Author: kannadanewsnow57

ಬೆಂಗಳೂರು: ರಾಜ್ಯದ ರೈತರಿಗೆ ನಬಾರ್ಡ್ ಬಿಗ್ ಶಾಕ್ ನೀಡಿದ್ದು, ಅಲ್ಪಾವಧಿ ಕೃಷಿ ಸಾಲದ ಪುನರ್ಧನ ಮಿತಿಯನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯಕ್ಕೆ ನಬಾರ್ಡ್ ನಿಂದ 92,000 ಕೋಟಿ ರೂ. ಬರುವ ನಿರೀಕ್ಷೆ ಇತ್ತು. ಆದರೆ, 2340 ಕೋಟಿ ರೂ/ ಹಂಚಿಕೆ ಮಾಡಲಾಗಿದೆ. ಕಳೆದ ವರ್ಷದ 5,600 ಕೋಟಿ ರೂ.ಗೆ ಹೋಲಿಸಿದರೆ ಶೇಕಡ 58ರಷ್ಟು ಕಡಿಮೆಯಾಗಿದೆ ಎಂದರು. ಇದರಿಂದಾಗಿ ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳಿಂದ ರೈತರಿಗೆ ಬಡ್ಡಿ ರಹಿತ ಅಲ್ಪಾವಧಿ ಬೆಳೆ ಸಾಲ ನೀಡುವುದು ಕಷ್ಟವಾಗಲಿದ್ದು, ಕೃಷಿ ಮೇಲೆ ಅಡ್ಡ ಪರಿಣಾಮ ಉಂಟಾಗುತ್ತದೆ. ಆಹಾರಧಾನ್ಯ ಉತ್ಪಾದನೆ ಕುಸಿತವಾಗಲಿದೆ. ಹೊಸ ರೈತರು ಸಾಲ ವಂಚಿತರಾಗಿ ಖಾಸಗಿ ಸಾಲದ ಮೊರೆ ಹೋಗಬೇಕಾಗುತ್ತದೆ. ರೈತರಿಗೆ ಶಕ್ತಿ ತುಂಬುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

Read More

ಶಿವಮೊಗ್ಗ : ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರ, ಸೊರಬ, ಹೊಸನಗರ, ತೀರ್ಥಹಳ್ಳಿ, ಜೋಗ, ಶಿರಾಳಕೊಪ್ಪ, ರಿಪ್ಪನ್ಪೇಟೆ, ಕುಂಸಿ, ಹೊಳೆಹೊನ್ನೂರು ಮತ್ತು ಹಾರನಹಳ್ಳಿ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿಯಿರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಗೆ ಆಯ್ಕೆ ಪ್ರಕ್ರಿಯ ನಡೆಯಲಿದೆ. ನ.25 ರಂದು ಬೆಳಗ್ಗೆ 9.30 ರಿಂದ ಸಂಜೆ 5.00 ರವರೆಗೆ ಶಿವಮೊಗ್ಗದ ಡಿ.ಎ.ಆರ್. ಆವರಣದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಡಿ.ಡಿ.ಪಿ.ಐ ಮತ್ತು ಸಮಾದೇಷ್ಟರು ಇವರುಗಳ ಸಮ್ಮುಖದಲ್ಲಿ ಸದಸ್ಯರ ಆಯ್ಕೆ ಪ್ರಕ್ರಿಯ ನಡೆಯಲಿದೆ. ನೊಂದಣಿಯಾದ ಎಲ್ಲಾ ಸದಸ್ಯರು ಪೊಲೀಸ್ ಇಲಾಖೆಯೊಂದಿಗೆ ಕಾನೂನು ಮತ್ತು ಶಿಸ್ತುಪಾಲನಾ ಕರ್ತವ್ಯ ನಿರ್ವಹಿಸಬೇಕಾಗಿರುತ್ತದೆ. ಎಲ್ಲಾ ಸದಸ್ಯರಿಗೂ ಮೂಲಕ ತರಬೇತಿಯನ್ನು ಜಿಲ್ಲಾ ಮಟ್ಟದಲ್ಲಿ ನೀಡಲಾಗುತ್ತದೆ. ಪ್ರಗತಿಪರ ತರಬೇತಿಯನ್ನು ಗೃಹರಕ್ಷಕ ಮತ್ತು ಪೌರರಕ್ಷಣ ಅಕಾಡೆಮಿ ಬೆಂಗಳೂರಿನಲ್ಲಿ ನೀಡಲಾಗುತ್ತೆ. ಸಮಾಜದ ಸೇವೆಗೆ ತಮ್ಮನ್ನು ಮುಡಿಪಾಗಿಡಲು ಕಟಿಬದ್ಧರಾಗಿರುವ ಯುವಕ/ಯುವತಿಯರು ಈ ಅವಕಾಶದ ಉಪಯೋಗಪಡೆದುಕೊಳ್ಳುವಂತೆ ಜಿಲ್ಲಾ ಗೌರವ ಸಮಾದೇಷ್ಠರಾದ ಡಾ. ಚೇತನ ಹೆಚ್.ಪಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ…

Read More

ಬೆಂಗಳೂರು: ರಾಜ್ಯದಲ್ಲಿನ ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆ ಬರೆಯೋದಕ್ಕೆ ಸಿದ್ಧತೆ ನಡೆಸುತ್ತಿರುವಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಹೊರಬಿದ್ದಿದೆ. ಇಂದು ಸಚಿವ ಮಧು ಬಂಗಾರಪ್ಪ ಉಚಿತ CET, NEET, JEE ತರಬೇತಿಗೆ ಚಾಲನೆ ನೀಡಲಿದ್ದಾರೆ. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರದಿಂದಲೇ ಫ್ರೀ ಕೋಚಿಂಗ್ ನೀಡಲಾಗುತ್ತದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಜೆಟ್ ಅಯವ್ಯಯ ಕಂಡಿಕೆ 101ರಲ್ಲಿ ಘೋಷಿಸಿರುವಂತೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 25,000 ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಸಿಇಟಿ, ನೀಟ್, ಜೆಇಇ ಆನ್ ಲೈನ್ ತರಬೇತಿಯನ್ನು ಆರಂಭಿಸುತ್ತಿರುವುದಾಗಿ ತಿಳಿಸಿದ್ದಾರೆ. ದಿನಾಂಕ 20-11-2024ರಂದು ಬೆಳಿಗ್ಗೆ 10.30ಕ್ಕೆ ಶಾಲಾ ಶಿಕ್ಷಣ ಮತ್ತು ಸುರಕ್ಷತಾ ಸಚಿವ ಮಧು ಎಸ್ ಬಂಗಾರಪ್ಪ ಅವರು ಈ ತರಬೇತಿಗೆ ವಿಧಾನಸೌಧದಲ್ಲಿ ಚಾಲನೆ ನೀಡಲಿದ್ದಾರೆ. ಆ ಬಳಿಕ ರಾಜ್ಯದಲ್ಲಿನ 25,000 ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಉಚಿತವಾದಂತ ತರಬೇತಿಯನ್ನು ಸಿಇಟಿ, ನೀಟ್, ಜೆಇಇ ಪರೀಕ್ಷೆಗೆ ಆನ್ ಲೈನ್…

Read More

ನಾಗ್ಪುರ : ಇಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ನಾಗ್ಪುರದಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ ಚಲಾಯಿಸಿದ್ದಾರೆ. ನಾಗ್ಪುರದಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಾಗರಿಕರ ಕರ್ತವ್ಯ, ಪ್ರತಿಯೊಬ್ಬ ನಾಗರಿಕನೂ ಈ ಕರ್ತವ್ಯವನ್ನು ನಿರ್ವಹಿಸಬೇಕು. ನಾನು ಉತ್ತರಾಂಚಲದಲ್ಲಿದ್ದೆ, ಆದರೆ ನಾನು ನಿನ್ನೆ ರಾತ್ರಿ ಇಲ್ಲಿ ಮತ ಚಲಾಯಿಸಲು ಬಂದಿದ್ದೇನೆ. ಎಲ್ಲರೂ ಮತದಾನ ಮಾಡಬೇಕು ಎಂದು ಕರೆ ನೀಡಿದ್ದಾರೆ. https://twitter.com/i/status/1859050061780680952 ಇಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಶಿವಸೇನೆ ಮತ್ತು ಎನ್‌ಸಿಪಿ ಕ್ರಮವಾಗಿ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ನೇತೃತ್ವದ ಪ್ರತಿಸ್ಪರ್ಧಿ ಬಣಗಳಾಗಿ ವಿಭಜನೆಯಾದ ನಂತರ ಇದು ಮೊದಲ ವಿಧಾನಸಭಾ ಚುನಾವಣೆಯಾಗಿದೆ. ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. 2,086 ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ ಒಟ್ಟು 4,136 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಜ್ಯದಲ್ಲಿ ಸುಮಾರು 9.70 ಕೋಟಿ ಮತದಾರರಿದ್ದಾರೆ. ಬಿಜೆಪಿ 149, ಶಿವಸೇನೆ 81,…

Read More

ಕೆಲವು ಸಣ್ಣ ತಂತ್ರಗಳು ದೊಡ್ಡ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ನಾವು ನೋಡುತ್ತೇವೆ. ಇನ್ನು ಕೆಲವರು ದಿನನಿತ್ಯದ ವಸ್ತುಗಳೊಂದಿಗೆ ವಿನೂತನ ಪ್ರಯೋಗಗಳನ್ನು ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸುತ್ತಾರೆ. ಇಂತಹ ವಿಚಿತ್ರ ಪ್ರಯೋಗಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇತ್ತೀಚಿಗೆ ಇದೇ ರೀತಿಯ ವಿಡಿಯೋವೊಂದು ಸದ್ದು ಮಾಡುತ್ತಿದೆ. ಯುವಕನೊಬ್ಬ ಸಿಂಪಲ್ ಟ್ರಿಕ್ ಮೂಲಕ ಬಿಳಿ ಅಂಗಿಯ ಮೇಲಿನ ಕಲೆಗಳನ್ನು ತೆಗೆಯುತ್ತಿರುವ ವಿಡಿಯೋವೊಂದು ನೆಟ್ಟಿಗರ ಮನಸೆಳೆಯುತ್ತಿದೆ. ಈ ವೀಡಿಯೋ ನೋಡಿದವರೆಲ್ಲಾ ‘ಬಿಳಿ ಅಂಗಿಯ ಮೇಲಿನ ಕಲೆ ತೆಗೆಯುವುದು ಎಷ್ಟು ಸುಲಭ’ ಎಂದು ಕಮೆಂಟ್ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಯುವಕನೊಬ್ಬ ಬಿಳಿ ಟೀ ಶರ್ಟ್‌ನ ಕಲೆಗಳನ್ನು ಸುಲಭವಾಗಿ ತೆಗೆದು ಎಲ್ಲರನ್ನು ಅಚ್ಚರಿಗೊಳಿಸಿದ್ದಾನೆ. ಮೊದಲು ಅವರು ಬಣ್ಣದ ಟೀ ಶರ್ಟ್ ತೆಗೆದುಕೊಳ್ಳುತ್ತಾರೆ. ಅದರ ನಂತರ ಅವನು ಒಂದು ಚೊಂಬಿನಲ್ಲಿ ನೀರನ್ನು ತೆಗೆದುಕೊಂಡು ಅದರಲ್ಲಿ ಸ್ವಲ್ಪ ಸರ್ಫ್ ಹಾಕುತ್ತಾನೆ. ಅದರ ನಂತರ ಆ ನೀರಿನಲ್ಲಿ ನಿಂಬೆ ಹಿಂಡಿ. ಅಂತಿಮವಾಗಿ ಅವನು ENO ಪ್ಯಾಕೆಟ್…

Read More

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರ ಕುಟುಂಬ ನಿಯಂತ್ರಣ ಭತ್ಯೆ/ವಿಶೇಷ ವೇತನ ಬಡ್ತಿ (SFN) ಮಂಜೂರು ಮಾಡಿದ್ದು, ಅರ್ಜಿ ಸಲ್ಲಿಸಲು ಸರ್ಕಾರಿ ನೌಕರರು ಈ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ. ಕುಟುಂಬ ನಿಯಂತ್ರಣ ಭತ್ಯೆ/ವಿಶೇಷ ವೇತನ ಬಡ್ತಿಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ 1. ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಪ್ರಮಾಣ ಪತ್ರ (STERILIZATION CERTIFICATE) 2. ಮುಚ್ಚಳಿಕೆ ಪ್ರಮಾಣ ಪತ್ರ : ಒಂದು/ಎರಡು ಮಕ್ಕಳಿದ್ದಾರೆಂದು ಹಾಗೂ ಪತಿ/ಪತ್ನಿಯು ‘ಕುಟುಂಬ ನಿಯಂತ್ರಣ ಭತ್ಯೆ’ ಪಡೆದಿಲ್ಲವೆಂದು ಛಾಪಾ ಕಾಗದದಲ್ಲಿ ಬರೆದುಕೊಟ್ಟಿರುವ ಮುಚ್ಚಳಿಕೆ ಪತ್ರ. 3. ಮಾಹೆಯ ವೇತನ ಪ್ರಮಾಣ ಪತ್ರ 4. ಪತಿ/ಪತ್ನಿಯ ಮಾಹೆಯ ವೇತನ ಪ್ರಮಾಣ ಪತ್ರ 5.ಅರ್ಜಿದಾರರ SSLC ಅಂಕಪಟ್ಟಿ 6. ಪತಿ/ಪತ್ನಿಯ SSLC ಅಂಕಪಟ್ಟಿ 7.ಚೆಕ್ ಲಿಸ್ಟ್ : ‘ಕುಟುಂಬ ನಿಯಂತ್ರಣ ಭತ್ಯೆ (SFN) ಬಗ್ಗೆ ದಾಖಲಾತಿಗಳನ್ನು ಪರಿಶೀಲಿಸುವ ಬಗ್ಗೆ (ಕಛೇರಿ ನಮೂನೆ)

Read More

ನವದೆಹಲಿ : ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಯುವಕರಿಗೆ ಸುವರ್ಣಾವಕಾಶವೊಂದು ಹೊರಹೊಮ್ಮಿದೆ. FCI  (ಆಹಾರ ಇಲಾಖೆ ನೇಮಕಾತಿ 2024) ನೇಮಕಾತಿ 2024 ರ ಅಡಿಯಲ್ಲಿ, ಆಹಾರ ಇಲಾಖೆಯಲ್ಲಿ ಕ್ಲರ್ಕ್ ಮತ್ತು ಪ್ಯೂನ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಒಟ್ಟು 26010 ನೇಮಕಾತಿಗಳು ನಡೆಯಲಿವೆ. ಒಟ್ಟು ಎಷ್ಟು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ? ವಿವಿಧ ಹುದ್ದೆಗಳಿಗೆ ಈ ನೇಮಕಾತಿಯಲ್ಲಿ ಒಟ್ಟು 26010 ಹುದ್ದೆಗಳಿವೆ, ಇದರಲ್ಲಿ ಕ್ಲರ್ಕ್ ಮತ್ತು ಪ್ಯೂನ್‌ನಂತಹ ಪೋಸ್ಟ್‌ಗಳು ಸೇರಿವೆ. ಹೆಚ್ಚಿನ ಮಾಹಿತಿಗಾಗಿ ನೀವು FCI ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಶೈಕ್ಷಣಿಕ ಅರ್ಹತೆ ಈ ನೇಮಕಾತಿಗೆ ಕನಿಷ್ಠ ಶೈಕ್ಷಣಿಕ ಅರ್ಹತೆಯನ್ನು 5, 8, 10 ಮತ್ತು 12 ನೇ ಉತ್ತೀರ್ಣ ಎಂದು ಇರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ವಯಸ್ಸಿನ ಮಿತಿ ಈ ನೇಮಕಾತಿಗೆ ವಯೋಮಿತಿಯನ್ನೂ ನಿಗದಿಪಡಿಸಲಾಗಿದ್ದು, ಇಲಾಖೆ ನಿಗದಿಪಡಿಸಿದ ವಯೋಮಿತಿ ಒಳಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಹೇಗೆ ಅನ್ವಯಿಸಬೇಕು ಈ ನೇಮಕಾತಿಗೆ ಅರ್ಜಿಯನ್ನು ಆನ್‌ಲೈನ್ ಪ್ರಕ್ರಿಯೆಯ…

Read More

ನವದೆಹಲಿ : ವಾಯುಮಾಲಿನ್ಯದಿಂದಾಗಿ ವಿಶ್ವಾದ್ಯಂತ 2019 ರಲ್ಲಿ 4.2 ಮಿಲಿಯನ್ ಮತ್ತು 2021 ರಲ್ಲಿ 8.1 ಮಿಲಿಯನ್ ಜನರು ಸಾವನ್ನಪ್ಪಿದ್ದಾರೆ ಎಂಬ ಸ್ಪೋಟಕ ವರದಿ ಬಹಿರಂಗವಾಗಿದೆ. ಭಾರತ ಮತ್ತು ಚೀನಾ ಮಾಲಿನ್ಯಕ್ಕೆ ಅತಿ ಹೆಚ್ಚು ಕೊಡುಗೆ ನೀಡುತ್ತಿವೆ ಮತ್ತು ಮಾಲಿನ್ಯದಿಂದಾಗಿ ಸಾವುಗಳು ಸಂಭವಿಸುತ್ತಿವೆ ಎಂದು ವರದಿ ಹೇಳಿದೆ. ಹೊರಾಂಗಣ ವಾಯು ಮಾಲಿನ್ಯವು ಕಡಿಮೆ, ಮಧ್ಯಮ ಮತ್ತು ಹೆಚ್ಚಿನ ಆದಾಯದ ದೇಶಗಳಲ್ಲಿ ಪ್ರತಿಯೊಬ್ಬರ ಮೇಲೆ ಪರಿಣಾಮ ಬೀರುವ ಪ್ರಮುಖ ಪರಿಸರ ಆರೋಗ್ಯ ಸಮಸ್ಯೆಯಾಗಿದೆ. ನಗರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸುತ್ತುವರಿದ (ಹೊರಾಂಗಣ) ವಾಯುಮಾಲಿನ್ಯವು 2019 ರಲ್ಲಿ ವಿಶ್ವಾದ್ಯಂತ ವರ್ಷಕ್ಕೆ 4.2 ಮಿಲಿಯನ್ ಅಕಾಲಿಕ ಮರಣಕ್ಕೆ ಕಾರಣವಾಗುತ್ತದೆ ಎಂದು ಅಂದಾಜಿಸಲಾಗಿದೆ; ಈ ಮರಣವು ಸೂಕ್ಷ್ಮ ಕಣಗಳಿಗೆ ಒಡ್ಡಿಕೊಳ್ಳುವುದರಿಂದ ಉಂಟಾಗುತ್ತದೆ, ಇದು ಹೃದಯರಕ್ತನಾಳದ ಮತ್ತು ಉಸಿರಾಟದ ಕಾಯಿಲೆಗಳು ಮತ್ತು ಕ್ಯಾನ್ಸರ್ಗಳಿಗೆ ಕಾರಣವಾಗುತ್ತದೆ. ಈ ವರ್ಷ ಪ್ರಕಟವಾದ ಗ್ಲೋಬಲ್ ಏರ್ ರಿಪೋರ್ಟ್ ಪ್ರಕಾರ, 2021 ರಲ್ಲಿ ಪ್ರಪಂಚದಾದ್ಯಂತ 8.1 ಮಿಲಿಯನ್ ಸಾವುಗಳು. ಚೀನಾ ಮತ್ತು ಭಾರತವು ಮಾಲಿನ್ಯದ…

Read More

ನವದೆಹಲಿ : ಭಾರತೀಯ ಪಶುಪಾಲನ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಿದೆ. ಅದ್ರಂತೆ, ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಮಾಹಿತಿಯನ್ನ ಪರಿಶೀಲಿಸಿ. ಇಲಾಖೆ ಹೆಸರು: ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ಹುದ್ದೆಗಳ ಸಂಖ್ಯೆ : 2,248. ಹುದ್ದೆ ಹೆಸರು : ಸ್ಮಾಲ್ ಎಂಟರ್ಪ್ರೈಸ್ ಡೆವಲಪ್ಮೆಂಟ್ ಅಸಿಸ್ಟೆಂಟ್ ಉದ್ಯೋಗ ಸ್ಥಳ : ದೇಶಾದ್ಯಂತ. ಅರ್ಜಿ ವಿಧಾನ : ಆನ್ ಲೈನ್ ಮೋಡ್. ಪೋಸ್ಟ್ ಹೆಸರು.! ಸಣ್ಣ ಉದ್ಯಮ ವಿಸ್ತರಣಾ ಅಧಿಕಾರಿ : 562 ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ : 1,686 ವಯಸ್ಸಿನ ಮಿತಿ.! ಸಣ್ಣ ಉದ್ಯಮ ವಿಸ್ತರಣಾ ಅಧಿಕಾರಿ : 21-45 ವರ್ಷಗಳು ಸ್ಮಾಲ್ ಬಿಸಿನೆಸ್ ಡೆವಲಪ್ಮೆಂಟ್ ಅಸಿಸ್ಟೆಂಟ್ : 18-40 ವರ್ಷ ಅರ್ಜಿ ಶುಲ್ಕ.! ಅಭ್ಯರ್ಥಿಗಳು ಆನ್ ಲೈನ್’ನಲ್ಲಿ ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ. ಶೈಕ್ಷಣಿಕ ಅರ್ಹತೆ.! ಸ್ಮಾಲ್ ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ :…

Read More

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅಂತಿಮ ಅಧಿಸೂಚನೆ ಹೊರಡಿಸಿದೆ. ರಾಜ್ಯದ ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಹಾಗೂ ಗ್ರೇಡ್ 2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವ ಸಂಬಂಧ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಕಡ್ಡಾಯ ಮತ್ತು ಸಾರ್ವಜನಿಕ ಹಿತಾಸಕ್ತಿ, ಸಾಮಾನ್ಯ ಕೋರಿಕೆ ವರ್ಗಾವಣೆ ಶೇ.9, ಪತಿ-ಪತ್ನಿ ಶೇ. 2, 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿರುವ ಒಂಟಿ ಮಹಿಳೆ ಅಥವಾ ಒಂಟಿ ಪಾಲಕರ ಪ್ರಕರಣ ಅಥವಾ ದೈಹಿಕವಾಗಿ ಅವಲಂಬಿತ ಪತಿ, ಪತ್ನಿ ಹೊಂದಿರುವ ನೌಕರರು, ಅಂಗವಿಕಲತೆಯ ಮಾನದಂಡ ಮಟ್ಟವುಳ್ಳ ನೌಕರರ ವರ್ಗಾವಣೆ ಮೀತಿಗೊಳಿಸಿದೆ.

Read More