Author: kannadanewsnow57

ಶಿವಮೊಗ್ಗ : ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 2 ದಿನಗಳು ದಿನಾಂಕ: 03-12-2024 ರಂದು ಆರೆಂಜ್ ಅಲರ್ಟ್ ಹಾಗೂ ದಿನಾಂಕ: 04-12-2024 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಿದ್ದು ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಮತ್ತು ಅಂಗನವಾಡಿಗಳಿಗೆ ಡಿಸೆಂಬರ್ 3 ರ ಇಂದು ರಜೆ ಘೋಷಿಸಿ ಆದೇಶಿಸಲಾಗಿದೆ.

Read More

ಕೋಲ್ಕತ್ತಾ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ ಮುಂದುವರೆದಿದ್ದು, ಇದೀಗ ಆಧ್ಯಾತ್ಮಿಕ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ಸಮರ್ಥಿಸಿಕೊಂಡ ವಕೀಲ ರಮಣ್ ರಾಯ್ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂದು ಪಶ್ಚಿಮ ಬಂಗಾಳ ಮೂಲದ ಇಂಟರ್‌ನ್ಯಾಶನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್‌ನೆಸ್ (ಇಸ್ಕಾನ್) ವಕ್ತಾರ ರಾಧಾರಾಮನ್ ದಾಸ್ ತಿಳಿಸಿದ್ದಾರೆ. ದಾಸ್ ಪ್ರಕಾರ, ನೆರೆಯ ದೇಶದ ಮೂಲಭೂತವಾದಿಗಳು ರಾಯ್ ಅವರ ಮನೆಗೆ ನುಗ್ಗಿ ಅವರ ಮೇಲೆ ದಾಳಿ ಮಾಡಿದರು. ನ್ಯಾಯಾಲಯದಲ್ಲಿ ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ಸಮರ್ಥಿಸಿಕೊಂಡಿದ್ದೇ ರಾಯ್ ಅವರ ಏಕೈಕ “ತಪ್ಪು” ಎಂದು ಅವರು ಹೇಳಿದರು. ದಾಳಿಯಲ್ಲಿ ರಾಯ್ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಐಸಿಯುನಲ್ಲಿದ್ದಾರೆ ಎಂದು ಇಸ್ಕಾನ್ ಕೋಲ್ಕತ್ತಾದ ವಕ್ತಾರರು ಹೇಳಿದ್ದಾರೆ. ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ ಅವರು, ರಾಯ್ ಐಸಿಯುನಲ್ಲಿ ದಾಖಲಾಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ ಮತ್ತು “ದಯವಿಟ್ಟು ವಕೀಲ ರಮಣ್ ರಾಯ್‌ಗಾಗಿ ಪ್ರಾರ್ಥಿಸಿ. ನ್ಯಾಯಾಲಯದಲ್ಲಿ ಚಿನ್ಮೊಯ್ ಕೃಷ್ಣ ಪ್ರಭು ಪರ ವಾದ ಮಂಡಿಸಿದ್ದು ಮಾತ್ರ…

Read More

ಬೆಂಗಳೂರು : 2024 ರ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ $3.54 ಶತಕೋಟಿಯೊಂದಿಗೆ ವಿದೇಶಿ ನೇರ ಹೂಡಿಕೆ (FDI)ಯಲ್ಲಿ ನಮ್ಮ ರಾಜ್ಯವು ಭಾರತದಲ್ಲೇ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಈ ಕುರಿತು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಆರ್ಥಿಕ ಬೆಳವಣಿಗೆಯಲ್ಲಿ ಕರ್ನಾಟಕವು ತನ್ನ ಶಕ್ತಿಯನ್ನು ಮತ್ತೆ ಸಾಬೀತು ಪಡಿಸಿದೆ. ಮಹಾರಾಷ್ಟ್ರವು (13.55 ಬಿಲಿಯನ್ ಡಾಲರ್ ಗಳು) ಅಗ್ರಸ್ಥಾನದಲ್ಲಿದ್ದರೆ, ತೆಲಂಗಾಣವು (1.54 ಬಿಲಿಯನ್ ಡಾಲರ್ ಗಳು)ಮೂರನೇ ಸ್ಥಾನದಲ್ಲಿದೆ. ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಪರಿಣಾಮಕಾರಿ ಕಾರ್ಯತಂತ್ರಗಳು ಮತ್ತು ಉದ್ಯಮಸ್ನೇಹಿ ನೀತಿಗಳ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ಆರ್ಥಿಕ ಅಭಿವೃದ್ಧಿಯನ್ನು ಚಾಲನೆ ಮಾಡುವಲ್ಲಿ ನಮ್ಮ ಬದ್ಧತೆ ಮತ್ತು ದೂರದೃಷ್ಟಿಯನ್ನು ಪ್ರತಿಬಿಂಬಿಸುತ್ತದೆ. ಐಟಿ, ಸೇವೆಗಳು ಮತ್ತು ಟೆಲಿಕಾಂನಂತಹ ಪ್ರಮುಖ ಕ್ಷೇತ್ರಗಳಲ್ಲಿ ಕರ್ನಾಟಕದ ಹೆಚ್ಚುತ್ತಿರುವ ಆಕರ್ಷಣೆಯು ಜಾಗತಿಕ ಹೂಡಿಕೆಯ ಕೇಂದ್ರವಾಗಿ ಅದರ ಸ್ಥಾನವನ್ನು ಬಲಪಡಿಸುತ್ತದೆ.

Read More

ಬೆಂಗಳೂರು : ಹೀರೋ ಫ್ಯೂಚರ್ಸ್ ಎನರ್ಜಿಸ್ ನವರಿಂದ ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ವಲಯದಲ್ಲಿ ರೂ. 11,000 ಕೋಟಿ ಹೂಡಿಕೆ ಮಾಡಲಿದ್ದು, 3, 000 ಉದ್ಯೋಗಗಳ ಸೃಷ್ಟಿಯಾಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಹೀರೊ ಫ್ಯೂಚರ್ ಎನರ್ಜೀಸ್, ಕರ್ನಾಟಕದಲ್ಲಿ ನವೀಕರಿಸಬಲ್ಲ ಇಂಧನ, ಗ್ರೀನ್ ಹೈಡ್ರೋಜೆನ್, ಹಾಗೂ ಇತರೆ ಪೂರಕ ಯೋಜನೆಗಳು ಒಳಗೊಂಡಂತೆ ರೂ.11,000 ಕೋಟಿ ಮೊತ್ತದ ಯೋಜನೆಗಳಲ್ಲಿ ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಹೇಳಿದ್ದಾರೆ. ಇನ್ವೆಸ್ಟ್ ಕರ್ನಾಟಕ 2025 ರೋಡ್’ಮ್ಯಾಪ್’ನ ಭಾಗವಾಗಿರುವ ಈ ಪ್ರಮುಖ ಹೂಡಿಕೆಯು ರಾಜ್ಯದಲ್ಲಿ 3,000 ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿದ್ದು, ಜೊತೆಗೆ ಡೀಕಾರ್ಬನೈಸೇಷನ್ ಉತ್ತೇಜಿಸಿ, ಕರ್ನಾಟಕವನ್ನು ಸ್ವಚ್ಛ ಇಂಧನ ಕ್ಷೇತ್ರದಲ್ಲಿ ನಂ. 1 ಸ್ಥಾನದಲ್ಲಿ ನಿಲ್ಲಿಸಲಿದೆ ಎಂದರು.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಗರ್ ಹುಕುಂ ಸಾಗುವಳಿದಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಬರೋಬ್ಬರಿ 1.26 ಲಕ್ಷ ಅರ್ಜಿಗಳು ಸಾಗುವಳಿ ಚೀಟಿಗೆ ಅರ್ಹವಾಗಿವೆ. ಮೊದಲ ಹಂತದಲ್ಲಿ ಡಿಸೆಂಬರ್.15ರೊಳಗೆ 5,000 ರೈತರಿಗೆ ಸಾಗುವಳಿ ಚೀಟಿ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬಗರ್ ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳ ಪೈಕಿ ಕನಿಷ್ಟ 5,000 ಜನರ ಅರ್ಜಿಗಳನ್ನಾದರೂ “ಬಗರ್ ಹುಕುಂ” ಕಮಿಟಿಯ ಎದುರು ಮಂಡಿಸಿ ಡಿ.15ರ ಒಳಗೆ ಸಾಗುವಳಿ ಚೀಟಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು. ರಾಜ್ಯಾದ್ಯಂತ ಲಕ್ಷಾಂತರ ಜನ ಬಗರ್ ಹುಕುಂ ಅಡಿಯಲ್ಲಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಪೈಕಿ 1,26,000 ಅರ್ಜಿಗಳನ್ನು ಮಾತ್ರ ಅರ್ಹ ಎಂದು ಪರಿಗಣಿಸಲಾಗಿದೆ. ಕೆಲ ಜಿಲ್ಲೆಗಳಲ್ಲಿ ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಈಗಾಗಲೇ ಬಗರ್ ಹುಕುಂ ಕಮಿಟಿ ಎದುರು ಇಡಲಾಗಿದೆ. ಆದರೆ, ಆ ಸಂಖ್ಯೆ ಸಮಾಧಾನಕರವಾಗಿಲ್ಲ. ಹೀಗಾಗಿ…

Read More

ಮಾರ್ಬರ್ಗ್ ಅನ್ನು ‘ಬ್ಲೀಡಿಂಗ್ ಐ’ ವೈರಸ್ ಎಂದು ಕರೆಯಲಾಗುತ್ತದೆ ಏಕೆಂದರೆ ಅದರ ಒಂದು ರೋಗಲಕ್ಷಣವು ಈಗಾಗಲೇ ರುವಾಂಡಾದಲ್ಲಿ 15 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಇನ್ನೂ ನೂರಾರು ಮಂದಿಗೆ ಸೋಂಕು ತಗುಲಿರುವ ಸಾಧ್ಯತೆಯೂ ಇದೆ. 17 ದೇಶಗಳಲ್ಲಿ mpox ಮತ್ತು Oropouche ಜ್ವರದೊಂದಿಗೆ ಮಾರ್ಬರ್ಗ್ ಅಥವಾ ‘ಬ್ಲೀಡಿಂಗ್ ಐ’ ವೈರಸ್ ಹರಡುವಿಕೆಯ ವಿರುದ್ಧ ಪ್ರಯಾಣಿಕರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ‘ಬ್ಲೀಡಿಂಗ್ ಐಸ್’ ಎಂದರೇನು? ಲವೊಮ್ಮೆ ರಕ್ತನಾಳಗಳನ್ನು ಹಾನಿಗೊಳಿಸುತ್ತದೆ ಮತ್ತು ರಕ್ತಸ್ರಾವಕ್ಕೆ ಕಾರಣವಾಗುತ್ತದೆ. ಎಬೋಲಾ ಕುಟುಂಬದ ಸದಸ್ಯ, ಇದು ಹಣ್ಣಿನ ಬಾವಲಿಗಳು, ಅದರ ನೈಸರ್ಗಿಕ ಅತಿಥೇಯಗಳಿಂದ ಹುಟ್ಟಿಕೊಂಡಿದೆ ಮತ್ತು ಸೋಂಕಿತ ವ್ಯಕ್ತಿಯ ದೈಹಿಕ ದ್ರವಗಳಾದ ರಕ್ತ, ಲಾಲಾರಸ ಅಥವಾ ಮೂತ್ರದೊಂದಿಗೆ ನೇರ ಸಂಪರ್ಕದ ಮೂಲಕ ಮನುಷ್ಯರಿಗೆ ಹರಡುತ್ತದೆ. ಸೋಂಕಿತ ವ್ಯಕ್ತಿಗಳು ತೀವ್ರ ಜ್ವರ, ತೀವ್ರ ತಲೆನೋವು, ಸ್ನಾಯು ನೋವು, ವಾಂತಿ ಮತ್ತು ಅತಿಸಾರವನ್ನು ಅನುಭವಿಸಬಹುದು. ತೀವ್ರತರವಾದ ಪ್ರಕರಣಗಳಲ್ಲಿ, ಇದು ಆಂತರಿಕ ರಕ್ತಸ್ರಾವ, ಅಂಗ ವೈಫಲ್ಯ ಮತ್ತು ಆಘಾತಕ್ಕೆ ಕಾರಣವಾಗಬಹುದು, ಆಗಾಗ್ಗೆ ಸಾವಿಗೆ ಕಾರಣವಾಗಬಹುದು.…

Read More

ಬೆಂಗಳೂರು :  ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಕಿರಿಯ ಸಹಾಯಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಡಿಸೆಂಬರ್ 4 ರ ನಾಳೆಯಿಂದ ಅರ್ಜಿ ಸಲ್ಲಿಕೆ ಅರಂಭವಾಗಲಿದೆ. ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿಗಳು ಮತ್ತು ನೌಕರರ ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 2021ರ ರೀತ್ಯಾ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವಿವಿಧ ವೃಂದಗಳ ಹುದ್ದೆಗಳಿಗೆಅಧಿಸೂಚನೆಯನ್ನು ದಿನಾಂಕ:12.03.2024ರಂದು ಹೊರಡಿಸಲಾಗಿದ್ದು, ಸದರಿ ಅಧಿಸೂಚನೆಯಲ್ಲಿನ ಕ್ರಮ ಸಂಖ್ಯೆ:06ರಲ್ಲಿನ ಕಿರಿಯ ಸಹಾಯಕರ ಉಳಿಕೆ ವೃಂದದ ಹುದ್ದೆಗಳ ಕುರಿತಂತೆ ಈ ಕೆಳಕಂಡಂತೆ ಓದಿಕೊಳ್ಳತಕ್ಕದ್ದು. ಹುದ್ದೆಯ ಹೆಸರು: ಕಿರಿಯ ಸಹಾಯಕರು-07 ಹುದ್ದೆಗಳು ಹುದ್ದೆಗಳ ಸಂಖ್ಯೆ: ಉಳಿಕೆ ಮೂಲ ವೃಂದ 06 ಹುದ್ದೆಗಳು, ಕಲ್ಯಾಣ ಕರ್ನಾಟಕ 01 ಹುದ್ದೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲು ಪರಿಷ್ಕೃತ ದಿನಾಂಕವು ಈ ಕೆಳಕಂಡಂತಿರುತ್ತದೆ. ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 04.12.2024. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03.01.2025. ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ 04.01.2025. ವಯೋಮಿತಿ ದಿನಾಂಕ:12.03.2024ರ ಅಧಿಸೂಚನೆಯ ಕ್ರಮ…

Read More

ಬೆಂಗಳೂರು : ಪ್ರಸಕ್ತ(2024-25) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವೀಡರ್, ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ಸೆಟ್, ಪ್ಲೋರ್‍ಮಿಲ್, ಯಂತ್ರ ಚಾಲಿತ ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ಹಾಗೂ ತುಂತುರು ನೀರಾವರಿ ಯೋಜನೆಯಡಿಯಲ್ಲಿ ಶೇ.90ರ ರಿಯಾಯ್ತಿ ದರದಲ್ಲಿ ತುಂತುರು ನೀರಾವರಿ ಘಟಕ(ಹೆಚ್‍ಡಿಪಿಇ ಪೈಪ್ಸ್) ವಿತರಿಸಲಾಗುತ್ತಿದೆ. ಆಸಕ್ತ ರೈತರು ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಎರಡು ಭಾವಚಿತ್ರ, ರೂ.100 ರ ಛಾಪಾ ಕಾಗಗದೊಂದಿಗೆ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ರೈತರಿಗೆ ನೀರು ಸಂಗ್ರಹಣಾ ರಚನೆ(ಕೃಷಿ ಹೊಂಡ), ಕೃಷಿ ಹೊಂಡದ ಸುತ್ತಲೂ ತಂತಿ…

Read More

ಇಂದಿನ ಕಾಲದಲ್ಲಿ, ಬ್ಲೀಡಿಂಗ್ ಐ ವೈರಸ್ ಪ್ರಪಂಚದಾದ್ಯಂತ ಹರಡುತ್ತಿದೆ, ಅಂದರೆ, ಕಣ್ಣುಗಳಲ್ಲಿ ರಕ್ತಸ್ರಾವ ಅಥವಾ ರಕ್ತ ಹೆಪ್ಪುಗಟ್ಟುವಿಕೆ ಸಾಮಾನ್ಯ ವಿಷಯವಲ್ಲ. ಮಾರ್ಬರ್ಗ್, ಎಂಪಾಕ್ಸ್ ಮತ್ತು ಅಮಿಯೆನ್ಸ್‌ನಂತಹ ಅನೇಕ ದೇಶಗಳಲ್ಲಿ ಇತ್ತೀಚಿನ ಹರಡುವಿಕೆಯಿಂದಾಗಿ ಈ ವೈರಸ್ ವೇಗವಾಗಿ ಹೆಚ್ಚುತ್ತಿದೆ. ರುವಾಂಡಾದಲ್ಲಿಯೂ ಸಹ, ಈ ವೈರಸ್‌ನಿಂದ ಅನೇಕ ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಈ ವೈರಸ್‌ಗೆ ಬಲಿಯಾದರು. ಅಂತಹ ಪರಿಸ್ಥಿತಿಯಲ್ಲಿ, ಈ ವೈರಸ್ ಎಂದರೇನು, ಅದು ಕಣ್ಣುಗಳಿಗೆ ಹೇಗೆ ಹಾನಿ ಮಾಡುತ್ತದೆ ಮತ್ತು ನಾವು ಅದನ್ನು ಹೇಗೆ ತಡೆಯಬಹುದು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಬ್ಲೀಡಿಂಗ್ ಐ ವೈರಸ್ ಎಂದರೇನು? ಬ್ಲೀಡಿಂಗ್ ಕಣ್ಣಿನ ವೈರಸ್ ಅನ್ನು ವೈಜ್ಞಾನಿಕ ಭಾಷೆಯಲ್ಲಿ ಹೆಮರಾಜಿಕ್ ಕಾಂಜಂಕ್ಟಿವಿಟಿಸ್ ಎಂದು ಕರೆಯಲಾಗುತ್ತದೆ. ಇದು ಒಂದು ರೀತಿಯ ವೈರಲ್ ಸೋಂಕು. ಇದು ಸಂಭವಿಸಿದಾಗ, ಕಣ್ಣುಗಳಿಂದ ರಕ್ತ ಹರಿಯಬಹುದು. ಇದಲ್ಲದೆ, ಕಣ್ಣುಗಳ ಬಿಳಿ ಭಾಗದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗಳು ಸಂಗ್ರಹವಾಗುತ್ತವೆ ಮತ್ತು ಅದು ವೇಗವಾಗಿ ಹರಡುತ್ತದೆ. ಈ ವೈರಸ್‌ನ ಲಕ್ಷಣಗಳು ಮಾರ್ಬರ್ಗ್ ವೈರಸ್ ಅಥವಾ ರಕ್ತಸ್ರಾವ…

Read More

ಬೆಂಗಳೂರು: ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆಗೆ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆಗೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಿ, ವಾರದೊಳಗೆ ವರದಿ ಪಡೆಯಲಾಗುವುದು. ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಕೂಡ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ನಾಲ್ವರು ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಣಂತಿಯರ ಕುಟುಂಬಕ್ಕೆ ರಾಜ್ಯ ಸರ್ಕಾರ ₹ 2 ಲಕ್ಷ ಪರಿಹಾರ ಘೋಷಿಸಿದೆ. ಅಲ್ಲದೇ, ಸಾವಿಗೆ ಕಾರಣವಾದ ಔಷಧ ಪೂರೈಸಿದ ಕಂಪನಿಯಿಂದಲೂ ಪರಿಹಾರ ವಸೂಲಿ ಮಾಡಿ, ಮೃತರ ಕುಟುಂಬಕ್ಕೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1863498696463372423?ref_src=twsrc%5Etfw%7Ctwcamp%5Etweetembed%7Ctwterm%5E1863498696463372423%7Ctwgr%5E3e4cdf78caf2398cef04b83dc19b9ee4c3eb0df7%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fan-expert-committee-has-been-constituted-to-probe-the-deaths-of-pregnant-women-in-various-hospitals-in-the-state%2F

Read More