Author: kannadanewsnow57

ನವದೆಹಲಿ : ಎಸ್ ಎಸ್ ಎಲ್ ಸಿ ಹಾಗೂ ಐಟಿಐ ಪಾಸಾದವರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಭಾರತೀಯ ರೈಲ್ವೆ ಇಲಾಖೆಯಲ್ಲಿ 50,000 ಕ್ಕೂ ಹೆಚ್ಚು ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಹೌದು, ಭಾರತೀಯ ರೈಲ್ವೇಯು ಗ್ರೂಪ್ ಡಿ ನೇಮಕಾತಿ 2024 ಕ್ಕೆ ದೊಡ್ಡ ಅವಕಾಶವನ್ನು ಒದಗಿಸಿದೆ. ಈ ನೇಮಕಾತಿ ಡ್ರೈವ್ ಅಡಿಯಲ್ಲಿ, 50,000 ಕ್ಕೂ ಹೆಚ್ಚು ಹುದ್ದೆಗಳಲ್ಲಿ ನೇಮಕಾತಿ ನಡೆಯಲಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಮತ್ತು ಭಾರತೀಯ ರೈಲ್ವೆಯಲ್ಲಿ ತಮ್ಮ ವೃತ್ತಿಜೀವನವನ್ನು ಮಾಡಲು ಬಯಸುವ ಯುವಕರಿಗೆ ಇದು ಸುವರ್ಣಾವಕಾಶ. ಈ ನೇಮಕಾತಿ ಡ್ರೈವ್ ವಿಶೇಷವಾಗಿ 10 ನೇ ಪಾಸ್ ಮತ್ತು ITI ಹೊಂದಿರುವವರಿಗೆ ಪ್ರಯೋಜನಕಾರಿಯಾಗಿದೆ. ಆಯ್ಕೆ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ದೈಹಿಕ ದಕ್ಷತೆ ಪರೀಕ್ಷೆ (PET), ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ರೈಲ್ವೆ ಗ್ರೂಪ್ ಡಿ ನೇಮಕಾತಿ 2024 ವಿವರ ನೇಮಕಾತಿ ಹೆಸರು : ರೈಲ್ವೆ ಗ್ರೂಪ್ ಡಿ ನೇಮಕಾತಿ 2024 ಒಟ್ಟು ಪೋಸ್ಟ್‌ಗಳು…

Read More

ಬೆಂಗಳೂರು: ರಾಜ್ಯ ಸರ್ಕಾರವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 821 ವಸತಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲು ಅಂದಾಜು ವೆಚ್ಚ ನಿಗದಿಪಡಿಸಿ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿಯ 503 ವಸತಿ ಶಾಲೆಗಳು, ಪರಿಶಿಷ್ಟ ಪಂಗಡ 144, ಹಿಂದುಳಿದ ವರ್ಗದ 174 ಸೇರಿ ಒಟ್ಟಾರೆ 821 ವಸತಿ ಶಾಲಾ, ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಸಲು ವಾರ್ಷಿಕ ಅಂದಾಜು 36 ಕೋಟಿ ರೂ. ಬೇಕಾಗುತ್ತದೆ. ಮೂರು ಇಲಾಖೆಗಳು ಕ್ರಮವಾಗಿ 23 ಕೋಟಿ ರೂ., 6 ಕೋಟಿ ರೂ. ಮತ್ತು 7 ಕೋಟಿ ರೂ. ವ್ಯಯಿಸಬೇಕಾಗುತ್ತದೆ. ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ವಸತಿ ಶಾಲೆಗಳ 29 ಕೋಟಿ ರೂಪಾಯಿ ವಿದ್ಯುತ್ ಬಿಲ್ ಅನ್ನು ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಅಡಿ ಒದಗಿಸುವ ಅನುದಾನದ ಮೂಲಕ ಭರಿಸಬೇಕು. ಉಚಿತ ವಿದ್ಯುತ್ ಸೌಲಭ್ಯವನ್ನು ಮಿತವಾಗಿ ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಸಬೇಕು ಎಂದು ಪ್ರಾಂಶುಪಾಲರಿಗೆ ಮತ್ತು ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.…

Read More

ಬೆಳಗಾವಿ : ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿ ಪಡೆದು 3 ತಿಂಗಳಲ್ಲಿ ಒಳಮೀಸಲಾತಿ ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹಾದೇವಪ್ಪ ಭರವಸೆ ನೀಡಿದ್ದಾರೆ. ಬೆಳಗಾವಿ ನಗರದ ಮಾಲಿನಿ ಸಿಟಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿ ಪಡೆದು 3 ತಿಂಗಳಲ್ಲಿ ಒಳಮೀಸಲಾತಿ ಜಾರಿಗೆ ತರಲಾಗುವುದು. ಒಳ ಮೀಸಲಾತಿ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Read More

ಚನ್ನಪಟ್ಟಣ : ಕೆಲಸದ ಒತ್ತಡಕ್ಕೆ ಬೇಸತ್ತು ವಿಷ ಕುಡಿದು ಮುಖ್ಯ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಎಲೆತೋಟದಳ್ಳಿಯ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಸುಖೇಂದ್ರ (58) ಮೃತ ಶಿಕ್ಷಕ. ಶಾಲೆಯಲ್ಲಿ ಎಲ್ಲಾ ಕಾರ್ಯವನ್ನು ನಿಗದಿತ ಸಮಯಕ್ಕೆ ಮುಗಿಸಬೇಕೆಂದು ಇಲಾಖೆಯಿಂದ ಒತ್ತಡ ಇತ್ತು ಎನ್ನಲಾಗಿದೆ. ಒತ್ತಡವಿದ್ದರಿಂದಲೇ ನಮ್ಮ ತಂದೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರ ಹೇಮಂತ್ ದೂರು ನೀಡಿದ್ದಾರೆ. ಸುಖೇಂದ್ರ ಅವರು ಕೆಲಸದ ಒತ್ತಡಕ್ಕೆ ಬೇಸತ್ತು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Read More

ಬೆಳಗಾವಿ ಸುವರ್ಣಸೌಧ: ರಾಜ್ಯದ 6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್ಇ ಪಠ್ಯಕ್ರಮ ಅಳವಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು ಘೋಷಿಸಿದ್ದಾರೆ. ಇಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಂ. ಎಲ್. ಅನಿಲ್ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಎಸ್ ಬಂಗಾರಪ್ಪ ಅವರು ಉತ್ತರಿಸಿದರು. ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ (CBSE) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ. ಆರ್‌ಟಿಇ ಕಾಯ್ದೆಯ ಅನುಷ್ಠಾನದಿಂದ ಈವರೆಗೆ 1 ರಿಂದ 8ನೇ ತರಗತಿಯವರೆಗೆ ಮಕ್ಕಳ ಶಾಲಾ ಪ್ರವೇಶ ಶುಲ್ಕವನ್ನು ಸರ್ಕಾರವೇ ಭರಿಸುತ್ತಿದೆ ಎಂದರು ತಿಳಿಸಿದರು. https://twitter.com/KarnatakaVarthe/status/1868632993084186905

Read More

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ಮಧ್ಯರಾತ್ರಿ 12:50 ರವರೆಗೆ ಕಲಾಪ ನಡೆಸಲಾಗಿದ್ದು, ಒಟ್ಟು 14 ಗಂಟೆಗಳ ಕಾಲ ಚರ್ಚೆ ನಡೆಸಿ ಹೊಸ ದಾಖಲೆ ನಿರ್ಮಿಸಲಾಗಿದೆ. ಹೌದು, ಬೆಳಗಾವಿಯಲ್ಲಿ 10 ದಿನಗಳ ಕಾಲ ಅಧಿವೇಶನ ನಿಗದಿಯಾಗಿದ್ದು, ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ 9 ದಿನಕ್ಕೆ ಮೊಟಕುಗೊಂಡಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಮಂಗಳವಾರ ಸಂತಾಪ ಸೂಚನೆಗೆ ಸೀಮಿತವಾಗಿತ್ತು. ಬುಧವಾರ ಸರ್ಕಾರಿ ರಜೆ ಘೋಷಣೆಯ ಕಾರಣ ಕಲಾಪ ನಡೆಯಲಿಲ್ಲ. ಹೀಗಾಗಿ ಅಧಿವೇಶನ 8 ದಿನಕ್ಕೆ ಇಳಿಕೆಯಾಗಿದ್ದು, ವಿಧಾನಸಭೆಯ ಕಲಾಪ ಪೂರ್ಣಗೊಳಿಸಲು ಸೋಮವಾರ ಮಧ್ಯರಾತ್ರಿ 12:30ವರೆಗೂ ಕಲಾಪ ನಡೆಸಲಾಗಿದೆ. ಬೆಳಗ್ಗೆ 10.30 ಕ್ಕೆ ಆರಂಭವಾದ ಕಲಾಪ ತಡರಾತ್ರಿವರೆಗೂ ನಡೆಸಿದ್ದು, ಮಧ್ಯಾಹ್ನ ಭೋಜನ ವಿರಾಮ ಮತ್ತು ಸಂಜೆ ಕಲಾಪದಲ್ಲಿ ಗಲಾಟೆಯಾದ ನಂತರದಿಂದ 30 ನಿಮಿಷ ಕಲಾಪ ಮುಂದೂಡಿಕೆ ಮಾಡಲಾಗಿತ್ತು. ಅದು ಬಿಟ್ಟರೆ ಒಟ್ಟು 12 ಗಂಟೆವರೆಗೆ ಕಲಾಪ ನಡೆಸಲಾಗಿದೆ. ಈ ಮೂಲಕ ವಿಧಾನಸಭೆ ಕಲಾಪವನ್ನು ಒಂದು ದಿನದಲ್ಲಿ 14 ಗಂಟೆಗೂ ಹೆಚ್ಚು…

Read More

ಬೆಳಗಾವಿ : ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕ್ಯಾನ್ಸರ್ ರೋಗಿಗಳಿಗೆ ಸರ್ಕಾರದ ವಿವಿಧ ಯೋಜನೆಯಡಿ ಸಂಪೂರ್ಣ ಉಚಿತ ಚಿಕಿತ್ಸೆ ಹಾಗೂ ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಕ್ಯಾನ್ಸರ್ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಸಚಿವ ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಂ. ನಾಗರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಡತನ ರೇಖೆಗಿಂತ ಕಡಿಮೆ (BPL) ಇರುವ ಕುಟುಂಬಗಳಿಗೆ Ab-Ark (ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ) ಯೋಜನೆಯಡಿಯಲ್ಲಿ ₹5 ಲಕ್ಷದವರೆಗೂ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ ಹಾಗೂ ಬಡತನ ರೇಖೆಗಿಂತ ಮೇಲಿರುವ (APL) ಕುಟುಂಬಗಳಿಗೆ ರಿಯಾಯಿತಿ ಅಂದರೆ 30% ಸರ್ಕಾರದ ಅಡಿಯಿಂದ ಮತ್ತು 70% ರೋಗಿಗಳಿಂದ ಪಡೆದು ಚಿಕಿತ್ಸೆಗಾಗಿ ಭರಿಸಲಾಗುತ್ತದೆ. ಇದಲ್ಲದೇ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆ ಅಡಿಯಲ್ಲಿ ಉಚಿತ ಕ್ಯಾನ್ಸರ್ ಚಿಕಿತ್ಸೆಯನ್ನು ನೀಡಲಾಗುತ್ತದೆ (Rare Disease) ಯೋಜನೆಯಡಿಯಲ್ಲಿ ದುಬಾರಿ ಚಿಕಿತ್ಸೆಗಳಾದ ರೋಬೋಟಿಕ್ ಶಸ್ತ್ರಚಿಕಿತ್ಸೆ, ಅಸ್ಥಿಮಜ್ಜೆ (Bone Marrow) ಹಾಗೂ…

Read More

ನವದೆಹಲಿ : ಕೇಂದ್ರವು ಮಂಗಳವಾರ ಮಧ್ಯಾಹ್ನ ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ (ONOP) ಮಸೂದೆಯನ್ನು ಪರಿಚಯಿಸಲಿದೆ. ಮಸೂದೆಯನ್ನು ಪರಿಚಯಿಸುವ ಮೊದಲು ಬಿಜೆಪಿ ಲೋಕಸಭೆಯಲ್ಲಿ ಎಲ್ಲಾ ಸಂಸದರಿಗೆ ಮೂರು ಸಾಲಿನ ವಿಪ್ ನೀಡಿದೆ. ಮೇಘವಾಲ್ ಅವರು ಮಂಗಳವಾರ ಸಂಸತ್ತಿನ ಕೆಳಮನೆಯಲ್ಲಿ ಮಂಡಿಸಲಿರುವ ಎರಡು ಮಸೂದೆಗಳನ್ನು ಕೇಂದ್ರವು ಸೋಮವಾರ ಪಟ್ಟಿ ಮಾಡಿದೆ – ಸಂವಿಧಾನ (ನೂರ ಇಪ್ಪತ್ತೊಂಬತ್ತು ತಿದ್ದುಪಡಿ) ಮಸೂದೆ, 2024 ಎಂದೂ ಕರೆಯಲ್ಪಡುವ ಒಎನ್ಒಪಿ ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆ. ಕಳೆದ ವಾರ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಲೋಕಸಭೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳನ್ನ ಏಕಕಾಲದಲ್ಲಿ ನಡೆಸುವ ಪರಿಕಲ್ಪನೆಯನ್ನ ಹೊರತರುವ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿತು. ಈ ಮಸೂದೆಯನ್ನ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಡಿಸುವ ನಿರೀಕ್ಷೆಯಿದೆ. ಮಸೂದೆಯನ್ನ ಮಂಡಿಸಿದ ನಂತ್ರ ಮಸೂದೆಯನ್ನ ವ್ಯಾಪಕ ಸಮಾಲೋಚನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸುವಂತೆ ಮೇಘವಾಲ್ ಲೋಕಸಭಾ ಸ್ಪೀಕರ್ ಓಂ…

Read More

ಪ್ರಸಕ್ತ(2024-25) ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮದಡಿ ಪ.ಜಾತಿ/ ಪ.ಪಂಗಡ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನದ ಇತರೆ ವರ್ಗದ ರೈತರಿಗೆ ಶೇ.55  ಸಹಾಯಧನ ಸೌಲಭ್ಯವಿದೆ. ತೋಟಗಾರಿಕೆಯಲ್ಲಿ ಯಾಂತ್ರೀಕರಣರಡಿ ಕಳೆ ಕೊಚ್ಚುವ ಯಂತ್ರ, ಮರ ಕತ್ತರಿಸುವ ಯಂತ್ರ, ತಳ್ಳುವ ಗಾಡಿ, ಅಲ್ಯೂಮಿನಿಯಂ ಏಣಿ, ಅಡಿಕೆ ದೋಟಿ, ಪವರ್ ವೀಡರ್, ಕಾಳುಮೆಣಸು ಬಿಡಿಸುವ ಯಂತ್ರ, ಅಡಿಕೆ ಬಿಡಿಸುವ ಯಂತ್ರಗಳಿಗೆ ಪ.ಜಾತಿ/ ಪ.ಪಂಗಡ ವರ್ಗ, ಮಹಿಳೆಯರಿಗೆ ರೈತರಿಗೆ ಶೇ.50 ರಷ್ಟು ಸಹಾಯಧನ ಮತ್ತು ಇತರೆ ವರ್ಗದ ರೈತರಿಗೆ ಶೇ.40 ರಷ್ಟು ಸಹಾಯಧನ ನೀಡಲಾಗುವುದು. ರಾಷ್ಟ್ರೀಯ ಎಣ್ಣೆಕಾಳು ಮತ್ತು ಎಣ್ಣೆ ತಾಳೆ ಅಭಿಯಾನ ಯೋಜನೆ ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಸಹಾಯಧನ ನೀಡಲಾಗುವುದು. ಬಳಗುಂದ ಮತ್ತು ಕೂಡಿಗೆ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಗಿಡಗಳು ಲಭ್ಯವಿರುತ್ತದೆ(ಪ್ರತಿ ಗಿಡಕ್ಕೆ 25 ರೂ.). ಹೆಚ್ಚಿನ ವಿವರಗಳಿಗೆ ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.

Read More

ಬೆಂಗಳೂರು: ದಿನಾಂಕ 24.11.2024 ರಂದು ಪ್ರಾಧಿಕಾರದಿಂದ ನಡೆಸಿದ ಕೆಸೆಟ್-2024 ಪರೀಕ್ಷೆಗೆ ಸಂಬಂಧಿಸಿದಂತೆ, ಒಟ್ಟು 41 ವಿಷಯಗಳ ಕೀ ಉತ್ತರಗಳನ್ನು ಪ್ರಕಟಿಸಿ ಇದಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಡಿ.19ರ ಮಧ್ಯಾಹ್ನ 12.30ರೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಲು ಕೋರಲಾಗಿದೆ. ದಿನಾಂಕ 24.11.2024 ರಂದು ಪ್ರಾಧಿಕಾರದಿಂದ ನಡೆಸಿದ ಕೆಸೆಟ್-2024 ಪರೀಕ್ಷೆಗೆ ಸಂಬಂಧಿಸಿದಂತೆ, ಒಟ್ಟು 41 ವಿಷಯಗಳ ಕೀ ಉತ್ತರಗಳನ್ನು ಪ್ರಕಟಿಸಿ ದಿನಾಂಕ 29.11.2024 ರವರೆಗೆ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಪ್ರಕಟಿತ ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಶಿಫಾರಸ್ಸಿನಂತೆ ಅಂತಿಮ ಕೀ ಉತ್ತರಗಳನ್ನು ದಿನಾಂಕ 13.12.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಂತಿಮ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ದಿನಾಂಕ: 19.12.2024 ಮಧ್ಯಾಹ್ನ 12.30 ರೊಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ…

Read More