Author: kannadanewsnow57

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವಂತ ಶಿಕ್ಷಕರಿಗೆ ಗುಡ್ ನ್ಯೂಸ್ ಅನ್ನು ಸಚಿವ ಮಧು ಬಂಗಾರಪ್ಪ ನೀಡಿದ್ದಾರೆ. ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು. ಅತಿಥಿ ಶಿಕ್ಷಕರು / ಉಪನ್ಯಾಸಕರ ಬದಲಾಗಿ ಅರೆಕಾಲಿಕ ಶಿಕ್ಷಕರ ನೇಮಕ ಮಾಡುವ ಪ್ರಸ್ತಾವನೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು. ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ 2025 ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಎಸ್.ಮಧು ಬಂಗಾರಪ್ಪ ಬೆಳಗಾವಿ ಸುವರ್ಣವಿಧಾನಸೌಧ : ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜೇಷ್ಠತಾ ಪಟ್ಟಿ ಸಿದ್ದಪಡಿಸಿ,…

Read More

ನವದೆಹಲಿ : ಹೊಸ ವರ್ಷಕ್ಕೆ ಕಾರು ಖರೀದಿಸುವವರಿಗೆ ಮಾರುತಿ ಸುಜುಕಿ ಬಿಗ್ ಶಾಕ್ ನೀಡಿದ್ದು, ಹೆಚ್ಚುತ್ತಿರುವ ಇನ್‌ಪುಟ್ ವೆಚ್ಚವನ್ನು ಸರಿದೂಗಿಸಲು ಮಾರುತಿ ಸುಜುಕಿ ಡಿಸೆಂಬರ್ 6 ರಂದು ತನ್ನ ಕಾರುಗಳ ಬೆಲೆಗಳನ್ನು ಜನವರಿ 2025 ರಿಂದ ಶೇಕಡಾ 4 ರಷ್ಟು ಹೆಚ್ಚಿಸುವುದಾಗಿ ಘೋಷಿಸಿತು. ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಮತ್ತು ನಿರ್ವಹಣಾ ವೆಚ್ಚವನ್ನು ಗಮನದಲ್ಲಿಟ್ಟುಕೊಂಡು, ಕಂಪನಿಯು ತನ್ನ ಕಾರುಗಳ ಬೆಲೆಯನ್ನು ಜನವರಿ 2025 ರಿಂದ ಹೆಚ್ಚಿಸಲು ನಿರ್ಧರಿಸಿದೆ ಎಂದು ಕಂಪನಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಬೆಲೆಗಳು 4 ಪ್ರತಿಶತದಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಮತ್ತು ಮಾದರಿಯನ್ನು ಅವಲಂಬಿಸಿ ಬದಲಾಗುತ್ತದೆ. ಗ್ರಾಹಕರ ಮೇಲೆ ವೆಚ್ಚದ ಹೆಚ್ಚಳದ ಪರಿಣಾಮವನ್ನು ಕಡಿಮೆ ಮಾಡಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕಂಪನಿಯು ಹೇಳಿದೆ. ಆದಾಗ್ಯೂ, ಹೆಚ್ಚಿದ ವೆಚ್ಚದ ಕೆಲವು ಭಾಗವನ್ನು ಈಗ ಮಾರುಕಟ್ಟೆಗೆ ವರ್ಗಾಯಿಸಬೇಕಾಗಬಹುದು. ಭಾರತದ ಈ ಅತಿದೊಡ್ಡ ಕಾರು ತಯಾರಕರ ಷೇರುಗಳು ಡಿಸೆಂಬರ್ 6 ರಂದು ಮಧ್ಯಾಹ್ನ 12:06 ಕ್ಕೆ 0.58 ಶೇಕಡಾ ಏರಿಕೆಯಾಗಿ 11,246.9 ರೂ. ಇನ್ಪುಟ್…

Read More

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಸೋಮವಾರ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ವಿಶ್ವದ ಮೊದಲ ಸಂಸತ್ತು ಖ್ಯಾತಿಯ ‘ಅನುಭವ ಮಂಟಪದ’ ಬೃಹತ್ ತೈಲವರ್ಣ ಚಿತ್ರದ ಅನಾವರಣಗೊಳಿಸಿದರು. 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ಸಂಸದೀಯ ಪ್ರಜಾಪ್ರಭುತ್ವದ ಬುನಾದಿ ಎಂದು ಕರೆಯಲಾಗಿದೆ. ಸುವರ್ಣ‌ಸೌಧದಲ್ಲಿ ಅನುಭವ ಮಂಟಪದ ತೈಲವರ್ಣ ಚಿತ್ರವನ್ನು ಆಕರ್ಷಕವಾಗಿ ಚಿತ್ರಿಸಲಾಗಿದೆ. ಈ ವೇಳೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನಸಭಾ ಪರಿಷತ್ ನ ಸಭಾಪತಿ ಬಸವರಾಜ ಹೊರಟ್ಟಿ, ಉಪ ಸಭಾಪತಿ ರುದ್ರಪ್ಪ‌ ಲಮಾಣಿ, ಸಚಿವರಾದ ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಸತೀಶ್ ಜಾರಕಿಹೊಳಿ, ಚಲುವರಾಯ ಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Read More

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವನ್ನು ಮಧ್ಯಾಹ್ನ 2.30 ಗಂಟೆಗೆ ಮುಂದೂಡಲಾಗಿದೆ. ಸ್ಪೀಕರ್ ಯುಟಿ ಖಾದರ್ ವಿಧಾನಸಭೆ ಕಲಾಪವನ್ನು ಇಂದು ಮಧ್ಯಾಹ್ನ 2:30 ಕ್ಕೆ ಮುಂದೂಡಿದ್ದಾರೆ.ವಕ್ಪ್ ವಿಚಾರದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಆಗ್ರಹಿಸಿದ್ದು, ಸ್ಪೀಕರ್ ಮಧ್ಯಾಹ್ನ 2:30 ಕ್ಕೆ ಕಲಾಪ ಮುಂದೂಡಿದ್ದಾರೆ.

Read More

ಮಕ್ಕಳ ಸರ್ವಾಂಗೀಣ ಬೆಳವಣಿಗೆಯನ್ನು ಜಂತುಹುಳು ಕುಂಠಿತಗೊಳಿಸುತ್ತಿದ್ದು ಜಿಲ್ಲೆಯಲ್ಲಿ 1 ವರ್ಷದಿಂದ 19 ವರ್ಷದ ಎಲ್ಲ ಮಕ್ಕಳು ಜಂತುಹುಳು ನಿವಾರಣಾ ಮಾತ್ರೆ ತೆಗೆದುಕೊಳ್ಳುವ ಮೂಲಕ ಜಂತು ಹುಳು ನಿವಾರಣೆಗೆ ಸಹಕರಿಸಬೇಕು ಎಂದು ಡಿಹೆಚ್‌ಒ ಡಾ.ನಟರಾಜ್.ಕೆ.ಎಸ್, ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟಿçÃಯ ಆರೋಗ್ಯ ಅಭಿಯಾನ, ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ. ಪದವಿಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ರೋಟರಿ ಪೂರ್ವ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ರೋಟರಿ ಪೂರ್ವ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಉದ್ಘಾಟಿಸಿ ಮಾತನಾಡಿದರು.  ಮಕ್ಕಳೆಲ್ಲ ಇಂದು ಜಂತುಹುಳು ನಿವಾರಣಾ ಮಾತ್ರೆ ಆಲ್ಬೆಂಡಜೋಲ್‌ನ್ನು ಶಿಕ್ಷಕರಿಂದ ಪಡೆದು, ಜಗಿದು ನುಂಗಬೇಕು. 1 ವರ್ಷದಿಂದ 2 ವರ್ಷದೊಳಗಿನ ಮಕ್ಕಳಿಗೆ ಅರ್ಧ ಮಾತ್ರೆ(ಪುಡಿ ಮಾಡಿ) ಮತ್ತು 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ 1…

Read More

ಉದ್ಯೋಗಗಳನ್ನು ಬದಲಾಯಿಸಿದ ನಂತರ, ಹಳೆಯ ಕಂಪನಿಯಿಂದ ಹೊಸ ಕಂಪನಿಗೆ ಉದ್ಯೋಗಿ ಭವಿಷ್ಯ ನಿಧಿ (EPF) ಬ್ಯಾಲೆನ್ಸ್ ಅನ್ನು ವರ್ಗಾಯಿಸುವುದು ಒಂದು ಪ್ರಮುಖ ಕಾರ್ಯವಾಗಿದೆ. ನೀವು ದೀರ್ಘಕಾಲದವರೆಗೆ ಪಿಎಫ್ ಬ್ಯಾಲೆನ್ಸ್ ಅನ್ನು ವರ್ಗಾಯಿಸದಿದ್ದರೆ, ನಿಮ್ಮ ಇಪಿಎಫ್ ಖಾತೆ ನಿಷ್ಕ್ರಿಯವಾಗುತ್ತದೆ. ಅಂದರೆ, ಅದು ಸಕ್ರಿಯವಾಗಿ ಉಳಿಯುವುದಿಲ್ಲ ಮತ್ತು ಕೆಲವು ವರ್ಷಗಳ ನಂತರ ಅದರ ಮೇಲಿನ ಆಸಕ್ತಿಯೂ ನಿಲ್ಲುತ್ತದೆ. ಈ ಎಲ್ಲಾ ಸಮಸ್ಯೆಗಳನ್ನು ತಪ್ಪಿಸಲು ಮತ್ತು ಪಿಎಫ್ ಮೇಲಿನ ಬಡ್ಡಿಯನ್ನು ಗಳಿಸಲು, ಉದ್ಯೋಗಗಳನ್ನು ಬದಲಾಯಿಸಿದ ನಂತರ ನಿಮ್ಮ ಇಪಿಎಫ್ ಬ್ಯಾಲೆನ್ಸ್ ಅನ್ನು ಆದಷ್ಟು ಬೇಗ ವರ್ಗಾಯಿಸುವುದು ಮುಖ್ಯವಾಗಿದೆ. ಇಪಿಎಫ್ ಖಾತೆಯಲ್ಲಿ ‘ಎಕ್ಸಿಟ್ ದಿನಾಂಕ’ ಅಪ್‌ಡೇಟ್ ಮಾಡದೆಯೇ ಪಿಎಫ್ ವರ್ಗಾವಣೆ ಮಾಡಬಹುದೇ? ಉದ್ಯೋಗಿ ಭವಿಷ್ಯ ನಿಧಿ ಸಂಘಟನೆಯ ಪ್ರಕಾರ ಇಪಿಎಫ್‌ಒ, ಇಪಿಎಫ್ ಬ್ಯಾಲೆನ್ಸ್ ಅನ್ನು ವರ್ಗಾಯಿಸಲು, ನಿರ್ಗಮನ ದಿನಾಂಕವನ್ನು ಅಂದರೆ ಹಳೆಯ ಉದ್ಯೋಗದಾತರೊಂದಿಗೆ ಅಂದರೆ ಕಂಪನಿಯೊಂದಿಗೆ ಕೆಲಸವನ್ನು ತೊರೆಯುವ ದಿನಾಂಕವನ್ನು ನವೀಕರಿಸುವುದು ಕಡ್ಡಾಯವಾಗಿದೆ. ಇದು ಇಲ್ಲದೆ, ಪಿಎಫ್ ವರ್ಗಾಯಿಸಲು ಸಾಧ್ಯವಿಲ್ಲ. EPFO ನಿಯಮಗಳು ಆನ್‌ಲೈನ್ ವರ್ಗಾವಣೆಗಾಗಿ, ನಿಮ್ಮ…

Read More

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಚಳಿಗಾಲದ ಅಧಿವೇಸನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಂಧಿ ಭಾರತ ಲಾಂಚನವನ್ನು ಅನಾವರಣಗೊಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು, ‘ಗಾಂಧಿ ಭಾರತ’ ಲಾಂಚನವನ್ನು ಅನಾವರಣ ಮಾಡಿದರು. . ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್, ಸ್ಪೀಕರ್ ಯು.ಟಿ ಖಾದರ್, ಸಚಿವರಾದ H.K.ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವರಾದ ಬಸವರಾಜ ರಾಯರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ನವದೆಹಲಿ : IRCTC ಸೈಟ್ ಇಂದು ಬೆಳಿಗ್ಗೆ ಹಠಾತ್ತನೆ ಸ್ಥಗಿತಗೊಂಡಿತು. ಇದರಿಂದಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಟಿಕೆಟ್‌ಗಳನ್ನು ಮಾಡಲಾಗುತ್ತಿಲ್ಲ. ದೇಶಾದ್ಯಂತ ಲಕ್ಷಾಂತರ ಪ್ರಯಾಣಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ತತ್ಕಾಲ್ ಟಿಕೆಟ್‌ನಲ್ಲಿ ಪ್ರಯಾಣಿಸುವವರು ಮಂಗಳವಾರ ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರೈಲ್ವೇ ಪ್ರಕಾರ, ಐಆರ್‌ಸಿಟಿಸಿ ಸೈಟ್ ಬೆಳಿಗ್ಗೆ 10 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿತು. ಆನ್‌ಲೈನ್ ಮತ್ತು ಆಫ್‌ಲೈನ್ ಟಿಕೆಟ್ ತಯಾರಿಕೆಯನ್ನು ನಿಲ್ಲಿಸಲಾಗಿದೆ. ಇದರಿಂದಾಗಿ ರೈಲು ನಿಲ್ದಾಣಗಳಲ್ಲಿ ಕಿಟಕಿಗಳ ಮೇಲೆ ಉದ್ದವಾದ ಸಾಲುಗಳು ಉಂಟಾಗಿವೆ. ಹೆಚ್ಚಾಗಿ ತತ್ಕಾಲ್ ಟಿಕೆಟ್ ತೆಗೆದುಕೊಳ್ಳುವ ಪ್ರಯಾಣಿಕರು ಮಾತ್ರ ಕಿಟಕಿಯನ್ನು ತಲುಪುತ್ತಿದ್ದಾರೆ, ಅವರು ಮಂಗಳವಾರ ಪ್ರಯಾಣಿಸಬೇಕಾಗಿದೆ. ಏಕೆಂದರೆ ಎಸಿ ತತ್ಕಾಲ್ ಟಿಕೆಟ್‌ಗಳನ್ನು ಬೆಳಿಗ್ಗೆ 10 ಗಂಟೆಗೆ ಮತ್ತು ನಾನ್ ಎಸಿ ತತ್ಕಾಲ್ ಟಿಕೆಟ್‌ಗಳನ್ನು ಬೆಳಿಗ್ಗೆ 11 ಗಂಟೆಗೆ ಕಾಯ್ದಿರಿಸಲಾಗುತ್ತದೆ. ಸೈಟ್ ಡೌನ್ ಆಗಿರುವುದರಿಂದ ಮಂಗಳವಾರ ಪ್ರಯಾಣಿಸುವ ಪ್ರಯಾಣಿಕರಿಗೆ ತತ್ಕಾಲ್ ಟಿಕೆಟ್ ಕಾಯ್ದಿರಿಸಲು ಸಾಧ್ಯವಾಗಲಿಲ್ಲ. https://twitter.com/Sharad9Dubey/status/1866002519002079514?ref_src=twsrc%5Etfw%7Ctwcamp%5Etweetembed%7Ctwterm%5E1866002519002079514%7Ctwgr%5E1a1d8145384310e695e1a506046c033ae470d950%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fbreaking-icrtc-server-down-passengers-rush-to-book-railway-tickets%2F ಇದು ಯಾವಾಗ ಪ್ರಾರಂಭವಾಗುತ್ತದೆ?  ರೈಲ್ವೆ ಪ್ರಕಾರ, ತಾಂತ್ರಿಕ ಕಾರಣಗಳಿಂದ ಸೈಟ್ ಸ್ಥಗಿತಗೊಂಡಿದೆ. ಈ ತಾಂತ್ರಿಕ ದೋಷಕ್ಕೆ…

Read More

ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ/ ವಿಡಿಯೋ ಮಾಡದಂತೆ ನಿಷೇಧಿಸಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸ್ ಪಡೆದಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ರಾಜ್ಯ ಸರ್ಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವೀಡಿಯೋ ಮಾಡದಂತೆ ನಿಷೇಧಿಸಿರುವ ಕುರಿತು ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ. ಮೇಲೇ ಓದಲಾದ ಸರ್ಕಾರದ ಆದೇಶವನ್ನು ಪುನಃ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶ ಮಾಡಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 40(ಆಸು) ಕತವ 2022 (ಬಾಗ-1) ಬೆಂಗಳೂರು ದಿನಾಂಕ 15/7/2022 ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ (ಆಸು) 40 ಕತವ 2022 ಬೆಂಗಳೂರು ದಿನಾಂಕ: 15/7/2022 ವನ್ನು ತಕ್ಷಣದಿಂದ ಹಿಂಪಡೆಯಲಾಗಿದೆ.

Read More

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಚಳಿಗಾಲದ ಅದಿವೇಶನ ಆರಂಭವಾಗಿದ್ದು, ಮಹಾಮೇಳಾವ್ ನಡೆಸಲು ಮುಂದಾಗಿದ್ದ ನಾಡದ್ರೋಹಿ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಎಂಇಎಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಮಹಾಮೇಳಾವ್ ನಡೆಸಲು ಧರ್ಮವೀರ ಸಂಭಾಜಿ ವೃತ್ತದತ್ತ ಆಗಮಿಸುತ್ತಿದ್ದರು. ನಿಷೇಧದ ನಡುವೆಯೂ ಮಹಾಮೇಳಾವ್ ಗೆ ಎಂಇಎಸ್ ಮುಂದಾಗಿದ್ದ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಎಂಇಎಸ್ ನಾಯಕರಾದ ಮನೋಹರ ಕಿಣೇಕರ, ಆರ್ ಎಂ. ಪಾಟೀಲ್, ಪ್ರಕಾಶ ಶಿರೋಲಕರ್, ಪ್ರಕಾಶ ಮರ್ಕಾಳೆ ಸೇರಿ 20ಕ್ಕೂ ಹೆಚ್ಚು ನಾಯಕರನ್ನು ವಶಕ್ಕೆ ಪಡೆದುಕೊಂಡಿದೆ. ಬೆಳಗಾವಿಯಲ್ಲಿ ಅಧಿವೇಶನದ ವೇಳೆ ಎಂಇಎಸ್ ಮಹಾಮೇಳಾವ್ ಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅವಕಾಶ ನೀಡಿಲ್ಲ. ಎಂಇಎಸ್ ಕಾರ್ಯಕರ್ತರು ಸಂಭಾಜಿ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Read More