Author: kannadanewsnow57

ನವದೆಹಲಿ : ಭವಿಷ್ಯ ನಿಧಿ ಚಂದಾದಾರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಮುಂದಿನ ವರ್ಷದಿಂದ ಇಪಿಎಫ್ಒ ಚಂದಾದಾರರು ತಮ್ಮ ಭವಿಷ್ಯ ನಿಧಿಯನ್ನ ಎಟಿಎಂಗಳಿಂದ ನೇರವಾಗಿ ಹಿಂಪಡೆಯಲು ಸಾಧ್ಯವಾಗುತ್ತದೆ. ಕಾರ್ಮಿಕ ಕಾರ್ಯದರ್ಶಿ ಸುಮಿತಾ ದಾವ್ರಾ ಬುಧವಾರ ದೊಡ್ಡ ಘೋಷಣೆ ಮಾಡಿದ್ದಾರೆ. ನಾವು ಕ್ಲೈಮ್ಗಳನ್ನ ತ್ವರಿತವಾಗಿ ಇತ್ಯರ್ಥಪಡಿಸುತ್ತಿದ್ದೇವೆ ಮತ್ತು ಜೀವನವನ್ನ ಸುಲಭಗೊಳಿಸಲು ಪ್ರಕ್ರಿಯೆಯನ್ನ ಸುಲಭಗೊಳಿಸಲು ಕೆಲಸ ಮಾಡುತ್ತಿದ್ದೇವೆ. ಹಕ್ಕುದಾರ, ಫಲಾನುಭವಿ ಅಥವಾ ವಿಮಾದಾರ ವ್ಯಕ್ತಿಯು ಕನಿಷ್ಠ ಮಾನವ ಹಸ್ತಕ್ಷೇಪದೊಂದಿಗೆ ಎಟಿಎಂಗಳ ಮೂಲಕ ತಮ್ಮ ಕ್ಲೈಮ್ಗಳನ್ನು ಅನುಕೂಲಕರವಾಗಿ ಪ್ರವೇಶಿಸಲು ಸಾಧ್ಯವಾಗುತ್ತದೆ” ಎಂದು ಕಾರ್ಮಿಕ ಕಾರ್ಯದರ್ಶಿ ಹೇಳಿದರು. ದೇಶದ ಬೃಹತ್ ಉದ್ಯೋಗಿಗಳಿಗೆ ಸೇವೆಗಳನ್ನ ಹೆಚ್ಚಿಸಲು ತನ್ನ ಐಟಿ ವ್ಯವಸ್ಥೆಯನ್ನ ನವೀಕರಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವಾಲಯ ತಿಳಿಸಿದೆ. ವ್ಯವಸ್ಥೆಗಳು ವಿಕಸನಗೊಳ್ಳುತ್ತಿವೆ, ಮತ್ತು ಪ್ರತಿ ಎರಡು ಮೂರು ತಿಂಗಳಿಗೊಮ್ಮೆ, ನೀವು ಗಮನಾರ್ಹ ಸುಧಾರಣೆಗಳನ್ನು ಗಮನಿಸುತ್ತೀರಿ. ಜನವರಿ 2025 ರ ವೇಳೆಗೆ ಪ್ರಮುಖ ಹೆಚ್ಚಳವಾಗಲಿದೆ ಎಂದು ನಾನು ನಂಬುತ್ತೇನೆ” ಎಂದು ತಿಳಿಸಿದರು. ನೌಕರರ ಭವಿಷ್ಯ ನಿಧಿ ಸಂಸ್ಥೆ 70 ದಶಲಕ್ಷಕ್ಕೂ ಹೆಚ್ಚು ಸಕ್ರಿಯ…

Read More

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಗ್ರಾಮ ಪಂಚಾಯತ್ ಕಛೇರಿ ಕಾರ್ಯವಿಧಾನ, ಕೈಪಿಡಿ ಬಿಡುಗಡೆ ಮಾಡಿದ್ದು, ಸದರಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಈ ನಿಯಮಗಳು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿತವಾದ ದಿನಾಂಕದಿಂದ ಹದಿನೈದು ದಿನಗಳೊಳಗಾಗಿ ಕಳುಹಿಸಲು ಸೂಚಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ ಪ್ರಕರಣ 311 ರ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತ್ ಕಛೇರಿ ಕಾರ್ಯವಿಧಾನ ಕೈಪಿಡಿ) ನಿಯಮಗಳು, 2024ರ ಕರಡನ್ನು ಇದರಿಂದ ಬಾಧಿತರಾಗುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಸದರಿ ಅಧಿನಿಯಮದ ಪ್ರಕರಣ 311 ರಲ್ಲಿ ನಿಗದಿಪಡಿಸಿದಂತೆ ಪ್ರಕಟಿಸಲಾಗಿದೆ ಮತ್ತು ಈ ಮೂಲಕ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಿ, ಸದರಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಈ ನಿಯಮಗಳು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿತವಾದ ದಿನಾಂಕದಿಂದ ಹದಿನೈದು ದಿನಗಳೊಳಗಾಗಿ ಕಳುಹಿಸಲು ಸೂಚಿಸಲಾಗಿದೆ. ನಿಗದಿಪಡಿಸಿದ ಅವಧಿಯು ಮುಕ್ತಾಯವಾಗುವ…

Read More

ಆಧಾರ್ ಕಾರ್ಡ್ ಈಗ ಪ್ರಮುಖ ದಾಖಲೆಯಾಗಿ ಮಾರ್ಪಟ್ಟಿದೆ. ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯುವುದರಿಂದ ಹಿಡಿದು ಸಿಮ್ ಕಾರ್ಡ್ ಪಡೆಯುವವರೆಗೆ ಮತ್ತು ಬ್ಯಾಂಕ್ ಖಾತೆ ತೆರೆಯುವವರೆಗೆ ಇದು ಅಗತ್ಯವಿದೆ. ಬಹಳ ಹಿಂದೆಯೇ ಅನೇಕರು ಆಧಾರ್ ಕಾರ್ಡ್ ಮಾಡಿದ್ದು, ಹೆಸರು ಅಥವಾ ಜನ್ಮದಿನಾಂಕದಲ್ಲಿ ಕೆಲವು ತಪ್ಪುಗಳಿವೆ. ಅಂತಹ ಜನರು ತಮ್ಮ ಆಧಾರ್ ಕಾರ್ಡ್ ಅನ್ನು ಡಿಸೆಂಬರ್ 14 ರವರೆಗೆ ಉಚಿತವಾಗಿ ನವೀಕರಿಸಬಹುದು. ಇದರ ನಂತರ, ನವೀಕರಣಕ್ಕಾಗಿ ನೀವು ಶುಲ್ಕವನ್ನು ಪಾವತಿಸಬೇಕಾಗಬಹುದು. ಆಧಾರ್ ಅನ್ನು ನವೀಕರಿಸುವುದು ಏಕೆ ಅಗತ್ಯ? ಆಧಾರ್‌ನಲ್ಲಿನ ಮಾಹಿತಿಯನ್ನು ನವೀಕರಿಸಿ 10 ವರ್ಷಗಳಿಗಿಂತ ಹೆಚ್ಚು ಆಗಿದ್ದರೆ, ಅವರು ಅದನ್ನು ಖಂಡಿತವಾಗಿಯೂ ನವೀಕರಿಸಬೇಕು ಎಂದು ಆಧಾರ್ ಮಾಡುವ ಸಂಸ್ಥೆ ಯುಐಡಿಎಐ ಎಲ್ಲಾ ಜನರಿಗೆ ಸಲಹೆ ನೀಡಿದೆ. ಡಿಸೆಂಬರ್ 14, 2024 ರವರೆಗೆ ನೀವು ನಿಮ್ಮ ಆಧಾರ್ ಕಾರ್ಡ್ ಮಾಹಿತಿಯನ್ನು ಹೆಸರು, ವಿಳಾಸ ಅಥವಾ ಜನ್ಮ ದಿನಾಂಕವನ್ನು ಉಚಿತವಾಗಿ ನವೀಕರಿಸಬಹುದು. ಈ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್ ಆಗಿದೆ. ನೀವು ಮನೆಯಲ್ಲಿ ಕುಳಿತು ಎಲ್ಲಾ ಮಾಹಿತಿಯನ್ನು ಸುಲಭವಾಗಿ…

Read More

ರಿಲಯನ್ಸ್ ಜಿಯೋ ಕಂಪನಿಯು  ಹೊಸ ವರ್ಷವನ್ನು ಸ್ವಾಗತಿಸಲು ತನ್ನ ಗ್ರಾಹಕರಿಗೆ ‘ನ್ಯೂ ಇಯರ್ ವೆಲ್‌ಕಮ್ ಪ್ಲಾನ್ -2025’ ಬಿಡುಗಡೆ ಮಾಡಿದೆ. ಈ ಯೋಜನೆಯ ಬೆಲೆ ₹ 2025 ನಿಗದಿಪಡಿಸಲಾಗಿದೆ. ದೀರ್ಘಾವಧಿಯ ಯೋಜನೆ ಇದಾಗಿದ್ದು, ಅನಿಯಮಿತ 5ಜಿ ಡೇಟಾ, ಉಚಿಯ ಎಸ್‌ಎಂ‌ಎಸ್ ಮತ್ತು 200 ದಿನಗಳ‌ ಅನಿಯಮಿತ 5ಜಿ ಡೇಟಾ,  ವಾಯ್ಸ್, ಎಸ್‌ಎಂಎಸ್ ಜೊತೆಗೆ ₹2,150ರ ಮೌಲ್ಯದ ಕೂಪನ್ ಸಹ ಸಿಗಲಿದೆ. ಯಾರಿಗೆಲ್ಲ ಲಭ್ಯ : ಈ ಯೋಜನೆಯು ಜಿಯೋದ ಹಾಲಿ ಮತ್ತು ಹೊಸ ಗ್ರಾಹಕರಿಗೂ ಲಭ್ಯ. 2024ರ  ಡಿಸೆಂಬರ್ 11ರಿಂದ 2025ರ ಜನವರಿ 11ರ ವರೆಗೆ ಈ ಯೋಜನೆ ಜಾರಿಯಲ್ಲಿ ಇರಲಿದೆ‌. ಮೈ ಜಿಯೋ ಆ್ಯಪ್, ಜಿಯೋದ ಅಧಿಕೃತ ವೆಬ್‌ಸೈಟ್‌ ಅಥವಾ ಅಧಿಕೃತ ರಿಟೇಲರ್ ಮೂಲಕ ರೀಚಾರ್ಜ್ ಮಾಡಬಹುದು.  ಯೋಜನೆ‌ಯ ವಿವರ ಹೀಗಿದೆ :  ಅನಿಯಮಿತ 5ಜಿ ಡೇಟಾ:  * 500 ಜಿಬಿಯಷ್ಟು 4 ಜಿ ಡೇಟಾ (ದಿನಕ್ಕೆ 2.5 ಜಿಬಿಯಷ್ಟು) * ಅನಿಯಮಿತ ಕರೆ ಮತ್ತು ಎಸ್‌ಎಂಎಸ್ ಸೇವೆ *…

Read More

ಮಡಿಕೇರಿ : ದೇಶದ ವೀರ ಸೇನಾನಿಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ಅಪಮಾನ ಖಂಡಿಸಿ ಸರ್ವ ಜನಾಂಗಗಳ ಒಕ್ಕೂಟದಿಂದ ಡಿಸೆಂಬರ್ 12 ರ ನಾಳೆ ಕೊಡಗು ಜಿಲ್ಲೆ ಬಂದ್‌ಗೆ ಕರೆ ನೀಡಲಾಗಿದೆ. ಹೌದು, ಸೋಶಿಯಲ್ ಮೀಡಿಯಾದಲ್ಲಿ ಪ್ರಥಮ ಮಹಾ ದಂಡನಾಯಕ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರನ್ನು ಅಪಮಾನಿಸಿ ಪೋಸ್ಟ್ ಮಾಡಿದ್ದ ವ್ಯಕ್ತಿಗೆ ಕೇವಲ ಆರು ತಿಂಗಳ ಕಾಲ ಬಾರ್ ಕೌನ್ಸಿಲ್ ನಿಂದ ಹೊರಗಿಡಲಾಗಿದೆ. ಆದರೆ ಆ ವ್ಯಕ್ತಿಯನ್ನು ಕನಿಷ್ಠ ಆರು ತಿಂಗಳ ಕಾಲವಾದರೂ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಗುರುವಾರ ಸರ್ವಜನಾಂಗದ ಒಕ್ಕೂಟ ಜಿಲ್ಲಾ ಬಂದ್ ಗೆ ಕರೆ ನೀಡಿದೆ. ಕೊಡಗು ಜಿಲ್ಲೆಯ ಅನುದಾನ ರಹಿತ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ವಿವಿಧ ಸಂಘ ಸಂಸ್ಥೆಗಳು ಕೊಡಗು ಜಿಲ್ಲಾ ಬಂದ್‌ ಗೆ ಬೆಂಬಲ ನೀಡಿವೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಮಧಾಹ್ನ 12 ಗಂಟೆಯವರೆಗೆ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ.

Read More

ಭಟ್ಕಳ : ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯಮುಖ್ಯ ಶಿಕ್ಷಕಿ ಸೇರಿ 6 ಮಂದಿ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದ್ದು, ಇದೀಗ ಶಿಕ್ಷಕರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿ ಶಶಿಕಲಾ (40) ಎಸ್ ವಿಶ್ವನಾಥ್ (27) ಸಿ ಎನ್ ಶಾರದಮ್ಮ (37), ಸುನೀಲ್ (33), ಚೌಡಪ್ಪ (34) ಹಾಗೂ ಕೆ ನರೇಶ (30) ಸೇರಿ ಆರು ಮಂದಿ ವಿರುದ್ಧ ಮುರುಡೇಶ್ವರ ಪೊಲೀಸರು ಸುಮೋಟೋ ಕೇಸ್ ದಾಖಲಿದ್ದು, ಇದೀಗ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದ್ದು, ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಬೋಟ್ ಮೂಲಕ ಮೂವರ ಮೃತ ದೇಹವನ್ನು ಹೊರತೆಗೆದಿದ್ದಾರೆ.ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿದ್ದ 15 ವರ್ಷದ ದೀಕ್ಷಾ, ಲಾವಣ್ಯ, ವಂದನಾ ಎಂಬ ಮೂವರು ವಿದ್ಯಾರ್ಥಿನಿಯರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವ ಪತ್ತೆಯಾಗಿತ್ತು. ಏತನ್ಮಧ್ಯೆ, ಮೃತ ವಿದ್ಯಾರ್ಥಿನಿಯ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದ ವೇಳೆ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚುವ ಸಲುವಾಗಿ ಪ್ರಾಯೋಗಿಕವಾಗಿ ಇಕೊಫಿಕ್ಸ್ ಮಿಶ್ರಣ ಬಕಳೆ ಮಾಡಲಾಗಿದೆ ಎಂದು ಬಿಬಿಎಂಪಿಯ ಪ್ರಧಾನ ಅಭಿಯಂತರರಾದ ಡಾ. ಬಿ.ಎಸ್ ಪ್ರಹ್ಲಾದ್ ರವರು ತಿಳಿಸಿದರು. ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗಳ ಸಮಸ್ಯೆಯಿಂದಾಗಿ ಸಂಚಾರ ದಟ್ಟಣೆಯನ್ನು ಉಂಟುಮಾಡುವುದರ ಜೊತೆಗೆ ರಸ್ತೆ ಅಪಘಾತಗಳಿಗೆ ಕೂಡಾ ಕಾರಣವಾಗುತ್ತದೆ. ಈ ಸವಾಲನ್ನು ಎದುರಿಸಲು ಭಾರತದ ಪ್ರಮುಖ ರಸ್ತೆ ಸಂಶೋಧನಾ ಸಂಸ್ಥೆ ಸಿ.ಎಸ್.ಆರ್.ಐ – ಸಿ.ಆರ್.ಆರ್.ಐ, ರಮುಕ ಗ್ಲೋಬಲ್ ಸರ್ವೀಸ್ ಹಾಗೂ ಪಾಲಿಕೆಯ ಸಹಯೋಗದೊಂದಿಗೆ ಇಂದು ಬೆಂಗಳೂರಿನ ಅಂಜನಿ ದೇವಸ್ಥಾನದ ಬಳಿಯ ಅವೆನ್ಯೂ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವ ಮೂಲಕ ಸ್ಟೀಲ್ ಸ್ಲ್ಯಾಗ್ ಆಧಾರಿತ ಇಕೊಫಿಕ್ಸ್ ತಂತ್ರಜ್ಞಾನದ ಪ್ರಾಯೋಗಿಕ ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು. ಭಾರತದ ಪ್ರಮುಖ ರಸ್ತೆ ಸಂಶೋಧನಾ ಸಂಸ್ಥೆ CSIR – ಸೆಂಟ್ರಲ್ ರೋಡ್ ರಿಸರ್ಚ್ ಇನ್ಸ್ಟಿಟ್ಯೂಟ್(CRRI) ಪಾಲಿಕೆ ಸಹಯೋಗದೊಂದಿಗೆ ಬೆಂಗಳೂರು ನಗರದ ರಸ್ತೆಯ ಗುಂಡಿಗಳನ್ನು ಸರಿಪಡಿಸಲು ಕೈಜೋಡಿಸಿದೆ. ನಗರದ ರಸ್ತೆಗಳು ಮಳೆಗಾಲದಲ್ಲಿ ಹಾಟ್ ಮಿಕ್ಸ್ ಪ್ಲಾಂಟ್ ಕಾರ್ಯನಿರ್ವಹಿಸಲು…

Read More

ಬೆಳಗಾವಿ : ಶಿವಸೇನೆ ಪುಂಡರು ಮತ್ತೆ ಉದ್ದಟತನ ಮೆರೆದಿದ್ದು, ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರನ್ನು ತಡೆದು ಕಿರಿಕ್ ಮಾಡಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ. ಹೌದು, ಗಡಿ ವಿಚಾರವಾಗಿ ಮಹಾರಾಷ್ಟ್ರದ ಶಿವಸೇನೆ ಪುಂಡರು ಮತ್ತೆ ಉದ್ಧಟತನ ಪ್ರದರ್ಶಿಸಿದ್ದಾರೆ. ಕೊಲ್ಲಾಪುರದ ಮಹಾಲಕ್ಷ್ಮಿ ದೇವಿ ದರ್ಶನಕ್ಕೆ ಹೋಗಿದ್ದ ಶಾಸಕ ಪ್ರಭು ಚವ್ಹಾಣ್​ಗೆ ಅಡ್ಡಿಪಡಿಸಿ ಕಿರಿಕ್​ ಮಾಡಿದ್ದಾರೆ. ಶಿವಸೇನೆ ಮುಖಂಡ ವಿಜಯ್ ದೇವಣೆ ನೇತೃತ್ವದಲ್ಲಿ ಅಡ್ಡಿಪಡಿಸಿದ್ದು, ಅಧಿವೇಶನ ವೇಳೆ ಮಹಾಮೇಳಕ್ಕೆ ಅವಕಾಶ ಕೊಟ್ಟಿಲ್ಲವೆಂದು ಕಿರಿಕ್ ತೆಗೆದಿದ್ದಾರೆ. ಈ ವೇಳೆ ಪ್ರಭು ಚವ್ಹಾಣ್​ ಕರ್ನಾಟಕದಲ್ಲಿ ಎಂಇಎಸ್ ಪ್ರತಿಭಟನೆ ಬ್ಯಾನ್ ಮಾಡಿದ್ದಾರೆ ಕನ್ನಡದಲ್ಲಿ ಉತ್ತರ ಕೊಟ್ಟಿದ್ದಾರೆ.

Read More

ನವದೆಹಲಿ : ಇತ್ತೀಚಿಗೆ ಬೆಂಗಳೂರಿನ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅತುಲ್ ಬೆಂಗಳೂರಿನ ಕಂಪನಿಯೊಂದರಲ್ಲಿ ಎಐ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಪತ್ನಿ ಮತ್ತು ಅತ್ತೆಯಂದಿರ ಕಿರುಕುಳದಿಂದ ಅತುಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅತುಲ್ ಸುಭಾಷ್ ಮೋದಿ ಅವರು ಸುಮಾರು ಒಂದೂವರೆ ಗಂಟೆಯ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದರು. ಸದ್ಯ ಬೆಂಗಳೂರು ಪೊಲೀಸರು ಅತುಲ್ ಪತ್ನಿ ನಿಕಿತಾ ಸಿಂಘಾನಿಯಾ ಮತ್ತು ಆಕೆಯ ಅತ್ತೆಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾನಸಿಕ ಹಿಂಸೆಯಿಂದ ಆತ್ಮಹತ್ಯೆ ಮಾಡಿಕೊಂಡ ಮೊದಲ ವ್ಯಕ್ತಿ ಅತುಲ್ ಅಲ್ಲ. ವಾಸ್ತವವಾಗಿ, ಇಂತಹ ಅನೇಕ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಪುರುಷರ ಆತ್ಮಹತ್ಯೆಗೆ ಸಂಬಂಧಿಸಿದಂತೆ WHO ಮತ್ತು NCRB ಅಂಕಿಅಂಶಗಳು ಆಶ್ಚರ್ಯವನ್ನುಂಟು ಮಾಡುತ್ತವೆ. ಪ್ರತಿ ಐದು ನಿಮಿಷಕ್ಕೆ ಒಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಪ್ರತಿ ವರ್ಷ 7 ಲಕ್ಷಕ್ಕೂ ಹೆಚ್ಚು ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸ್ತನ ಕ್ಯಾನ್ಸರ್, ಎಚ್‌ಐವಿ ಮತ್ತು ಮಲೇರಿಯಾದಂತಹ ಕಾಯಿಲೆಗಳಿಂದ…

Read More

ಬೆಳಗಾವಿ : ಬೆಳಗಾವಿಯ ವಿಕಾಸ ಸೌಧದಲ್ಲಿ ಒಂದೆಡೆ ಅಧಿವೇಶನ ನಡೆಯುತ್ತಿದ್ದರೆ, ಇನ್ನೊಂದು ಕಡೆ 2A ಮೀಸಲಾತಿಗೆ ಸಂಬಂಧ ಪಟ್ಟಂತೆ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ನಾಳೆ ರಸ್ತೆ ತಡೆ ನಡೆಸಿ ಹೋರಾಟ ಕೈಗೊಳ್ಳುವಂತೆ ಪಂಚಮಸಾಲಿ ಸಮಾಜದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ. ಇನ್ನು ಮುಂದೆ ಚೆನ್ನಮ್ಮನಂತೆ ಕ್ರಾಂತಿಯ ಹೋರಾಟ ನಡೆಸುತ್ತೇವೆ. ನಿಮ್ಮ ನಿಮ್ಮ ಊರುಗಳಲ್ಲಿ ರಸ್ತೆ ತಡೆದು ಹೋರಾಟ ನಡೆಸಿ, ಇದುವರೆಗೂ ಲಿಂಗಾಯಿತ ವಿರೋಧಿ ಮುಖ್ಯಮಂತ್ರಿ ಎಂದು ಹೇಳುತ್ತಿದ್ದರು. ನಾವು ಹಾಗೆ ಅಂದುಕೊಂಡಿರಲಿಲ್ಲ. ಆದರೆ, ಈಗ ಆ ರೀತಿ ಅನಿಸುತ್ತಿದೆ. ಪಂಚಮಸಾಲಿ ಪ್ರತಿಭಟನೆಯಲ್ಲಿ ಪೊಲೀಸರೇ ಸಿವಿಲ್ ಡ್ರೆಸ್ ಧರಿಸಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು. ಹಲ್ಲೆ ಮಾಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಂಡು ಅವರನ್ನು ಅಮಾನತು ಮಾಡಬೇಕು ಎಂದು ಸ್ವಾಮೀಜಿ ಒತ್ತಾಯಿಸಿದ್ದಾರೆ. ಇನ್ನು…

Read More