Author: kannadanewsnow57

2024-25 ನೇ ಸಾಲಿನಲ್ಲಿ ಮುಂಗಾರು ಋತುವಿನಲ್ಲಿ ಬೆಳೆದ ಎಫ್.ಎ.ಕ್ಯೂ. ಗುಣಮಟ್ಟದ ಭತ್ತ ಹಾಗೂ ಬಿಳಜೋಳ ಉತ್ಪನ್ನವನ್ನು ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ನೇರ ಖರೀದಿಸಲು ಸರ್ಕಾರದ ಆದೇಶದಂತೆ ಜಿಲ್ಲಾ ಟಾಸ್ಕಪೆÇೀರ್ಸ ಸಮಿತಿ ನಿರ್ಧರಿಸಿದೆ ಎಂದು ಜಿಲ್ಲಾ ಟಾಸ್ಕಪೆÇೀರ್ಸ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನಲ್ಲಿ ಬೆಳೆದ ಭತ್ತಕ್ಕೆ ರೂ.2,300 ಹಾಗೂ ಗ್ರೇಡ್-ಎ ಭತ್ತಕ್ಕೆ ರೂ.2,320 ನಿಗದಿಪಡಿಸಿದೆ. ಮತ್ತು ಎಫ್.ಎ.ಕ್ಯೂ. ಗುಣಮಟ್ಟದ ಬೀಳಿಜೋಳ ಹೈಬ್ರಿಡ್‍ಗೆ ರೂ.3,371, ಬಿಳಿಜೋಳ ಮಾಲ್ದಂಡಿಗೆ ರೂ.3,421 ನಿಗದಿಪಡಿಸಿದೆ ಎಂದು ಅವರು ತಿಳಿಸಿದ್ದಾರೆ. ಭತ್ತ ಖರೀದಿ: ಧಾರವಾಡ ಮತ್ತು ಕಲಘಟಗಿ ಭಾಗದಲ್ಲಿ 10,904 ಹೇಕ್ವೆರ್ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದ್ದು 1,09,040 ಕ್ವಿಂಟಲ್ ಭತ್ತದ ಇಳುವರಿಯನ್ನು ನೀರಿಕ್ಷಿಸಲಾಗಿದೆ. ಭತ್ತ ಖರೀದಿಗಾಗಿ ಧಾರವಾಡ ಮತ್ತು ಕಲಘಟಗಿ ಎ.ಪಿ.ಎಮ್.ಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಖರೀದಿ ಕೇಂದ್ರ ಸ್ಥಾಪಿಸಲು…

Read More

ಬೆಂಗಳೂರು : ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ಪೋರ್ಟಲ್‌ನಲ್ಲಿ Randomization ಮೂಲಕ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ರಾಜ್ಯಪತ್ರ ಹೊರಡಿಸಿದೆ. ಉಲ್ಲೇಖ (1) ರಲ್ಲಿನ ಸರ್ಕಾರದ ಆದೇಶದಲ್ಲಿ ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರು ಕಾಮಗಾರಿಗಳ ಟೆಂಡರ್‌ಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಮಾದರಿ ಟೆಂಡರ್ ದಾಖಲೆಗಳಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ. ಉಲ್ಲೇಖ (2) ರಲ್ಲಿನ ಸರ್ಕಾರದ ಆದೇಶದಲ್ಲಿ, ಉಲ್ಲೇಖ (1) ರಲ್ಲಿನ ಆದೇಶದಲ್ಲಿ ಮಾದರಿ ಟೆಂಡ‌ರ್ ದಾಖಲೆಗಳ ಷರತ್ತುಗಳಿಗೆ ತರಲಾದ ಎಲ್ಲಾ ಮಾರ್ಪಾಡುಗಳನ್ನು ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ II(A) ರಲ್ಲಿನ ಜಾತಿಗಳ ಟೆಂಡರ್‌ದಾರರುಗಳಿಗೂ ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳ ಟೆಂಡರ್‌ಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಅನ್ವಯಿಸಿ ಅವಕಾಶ ಕಲ್ಪಿಸಲಾಗಿರುತ್ತದೆ. ಮುಂದುವರೆದು, ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರು ಹಾಗೂ ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ II(A) ರಲ್ಲಿನ ಜಾತಿಗಳ ಟೆಂಡರ್‌ದಾರರು ಟೆಂಡರ್‌ಗಳಲ್ಲಿ ಭಾಗವಹಿಸುವ ಕುರಿತು…

Read More

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ ಒಟ್ಟು 1.22 ಕೋಟಿ ಮಹಿಳೆಯರು ಧನಸಹಾಯ ಪಡೆದುಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಹೌದು, ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 2023 ರಿಂದ ಈವರೆಗೆ ಪ್ರತಿ ಮನೆಯ ಯಜಮಾನಿಯ ಖಾತೆಗೆ ಮಾಸಿಕ ₹2,000 ದಂತೆ 1.22 ಕೋಟಿ ಮಹಿಳೆಯರಿಗೆ ಒಟ್ಟು 30,285 ಕೋಟಿ ಧನಸಹಾಯ ಪಡೆದುಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇನ್ನು ಆರೋಗ್ಯ ಪುಷ್ಟಿ ಯೋಜನೆಯನ್ನು ಪ್ರಾಯೋಗಿಕವಾಗಿ ರಾಜ್ಯದ 102 ತಾಲೂಕುಗಳಲ್ಲಿ ಜಾರಿಗೊಳಿಸಿದ್ದು, ಅರ್ಹ ವಿವಾಹಿತ ಮಹಿಳೆಯರಿಗೆ ಪೌಷ್ಟಿಕ ಕಿಟ್ ವಿತರಣೆ ಮಾಡಲಾಗುತ್ತಿದೆ. ಜೊತೆಗೆ ಮಾಜಿ ದೇವದಾಸಿಯರ ಉತ್ಪನ್ನಗಳ ಮಾರಾಟಕ್ಕಾಗಿ ಸವದತ್ತಿಯಲ್ಲಿ 48 ಮಾರಾಟ ಮಳಿಗೆಗಳ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಲಾಗಿದೆ.

Read More

ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭಗೊಳ್ಳಲಿದ್ದು, ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ. ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಹತೆ – ಎಸ್ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು. ಆಯ್ಕೆಯ ವಿಧಾನ- ಸಹನ ಶಕ್ತಿ ಪರೀಕ್ಷೆಯ…

Read More

ಬೆಂಗಳೂರು : ನವೆಂಬರ್ 14 ಜವಾಹರ್ ಲಾಲ್ ನೆಹರು ಜನ್ಮ ದಿನದ ಅಂಗವಾಗಿ ‘ಮಕ್ಕಳ ದಿನಾಚರಣೆ’ ಹಾಗೂ ನವೆಂಬರ್ 20 ರಂದು ‘ಅಂತಾರಾಷ್ಟ್ರೀಯ ಮಕ್ಕಳ ದಿನಾಚರಣೆ’ ಅಂಗವಾಗಿ ಅರಿವು ಕೇಂದ್ರಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚಿಸಲಾಗಿದೆ. ಗ್ರಾಮೀಣ ಮಕ್ಕಳನ್ನು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆರಂಭಿಸಿರುವ ‘ಓದುವ ಬೆಳಕು’ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಉಪಯುಕ್ತ ಚಟುವಟಿಕೆಯನ್ನು ಆಯೋಜಿಸಲಾಗಿದೆ. ಮಕ್ಕಳ ಸೃಜನಶೀಲತೆ ಮತ್ತು ಗ್ರಹಿಸುವಿಕೆ ಸಾಮರ್ಥ್ಯವನ್ನು ವೃದ್ಧಿಸಲು ಈ ತಿಂಗಳು ಕಡಲತೀರದ ದೃಶ್ಯ, ಮಾರುಕಟ್ಟೆ, ಜಾತ್ರೆ, ಆಟದ ಮೈದಾನ ಮತ್ತು ಮಕ್ಕಳು ಆನಂದಿಸುವ ಇತರ ಸ್ಥಳಗಳಂತಹ ವರ್ಣರಂಜಿತ ಚಿತ್ರಗಳನ್ನು ರಚಿಸಿ, ವಿವರಿಸಲು ಮಕ್ಕಳಿಗೆ ಸೂಚಿಸಲಾಗಿದೆ. ಮಕ್ಕಳು ಇಂತಹ ಚಿತ್ರಗಳ ಬಗ್ಗೆ ತಮ್ಮ ಸ್ನೇಹಿತರಿಗೆ ವಿವರಿಸಲು ಅಥವಾ ಚರ್ಚೆ ನಡೆಸಲು ಹಾಗೂ ಈ ವಸ್ತುವನ್ನು ಇರಿಸಿಕೊಂಡು ಕಥೆಯನ್ನು ರಚಿಸಲು ಉತ್ತೇಜನ ನೀಡಲಾಗುವುದು.

Read More

ಹಾವೇರಿ : ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ನಮೂದು ಆಗಿದ್ದಕ್ಕೆ ಹಾವೇರಿಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಹಾವೇರಿ ಎಸ್ ಪಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಹಾವೇರಿ ಜಿಲ್ಲೆಯ ಹರಣಗಿ ಗ್ರಾಮದ ರೈತ ಚನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಎಂಬ ರೈತ, 08 ವರ್ಷಗಳ ಹಿಂದೆ, 04 ಏಕರೆ ಹೊಲದ ಪಹಣಿಯಲ್ಲಿ ವಕ್ಷ ಹೆಸರು ಬಂದಿರುವದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಹಾವೇರಿ ರೈತರು ಆರೋಪಿಸಿದ್ದಾರೆಂದು ವರದಿ ಪ್ರಕಟ ಮಾಡಿರುತ್ತಾರೆ. ಆದರೆ ಮೃತ ರುದ್ರಪ್ಪ ತಂದೆ ಚನ್ನಪ್ಪ ಬಾಳಿಕಾಯಿ ಇತನು ತಮ್ಮ ಆಸ್ತಿಯ ಪಹಣಿಯಲ್ಲಿ ವಕ್ಷ ಅಂತಾ ನಮೂದು ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಅಂತಾ ಯಾವುದೇ ರೀತಿ ಪ್ರಕರಣ ದಾಖಲಾಗಿರುವದಿಲ್ಲ. ದಿನಾಂಕ: 06.01.2022 ರಂದು ರುದ್ರಪ್ಪ ತಂದೆ ಚನ್ನಪ್ಪ ಬಾಳಿಕಾಯಿ, ವಯಾ: 24 ವರ್ಷ, ಸಾ| ಹರಣಗಿರಿ ಗ್ರಾಮ, ಹಾನಗಲ್ ತಾಲೂಕ, ಇವರು ಐಸಿಐಸಿಐ ಬ್ಯಾಂಕ್ ಹಾವೇರಿ ಶಾಖೆಯಲ್ಲಿ 03 ಲಕ್ಷ ಹಾಗೂ ಖಾಸಗಿಯಾಗಿ 04…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸೊಪೋರ್ ಪ್ರದೇಶದಲ್ಲಿ ಅಡಗಿದ್ದ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ, ಅಲ್ಲಿ ಭದ್ರತಾ ಪಡೆಗಳು ಗುರುವಾರ ಸಂಜೆ ಸಿಎಎಸ್ಒ (ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ) ಪ್ರಾರಂಭಿಸಿವೆ ಶುಕ್ರವಾರ ಬೆಳಿಗ್ಗೆ ಹೊಸ ಗುಂಡಿನ ದಾಳಿಯ ನಂತರ, ಪೊಲೀಸರು ಮತ್ತು ಭದ್ರತಾ ಪಡೆಗಳು ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ಪುನರಾರಂಭಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಭದ್ರತಾ ಪಡೆಗಳು ಸೊಪೋರ್ನ ಸಾಗಿಪೊರಾ ಪ್ರದೇಶದಲ್ಲಿ ಸಿಎಎಸ್ಒ ಪ್ರಾರಂಭಿಸಿದ ನಂತರ ಗುರುವಾರ ಸಂಜೆ ಗುಂಡಿನ ಚಕಮಕಿ ಪ್ರಾರಂಭವಾಯಿತು. “ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಎರಡರಿಂದ ಮೂರು ಭಯೋತ್ಪಾದಕರ ಗುಂಪು ಸಿಕ್ಕಿಬಿದ್ದಿದೆ ಎಂದು ನಂಬಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರು ನಡೆಸಿದ ಹಲವಾರು ದಾಳಿಗಳ ನಂತರ ಭದ್ರತಾ ಪಡೆಗಳು ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯನ್ನು ಹೆಚ್ಚಿಸಿವೆ. ಕಳೆದ 48 ಗಂಟೆಗಳಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ, ಒಬ್ಬರು ಕುಪ್ವಾರಾ…

Read More

ಉತ್ತರ ಕೊರಿಯಾ ಮಿಲಿಟರಿ ಪುರುಷರು ಅನಿರ್ಬಂಧಿತ ಪ್ರವೇಶದ ಲಾಭವನ್ನು ಪಡೆಯುತ್ತಿದ್ದಾರೆ ಮತ್ತು ಆನ್ ಲೈನ್ ನಲ್ಲಿ ಅಶ್ಲೀಲ ವಿಷಯಗಳಿಗೆ ಅಂಟಿಕೊಂಡಿದ್ದಾರೆ ಎಂದು ದಿ ಫೈನಾನ್ಷಿಯಲ್ ಟೈಮ್ಸ್ ವರದಿ ಮಾಡಿದೆ. ವರದಿಯ ಪ್ರಕಾರ, ದೇಶದ ಸೈನಿಕರು ವಯಸ್ಕರ ವಿಷಯದ ಬಗ್ಗೆ “ಗೊಣಗುತ್ತಿದ್ದಾರೆ”. ಆದಾಗ್ಯೂ, ಕಿಮ್ ಜಾಂಗ್ ಉನ್ ಉಕ್ರೇನ್ಗೆ ಕಳುಹಿಸಿದ ಉತ್ತರ ಕೊರಿಯಾದ ಸೈನಿಕರ ಇಂಟರ್ನೆಟ್ ಅಭ್ಯಾಸಗಳ ಬಗ್ಗೆ ಅವರು ಹೇಗೆ ವಿವರಗಳನ್ನು ಹೊಂದಿದ್ದಾರೆ ಎಂಬುದರ ಬಗ್ಗೆ ಇದು ಹೆಚ್ಚಿನ ಸಂದರ್ಭವನ್ನು ಒದಗಿಸಲಿಲ್ಲ. ಯುಎಸ್ ರಕ್ಷಣಾ ಇಲಾಖೆಯ ವಕ್ತಾರ ಆರ್ಮಿ ಲೆಫ್ಟಿನೆಂಟ್ ಕರ್ನಲ್ ಚಾರ್ಲಿ ಡಯಟ್ಜ್ ಅವರು ಉತ್ತರ ಕೊರಿಯಾದ ಯಾವುದೇ ಇಂಟರ್ನೆಟ್ ಅಭ್ಯಾಸ ಅಥವಾ ವರ್ಚುವಲ್ ಪಠ್ಯೇತರ ಚಟುವಟಿಕೆಗಳನ್ನು ದೃಢೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಮಾಸ್ಕೋ-ಉತ್ತರ ಕೊರಿಯಾ ಸಂಬಂಧಗಳು ಹೆಚ್ಚುತ್ತಿರುವ ಮಧ್ಯೆ, ರಷ್ಯಾ ಸೋಮವಾರ ಉಕ್ರೇನ್ ಗಡಿಯ ಸಮೀಪವಿರುವ ಪ್ರದೇಶಗಳಿಗೆ ಎಕೆ -12 ರೈಫಲ್ಗಳು, ಮೋರ್ಟಾರ್ ಸುತ್ತುಗಳು ಮತ್ತು ಇತರ ದಾಳಿ ಶಸ್ತ್ರಾಸ್ತ್ರಗಳೊಂದಿಗೆ 7,000 ಕ್ಕೂ ಹೆಚ್ಚು ಉತ್ತರ ಕೊರಿಯಾದ ಸೈನಿಕರನ್ನು…

Read More

ನವದೆಹಲಿ : ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, MCA ಈಗಾಗಲೇ PM ಇಂಟರ್ನ್‌ಶಿಪ್ ಸ್ಕೀಮ್ 2024 ರ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ನೋಂದಣಿ ಪ್ರಕ್ರಿಯೆಯು ನವೆಂಬರ್ 10, 2024 ರಂದು ಕೊನೆಗೊಳ್ಳುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು PM ಇಂಟರ್ನ್‌ಶಿಪ್ ಯೋಜನೆಯ ಅಧಿಕೃತ ವೆಬ್‌ಸೈಟ್ pminternship.mca.gov.in ನೇರ ಲಿಂಕ್‌ಗೆ ಭೇಟಿ ನೀಡಬಹುದು. ಇಂಟರ್ನ್‌ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಹೈಸ್ಕೂಲ್ ಹೈಯರ್ ಸೆಕೆಂಡರಿ ಸ್ಕೂಲ್ ಪಾಸ್, ITI ಯಿಂದ ಪ್ರಮಾಣಪತ್ರ, ಪಾಲಿಟೆಕ್ನಿಕ್ ಇನ್‌ಸ್ಟಿಟ್ಯೂಟ್‌ನಿಂದ ಡಿಪ್ಲೋಮಾ ಅಥವಾ BA, B.Sc, B.Com, BCA, BBA, BPharmacy ಇತ್ಯಾದಿ ಪದವೀಧರರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 21 ರಿಂದ ಸಲ್ಲಿಸುವ ಕೊನೆಯ ದಿನಾಂಕದಂತೆ 24 ವರ್ಷಗಳು. ಅಭ್ಯರ್ಥಿಯು ಭಾರತೀಯ ರಾಷ್ಟ್ರೀಯವಾದಿಯಾಗಿರಬೇಕು. ಪೂರ್ಣಾವಧಿ ಉದ್ಯೋಗದಲ್ಲಿ ಇರಬಾರದು. ಪೂರ್ಣಾವಧಿ ಶಿಕ್ಷಣದಲ್ಲಿ ತೊಡಗಿರಬಾರದು. ಆನ್‌ಲೈನ್/ದೂರಶಿಕ್ಷಣ ಕಾರ್ಯಕ್ರಮಗಳಲ್ಲಿ ದಾಖಲಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. PM ಇಂಟರ್ನ್‌ಶಿಪ್ ಸ್ಕೀಮ್ 2024 ಅನ್ನು ಅನ್ವಯಿಸಲು ನೇರ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ. ಅಪ್ಲಿಕೇಶನ್ ವಿಧಾನ..…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ಮತ್ತೆ ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಅನ್ನು ನೀಡಿದೆ. ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ( High Security Registration Plates-HSRP)ಯನ್ನು ವಾಹನಗಳಿಗೆ ಅಳವಡಿಸಿಕೊಳ್ಳಲು ದಿನಾಂಕ 17-08-2024ರವರೆಗೆ ಅವಕಾಶ ನೀಡಲಾಗಿತ್ತು. ಇಂತಹ ಅವಧಿಯನ್ನು ದಿನಾಂಕ 30-11-2024ರವರೆಗೆ ವಿಸ್ತರಿಸಿ ಆದೇಶಿಸಿರುವುದಾಗಿ ತಿಳಿಸಿದೆ. ಈ ಆದೇಶವು ದಿನಾಂಕ 17-08-2023ರಂದು ಹೊರಡಿಸಿದಂತ ಅಧಿಸೂಚನೆಯ ನಿಯಮಗಳಿಗೆ ಒಳಪಟ್ಟಿರುವುದಾಗಿ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ ಪಡೆಯಲು ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ 94498 63429 / 94498 63426ಯನ್ನು ಕಚೇರಿ ಕೆಲಸದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30ರೊಳಗೆ ಸಂಪರ್ಕಿಸಬಹುದು. ಸಾರ್ವಜನಿಕರು https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಬಹುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ಪ್ರಕಟಣೆಯಲ್ಲಿ…

Read More