Author: kannadanewsnow57

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 23 ರ ಇಂದು ವಿವಿಧ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ 71,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದ್ದಾರೆ. ಈ ಉಪಕ್ರಮವು ರೋಜ್‌ಗಾರ್ ಮೇಳದ ಭಾಗವಾಗಿದೆ, ಇದು ಯುವಕರಲ್ಲಿ ಉದ್ಯೋಗ ಅವಕಾಶಗಳನ್ನು ಮತ್ತು ಸ್ವಯಂ ಸಬಲೀಕರಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಸಮಾರಂಭದಲ್ಲಿ ಭಾಗವಹಿಸುವವರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ (ಪಿಎಂಒ) ಪ್ರಕಟಿಸಿದೆ. ಭಾರತದಾದ್ಯಂತ 45 ಸ್ಥಳಗಳಲ್ಲಿ ನಡೆಯುತ್ತಿರುವ ರೋಜ್‌ಗಾರ್ ಮೇಳವು ಉದ್ಯೋಗ ಸೃಷ್ಟಿ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಮೋದಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ. ದೇಶದಾದ್ಯಂತದ ಹೊಸ ನೇಮಕಾತಿಗಳು ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೇರಿಕೊಳ್ಳುತ್ತವೆ. ಇವುಗಳಲ್ಲಿ ಗೃಹ ವ್ಯವಹಾರಗಳ ಸಚಿವಾಲಯ, ಅಂಚೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಮತ್ತು ಹೆಚ್ಚಿನವು ಸೇರಿವೆ. ಈ ಉಪಕ್ರಮವು ಮಿಷನ್ ಮೋಡ್‌ನಲ್ಲಿ ಖಾಲಿ ಹುದ್ದೆಗಳನ್ನು…

Read More

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಿನಿ ಲಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮದ ಬಳಿ ಮಿನಿ ಲಾರಿಗೆ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ಹನುಮಂತ ಮಲ್ಲಾಡದ (45), ಮಹಾಂತೇಶ್ ಚೌವ್ಹಾಣ್ (40) ಹಾಗೂ ಮಹಾದೇವ ಹಾಲೋಳ್ಳಿ (42) ಎಂದು ಗುರುತಿಸಲಾಗಿದೆ. ಧಾರವಾಡ ಕಡೆಯಿಂದ ಗೋವಾಗೆ ಹೊರಟ್ಟಿದ್ದ ಮಿನಿಲಾರಿ ಹಾಗೂ ಗೋವಾದಿಂದ ಚಿತ್ರದುರ್ಗಕ್ಕೆ ಹೊರಟ್ಟಿದ್ದ ಲಾರಿ ಡಿಕ್ಕಿಯಾಗಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಳ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಬೆಂಗಳೂರು : ದೇಶದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಗೆ 11 ಕೋಟಿ ರೂ. ವಂಚನೆ ಮಾಡಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಎಂದು ಕರೆ ಮಾಡಿ ಮುಂಬೈನ ಕೊಲಾಬಾದಲ್ಲಿ ನಿಮ್ಮ ಮೇಲೆ ಪ್ರಕರಣವೊಂದು ದಾಖಲಾಗಿದೆ. ನಿಮ್ಮ ಆಧಾರ್ ಕಾರ್ಡ್ ಬಳಸಿಕೊಂಡು ಹಣ ವರ್ಗಾವಣೆ ಆಗಿದೆ. 6 ಕೋಟಿ ರೂ.ವಂಚನೆ ಆಗಿದೆ ಎಂದು ಸಾಫ್ಟ್ ವೇರ್ ಎಂಜಿನಿಯರ್ ವಿಜಯ್ ಕುಮಾರ್ ಗೆ ಬೆದರಿಸಿದ್ದಾರೆ. ವಿಡಿಯೋ ಕಾಲ್ ಮಾಡಿದ ವಂಚಕರು ನಿಮ್ಮನ್ನು ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಬಳಿಕ 1 ತಿಂಗಳ ಕಾಲ ಮನೆಯಲ್ಲಿ ಇರದಂತೆ ಹೇಳಿದ್ದಾರೆ. ಅದರಂತೆ ಕೇಳಿದ ವಿಜಯ್ ಕುಮಾರ್ ಹಂತ ಹಂತವಾಗಿ ಬರೋಬ್ಬರಿ 11 ಕೋಟಿ ರೂ. ಸೈಬರ್ ವಂಚಕರ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ಯಲಹಂಕದಲ್ಲಿದ್ದ ವಿಜಯ್ ಕುಮಾರ್, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದರು. ಹೀಗಾಗಿ ಷೇರುಗಳನ್ನು ಮಾರಾಟ ಮಾಡಿಸಿ 11 ಕೋಟಿರೂ.ಗಳನ್ನು ಸೈಬರ್…

Read More

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಬಳಿಕ ಬೆಳಗಾವಿಯ ಸುವರ್ಣಸೌಧದಲ್ಲಿ ಎಂಎಲ್ ಸಿ ಸಿ.ಟಿ ರವಿ ಮೇಲೆ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿ.ಟಿ. ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ 10 ಜನರ ಮೇಲೆ ಎಫ್ ಐಆರ್ ದಾಖಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ 10 ಜನ ಅಪರಿಚಿತರ ವಿರುದ್ಧ ಸುಮೊಟೊ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು : ಹೊಸ ವರ್ಷಾಚರಣೆಗೆ ನಂದಿಗಿರಿಧಾಮಕ್ಕೆ ಹೋಗುವವರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದ್ದು, . ಡಿಸೆಂಬರ್ 31 ರ ಸಂಜೆ 6 ಗಂಟೆಯಿಂದ ಜನವರಿ 1 ರ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿ ಆದೇಶ ಹೊರಡಿಸಿದೆ. ಡಿಸೆಂಬರ್ 31ಸಂಜೆ 6 ಗಂಟೆಯಿಂದ 2025 ಜನವರಿ1ರಂದು ಬೆಳಿಗ್ಗೆ ರಾತ್ರಿ 11 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶ ಕೂಡ ನಿರ್ಬಂಧಿಸಿದೆ. ಇದೀಗ ಹೊಸ ವರ್ಷಕ್ಕೆ ಹೊರಗೆ ಹೋಗುವುದಕ್ಕೆ ಪ್ಲ್ಯಾನ್‌ ಮಾಡುತ್ತಿದ್ದಾರೆ. ಅದರಲ್ಲೂ ಹೆಚ್ಚಾಗಿ ಬೆಟ್ಟದ ಕಡೆ ಹೋಗಿ ಸಮಯ ಕಳೆಯುವುದಕ್ಕೆ ನೋಡುತ್ತಾರೆ. ಆದರೆ ಹೊಸ ವರ್ಷಾಚರಣೆಗೆ ನಂದಿಬೆಟ್ಟದಲ್ಲಿ ನಿರ್ಬಂಧ ಹೇರಲಾಗಿದೆ.ಡಿ.31ಸಂಜೆ 6 ಗಂಟೆಯಿಂದ ಜ.1 ಬೆಳಿಗ್ಗೆ 11 ಗಂಟೆವರೆಗೂ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕರ ಪ್ರವೇಶ ಹಾಗೂ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Read More

ಮಂಗಳೂರು : ಮಂಗಳೂರು ಸೆನ್ ಕ್ರೈಂ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸೈಬರ್ ವಂಚಕರಿಗೆ ಸಿಮ್ ಕಾರ್ಡ್ ಗಳನ್ನು ಪೂರೈಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರಿನ ಸೆನ್ ಕ್ರೈಂ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಸೈಬರ್ ವಂಚಕರಿಗೆ 500 ಕ್ಕೂ ಹೆಚ್ಚು ಸಿಮ್ ಕಾರ್ಡ್ ಗಳನ್ನು ಪೂರೈಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಕಣಾತಲ ವಾಸುದೇವ ರೆಡ್ಡಿ (25) ಬಂಧಿತ ಆರೋಪಿ. ಆರೋಪಿ ಕಣಾತಲ ವಾಸುದೇವ ರೆಡ್ಡಿ ಓಡಿಶಾ ಮೂಲದವನು. ಸೈಬರ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ಕಣಾತಲ ವಾಸುದೇವ ರೆಡ್ಡಿ ಸಿಮ್ ಪೂರೈಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಮಂಗಳೂರಿನ ಸೆನ್ ಪೊಲೀಸರಿಗೆ ತಿಳಿದುಬಂದಿದ್ದು, ಕೂಡಲೇ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡ ಘಟನೆ ನಡೆದಿದೆ. ತಡರಾತ್ರಿ ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಯ್ಯಪ್ಪ ಮಾಲಾಧಿಕಾರಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಈಶ್ವರ ದೇವಸ್ಥಾನದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದಾರೆ. ಗ್ಯಾಸ್ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸಿಲಿಂಡರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದ್ದು,. ಗಾಯಾಳು ಅಯ್ಯಪ್ಪ ಭಕ್ತರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ -ಧಾರವಾಡ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಭಾರತದಲ್ಲಿ ಆಧಾರ್ ಕಾರ್ಡ್ ಮಹತ್ವದ ದಾಖಲೆಯಾಗಿದೆ. ವಯಸ್ಕರಿಗೆ ಆಧಾರ್ ಕಾರ್ಡ್‌ಗಳನ್ನು ನೀಡುವಂತೆ, ಮಕ್ಕಳು ಸಹ ವಿವಿಧ ಸಂದರ್ಭಗಳಲ್ಲಿ ಆಧಾರ್ ಕಾರ್ಡ್‌ಗಳನ್ನು ನೀಡಬೇಕಾಗುತ್ತದೆ. 2018 ರಲ್ಲಿ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಕ್ಕಳಿಗೆ ಆಧಾರ್ ಪಡೆಯುವ ಸೌಲಭ್ಯವನ್ನು ಪರಿಚಯಿಸಿತು. ನೀಲಿ ಆಧಾರ್ ಕಾರ್ಡ್ ಅನ್ನು 5 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುತ್ತದೆ. ಈ ಆಧಾರ್ ಕಾರ್ಡ್‌ನ ಬಣ್ಣವು ನೀಲಿ ಬಣ್ಣದ್ದಾಗಿದೆ, ಅದಕ್ಕಾಗಿಯೇ ಇದನ್ನು ಸಾಮಾನ್ಯವಾಗಿ ನೀಲಿ ಆಧಾರ್ ಎಂದು ಕರೆಯಲಾಗುತ್ತದೆ. ಆರಂಭದಲ್ಲಿ, ಈ ಆಧಾರ್ ಕಾರ್ಡ್ ರಚಿಸಲು ಜನ್ಮ ಪ್ರಮಾಣಪತ್ರದ ಅಗತ್ಯವಿತ್ತು, ಆದರೆ ನಂತರ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ. ಈಗ, ಒಬ್ಬರು ಮಗುವಿನ ಆಧಾರ್ ಕಾರ್ಡ್‌ಗೆ ಡಿಸ್ಚಾರ್ಜ್ ಸ್ಲಿಪ್ ಅಥವಾ ಜನ್ಮ ಪ್ರಮಾಣಪತ್ರವನ್ನು ಬಳಸಿಕೊಂಡು ಪೋಷಕರಲ್ಲಿ ಒಬ್ಬರ ಆಧಾರ್ ಕಾರ್ಡ್‌ನೊಂದಿಗೆ ಅರ್ಜಿ ಸಲ್ಲಿಸಬಹುದು. ಜನನ ಪ್ರಮಾಣ ಪತ್ರ ಇಲ್ಲದಿದ್ದರೂ ಮನೆಯಿಂದಲೇ ಈ ಆಧಾರ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು. 5 ವರ್ಷಗಳ ನಂತರ ನವೀಕರಣದ ಅಗತ್ಯವಿದೆ ನೀಲಿ ಆಧಾರ್ ಕಾರ್ಡ್ ವಯಸ್ಕರ ಆಧಾರ್ ಕಾರ್ಡ್‌ಗಿಂತ ಸ್ವಲ್ಪ…

Read More

ಹೈದರಾಬಾದ್ : ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಬಂಧನಕ್ಕೊಳಗಾಗಿದ್ದ 6 ಮಂದಿ ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ. ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದ 6 ಮಂದಿಗೆ ಆರೋಪಿಗಳಿಗೆ ಜಾಮೀನು ನೀಡಲಾಗಿದ್ದು, 10 ಸಾವಿರ ರೂ. ಶ್ಯೂರಿಟಿ ನಿಡುವಂತೆ ಸೂಚನೆ ನೀಡಲಾಗಿದೆ. ನಿನ್ನೆ ಉಸ್ಮಾನಿಯಾ ವಿಶ್ವವಿದ್ಯಾಲಯದ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಸದಸ್ಯರು ಚಿತ್ರನಟ ಅಲ್ಲು ಅರ್ಜುನ್ ಅವರ ಮನೆ ಎದುರು ಭಾನುವಾರ ಸಂಜೆ ಪ್ರತಿಭಟನೆ ನಡೆಸಿದರು. ಅಲ್ಲು ಅರ್ಜುನ್ ಅವರು ಮಹಿಳೆಯ ಕುಟುಂಬಕ್ಕೆ 1 ಕೋಟಿ ರೂಪಾಯಿ ನೆರವು ನೀಡಬೇಕು ಮತ್ತು ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡಬೇಕು ಎಂದು ಪ್ರತಿಭಟನಾಕಾರರು ಜೆಎಸಿಯಿಂದ ಒತ್ತಾಯಿಸಿದರು. ಪ್ರತಿಭಟನಾಕಾರರು ನಟನ ಮನೆ ಮುಂದೆ ಘೋಷಣೆಗಳನ್ನು ಕೂಗಿದರು ಮತ್ತು ತಮ್ಮ ಬೇಡಿಕೆಗಳನ್ನು ಒತ್ತಾಯಿಸಲು ಪ್ರಯತ್ನಿಸಿದರು. ಪೊಲೀಸರು ತಕ್ಷಣ ಕ್ರಮ ಕೈಗೊಂಡು ಜೆಎಸಿ ಮುಖಂಡರನ್ನು ವಶಕ್ಕೆ ಪಡೆದರು. ಪ್ರಕರಣದಲ್ಲಿ 8…

Read More

ನವದೆಹಲಿ : ವಿವಾಹಿತ ಮಹಿಳೆಯರಿಗಾಗಿ ಛತ್ತೀಸ್‌ಗಢ ಸರ್ಕಾರದ ಯೋಜನೆಯಲ್ಲಿ ವಂಚನೆಯ ಆಘಾತಕಾರಿ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ಖಾತೆಯನ್ನು ತೆರೆದು ಪ್ರತಿ ತಿಂಗಳು 1,000 ರೂ. ಪಡೆಯುತ್ತಿದ್ದ ಘಟನೆ ನಡೆದಿದೆ. ಛತ್ತೀಸ್ ಗಢ ಬಿಜೆಪಿ ಸರ್ಕಾರದ ಮಹತಾರಿ ವಂದನ್ ಯೋಜನೆ ಅಡಿಯಲ್ಲಿ, ಛತ್ತೀಸ್‌ಗಢದಲ್ಲಿ ವಿವಾಹಿತ ಮಹಿಳೆಯರು ಪ್ರತಿ ತಿಂಗಳು ತಮ್ಮ ಖಾತೆಗಳಿಗೆ 1,000 ರೂ. ಮೊತ್ತ ಜಮಾ ಆಗುತ್ತಿದ್ದ ಖಾತೆಗಳಲ್ಲೊಂದು ಸನ್ನಿ ಲಿಯೋನ್ ಹೆಸರಲ್ಲಿರುವುದು ಇದೀಗ ಬೆಳಕಿಗೆ ಬಂದಿದೆ. ಈ ಖಾತೆಯನ್ನು ತೆರೆದು ನಿರ್ವಹಿಸಿದ ವ್ಯಕ್ತಿಯನ್ನು ವೀರೇಂದ್ರ ಜೋಶಿ ಎಂದು ಗುರುತಿಸಲಾಗಿದ್ದು, ಮುಂದಿನ ಕ್ರಮಕ್ಕಾಗಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯೋಜನೆಯ ಅರ್ಹ ಫಲಾನುಭವಿಗಳ ಪರಿಶೀಲನೆಯ ಜವಾಬ್ದಾರಿ ಹೊಂದಿರುವ ಅಧಿಕಾರಿಗಳನ್ನು ಸಹ ಗುರುತಿಸಲಾಗುತ್ತಿದೆ. ಛತ್ತೀಸ್‌ಗಢದ ಬಸ್ತಾರ್ ಪ್ರದೇಶದ ತಾಲೂರ್ ಗ್ರಾಮದಲ್ಲಿ ವಂಚನೆ ವರದಿಯಾಗಿದೆ. ಈ ಬಗ್ಗೆ ಆಳವಾದ ತನಿಖೆ ನಡೆಸಿ ಬ್ಯಾಂಕ್ ಖಾತೆಯನ್ನು ವಸೂಲಿ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಜಿಲ್ಲಾಧಿಕಾರಿ ಹಾರಿಸ್ ಸೂಚನೆ ನೀಡಿದ್ದಾರೆ.…

Read More