Author: kannadanewsnow57

Apple iPhone 14 Pro ಚಾರ್ಜಿಂಗ್ ಸಮಯದಲ್ಲಿ ಸ್ಫೋಟಗೊಂಡಿದೆ (iphone Explodes), ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚೀನಾದ ಶಾಂಕ್ಸಿಯಲ್ಲಿ ಈ ಘಟನೆ ನಡೆದಿದೆ. ಆದರೆ ಐಫೋನ್‌ಗಳು ಸ್ಫೋಟಗೊಳ್ಳುತ್ತಿರುವುದು ಇದೇ ಮೊದಲಲ್ಲ. ಈಗಾಗಲೇ ಹಲವೆಡೆ ಇಂತಹ ಘಟನೆಗಳು ನಡೆಯುತ್ತಿದ್ದು, ವ್ಯಾಪಕ ಟೀಕೆಗೆ ಗುರಿಯಾಗುತ್ತಿದೆ. ಈ ಘಟನೆಗೆ ಆ್ಯಪಲ್ ಕಂಪನಿಯೂ ಪ್ರತಿಕ್ರಿಯಿಸಿದೆ. ಆಪಲ್..ಈ ಹೆಸರು ಎಷ್ಟು ಜನಪ್ರಿಯವಾಗಿದೆ ಎಂದು ಹೇಳಬೇಕಾಗಿಲ್ಲ. ಈ ಕಂಪನಿಯಿಂದ ಐಪಾಡ್, ಮ್ಯಾಕ್ ಬುಕ್, ಐಪಾಡ್ ಮಿನಿ ಮುಂತಾದ ಗ್ಯಾಜೆಟ್ ಗಳು ಎಷ್ಟೇ ಬಂದರೂ ಐಫೋನ್ ಗಳ ಬೇಡಿಕೆಯೇ ಬೇರೆ. ಪ್ರತಿಯೊಬ್ಬರೂ ಖರೀದಿಸಲು ಬಯಸುವ ಸ್ಮಾರ್ಟ್ ಫೋನ್ ಐಫೋನ್ ಆಗಿದೆ. ಸೆಕ್ಯೂರಿಟಿ ಹಾಗೂ ಸ್ಟೈಲಿಶ್ ಲುಕ್ ನೊಂದಿಗೆ ಬಂದಿರುವ ಈ ಫೋನ್ ಗಳ ಬೆಲೆ ಕೊಂಚ ಹೆಚ್ಚಿದ್ದರೂ ಗ್ರಾಹಕರ ಕ್ರೇಜ್ ಸ್ವಲ್ಪವೂ ಕಡಿಮೆಯಾಗಿಲ್ಲ. ಇತ್ತೀಚೆಗೆ, ಈ ಫೋನ್‌ನ ಸುರಕ್ಷತೆಯ ಬಗ್ಗೆ ಹಲವು ವಾದಗಳಿವೆ. ಕಾರಣ.. ಚೀನಾದ ಶಾಂಕ್ಸಿಯಲ್ಲಿ ಮಹಿಳೆಯೊಬ್ಬರು ಖರೀದಿಸಿದ್ದ ಐಫೋನ್ ಸ್ಫೋಟಗೊಂಡಿದೆ. ಚೀನಾದ ಶಾಂಕ್ಸಿ ಟಿವಿ ಚಾನೆಲ್ ಪ್ರಕಾರ, ಮಹಿಳೆಯೊಬ್ಬರು…

Read More

ಹಾವೇರಿ : ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿಯ, ಎಲ್ಲಾ ಧರ್ಮದ ಬಡವರ ಖಾತೆಗಳಿಗೆ ನೇರವಾಗಿ 56 ಸಾವಿರ ಕೋಟಿ ರೂಪಾಯಿಯನ್ನು ಹಾಕಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಆಯೋಜಿಸಿದ್ದ ಚುನಾವಣಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ಇಡೀ ರಾಜ್ಯದ ಮಹಿಳೆಯರಿಗೆ ಆರ್ಥಿಕ‌ ಶಕ್ತಿ ನೀಡಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದ ಬಡವರ ಖಾತೆಗಳಿಗೆ ನೇರವಾಗಿ 56 ಸಾವಿರ ಕೋಟಿ ರೂಪಾಯಿಯನ್ನು ಹಾಕಿದ್ದೇವೆ ಎಂದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಅವರು ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು.‌ ಪ್ರಧಾನಿ ನರೇಂದ್ರ ಮೋದಿ ಮಹಾನ್ ಸುಳ್ಳುಗಾರ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಎಂದು ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಭಾಯಿ – ಭಾಯಿ ಆಗಿದ್ದಾರೆ ಎಂದರು. ಕ್ಷೇತ್ರದ…

Read More

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ ವಯ ಸಿಇಟಿ, ನೀಟ್ ಮುಖಾಂತರ) ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ, ಎಂಬಿಎ, ಎಂಸಿಎ ಮತ್ತು ಎಲ್‍ಎಲ್‍ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ “ಅರಿವು” (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್ ಸೈಟ್ https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್…

Read More

ಬೆಂಗಳೂರು : ಪೋಷಕರೇ ಎಚ್ಚರ, ಅನಧಿಕೃತವಾಗಿ ದತ್ತು ನೀಡುವುದು ಹಾಗೂ ಪಡೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, 5 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ವರೆಗೆ ದಂಡ ವಿಧಿಸಬಹುದು. ಹೌದು, ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 80 ಹಾಗೂ 81 ರನ್ವಯ ಯಾವುದೇ ವ್ಯಕ್ತಿಯಾಗಲಿ ಅಥವಾ ಸಂಸ್ಥೆಯಾಗಲಿ ಯಾವುದೇ ಅನಾಥ/ ಪರಿತ್ಯಜಿಸಲ್ಪಟ್ಟ ಮಗುವನ್ನು ದತ್ತು ನೀಡುವುದು ಅಥವಾ ಪಡೆಯುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿ ಅಥವಾ ಸಂಸ್ಥೆಗೆ 5 ವರ್ಷಗಳವರೆಗೆ ಕಾರಗೃಹ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಿಸಬಹುದಾಗಿದೆ. ಸಾರ್ವಜನಿಕರ ಗಮನಕ್ಕೆ: ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡುಬಂದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ. 08272-228800 ನ್ನು ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈರಸ್ವಾಮಿ ಅವರು…

Read More

ಬೆಂಗಳೂರು : ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 10 ರ ವರೆಗೆ ವಿಸ್ತರಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ನ್ನು ಸಂಪರ್ಕಿಸಬಹುದು. ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ:08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

Read More

ಬೆಳಗಾವಿ : ಇಂದು ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ SDA ನೌಕರ ರುದ್ರಣ್ಣ ಯಡವಣ್ಣನವರ ಎನ್ನುವವರು ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಆತ್ಮಹತ್ಯೆಗೆ ಮುನ್ನ ಬರೆದ ತೋಟದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಹೆಸರು ಉಲ್ಲೇಖಿಸಿದ್ದಾರೆ. ಹೌದು, ಬೆಳಗಾವಿ ತಹಶಿಲ್ದಾರ್ ಕಚೇರಿಯಲ್ಲಿ ಎಫ್‌ಡಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶಿಲ್ದಾರ್ ಆಫೀಸ್‌ನಲ್ಲಿ ಘಟನೆ ನಡೆದಿದೆ. ತಹಶಿಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರನಾಗಿದ್ದಾರೆ. ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಯಲ್ಲಿಯೇ ನೇಣುಬಿಗಿದುಕೊಂಡಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಆತ್ಮಹತ್ಯೆಗೂ ಮುನ್ನ ವಾಟ್ಸಪ್ ಗ್ರೂಪ್‌ಲ್ಲಿ ಸಂದೇಶ ರವಾನಿಸಿದ್ದ ರುದ್ರಣ್ಣ. ಬೆಳಗಾವಿ ತಹಶಿಲ್ದಾರ್ ಕಚೇರಿ ಸಿಬ್ಬಂದಿಯ ವಾಟ್ಸಪ್ ಗ್ರೂಪಲ್ಲಿ ಸಂದೇಶ ರವಾನೆ. ನಾನು ಆತ್ಮಹತ್ಯೆಗೆ ಶರಣಾಗುವುದಾಗಿ ಗ್ರೂಪ್‌ನಲ್ಲಿ ಮೆಸೆಜ್ ಮಾಡಿದ್ದರು. ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ್ ನಾಗರಾಳ ಹಾಗೂ ಸಚಿವರ ಆಪ್ತ ಸಹಾಯಕ ಸೋಮು ಅವರೇ ಕಾರಣ. ಇನ್ನು…

Read More

ಬೆಂಗಳೂರು : ಪರಿಸರಪ್ರೇಮಿಗಳಿಗೊಂದು ಸಂತಸದ ಸುದ್ದಿ. ಕಲಬುರಗಿ ಜಿಲ್ಲೆಯ ಚಿಂಚೋಳಿ ವನ್ಯಜೀವಿ ಅಭಯಾರಣ್ಯದಲ್ಲಿ ಚಾರಣದ ಜೊತೆಗೆ ಪ್ರಕೃತಿ ಸೌಂದರ್ಯ, ಜೀವವೈವಿದ್ಯದ ಸೊಬಗನ್ನು ಕಣ್ತುಂಬಿಕೊಳ್ಳುವ ಅವಕಾಶವೊಂದನ್ನು ರಾಜ್ಯ ಸರ್ಕಾರ ಸೃಷ್ಟಿಸಿದೆ. ಗಿರಿ, ತೊರೆ, ದಟ್ಟ ಕಾನನದಿಂದ ಕೂಡಿರುವ ಸುಮಾರು 134 ಚ.ಕಿ.ಮೀ ವಿಸ್ತೀರ್ಣದ ಈ ಅಭಯಾರಣ್ಯವು ತನ್ನತ್ತ ಬರುವ ಪ್ರವಾಸಿಗರ ಮನಸೂರೆಗೊಳ್ಳುವುದರಲ್ಲಿ ಅನುಮಾನವೇ ಇಲ್ಲ. ನೀವು ಚಾರಣಪ್ರಿಯರಾಗಿದ್ದು, ವಾರಾಂತ್ಯದಲ್ಲಿ ಹೊಸ ಜಗತ್ತಿಗೆ ನಿಮ್ಮನ್ನು ನೀವು ತೆರೆದುಕೊಳ್ಳುವ ಪ್ರವೃತ್ತಿ ನಿಮ್ಮದಾಗಿದ್ದರೆ ಒಮ್ಮೆ ಚಂದ್ರಂಪಳ್ಳಿ ಪ್ರಕೃತಿ ಚಾರಣಕ್ಕೆ ಭೇಟಿ ನೀಡಿ.

Read More

ಚೆನ್ನೈ : ತಮಿಳುನಾಡಿನ ರೈಲು ನಿಲ್ದಾಣದಲ್ಲಿ ಸೂಟ್ ಕೇಸ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ ಸ್ಥಳೀಯವಾಗಿ ಸಂಚಲನ ಮೂಡಿಸಿತ್ತು. ನೆಲ್ಲೂರು ಮತ್ತು ಚೆನ್ನೈ ಸೆಂಟ್ರಲ್ ನಡುವೆ ಚಲಿಸುತ್ತಿದ್ದ ಸುಬರ್ಮನ್ ಎಲೆಕ್ಟ್ರಿಕ್ ರೈಲು ಮಿಂಜೂರ್ ರೈಲು ನಿಲ್ದಾಣಕ್ಕೆ ಬಂದಾಗ ಸೂಟ್ ಕೇಸ್ ಪ್ಲಾಟ್‌ಫಾರ್ಮ್ ಮೇಲೆ ಬಿದ್ದಿದೆ. ರೈಲು ಹೊರಡಲು ಕೆಲವು ಸೆಕೆಂಡುಗಳ ಮೊದಲು ಸೂಟ್‌ಕೇಸ್ ಅನ್ನು ಪ್ಲಾಟ್‌ಫಾರ್ಮ್‌ಗೆ ಎಸೆಯಲಾಯಿತು. ಗಮನಿಸಿದ ಕಾನ್ ಸ್ಟೇಬಲ್ ಮಹೇಶ್ ಈಕೇಸು ತಂದೆ ಮತ್ತು ಮಗಳನ್ನು ಬಂಧಿಸಿದ್ದಾರೆ. ಸೂಟ್‌ಕೇಸ್‌ನಿಂದ ರಕ್ತ ಸೋರುತ್ತಿದ್ದುದನ್ನು ನೋಡಿದ ಅವರು ಅದನ್ನು ತೆರೆದು ಮಹಿಳೆಯ ಶವವನ್ನು ಕಂಡುಹಿಡಿದರು. ಆರ್‌ಪಿಎಫ್ ಸಿಬ್ಬಂದಿಯ ತಂದೆ ಮತ್ತು ಮಗಳು ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಮಹಿಳೆ ತನ್ನನ್ನು ವೇಶ್ಯಾವಾಟಿಕೆಗೆ ಬಲವಂತಪಡಿಸಲು ಯತ್ನಿಸಿದಾಗ ಕೋಪದಿಂದ ಮಗಳನ್ನು ಕೊಂದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಮೃತಳನ್ನು ಮಾನ್ಯಂ ರಮಣಿ ಎಂದು ಪೊಲೀಸರು ಗುರುತಿಸಿದ್ದು, ಆಕೆ ಚೆನ್ನೈನಲ್ಲಿರುವ ಆರೋಪಿಯ ಮನೆಯ ಬಳಿ ವಾಸಿಸುತ್ತಿದ್ದಳು. ಮಹಿಳೆಯ ಕೊರಳಲ್ಲಿ 50 ಗ್ರಾಂ ಚಿನ್ನಾಭರಣವಿದ್ದು, ಆರೋಪಿಗಳು ಅದನ್ನು…

Read More

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ 500 ಕೋಟಿ ಲೂಟಿಯಾಗಿದ್ದು, ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೂಂದು ಕರಾಳ ಅಧ್ಯಾಯ ಬಹಿರಂಗಗೊಂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮದ್ಯ ಮಾರಾಟಗಾರರ ಸಂಘ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಸಚಿವರು ಮಂಥ್ಲಿ ಮನಿ ಹೆಸರಿನಲ್ಲಿ ಮದ್ಯದ ಅಂಗಡಿಗಳಿಂದ ಪ್ರತಿ ತಿಂಗಳಿಗೆ 15 ಕೋಟಿ ರೂಪಾಯಿಯಂತೆ ವರ್ಷಕ್ಕೆ 180 ಕೋಟಿ ರೂ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವರ್ಗಾವಣೆ ದಂಧೆ, ಲೈಸೆನ್ಸ್ ಮಂಜೂರಾತಿ, ಮದ್ಯದ ಅಂಗಡಿಗಳಿಂದ ಮಂಥ್ಲಿ ಮನಿ ಸೇರಿದಂತೆ ಅಬಕಾರಿ ಸಚಿವರು ವರ್ಷಕ್ಕೆ ಸುಮಾರು 500 ಕೋಟಿ ರೂಪಾಯಿ ಭ್ರಷ್ಟಾಚಾರ ಎಸಗುತ್ತಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘ ಮಾಡಿರುವ ಆರೋಪ ಅತ್ಯಂತ ಗಂಭೀರವಾಗಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಈ ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಿ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ…

Read More

ನವದೆಹಲಿ : ಮೇ 19, 2023 ರಂತೆ ಚಲಾವಣೆಯಲ್ಲಿದ್ದ 2000 ರೂ.ಗಳ ಬ್ಯಾಂಕ್‌ನೋಟುಗಳಲ್ಲಿ 98.04 ಪ್ರತಿಶತದಷ್ಟು ಈಗ ಹಿಂತಿರುಗಿಸಲಾಗಿದೆ, ಬ್ಯಾಂಕಿಂಗ್ ವ್ಯವಸ್ಥೆಯ ಹೊರಗಿನ ಅಂತಹ ನೋಟುಗಳ ಒಟ್ಟು ಮೌಲ್ಯವು ಅಕ್ಟೋಬರ್‌ನಲ್ಲಿ ವ್ಯವಹಾರದ ಮುಕ್ತಾಯದ ಸಮಯದಲ್ಲಿ 6970 ಕೋಟಿ ರೂ.ಗೆ ಇಳಿದಿದೆ. 31, 2024, ಸೋಮವಾರದ RBI ಅಪ್‌ಡೇಟ್ ಪ್ರಕಾರ. ಚಲಾವಣೆಯಲ್ಲಿರುವ ಈ ಬ್ಯಾಂಕ್ನೋಟುಗಳ ಒಟ್ಟು ಮೌಲ್ಯವು 2023 ರ ಮೇ 19 ರಂದು ವ್ಯವಹಾರದ ಮುಕ್ತಾಯದ ಸಮಯದಲ್ಲಿ 3.56 ಲಕ್ಷ ಕೋಟಿ ರೂಪಾಯಿಗಳಾಗಿದ್ದು, 2000 ರೂಪಾಯಿಗಳ ಬ್ಯಾಂಕ್ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಲಾಯಿತು, ಅಂದರೆ ಅವುಗಳಲ್ಲಿ ಶೇಕಡಾ 2 ಕ್ಕಿಂತ ಕಡಿಮೆ ನೋಟುಗಳು ಇನ್ನೂ ಚಲಾವಣೆಯಲ್ಲಿವೆ. ರೂ 2000 ಬ್ಯಾಂಕ್ ನೋಟುಗಳು ಕಾನೂನುಬದ್ಧವಾಗಿ ಮುಂದುವರಿಯುತ್ತವೆ. ಮೇ 19, 2023 ರಿಂದ 2000 ರೂಪಾಯಿಗಳ ಬ್ಯಾಂಕ್ ನೋಟುಗಳ ವಿನಿಮಯದ ಸೌಲಭ್ಯವು ರಿಸರ್ವ್ ಬ್ಯಾಂಕ್‌ನ 19 ಇಶ್ಯೂ ಆಫೀಸ್‌ಗಳಲ್ಲಿ ಲಭ್ಯವಿದೆ. ಅಕ್ಟೋಬರ್ 9, 2023 ರಿಂದ, RBI ಇಶ್ಯೂ ಆಫೀಸ್‌ಗಳು ತಮ್ಮ ಠೇವಣಿಗಾಗಿ ವ್ಯಕ್ತಿಗಳು/ಸಂಸ್ಥೆಗಳಿಂದ ರೂ 2000…

Read More