Author: kannadanewsnow57

ಮುಂಬೈ : ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಮುಂಬೈ ಟ್ರಾಫಿಕ್ ಪೊಲೀಸರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು ಆತಂಕ ಸೃಷ್ಟಿಯಾಗಿದೆ.  ನವೆಂಬರ್ 27 ರಂದು ರಾತ್ರಿ 9 ಗಂಟೆ ಸುಮಾರಿಗೆ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಲಾಗುತ್ತಿದೆ ಎಂದು ಕರೆ ಮಾಡಿದ ವ್ಯಕ್ತಿ ಹೇಳಿಕೊಂಡಿದ್ದಾನೆ. ಈ ಕರೆಯ ಗಂಭೀರತೆಯನ್ನು ಕಂಡ ಮುಂಬೈ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಕರೆ ಮಾಡಿದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಈ ಬೆದರಿಕೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ಇದರ ಹಿಂದಿನ ಸತ್ಯವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಮುಂಬೈ ಟ್ರಾಫಿಕ್ ಕಂಟ್ರೋಲ್ ರೂಮಿನಲ್ಲಿ ಬೆದರಿಕೆ ಸಂದೇಶವೊಂದು ಬಂದಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಈ ಸಂದೇಶ ಬಂದಿತ್ತು. ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಮೇಲಿನ ಹಾಡಿನ ಬಗ್ಗೆ ಏನಾದರೂ ಮಾಡಲಾಗುವುದು ಎಂದು…

Read More

ನವದೆಹಲಿ : ತಂತ್ರಜ್ಞಾನದ ತ್ವರಿತ ಬೆಳವಣಿಗೆಯು ಮುಂದಿನ ಆರು ತಿಂಗಳಲ್ಲಿ ಮಾಹಿತಿ ತಂತ್ರಜ್ಞಾನ (ಐಟಿ) ಸೇವಾ ವಲಯದಲ್ಲಿ ನೇಮಕಾತಿಯನ್ನು 10-12 ಪ್ರತಿಶತದಷ್ಟು ಹೆಚ್ಚಿಸುವ ನಿರೀಕ್ಷೆಯಿದೆ. ತಂತ್ರಜ್ಞಾನದಲ್ಲಿನ ಪ್ರಗತಿಗಳು ಪ್ರಪಂಚದಾದ್ಯಂತದ ಕೈಗಾರಿಕೆಗಳು ಮತ್ತು ಆರ್ಥಿಕತೆಯನ್ನು ಮರುರೂಪಿಸುತ್ತಿವೆ. ಬುಧವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಮಾಹಿತಿ ನೀಡಲಾಗಿದೆ. ಜನರೇಟಿವ್ ಎಐ, ಡೀಪ್ ಟೆಕ್ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್‌ನಂತಹ ಉದಯೋನ್ಮುಖ ತಂತ್ರಜ್ಞಾನಗಳು 2030 ರ ವೇಳೆಗೆ 1 ಮಿಲಿಯನ್‌ಗಿಂತಲೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುತ್ತವೆ ಎಂದು ವ್ಯಾಪಾರ ಸೇವಾ ಪೂರೈಕೆದಾರ ಕ್ವೆಸ್ ಕಾರ್ಪ್ ವರದಿ ಮಾಡಿದೆ. ವರದಿಯ ಪ್ರಕಾರ, ಮೊದಲ ತ್ರೈಮಾಸಿಕಕ್ಕೆ ಹೋಲಿಸಿದರೆ ಎರಡನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) ದೇಶಾದ್ಯಂತ ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ) ಮತ್ತು ಸೈಬರ್ ಸೆಕ್ಯುರಿಟಿಯಲ್ಲಿ ಪ್ರತಿಭಾವಂತರ ಬೇಡಿಕೆಯು ಕ್ರಮವಾಗಿ ಶೇಕಡಾ 71 ಮತ್ತು 58 ರಷ್ಟು ಹೆಚ್ಚಾಗಿದೆ. (ಏಪ್ರಿಲ್-ಜೂನ್). ಕ್ವೆಸ್ ಐಟಿ ಸ್ಟಾಫಿಂಗ್‌ನ ಸಿಇಒ ಕಪಿಲ್ ಜೋಶಿ ಮಾತನಾಡಿ, “ಭಾರತವು ತನ್ನ ಬೆಳೆಯುತ್ತಿರುವ ತಂತ್ರಜ್ಞಾನ ಪ್ರತಿಭೆ ಮತ್ತು ನವೀನ ಮನೋಭಾವದಿಂದ ಈ ಡಿಜಿಟಲ್…

Read More

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೋಜನೆ ರೂಪಿಸಲಾಗಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ ಸರ್ಕಾರವುಸಬ್ಸಿಡಿ ಮೊತ್ತವನ್ನು ಶೇ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದೆ.ಕುಸುಮ್ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ಗಳು, ಮೌಂಟಿಂಗ್ ಸ್ಟ್ರಕ್ಟರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೌರ ಪಂಪ್ಸೆಟ್ಗಳ ಸ್ಥಾಪನೆ ಸುಲಭವಾಗಿದ್ದು,…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ ಪ್ರಕರಣ ಬೆಳಕಿಗೆ ಬಂದಿದ್ದು, 24 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಿನ್ನೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸೋನಿಯಾ (24) ಎಂದು ಗುರುತಿಸಲಾಗಿದೆ. ಮನೆಯ ಆರ್ಥಿಕ ಒತ್ತಡದಿಂದ ಮನನೊಂದು ಈಕೆ ಸೂಸೈಡ್ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಒಂದು ಪ್ರಕಾರಣವನ್ನು ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರ ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆ ವೇಳೆ ಖುದ್ದು ಹಾಜರಾತಿಯನ್ನು ವಿಸ್ತರಿಸಿ, ವಿಚಾರಣೆಯನ್ನು ಡಿಸೆಂಬರ್ 2 ರಂದು ನಿಗದಿಪಡಿಸಿ ಕೋರ್ಟ್ ಆದೇಶ ಹೊರಡಿಸಿತು. ಪೋಕ್ಸೋ ಪ್ರಕರಣಕ್ಕೆ ಸಂಬಂಧಸಿದಂತೆ ಮಧ್ಯಂತರ ಆದೇಶ ಇರುವುದರಿಂದ ವಿಚಾರಣೆ ಸ್ಥಗಿತವಾಗಿದೆ. ಪೋಕ್ಸೋ ಕೇಸ್ ಆಗಿರುವುದರಿಂದ ತುರ್ತು ವಿಚಾರಣೆ ಮಾಡಿ ಎಂದು ಮನವಿ ಮಾಡಿಕೊಳ್ಳಲಾಗಿತ್ತು. ಸರ್ಕಾರದ ಎಸ್ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿಕೊಂಡಿದ್ದರು. ಈ ವೇಳೆ ಡಿಸೆಂಬರ್ 2ರ ಮಧ್ಯಾಹ್ನ 2:30 ಕ್ಕೆ ವಿಚಾರಣೆ ನಿಗದಿ ಪಡಿಸಿ ಹೈಕೋರ್ಟ್ ಅದೇಶಿಸಿದೆ. ಅಲ್ಲದೇ ಬಿಎಸ್ ಯಡಿಯೂರಪ್ಪ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿದ್ದ ಆದೇಶ ಕೂಡ ವಿಸ್ತರಣೆಯಾಗಿದೆ. ಪ್ರಕರಣದ ಹಿನ್ನೆಲೆ ಈ ವರ್ಷದ ಮಾರ್ಚ್ 3 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಡಿಯೂರಪ್ಪ ವಿರುದ್ಧ ಪೋಕ್ಸೋ…

Read More

ಶಿವಮೊಗ್ಗ : ಮಲೆನಾಡಿನ ಜನರ ಆರಾಧ್ಯದೈವ ಶ್ರೀ ರೇಣುಕಾದೇವಿ ಚಂದ್ರಗುತ್ತಿ ಕ್ಷೇತ್ರದ ವಿಕಾಸಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚನೆ, 12ನೇ ಶತಮಾನದ ಪ್ರಸಿದ್ಧ ಶರಣ ಹಾಗೂ ಮೊದಲ ಸಂಸತ್ತಿನ ಮೊದಲ ಪೀಠಾಧ್ಯಕ್ಷ ಅಲ್ಲಮಪ್ರಭುದೇವರ ಜನ್ಮಸ್ಥಳ ಬಳ್ಳಿಗಾವೆ ಹಾಗೂ ಶಿವಮೊಗ್ಗ ನಗರದಲ್ಲಿ ನೂತನವಾಗಿ ಹೆಸರಿಸಲಾದ ಅಲ್ಲಮಪ್ರಭು(ಪ್ರೀಡಂ ಪಾರ್ಕ್) ಮೈದಾನವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವುದಾಗಿ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ಸಮಾಲೋಚನೆ ನಡೆಸಿದಂತೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಕಟ್ಟಡ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕಟ್ಟಡಗಳನ್ನು ಒಂದೇ ಕಟ್ಟಡ ಸಂಕೀರ್ಣದಲ್ಲಿ ನಿರ್ಮಿಸಲು ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಹಿಂದಿನ ನಿವೇಶನವನ್ನು ಕಾಯ್ದಿರಿಸಲಾಗಿದ್ದು, ಜಿಲ್ಲೆಯ ಜನರಿಗೆ ಎಲ್ಲಾ ರೀತಿಯ ಅನುಕೂಲವಾಗುವಂತೆ…

Read More

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೋಜನೆ ರೂಪಿಸಲಾಗಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ ಸರ್ಕಾರವುಸಬ್ಸಿಡಿ ಮೊತ್ತವನ್ನು ಶೇ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದೆ.ಕುಸುಮ್ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ಗಳು, ಮೌಂಟಿಂಗ್ ಸ್ಟ್ರಕ್ಟರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೌರ ಪಂಪ್ಸೆಟ್ಗಳ ಸ್ಥಾಪನೆ ಸುಲಭವಾಗಿದ್ದು,…

Read More

ನವದೆಹಲಿ : ಒಪ್ಪಿಗೆಯ ದೈಹಿಕ ಸಂಬಂಧವನ್ನು ಅಪರಾಧೀಕರಣಗೊಳಿಸುವ ಆತಂಕಕಾರಿ ಪ್ರವೃತ್ತಿಯ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವಿವಾಹದ ಸುಳ್ಳು ಭರವಸೆಯ ಮೇಲೆ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ವರ್ಷಗಳ ಕಾಲ ವಿವಾಹೇತರ ಸಂಬಂಧ ಹೊಂದಿರುವ ಮಹಿಳೆ ಅತ್ಯಾಚಾರದ ಆರೋಪವನ್ನು ಹೊರಿಸುವಂತಿಲ್ಲ ಎಂದು ಹೇಳಿದೆ. ಮುಂಬೈನ ಖಾರ್ಘರ್ ಪೊಲೀಸ್ ಠಾಣೆಯಲ್ಲಿ ಮಹೇಶ್ ದಾಮು ಖರೆ ವಿರುದ್ಧ ವನಿತಾ ಎಸ್ ಜಾಧವ್ ಎಂಬುವರು ದಾಖಲಿಸಿದ ಏಳು ವರ್ಷಗಳ ಹಳೆಯ ಎಫ್‌ಐಆರ್ ಅನ್ನು ರದ್ದುಗೊಳಿಸಿದ ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು, ಒಮ್ಮತದ ಸಂಬಂಧಗಳು ದೀರ್ಘಕಾಲದವರೆಗೆ ನಡೆಯುತ್ತಿರುವುದು ಆತಂಕಕಾರಿ ಪ್ರವೃತ್ತಿಯಾಗಿದೆ. ಅವಧಿಗಳು, ಹುಳಿಯಾಗಿ ಪರಿಣಮಿಸಿದ ನಂತರ, ಕ್ರಿಮಿನಲ್ ಎಂದು ಪರಿಗಣಿಸಲಾಗಿದೆ.ಲೈಂಗಿಕ ಸಂಬಂಧದ ಒಪ್ಪಿಗೆಯ ಆಧಾರದ ಮೇಲೆ ಮದುವೆಯಾಗುವ ಭರವಸೆಯ ಉಲ್ಲಂಘನೆಯ ದೂರನ್ನು ಪಡೆದ ವಂಚನೆಗೊಳಗಾದ ಮಹಿಳೆಯು ತ್ವರಿತವಾಗಿ ಸಲ್ಲಿಸಬೇಕು ಮತ್ತು ವರ್ಷಗಳ ಕಾಲ ದೈಹಿಕ ಸಂಬಂಧವನ್ನು ಮುಂದುವರೆಸಿದ ನಂತರ ಅಲ್ಲ ಎಂದು ಹೇಳಿದೆ. ವಿವಾಹಿತ…

Read More

ರಾಮನಗರ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ರಾಮನಗರ ಜಿಲ್ಲೆಯ ದಯಾನಂದ್ ಸಾಗರ ಆಸ್ಪತ್ರೆಯಲ್ಲಿ ತಾಯಿ ಒಬ್ಬಳು ಕ್ರೂರವಾಗಿ ವರ್ತಿಸಿದ್ದು ಎರಡು ದಿನದ ಮಗುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಒತ್ತಿರುವ ಅಮಾನವೀಯ ಘಟನೆ ರಾಮನಗರ ಜಿಲ್ಲೆಯ ದಯಾನಂದ್ ಸಾಗರ ಆಸ್ಪತ್ರೆಯಲ್ಲಿ ನಡೆದಿದೆ. ಹೌದು ರಾಮನಗರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಹೆತ್ತ ತಾಯಿ ಕ್ರೂರಿಯಾಗಿ ವರ್ತಿಸಿದ ಘಟನೆ ನಡೆದಿದೆ. ಹುಟ್ಟಿದ ಮಗುವನ್ನೇ ಟಾಯ್ಲೆಟ್ ಗೆ ಹಾಕಿ ಫ್ಲೆಶ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಈ ಒಂದು ಕೃತ್ಯ ನಡೆದಿದೆ. ಟಾಯ್ಲೆಟ್ ಪರಿಶೀಲನೆ ಮಾಡುವ ವೇಳೆ ಗಂಡು ಶಿಶು ಪತ್ತೆಯಾಗಿದೆ. ಎರಡು ದಿನದ ನವಜಾತ ಕಂಡು ಶಿಶು ಪತ್ತೆಯಾಗಿದೆ. ಪತ್ತೆಯಾದ ನವಜಾತ ಶಿಶುವಿನ ನೋಡಿ ಆಸ್ಪತ್ರೆಯ ಸಿಬ್ಬಂದಿಗಳೇ ಶಾಕ್ ಆಗಿದ್ದಾರೆ. ರಾಮನಗರ ಜಿಲ್ಲೆಯ ದನ ದಯಾನಂದ್ ಸಾಗರ ಆಸ್ಪತ್ರೆಯಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ. ಆದರೆ ಈ ಒಂದು ನವಜಾತ ಶಿಶು ಯಾರದ್ದು, ಯಾರು ಈ…

Read More

ಮುಂಬೈ: ಇತ್ತೀಚೆಗೆ ದುಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಐಶ್ವರ್ಯಾ ರೈ ಹೆಸರನ್ನು ‘ಬಚ್ಚನ್’ ಉಪನಾಮವಿಲ್ಲದೆ ಪ್ರದರ್ಶಿಸಲಾಯಿತು. ಬಾಲಿವುಡ್ ನಟಿ ದುಬೈನಲ್ಲಿ ನಡೆದ ಗ್ಲೋಬಲ್ ವುಮೆನ್ಸ್ ಫೋರಂನಲ್ಲಿ ಭಾಗವಹಿಸಿದರು, ಅಲ್ಲಿ ಅವರು ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣದ ಕುರಿತು ಸ್ಪೂರ್ತಿದಾಯಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ, ದುಬೈ ವುಮೆನ್ ಎಸ್ಟಾಬ್ಲಿಷ್ಮೆಂಟ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೀಡಿಯೊಗಳು ಐಶ್ವರ್ಯಾ ಮಹಿಳೆಯರನ್ನು ಪ್ರೋತ್ಸಾಹಿಸುವುದನ್ನು ಮತ್ತು ನಿರ್ಣಯದ ಮಹತ್ವವನ್ನು ಎತ್ತಿ ತೋರಿಸಿದವು. ಆದರೆ, ವೀಕ್ಷಕರ ಗಮನ ಸೆಳೆದದ್ದು ಆಕೆಯ ಹೆಸರು ಪರದೆಯ ಮೇಲೆ ಕಾಣಿಸಿಕೊಂಡ ರೀತಿ – ಸರಳವಾಗಿ ‘ಐಶ್ವರ್ಯಾ ರೈ – ಇಂಟರ್ನ್ಯಾಷನಲ್ ಸ್ಟಾರ್.’ ‘ಬಚ್ಚನ್’ ಉಪನಾಮದ ಈ ಲೋಪವು ಆನ್‌ಲೈನ್‌ನಲ್ಲಿ ವ್ಯಾಪಕ ಚರ್ಚೆಗಳಿಗೆ ಕಾರಣವಾಯಿತು. https://youtube.com/shorts/ghp2dBseUjI?si=QVv41Ny10tQa3KE-

Read More