Author: kannadanewsnow57

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಾರು ರಿವರ್ಸ್ ತೆಗೆದುಕೊಳ್ಳುವಾಗ ಕಾರಿನ ಚಕ್ರಕ್ಕೆ ಸಿಲುಕಿ 2 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿಇ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಜಗೌಡನಟ್ಟಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಕಾರು ರಿವರ್ಸ್ ತೆಗೆದುಕೊಳ್ಳುವಾಗ ಕಾರಿನ ಗಾಲಿಗೆ ಸಿಲುಕಿ 2 ವರ್ಷದ ಮಗು ಸಾವನ್ನಪ್ಪಿದೆ. ಖಜಗೌಡನಟ್ಟಿ ಗ್ರಾಮದ ಮಂಜುನಾಥ್ ಖೋತ ಎಂಬುವರು ಕಾರು ರಿವರ್ಸ್ ತೆಗೆದುಕೊಳ್ಳುವಾಗ ಮಗು ಆಕಸ್ಮಿಕವಾಗಿ ಕಾರಿನ ಹಿಂದಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. ಅನುಶ್ರೀ ರಾಮಕೃಷ್ಣ ಖೋತ(2) ಮೃತಪಟ್ಟ ಮಗು. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ನಿಯಮಿತವಾಗಿ ಚಹಾ ಮತ್ತು ಕಾಫಿ ಕುಡಿಯುವವರು ತಲೆ ಮತ್ತು ಕತ್ತಿನ ಕ್ಯಾನ್ಸರ್ ಅನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಸ್ವಲ್ಪ ಕಡಿಮೆ ಇರುತ್ತದೆ ಎಂದು ಇತ್ತೀಚಿನ ಅಧ್ಯಯನವು ಕಂಡುಹಿಡಿದಿದೆ. ಕ್ಯಾನ್ಸರ್ ರಿಸರ್ಚ್ ಯುಕೆ ಪ್ರಕಾರ, ಯುಕೆಯಲ್ಲಿ ವಾರ್ಷಿಕವಾಗಿ ಸುಮಾರು 12,800 ತಲೆ ಮತ್ತು ಕತ್ತಿನ ಕ್ಯಾನ್ಸರ್ ಪ್ರಕರಣಗಳು ರೋಗನಿರ್ಣಯ ಮಾಡಲ್ಪಡುತ್ತವೆ, ಇದು ಸುಮಾರು 4,100 ಸಾವುಗಳಿಗೆ ಕಾರಣವಾಗುತ್ತದೆ. ಹೊಸ ಸಂಶೋಧನೆಯು ಈ ಜನಪ್ರಿಯ ಪಾನೀಯಗಳಿಂದ ನೇರವಾದ ರಕ್ಷಣಾತ್ಮಕ ಪರಿಣಾಮವನ್ನು ಸಾಬೀತುಪಡಿಸುವುದನ್ನು ನಿಲ್ಲಿಸುತ್ತದೆ, ತಜ್ಞರು ಸಂಶೋಧನೆಗಳು ದೀರ್ಘ-ಚರ್ಚಿತ ಆದರೆ ಅನಿರ್ದಿಷ್ಟ ಅಧ್ಯಯನದ ಪ್ರದೇಶದಲ್ಲಿ ಮೌಲ್ಯಯುತವಾದ ಒಳನೋಟಗಳನ್ನು ನೀಡುತ್ತವೆ ಎಂದು ನಂಬುತ್ತಾರೆ. ಫಲಿತಾಂಶಗಳು ಕ್ಯಾನ್ಸರ್ ಅಪಾಯಗಳ ಮೇಲೆ ಪ್ರಭಾವ ಬೀರುವ ಸಂಭಾವ್ಯ ಆಹಾರ ಮತ್ತು ಜೀವನಶೈಲಿಯ ಅಂಶಗಳನ್ನು ಅರ್ಥಮಾಡಿಕೊಳ್ಳಲು ಕೊಡುಗೆ ನೀಡುತ್ತವೆ, ಆದಾಗ್ಯೂ ಸಂಶೋಧಕರು ಸಂಘವನ್ನು ಅತಿಯಾಗಿ ಅರ್ಥೈಸಿಕೊಳ್ಳುವುದರ ವಿರುದ್ಧ ಎಚ್ಚರಿಕೆ ನೀಡುತ್ತಾರೆ. ಮೆಡಿಕಲ್ ನ್ಯೂಸ್ ಪ್ರಕಾರ, ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್ ಪ್ರಪಂಚದಾದ್ಯಂತ ಏಳನೇ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿದೆ ಮತ್ತು ಕಡಿಮೆ ಮತ್ತು ಮಧ್ಯಮ-ಆದಾಯದ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ರಾಮನಾಥ ಸ್ವಾಮಿ ಅಥವಾ ರಾಮೇಶ್ವರ ದೇವಾಲಯ ಭಾರತ ದೇಶದಲ್ಲಿನ ತಮಿಳುನಾಡು ರಾಜ್ಯದಲ್ಲಿದೆ. ಈ ದೇವಾಲಯವು ರಾಮೇಶ್ವರ ದ್ವೀಪದಲ್ಲಿ ಇರುವ ಪ್ರಸಿದ್ಧ ಹಿಂದೂ ಶೈವ ಕ್ಷೇತ್ರ. ಈ ದೇವಾಲಯದಲ್ಲಿರುವ ಲಿಂಗವು 12 ಜ್ಯೋತಿರ್ ಲಿಂಗ ಒಂದಾಗಿದೆ. ಈ ದೇವಾಲಯವನ್ನು 12 ನೇ ಶತಮಾನದಲ್ಲಿ ಪಾಂಡ್ಯಂ ಎಂಬ ರಾಜವಂಶವು ಈ ದೇವಾಲಯವನ್ನು ಅಭಿವೃದ್ಧಿ ಪಡಿಸಿದರು. ವಿಶೇಷವೆನೆಂದರೆ ಈ ದೇವಾಲಯವು ಭಾರತದಲ್ಲಿನ ಎಲ್ಲಾ ಹಿಂದೂ ದೇವಾಲಯಗಳಿಗಿಂತ ಉದ್ದವಾದ ಕಾರಿಡಾರ್ ಹೊಂದಿದೆ. ರಾಮೇಶ್ವರದಲ್ಲಿನ ಈ ದೇವಾಲಯವು ಶೈವ, ವೈಷ್ಣವರ ಪವಿತ್ರವಾದ ಯಾತ್ರಾ ಸ್ಥಳವೆಂದು ಪರಿಗಣಿಸಲಾಗಿದೆ. ರಾಮನಾಥೇಶ್ವರ ರಾಮಶ್ವೇರದಲ್ಲಿನ ರಾಮನಾಥಸ್ವಾಮಿ ದೇವಾಲಯದಲ್ಲಿನ ಮುಖ್ಯ ದೇವತೆ. ಇಲ್ಲಿನ ಲಿಂಗವು 12 ಜ್ಯೋತಿರ್ ಲಿಂಗಗಳಲ್ಲಿ ಒಂದಾಗಿದೆ. ವಿಶೇಷವೆನೆಂದರೆ ಶಿವನನ್ನು ಇಲ್ಲಿ ರಾಮನಾಥೇಶ್ವರನಾಗಿ ಪೂಜಿಸಲಾಗುತ್ತದೆ. ದೇವಾಲಯಕ್ಕೆ ಒಂದು ಸುಂದರವಾದ ಕಥೆ ಇದೆ. ಅದೆನೆಂದರೆ ರಾಮನ ಪತ್ನಿ ಸೀತೆಯನ್ನು ರಾವಣ ಅಪಹರಿಸುತ್ತಾನೆ. ರಾಮಾಯಣದ ಪ್ರಕಾರ…

Read More

ಬೆಂಗಳೂರು: ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಕಾರ್ಯಕ್ರಮಕ್ಕೆ ಹೋಗುವಾಗ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಬಳಿಕ ಅವರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಜಚಾರ್ಜ್ ಆಗಿದ್ದಾರೆ. ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ದೂರು ಆಧರಿಸಿ ನಂದಿನಿ ಲೇಔಟ್ ಠಾಣೆಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ನಿನ್ನೆ ಬೆಳಿಗ್ಗೆ 11.30ರ ಸುಮಾರಿಗೆ ಮೊಟ್ಟೆ ಎಸೆಯಲಾಗಿದೆ. ಶಾಸಕರು ಕಾರ್ಯಕ್ರಮ ಮುಗಿಸಿ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ

Read More

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟ ಎಸೆದ ಪ್ರಕರಣ ಸಂಬಂಧ ನಂದಿನಿ ಲೇಔಟ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ದೂರು ಆಧರಿಸಿ ನಂದಿನಿ ಲೇಔಟ್ ಠಾಣೆಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ನಿನ್ನೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಕಾರ್ಯಕ್ರಮಕ್ಕೆ ಹೋಗುವಾಗ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಬಳಿಕ ಅವರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಜಚಾರ್ಜ್ ಆಗಿದ್ದಾರೆ.

Read More

ಕಜಕಿಸ್ತಾನ : ಕಜಕಿಸ್ತಾನದ ಅಕ್ಟೌ ನಗರದ ಬಳಿ ಪ್ರಯಾಣಿಕ ವಿಮಾನವೊಂದು ಪತನವಾಗಿದ್ದು,ಅಪಘಾತದಲ್ಲಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಪಘಾತಕ್ಕೂ ಮುನ್ನ ಅಕ್ಟೌ ವಿಮಾನ ನಿಲ್ದಾಣದ ಮೇಲೆ ವಿಮಾನ ಹಲವು ಬಾರಿ ಸುತ್ತು ಹಾಕಿತ್ತು. ಈ ವಿಮಾನ ಅಜರ್‌ಬೈಜಾನ್ ಏರ್‌ಲೈನ್ಸ್‌ಗೆ ಸೇರಿತ್ತು. ಕಝಾಕಿಸ್ತಾನ್‌ನ ತುರ್ತು ಸಚಿವಾಲಯವು ವಿಮಾನವು ಬಾಕುದಿಂದ ಡ್ರೊಜ್ನಿ (ಗ್ರೋಜ್ನಿ) ಗೆ ವಿಮಾನದಲ್ಲಿತ್ತು ಮತ್ತು ಅಕ್ಟೌ ಬಳಿ ಪತನಗೊಂಡಿದೆ ಎಂದು ದೃಢಪಡಿಸಿದೆ. https://twitter.com/i/status/1871885832250155318 ಟೇಕ್ ಆಫ್ ಆದ ನಂತರ, ಅಕ್ಟೌ ವಿಮಾನ ನಿಲ್ದಾಣದ ಬಳಿ ವಿಮಾನವು ಹಲವಾರು ಬಾರಿ ಸುತ್ತುತ್ತಿರುವುದು ಕಂಡುಬಂದಿದೆ. ಶಂಕಿತ ತಾಂತ್ರಿಕ ದೋಷದ ಕಾರಣ, ವಿಮಾನವು ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿತು, ಆದರೆ ಯಶಸ್ವಿಯಾಗಲಿಲ್ಲ. https://twitter.com/blogclub_org/status/1871813464936833517?ref_src=twsrc%5Etfw%7Ctwcamp%5Etweetembed%7Ctwterm%5E1871813464936833517%7Ctwgr%5Ee73057b6ca634439fe6a0abcc6646d6e1a8522a2%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Fdainiktribunehindi-epaper-dh4ad49e5a479e4e4cb59b53c2be7329c0%2Fplanecrashinkazakhstankajakistanmevimandurghatanagrastkailogokimautkiaashanka-newsid-n644848932

Read More

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ರೌಡಿಶೀಟರ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ನಲ್ಲಿ ಪೊಲೀಸರು ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಂಡು ಹೋಗುತ್ತಿದ್ದ ವೇಳೆ ರೌಡಿಶೀಟರ್ ಸುನೀಲ್ ಅಲಿಯಾಸ್ ಹಾವೇರಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಅತ್ತಿಬೆಲೆಯ ಬಂಡಾಪುರ ಬಳಿ ಪೊಲೀಸರು ರೌಡಿಶೀಟರ್ ರೌಡಿಶೀಟರ್ ಸುನೀಲ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ಆತನನ್ನು ವಶಕ್ಕೆ ಪಡೆದುಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ.

Read More

ಮೊಬೈಲ್ ಅಪ್ಲಿಕೇಶನ್‌ಗಳು ನಮ್ಮ ಜೀವನವನ್ನು ಸುಲಭಗೊಳಿಸಿವೆ. ಮನರಂಜನೆಯಿಂದ ಹಿಡಿದು ಮನೆಕೆಲಸದವರೆಗೆ ಯಾವುದೇ ಕೆಲಸಕ್ಕಾಗಿ ಹೊರಗೆ ಹೋಗಬೇಕಾದ ಅನಿವಾರ್ಯತೆ ಈಗ ಇಲ್ಲವಾಗಿದೆ. ಜನರು ತಮ್ಮ ಹೆಚ್ಚಿನ ಸಮಯವನ್ನು ಮೊಬೈಲ್ ಅಪ್ಲಿಕೇಶನ್‌ಗಳಲ್ಲಿ ಕಳೆಯುತ್ತಿದ್ದಾರೆ. ಈ ಕಾರಣಕ್ಕಾಗಿ, ಸೈಬರ್ ವಂಚಕರು ಈ ಅಪ್ಲಿಕೇಶನ್‌ಗಳ ಮೇಲೆ ಕಣ್ಣಿಟ್ಟಿರುತ್ತಾರೆ. ಇಲ್ಲಿ ಅವರು ಜನರನ್ನು ಬಲಿಪಶುಗಳನ್ನಾಗಿ ಮಾಡುತ್ತಾರೆ ಮತ್ತು ಅವರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕೆಲವೇ ಸೆಕೆಂಡುಗಳಲ್ಲಿ ಅವರ ಖಾತೆಗಳಿಗೆ ವರ್ಗಾಯಿಸುತ್ತಾರೆ. ಟೆಲಿಗ್ರಾಂ ಮೂಲಕವೂ ಇಂತಹ ಹಲವು ವಂಚನೆಗಳು ನಡೆಯುತ್ತಿದ್ದು, ಈ ಬಗ್ಗೆ ಸರಕಾರ ಎಚ್ಚರಿಕೆ ನೀಡಿದೆ. ಟೆಲಿಗ್ರಾಮ್‌ನಲ್ಲಿ ಜನರು ಹೇಗೆ ಸಿಕ್ಕಿಬೀಳುತ್ತಿದ್ದಾರೆ? ದೂರಸಂಪರ್ಕ ಇಲಾಖೆಯು ಟೆಲಿಗ್ರಾಮ್ ಆ್ಯಪ್ ಮೂಲಕ ವಂಚನೆಗಳನ್ನು ತಪ್ಪಿಸಲು ಜನರನ್ನು ಕೇಳುವ ವೀಡಿಯೊವನ್ನು ಬಿಡುಗಡೆ ಮಾಡಿದೆ. ಟೆಲಿಗ್ರಾಂನಲ್ಲಿ ಮೋಸಗಾರರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದು ವಿಡಿಯೋದಲ್ಲಿ ಹೇಳಲಾಗಿದೆ. ವಂಚಕರು ದೊಡ್ಡ ಕಂಪನಿಗಳ ಹೆಸರಿನಲ್ಲಿ ಚಾನಲ್‌ಗಳು ಅಥವಾ ಗುಂಪುಗಳನ್ನು ರಚಿಸುವ ಮೂಲಕ ವಂಚನೆ ಮಾಡಲು ಪ್ರಯತ್ನಿಸುತ್ತಿದ್ದಾರೆ, ಆನ್‌ಲೈನ್‌ನಲ್ಲಿ ಹಣ ಗಳಿಸಲು ಜನರನ್ನು ಆಮಿಷವೊಡ್ಡುತ್ತಾರೆ, ನಕಲಿ ಲಾಟರಿ ಸಂದೇಶಗಳನ್ನು ಅಥವಾ…

Read More

ಉಡುಪಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕರ್ನಾಟಕದ ಸೈನಿಕರ ಪಾರ್ಥಿವ ಶರೀರಗಳು ಆಗಮಿಸಿದ್ದು,ಇಂದು ಅಂತ್ಯಕ್ರಿಯೆ ನಡೆಯಲಿದೆ. ಇಂದು ಬೆಳಗ್ಗೆ 9:30 ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಯೋಧರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಿದ್ದಾರೆ. ಬಳಿಕ ಯೋಧರ ಸ್ವಗ್ರಾಮಗಳಿಗೆ ಪಾರ್ಥಿವ ಶರೀರ ಕಳುಹಿಸಲಾಗುತ್ತದೆ. ಇಂದು ಸರ್ಕಾರಿ ಶಾಲೆ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಆಪ್ತರು, ಸಾರ್ವಜನಿಕರು, ಜನಪ್ರತಿನಿಧಿಗಳಿಗೆ ಅಂತಿಮ ನಮನಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್‌ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಹುತಾತ್ಮರಾಗಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಘೋರ ಘಟನೆಯೊಂದು ನಡೆದಿದ್ದು, ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಬೆಂಗಳೂರಿನ  ಮಾಗಡಿ ರಸ್ತೆಯ ರೈಲ್ವೇ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಮೃತ ಯುವಕರನ್ನ ಸೂರ್ಯ, ಶರತ್ ಎಂದು ಗುರುತಿಸಲಾಗಿದೆ. ರಾತ್ರಿ 10:30 ರ ವೇಳೆಗೆ ಟ್ರ್ಯಾಕ್ ಮೇಲೆ ಕೂತಿದ್ದಾಗ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿಗೆ ಸಿಲುಕಿ ಸೂರ್ಯ ಹಾಗೂ ಶರತ್ ಸಾವನ್ನಪ್ಪಿದ್ದಾರೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More