Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಜೀವನಿ ಯೋಜನೆಗೆ ಕುಟುಂಬಸ್ಥರ ನೋಂದಣಿ ಮಾಡುವ ಕುರಿತಂತೆ ಮಾಹಿತಿ ನೀಡಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅವರ ಕಚೇರಿ ಮುಖ್ಯಸ್ಥರ ಮುಖಾಂತರ ಅರ್ಜಿ ಸಲ್ಲಿಸಿರುವ (ಅನ್ವಯವಾಗುವಲ್ಲಿ) ಶ್ರೀ/ ಶ್ರೀಮತಿ ಇವರು ಒದಗಿಸಿರುವ ದಾಖಲೆಗಳನ್ನು ಯೋಜನೆಯ ಮಾರ್ಗಸೂಚಿಗಳನ್ವಯ ಪರಿಶೀಲಿಸಿದ್ದು ಈ ಸರ್ಕಾರಿ ನೌಕರರು ಮತ್ತು ಕೆಳಕಂಡ ಅವರ ಕುಟುಂಬದ ಸದಸ್ಯರು ಯೋಜನೆಗೆ ಒಳಪಡಲು ಅರ್ಹರಿರುತ್ತಾರೆಂದು ಶಿಫಾರಸ್ಸು ಮಾಡಲಾಗಿದೆ. ದಾಖಲೆಗಳನ್ನು ಇದರೊಂದಿಗೆ ಲಗತ್ತಿಸಲಾಗಿದೆ. ನೋಂದಾವಣೆಗೆ ಅಗತ್ಯವಿರುವ ಎಲ್ಲಾ ಸರ್ಕಾರಿ ನೌಕರರ ಹೆಸರು ಮತ್ತು ಪದನಾಮ: ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ವಿಳಾಸ: ಯೋಜನೆಗೆ ಒಳಪಡಲು ಅರ್ಹವಿರುವ ಸರ್ಕಾರಿ ನೌಕರನ ಕುಟುಂಬದ ಸದಸ್ಯರು:
ಬೆಂಗಳೂರು : ದಿನಾಂಕ:12/06/2025 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ದ ಆಯೋಜನೆಯ ಕುರಿತು ನಿರ್ದೇಶನ ಹಾಗೂ ಅನುದಾನ ಬಿಡುಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO) ಘೋಷಿಸಿರುವಂತೆ, ವಿಶ್ವ ಸಂಸ್ಥೆಯ ಎಲ್ಲಾ ಮಿತ್ರ ರಾಷ್ಟ್ರಗಳು ಪ್ರತಿ ವರ್ಷ ಜೂನ್-12 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಯೋಜಿಸಲಾಗುತ್ತಿದೆ. ಕರ್ನಾಟಕ ಸರ್ಕಾರ ಪ್ರತಿ ವರ್ಷ ಜೂನ್-12 ರಂದು ಜಿಲ್ಲೆಯಾದ್ಯಂತ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ವನ್ನು ಆಯೋಜಿಸಲಾಗುತ್ತಿತ್ತು. ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಉಲ್ಲೇಖ ಪತ್ರದಲ್ಲಿ ಜಿಲ್ಲಾಧಿಕಾರಿಗಳಿಗೆ ದಿನಾಂಕ:12.06.2025 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಆಯೋಜಿಸುವ ಕುರಿತು ಅನುದಾನವನ್ನು ಬಿಡುಗಡೆ ಮಾಡಿ ನಿರ್ದೇಶನವನ್ನು ನೀಡಲಾಗಿರುತ್ತದೆ. ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಉಲ್ಲೇಖ ಪತ್ರದಲ್ಲಿನ ನಿರ್ದೇಶನಗಳನ್ನು ಪಾಲಿಸಿ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಯಶಸ್ವಿಯಾಗಿ ಆಯೋಜಿಸಲು ಕ್ರಮಗಳನ್ನು…
ನವದೆಹಲಿ : ದೇಶವು ನಿರಂತರವಾಗಿ ಡಿಜಿಟಲ್ ಇಂಡಿಯಾದತ್ತ ಸಾಗುತ್ತಿದೆ. ಇದರಲ್ಲಿ UPI ಪಾವತಿ ನಿರ್ಣಾಯಕ ಪಾತ್ರ ವಹಿಸುತ್ತಿದೆ. ಪ್ರತಿದಿನ ಲಕ್ಷಾಂತರ ಜನರು UPI ಮೂಲಕ ತಮ್ಮ ಸಣ್ಣ ಮತ್ತು ದೊಡ್ಡ ಪಾವತಿಗಳನ್ನು ಮಾಡುತ್ತಾರೆ. ಇದರ ವೇಗ ಮತ್ತು ಸರಳತೆ ಇದನ್ನು ಅತ್ಯಂತ ಜನಪ್ರಿಯಗೊಳಿಸಿದೆ. ಆದರೆ ಆಗಾಗ್ಗೆ ಒಂದು ಸಣ್ಣ ತಪ್ಪಿನಿಂದ ಹಣ ತಪ್ಪು ಖಾತೆಗೆ ಹೋಗುತ್ತದೆ. ಅದನ್ನು ಮರಳಿ ಪಡೆಯುವುದು ಕಷ್ಟಕರವಾಗಿರುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ಒಂದು ಪ್ರಮುಖ ಹೆಜ್ಜೆಯನ್ನು ಇಟ್ಟಿದೆ. ಹೊಸ NPCI ನಿಯಮ ಹೇಗೆ ಕೆಲಸ ಮಾಡುತ್ತದೆ? NPCI ಹೊಸ ನಿಯಮವನ್ನು ಹೊರಡಿಸಿದೆ. ಅದರಂತೆ, ಈಗ ಯಾರಾದರೂ UPI ಮೂಲಕ ಹಣವನ್ನು ಕಳುಹಿಸಿದಾಗ, ಸ್ವೀಕರಿಸುವವರ ಹೆಸರು ಬ್ಯಾಂಕಿನ ದಾಖಲೆಗಳಲ್ಲಿ (ಕೋರ್ ಬ್ಯಾಂಕಿಂಗ್ ಸಿಸ್ಟಮ್-CBS) ನೋಂದಾಯಿಸಲ್ಪಟ್ಟಿರುವುದರಿಂದ ವಹಿವಾಟು ಪರದೆಯಲ್ಲಿ ಕಾಣಿಸಿಕೊಳ್ಳುತ್ತದೆ. ಇದುವರೆಗೆ ಅನೇಕ ಜನರು ತಮ್ಮ ಮೊಬೈಲ್ನಲ್ಲಿ ಉಳಿಸಲಾದ ಹೆಸರು ಅಥವಾ ಸಂಖ್ಯೆಯನ್ನು ನೋಡಿ ಹಣ ಕಳುಹಿಸುತ್ತಿದ್ದರು. ಇದು ವಂಚನೆ ಅಥವಾ ದೋಷಕ್ಕೆ…
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಆಂತರಿಕ ದೂರು ನಿರ್ವಹಣಾ ಸಮಿತಿ ಪುನರ್ ರಚಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ(1)ರಂತೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ) 2013(Sexual Harassment of Women at work place (Prevention Probhibition and Redressal)ನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿರುತ್ತದೆ. ಈ ಅಧಿನಿಯಮದನ್ವಯ 10 ಅಥವಾ 10 ಕ್ಕಿಂತ ಹೆಚ್ಚು ಮಹಿಳೆಯರು ಕಾರ್ಯ ನಿರ್ವಹಿಸುತ್ತಿರುವ ಯಾವುದೇ ಖಾಸಗಿ, ಸರ್ಕಾರಿ, ನಿಗಮ, ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿರುತ್ತದೆ. ಅದರಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ / ಸಿಬ್ಬಂದಿಗಳಿಗೆ ಹಲವಾರು ಸಂದರ್ಭಗಳಲ್ಲಿ ವಿನಾಕಾರಣ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಅವರ ಮೇಲೆ ನಡೆಯುವ…
ಬೆಂಗಳೂರು : ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮೀಣ ಭಾಗದ ಜನರು ಎಚ್ಚರಿಕೆ ವಹಿಸಬೇಕಿದೆ. ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು, ನೀರನ್ನು ಕಾಯಿಸಿಕೊಂಡು ಸೇವಿಸಬೇಕು. ಈ ಕುರಿತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ. ಅತಿಯಾಗಿ ಸುರಿಯುತ್ತಿರುವ ಮಳೆಯಿಂದ ಕುಡಿಯುವ ನೀರು ಸರಬರಾಜಾಗುವ ಕೊಳವೆಗಳಿಗೆ ಕಲುಷಿತ ನೀರು ಸೇರಿಕೊಳ್ಳುವ ಸಾಧ್ಯತೆಗಳಿವೆ. ಇದರಿಂದ ಮನೆಗಳಿಗೆ ಸರಬರಾಜಾಗುವ ನೀರು ಕಲುಷಿತಗೊಳ್ಳುವ ಸಂಭವವಿರುತ್ತದೆ. ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶಗಳ ಸಾರ್ವಜನಿಕರು ನೀರನ್ನು ಕಾದಾರಿಸಿ ಕುಡಿಯುವುದು ಉತ್ತಮ ಎಂದು ತಿಳಿಸಿದ್ದಾರೆ. ಕಡು ಬೇಸಿಗೆಯ ನಂತರ ಒಮ್ಮೆಲೆ ಮಳೆ ಸುರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಾಗಬಹುದು. ಈ ಬಗ್ಗೆಯೂ ಗ್ರಾಮೀಣವಾಸಿಗಳು ಜಾಗ್ರತೆಯಿಂದ ಇರಬೇಕು. ಶಾಲೆಗಳು ಪುನರಾರಂಭವಾಗುವ ದಿನಗಳು ಸಮೀಪಿಸಿರುವುದರಿಂದ ಪೋಷಕರು ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ನಿಗಾ ಇರಿಸಿಕೊಳ್ಳಬೇಕು. ಪ್ರತಿ ಗ್ರಾಮದಲ್ಲಿಯೂ ನಿಯಮಿತವಾಗಿ…
ಬೆಂಗಳೂರು : ಕುಟುಂಬ ಯೋಜನಾ ಕ್ರಮಗಳನ್ನು ಅನುಸರಿಸುವ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ರಾಜ್ಯ ವೇತನ ಶ್ರೇಣಿಗಳನ್ವಯ ವಿಶೇಷ ವೇತನ ಬಡ್ತಿ ಮಂಜೂರಾತಿ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಜಾರಿಗೆ ಬಂದಿರುವ ಪರಿಷ್ಕೃತ ರಾಜ್ಯ ವೇತನ ಶ್ರೇಣಿಗಳ ಆರ್ಥಿಕ ಸೌಲಭ್ಯವು ದಿನಾಂಕ:1.8.2024 ರಿಂದ ಲಭ್ಯವಾಗುತ್ತದೆ. ಈ ವೇತನ ಶ್ರೇಣಿಗಳಲ್ಲಿ ವೇತನ ನಿಗಧಿಕರಣವನ್ನು ದಿನಾಂಕ:1.7.2022 , 2:1.7.2022 505 31.7.2024 ವಕಾಶವಿರುವ ರವರೆಗಿನ ಅವಧಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿನ ವೇತನ ನಿಗಧಿಯಿಂದಾಗಿ ಅಥವಾ ಪುನರ್ನಿಗಧಿಯಿಂದಾಗಿ ವೇತನ ಮತ್ತು ಭತ್ಯೆಗಳನ್ನು ಮತ್ತು ನಿವೃತ್ತಿ ವೇತನದ ಹೆಚ್ಚಳಕ್ಕೆ ಯಾವುದೇ ಸರ್ಕಾರಿ ನೌಕರನು ಅರ್ಹನಾಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ದಿನಾಂಕ:1.7.2022 ರಿಂದ 31.7.2024ರ ಅವಧಿಯಲ್ಲಿ ಮಿತ ಕುಟುಂಬ ಯೋಜನಾ ಕ್ರಮವನ್ನು ಅಳವಡಿಸಿಕೊಂಡ ಪ್ರಕರಣಗಳಲ್ಲಿ ವೈಯಕ್ತಿಕ ವೇತನ ರೂಪದಲ್ಲಿ ನೀಡಲಾಗುವ ವಿಶೇಷ ವೇತನ ಬಡ್ತಿಯನ್ನು 2024ರ ರಾಜ್ಯ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಲಭ್ಯವಾಗುವ ವಾರ್ಷಿಕ ವೇತನದ ಬಡ್ತಿಯ ದರದಲ್ಲಿ ದಿನಾಂಕ:1.7.2022…
ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಮಹತ್ವದ ಮಾಹಿತಿ ಎನ್ನುವಂತೆ 2025-26ನೇ ಸಾಲಿನ ಆರ್ ಟಿ ಇ ಅಡಿಯಲ್ಲಿ ದಾಖಲಾತಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2025-26ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ ಪ್ರವೇಶ ಪ್ರಕ್ರಿಯೆ ಸಂಬಂಧ ಉಲ್ಲೇಖ(10) ರನ್ವಯ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿ ಸಹಿತ ಸುತ್ತೋಲೆ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ಸದರಿ ಸುತ್ತೋಲೆಯಲ್ಲಿ ಸರ್ಕಾರದ ಆದೇಶ ಸಂಖ್ಯೆ: ಇಪಿ 100 ಪಿಜಿಸಿ 2024 ದಿನಾಂಕ:26.06.2024 ರನ್ವಯ ಎಲ್.ಕೆ.ಜಿ ತರಗತಿಗೆ ಕನಿಷ್ಟ ವಯೋಮಿತಿ 04 ವರ್ಷ ಮತ್ತು ಗರಿಷ್ಟ ವಯೋಮಿತಿ 06 ವರ್ಷಗಳಾಗಿದ್ದು ಮತ್ತು 01ನೇ ತರಗತಿಗೆ ಕನಿಷ್ಟ 06 ವರ್ಷ ಮತ್ತು ಗರಿಷ್ಮ 08 ವರ್ಷವೆಂದು ಆದೇಶವಾಗಿರುವಂತೆ ಮಕ್ಕಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿರುತ್ತದೆ. ಪುಸ್ತುತ ಉಲ್ಲೇಖ(11)ರ ಸರ್ಕಾರದ ಆದೇಶದಲ್ಲಿ ಶೈಕ್ಷಣಿಕ ವರ್ಷದ ಜೂನ್ 01ನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು…
ಬೆಂಗಳೂರು : ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲ್ಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ…
ಬೆಂಗಳೂರು :2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ಸೇತುಬಂಧ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಮಕ್ಕಳ ವಯೋಮಾನ ಮತ್ತು ತರಗತಿಗೆ ಅನುಗುಣವಾಗಿ ಕಲಿಕಾ ಮಟ್ಟ ಮತ್ತು ಸಾಮರ್ಥ್ಯಗಳನ್ನು ಗುರುತಿಸಿ ಮುಂದಿನ ಕಲಿಕೆಗೆ ಸಿದ್ಧಗೊಳಿಸಲು ಕಲಿತಿರುವ ಮತ್ತು ಕಲಿಯುತ್ತಿರುವ ಪರಿಕಲ್ಪನೆಗಳ ಅಂತರದ ನಡುವೆ ಸಹ ಸಂಬಂಧ ಕಲ್ಪಿಸುವುದು ಸೇತುಬಂಧ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ. 2025-26ನೇ ಸಾಲಿಗೆ 1ನೇ ತರಗತಿಗೆ (ಕಲಿ-ನಲಿ) ಶಾಲಾ ಪ್ರಾರಂಭದ ಮೊದಲ 40 ದಿನಗಳು ವಿದ್ಯಾಪ್ರವೇಶ ಹಾಗೂ 2 ರಿಂದ 10ನೇ ತರಗತಿಗಳಿಗೆ ಮೊದಲ 15 ದಿನಗಳನ್ನು ಸೇತುಬಂಧ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ 1 ರಿಂದ 10ನೇ ತರಗತಿವರೆಗೆ ತರಗತಿವಾರು ಮತ್ತು ವಿಷಯವಾರು ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಾಗೂ ಪ್ರಥಮ ಭಾಷೆಗಳಾದ ಉರ್ದು, ಮರಾಠಿ, ತೆಲುಗು ಮತ್ತು ತಮಿಳಿಗೆ ಸಂಬಂಧಿಸಿದ ಕಲಿಕಾ ಸಾಮಗ್ರಿಯು DSERT website ನಲ್ಲಿ…
ಬಿಕಾನೆರ್ : ಏಪ್ರಿಲ್ 22 ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತ 22 ನಿಮಿಷಗಳಲ್ಲಿ ಸೇಡು ತೀರಿಸಿಕೊಂಡಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜಸ್ಥಾನ ಬಿಕಾನೆರ್ನ ದೇಶ್ನೋಕ್ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ರಕ್ತದೊಂದಿಗೆ ಆಟವಾಡಿದ್ದಕ್ಕಾಗಿ ಪಾಕಿಸ್ತಾನ ಬೆಲೆ ತೆರಬೇಕಾಗುತ್ತದೆ. ಇದು ಭಾರತದ ನಿರ್ಣಯ ಮತ್ತು ಈ ನಿರ್ಣಯದಿಂದ ನಮ್ಮನ್ನು ಅಲುಗಾಡಿಸಲು ವಿಶ್ವದ ಯಾವುದೇ ಶಕ್ತಿಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪಾಕಿಸ್ತಾನದ ಸೇನೆ ಮತ್ತು ಆರ್ಥಿಕತೆಯು ಪ್ರತಿಯೊಂದು ಭಯೋತ್ಪಾದಕ ದಾಳಿಗೆ ಬೆಲೆ ತೆರಬೇಕಾಗುತ್ತದೆ… ಪಾಕಿಸ್ತಾನ ಬಿಕಾನೆರ್ನ ನಲ್ ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು, ಆದರೆ ಅವರು ಯಾವುದೇ ಹಾನಿಯನ್ನುಂಟುಮಾಡಲು ಸಾಧ್ಯವಾಗಲಿಲ್ಲ. ಪಾಕಿಸ್ತಾನದ ರಹೀಮ್ ಯಾರ್ ಖಾನ್ ವಾಯುನೆಲೆ ಗಡಿಯ ಆಚೆ ಇದೆ; ಅದು ಮತ್ತೆ ಯಾವಾಗ ಕಾರ್ಯನಿರ್ವಹಿಸುತ್ತದೆ ಎಂದು ಯಾರಿಗೂ ತಿಳಿದಿಲ್ಲ. ಅದು ಐಸಿಯುನಲ್ಲಿದೆ. ಭಾರತೀಯ ಸೇನೆಯ ದಾಳಿ ಅದನ್ನು ನಾಶಪಡಿಸಿದೆ… ಪಾಕಿಸ್ತಾನದೊಂದಿಗೆ ವ್ಯಾಪಾರ ಅಥವಾ ಮಾತುಕತೆ ಇರುವುದಿಲ್ಲ. ಪಿಒಕೆ ಕುರಿತು ಮಾತ್ರ ಮಾತುಕತೆ ಇರುತ್ತದೆ… ಪಾಕಿಸ್ತಾನಕ್ಕೆ…