Author: kannadanewsnow57

ಬೆಂಗಳೂರು :ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿ. ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿರುವ ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. ವಿಕಲಚೇತನರಿಗೆ ಸಿಗಲಿರುವ ವಿಶೇಷ ಯೋಜನೆಗಳ ಪಟ್ಟಿ ಹೀಗಿದೆ. * ವಿದ್ಯಾರ್ಥಿವೇತನ ಯೋಜನೆ * ಪ್ರೋತ್ಸಾಹಧನ ಯೋಜನೆ * ಶುಲ್ಕ ಮರುಪಾವತಿ ಯೋಜನೆ * ಸಾಧನ ಸಲಕರಣೆ ಯೋಜನೆ * ಬ್ಯಾಟರಿ ಚಾಲಿತ ಗಾಲಿ ಕುರ್ಚಿಗಳು * ವೈದ್ಯಕೀಯ ಪರಿಹಾರ ನಿಧಿ ಯೋಜನೆ * ಆಧಾರ ಸಾಲ ಯೋಜನೆ * ನಿರುದ್ಯೋಗ ಭತ್ಯೆ ಯೋಜನೆ * ವಿವಾಹ ಪ್ರೋತ್ಸಾಹಧನ ಯೋಜನೆ * ಗ್ರಾಮೀಣ / ನಗರ ಪುನರ್ವಸತಿ ಯೋಜನೆ * ಮರಣ ಪರಿಹಾರ ಧನ ಯೋಜನೆ * ಸಾಧನೆ ಯೋಜನೆ * ಪ್ರತಿಭೆ ಯೋಜನೆ

Read More

ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್, 20 ರವರೆಗೆ ವಿಸ್ತರಿಸಲಾಗಿರುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ:08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ.

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ದ ಭ್ರಷ್ಟಾಚಾರ ದೂರು ಆಧರಿಸಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ನಿರಾಕರಿಸಿದ್ದ ಈ ಹಿಂದಿನ ನಿರ್ಣಯ ಪುನರ್ ಪರಿಶೀಲಿಸುವಂತೆ ರಾಜ್ಯ ಸರ್ಕಾರ ಇದೀಗ ಮತ್ತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ 2020 ರ ನವೆಂಬರ್ 19ರಂದು ಯಡಿಯೂರಪ್ಪ ವಿರುದ್ಧ ಸಲ್ಲಿಸಿದ ಭ್ರಷ್ಟಾಚಾರ ದೂರು ಆಧರಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಯಡಿಯೂರಪ್ಪ ಮತ್ತು ಅವರ ಕುಟುಂಬ ವಿರುದ್ಧದ ಭ್ರಷ್ಟಾಚಾರದ ದೂರಿನಲ್ಲಿ 16 ಗಂಭೀರ ಪ್ರಕರಣಗಳನ್ನು ಮಾಡಲಾಗಿದೆ. ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನಿರಾಕರಿಸಿ 2021ರ ಜೂನ್ 24ರಂದು ಮಾಡಿರುವ ತಮ್ಮ ನಿರ್ಣಯವನ್ನು ಪುನರ್ ಪರಿಶೀಲಿಸಬೇಕೆಂದು ಕೋರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಕುರಿತ ಪುನರ್ ಪರಿಶೀಲನೆ ನಿರ್ಣಯವನ್ನು ರಾಜ್ಯಪಾಲರಿಗೆ ಶಿಫಾರಸು ಮಾಡುವ ಮೂಲಕ ಯಡಿಯೂರಪ್ಪ ವಿರುದ್ಧದ ತನಿಖೆಗೆ ಪೂರ್ವಾನುಮತಿ ನೀಡುವಂತೆ ರಾಜ್ಯ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದೆ. ಹೀಗಿದೆ ಸಿಎಂ ಸಿದ್ದರಾಮಯ್ಯ ಸಭೆಯ ಮುಖ್ಯಾಂಶಗಳು ಅಬಕಾರಿ ಇಲಾಖೆ: * ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು. * ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಯಿತು. ನೋಂದಣಿ ಮತ್ತು ಮುದ್ರಾಂಕ ಇಲಾಖೆ * ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಲು ಸೂಚಿಸಲಾಯಿತು. * ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು. ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು. * ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಗಣಿ ಮತ್ತು ಭೂವಿಜ್ಞಾನ ಇಲಾಖೆ * ಕಳೆದ ವರ್ಷಕ್ಕಿಂತ…

Read More

ಬೆಂಗಳೂರು : ರಾಜ್ಯದಲ್ಲಿ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಹಾಗೂ ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಲು ಸೂಚಿಸಲಾಯಿತು. ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು. ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಗಣಿ ಮತ್ತು ಭೂವಿಜ್ಞಾನ ಇಲಾಖೆ: ಕಳೆದ ವರ್ಷಕ್ಕಿಂತ ಶೇ.10ರಷ್ಟು ಹೆಚ್ಚಿನ ಬೆಳವಣಿಗೆ ದರ ಸಾಧಿಸಲಾಗಿದೆ. ಈ ವರ್ಷದ ಒಟ್ಟು ರಾಜಸ್ವ ಗುರಿ 9 ಸಾವಿರ ಕೋಟಿ ರೂ. ಇದ್ದು, ನವೆಂಬರ್ ಅಂತ್ಯದವರೆಗೆ 4,862 ಕೋಟಿ ರೂ.ರಾಜಸ್ವ ಸಂಗ್ರಹಿಸಲಾಗಿದೆ. ಖನಿಜ ಹಕ್ಕು ತೆರಿಗೆ ಅಧಿನಿಯಮ ಜಾರಿಗೆ ಕ್ರಮ ವಹಿಸಬೇಕು. 2025-26 ನೇ ಸಾಲಿನಲ್ಲಿ ಉಪ ಖನಿಜದಿಂದ ಹೆಚ್ಚುವರಿಯಾಗಿ ರಾಜಸ್ವ…

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಖಾಳಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು.* ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಲು ಸೂಚಿಸಲಾಯಿತು. ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು. ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು. ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Read More

ಬೆಂಗಳೂರು : 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ.? ಮೇಲೆ ಓದಲಾದ ಕ್ರ.ಸಂ. (1) ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು. ಮೇಲೆ ಓದಲಾದ ಕ್ರ.ಸಂ. (2) ರ ಸಹಕಾರ ಸಂಘಗಳ ನಿಬಂಧಕರ ಪ್ರಸ್ತಾವನೆಯಲ್ಲಿ ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಒಂದು ಪ್ರತಿಷ್ಠಿತ (Flagship) ವಿಶಿಷ್ಟ ಯೋಜನೆಯಾಗಿದ್ದು, ಇದರಲ್ಲಿ ಯಶಸ್ವಿನಿ ಪ್ರೋಟೋಕಾಲ್‌ನಂತೆ ನಿಗದಿ ಪಡಿಸಿರುವ ಚಿಕಿತ್ಸೆಗಳ ಪ್ಯಾಕೇಜಿನ ದರದ ಮಿತಿಗೊಳಪಟ್ಟು ಫಲಾನುಭವಿ ಮತ್ತು ಅವರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ.5.00 ಲಕ್ಷ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಿತಿಯೊಂದಿಗೆ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ. ಯಶಸ್ಸಿನಿ ಯೋಜನೆಯು ವಿಮಾ ಯೋಜನೆಯಾಗಿರುವುದಿಲ್ಲ. ಬದಲಾಗಿ ಇದೊಂದು…

Read More

ಬೆಂಗಳೂರು: ಮನೆ ಕಟ್ಟೋರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಸಮಗ್ರ ಮರಳು ನೀತಿ ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲಾ ಮರಳು ಸಮಿತಿ ಮತ್ತು ಗ್ರಾಮ ಪಂಚಾಯಿತಿಗಳಿಂದ ಮರಳು ಬ್ಲಾಕ್ ಗಳ ವಿಲೇವಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಮರಳು ಸಿಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮರಳು ನೀತಿ ಜಾರಿಗೊಳಿಸಿದೆ. ಆಯವ್ಯಯದಲ್ಲಿ ಘೋಷಿಸಿದಂತೆ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸಿದೆ.ಸಾರ್ವಜನಿಕರು ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ದರದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು 1, 2 ಮತ್ತು 3ನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಾಬ್ದಾರಿಯನ್ನು ಗ್ರಾಪಂಗಳಿಗೆ ವಹಿಸಲಾಗುವುದು. ಪ್ರತಿ ಮೆಟ್ರಿಕ್ ಟನ್ ಮರಳಿನ ಮಾರಾಟ ಬೆಲೆಯನ್ನು 300 ರೂ. ನಿಗದಿಪಡಿಸಲಾಗಿದೆ ಎಂದು…

Read More

ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಮುಖ್ಯಶಿಕ್ಷಕನೇ 5 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕಲಬುರಗಿಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ಯಡ್ರಾಮಿ ಪಟ್ಟಣದ ನವೋದಯ ಕಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಹಾಜಿಮಲಂಗ್ ಗಣಿಯಾರ್ ಬಂಧಿತ ಆರೋಪಿಯಾಗಿದ್ದು, ಶಾಲೆಯ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಈ ವಿಷಯ ಮನೆಯಲ್ಲಿ ತಿಳಿಸದಂತೆ ಬೆದರಿಕೆ ಸಹ ಹಾಕಿದ್ದಾನೆ. ಬಾಲಕಿ ಪಕ್ಕದ ಮನೆಯವರ ಮುಂದೆ ಶಾಲೆಯಲ್ಲಿ ನಡೆದ ಘಟನೆ ವಿವರಿಸಿದ್ದಾಳೆ. ಪಕ್ಷದ ಮನೆಯವರು ಕೂಡಲೇ ಬಾಲಕಿಯ ತಂದೆ-ತಾಯಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕುಟುಂಬಸ್ಥರು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿ ಮುಖ್ಯಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಇಲಾಖಾ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಭಾರ ಪ್ರಾಂಶುಪಾಲರುಗಳ ರಜೆ ಮಂಜೂರಾತಿಯ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಂಸ್ಕೃತ ಕಾಲೇಜು, ಚಿತ್ರಕಲಾ ಕಾಲೇಜು, ಶಿಕ್ಷಣ ಕಾಲೇಜು ಹಾಗೂ ಕಾನೂನು ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಭಾರ ಪ್ರಾಂಶುಪಾಲರುಗಳು ದೀರ್ಘವಧಿ ರಜೆಗಳಾದ ಗಳಿಕೆ ರಜೆ, ಅಸಾಧಾರಣಾ ರಜೆ, ಮಾತೃತ್ವ ರಜೆ, ಪಿತೃತ್ವ ರಜೆ, ವ್ಯಾಸಂಗ ರಜೆಗಳ ಹಾಗೂ ಸಾಂಧರ್ಭಿಕ ರಜೆ ಮೇಲೆ ತೆರಳುವ ಸಂದರ್ಭದಲ್ಲಿ ಸದರಿ ರಜೆಗಳಿಗೆ ಸಂಬಂಧಪಟ್ಟ ಪ್ರಾದೇಶಿಕ ಜಿಂಟಿ ನಿರ್ದೇಶಕರುಗಳಿಂದ ಪೂರ್ವಾನುಮತಿ ಪಡೆಯದೆ ರಜೆಯನ್ನು ಹಾಗೂ ಕೇಂದ್ರ ಸ್ಥಾನ ಬಿಡುತ್ತಿರುವ ಪ್ರಕರಣಗಳ ಮಾಹಿತಿಯು ಈ ಕಛೇರಿಯಲ್ಲಿ ಸ್ವೀಕೃತಗೊಂಡಿರುವ ಹಿನ್ನೆಲೆಯಲ್ಲಿ ಈ ಕುರಿತು ಗಂಭೀರವಾಗಿ ಪರಿಗಣಿಸಲಾಗಿದೆ. ಪರಿಶೀಲಿಸಲಾಗಿ. ಇನ್ನೂ ಮುಂದೆ ಪ್ರಭಾರ ಪ್ರಾಂಶುಪಾಲರುಗಳು ಯಾವುದೇ ರಜೆಯನ್ನು ಹಾಗೂ ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಂಬಂಧಪಟ್ಟ ಪ್ರಾದೇಶಿಕ ಜಂಟಿ ನಿರ್ದೇಶಕರುಗಳ ಪೂರ್ವಾನುಮತಿ ಪಡೆದು ತೆರಳುವಂತೆ ಕಡ್ಡಾಯವಾಗಿ…

Read More