Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಇಂದು ಮುಖ್ಯಮಂತ್ರಿಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸಲ್ಲಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ (KASS) ಜಾರಿಗೊಳಿಸುವ ಸಂಬಂಧ ಇಂದು ನೆಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಸ್ ಷಡಾಕ್ಷರಿ ರವರು ಮತ್ತು ರಾಜ್ಯ ಸಂಘದ ಪದಾಧಿಕಾರಿಗಳಿಂದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಮುಂದಿನ ತಿಂಗಳು ಏಪ್ರಿಲ್ ನಲ್ಲಿ ರಾಜ್ಯ ಸರ್ಕಾರಿ ನೌಕರರು ಹಾಗೂ ಅವಲಂಬಿತ ಕುಟುಂಬ ವರ್ಗದವರಿಗೆ ಈ ಯೋಜನೆಯನ್ನು ಲೋಕಾರ್ಪಣೆ ಮಾಡುವ ಭರವಸೆ ನೀಡಿದರು.
ವಯನಾಡ್ :ಕೇರಳದ ವಯನಾಡಿನ ಪುಲ್ಪಲ್ಲಿಯಲ್ಲಿರುವ ಶ್ರೀ ಸೀತಾ ದೇವಿ ಲವ್ ಕುಶ ದೇವಸ್ಥಾನಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ್ದಾರೆ. ಕೇರಳದ ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಪುಲ್ಪಲ್ಲಿಯಲ್ಲಿರುವ ಶ್ರೀ ಸೀತಾ ದೇವಿ ಲವ್ ಕುಶ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. https://twitter.com/i/status/1905143402557211003
ಅಸಾಧಾರಣ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯ ಪತಿಯೊಬ್ಬರು ತಮ್ಮ ಪತ್ನಿಯ ವಿವಾಹೇತರ ಸಂಬಂಧವನ್ನು ಒಪ್ಪಿಕೊಂಡಿದ್ದಲ್ಲದೆ, ಅವರ ಇಬ್ಬರು ಮಕ್ಕಳ ಸಂಪೂರ್ಣ ಜವಾಬ್ದಾರಿಯನ್ನು ಸ್ವತಃ ವಹಿಸಿಕೊಂಡು ಪ್ರಿಯಕರನೊಂದಿಗೆ ಪತ್ನಿಯ ವಿವಾಹವನ್ನು ಮಾಡಿದ್ದಾನೆ. ವೈರಲ್ ಆಗಿರುವ ಈ ಘಟನೆಯು ಗ್ರಾಮವನ್ನು ವಿಸ್ಮಯಕ್ಕೆ ದೂಡಿದ್ದು, ಮಿಶ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಕತಾರ್ ಜೋತ್ ಗ್ರಾಮದ ನಿವಾಸಿ ಬಬ್ಲು, 2017 ರಲ್ಲಿ ಗೋರಖ್ಪುರದ ರಾಧಿಕಾ ಅವರನ್ನು ವಿವಾಹವಾದರು. ದಂಪತಿಗೆ ಆರ್ಯನ್ (7) ಮತ್ತು ಶಿವಾನಿ (2) ಎಂಬ ಇಬ್ಬರು ಮಕ್ಕಳಿದ್ದರು. ಕೆಲಸದ ಬದ್ಧತೆಯಿಂದಾಗಿ, ಬಬ್ಲು ಆಗಾಗ್ಗೆ ದೂರ ಇರುತ್ತಿದ್ದರು, ಈ ಸಮಯದಲ್ಲಿ ರಾಧಿಕಾ ಸ್ಥಳೀಯ ಯುವಕ ವಿಕಾಸ್ ಜೊತೆ ಸಂಬಂಧ ಬೆಳೆಸಿಕೊಂಡರು. ಬಬ್ಲು ಈ ಸಂಬಂಧವನ್ನು ಕಂಡುಕೊಂಡಾಗ, ಕೋಪದಿಂದ ಪ್ರತಿಕ್ರಿಯಿಸುವ ಬದಲು, ಅವರು ಅಸಾಂಪ್ರದಾಯಿಕ ನಿರ್ಧಾರವನ್ನು ತೆಗೆದುಕೊಂಡರು. ಅವರು ರಾಧಿಕಾ ಅವರನ್ನು ಧನಘ್ತಾ ತಹಸಿಲ್ಗೆ ಕರೆದೊಯ್ದು, ಅಫಿಡವಿಟ್ ಸಿದ್ಧಪಡಿಸಿದರು ಮತ್ತು ನಂತರ ದಾನೀನಾಥ್ ಶಿವ ದೇವಸ್ಥಾನದಲ್ಲಿ ವಿಕಾಸ್ನೊಂದಿಗೆ ಅವರ ವಿವಾಹವನ್ನು ಏರ್ಪಡಿಸಿದರು. ನಾನು ಮಕ್ಕಳನ್ನು…
ಬೆಂಗಳೂರು: ಸಚಿವ ಕೆಎನ್ ರಾಜಣ್ಣಗೆ ಹನಿಟ್ರ್ಯಾಪ್ ಯತ್ನ ಆರೋಪದ ಸಂಬಂಧ ಇಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಡಿಜಿ ಮತ್ತು ಐಜಿಪಿಗೆ ದೂರು ನೀಡಿದ್ದಾರೆ. ಹನಿಟ್ರ್ಯಾಫ್ ಯತ್ನ ಪ್ರಕರಣಕ್ಕೆ ಸಮಬಂಧಿಸಿದಂತೆ ಇಂದು ಬೆಂಗಳೂರಿನ ಡಿಜಿ ಮತ್ತು ಐಜಿಪಿ ಕಚೇರಿಗೆ ಭೇಟಿ ನೀಡಿ ಎಂಎಲ್ ಸಿ ದೂರು ನೀಡಿದ್ದಾರೆ. ನನಗೆ ಹನಿಟ್ರ್ಯಾಪ್ ನಡೆಸಲು ಕಳೆದ ಮೂರು ತಿಂಗಳಿನಿಂದ ಯತ್ನ ನಡೆಸಿದ್ದರು. ಹನಿಟ್ರ್ಯಾಪ್ ಸಂಬಂಧ ನಮ್ಮ ಮಧುಗಿರಿ ನಿವಾಸಕ್ಕೂ ಬಂದಿದ್ದರು. ಯಾವ ಕಾರಣಕ್ಕಾಗಿ ನನಗೆ ಹನಿಟ್ರ್ಯಾಪ್ ಯತ್ನ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದರು. ಯಾರೆಂದು ಹೇಗೆ ಹೋಳೋದು? ತನಿಖೆಯಾಗಲಿ ಎಲ್ಲವೂ ಹೊರ ಬರುತ್ತದೆ. ನಮ್ಮ ತಂದೆಯಷ್ಟೇ ಅಲ್ಲ ಯಾರಿಗೂ ಈ ರೀತಿಯಾಗಿ ಆಗಬಾರದು. ಎಲ್ಲರ ಮನೆಯಲ್ಲೂ ಹೆಣ್ಣಮುಕ್ಕಳು ಇರ್ತಾರೆ ಅಲ್ವ? ಈ ರೀತಿ ಆದ್ರೇ ಹೇಗೆ.? ಪ್ರಕರಣದ ಬಗ್ಗೆ ಹಿರಿಯ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಆಗಲಿ ಎಂದು ಹೇಳಿದ್ದಾರೆ.
ಬೆಂಗಳೂರು : ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಸಮಿತಿಯ ಮಧ್ಯಂತರ ವರದಿಯನ್ನು ಇಂದು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದಾರೆ. ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರದ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ನವೆಂಬರ್ ತಿಂಗಳಿನಲ್ಲಿಯೇ ರಚಿಸಲಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ಆಯೋಗಕ್ಕೆ ಹೊಣೆ ನಿಗದಿಪಡಿಸಲಾಗಿತ್ತು. ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ದ ಒಳ ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಆಯೋಗ ವರದಿ ನೀಡಿದೆ. https://twitter.com/siddaramaiah/status/1905156492795449392?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮಹಿಳಾ ನೌಕರರ ಪಾತ್ರ ಕುರಿತಾದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಮಹಿಳಾ ಸರ್ಕಾರಿ ಅಧಿಕಾರಿ/ನೌಕರರಿಗೆ ದಿನಾಂಕ: 28.03.2025 ರಂದು ಒಂದು ದಿನದ ಓ.ಓ.ಡಿ. ಸೌಲಭ್ಯವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಏನಿದೆ ಸುತ್ತೋಲೆಯಲ್ಲಿ? ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮಹಿಳಾ ನೌಕರರ ಪಾತ್ರ ಕುರಿತಾದ ಕಾರ್ಯಗಾರವನ್ನು ದಿನಾಂಕ: 28.03.2025 ರಂದು ಪೂರ್ವಾಹ್ನ 10.00 ಗಂಟೆಗೆ ಬಾಲಭವನ ಆವರಣದಲ್ಲಿರುವ ಆಡಿಟೋರಿಯಂ, ಬೆಂಗಳೂರು, ಇಲ್ಲಿ ಆಯೋಜಿಸಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಮಹಿಳಾ ಸರ್ಕಾರಿ ಅಧಿಕಾರಿ/ನೌಕರರು ವಿಶೇಷ ಅನುಮತಿಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಗ್ಗೆ…
ಬೆಂಗಳೂರು : ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ 2,000 ಬಸ್ಗಳನ್ನು ರಸ್ತೆಗಿಳಿಸಲಿವೆ. ಮಾರ್ಚ್ 28 ರಿಂದ 30ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್ 31 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್ಗಳು ಸಂಚರಿಸಲಿವೆ. https://ksrtc.in/ ವೆಬ್ಸೈಟ್ ಮೂಲಕ ಇ-ಟಿಕೆಟ್ ಬುಕ್ಕಿಂಗ್ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ.5 ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ಸಾಗುವ…
ರಾಮನಗರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕಾರು, ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಲಿ ಸಮೀಪ ಕಾರು ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಶಿವಪ್ರಕಾಶ್ (37), ಪುಟ್ಟಗೌರಮ್ಮ (72) ಹಾಗೂ ಶಿವರತ್ನ (52) ಎಂದು ಗುರುತಿಸಲಾಗಿದೆ. ಮೃತರು ಚನ್ನಪಟ್ಟಣ ತಾಲೂಕಿನ ಮಂಗಾಡನಹಳ್ಳಿ ನಿವಾಸಿಗಳು. ಗಾಯಗೊಂಡ ಮೂವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಬೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ರಾಮನಗರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು, ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಲಿ ಸಮೀಪ ಕಾರು ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಶಿವಪ್ರಕಾಶ್ (37), ಪುಟ್ಟಗೌರಮ್ಮ (72) ಹಾಗೂ ಶಿವರತ್ನ (52) ಎಂದು ಗುರುತಿಸಲಾಗಿದೆ. ಮೃತರು ಚನ್ನಪಟ್ಟಣ ತಾಲೂಕಿನ ಮಂಗಾಡನಹಳ್ಳಿ ನಿವಾಸಿಗಳು. ಗಾಯಗೊಂಡ ಮೂವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಬೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರು : ಸ್ವಪಕ್ಷ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದು ಅಲ್ಲದೆ, ಕಳೆದ ಫೆಬ್ರವರಿ 10ರಂದು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ಈ ವಿಚಾರವಾಗಿ ಶಾಸಕ ಯತ್ನಾಳ್ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಯತ್ನಾಳ್, ಕೆಲ ರಾಜಕೀಯ ಪಟ್ಟಭದ್ರರು, ಅಡ್ಡಸ್ಟೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ. ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ. ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ…