Author: kannadanewsnow57

ಬೆಂಗಳೂರು : ಬರದಿಂದ ತತ್ತರಿಸಿರುವ ರಾಜ್ಯದ ಅನ್ನದಾತರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೇಂದ್ರದಿಂದ ಬಿಡುಗಡೆಯಾಗಿರುವ ಬರ ಪರಿಹಾರ ಹಣದಲ್ಲಿ 2,425 ಕೋಟಿ ರು. ಹಣವನ್ನು 27.38 ಲಕ್ಷ ರೈತರಿಗೆ ಅರ್ಹತೆಗೆ ಅನುಗುಣವಾಗಿ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ವರ್ಗಾವಣೆ ಮಾಡಲಾಗಿದೆ. 2-3 ದಿನಗಳಲ್ಲಿ ಎಲ್ಲ ರೈತರ ಖಾತೆಗಳಿಗೆ ಪರಿಹಾರ ಮೊತ್ತ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, 2023ರ ಮುಂಗಾರು ಬೆಳೆ ಹಾನಿ ಬರ ಪರಿಹಾರ ವಿತರಣೆಗೆ ಎಲ್ಲ ರೀತಿಯ ಕ್ರಮಗಳನ್ನು ಪೂರ್ಣಗೊಳಿಸಲಾಗಿದೆ. ಸೋಮವಾರವೇ ರೈತರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಲಾಗಿದೆ. ಆರ್ ಬಿಐನಿಂದ ರೈತರ ಖಾತೆಗೆ ವರ್ಗಾಯಿಸಲು 48 ಗಂಟೆ ಸಮಯ ಅಗತ್ಯ. ಹೀಗಾಗಿ ಎರಡು ಮೂರು ದಿನದಲ್ಲಿ ಎಲ್ಲರಿಗೂ ಹಣ ತಲುಪಲಿದೆ ಎಂದು ಹೇಳಿದ್ದಾರೆ. 2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರಿಗೆ ಬೆಳೆಹಾನಿ ಪರಿಹಾರದ ಮೊದಲನೇ ಕಂತಾಗಿ…

Read More

ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ.7 ರ ಇಂದು ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತದಾನ ದಿನದಂದು ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ3(ಎ) ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆ ಕಲಂ135(ಬಿ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ. ಇದಕ್ಕೆ ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಸದರಿ ದಿನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕೆಂದು ಅವರು ತಿಳಿಸಲಾಗಿದೆ. ಈ ಜಿಲ್ಲೆಗಳಲ್ಲಿ ರಜೆ ಘೋಷಣೆ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್,…

Read More

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಕುರಿತು ಪರೀಕ್ಷಾ ಮಂಡಳಿ ಹೊಸ ಅಪ್ ಡೇಟ್ ನೀಡಿದ್ದು, ಫಲಿತಾಂಶ ಮೇ. 9 ಅಥವಾ 10 ರಂದು ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ರಾಜ್ಯದಲ್ಲಿ ನಾಳೆ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ವಿಳಂಬವಾಗಿದ್ದು, ಮೇ 9 ಅಥವಾ 10 ರಂದು ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. 2024ನೇ ಸಾಲಿನ ಎಸ್ ಎಸ್ ಎಲ್ಲಿ ಪರೀಕ್ಷೆಯಲ್ಲಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು 41,375 ಮರು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಿರ್ಣ ಪ್ರಮಾಣದಲ್ಲಿ ವರ್ಷದಿಂದ ವರ್ಷಕ್ಕೆ ದಾಖಲೆ ಬರೆಯುತ್ತಿದ್ದ ಫಲಿತಾಂಶವು ಈ ಬಾರಿ ಕುಸಿತ ಕಾಣುವ ಸಾಧ್ಯತೆ ಇದೆ.…

Read More

ಬೆಂಗಳೂರು : ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತದಾನವು ಇಂದು ಬೆಳಿಗ್ಗೆ 7 ರಿಂದ ಸಾಯಂಕಾಲ 6 ಗಂಟೆ ವರೆಗೂ ನಡೆಯಲಿದ್ದು, ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ. 200 ಮೀಟರ್ ವ್ಯಾಪ್ತಿಯಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಮತದಾನ ಶಾಂತಿಯುತ ಮತ್ತು ಸುಸೂತ್ರವಾಗಿ ನಡೆಯುವಂತೆ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ. 144 ಜಾರಿಗೊಳಿಸಿದ್ದು, ಚುನಾವಣಾ ಸಿಬ್ಬಂದಿ ಹೊರತುಪಡಿಸಿ 5 ಜನಕ್ಕಿಂತ ಹೆಚ್ಚು ಗುಂಪಾಗಿ ಸೇರುವಂತಿಲ್ಲ. ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ-1993ರ ನಿಯಮ 36 ರನ್ವಯ ಮತದಾನ ದಿನದಂದು ಸಂತೆ, ಜಾತ್ರೆ, ಉತ್ಸವ ಹಾಗೂ ಉರುಸ್‍ಗಳನ್ನು ಸಹ ನಿಷೇಧಿಸಲಾಗಿದೆ. ಮತದಾನ ದಿನದಂದು ರಾಜಕೀಯ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತದಾರರನ್ನು ವಾಹನದಲ್ಲಿ ಕೂರಿಸಿಕೊಂಡು ಮತಗಟ್ಟೆಗೆ ತರುವುದಾಗಲಿ ಅಥವಾ ಮತಗಟ್ಟೆಯಿಂದ ಮನೆಗೆ ಬಿಡುವಂತ ಯಾವುದೇ ಸೇವೆ ನೀಡುವಂತಿಲ್ಲ. ಇದನ್ನು ಉಲ್ಲಂಘಿಸಿದಲ್ಲಿ…

Read More

ನವದೆಹಲಿ:ಕಂಪನಿಯು ತನ್ನ ಸಿಒಒ ಮತ್ತು ಅಧ್ಯಕ್ಷ ಭವೇಶ್ ಗುಪ್ತಾ ಅವರ ರಾಜೀನಾಮೆಯನ್ನು ಘೋಷಿಸಿದ ನಂತರ ಪೇಟಿಎಂ ಷೇರುಗಳು ಇಂದು (ಮೇ 6) ಶೇಕಡಾ 4.5 ಕ್ಕಿಂತ ಹೆಚ್ಚು ಕುಸಿದವು. ಬೆಳಿಗ್ಗೆ 9:38 ಕ್ಕೆ, ಪೇಟಿಎಂ ಷೇರುಗಳು ಎನ್ಎಸ್ಇಯಲ್ಲಿ ಶೇಕಡಾ 3.8 ರಷ್ಟು ಕುಸಿದು 355.25 ರೂ.ಗೆ ವಹಿವಾಟು ನಡೆಸುತ್ತಿವೆ. ಈ ವರ್ಷ, ಷೇರು ಇಲ್ಲಿಯವರೆಗೆ ಶೇಕಡಾ 45 ರಷ್ಟು ಕುಸಿದಿದೆ ಮತ್ತು ಬೆಂಚ್ಮಾರ್ಕ್ ನಿಫ್ಟಿಯಲ್ಲಿ ಗಮನಾರ್ಹವಾಗಿ ಕಳಪೆ ಪ್ರದರ್ಶನ ನೀಡಿದೆ, ಇದು ಈ ಅವಧಿಯಲ್ಲಿ ಸುಮಾರು 4 ಪ್ರತಿಶತದಷ್ಟು ಏರಿಕೆಯಾಗಿದೆ. ಭವೇಶ್ ಗುಪ್ತಾ ರಾಜೀನಾಮೆ ಭವೇಶ್ ಗುಪ್ತಾ ಅವರು ಬರೆದ ಪತ್ರದಲ್ಲಿ, ಕಂಪನಿಯ ಫೈಲಿಂಗ್ ಪ್ರಕಾರ, ಅವರ ರಾಜೀನಾಮೆ ಮೇ 31 ರಿಂದ ಜಾರಿಗೆ ಬರಲಿದೆ, ಆದರೆ ಅವರು ಮುಖ್ಯ ಕಾರ್ಯನಿರ್ವಾಹಕ ಕಚೇರಿಯಲ್ಲಿ ಸಲಹಾ ಸಾಮರ್ಥ್ಯದಲ್ಲಿ ಕಂಪನಿಯನ್ನು ಬೆಂಬಲಿಸುವುದನ್ನು ಮುಂದುವರಿಸಿದ್ದಾರೆ. ವೃತ್ತಿಜೀವನದ ವಿರಾಮ ತೆಗೆದುಕೊಳ್ಳಲು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ ಭವೇಶ್ ಗುಪ್ತಾ, ಪೇಟಿಎಂನ ಭವಿಷ್ಯದ ಪಥದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. “ಅವರ…

Read More

ಬೆಂಗಳೂರು: ಲೋಕಸಭಾ ಚುನಾವಣೆ 2024 ರ ಮೂರನೇ ಹಂತದ ಕಾರಣ ಮೇ 6 ಮತ್ತು 7 ರಂದು ಮೆಟ್ರೋಪಾಲಿಟನ್ ಪ್ರದೇಶದ ಹಲವಾರು ಸ್ಥಳಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಬಹುದು ಎಂದು ಬೆಂಗಳೂರು ಸಂಚಾರ ಪೊಲೀಸರು ಸಂಚಾರ ಸಲಹೆ ನೀಡಿದ್ದಾರೆ. ಮಂಗಳವಾರ ಹೆಚ್ಚಿನ ಸಂಖ್ಯೆಯ ಜನರು ಮತ ಚಲಾಯಿಸಲು ತಮ್ಮ ಊರುಗಳಿಗೆ ಹೋಗುತ್ತಿರುವುದರಿಂದ ಮೆಜೆಸ್ಟಿಕ್ ಸುತ್ತಲೂ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ ಎಂದು ಸಂಚಾರ ಸಲಹೆಗಾರ ಹೇಳಿದ್ದಾರೆ. ಮೇ 7 ರಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಉತ್ತರ ಮತ್ತು ಮಧ್ಯ ಕರ್ನಾಟಕದ ಅನೇಕ ಜನರು ಸೋಮವಾರ ಬೆಂಗಳೂರಿನಿಂದ ಹೊರಡುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಮೆಜೆಸ್ಟಿಕ್ / ಕೆಂಪೇಗೌಡ ಬಸ್ ನಿಲ್ದಾಣದಿಂದ ಜನರು ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಬಸ್ಗಳನ್ನು ಘೋಷಿಸಿದೆ. ಮೆಜೆಸ್ಟಿಕ್ ಬಳಿ ಸಂಚಾರ ದಟ್ಟಣೆಯನ್ನು ತಪ್ಪಿಸಲು ಬೆಂಗಳೂರು ಸಂಚಾರ ಪೊಲೀಸರು ಮೇ 7 ರಂದು ಪ್ರಯಾಣಿಕರಿಗೆ ಪರ್ಯಾಯ ಮಾರ್ಗಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.…

Read More

ಜಬಲ್ಪುರ : ಟ್ರ್ಯಾಕ್ಟರ್ ಪಲ್ಟಿಯಾಗಿ ಐವರು ಮಕ್ಕಳು ಸಾವನ್ನಪ್ಪಿದ್ದು, ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅತಿ ವೇಗದಿಂದಾಗಿ ಟ್ಯಾಕ್ಟರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಚಾರ್ಗವಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಟಿನೆಟ್ಟಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಅನ್ನು 18 ವರ್ಷದ ಅಪ್ರಾಪ್ತ ಬಾಲಕ ಧರ್ಮೇಂದ್ರ ಠಾಕೂರ್ ಓಡಿಸುತ್ತಿದ್ದ ಎಂದು ಹೇಳಲಾಗುತ್ತಿದೆ.

Read More

ನವದೆಹಲಿ : ಭಾರತದ ಸೇವಾ ವಲಯದ ಬೆಳವಣಿಗೆಯು ಏಪ್ರಿಲ್ ನಲ್ಲಿ ಸ್ವಲ್ಪ ನಿಧಾನವಾಯಿತು, ಆದರೆ ಅನುಕೂಲಕರ ಆರ್ಥಿಕ ಪರಿಸ್ಥಿತಿಗಳು ಮತ್ತು ಬಲವಾದ ಬೇಡಿಕೆಯ ನಡುವೆ ಹೊಸ ವ್ಯವಹಾರ ಮತ್ತು ಉತ್ಪಾದನೆ 14 ವರ್ಷಗಳಲ್ಲಿ ವೇಗವಾಗಿ ಬೆಳೆಯಿತು. ಎಚ್ಎಸ್ಬಿಸಿ ಇಂಡಿಯಾ ಸರ್ವೀಸಸ್ ಬಿಸಿನೆಸ್ ಆಕ್ಟಿವಿಟಿ ಇಂಡೆಕ್ಸ್ ಮಾರ್ಚ್ ನಲ್ಲಿ 61.2 ರಿಂದ ಏಪ್ರಿಲ್ನಲ್ಲಿ 60.8 ಕ್ಕೆ ಇಳಿದಿದೆ. ಅನುಕೂಲಕರ ಆರ್ಥಿಕ ಪರಿಸ್ಥಿತಿಗಳು, ಬಲವಾದ ಬೇಡಿಕೆ ಮತ್ತು ಹೆಚ್ಚಿದ ಹೊಸ ಕೆಲಸಗಳು ಉತ್ಪಾದನೆಯಲ್ಲಿ ಇತ್ತೀಚಿನ ಏರಿಕೆಗೆ ಕಾರಣ ಎಂದು ಸಮೀಕ್ಷೆಯ ಸದಸ್ಯರು ಹೇಳಿದ್ದಾರೆ. ಪರ್ಚೇಸಿಂಗ್ ಮ್ಯಾನೇಜರ್ಸ್ ಇಂಡೆಕ್ಸ್ (ಪಿಎಂಐ) ಪರಿಭಾಷೆಯಲ್ಲಿ, 50 ಕ್ಕಿಂತ ಹೆಚ್ಚಿನ ಸೂಚ್ಯಂಕವು ವಿಸ್ತರಣೆಯನ್ನು ಸೂಚಿಸುತ್ತದೆ ಮತ್ತು 50 ಕ್ಕಿಂತ ಕಡಿಮೆ ಓದುವಿಕೆಯು ಸಂಕೋಚನವನ್ನು ಸೂಚಿಸುತ್ತದೆ. ಎಚ್ಎಸ್ಬಿಸಿ ಮುಖ್ಯ ಭಾರತೀಯ ಅರ್ಥಶಾಸ್ತ್ರಜ್ಞ ಪ್ರಾಂಜಲ್ ಭಂಡಾರಿ ಮಾತನಾಡಿ, “ಏಪ್ರಿಲ್ನಲ್ಲಿ ಭಾರತದ ಸೇವಾ ಚಟುವಟಿಕೆ ಸ್ವಲ್ಪ ವೇಗದಲ್ಲಿ ಬೆಳೆದಿದೆ. ದೇಶೀಯ ಬೇಡಿಕೆಯ ಹೆಚ್ಚಳದ ಹೊರತಾಗಿ, ಸಂಸ್ಥೆಗಳು ವಿಶ್ವದ ಅನೇಕ ಭಾಗಗಳಿಂದ ಹೊಸ ವ್ಯವಹಾರ ಲಾಭಗಳನ್ನು…

Read More

ಬೆಂಗಳೂರು : ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದ್ದು, ಜೂನ್ ಮೊದಲ ವಾರದಲ್ಲಿ ಹೊರ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಿದ್ದು, ಪ್ರಮುಖ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಅರ್ಹರು ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ.. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಮೇ 7ರ ನಂತ್ರ ಬರುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಹಿತಿ ಪ್ರಕಾರ ಚುನಾವಣೆ ಬಳಿಕ, ಅಂದರೆ ಮೇ 7ರ ನಂತ್ರ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. 2ನೇ ಹಂತದ ಮತದಾನ ಬಳಿಕ ಪ್ರಜ್ವಲ್ ಶರಣಾಗತಿಯಾಗುವ ಸಾಧ್ಯತೆಯೂ ಇದೆ. ಈ ಮಧ್ಯೆ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲು ಸಿಬಿಐಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರಜ್ವಲ್​ಗೆ ನೋಟಿಸ್ ನೀಡಲು ಮಹಿಳಾ ಆಯೋಗವೂ ಸಿದ್ಧತೆ ನಡೆಸಿದೆ. ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣನವರು ಮತದಾನದ ಬಳಿಕ ರಾಜ್ಯಕ್ಕೆ ಆಗಮಿಸಲಿದ್ದು, ಎಸ್ ಐಟಿ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಪ್ರಜ್ಚಲ್‌ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ ಅವರನ್ನು ತಮ್ಮ ವಶಕ್ಕೆಪಡೆದುಕೊಂಡು ರಾಜ್ಯಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ವಿರುದ್ಧ…

Read More