Author: kannadanewsnow57

ಬೆಂಗಳೂರು : ಇತ್ತೀಚಿಗೆ ಎಲ್ಲೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಮಕ್ಕಳ ಮೇಲೆ ನಾಯಿಗಳು ದಾಳಿ ಮಾಡುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.  ಬೆಂಗಳೂರಿನ ಕೆ.ಆರ್ ಪುರಂ ನ ಸೊನ್ನೆನಹಳ್ಳಿಯಲ್ಲಿ ರಸ್ತೆಯಲ್ಲಿ ಆಟವಾಡುವಾಗ ಬಾಲಕನ ಮೇಲೆ 6 ಬೀದಿ ನಾಯಿಗಳು ದಾಳಿ ಮಾಡಿವೆ. ಕೂಡಲೇ ಬಾಲಕ ಜೋರಾಗಿ ಕಿರುಚಿಕೊಂಡಿದ್ದು ಸ್ಥಳೀಯರು ಓಡಿ ಬಂದ ಕಾರಣ ಅನಾಹುತ ತಪ್ಪಿದೆ. ಆಟವಾಡುತ್ತಿದ್ದ ಬಾಲಕನ ಮೇಲೆ ಆರು ಬೀದಿ ನಾಯಿಗಳು ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಬಾಲಕ ಪಾರಾಗಿದ್ದಾನೆ. ಬೀದಿ ನಾಯಿಗಳ ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Read More

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಕಾಲಾವಧಿಯನ್ನು ದಿನಾಂಕ 31-12-24 ರವರೆಗೆ ವಿಸ್ತರಿಸಲಾಗಿದ್ದು, ಈ ಅವಧಿಯೊಳಗೆ ಪರೀಕ್ಷೆ ಉತ್ತೀರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಗೆ ಅನರ್ಹವಾಗಲಿದ್ದಾರೆ ಎನ್ನಲಾಗಿದೆ. ಈ ಪರೀಕ್ಷೆಯು ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿ,ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿಗೆ ಒಂದು ಅರ್ಹತಾ ಮಾನದಂಡವಾಗಿರುತ್ತದೆ.ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅವಧಿ 31-12-24 ರವರೆಗೆ ವಿಸ್ತರಿಸಲಾಗಿತ್ತು‌. ಸದರಿ ಅವಧಿಯೊಳಗೆ ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿ ಯಲ್ಲಿ ಅರ್ಹನಾಗತಕ್ಕದ್ದಲ್ಲ ಎಂದು ನಿಯಮಗಳಲ್ಲಿ ಸ್ಪಷ್ಟಪಡಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ನ್ನು ರೂಪಿಸಲಾಗಿದೆ. ಈ ನಿಯಮಾವಳಿಗಳ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

Read More

ನವದೆಹಲಿ : ವಿಮಾನ ಪ್ರಯಾಣಿಕರಿಗೆ ಪ್ರಮುಖ ಪರಿಹಾರವಾಗಿ ನಾಗರಿಕ ವಿಮಾನಯಾನ ಸಚಿವಾಲಯವು “ಉಡಾನ್ ಯಾತ್ರಿ ಕೆಫೆ” ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ, ಆಹಾರ ಮತ್ತು ನೀರಿನಂತಹ ಮೂಲಭೂತ ಅಗತ್ಯಗಳನ್ನು ಕೈಗೆಟುಕುವ ಮತ್ತು ಸಮಂಜಸವಾದ ದರದಲ್ಲಿ ಒದಗಿಸಲು ವಿಮಾನನಿಲ್ದಾಣದಲ್ಲಿ ಉಪಹಾರ ಉಡಾನ್ ಯಾತ್ರಿ ಕೆಫೆ ಪ್ರಾರಂಭಿಸುವುದಾಗಿ ಹೇಳಿದೆ.  ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಈ ರೀತಿಯ ಉಪಕ್ರಮವನ್ನು ಪ್ರಾರಂಭಿಸಲಾಗುತ್ತಿದೆ ಮತ್ತು ಇದು ಯಶಸ್ವಿಯಾದರೆ, ಇದನ್ನು ದೇಶದಾದ್ಯಂತ ಇತರ ವಿಮಾನ ನಿಲ್ದಾಣಗಳಲ್ಲಿ ಪುನರಾವರ್ತಿಸಲಾಗುತ್ತದೆ, ಇದನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ನಿರ್ವಹಿಸುತ್ತದೆ. ಕುತೂಹಲಕಾರಿಯಾಗಿ, ಎಎಪಿ ಸಂಸದ ರಾಘವ್ ಚಡ್ಡಾ ಅವರು ವಿಮಾನ ನಿಲ್ದಾಣಗಳಲ್ಲಿ, ಸಂಸತ್ತಿನಲ್ಲಿ ಅಧಿಕ ಬೆಲೆಯ ಆಹಾರ ಮತ್ತು ಪಾನೀಯಗಳ ಸಮಸ್ಯೆಯನ್ನು ಫ್ಲ್ಯಾಗ್ ಮಾಡಿದ್ದಾರೆ ಮತ್ತು ವಿಮಾನ ಪ್ರಯಾಣವನ್ನು ಕೈಗೆಟುಕುವಂತೆ ಮಾಡಲು ‘ಸರಿಪಡಿಸುವ ಕ್ರಮಗಳನ್ನು’ ಹುಡುಕುತ್ತಿದ್ದಾರೆ. ಕೋಲ್ಕತ್ತಾದ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೊದಲ “ಉಡಾನ್ ಯಾತ್ರಿ ಕೆಫೆ” ಅನ್ನು ಪ್ರಾರಂಭಿಸುವುದರೊಂದಿಗೆ, ವಿಮಾನ ಪ್ರಯಾಣಿಕರು ನೀರಿನ…

Read More

ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶವಿದ್ದು, ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಪ್ರತ್ಯಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ ಎಂದು ತಿಳಿಸಿದ್ದಾರೆ. ಬಳಿಕ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದಾರೆ. ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ್ದೇವೆ ಎಂದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡ ಘಟನೆ ನಡೆದಿದೆ. ತಡರಾತ್ರಿ ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಯ್ಯಪ್ಪ ಮಾಲಾಧಿಕಾರಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಈಶ್ವರ ದೇವಸ್ಥಾನದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದಾರೆ. ಗ್ಯಾಸ್ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸಿಲಿಂಡರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದ್ದು,. ಗಾಯಾಳು ಅಯ್ಯಪ್ಪ ಭಕ್ತರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ -ಧಾರವಾಡ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಮಂಡ್ಯ: ಮಂಡ್ಯದಲ್ಲಿ ಅದ್ದೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆ ಬಿದ್ದಿದೆ. ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಣಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 5 ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ. 1. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನು ರಾಜ್ಯ ಸಮಿತಿ ಉಪಾಧ್ಯಕ್ಷರನ್ನಾಗಿಸಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ. 2 .ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ನಿಯಮ ಸಮಗ್ರವಾಗಿ ಕೂಡಲೇ ಜಾರಿಯಾಗಬೇಕು. 3.ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ಕೋರ್ಟ್ ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸರ್ಕಾರ ಸಮರ್ಥವಾಗಿ ಎದುರಿಸಬೇಕು. ಸರೋಜಿನಿ ಮಹಿಷಿ ವರದಿ ಅನುಷ್ಠಾನಗೊಳಿಸಬೇಕು. 4.ಎಲ್ಲಾ ಕನ್ನಡ ಶಾಲೆಗಳಿಗೆ ಕಟ್ಟಡ, ಆಟದ ಮೈದಾನ ಸೇರಿ ಇತರೆ ಮೂಲ ಸೌಕರ್ಯ ಒದಗಿಸಬೇಕು. ಶಿಕ್ಷಕರ ನೇಮಕಾತಿಗೆ ತ್ವರಿತ ಕ್ರಮ ಕೈಗೊಳ್ಳಬೇಕು. 5.ಕನ್ನಡೇತರ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡಬೇಕು. ರಾಷ್ಟ್ರಕವಿಯನ್ನು ಅತಿ ಶೀಘ್ರದಲ್ಲೇ ಘೋಷಿಸಬೇಕು

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ಇಸ್ರೊ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 23.12.2024 (ಸೋಮವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 03:00 ಗಂಟೆವರೆಗೆ ಹಾಗೂ ಡಿಸೆಂಬರ್ 24 ರ ನಾಳೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಡಿಸೆಂಬರ್ 23 ರ ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಇಸ್ರೊ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಕುಮಾರಸ್ವಾಮಿ ಲೇಔಟ್, ಯಲಚೇನಹಳ್ಳಿ ಇಲಿಯಾಸ್ ನಗರ, ಗಂಗಾಧರನಗರ, ವಿವೇಕಾನಂದ ಕಾಲೋನಿ, ಪ್ರಗತಿಪುರ, ಸರಬಂಡೆಪಾಳ್ಯ, ಪ್ರತಿಭಾ ಇಂಡಸ್ಟ್ರಿಯಲ್ ಏರಿಯಾ, ಸುಪ್ರಿಮ್ ಲೇದರ್ ಗಾರ್ಮೆಂಟ್ಸ್, ಚಂದ್ರ ನಗರ, ಕಾಶಿ ನಗರ, ವಿಕ್ರಮ್ ನಗರ, ನಂಜಪ್ಪ ಲೇಔಟ್, ಬಿಕಾಸಿಪುರ, ಟೀಚರ್ಸ್ ಕಾಲೋನಿ, ಜೆ.ಹೆಚ್.ಬಿ.ಸಿ.ಎಸ್. ಲೇಔಟ್, ಬೇಂದ್ರೇನಗರ, ಈಶ್ವರನಗರ, ಮಿನಾಜ್ ನಗರ, ಕನಕ ಲೇಔಟ್, ಕನಕನಗರ, ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಡಿ.24ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ L&T ಅಪಾರ್ಟ್‌ಮೆಂಟ್,…

Read More

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1,500 ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ, ಆರೋಗ್ಯ ಇಲಾಖೆಯಲ್ಲಿ 1,205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ(ANM) ಮತ್ತು 300 ಆರೋಗ್ಯ ನಿರೀಕ್ಷಣಾಧಿಕಾರಿ(HIO) ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ಪಡೆಯಲಾಗಿದ್ದು, ಕರ್ನಾಟಕ ಲೋಕಸೇವಾ ಆಯೋಗ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕಾತಿ ನಡೆಸಲಿದೆ. ಆರಂಭದಲ್ಲಿ ಈ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಕಾಯಂ ನೇಮಕಾತಿ ಸಂದರ್ಭದಲ್ಲಿ ಗುತ್ತಿಗೆ ನೌಕರಿ ಸೇವೆಯನ್ನು ಪರಿಗಣಿಸದೆ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ನೇಮಕಾತಿ ನಡೆಸುವಂತೆ ಸೂಚನೆ ನೀಡಲಾಗಿದೆ.

Read More

ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭಿಸಿದ್ದು, ರೈತರು ತಮ್ಮ ವಿವಿಧ ಕೃಷಿ ಬೆಳೆಗಳಿಗೆ ಬೆಳೆ ವಿಮೆ ಮಾಡಿಕೊಳ್ಳಬೇಕು. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ. ನೋಂದಣಿ: ಕುಸುಮೆ, ಜೋಳ, ಸೂರ್ಯಕಾಂತಿ, ಮೆಕ್ಕೆ ಜೋಳ ಬೆಳೆಗಳಿಗೆ ಡಿ.16 ಕೊನೆಯ ದಿನ. ಕಡಲೆ ಬೆಳೆಗೆ ಡಿ.31 ಕೊನೆಯ ದಿನವಾಗಿದೆ.ಬೆಳೆಗಳ ವಿಮೆ ನೋಂದಣಿಗೆ ತಾಲ್ಲೂಕು, ಹೋಬಳಿ, ಗ್ರಾಮ ಪಂಚಾಯತಿಗಳಿಗೆ ನಿಗದಿಪಡಿಸಿದ್ದು, ನಿಗದಿತ ಘಟಕದಲ್ಲಿ ಬೆಳೆ ನೋಂದಣಿ ಮಾಡಲಾಗುವುದು. ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರ, ರೈತರು ತಮ್ಮ ವ್ಯವಹಾರದ ಬ್ಯಾಂಕ್ಗಳಿಗೆ ಸಂಪರ್ಕಿಸಬಹುದು. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ವಿಮಾ ಸಂಸ್ಥೆಯ ತಾಲ್ಲೂಕು ಪ್ರತಿನಿಧಿಗೆ…

Read More

ಲಕ್ನೋ: ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧವಾಗಿದ್ದ ಪ್ರಿಯಕರನನ್ನು ಕೊನೆಯ ಬಾರಿಗೆ ಅವನನ್ನು ನೋಡಲು ಕರೆದು, ಆತನ ಖಾಸಗಿ ಅಂಗವನ್ನು ಯುವತಿಯೊಬ್ಬಳು ಚಾಕುವಿನಿಂದ ಕತ್ತರಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದಿದೆ. ಜೋಡಿ ಎಂಟು ವರ್ಷಗಳಿಂದ ಪ್ರೇಮ ಸಂಬಂಧ ಹೊಂದಿದ್ದರು. ಆದರೆ ಯುವಕ ಬೇರೆ ಯುವತಿಯನ್ನು ಮದುವೆಯಾಗಲು ಸಿದ್ಧನಾಗಿದ್ದಾನೆ. ಈ ವಿಷಯ ಆತನ ಗೆಳತಿಗೆ ತಿಳಿಯಿತು. ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯೋಚಿಸಿದಳು. ಇದೇ ವೇಳೆ ಮಹಿಳೆ ತನ್ನ ಪ್ರಿಯಕರನನ್ನು ಕೊನೆಯ ಬಾರಿಗೆ ಭೇಟಿಯಾಗಲು ಕರೆದಿದ್ದಾಳೆ. ಏಕಾಂತ ಪ್ರದೇಶದಲ್ಲಿ ಭೇಟಿಯಾದ ಬಳಿಕ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗುವ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಹಿನ್ನಲೆಯಲ್ಲಿ ಯುವತಿ ತಾನು ತಂದಿದ್ದ ಚಾಕುವಿನಿಂದ ಯುವಕನ ಖಾಸಗಿ ಅಂಗವನ್ನು ಕತ್ತರಿಸಿದ್ದಾನೆ. ಬಳಿಕ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮತ್ತೊಂದೆಡೆ ಆ ವ್ಯಕ್ತಿ ತನ್ನ ಖಾಸಗಿ ಅಂಗಕ್ಕೆ ಪೆಟ್ಟು ಬಿದ್ದು ರಕ್ತಸ್ರಾವವಾಗುತ್ತಿದ್ದರೂ ಗೆಳತಿಯ ಕೈ ಗಾಯಕ್ಕೆ ಬಟ್ಟೆ ತೊಡಿಸಿ ಆಕೆಯ ಪ್ರಾಣ…

Read More