Author: kannadanewsnow57

ಬೆಂಗಳೂರು : ಹೃದಯಾಘಾತ ತಡೆಯಲು ಆರೋಗ್ಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. ಪುನೀತ್ ರಾಜ್ಕುಮಾರ್ ʼಹೃದಯಜ್ಯೋತಿʼ ಯೋಜನೆ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗಿದೆ. ವರ್ಷಕ್ಕೊಮ್ಮೆ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೂ ಕನಿಷ್ಠ ಆರೋಗ್ಯ ತಪಾಸಣೆ ಹಾಗೂ ಖಾಸಗಿ ಕಂಪನಿ, ಕಾರ್ಖಾನೆ, ಉದ್ದಿಮೆಗಳ ನೌಕರರಿಗೆ ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆಗೆ ನಿರ್ದೇಶನ ನೀಡಲಾಗಿದೆ. ಶಾಲಾ ಮಕ್ಕಳಿಗೆ ವರ್ಷಕ್ಕೊಮ್ಮೆ ಇಲಾಖೆಯಿಂದಲೇ ಆರೋಗ್ಯ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯದಲ್ಲಿ ಹೃದಯ ಸಂಬಂಧಿ ಪಾಠ ಅಳವಡಿಕೆಗೆ ಚಿಂತನೆ ನಡೆಸಲಾಗಿದೆ. ಯುವ ವರ್ಗದಲ್ಲಿ ಹೃದಯಾಘಾತ, ಹಠಾತ್ ಸಾವು ಸಂಭವಿಸುತ್ತಿರುವ ಕಾರಣ ಮುಂದಿನ ಶೈಕ್ಷಣಿಕ ವರ್ಷದಿಂದ ಹೃದಯಾಘಾತ ಹಾಗೂ ಹೃದಯದ ಆರೋಗ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ವಿಚಾರವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲು ಚಿಂತನೆ ನಡೆದಿದೆ. ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಕೈಗೊಳ್ಳಲಿರುವ ಎಲ್ಲ ಕ್ರಮಗಳ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಮುಂದುವರಿಯಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Read More

ಬೆಂಗಳೂರು : ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. ಅಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಈ ನಿರ್ಧಾರ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳು ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಈ ಶಾಲೆಯ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತವಾಗಿ ಬಸ್ ವ್ಯವಸ್ಥೆ ಆರಂಭಿಸಲು ಸರ್ಕಾರ ತೀರ್ಮಾನ ನಿರ್ಧಾರ ಕೈಗೊಂಡಿದೆ. ಯಾವ ಭಾಗದಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಉಚಿತ ಬಸ್ ವ್ಯವಸ್ಥೆಗಳನ್ನು ಮೊದಲು ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಕೆಲಸಗಳು ಆಗುತ್ತಿವೆ. ರಾಜ್ಯ ಸರ್ಕಾರ ಮತ್ತು ಅಜೀಮ್ ಪ್ರೇಮಜಿ ಫೌಂಡೇಶನ್ ಸಹಯೋಗದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ…

Read More

ಬೆಂಗಳೂರು : 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-184(3) ರಲ್ಲಿ ಘೋಷಿಸಿರುವಂತೆ 2025-26ನೇ ಸಾಲಿಗೆ “50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು” ಸರ್ಕಾರದ ಮಂಜೂರಾತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರ.ಸಂ.(1) ರ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ -184(3) ರಲ್ಲಿ ಈ ಕೆಳಕಂಡಂತೆ ಘೋಷಿಸಲಾಗಿರುತ್ತದೆ. 100 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ತೆರೆಯುವುದು ” ಮೇಲೆ ಓದಲಾದ ಕ್ರ.ಸಂ.(2) ರ ಸರ್ಕಾರದ ಆದೇಶದಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-184 (3)ರ ಘೋಷಣೆಯಂತೆ, ಮೊದಲ ಹಂತದಲ್ಲಿ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 60 ಸಂಖ್ಯಾಬಲದ 50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು ಮಂಜೂರಾತಿ ನೀಡಿ, ಪ್ರತಿ ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗೆ 07 ಹುದ್ದೆಗಳಂತೆ ಒಟ್ಟು 350 ಬೋಧಕ ಹುದ್ದೆಗಳನ್ನು ಸೃಜಿಸಿ ಭರ್ತಿ ಮಾಡಿಕೊಳ್ಳಲು ಅನುಮೋದನೆ ನೀಡಿ ಆದೇಶಿಸಿದೆ. 2025-26ನೇ ಸಾಲಿನಲ್ಲಿ 50…

Read More

ಜಿಲ್ಲಾ ಔಧ್ಯಮಿಕ ಕೇಂದ್ರ ಯೋಜನೆಯಡಿಯಲ್ಲಿ 2025-26 ನೇ ಸಾಲಿನಲ್ಲಿ ಹಾಸನ ಜಿಲ್ಲೆಯ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳನ್ನು ಹಾಗೂ ವೃತ್ತಿನಿರತ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳ ವಿತರಣೆ ಯೋಜನೆಯಡಿ ಗ್ರಾಮೀಣ ಕುಶಲಕರ್ಮಿಗಳಿಗೆ ಟೈಲರಿಂಗ್, ಮರಗೆಲಸ, ಗಾರೆಕೆಲಸ, ಕ್ಷೌರಿಕ, ದೋಬಿ, ಎಲೆಕ್ಟಿçಕಲ್ ರಿಪೇರಿ, ಬೋರ್‌ಬೇಲ್ ರಿಪೇರಿ/ಮೋಟರ್ ವೈಂಡಿಂಗ್ ಉಪಕರಣಗಳನ್ನು ಉಚಿತವಾಗಿ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಹಾಸನ ಜಿಲ್ಲಾ ಆಡಳಿತ ವೆಬ್‌ಸೈಟ್ ಲಿಂಕ್  ನಲ್ಲಿ ಅರ್ಜಿಯನ್ನು ಆನ್‌ಲೈನ್ ಮೂಲಕ ದಾಖಲಾತಿಗಳೊಂದಿಗೆ ದಿನಾಂಕ: 31-08-2025 ರೊಳಗೆ ಅರ್ಜಿ ಸಲ್ಲಿಸಲು ಕೊರಲಾಗಿದೆ. ನಿಗದಿತ ಗುರಿಗಿಂತ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾದಲ್ಲಿ ಲಾಟರಿ ಮುಖಾಂತರ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಉಪನಿರ್ದೇಶಕರು(ಗ್ರಾ.ಕೈ) ಜಿಲ್ಲಾ ಪಂಚಾಯತ್, ಕೈಗಾರಿಕಾ ವಿಭಾಗ, ಹಾಸನ ರವರು ತಿಳಿಸಿದ್ದಾರೆ.

Read More

ನವದೆಹಲಿ : ಕೇಂದ್ರ ಶಿಕ್ಷಣ ಸಚಿವಾಲಯ ನಡೆಸಿದ ಸಮೀಕ್ಷೆಯೊಂದರಲ್ಲಿ, 6ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಕೇವಲ ಶೇ.53ರಷ್ಟು ಮಕ್ಕಳಿಗೆ 10ರ ವರೆಗಿನ ಬರುತ್ತದೆ ಎಂದು ತಿಳಿದುಬಂದಿದೆ. ಎನ್ಸಿಇಆರ್ಟಿಯ ಘಟಕವಾಗಿರುವ ಪರಾಖ್ ರಾಷ್ಟ್ರೀಯ ಸರ್ವೇಕ್ಷಣವನ್ನು ಕಳೆದ ವರ್ಷ ಡಿ.4ರಂದು ನಡೆಸಲಾಗಿತ್ತು. ದೇ ಶದ 36 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 74,229 ಶಾಲೆ ಗಳಲ್ಲಿ 3, 6 ಮತ್ತು 9 ನೇ ತರಗತಿಗಳ ಸರ್ಕಾರಿ ಮತ್ತು ಖಾಸಗಿ ಶಾಲೆಗಳ 21,15,022 ವಿದ್ಯಾರ್ಥಿಗಳು ಮತ್ತು ಮಕ್ಕಳನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು. 6ನೇ ತರಗತಿಯ ಶೇ.53ರಷ್ಟು ವಿದ್ಯಾರ್ಥಿಗಳು 10ರ ತನಕ ಮಗ್ಗಿಯನ್ನು ಕಲಿತಿದ್ದು, ಅನ್ಯ ವಿಷಯಗಳಿಗೆ ಹೋಲಿಸಿದರೆ ಗಣಿತದಲ್ಲೇ ಅತಿ ಕಡಿಮೆ ಅಂಕಗಳನ್ನು ಪಡೆದಿದ್ದಾರೆ. 9ನೇ ತರಗತಿಯಲ್ಲಿ, ಅಚ್ಚರಿಯೆಂಬಂತೆ ಕೇಂದ್ರ ಸರ್ಕಾರಿ ಶಾಲೆ ಗಳ ಮಕ್ಕಳು ಗಣಿತದಲ್ಲಿ ಒಳ್ಳೆ ಅಂಕ ಪಡೆದಿದ್ದಾರೆ. ಆದರೆ ಖಾಸಗಿ ಶಾಲೆಗಳಲ್ಲಿ ಕಳಪೆ ಗಣಿತ ಪ್ರದರ್ಶನ ಮುಂದುವರೆದಿದೆ. ಪ್ರಾಥಮಿಕ ಹಂತದಲ್ಲಿ ಗಳಿಕೆಯ ಮಟ್ಟವು ಕೋವಿಡ್ ಪೂರ್ವ ಮಟ್ಟಕ್ಕೆ ಇನ್ನೂ ಪುಟಿದೇಳಬೇಕಾಗಿದೆ, 3 ನೇ ತರಗತಿಯ…

Read More

ಬೆಂಗಳೂರು : ಯುವ ವರ್ಗದಲ್ಲಿ ಹೃದಯಾಘಾತ, ಹಠಾತ್ ಸಾವು ಸಂಭವಿಸುತ್ತಿರುವ ಕಾರಣ ಮುಂದಿನ ಶೈಕ್ಷಣಿಕ ವರ್ಷದಿಂದ ಹೃದಯಾಘಾತ ಹಾಗೂ ಹೃದಯದ ಆರೋಗ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ವಿಚಾರವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲು ಚಿಂತನೆ ನಡೆದಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಕೈಗೊಳ್ಳಲಿರುವ ಎಲ್ಲ ಕ್ರಮಗಳ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಮುಂದುವರಿಯಲಾಗುವುದು ಎಂದು ಹೇಳಿದ್ದಾರೆ. ಮಧುಮೇಹ, ರಕ್ತದೊತ್ತಡ, ಒಬೆಸಿಟಿ ಹೆಚ್ಚಾಗಿದೆ. ಸ್ಟೀರಾಯ್ಡ್ ಹೆಚ್ಚಿನ ಬಳಕೆಯೂ ಕೂಡ ಕಾರಣವಾಗಿದೆ. ಕೋವಿಡ್ ಪೂರ್ವದಲ್ಲಿ ಜಯದೇವ ಆಸ್ಪತ್ರೆ ಮೆಡಿಕಲ್ ರೆಕಾರ್ಡ್ಸ್ ಗೆ ಹೊಲಿಕೆ ಮಾಡಿ ಕೂಡಾ ವರದಿ ಸಿದ್ಧಪಡಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ 253 ಹೃದ್ರೋಗ ರೋಗಿಗಳ ಮೇಲೆ ಅಧ್ಯಯನ ಮಾಡಲಾಗಿದೆ. ಹೃದಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ ಎಂದು ತಿಳಿದುಬಂದಿದೆ. ಎಂಆರ್ ಎನ್ ಎ ಲಸಿಕೆಯಿಂದ ಕೊಂಚ ಸಮಸ್ಯೆ ಎದುರಾಗಿದೆ. ಆದರೆ ಈ ಲಸಿಕೆಯನ್ನು ನಮ್ಮ ದೇಶದಲ್ಲಿ ಯಾರು ಪಡೆದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…

Read More

ನವದೆಹಲಿ : ಬ್ಯಾಂಕಿಂಗ್, ವಿಮೆ, ಅಂಚೆ ಸೇವೆಗಳಿಂದ ಹಿಡಿದು ಕಲ್ಲಿದ್ದಲು ಗಣಿಗಾರಿಕೆಯವರೆಗಿನ ಕ್ಷೇತ್ರಗಳ ಸುಮಾರು 25 ಕೋಟಿ ಕಾರ್ಮಿಕರು ಇಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಕಾರ್ಪೊರೇಟ್ ಪರ ನೀತಿಗಳ ವಿರುದ್ಧ ಪ್ರತಿಭಟಿಸಲು 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿರುವ ಮುಷ್ಕರವನ್ನು ‘ಭಾರತ್ ಬಂದ್’ ಎಂದು ಬಣ್ಣಿಸಲಾಗಿದೆ. ಔಪಚಾರಿಕ ಮತ್ತು ಅನೌಪಚಾರಿಕ ವಲಯಗಳಲ್ಲಿ ತಿಂಗಳುಗಳ ತೀವ್ರ ಸಿದ್ಧತೆಗಳನ್ನು ಉಲ್ಲೇಖಿಸಿ ಕಾರ್ಮಿಕ ಸಂಘಗಳು “ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸಲು” ಕರೆ ನೀಡಿವೆ. “25 ಕೋಟಿಗೂ ಹೆಚ್ಚು ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರೈತರು ಮತ್ತು ಗ್ರಾಮೀಣ ಕಾರ್ಮಿಕರು ದೇಶಾದ್ಯಂತ ಪ್ರತಿಭಟನೆಯಲ್ಲಿ ಸೇರಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ನ ಅಮರ್ಜೀತ್ ಕೌರ್ ತಿಳಿಸಿದ್ದಾರೆ. ವ್ಯಾಪಕ ಕ್ರಮವು ಪ್ರಮುಖ ಸಾರ್ವಜನಿಕ ಸೇವೆಗಳು ಮತ್ತು ಕೈಗಾರಿಕೆಗಳ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆಯಿದೆ.…

Read More

ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕಾಲಮಿತಿ ಬಡ್ತಿ, ಸ್ವಯಂ ಚಾಲಿತ ಬಡ್ತಿ, ವಿಶೇಷ ಹೆಚ್ಚುವರಿ ಬಡ್ತಿ ಮಂಜೂರಾತಿಗಾಗಿ ಈ ಕೆಳಗಿನ ದಾಖಲೆಗಳು ಕಡ್ಡಾಯವಾಗಿದೆ. ಸದರಿ ಅರ್ಜಿಯೊಂದಿಗೆ ಈ ಕೆಳಕಂಡ ದಾಖಲೆಗಳು ಕಡ್ಡಾಯ 1) 5 ವರ್ಷಗಳ ಕಾರ್ಯ ನಿರ್ವಹಣಾ ವರದಿ (ವರ್ಷವಾರು) 2) ಮುಂಬಡ್ತಿ ನಿರಾಕರಿಸಿಲ್ಲದಿರುವ ಬಗ್ಗೆ ದೃಢೀಕರಣ 3) ನ್ಯಾಯಾಂಗ ವಿಚಾರಣೆ / ಕ್ರಿಮಿನಲ್ ಮೊಕದ್ದಮೆ / ಇಲಾಖಾ ವಿಚಾರಣೆ ಇಲ್ಲದಿರುವ ಬಗ್ಗೆ ದೃಢೀಕರಣ 4) ಅನಧೀಕೃತ ಗೈರು ಆಗಿಲ್ಲದ ಮತ್ತು ವೇತನ ರಹಿತ ರಜೆ ತೆಗೆದುಕೊಂಡಿಲ್ಲದ ಬಗ್ಗೆ ದೃಢೀಕರಣ 5) ಸೇವಾ ವಿಚ್ಚಿನ್ನತೆ ಆಗಿಲ್ಲದ ಬಗ್ಗೆ ದೃಢೀಕರಣ

Read More

ಬೆಳಗಾವಿ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಬೈಲಹೊಂಗಲ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ನೂತನ ಕೊಠಡಿಗಳ ಉದ್ಘಾಟನೆ ಮತ್ತು 2025-26ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಹಾಗೂ ಎನ್‌ಎಸ್‌ಎಸ್ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು,ಒಳಮೀಸಲಾತಿ ಸಮೀಕ್ಷೆ ವರದಿ ಬಂದ ತಕ್ಷಣ ಶಾಲೆಗಳಿಗೆ ಮತ್ತು ಅನುದಾನಿತ ಶಾಲೆಗಳಿಗೆ, ಕಾಲೇಜುಗಳಿಗೆ ಒಟ್ಟು 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನೀಟ್, ಸಿಇಟಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಡ ವಿದ್ಯಾರ್ಥಿಗಳನ್ನು ತಯಾರು ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 25 ಸಾವಿರ ಮಕ್ಕಳಿಗೆ ಉಚಿತ ಕೋಚಿಂಗ್ ನೀಡುತ್ತಿದೆ. ಇದು ದೇಶದಲ್ಲಿಯೇ ಇತಿಹಾಸವಾಗಿದೆ. ಮುಂಬರುವ ದಿನಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಕ್ರಮ ಕೈಕೊಳ್ಳಲಾಗುವದು ಎಂದರು. ಮಕ್ಕಳ ಕಲಿಕೆಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಕೆ…

Read More

ಬೆಂಗಳೂರು : ಪರಿವೀಕ್ಷಣಾ ಅವಧಿಯಲ್ಲಿ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗಧೀಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಪರಿವೀಕ್ಷಣಾ ಅವಧಿಯನ್ನು ತೃತ್ತಿಕರವಾಗಿ ಪೂರೈಸಿದ ಕೂಡಲೇ ವಾರ್ಷಿಕ ವೇತನ ಬಡ್ತಿ ಮಂಜೂರು ಮಾಡುವುದಕ್ಕೆ ಸಂಬಂಧಿಸಿದಂತೆ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ನೇಮಕಾತಿ ಹೊಂದಿರುವ ಸರ್ಕಾರಿ ನೌಕರರು ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿರುವ ಘೋಷಣೆ ನಂತರದಲ್ಲಿ ವಾರ್ಷಿಕ ವೇತನ ಬಡ್ತಿ ಬಿಡುಗಡೆಗೆ ಒಳಗೊಂಡಂತೆ ಸಕ್ಷಮ ಪ್ರಾಧಿಕಾರಗಳಿಂದ ವೇತನ ನಿಗಧಿ ಆದೇಶಗಳನ್ನು ಹೊರಡಿಸಲು ಸಾಮಾನ್ಯವಾಗಿ ವಿಳಂಬವಾಗುತ್ತಿದೆ. ಇದರಿಂದ ಅನಗತ್ಯ ತೊಂದರೆಯುಂಟಾಗುತ್ತಿದೆ. ಈ ಸನ್ನಿವೇಶಗಳನ್ನು ಸರಿಪಡಿಸುವ ದೃಷ್ಟಿಯಿಂದ ವೇತನ ನಿಗಧಿ ಆದೇಶಗಳು/ವಾರ್ಷಿಕ ವೇತನ ಬಡ್ತಿ ಬಿಡುಗಡೆಗಳಂತಹ ಪ್ರಕರಣಗಳಲ್ಲಿ ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿದ ಘೋಷಣಾ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಮಂಜೂರು ಮಾಡುವ ಕುರಿತು ಸೂಚನೆ ನೀಡುವಂತೆ ಆಯೋಗವು ಶಿಫಾರಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ಗ್ರೂಪ್-ಸಿ ಮತ್ತು ಡಿ ವೃಂದದ ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿಯನ್ನು ವಿಸ್ತರಿಸಿದ ಸಂದರ್ಭದಲ್ಲಿ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳು…

Read More