Subscribe to Updates
Get the latest creative news from FooBar about art, design and business.
Author: kannadanewsnow57
ಈ ವರ್ಷ ಮುಗಿಯಲು ಕೇವಲ ಒಂದು ತಿಂಗಳು ಮಾತ್ರ ಉಳಿದಿದೆ. ನವೆಂಬರ್ ತಿಂಗಳು ಮುಗಿದು ಡಿಸೆಂಬರ್ ತಿಂಗಳು ಬರುತ್ತಿದೆ. ಡಿಸೆಂಬರ್ ತಿಂಗಳು ಮುಗಿಯುತ್ತಿದ್ದಂತೆ ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಆದರೆ, ಡಿಸೆಂಬರ್ 1 ರಿಂದ ದೇಶದಲ್ಲಿ ಕೆಲವು ಹೊಸ ನಿಯಮಗಳು ಜಾರಿಗೆ ಬರಲಿವೆ. ಅದನ್ನು ನೋಡೋಣ. ದೇಶದಲ್ಲಿ ಹಲವು ನಿಯಮಗಳು ಡಿಸೆಂಬರ್ 1, 2024 ರಿಂದ ಬರಲಿವೆ. ಇವುಗಳು LPG ಬೆಲೆಗಳಿಂದ ಹಿಡಿದು ಕ್ರೆಡಿಟ್ ಕಾರ್ಡ್ ನಿಯಮಗಳವರೆಗೆ ಇರುತ್ತದೆ. ಈ ಬಾರಿ ಡಿಸೆಂಬರ್ 1 ರಿಂದ ಯಾವ ರೀತಿಯ ಬದಲಾವಣೆಗಳು ಬರಲಿವೆ..ಅವು ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ಈಗ ತಿಳಿದುಕೊಳ್ಳೋಣ. ಪ್ರತಿ ತಿಂಗಳಂತೆ ಡಿಸೆಂಬರ್ ತಿಂಗಳು ಕೂಡ ಹಲವು ದೊಡ್ಡ ಬದಲಾವಣೆಗಳನ್ನು ತರಲಿದೆ. ಈ ಬದಲಾವಣೆಗಳು ಮೊದಲ ದಿನಾಂಕದಿಂದ ಜಾರಿಗೆ ಬರುತ್ತವೆ. ಇದು ನಮ್ಮ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರುತ್ತದೆ. ಡಿಸೆಂಬರ್ 1 ರಿಂದ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ, ಕ್ರೆಡಿಟ್ ಕಾರ್ಡ್ ನಿಯಮಗಳು ಮತ್ತು ಷರತ್ತುಗಳಲ್ಲಿ ಹಲವು ಬದಲಾವಣೆಗಳಾಗಲಿವೆ.…
ನವದೆಹಲಿ : ಭಾರತೀಯಕಾನೂನಿನ ಪ್ರಕಾರ, ತಂದೆಯ ಆಸ್ತಿಯಲ್ಲಿ ಮಗಳಿಗೂ ಹಕ್ಕಿದೆ. ಭಾರತದ ಸಂವಿಧಾನದ ಹಿಂದೂ ಉತ್ತರಾಧಿಕಾರ ಕಾಯ್ದೆ 2005ರ ಪ್ರಕಾರ, ಮಗಳ ತಂದೆಯ ಆಸ್ತಿಯಲ್ಲಿ ಮಗನಂತೆ ಸಮಾನ ಹಕ್ಕು ಇದೆ. ಮಗಳು ಅವಿವಾಹಿತಳಾಗಿದ್ದರೂ ತಂದೆಯ ಆಸ್ತಿಯಲ್ಲಿ ಮಗಳಿಗೆ ಸಮಾನ ಪಾಲು ಸಿಗುತ್ತದೆ. ಇದಲ್ಲದೆ, ಮಗಳು ಮದುವೆಯಾಗಿದ್ದರೂ ಸಹ, ಮಗಳು ತಂದೆಯ ಆಸ್ತಿಯಲ್ಲಿ ಸಮಾನ ಪಾಲನ್ನ ಪಡೆಯಬಹುದು, ಈ ಸಂBIG NEWS: Do daughters also have a share in the father’s property? Find out what the law says!ದರ್ಭದಲ್ಲಿ, ಹೆಣ್ಣುಮಕ್ಕಳಿಗೆ ತಂದೆಯ ಆಸ್ತಿಯ ಮೇಲೆ ಗಂಡುಮಕ್ಕಳಷ್ಟೇ ಹಕ್ಕಿದೆ. ಕಾನೂನಿನ ಪ್ರಕಾರ, ತಂದೆಯು ತನ್ನ ಮರಣದ ಮೊದಲು ತನ್ನ ಉಯಿಲಿನಲ್ಲಿ ಮಗನ ಹೆಸರನ್ನ ಮಾತ್ರ ಸೇರಿಸಿದರೆ ಮತ್ತು ತನ್ನ ಮಗಳ ಹೆಸರನ್ನ ಸೇರಿಸದಿದ್ದರೆ, ಅಂತಹ ಪರಿಸ್ಥಿತಿಯಲ್ಲಿ ಹೆಣ್ಣುಮಕ್ಕಳು ತಮ್ಮ ತಂದೆಯ ಆಸ್ತಿಯ ಮೇಲೆ ಹಕ್ಕು ಸಾಧಿಸಲು ಸಾಧ್ಯವಿಲ್ಲ. ತಂದೆ ಖರೀದಿಸಿದ ಆಸ್ತಿ: ತಂದೆ ಆಸ್ತಿಯನ್ನು ಖರೀದಿಸಿದರೆ, ಅದನ್ನು ಯಾರಿಗೆ…
BREAKING : ರಾಜ್ಯದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : `KSRTC’ಯ 1,308 ನೌಕರರಿಗೆ `ಅಂತರ ನಿಗಮ ವರ್ಗಾವಣೆ’ ಭಾಗ್ಯ.!
ಬೆಂಗಳೂರು : ನೌಕರರ ಕೋರಿಕೆ ಮೇರೆಗೆ ಕೆಎಸ್ಆರ್ ಟಿಸಿ ಅಂತರ ನಿಗಮ ವರ್ಗಾವಣೆಯಲ್ಲಿ ಒಟ್ಟು 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಕಲ್ಪಿಸಲಾಗಿದೆ. ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ ksrtc.org/transfer ರಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದೇ ಪ್ರಥಮ ಬಾರಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ಹಾಗೂ ತೀವ್ರ ತರಹದ ಅನಾರೋಗ್ಯ (ಹೃದಯ ರೋಗ, ಕ್ಯಾನ್ಸರ್, ಸ್ಪಯಿನಾಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಭಂದಿಸಿದ ಖಾಯಿಲೆಗಳು) ನೌಕರರ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಮೀಸಲಿರಿಸಲಾಗಿದೆ. * ನೌಕರರ ಪತಿ ಅಥವಾ ಪತ್ನಿಯು ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರದ ಸ್ವಾಮ್ಯದ ಸಂಸ್ಥೆಯ ಅಧಿಕಾರಿ/ನೌಕರರಾಗಿ ಬೇರೆ ಬೇರೆ…
ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ವಯನಾಡ್ ನೂತನ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ವಯನಾಡ್ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿ, ಸಂಸತ್ತು ಪ್ರವೇಶಿಸಿರುವ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಇಂದು ದೆಹಲಿಯಲ್ಲಿ ಭೇಟಿಯಾಗಿ, ಭರ್ಜರಿ ಗೆಲುವಿಗೆ ಅಭಿನಂದಿಸಿದೆ. ಸಂಸತ್ತಿನ ಒಳಗೆ ಮತ್ತು ಹೊರಗೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಜನಪರವಾದ ಧ್ವನಿಗೆ ಈ ಗೆಲುವಿನಿಂದ ಬಲ ಬಂದಿದೆ ಎಂದು ತಿಳಿಸಿದ್ದಾರೆ. https://twitter.com/siddaramaiah/status/1862402377384435902?ref_src=twsrc%5Egoogle%7Ctwcamp%5Eserp%7Ctwgr%5Etweet
ನವದೆಹಲಿ : ಮಥುರಾ ಶ್ರೀ ಕೃಷ್ಣ ಜನ್ಮಭೂಮಿ-ಈದ್ಗಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಮುಂದಿನ ವಿಚಾರಣೆ ಡಿಸೆಂಬರ್ 9 ರಂದು ನಡೆಯಲಿದೆ. ಹೈಕೋರ್ಟ್ನಲ್ಲಿ ಹಿಂದೂ ಪರ ಅರ್ಜಿಗಳು ಅಂಗೀಕಾರವಾದ ನಂತರ, ಮುಸ್ಲಿಂ ಕಡೆಯವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ನ ಏಕ ಪೀಠದ ತೀರ್ಪಿನ ಮೇಲ್ಮನವಿ ಹೈಕೋರ್ಟ್ನ ವಿಸ್ತೃತ ಪೀಠದಲ್ಲಿ ಸಾಧ್ಯವೇ ಅಥವಾ ಇಲ್ಲವೇ ಎಂಬುದನ್ನು ನೋಡಲಾಗುವುದು ಎಂದು ಸಿಜೆಐ ಹೇಳಿದರು. ವಿವಾದ ಹಿನ್ನೆಲೆ ಪ್ರಸ್ತುತ, ಮಥುರಾ ಶ್ರೀ ಕೃಷ್ಣ ಜನ್ಮಭೂಮಿ-ಈದ್ಗಾ ವಿವಾದವು ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನ ಮತ್ತು ಶಾಹಿ ಈದ್ಗಾ ಮಸೀದಿಯ 13.37 ಎಕರೆ ಭೂಮಿಗೆ ಸಂಬಂಧಿಸಿದೆ. ಸುಮಾರು 11 ಎಕರೆ ಜಾಗದಲ್ಲಿ ದೇವಸ್ಥಾನ ಮತ್ತು 2.37 ಎಕರೆ ಜಾಗದಲ್ಲಿ ಮಸೀದಿ ಇದೆ. ಈ ಮಸೀದಿಯನ್ನು 1669-70ರಲ್ಲಿ ಔರಂಗಜೇಬನು ನಿರ್ಮಿಸಿದನು. ಶ್ರೀ ಕೃಷ್ಣನ ಜನ್ಮಸ್ಥಳದ ಮೇಲೆ ನಿರ್ಮಿಸಲಾದ ಪುರಾತನ ಕೇಶವನಾಥ ದೇವಾಲಯವನ್ನು ಕೆಡವಿ ಔರಂಗಜೇಬ್ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಿದ ಎಂದು ಹಿಂದೂ ಕಡೆಯವರು ಹೇಳಿಕೊಳ್ಳುತ್ತಾರೆ. ಶಾಹಿ ಈದ್ಗಾ…
ನವದೆಹಲಿ : ಡಿಸೆಂಬರ್ 5 ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಈ ಸಮಾವೇಶಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನುಮತಿ ನೀಡಿದ್ದಾರೆ. ಹಾಸನದಲ್ಲಿ ಆಯೋಜಿಸಿದ್ದ ಸ್ವಾಭಿಮಾನಿ ಸಮಾವೇಶಕ್ಕೆ ಕಾಂಗ್ರೆಸ್ ನ ಕೆಲ ನಾಯಕರಿಂದಲೇ ಅಪಸ್ವರ ವ್ಯಕ್ತವಾಗಿತ್ತು. ಅಲ್ಲದೇ ಸ್ವಾಭಿಮಾನಿ ಸಮಾವೇಶದ ಬಗ್ಗೆ ಎಐಸಿಸಿಗೂ ದೂರು ನೀಡಲಾಗಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರನ್ನು ಭೇಟಿಯಾಗಿ, ಸ್ವಾಭಿಮಾನಿ ಸಮಾವೇಶ್ವದ ಮಹತ್ವ ವಿವರಿಸಿದ್ದಾರೆ. ಸ್ವಾಭಿಮಾನಿ ಸಮಾವೇಶಕ್ಕೆ ಕೆಲ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದು ಪಕ್ಷದ ಚಿಹ್ನೆ ಬಳಸಿ ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ನಡೆಸಲು ಮನವಿ ಮಾಡಿದ್ದರು. ಆದರೆ ಇದೀಗ ಸ್ವಾಭಿಮಾನ ಸಮಾವೇಶಕ್ಕೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರ ಪ್ರಾರಂಭಿಸಿರುವ ಡಾ. ಪುನೀತ್ ರಾಜ್ಕುಮಾರ್ ಹೃದಯಜ್ಯೋತಿ ಯೋಜನೆ ಜನರ ಹೃದಯ ಗೆದ್ದಿದ್ದು, ಈ ಯೋಜನೆ ಅಡಿಯಲ್ಲಿ ಹೃದಯಾಘಾತಕ್ಕೆ ‘ಟೆನೆಕ್ಟ್ ಪ್ಲಸ್’ ಚುಚ್ಚುಮದ್ದು 348 ಹೃದ್ರೋಗಿಗಳ ಅಮೂಲ್ಯ ಜೀವಗಳನ್ನು ಉಳಿಸಿದೆ. ಕಾಂಗ್ರೆಸ್ ಸರ್ಕಾರ ಪ್ರಾರಂಭಿಸಿರುವ ಡಾ. ಪುನೀತ್ ರಾಜ್ಕುಮಾರ್ ಹೃದಯಜ್ಯೋತಿ ಯೋಜನೆಯ ಅಡಿಯಲ್ಲಿ ಹೃದಯಾಘಾತಕ್ಕೆ ಒಳಗಾದವರಿಗೆ ನೀಡುತ್ತಿರುವ ‘ಟೆನೆಕ್ಟ್ ಪ್ಲಸ್’ ಚುಚ್ಚುಮದ್ದು 348 ಹೃದ್ರೋಗಿಗಳ ಅಮೂಲ್ಯ ಜೀವಗಳನ್ನು ಉಳಿಸಿದೆ. ‘ಟೆನೆಕ್ಟ್ ಪ್ಲಸ್ʼ ಚುಚ್ಚುಮದ್ದನ್ನು ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗಿದ್ದು, ಈ ಚುಚ್ಚುಮದ್ದಿಗೆ ₹30,000 ದರವಿದ್ದು, ಕಾಂಗ್ರೆಸ್ ಸರ್ಕಾರ ಉಚಿತವಾಗಿ ನೀಡುತ್ತಿದೆ. ಈಗಾಗಲೇ 5,000ಕ್ಕೂ ಹೆಚ್ಚು ತೀವ್ರ ಹೃದಯರೋಗಿಗಳನ್ನು ಪತ್ತೆ ಹಚ್ಚಿ, 3,000ಕ್ಕೂ ಹೆಚ್ಚು ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ಒದಗಿಸಲಾಗಿದೆ. https://twitter.com/INCKarnataka/status/1862372211291492438
ನವದೆಹಲಿ : ಸಿಎಂ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು, ರಾಜ್ಯದ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದಾರೆ. ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರೈತರಿಗೆ ನೀಡುವ ನಬಾರ್ಡ್ ಸಾಲ ಪ್ರಮಾಣ ಹೆಚ್ಚಳ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ, ಮೇಕೆದಾಟು ಹಾಗೂ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡುವುದು, 16ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ಹಂಚಿಕೆ ಮಾಡುವುದು ಸೇರಿದಂತೆ ರಾಜ್ಯದ ಹಿತಾಸಕ್ತಿಯ ಹಲವು ವಿಚಾರಗಳನ್ನು ಒಳಗೊಂಡ ಮನವಿ ಪತ್ರವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. https://twitter.com/siddaramaiah/status/1862395604170682716?ref_src=twsrc%5Egoogle%7Ctwcamp%5Eserp%7Ctwgr%5Etweet ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಬೇಟಿಯಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳು ಸಂಸತ್ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ನವದೆಹಲಿ : ಉತ್ತರ ಪ್ರದೇಶದ ಸಂಭಾಲ್ನ ಶಾಹಿ ಜಾಮಾ ಮಸೀದಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ವಿಚಾರಣೆ ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದೆ. ನವೆಂಬರ್ 19ರ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಸೀದಿ ಆಡಳಿತ ಸಮಿತಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದೆ. ಮೊಘಲರ ಕಾಲದ ಸಂಬಲ್ ಜಾಮಾ ಮಸೀದಿಯನ್ನು ಸರ್ವೆ ಮಾಡುವಂತೆ ಕೆಳ ನ್ಯಾಯಾಲಯ ತನ್ನ ಆದೇಶದಲ್ಲಿ ಸೂಚಿಸಿತ್ತು. ಪ್ರಾಚೀನ ಹರಿಹರ ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾದ ನವೆಂಬರ್ 29 ರ ಕಾರಣ ಪಟ್ಟಿಯ ಪ್ರಕಾರ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ಇಂದು ಅರ್ಜಿಯ ವಿಚಾರಣೆ ನಡೆಸಿದೆ. ಜನವರಿ 8 ರವರೆಗೆ ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮುಂದಿನ ಕ್ರಮ ತೆಗೆದುಕೊಳ್ಳದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಅಡ್ವೊಕೇಟ್ ಕಮಿಷನರ್ ಅವರ ಸಮೀಕ್ಷೆಯ ವರದಿಯನ್ನು ಗೌಪ್ಯವಾಗಿಡಲಾಗುವುದು.ಹೈಕೋರ್ಟ್ ಪ್ರಕರಣವನ್ನು ಪರಿಶೀಲಿಸಿ ಸೂಕ್ತ ಆದೇಶಗಳನ್ನು ಹೊರಡಿಸುವವರೆಗೆ ವಿಚಾರಣಾ ನ್ಯಾಯಾಲಯವು ಯಾವುದೇ…
ಬೆಂಗಳೂರು : ₹2,500 ಕೋಟಿ ವೆಚ್ಚದಲ್ಲಿ ರಾಜ್ಯದ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ ಮಕ್ಕಳ ಪರಿಪೂರ್ಣ ಮನೋವಿಕಾಸಕ್ಕೆ ದಾರಿಮಾಡಿಕೊಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. Asian Development Bank ನ 2500 ಕೋಟಿ ಗಳ ಬಾಹ್ಯ ನಿಧಿ ಸಹಯೋಗದೊಂದಿಗೆ ಜುಲೈ 2025 ರಿಂದ ಜೂನ್ 2029 ರವರೆಗೆ ಅಸ್ತಿತ್ವದಲ್ಲಿರುವ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸುವ ಉಪಕ್ರಮವನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ. https://twitter.com/siddaramaiah/status/1862390267380166763?ref_src=twsrc%5Egoogle%7Ctwcamp%5Eserp%7Ctwgr%5Etweet · ಕೇಂದ್ರ ಪ್ರವಾಸೋದ್ಯಮದ ‘ಸ್ವದೇಶ್ ದರ್ಶನ್ 2.0’ ಯೋಜನೆಯಡಿ ಮೈಸೂರಿನಲ್ಲಿ Ecological Experience Zone ನ್ನು 18.47 ಕೋಟಿ ಮೊತ್ತದಲ್ಲಿ ಹಾಗೂ ಹಂಪಿಯಲ್ಲಿ Travellers Nook ನ್ನು 25.63 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿಪಡಿಸುವ ಸಂಬಂಧ ಟೆಂಡರ್ ಕರೆಯಲು ಕರ್ನಾಟಕ…










