Author: kannadanewsnow57

ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನನ್ ಗೆ ತೀವ್ರ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ವೈದ್ಯರು ಸೂಚನೆ ಕೊಟ್ಟಿದ್ದರು. ವೈದ್ಯರ ಸಲಹೆಯಂತೆ ಬಳ್ಳಾರಿಯಲ್ಲಿ ನಟ ದರ್ಶನ್ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲು ಒಪ್ಪಿಕೊಂಡಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಕೂಡ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದ್ದು, ಈ ವೇಳೆ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿಗೆ ಭೇಟಿ ನೀಡಿ ನಟ ದರ್ಶನ್ ಅವರ ಆರೋಗ್ಯವನ್ನು ತಪಾಸಣೆ ಮಾಡಿದ್ದರು. ಈ ವೇಳೆ ವೈದ್ಯರು ಆಸ್ಪತ್ರೆಗೆ ದಾಖಲಾಗಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು. ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ. ಜೈಲಾಧಿಕಾರಿಗಳಿಂದ ದರ್ಶನ್ ಬೆನ್ನು ನೋವಿನ ಬಗ್ಗೆ ವೈದ್ಯರು ನೀಡಿರುವ…

Read More

ನವದೆಹಲಿ: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ 6.52 ಕ್ಕೆ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ ”ಭೂಕಂಪದ ಕೇಂದ್ರಬಿಂದು 19.38 ಉತ್ತರ ಅಕ್ಷಾಂಶ ಮತ್ತು 77.46 ಪೂರ್ವ ರೇಖಾಂಶದಲ್ಲಿತ್ತು ಮತ್ತು ಭೂಮಿಯ ಮೇಲ್ಮೈಗೆ 5 ಕಿ.ಮೀ ಆಳದಲ್ಲಿತ್ತು ” ಎಂದು ಎನ್ಸಿಎಸ್ನ ಮಂಗಳವಾರದ ಪೋಸ್ಟ್ನಲ್ಲಿ ತಿಳಿಸಲಾಗಿದೆ. ನಾಂದೇಡ್ ಜಿಲ್ಲೆಯಲ್ಲಿ ಅಥವಾ ಸುತ್ತಮುತ್ತ ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ. ನಾಂದೇಡ್ ಭಾರತದ ಭೂಕಂಪನ ನಕ್ಷೆಯಲ್ಲಿ ವಲಯ 2 ರಲ್ಲಿದೆ, ಇದು ಭೂಕಂಪಗಳಿಗೆ ಕಡಿಮೆ ಗುರಿಯಾಗುತ್ತದೆ. ಈ ನಗರವು ಮಹಾರಾಷ್ಟ್ರದ ಮರಾಠಾವಾಡಾ ವಿಭಾಗದಲ್ಲಿ ಗೋದಾವರಿ ನದಿಯ ಉತ್ತರ ದಡದಲ್ಲಿದೆ. ಈ ವರ್ಷದ ಸೆಪ್ಟೆಂಬರ್ನಲ್ಲಿ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ 4.2 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿತ್ತು.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅದಾದ ಬಳಿಕ ನಟ ದರ್ಶನ್ ಅವರ ಪರ ವಕೀಲರು ಜಾಮಿನು ಕೋರಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಇಂದು ಹೈಕೋರ್ಟ್ ಈ ಒಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 28 ಕ್ಕೆ ಮುಂದೂಡಲಾಗಿದೆ. ಹೌದು ಜಾಮೀನು ನಟ ದರ್ಶನ್ ಪರ ವಕೀಲ ಎಸ್ ಸುನಿಲ್ ಕುಮಾರ್ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ. ಎಸ್. ವಿಶ್ವಜೀತ್ ಅವರಿದ್ದ ಹೈಕೋರ್ಟ್ ಏಕ ಸದಸ್ಯಪೀಠದಲ್ಲಿ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 28 ಕ್ಕೆ ಮುಂದೂಡಲಾಗಿದೆ.

Read More

ಬೆಂಗಳೂರು : ಅಕ್ರಮ ಪಡಿತರ ಚೀಟಿಗಳನ್ನು ಗುರುತಿಸಿ ರದ್ದು ಮಾಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ವಿಕಾಸಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ ಆರು ತಿಂಗಳಿನಿಂದ ಪಡಿತರ ಪಡೆಯದ 2,75,667, ಆದಾಯ ತೆರಿಗೆ ಪಾವತಿ ಮಾಡುವ 98,485, ಆದಾಯ ಮಿತಿ ಹೆಚ್ಚಿರುವ 10,09,478 ಪಡಿತರ ಚೀಟಿಗಳು ಸೇರಿವೆ ಎಂದರು. 2023-24ನೆ ಸಾಲಿನಲ್ಲಿ ಹೊಸ ಪಡಿತರ ಚೀಟಿ ಕೋರಿ 2,95,986 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ 2,30,549 ಅರ್ಹ ಅರ್ಜಿಗಳಿದ್ದವು. 1,48,533 ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಿದ್ದೇವೆ. 65,437 ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. 82,016 ವಿತರಣೆಗೆ ಬಾಕಿಯಿವೆ. ಇವುಗಳನ್ನು…

Read More

ಬೆಂಗಳೂರು: ಬೆಂಗಳೂರಿನ ಖಾಸಗಿ ಸಂಸ್ಥೆಯ 56 ವರ್ಷದ ನಿರ್ದೇಶಕರೊಬ್ಬರು ಹೂಡಿಕೆಯ ಮೇಲೆ ಶೇಕಡಾ 1,500 ರಷ್ಟು ಲಾಭವನ್ನು ನೀಡುವ ಭರವಸೆ ನೀಡಿ ನಕಲಿ ಆನ್ಲೈನ್ ಷೇರು ವ್ಯಾಪಾರ ಅಪ್ಲಿಕೇಶನ್ಗೆ ಬಿದ್ದು 6.54 ಕೋಟಿ ರೂ.ಗಳನ್ನು ಕಳೆದುಕೊಂಡಿದ್ದಾರೆ. ಈ ವರ್ಷ ಬೆಂಗಳೂರಿನಲ್ಲಿ ನಡೆದ ಅತಿದೊಡ್ಡ ವ್ಯಾಪಾರ ಹಗರಣಗಳಲ್ಲಿ ಒಂದಾದ ಈ ಅಪರಾಧವು ಅಕ್ಟೋಬರ್ 16 ರಂದು ಈಶಾನ್ಯ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಲು ಸಂಪರ್ಕಿಸಿದಾಗ ಈ ಅಪರಾಧ ಬೆಳಕಿಗೆ ಬಂದಿದೆ. ಯಲಹಂಕ ಪಟ್ಟಣದ ನಿವಾಸಿಯಾದ ಸಂತ್ರಸ್ತ ಸೆಮಿಕಂಡಕ್ಟರ್ ಎಲ್ಇಡಿ ಡ್ರೈವರ್ಗಳು, ಲ್ಯಾಂಪ್ಗಳು ಮತ್ತು ಡಿಸ್ಪ್ಲೇಗಳನ್ನು ತಯಾರಿಸುವ ಕಂಪನಿಯನ್ನು ನಡೆಸುತ್ತಿದ್ದು, ಷೇರು ವ್ಯಾಪಾರದಲ್ಲಿ ತೊಡಗಿದ್ದರು. ಅವರು ಆಗಾಗ್ಗೆ ಇಂಟರ್ನೆಟ್ ಬ್ರೌಸ್ ಮಾಡುತ್ತಿದ್ದರು ಮತ್ತು ವ್ಯಾಪಾರದ ಸಲಹೆಗಳಿಗಾಗಿ ಯೂಟ್ಯೂಬ್ ಚಾನೆಲ್ ಗಳನ್ನು ಅನುಸರಿಸುತ್ತಿದ್ದರು. ಆಗಸ್ಟ್ 11 ರಂದು, ಅಪರಿಚಿತ ಸಂಖ್ಯೆಯಿಂದ ಅವರಿಗೆ ವಾಟ್ಸಾಪ್ ಸಂದೇಶ ಬಂದಿದ್ದು, “ವ್ಯಾಪಾರ ಮತ್ತು ಹೂಡಿಕೆ ತರಗತಿಗಳಿಗಾಗಿ” ಗುಂಪಿಗೆ ಸೇರಲು ಆಹ್ವಾನಿಸಲಾಗಿದೆ. ಅನಿಕೇತ್ ನೆರ್ಕರ್ ಎಂಬ ವ್ಯಕ್ತಿ ಆತನನ್ನು ‘ನುವಾಮಾ…

Read More

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪು ಈಗಾಗಲೇ ತಿರುಪತಿ ತಿರುಮಲ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಆಗುತ್ತಿದೆ. ಈಗ ದೆಹಲಿಗೂ ಕರುನಾಡಿನ ಹೆಮ್ಮೆಯ ನಂದಿನಿ ಕಾಲಿಡುತ್ತಿದೆ. ಇದೇ ಅಕ್ಟೋಬರ್.27, 28ರಂದು ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆಗೊಳ್ಳಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ಇದೇ ಅಕ್ಟೋಬರ್‌ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ. ಅಲ್ಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ (ಮನ್‌ಮುಲ್‌) ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳನ್ನು ಈಗಾಗಲೇ ವಿವಿಧ ರಾಜ್ಯಗಳಲ್ಲಿ ಮಾರಾಟವಾಗುತ್ತಿವೆ. ಕರ್ನಾಟಕದ ಜಿಲ್ಲೆ, ತಾಲ್ಲೂಕು ವಿಭಾಗದಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಗಳಿದ್ದಾವೆ. ಈಗ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಓಪನ್ ಆಗಲಿದೆ. ಈ ಮೂಲಕ ದೆಹಲಿಯಲ್ಲೂ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಲಭ್ಯವಾಗುವಂತೆ ಆಗಲಿದೆ. https://twitter.com/KarnatakaVarthe/status/1848363513477308826?ref_src=twsrc%5Etfw%7Ctwcamp%5Etweetembed%7Ctwterm%5E1848363513477308826%7Ctwgr%5E4c9b65ccdc5b5b375a7c372d5f55263ab7a0cb37%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fnandini-to-be-inaugurated-in-delhi-on-october-27-28%2F

Read More

ಆಂಧ್ರಪ್ರದೇಶದಲ್ಲಿ ತಡರಾತ್ರಿ ಘೋರ ದುರಂತವೊಂದು ಸಂಭವಿಸಿದ್ದು, ಬಸ್-ಆಟೋರಿಕ್ಷಾ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕಲಕಡ ಗ್ರಾಮದಲ್ಲಿ ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಮಾರಣಾಂತಿಕ ಡಿಕ್ಕಿ ಸಂಭವಿಸಿದೆ. ಇದರಿಂದ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿ 9:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ರಾಯಚೋಟಿ ಉಪವಿಭಾಗದ ಪೊಲೀಸ್ ಅಧಿಕಾರಿ ಕೃಷ್ಣ ಮೋಹನ್ ಮಾತನಾಡಿ, ಬಸ್ ಪಿಲಾರ್ ಕಡೆಯಿಂದ ರಾಯಚೋಟಿಗೆ ಬರುತ್ತಿದ್ದು, ಇನ್ನೊಂದು ಬಸ್ ಅನ್ನು ಓವರ್ ಟೇಕ್ ಮಾಡುವ ವೇಳೆ ಆಟೋರಿಕ್ಷಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವ್ಯಕ್ತಿ ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್ ಚಿತ್ತೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರನ್ನು ಅವರವರ ಸ್ಥಳಕ್ಕೆ ಕರೆದೊಯ್ಯಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ…

Read More

ಬುಲಂದ್ಶಹರ್: ಬುಲಂದ್ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದ ಆಶಾಪುರಿ ಕಾಲೋನಿಯಲ್ಲಿ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು ಭಾಗಶಃ ಮನೆ ಕುಸಿದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ ಮೃತರನ್ನು ರಿಯಾಜುದ್ದೀನ್ ಅಲಿಯಾಸ್ ರಾಜು (50), ಆತನ ಪತ್ನಿ ರುಕ್ಸಾನಾ (45), ಸಲ್ಮಾನ್ (16), ತಮನ್ನಾ (24), ಹಿವ್ಜಾ (3) ಮತ್ತು ಆಸ್ ಮೊಹಮ್ಮದ್ (26) ಎಂದು ಗುರುತಿಸಲಾಗಿದೆ. ಬುಲಂದ್ಶಹರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಮಾತನಾಡಿ, ಸೋಮವಾರ ಸಂಜೆ ರಿಯಾಜುದ್ದೀನ್ ಎಂಬ ವ್ಯಕ್ತಿಯ ಮನೆಯಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 19 ಜನರು ವಾಸಿಸುತ್ತಿದ್ದರು. ಎಂಟು ನಿವಾಸಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಇತರರು ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದರು. ರಿಯಾಜುದ್ದೀನ್ ಅವರ ಪತ್ನಿಯ ಆಸ್ಪತ್ರೆಗೆ ದಾಖಲಾದ ನಂತರದ ಆರೈಕೆಗೆ ಸಹಾಯ ಮಾಡಲು ಕುಟುಂಬವು ಆಮ್ಲಜನಕ ಸಿಲಿಂಡರ್ ಮತ್ತು ಅದರ ಪರಿಕರಗಳನ್ನು ತಂದಿತು. ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಅಗ್ನಿಶಾಮಕ ಭದ್ರತಾ ಸಿಬ್ಬಂದಿ…

Read More

ನವದೆಹಲಿ : ಪ್ರಸ್ತುತ, ಹೆಚ್ಚಿನ ಬ್ಯಾಂಕ್‌ಗಳು ಉಳಿತಾಯ ಖಾತೆ ತೆರೆಯುವಾಗ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಷರತ್ತನ್ನು ವಿಧಿಸುತ್ತವೆ. ಅಂದರೆ ಖಾತೆದಾರ ಯಾವಾಗಲೂ ತನ್ನ ಖಾತೆಯಲ್ಲಿ ನಿಗದಿತ ಮೊತ್ತವನ್ನು ನಿರ್ವಹಿಸಬೇಕಾಗುತ್ತದೆ. ಇಲ್ಲದಿದ್ದರೆ ಬ್ಯಾಂಕ್ ಪ್ರತಿ ತಿಂಗಳು ಶುಲ್ಕ ವಿಧಿಸುತ್ತದೆ. ಅನೇಕ ಬಾರಿ ಈ ಸ್ಥಿತಿಯ ಬಗ್ಗೆ ಜನರಿಗೆ ತಿಳಿದಿರುವುದಿಲ್ಲ. ನಿಯಮಿತ ಶುಲ್ಕಗಳಿಂದಾಗಿ ಅವರ ಖಾತೆಯು ಕ್ರಮೇಣ ಖಾಲಿಯಾಗುತ್ತದೆ. ಆದ್ದರಿಂದ ಯಾವ ಬ್ಯಾಂಕಿನಲ್ಲಿ ಎಷ್ಟು ಹಣವನ್ನು ಮಿನಿಮಮ್ ಬ್ಯಾಲೆನ್ಸ್ ಆಗಿ ಇಡಬೇಕು ಎಂಬುದು ಬಹಳ ಮುಖ್ಯ. ಇದರಿಂದ ಅನಗತ್ಯ ದಂಡವನ್ನು ತಪ್ಪಿಸಬಹುದು! ಹಾಗಾಗಿ ಉಳಿತಾಯ ಖಾತೆದಾರರು ತಮ್ಮ ಖಾತೆಯಲ್ಲಿ ಇರಿಸಿಕೊಳ್ಳಲು ಈಗ ಯಾವ ಕನಿಷ್ಠ ಬ್ಯಾಲೆನ್ಸ್ ಮೊತ್ತ ಕಡ್ಡಾಯವಾಗಿದೆ ಎಂಬುದನ್ನು ನಾವು ತಿಳಿಯೋಣ. ಈ ವಿಷಯದ ಬಗ್ಗೆ ವಿವರವಾದ ಮಾಹಿತಿಯನ್ನು ನಮಗೆ ತಿಳಿಸಿ… ಇಂಡಸ್‌ಇಂಡ್ ಬ್ಯಾಂಕ್ ಇಂಡಸ್‌ಇಂಡ್ ಬ್ಯಾಂಕ್ ಖಾತೆದಾರರು ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಮಹಾನಗರಗಳು ಮತ್ತು ದೊಡ್ಡ ನಗರಗಳಲ್ಲಿ ಕನಿಷ್ಠ 10,000 ರೂ. ಮತ್ತು ಸಣ್ಣ ನಗರಗಳಲ್ಲಿ ಈ ಮಿತಿ 5,000…

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, ಆಯತಪ್ಪಿ ಕಾಲೇಜು ಕಟ್ಟಡದಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾಲೇಜಿನ ಮೊದಲ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಆಫ್ರಿನ್ ಜಾಮದಾರ್ (17) ಮೃತಪಟ್ಟಿದ್ದಾಳೆ. ಮೃತ ವಿದ್ಯಾರ್ಥಿನಿ ಗೋಕಾಕ್ ತಾಲೂಕಿನ ಶಿಂದಿ ಕುರುಬೇಟ್ ಗ್ರಾಮದವಳಾಗಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More