Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : 14 ವರ್ಷದ ಅತ್ಯಾಚಾರ ಸಂತ್ರಸ್ತೆಯೊಬ್ಬಳು ತನ್ನ 30 ವಾರಗಳ ಗರ್ಭಧಾರಣೆಯನ್ನು ಕೊನೆಗೊಳಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು. ಆದರೆ, ಈಗ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಪೀಠವು ಬಾಲಕಿಯ ಪೋಷಕರೊಂದಿಗೆ ಮಾತನಾಡಿದ ನಂತರ ಏಪ್ರಿಲ್ 22 ರ ಆದೇಶವನ್ನು ಸೋಮವಾರ ಹಿಂತೆಗೆದುಕೊಂಡಿತು. ಏಪ್ರಿಲ್ 22 ರಂದು ಸುಪ್ರೀಂ ಕೋರ್ಟ್ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ಅಪ್ರಾಪ್ತ ಬಾಲಕಿಗೆ ಗರ್ಭಪಾತ ಮಾಡಲು ಅವಕಾಶ ನೀಡುವ ಅಧಿಕಾರವನ್ನು ಚಲಾಯಿಸಿತ್ತು. ಅನುಚ್ಛೇದ 142 ರ ಅಡಿಯಲ್ಲಿ, ಯಾವುದೇ ಪ್ರಕರಣದಲ್ಲಿ ಸಂಪೂರ್ಣ ನ್ಯಾಯಕ್ಕಾಗಿ ಅಗತ್ಯ ಆದೇಶಗಳನ್ನು ಹೊರಡಿಸುವ ಹಕ್ಕನ್ನು ನ್ಯಾಯಾಲಯ ಹೊಂದಿದೆ. ಆದರೆ, ಸೋಮವಾರ ಸಿಜೆಐ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ, ಮನೋಜ್ ಮಿಶ್ರಾ ಅವರ ನ್ಯಾಯಪೀಠವು ಮಧ್ಯಾಹ್ನ 2 ಗಂಟೆಗೆ ನ್ಯಾಯಾಲಯದಲ್ಲಿ ಈ ವಿಷಯವನ್ನು ಆಲಿಸಿತು ಮತ್ತು ನ್ಯಾಯಪೀಠಕ್ಕೆ ಸಹಾಯ ಮಾಡುತ್ತಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಮತ್ತು ಅಪ್ರಾಪ್ತ ಬಾಲಕಿಯ ಪೋಷಕರ ವಕೀಲರೊಂದಿಗೆ ಮಾತನಾಡಿತು. ಬಾಲಕಿಯ ಪೋಷಕರು ನ್ಯಾಯಾಧೀಶರೊಂದಿಗೆ…
ದಾವಣಗೆರೆ : ಕುಟುಂಬದಲ್ಲಿ ತಂದೆ, ತಾಯಿ, ಮಕ್ಕಳಿದ್ದರೆ ಅದೇನೋ ಚಂದದ ಮನೆಯಂತೆ ಕಾಣುತ್ತದೆ. ಅನೇಕರ ದಾಂಪತ್ಯದಲ್ಲಿ ಮಕ್ಕಳ ಫಲವಿಲ್ಲದೇ ಜೀವನದ ನಿರುತ್ಸಾಹ, ನಿರಾಸೆ ಭಾವನೆಯಿಂದ ದಿನಗಳನ್ನು ಸಾಗಿಸುತ್ತಾರೆ. ಕಳೆದ 16 ವಷರ್Àಗಳಿಂದ ಮಕ್ಕಳಿಲ್ಲದೆ ನಿರಾಸೆಯಾಗಿದ್ದ ಬಳ್ಳಾರಿ ಮೂಲದ ದಂಪತಿಗಳು ಸರ್ಕಾರದಿಂದ 4 ತಿಂಗಳ ಗಂಡು ಮಗುವನ್ನು ದತ್ತು ಪಡೆದಿದ್ದಾರೆ. ದಾವಣಗೆರೆ ಜಿಲ್ಲಾ ದತ್ತು ಸ್ವೀಕಾರ ಕೇಂದ್ರದಿಂದ ಬಳ್ಳಾರಿ ಮೂಲದ ದಂಪತಿಗಳು ಸೋಮವಾರ ಮಗುವನ್ನು ದತ್ತು ಪಡೆದಿದ್ದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ಮಗುವನ್ನು ದತ್ತು ನೀಡಿದರು. ಮಕ್ಕಳಿಲ್ಲದವರು ಮತ್ತು ಮಕ್ಕಳನ್ನು ಸಾಕಲು ಸಾಕಬಯಸುವ ಪೋಷಕರು ಮಕ್ಕಳನ್ನು ದತ್ತು ಪಡೆಯಲು ಅವಕಾಶ ಇರುತ್ತದೆ. ಪ್ರತಿಯೊಂದು ಜಿಲ್ಲೆಯಲ್ಲಿ ದತ್ತು ಸ್ವೀಕಾರ ಕೇಂದ್ರಗಳಿರುತ್ತವೆ. ಅನಾಥವಾಗಿರುವ ಮಗು, ಮಗು ಬೇಡವಾದ ದಂಪತಿಗಳಿಂದ ಮಗು ಸ್ವೀಕಾರ, ಮಗು ಪೋಷಣೆ ಮಾಡಲು ಸಾಧ್ಯವಾಗದವರಿಂದ ಮಗುವನ್ನು ಈ ಕೇಂದ್ರದಲ್ಲಿ ಪಡೆಯಲಾಗುತ್ತದೆ. ಈ ಮಗುವನ್ನು ಇಲ್ಲಿ ಪಾಲನೆ ಪೋಷಣೆ ಮಾಡಿ ಮಗುವಿಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಸರ್ಕಾರದಿಂದ ಕಲ್ಪಿಸಿ ಮಗುವನ್ನು ಪಾಲನೆ,…
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ಬೇಗೆಗೆ ರಾಜ್ಯದಲ್ಲಿ ಇಬ್ಬರು ವೃದ್ಧೆಯರು ಸಾವನ್ನಪ್ಪಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕುರಕುಂದಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಾಲಾ ಹೂಳೆತ್ತುವ ಕೆಲಸ ಮಾಡುತ್ತಿದ್ದಾಗ ಬಿಸಿಲಿನ ತಾಪದಿಂದ ಕುಸಿದು ಬಿದ್ದು ಹಣಮಂತಿ ಮಲ್ಲಿಕಾರ್ಜುನಪ್ಪ (೫೨) ಎಂಬ ಮಹಿಳೆ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಿಸಿಲಿನ ತಾಪದಿಂದ ದಾರಿ ಮದ್ಯೆಯೇ ಕುಸಿದು ಬಿದ್ದು ರತ್ನಮ್ಮ (೭೫) ಎಂಬ ಮಹಿಳೆ ಮೃತಪಟ್ಟಿದ್ದಾರೆ. ಹವಾಮಾನ ಇಲಾಖೆಯು ಬೀದರ್, ಕಲಬುರಗಿ, ವಿಜಯಪುರ, ರಾಯಚೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ಬಿಸಿಗಾಳಿ ಬೀಸುವ ಎಚ್ಚರಿಕೆ ನೀಡಿದೆ. ಈಗಾಗಲೇ ರಾಜ್ಯ ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ಒಣಹವೆಯೊಂದಿಗೆ ಬಿಸಿಗಾಳಿ ಬೀಸುವ ಕುರಿತು ಮುನ್ನಚ್ಚೆರಿಕೆ ನೀಡಿರುವ ಹಿನ್ನಲೆ ಪ್ರತಿಯೊಬ್ಬರು ಆದಷ್ಟು ನೆರಳಿನಲ್ಲಿ ಇರುವುದಕ್ಕೆ ಆದ್ಯತೆ ನೀಡಬೇಕು. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ದೇಹದಲ್ಲಿ ನಿರ್ಜಲೀಕರಣವನ್ನು ತಡೆಗಟ್ಟಲು…
ಬೆಂಗಳೂರು : ಶ್ರೀನಿವಾಸ ಪ್ರಸಾದ್ರವರ ನಿಧನಕ್ಕೆ ಗೌರವ ಸೂಚಕವಾಗಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಶ್ರೀನಿವಾಸ ಪ್ರಸಾದ್ರವರ ನಿಧನಕ್ಕೆ ಗೌರವ ಸೂಚಕವಾಗಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 15 ದಿನಗಳ ಹಿಂದೆ ಭೇಟಿಯಾಗಿದ್ದಾಗ ರಾಜಕೀಯ ಮಾತನಾಡಿದೆವು. ಹೋರಾಟದ ಬದುಕಿನಲ್ಲಿ ಇರುವವರಿಗೆ ಸಂತೋಷದ ಕ್ಷಣಗಳು ಕಡಿಮೆ. ಬಹಳ ವರ್ಷಗಳ ನಂತರ ಭೇಟಿಯಾಗಿದ್ದ ಕಾರಣ ಸಂತೋಷವಾಗಿದ್ದೇನೆ ಎಂದು ನನ್ನ ಬಳಿ ಹೇಳಿದ್ದರು.ನಾನು ಮತ್ತು ಶ್ರೀನಿವಾಸ ಪ್ರಸಾದ್ ಅವರು ಜೊತೆಯಲ್ಲಿಯೇ ರಾಜಕಾರಣ ಮಾಡಿದವರು. ಜನತಾ ಪಕ್ಷ ಹಾಗೂ ಕಾಂಗ್ರೆಸ್ ನಲ್ಲಿ ಒಟ್ಟಿಗಿದ್ದವರನ್ನು ಕಳೆದುಕೊಂಡಾಗ ಬಹಳ ದುಃಖವಾಗುತ್ತದೆ ಎಂದರು. ಶ್ರೀನಿವಾಸ ಪ್ರಸಾದ್ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿ ಅವರ…
ಬೆಂಗಳೂರು : ಬರದಿಂದ ತತ್ತರಿಸಿರು ಜನತೆಗೆ ಶಾಕಿಂಗ್ ನ್ಯೂಸ್, ರಾಜ್ಯದ ಡ್ಯಾಂಗಳಲ್ಲಿ ಸದ್ಯಕ್ಕೆ ಕೇವಲ ಶೇ. 10.83 ರಷ್ಟು ಮಾತ್ರ ನೀರು ಇದೆ ಎಂದು ವರದಿಯಾಗಿದೆ. ರಾಜ್ಯದಲ್ಲಿ 22 ಜಲಾಶಯಗಳಲ್ಲಿ ಸದ್ಯ ಡೆಡ್ ಸ್ಟೋರೇಜ್ ಹೊರತುಪಡಿಸಿ 57.62 ಟಿಎಂಸಿ ನೀರು ಮಾತ್ರ ಉಳಿದಿದ್ದು, ಅದರಲ್ಲಿ ಕೃಷ್ಣಾಕೊಳ್ಳದ ಜಲಾಶಯಗಳಲ್ಲಿಯೇ 49.19 ಟಿಎಂಸಿ ನೀರು ಶೇಖರಣೆಯಾಗಿದೆ. ರಾಜ್ಯದಲ್ಲಿ ಮಳೆ ಕೊರತೆ, ಬಿಸಿಲಿನ ಪ್ರಮಾಣ ಹೆಚ್ಚಳದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಭಾರಿ ಪ್ರಮಾಣದಲ್ಲಿ ಕುಸಿತವಾಗಿದೆ. ಸಕಾಲದಲ್ಲಿ ಮಳೆಯಾಗದಿದ್ದರೆ ರಾಜ್ಯದ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ.
ಕುಷ್ಟಗಿ : ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಬಡ ಕುಟುಂಬದ ಮಹಿಳೆಗೆ 1 ಲಕ್ಷ ರೂಪಾಯಿ, ನಿರುದ್ಯೋಗಿ ಯುವಕರಿಗೆ 1 ಲಕ್ಷ ರೂ. ಹಾಗೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕುಷ್ಟಗಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ – ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ ಮೇಲೆ ಎ.ಐ.ಸಿ.ಸಿ ಕೂಡ ಗ್ಯಾರಂಟಿ ಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಬಡ ಕುಟುಂಬದ ಮಹಿಳೆಗೆ 1 ಲಕ್ಷ ರೂಪಾಯಿ ಕೊಡುತ್ತೇವೆ ಎಂದು ಹೇಳಿದ್ದಾರೆ. ತಿಂಗಳಿಗೆ 8,500 ರೂ.ಗಳು ದೊರೆಯಲಿದೆ. ಕುಟುಂಬ ನಡೆಸಲು, ಜನರ ಕೊಳ್ಳುವ ಶಕ್ತಿ ಹೆಚ್ಚಿಸಲು ಈ ಘೋಷಣೆ ಮಾಡಲಾಗಿದೆ. ನಿರುದ್ಯೋಗಿ ಯುವಕರಿಗೆ 1 ಲಕ್ಷ ರೂ. ಹಾಗೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು ಎಂದರು. ಕೇಂದ್ರದಲ್ಲಿ ನರೇಂದ್ರ ಮೋದಿ ಅವರು 10 ವರ್ಷಗಳ ಕಾಲ ಸಂವಿಧಾನದ ಧ್ಯೇಯೋದ್ದೇಶಗಳನ್ನು…
ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ನೌಕರರು ಕಡ್ಡಾಯವಾಗಿ ಹೆಚ್ಆರ್ಎಂಎಸ್ನ ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸದಂತೆ, ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲು ಹೆಚ್ಆರ್ ಎಂಎಸ್ ನಿರ್ದೇಶನಾಲಯವು ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್ಅನ್ನು ಸಿದ್ಧಪಡಿಸಿದೆ. ಸದರಿ ಪೋರ್ಟಲ್ ಬಳಕೆದಾರರ ಸ್ನೇಹಿಯಾಗಿದ್ದು, ಈ ಕೆಳಕಂಡಂತೆ ಹಲವು ರೀತಿಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಮುಂದುವರೆದು, ಉಲ್ಲೇಖಿತ ಸರ್ಕಾರಿ ಆದೇಶದಲ್ಲಿ, ರಾಜ್ಯ ಸರ್ಕಾರದ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿ ವರ್ಗದವರು ಪ್ರಧಾನ ಮಂತ್ರಿ ಜನ ಸುರಕ್ಷಾ ಯೋಜನೆಯ ವ್ಯಾಪ್ತಿಗೆ ಬರುವ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ), ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್ಬಿವೈ) ಯೋಜನೆಗಳಡಿ ಮಾಡಿಸಿದ ವಿಮಾ ಪಾಲಿಸಿಗಳ ಮಾಹಿತಿಯನ್ನು HRMS-ESS Login ನಲ್ಲಿ ಭರ್ತಿ ಮಾಡಲು ಸಹ ಈಗಾಗಲೇ ತಿಳಿಸಿರುತ್ತಾರೆ. ಆದುದರಿಂದ ರಾಜ್ಯ ಸರ್ಕಾರದ ಪ್ರತಿ ಸಿಬ್ಬಂದಿಗಳ ತಮ್ಮದೇ ಆದ…
ನವದೆಹಲಿ : ರೋಗಿಗಳ ಆರೈಕೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಏಕರೂಪದ ದರಗಳನ್ನು ಹೇಗೆ ನಿಗದಿಪಡಿಸಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರವನ್ನು ಕೇಳಿದೆ. ಭಾರತದಾದ್ಯಂತ ನೇತ್ರಶಾಸ್ತ್ರದ ಕಾರ್ಯವಿಧಾನಗಳಿಗೆ ಏಕರೂಪದ ದರಗಳ ಬಗ್ಗೆ ಸರ್ಕಾರದ ನಿಯಮಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಕುರಿತು ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರ ನ್ಯಾಯಪೀಠವು ಸರ್ಕಾರಕ್ಕೆ ನೋಟಿಸ್ ನೀಡುವಾಗ ಈ ಪ್ರಶ್ನೆಯನ್ನು ಕೇಳಿದೆ. ಖಾಸಗಿ ಆಸ್ಪತ್ರೆಗಳಲ್ಲಿಯೂ ಏಕರೂಪದ ದರಗಳು ಇರಲು ಹೇಗೆ ಸಾಧ್ಯ? ಇದೆಲ್ಲವೂ ಮಾರುಕಟ್ಟೆ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತದೆ. ಇಲ್ಲಿ ಹಾಜರಾಗುವ ವಕೀಲರಿಗೆ ಏಕರೂಪದ ಶುಲ್ಕವಿದ್ದರೆ ಏನಾಗಬಹುದು?” ಎಂದು ನ್ಯಾಯಾಲಯ ಪ್ರಶ್ನಿಸಿದೆ. ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಒಂದು ಪಕ್ಷವನ್ನು ಪ್ರತಿನಿಧಿಸುವ ಹಿರಿಯ ವಕೀಲ ದುಶ್ಯಂತ್ ದವೆ ಅವರು ಈ ಹಿಂದೆ ನಿಯಮಗಳು ಸಂಪೂರ್ಣವಾಗಿ ಕೈಮೀರಿಹೋಗಿವೆ ಎಂದು ಹೇಳಿದರು. ಕೇಂದ್ರ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ವಾದ ಮಂಡಿಸಿದ್ದರು. ಹಿರಿಯ ವಕೀಲ ಮಣಿಂದರ್ ಸಿಂಗ್ ಅವರು ಭಾರತೀಯ ವೈದ್ಯಕೀಯ…
ಬಾಗಲಕೋಟೆ : ಸಾಮಾಜಿಕ ಮಾಧ್ಯಮದಲ್ಲಿ ನನ್ನ ಧ್ವನಿಯಲ್ಲಿ ಅಶ್ಲೀಲ ವಿಷಯಗಳನ್ನು ಹಾಕಲಾಗುತ್ತಿದೆ. ನನ್ನ ಡೀಪ್ ಫೇಕ್ ವೀಡಿಯೊವನ್ನು ತಯಾರಿಸಲಾಗುತ್ತಿದೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಲಾಗುತ್ತಿದೆ, ಹಾಗೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದರು. 2024 ರ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅವರು ಹೇಳಿದರು. ಅಭಿವೃದ್ಧಿ ಹೊಂದಿದ ಭಾರತ, ಸ್ವಾವಲಂಬಿ ಭಾರತವನ್ನು ನಿರ್ಮಿಸುವುದು ಮತ್ತು ದೇಶವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಪರಿವರ್ತಿಸುವುದು ಈ ಚುನಾವಣೆಗಳ ಗುರಿಯಾಗಿದೆ. ನಿಮ್ಮ ಮತವು ಎಲ್ಲವನ್ನೂ ಸಾಧಿಸಲು ಸಹಾಯ ಮಾಡುತ್ತದೆ. ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡುವುದು ನಮ್ಮ ಸಂಕಲ್ಪವಾಗಿದೆ. ಮೋದಿ ಅವರ ದೃಷ್ಟಿಕೋನ ಸ್ಪಷ್ಟವಾಗಿದೆ ಎಂದರು. ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಲೂಟಿ ಮಾಡಿದ ಎಟಿಎಂ ಆಗಿ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇಷ್ಟು ಕಡಿಮೆ ಅವಧಿಯಲ್ಲಿ, ಈ ಜನರು ಕರ್ನಾಟಕದ ಸರ್ಕಾರದ ಖಜಾನೆಯನ್ನು ಖಾಲಿ ಮಾಡಿದ್ದಾರೆ. ದೇಶವನ್ನು ಲೂಟಿ…
ಹೈದರಾಬಾದ್ : ಮಕ್ಕಳಿಗೆ ಇಷ್ಟ ಅಂತ ಚಾಕೋಲೇಟ್ ತಿನ್ನಿಸುವ ಪೋಷಕರೇ ಎಚ್ಚರ, ಹೈದರಾಬಾದ್ ನಲ್ಲಿ ಎಕ್ಸ್ ಪೈರಿ ಅವಧಿ ಮುಗಿಯದಿದ್ದರೂ ಕ್ಯಾಡ್ಬರಿ ಡೈರಿ ಮಿಲ್ಕ್ ಚಾಕೋಲೇಟ್ ಕೆಟ್ಟುಹೋಗಿದೆ. ಹೈದರಾಬಾದ್ ನ ನಿವಾಸಿಯೊಬ್ಬರು ಈ ಕುರಿತು ಟ್ವೀಟ್ ಮಾಡಿದ್ದು, ಕಲುಷಿತ ಚಾಕೊಲೇಟ್ ಬಾರ್ ನ ಚಿತ್ರಗಳನ್ನು ‘ಎಕ್ಸ್’ ನೊಂದಿಗೆ ಹಂಚಿಕೊಂಡ ಅವರು, ಕ್ರಮ ಕೈಗೊಳ್ಳುವಂತೆ ಕಂಪನಿಗೆ ಕರೆ ನೀಡಿದರು. @goooofboll ಬಳಕೆದಾರರು ಚಾಕೊಲೇಟ್ನ ವಿವಿಧ ತೊಂದರೆಗಳನ್ನು ಪ್ರದರ್ಶಿಸುವ ನಾಲ್ಕು ಚಿತ್ರಗಳನ್ನು ಪ್ರದರ್ಶಿಸಿದರು, ಬಿಳಿ ಶಿಲೀಂಧ್ರದಿಂದ ಹಿಡಿದು ಹಿಂಭಾಗದ ರಂಧ್ರದವರೆಗೆ, ಕರಗಿದ ಮತ್ತು ವಿಲಕ್ಷಣ ಬದಿಗಳೊಂದಿಗೆ. ವಿಶೇಷವೆಂದರೆ, ಚಾಕೊಲೇಟ್ ಅನ್ನು ಜನವರಿ 2024 ರಲ್ಲಿ ತಯಾರಿಸಲಾಯಿತು ಮತ್ತು ಈಗಾಗಲೇ ಅದರ ಮುಕ್ತಾಯ ದಿನಾಂಕವನ್ನು 12 ತಿಂಗಳು ಮೀರಿದೆ. ಒಪಿ ಗಮನಸೆಳೆದಂತೆ, “ಈ ಡೈರಿ ಹಾಲಿನ ಉತ್ಪಾದನೆಯು ಜನವರಿ 2024 ಆಗಿದೆ, ಉತ್ಪಾದನೆಯಿಂದ 12 ತಿಂಗಳ ಮೊದಲು ಮುಕ್ತಾಯಗೊಳ್ಳುವುದು ಉತ್ತಮ. ನಾನು ಅದನ್ನು ತೆರೆದಾಗ ಅವುಗಳನ್ನು ಈ ರೀತಿ ಕಂಡುಕೊಂಡೆ. ಈ @DairyMilkIn ನೋಡಿ” https://twitter.com/goooofboll/status/1784261315386904745?ref_src=twsrc%5Etfw%7Ctwcamp%5Etweetembed%7Ctwterm%5E1784261315386904745%7Ctwgr%5E7f95bc3ac3c8a2555adc7f467133ecb2cf74eab7%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fnews18-epaper-dh523feb6a21f54358acc1d5d04a629da5%2Fhyderabadresidentdiscoversfungusoncadburydairymilkbeforeexpirydatepostgoesviral-newsid-n604277898…