು ವರ್ಷದ ಅನುಭವ ಪಬ್ಲಿಕ್ ಹೆಲ್ತ್ನಲ್ಲಿ…

Read More

ಬೀದರ್ : ಮೇಲ್ಜಾತಿ ಬಾಲಕಿಯನ್ನು ಪ್ರೀತಿಸುತ್ತಿದ್ದ ದಲಿತ ಬಾಲಕಿಯ ಮನೆಯವರು ಯುವಕನನ್ನು ಮನಬಂದಂತೆ ಥಳಿಸಿದ್ದರಿಂದ ಆತ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲ್ಲೂಕಿನ ಕುಶನೂರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಂದೆ ಹಾಗೂ ಸಹೋದರನನ್ನು ಬಂಧಿಸಲಾಗಿದೆ. ಮೃತ ಯುವಕನನ್ನು ಬೇಡಕುಂದಾ ಗ್ರಾಮದ ನಿವಾಸಿ ಸುಮಿತ್ (19) ಎಂದು ತಿಳಿದುಬಂದಿದೆ.ರಕ್ಷಾಳ್ ಗ್ರಾಮದ ಬಾಲಕಿಯನ್ನು ಸುಮಿತ್ ಪ್ರೀತಿಸುತಿದ್ದ. ರವಿವಾರದಂದು ನಮ್ಮ ಮನೆ ಕಡೆಗೆ ಬಾ ಎಂದು ಸುಮಿತ್ ನನ್ನು ಹುಡುಗಿ ಕರೆದಿದ್ದಳು. ಹುಡುಗಿಯನ್ನು ಭೇಟಿ ಮಾಡಲು ಹೋದ ಸುಮಿತ್ ನನ್ನು, ಹುಡುಗಿಯ ಅಪ್ಪ, ಅಣ್ಣ ಮತ್ತು ಸಂಬಂಧಿಕರು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು. ಸುಮಿತ್ ಮನೆಯಿಂದ ಹೊರಗಡೆ ಹೋದ ನಂತರ ಬಾಲಕಿಯ ಅಣ್ಣ ಮತ್ತು ಆತನ ಗೆಳೆಯರು ಸೇರಿಕೊಂಡು ಮತ್ತೆ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕನಿಗೆ ಮಹಾರಾಷ್ಟ್ರದ ಉದಗೀರ್‌, ಲಾತೂರ್‌ನಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ (ಜ.7) ರಾತ್ರಿ ಮೃತಪಟ್ಟಿದ್ದಾನೆ.…

Read More