Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಇಂದಿನ ದಿನಗಳಲ್ಲಿ ಮಕ್ಕಳು ಹೊರಗಿನ ಆಟಕ್ಕಿಂತ ಹೆಚ್ಚಾಗಿ ಮೊಬೈಲ್ ನಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಅಧ್ಯಯನವೊಂದರಲ್ಲಿ ಶಾಕಿಂಗ್ ವರದಿ ಬಹಿರಂಗಗೊಂಡಿದ್ದು, ಮೊಬೈಲ್ ಹೆಚ್ಚು ವೀಕ್ಷಿಸುವುದರಿಂದ ಮಕ್ಕಳಲ್ಲಿ ಸ್ಥೂಲಕಾಯತೆ ಹೆಚ್ಚಳವಾಗಿದೆ ಎಂದು ತಿಳಿಸಿದೆ. ತಜ್ಞರ ಪ್ರಕಾರ, ಮೊಬೈಲ್ ದೀರ್ಘಕಾಲ ನೋಡುವುದು ಮಕ್ಕಳಿಗೆ ಅಪಾಯಕಾರಿ. ಆಟದ ಸಮಯದಲ್ಲಿ ಫೋನ್ಗಳ ಚಟದಿಂದ ಮಕ್ಕಳ ದೈಹಿಕ ಚಟುವಟಿಕೆ ಕಡಿಮೆಯಾಗುತ್ತದೆ. ಪರಿಣಾಮವಾಗಿ, ದೇಹದ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲಾಗುವುದಿಲ್ಲ. ಇದು ದೇಹದಲ್ಲಿದೆ. ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಸ್ಥೂಲಕಾಯದಂತಹ ಕಾಯಿಲೆಗಳಿಂದ ಮಕ್ಕಳನ್ನು ದೂರವಿರಿಸಲು ಕನಿಷ್ಠ 60 ನಿಮಿಷಗಳ ಕಾಲ ನಿಯಮಿತವಾಗಿ ದೈಹಿಕ ವ್ಯಾಯಾಮ ಮಾಡಬೇಕು ಎನ್ನುತ್ತಾರೆ ವೈದ್ಯರು. ಅತಿಯಾದ ಮೊಬೈಲ್ ಬಳಕೆ ಮಕ್ಕಳ ಬೆಳವಣಿಗೆಯ ಮೇಲೆ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳನ್ನು ಬೀರುತ್ತದೆ ಎಂದು ಎಎಂ ಮೆಡಿಕಲ್ ಸೆಂಟರ್ನ ಮಕ್ಕಳ ತಜ್ಞೆ ಜಯತಿ ಸೇನ್ಗುಪ್ತಾ ಹೇಳುತ್ತಾರೆ. ಮೊಬೈಲ್ ಮೂಲಕ ಸಾಕಷ್ಟು ವಿಷಯಗಳನ್ನು ಕಲಿಯಬಹುದು. ಆದಾಗ್ಯೂ, ದೀರ್ಘಾವಧಿಯ ಮೊಬೈಲ್ ವೀಕ್ಷಣೆಯ ಋಣಾತ್ಮಕ ಪರಿಣಾಮಗಳು ಧನಾತ್ಮಕತೆಯನ್ನು ಮೀರಿಸುತ್ತದೆ ಎಂದು…
ನವದೆಹಲಿ: ಭಾರತೀಯ ಸೇನೆ ಮತ್ತು ಪೊಲೀಸರ ಜಂಟಿ ತಂಡವು ಭಾನುವಾರ ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ ಒಳನುಸುಳುವ ಪ್ರಯತ್ನವನ್ನು ವಿಫಲಗೊಳಿಸಿದೆ. ಈ ಪ್ರದೇಶದಲ್ಲಿ ಇನ್ನೂ ಒಬ್ಬ ಉಗ್ರನ ಉಪಸ್ಥಿತಿಯನ್ನು ಪಡೆಗಳು ಶಂಕಿಸಿರುವುದರಿಂದ ಕೂಂಬಿಂಗ್ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಭಾನುವಾರ, ಉತ್ತರ ಕಾಶ್ಮೀರದ ಬಾರಾಮುಲ್ಲಾದ ಉರಿಯ ಕಮಲ್ಕೋಟ್ ಸೆಕ್ಟರ್ನಲ್ಲಿ ಕೆಲವು ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ಸೇನೆಯು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಸೇನೆಯು ಉಗ್ರರನ್ನು ಹೊಡೆದುರುಳಿಸುತ್ತಿದ್ದಂತೆ, ಅವರು ಗುಂಡು ಹಾರಿಸಿದರು, ಇದು ಗುಂಡಿನ ಚಕಮಕಿಗೆ ಕಾರಣವಾಯಿತು. ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದಾಗ್ಯೂ, ಅವರ ಗುರುತನ್ನು ಇನ್ನೂ ಕಂಡುಹಿಡಿಯಲಾಗಿಲ್ಲ. ಕುಪ್ವಾರಾ ವಲಯದ ಗಡಿಯುದ್ದಕ್ಕೂ ನಿಯಂತ್ರಣ ರೇಖೆ (ಎಲ್ಒಸಿ) ಕಳೆದ ಕೆಲವು ತಿಂಗಳುಗಳಲ್ಲಿ ಅನೇಕ ಒಳನುಸುಳುವಿಕೆ ಪ್ರಯತ್ನಗಳಿಗೆ ಸಾಕ್ಷಿಯಾಗಿದ್ದರೂ, ಉರಿ ಗಡಿಯು ಮೌನವಾಗಿದೆ. ಇಂದಿನ ಒಳನುಸುಳುವಿಕೆ ಪ್ರಯತ್ನವು ಈ ವಲಯದಲ್ಲಿ ಗಡಿ ದಾಟಲು ಭಯೋತ್ಪಾದಕರು ನಡೆಸುತ್ತಿರುವ ಅಪರೂಪದ ಪ್ರಯತ್ನಗಳಲ್ಲಿ ಒಂದಾಗಿದೆ. ಉರಿ ಗಡಿಯಲ್ಲಿ ಭಾರಿ ಭದ್ರತೆ ಒದಗಿಸಲಾಗಿದ್ದು, ಉಗ್ರರು ಗಡಿ…
ರಾಮನಗರ : ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 15 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, ಅಪಘಾತದಲ್ಲಿ ಬಸ್ ನಲ್ಲಿದ್ದ 15 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಬೆಂಗಳೂರಿನ ದಯಾನಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ಅತಿಯಾದ ವೇಗವೇ ನಿಯಂತ್ರಣ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.
ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ ಇಂದಿನಿಂದ ಭಾನುವಾರದವರೆಗೆ ಅಂದರೆ ಅಕ್ಟೋಬರ್.23ರವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು: “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 20.10.2024 ರಿಂದ 23.10.2024 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 22:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ. ಇಂದಿನಿಂದ 4 ದಿನ ಈ ಏರಿಯಾದಲ್ಲಿ ಕರೆಂಟ್ ಇರೋದಿಲ್ಲ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಓಬಳೇಶ್ ಕಾಲೋನಿ, ರ್ಸಸ್ ಗರ್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ್ಡನ್, ರ್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ್ಡನ್, ದೊರೆಸ್ವಾಮಿ ನಗರ…
ಗದಗ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಮಹತ್ವದ ಹೇಳಿಕೆ ನೀಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಡಸಿದ್ದೇಶ್ವರ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ. ಮುಕ್ತಿಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ಇದೇ ಜಾಗಕ್ಕೆ ಕರೆತಂದು ಪೂಜೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಈಗಾಗಲೇ ಹಲವು ಬಾರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವ ಕುರಿತಂತೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಬೆನ್ನು ನೋವಿನಿಂದ ನರಳಾಡುತ್ತಿದ್ದು, ಜೈಲಿನಲ್ಲಿಯೇ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹ ಜೈಲಿನಲ್ಲಿ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ನಿಲ್ಲುವುದಕ್ಕೂ ಆಗದೇ, ನಡೆಯುವುದಕ್ಕೂ ಆಗದೇ ನರಳಾಡುತ್ತಿದ್ದಾರೆ. ವಕೀಲ ರಾಮ್ ಸಿಂಗ್ ಜೈಲಿಗೆ ಬಂದಿದ್ದ ವೇಳೆ ದರ್ಶನ್ ನಡೆಯುವಾಗ ಪದೇ ಪದೇ ಬೆನ್ನು ಹಿಡಿದುಕೊಂಡು ನಡೆಯುತ್ತಿದ್ದು. ಕೆಲ ಸಲ ಗೋಡೆ ಆಸರೆ ಪಡೆದು ನಿಂತು ಮಾತನಾಡಿದ್ದಾರೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇದೀಗ ಪತ್ನಿ ವಿಜಯಲಕ್ಷ್ಮೀ ಮನವೊಲಿಕೆ ಬಳಿಕ ಜೈಲಿನಲ್ಲಿಯೇ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಒಪ್ಪಿದ್ದಾಗಿ ತಿಳಿದುಬಂದಿದೆ.
ನ್ಯೂಯಾರ್ಕ್: ನಗರದ ಹೃದಯಭಾಗದಲ್ಲಿ ಶನಿವಾರ (ಸ್ಥಳೀಯ ಸಮಯ) ದೀಪಾವಳಿಯ ರೋಮಾಂಚಕ ಆಚರಣೆ ನಡೆಯಿತು, ಹಲವಾರು ಭಾರತೀಯ ಸಮುದಾಯದ ಸದಸ್ಯರು ಮತ್ತು ಯುಎಸ್ ನಾಗರಿಕರು ಟೈಮ್ಸ್ ಸ್ಕ್ವೇರ್ನಲ್ಲಿ ಜಮಾಯಿಸಿದರು. ಅಪ್ರತಿಮ ಮಿಡ್ಟೌನ್ ಮ್ಯಾನ್ಹ್ಯಾಟನ್ ಸ್ಥಳವನ್ನು ಸಂಸ್ಕೃತಿ ಮತ್ತು ಸಹೋದರತ್ವದ ವರ್ಣರಂಜಿತ ಪ್ರದರ್ಶನವಾಗಿ ಪರಿವರ್ತಿಸಲಾಯಿತು. ಈ ಕಾರ್ಯಕ್ರಮದಲ್ಲಿ ನ್ಯೂಯಾರ್ಕ್ ಮೇಯರ್, ಮೇಯರ್ ಎರಿಕ್ ಆಡಮ್ಸ್, ನ್ಯೂಯಾರ್ಕ್ ರಾಜ್ಯ ಪ್ರತಿನಿಧಿ ಜೆನಿಫರ್ ರಾಜ್ಕುಮಾರ್ ಕಾನ್ಸುಲ್ ಜನರಲ್ ಬಿನಯಾ ಪ್ರಧಾನ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು. ಭಾರತೀಯ ಸಮುದಾಯವು ಟೈಮ್ಸ್ ಸ್ಕೌರ್ ನಲ್ಲಿ ಒಟ್ಟುಗೂಡಿತು. ಟೈಮ್ಸ್ ಸ್ಕ್ವೇರ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಇರುವುದು ಹೆಮ್ಮೆಯ ಕ್ಷಣ ಎಂದು ಮೇಯರ್ ಆಡಮ್ಸ್ ಹೇಳಿದರು. “ದೀಪಗಳ ಹಬ್ಬವನ್ನು ಆಚರಿಸಲು ವಿಶ್ವದ ಅಡ್ಡರಸ್ತೆಗಳಿಗಿಂತ ಉತ್ತಮ ಸ್ಥಳ ಯಾವುದು? ಟೈಮ್ಸ್ ಸ್ಕ್ವೇರ್ ಆಚರಣೆಯಲ್ಲಿ ವಾರ್ಷಿಕ ದೀಪಾವಳಿಗಾಗಿ ಇಂದು ನಮ್ಮ ಹಿಂದೂ ಸಹೋದರ ಸಹೋದರಿಯರೊಂದಿಗೆ ಇರಲು ಹೆಮ್ಮೆಪಡುತ್ತೇವೆ, ಏಕೆಂದರೆ ನಾವು ಕತ್ತಲೆಯನ್ನು ದೂರ ತಳ್ಳಿ ನಮ್ಮ ನಗರದಾದ್ಯಂತ ಬೆಳಕಿನಲ್ಲಿ ಸ್ವಾಗತಿಸುತ್ತೇವೆ”.ಎಂದರು. ದೀಪಾವಳಿಯನ್ನು ಆಚರಿಸಲು ಭಾರತೀಯರು…
ಮಂಗಳೂರು : ದೇಶಾದ್ಯಂತ ರೈಲು ಅಪಘಾತಕ್ಕೆ ಸಂಚು ನಡೆಯುತ್ತಿರುವ ಹೊತ್ತಲ್ಲೇ ಕರ್ನಾಟಕದಲ್ಲೂ ಇಂತಹದ್ದೇ ಘಟನೆಯೊಂದು ಬೆಳಕಿಗೆ ಬಂದಿದ್ದು, ರೈಲು ಹಳಿ ಮೇಲೆ ಕಲ್ಲು ಇಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಉಳ್ಳಾಲದ ತೊಕ್ಕೊಟ್ಟುವಿಲ್ಲಿಯಲ್ಲಿ ಮಂಗಳೂರು-ಕೇರಳ ರೈಲು ಮಾರ್ಗದ ಹಳಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ಇಟ್ಟು ಪರಾರಿಯಾಗಿದ್ದಾರೆ. ರೈಲುಗಳ ಸಂಚಾರಿಸಿದ ವೇಳೆ ದೊಡ್ಡ ಸದ್ದು ಕೇಳಿ ಸ್ಥಳಿಯರು ಆತಂಕಗೊಂಡಿದ್ದು, ಸ್ಥಳಕ್ಕೆ ಹೋಗಿ ನೋಡಿದಾಗ ರೈಲ್ವೆ ಹಳಿಗಳ ಮೇಲೆ ಕಲ್ಲು ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಇನ್ನು ತಡರಾತ್ರಿ ರೈಲ್ವೆ ಹಳಿಗಳ ಮೇಲೆ ಕಲ್ಲು ದುಷ್ಕರ್ಮಿಗಳು ಕಲ್ಲು ಇಟ್ಟಿದ್ದು, ಸ್ಥಳೀಯರು ಇಬ್ಬರು ದುಷ್ಕರ್ಮಿಗಳನ್ನು ನೋಡಿರುವುದಾಗಿ ತಿಳಿಸಿದ್ದಾರೆ.
BIG NEWS : ಬೆಂಗಳೂರಿನಲ್ಲಿ ವಿದೇಶಿ ಪೋಸ್ಟ್ ಆಫೀಸ್ ಮೇಲೆ `CCB’ ದಾಳಿ ಕೇಸ್ : ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಭೇಟೆಯಾಡಿದ್ದಾರೆ. ವಿವಿಧ ದೇಶಗಳಿಂದ ಇಂಡಿಯನ್ ಪೋಸ್ಟ್ ಮುಖಾಂತರ ತರಿಸಿಕೊಂಡಿದ್ದ 21,17,34,000 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಇದೀಗ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಸೆಪ್ಟೆಂಬರ್ 9 ರಂದು ಚಾಮರಾಜಪೇಟೆ ಬಳಿ ವಿದೇಶಿ ಪೋಸ್ಟ್ ಆಫೀಸ್ ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಕಾನೂನು ಬದ್ದವಾಗಿಯೇ ಬೆಂಗಳೂರಿಗೆ ಹೈಎಂಡ್ ಡ್ರಗ್ಸ್ ಪೂರೈಕೆ ಮಾಡಲಾಗುತ್ತಿತ್ತು. ಥಯಲ್ಯಾಂಡ್, ಅಮೆರಿಕ, ಯುಕೆಯಿಂದ ಡ್ರಗ್ಸ್ ಸಪ್ಲೈ ಆಗುತ್ತಿತ್ತು ಎನ್ನಲಾಗಿದೆ. ಭಾರತೀಯ ಅಂಚೆ ಮೂಲಕ ವಿವಿಧ ವಿದೇಶಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದ ವ್ಯಕ್ತಿಗಳ ಮೇಲೆ ನಿಗಾ ಇಟ್ಟಿದ್ದ ಬೆಂಗಳೂರು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಈ ವರ್ಷದಲ್ಲಿ 12 ಪ್ರಕರಣಗಳನ್ನು ದಾಖಲು ಮಾಡಿ, ಆರೋಪಿಗಳನ್ನು ದಸ್ತಗಿರಿ ಮಾಡಿ ವಿವಿಧ ರೀತಿಯ ನಿಷೇಧಿತ ಮಾಧಕ ವಸ್ತುಗಳನ್ನು ವಶಪಡಿಸಿಕೊಂಡು ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ನಗರದ…
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೃಷ್ಣಾಪುರ ಗ್ರಾಮದ ಜಯರಾಂ ಎಂಬುವವರ ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೃತರು ಮಧ್ಯಪ್ರದೇಶ ಮೂಲದ ಮೋಹಿತ್ (24) ಹಾಗೂ ಕತರ್ವ (38) ಎಂದು ಗುರುತಿಸಲಾಗಿದೆ. ಜಯರಾಂ ಅವರ ಅಡಿಕೆ ತೋಟದಲ್ಲಿ ಕೆಲ ಶ್ರೀಗಂಧ ಮರಗಳ ಕಳ್ಳತನ ಮಾಡಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರೂ ಸಾವನ್ನಪ್ಪಿರುವ ಶಂಕಕೆ ವ್ಯಕ್ತವಾಗಿದೆ. ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.














