Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಮೊಬೈಲ್ ಆ್ಯಪ್, ವಾಟ್ಸ್ಆ್ಯಪ್ ಚಾಟ್ಬಾಟ್, ಪೇಟಿಎಂಗಳ ಜೊತೆಗೆ, ಇನ್ನೂ ಒಂಬತ್ತು ಆ್ಯಪ್ಗಳ ಮೂಲಕ ‘ನಮ್ಮ ಮೆಟ್ರೋ’ ಪ್ರಯಾಣದ ಟಿಕೆಟ್ ಖರೀದಿಸಬಹುದು. ಇನ್ನು ಮುಂದೆ ಈಗಿರುವ ಸೌಲಭ್ಯಗಳ ಜೊತೆಗೆ ಈಸ್ ಮೈ ಟ್ರಿಪ್, ಹೈವೇ ಡಿಲೈಟ್, ಮೈಲ್ಸ್ ಆ್ಯಂಡ್ ಕಿಲೋಮೀಟರ್ಸ್ ವಯಾ ಟೆಲಿಗ್ರಾಂ, ನಮ್ಮ ಯಾತ್ರಿ, ಒನ್ ಟಿಕೆಟ್, ರ್ಯಾ ಪಿಡೊ, ರೆಡ್ ಬಸ್, ಟ್ಯುಮೊಕ್, ಯಾತ್ರಿ – ಸಿಟಿ ಟ್ರಾವೆಲ್, ಗೈಡ್ ಆ್ಯಪ್ಗಳ ಮೂಲಕವೂ ಪ್ರಯಾಣಿಕರು ‘ನಮ್ಮ ಮೆಟ್ರೋ’ದ ಕ್ಯೂಆರ್ ಕೋಡ್ ಆಧಾರಿತ ಟಿಕೆಟ್ಗಳನ್ನು ಪಡೆಯಬಹುದು.
ವಡೋದರಾ: 4 ದಶಕಗಳ ಹಳೆಯ ಸೇತುವೆ ಯೊಂದು ಕುಸಿದ ಪರಿಣಾಮ ವಾಹನ ಸಮೇತ ನದಿಗೆ ಬಿದ್ದ ಇಬ್ಬರು ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ ಭೀಕರ ಘಟನೆ ಗುಜರಾತ್ನಲ್ಲಿ ನಡೆದಿದೆ. 3 ವರ್ಷಗಳ ಹಿಂದೆ ಗುಜರಾತ್ನ ಮೋರ್ಬಿಯಲ್ಲಿ ಸೇತುವೆಯೊಂದು ಕುಸಿದು 135 ಜನರು ಸಾವನ್ನಪ್ಪಿದ್ದರು. ಅದರ ಬೆನ್ನ ಲ್ಲೇ ಈ ದುರ್ಘಟನೆ ಸಂಭವಿಸಿದೆ. ಘಟನೆ ಕುರಿತು ರಾಷ್ಟ್ರಪತಿ ದೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿಯಾಗಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳೀಯ ಆಡಳಿತ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ವಡೋದರಾ ಜಿಲ್ಲೆಯ ಪದ್ರಾದಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ ಸೇತುವೆ ಕುಸಿದಿದೆ. ರಾಜ್ಯ ಹೆದ್ದಾರಿಯ ಉದ್ದಕ್ಕೂ ಮಹಿಸಾಗರ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಸೇತುವೆ ವಡೋದರಾ ಮತ್ತು ಆನಂದ್ ಅನ್ನು ಸಂಪರ್ಕಿಸುತ್ತದೆ. ಮುಜ್ಪುರ್ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಎರಡು ಟ್ರಕ್ಗಳು, ಒಂದು ಬೊಲೆರೊ ಜೀಪ್…
ನವದೆಹಲಿ : ಒಂದೇ ಒಂದು ದಿನವೂ ಕರ್ತವ್ಯ ನಿರ್ವಹಿಸದ ಕಾನ್ಸ್ಟೆಬಲ್ ಒಬ್ಬರಿಗೆ 12 ವರ್ಷಗಳ ಕಾಲ ನಿರಂತರವಾಗಿ ಸಂಬಳ ಸಿಗುತ್ತಿತ್ತು. ಅಭಿಷೇಕ್ ಉಪಾಧ್ಯಾಯ ಎಂಬ ಈ ವ್ಯಕ್ತಿಗೆ ಯಾವುದೇ ಕೆಲಸ ಮಾಡದೆ 28 ಲಕ್ಷಕ್ಕೂ ಹೆಚ್ಚು ಸಂಬಳ ನೀಡಲಾಯಿತು. ಮಧ್ಯಪ್ರದೇಶದ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಇದು ಜನರನ್ನು ದಿಗ್ಭ್ರಮೆಗೊಳಿಸಿದೆ. ಈ ಪ್ರಕರಣವು ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸ್ ಇಲಾಖೆ 2011 ರ ಬ್ಯಾಚ್ನ ವೇತನ ಪರಿಶೀಲನೆಯನ್ನು 2023 ರಲ್ಲಿ ಪ್ರಾರಂಭಿಸಿದಾಗ ಈ ಸಂಪೂರ್ಣ ಅವ್ಯವಸ್ಥೆ ಬಹಿರಂಗವಾಯಿತು. ವಾಸ್ತವವಾಗಿ, 2011 ರಲ್ಲಿ, ಅಭಿಷೇಕ್ ಉಪಾಧ್ಯಾಯ ಅವರನ್ನು ಮಧ್ಯಪ್ರದೇಶ ಪೊಲೀಸ್ನಲ್ಲಿ ಕಾನ್ಸ್ಟೆಬಲ್ ಆಗಿ ನೇಮಕ ಮಾಡಿಕೊಳ್ಳಲಾಯಿತು. ಅವರನ್ನು ಭೋಪಾಲ್ ಪೊಲೀಸ್ ಲೈನ್ಸ್ನಲ್ಲಿ ನೇಮಕ ಮಾಡಲಾಯಿತು ಮತ್ತು ನಂತರ ಸಾಗರ್ ಪೊಲೀಸ್ ತರಬೇತಿ ಕೇಂದ್ರದಲ್ಲಿ ತರಬೇತಿಗಾಗಿ ಕಳುಹಿಸಲಾಯಿತು. ನೇಮಕಾತಿಯ ನಂತರ, ಅಭಿಷೇಕ್ ತರಬೇತಿಯನ್ನು ಪೂರ್ಣಗೊಳಿಸಲಿಲ್ಲ ಅಥವಾ ಕರ್ತವ್ಯಕ್ಕೆ ಸೇರಲಿಲ್ಲ. ಇಷ್ಟೆಲ್ಲಾ ಇದ್ದರೂ, ಅವರ ಹೆಸರು ಇಲಾಖೆಯ ದಾಖಲೆಗಳಲ್ಲಿ ಉಳಿಯಿತು ಮತ್ತು ಅವರ…
ದೇಶಾದ್ಯಂತ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್, ಕಂಪನಿಗಳು ಮತ್ತೊಮ್ಮೆ ತಮ್ಮ ರೀಚಾರ್ಜ್ ಯೋಜನೆಗಳನ್ನು ದುಬಾರಿಯನ್ನಾಗಿ ಮಾಡಲು ತಯಾರಿ ನಡೆಸುತ್ತಿವೆ. ವರದಿಯ ಪ್ರಕಾರ, ಸತತ ಐದನೇ ತಿಂಗಳು ನಿವ್ವಳ ಬಳಕೆದಾರರ ಸಂಖ್ಯೆಯಲ್ಲಿನ ಹೆಚ್ಚಳದ ನಂತರ, ಕಂಪನಿಗಳು ಸುಂಕವನ್ನು ಹೆಚ್ಚಿಸಲು ಯೋಜಿಸುತ್ತಿವೆ. ವರ್ಷದ ಅಂತ್ಯದ ವೇಳೆಗೆ ಮೊಬೈಲ್ ರೀಚಾರ್ಜ್ ದರಗಳು ಶೇಕಡಾ 10 ರಿಂದ 12 ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಜುಲೈ 2024 ರ ಆರಂಭದಲ್ಲಿ, ಟೆಲಿಕಾಂ ಕಂಪನಿಗಳು ಮೂಲ ಯೋಜನೆಗಳನ್ನು ಶೇಕಡಾ 11 ರಿಂದ 23 ರಷ್ಟು ಹೆಚ್ಚಿಸಿದ್ದವು ಎಂಬುದು ಗಮನಿಸಬೇಕಾದ ಸಂಗತಿ. ಈ ಬಾರಿ ಕಂಪನಿಗಳು ಶ್ರೇಣಿ ಆಧಾರಿತ ಯೋಜನೆಗಳನ್ನು ತರಬಹುದು ಎಂದು ತಜ್ಞರು ನಂಬುತ್ತಾರೆ, ಇದರಲ್ಲಿ ಡೇಟಾ ಮಿತಿಯನ್ನು ಕಡಿಮೆ ಮಾಡಲಾಗುತ್ತದೆ ಇದರಿಂದ ಬಳಕೆದಾರರು ಹೆಚ್ಚುವರಿ ಡೇಟಾ ಪ್ಯಾಕ್ಗಳನ್ನು ಖರೀದಿಸಬೇಕಾಗುತ್ತದೆ. ಮೇ ತಿಂಗಳಲ್ಲಿ ಹೊಸ ದಾಖಲೆ ಮೇ 2025 ರಲ್ಲಿ, ಮೊಬೈಲ್ ಸಕ್ರಿಯ ಬಳಕೆದಾರರ ಸಂಖ್ಯೆ 29 ತಿಂಗಳಲ್ಲಿ ಅತ್ಯುನ್ನತ ಮಟ್ಟವನ್ನು ತಲುಪಿತು, ಅದು ಸುಮಾರು 1.08 ಬಿಲಿಯನ್…
ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ 402 ಪಿಎಸ್ ಐ (PSI) ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಮಾತನಾಡಿದ ಸಚಿವರು, ಪೊಲೀಸ್ ಇಲಾಖೆಯಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಶೀಘ್ರವೇ 10-15 ಸಾವಿರ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಶೀಘ್ರವೇ 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತದೆ. ಮಂಗಳೂರಿನ ಎಸ್ ಪಿ ಕಚೇರಿ ಪುತ್ತೂರಿಗೆ ವರ್ಗಾಯಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.
ನವದೆಹಲಿ : ದೇವಾಲಯದ ಆಸ್ತಿಗೆ ಸಂಬಂಧಿಸಿದಂತೆ ಛತ್ತೀಸ್ಗಢ ಹೈಕೋರ್ಟ್ ಮಹತ್ವದ ತೀರ್ಪಿನಲ್ಲಿ ಅರ್ಚಕರನ್ನು ದೇವಾಲಯದ ಆಸ್ತಿಯ ಮಾಲೀಕರೆಂದು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಅರ್ಚಕರು ದೇವರನ್ನು ಪೂಜಿಸಲು ಮತ್ತು ದೇವಾಲಯದ ಸೀಮಿತ ನಿರ್ವಹಣೆಯನ್ನು ಮಾಡಲು ನೇಮಕಗೊಂಡ ಪ್ರತಿನಿಧಿ ಮಾತ್ರ, ಮಾಲೀಕರಲ್ಲ ಎಂದು ನ್ಯಾಯಾಲಯ ಹೇಳಿದೆ. ಧಮತರಿ ಜಿಲ್ಲೆಯ ಶ್ರೀ ವಿಂಧ್ಯವಾಸಿನಿ ಮಾ ಬಿಲೈಮಾತಾ ದೇವಾಲಯದ ಅರ್ಚಕ ಮಂಡಳಿಯ ಅಧ್ಯಕ್ಷ ಮುರಳಿ ಮನೋಹರ್ ಶರ್ಮಾ ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ಬಿಭು ದತ್ತ ಗುರು ಅವರ ಏಕ ಪೀಠವು ಈ ತೀರ್ಪು ನೀಡಿದೆ. ಶರ್ಮಾ ಅವರು ಅಕ್ಟೋಬರ್ 3, 2015 ರಂದು ಬಿಲಾಸ್ಪುರದ ಕಂದಾಯ ಮಂಡಳಿಯ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು, ಅದರಲ್ಲಿ ಅವರ ಪರಿಷ್ಕರಣಾ ಅರ್ಜಿಯನ್ನು ತಿರಸ್ಕರಿಸಲಾಯಿತು. ಮುರಳಿ ಮನೋಹರ್ ಶರ್ಮಾ ತಹಶೀಲ್ದಾರ್ ಮುಂದೆ ಅರ್ಜಿ ಸಲ್ಲಿಸಿ ದೇವಾಲಯದ ಟ್ರಸ್ಟ್ನ ದಾಖಲೆಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಲು ಒತ್ತಾಯಿಸಿದಾಗ ವಿವಾದ ಪ್ರಾರಂಭವಾಯಿತು. ತಹಶೀಲ್ದಾರ್ ಅವರ ಪರವಾಗಿ ಆದೇಶ ಹೊರಡಿಸಿದರು, ಆದರೆ ಉಪ-ವಿಭಾಗೀಯ ಅಧಿಕಾರಿ ಈ ಆದೇಶವನ್ನು…
ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಫಲಾನುಭವಿಗಳ ನೋಂದಣಿಗಾಗಿ ವಿಶೇಷ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ. ಈ ಸಂಬಂಧ 2023, 2024 ಹಾಗೂ 2025ನೇ ವರ್ಷದಲ್ಲಿ ಪದವಿ ಮತ್ತು ಡಿಪ್ಲೋಮಾ ತೇರ್ಗಡೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ಯುವನಿಧಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊಳ್ಳಲು ಸೇವಾಸಿಂಧು ಪೋರ್ಟಲ್ http://sevasindhugs.karnataka.gov.in ನಲ್ಲಿ ಆಗಸ್ಟ್ 7 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಜಿಲ್ಲೆಯ ಎಲ್ಲಾ ವಿಶ್ವವಿದ್ಯಾಲಯಗಳು, ಸರಕಾರಿ ಮತ್ತು ಅನುದಾನಿತ ಪದವಿ ಹಾಗೂ ಡಿಪ್ಲೋಮಾ ಕಾಲೇಜುಗಳಲ್ಲಿ, ತಾಲ್ಲೂಕು ಕಛೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಪದವೀಧರರಿಗೆ ಪ್ರತಿ ತಿಂಗಳು ರೂ. 3000/- ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ. 1500/- ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ. ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿ, ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಂತರ ಮಾಹೆವಾರು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಪ್ರತಿ ತಿಂಗಳು 25ನೇ ದಿನಾಂಕದೊಳಗಾಗಿ ತಾನು…
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಜುಲೈ 12 ರಂದು ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಕೆ.ವೇಲಾ ತಿಳಿಸಿದರು. ಅವರು ಬುಧವಾರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಲೋಕ್ ಅದಾಲತ್ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜಿ, ಸಂಧಾನ ನಡೆಸಲು ನ್ಯಾಯಾಂಗ ಇಲಾಖೆ ಮತ್ತು ವಕೀಲರ ಕಡೆಯಿಂದಲೂ ಪ್ರತ್ಯೇಕವಾಗಿ ಮಧ್ಯಸ್ಥಗಾರರು ಇರುವರು. ರಾಜಿ, ಸಂಧಾನ ನಡೆಸುವ ಅಧಿಕಾರವನ್ನು ಕಾನ್ಸಿಲೇಟರ್ಗಡಳಿಗೆ ನೀಡಲಾಗಿರುತ್ತದೆ. ಅದಾಲತ್ನಿಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ತೆಗೆದುಕೊಳ್ಳಲಾಗುತ್ತದೆ. ಅದಾಲತ್ನಗಲ್ಲಿ ಇತ್ಯರ್ಥವಾಗುವ ಪ್ರಕರಣಗಳು ನ್ಯಾಯಾಲಯದಲ್ಲಿನ ತೀರ್ಪುಗಳಂತೆ ಇರುತ್ತದೆ. ಅದಾಲತ್ನುಲ್ಲಿ ಇತ್ಯರ್ಥ ಮಾಡಿಕೊಂಡಲ್ಲಿ ಮತ್ತೆ ಅಪೀಲು ಹೋಗಲು ಅವಕಾಶ ಇರುವುದಿಲ್ಲ ಎಂದರು. ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ…
ಬೆಂಗಳೂರು : ವಿದ್ಯುತ್ ಸಂಪರ್ಕಕ್ಕೆ ಕಾಯುತ್ತಿರುವ 4 ಲಕ್ಷ ಬಡ, ಮಧ್ಯಮ ವರ್ಗದವರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಮನೆ, ಕಟ್ಟಡಗಳಿಗೆ ಕೂಡಲೇ ವಿದ್ಯುತ್ ನೀಡಲು ನ್ಯಾ. ನಾಗಮೋಹನದಾಸ್ ಆಯೋಗ ಶಿಫಾರಸು ಮಾಡಿದೆ. ಹೌದು, ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿರುವ ಮೂರರಿಂದ ನಾಲ್ಕು ಲಕ್ಷ ಬಡ, ಮಧ್ಯಮ ವರ್ಗದ ಕುಟುಂಬದವರಿಗೆ ತೊಂದರೆಯಾಗಿದ್ದು, ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳುವಂತೆ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಆಯೋಗ ಶಿಫಾರಸು ಮಾಡಿದೆ. ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ವತಿಯಿಂದ ಆಯೋಗಕ್ಕೆ ಈ ಕುರಿತು ಮನವಿ ಸಲ್ಲಿಸಲಾಗಿದ್ದು, ಮನವಿಗೆ ಸ್ಪಂದಿಸಿದ ಆಯೋಗ ಸಿಎಂ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಸಂಬಂಧಿಸಿದವರಿಗೆ ಪತ್ರ ಬರೆದಿದ್ದು, ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಎಸ್ಕಾಂಗಳು ಏಪ್ರಿಲ್ 4ರಿಂದ ಮನೆ, ವಾಣಿಜ್ಯ ಕಟ್ಟಡ, ಕೈಗಾರಿಕೆಗಳು ಸೇರಿ ಎಲ್ಲರಿಗೂ ತಾತ್ಕಾಲಿಕ, ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ, ಸಿಸಿ ಕಡ್ಡಾಯಗೊಳಿಸುತ್ತಿವೆ. ಇದರಿಂದ ಬಡವರಿಗೆ ವಿಶೇಷವಾಗಿ ಮಕ್ಕಳ ಶಿಕ್ಷಣ, ಗ್ರಾಮೀಣ…
ಬೆಂಗಳೂರು: ಗೋಲ್ಡನ್ ಸ್ಟಾರ್ಗಣೇಶ್ ತಮ್ಮ ನಟನೆಯ ‘ನಿದ್ರಾದೇವಿ ನೆಕ್ಸ್ ಡೋರ್’ ಚಿತ್ರದಿಂದ ಕನ್ನಡದ ಬಗ್ಗೆ ಆಕ್ಷೇಪಾರ್ಹ ಮಾತು ಆಡಿದ ಗಾಯಕ ಸೋನು ನಿಗಂ ಹಾಡಿದ ಗೀತೆ ತೆಗೆಯಲು ಸೂಚಿಸಿದ್ದಾರೆ. ‘ನಿದ್ರಾದೇವಿ ನೆಕ್ ಡೋರ್’ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ಈ ಸಿನಿಮಾದಲ್ಲಿರುವ ಸೋನು ನಿಗಮ್ ಹಾಡು ತೆಗೆದು ಹಾಕುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಗಣೇಶ್, ‘ಈ ಹಾಡಿನಲ್ಲಿ ನಾನೇ ನಟಿಸಿದ್ದರೂ ಪ್ರಾಮಾಣಿಕವಾಗಿ ಈ ಪ್ರಶ್ನೆ ಕೇಳುತ್ತಿದ್ದೆ. ನಮ್ಮಿಂದಲ್ಲ ಭಾಷೆ, ಭಾಷೆಯಿಂದ ನಾವು. ಭಾಷೆ ಉಳಿದರಷ್ಟೇ ನಾವು. ಭಾಷೆಯೇ ಇಲ್ಲಾಂದ್ರೆ ನಾವು ಏನು ಮಾಡೋದಕ್ಕಾಗುತ್ತೆ. ನಮ್ಮ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ನಮ್ಮಂಥವರು ಸಾವಿರಾರು ಜನ ಬಂದು ಹೋಗ್ತಾರೆ, ಆದರೆ ಉಳಿಯೋದು ಭಾಷೆ ಒಂದೇ. ಭಾಷೆಯನ್ನು ಬೆಳೆಸುತ್ತೇವೆ ಅನ್ನೋದಲ್ಲ, ಇರುವ ಭಾಷೆಯನ್ನು ಉಳಿಸಿಕೊಂಡು ಹೋಗಬೇಕು’ ಎಂಬ ಮಾತನ್ನು ಹೇಳಿದ್ದಾರೆ. ‘ಭಾಷೆನೇ ಇಲ್ಲಾಂದ್ರೆ ನಾವೇನು ಮಾಡೋಕಾಗುತ್ತೆ? ಸಾವಿರಾರು ವರ್ಷಗಳ ಇತಿಹಾಸ ಇದೆ. ಅದರಿಂದ ನಾವಷ್ಟೇ, ನಮ್ಮಿಂದ…