Author: kannadanewsnow57

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪು ಈಗಾಗಲೇ ತಿರುಪತಿ ತಿರುಮಲ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಆಗುತ್ತಿದೆ. ಈಗ ದೆಹಲಿಗೂ ಕರುನಾಡಿನ ಹೆಮ್ಮೆಯ ನಂದಿನಿ ಕಾಲಿಡುತ್ತಿದೆ. ಇದೇ ನವೆಂಬರ್ 21 ರಂದು ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆಗೊಳ್ಳಲಿದೆ. ದೆಹಲಿಯಲ್ಲಿ ಕೆಎಂಎಫ್ ಔಟ್‍ಲೆಟ್‍ಗೆ ಸಿಎಂ ಸಿದ್ದರಾಮಯ್ಯ ಚಾಲನೆ ಕೊಡಲಿದ್ದಾರೆ. ಆರಂಭಿಕ ಹಂತದಲ್ಲಿ ನಿತ್ಯ 1 ಲಕ್ಷ ಲೀಟರ್ ಹಾಲನ್ನು ದೆಹಲಿಗೆ ಪೂರೈಸಲು ಕೆಎಂಎಫ್ ಮುಂದಾಗಿದೆ. ಹಸುವಿನ ಹಾಲು ಪೂರೈಸುವಂತೆ ಕೆಎಂಎಫ್‍ಗೆ ದೆಹಲಿ ಸರ್ಕಾರ ಮನವಿ ಮಾಡಿತ್ತು. ಈ ಸಂಬಂಧ ಕಳೆದ ನಾಲ್ಕೈದು ತಿಂಗಳಿಂದ ದೆಹಲಿ ಸರ್ಕಾರದ ಜೊತೆ ಕೆಎಂಎಫ್ ಮಾತುಕತೆ ನಡೆಸುತ್ತಿತ್ತು. ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳನ್ನು ಈಗಾಗಲೇ ವಿವಿಧ ರಾಜ್ಯಗಳಲ್ಲಿ ಮಾರಾಟವಾಗುತ್ತಿವೆ. ಕರ್ನಾಟಕದ ಜಿಲ್ಲೆ, ತಾಲ್ಲೂಕು ವಿಭಾಗದಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಗಳಿದ್ದಾವೆ. ಈಗ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಓಪನ್ ಆಗಲಿದೆ. ಈ ಮೂಲಕ ದೆಹಲಿಯಲ್ಲೂ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಲಭ್ಯವಾಗುವಂತೆ ಆಗಲಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡೆದಿದೆ. ಮುದ್ದಿನಪಾಳ್ಯದಲ್ಲಿ ಉದ್ಯಮಿ ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು, ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆಯಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ ಅಸಲಿ ವಿಚಾರ ಬಯಲಾಗಿದೆ. ನಾಗರಬಾವಿ 2 ನೇ ಹಂತದ ನಿವಾಸಿ ಪ್ರದೀಪ್ (42) ಆತ್ನಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪೆಟ್ರೋಲ್ ಬಂಕ್‍ನಲ್ಲಿ ಸ್ಕೋಡಾ ಕಾರ್‍ನಲ್ಲಿ ಬಂದು ಬಾಟೆಲ್ ನೀಡಿ ಪೆಟ್ರೋಲ್ ಹಾಕಿಸಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೇಲ್ನೋಟಕ್ಕೆ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.  ಘಟನೆ ಸಂಬಂಧ ಪೊಲೀಸರು ಅವರ ಕುಟುಂಬದವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರವು ಎಪಿಎಲ್ ಕಾರ್ಡ್ ಗಳ ರದ್ದತಿಗೆ ಆಹಾರ ಇಲಾಖೆಗೆ ನಿರ್ದೇಶ ನೀಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಈ ಮೂಲಕ ಎಪಿಎಲ್ ಕಾರ್ಡ್ ರದ್ದಾಗುವ ಆಂತಕದಲ್ಲಿ ಇದ್ದವರಿಗೆ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಈ ಮಾಹಿತಿಯನ್ನು ವಾರ್ತಾ ಇಲಾಖೆ ಹಂಚಿಕೊಂಡಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಮತ್ತು ಈವರೆಗೆ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ ಎಂಬುದಾಗಿ ತಿಳಿಸಿದೆ. ಕೆಲವು ದಿನಪತ್ರಿಕೆಗಳಲ್ಲಿ ಇ – ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ ಎಂದಿದೆ. ರಾಜ್ಯದಲ್ಲಿ 2024ರ ಸೆಪ್ಟೆಂಬರ್ 2ರ ವರೆಗೆ 25,13,798 ಎಪಿಎಲ್ ಕಾರ್ಡುಗಳಿದ್ದವು. ನವೆಂಬರ್ 16 ರಂದು 25,62,566 ಕಾರ್ಡುಗಳಿವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ…

Read More

ಬೆಂಗಳೂರು : ಉಪ ವಿಭಾಗಾಧಿಕಾರಿ (ಎ.ಸಿ) ಕಂದಾಯ ನ್ಯಾಯಾಲಯದಲ್ಲಿ ಈ ಹಿಂದಿನ ಸರ್ಕಾರ ಉಳಿಸಿ ಹೋಗಿದ್ದ ಹಳೆಯ ತಕರಾರು ಅರ್ಜಿಗಳ ಪೈಕಿ ಶೇ.80ರಷ್ಟು ಪ್ರಕರಣಗಳನ್ನು ಕಳೆದ ಒಂದು ವರ್ಷದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳ ಕಾರ್ಯ ವೈಖರಿಗೆ ಮೆಚ್ಚುಗೆ ಸೂಚಿಸಿದರು. ಶನಿವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಿ ಮಾತನಾಡಿದ ಅವರು, “ಎಸಿ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ವಿಲೇವಾರಿ ಮಾಡಲು ಸರ್ಕಾರ ನಿಗದಿಪಡಿಸಿರುವ ಕಾಲಮಿತಿ 6 ತಿಂಗಳು ಮಾತ್ರ. ಆದರೆ ಕಳೆದ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಬೇಕಾದ ಕಂದಾಯ ನ್ಯಾಯಾಲಯಗಳ ಪ್ರಕರಣಗ ವಿಳಂಬದ ಬಗ್ಗೆ ತಲೆಯನ್ನೇ ಕೆಡಿಸಿಕೊಂಡಿರಲಿಲ್ಲ. ಪರಿಣಾಮ ರೈತರು ತೀವ್ರ ತೊಂದರೆ ಒಳಗಾಗಬೇಕಾದ ಸ್ಥಿತಿ ಎದುರಾಗಿತ್ತು” ಎಂದು ವಿಷಾದಿಸಿದರು. “ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡಾಗ ಎಸಿ ನ್ಯಾಯಾಲಯದಲ್ಲಿ ಒಂದು ವರ್ಷಕ್ಕಿಂತ ಹೆಚ್ಚಿನ ಅವಧಿಯ 59,339 ಪ್ರಕರಣಗಳು ವಿಲೇ ಆಗದೆ ಬಾಕಿ ಉಳಿದಿದ್ದವು. ಕಂದಾಯ…

Read More

ಕ್ಯಾನ್ಸರ್ ವಿಶ್ವಾದ್ಯಂತ ಹರಡುವ ಗಂಭೀರ ಕಾಯಿಲೆಯಾಗಿದ್ದು, ಇದು ಮಾರಣಾಂತಿಕವಾಗಿದೆ. ಕ್ಯಾನ್ಸರ್ನಲ್ಲಿ ಹಲವು ವಿಧಗಳಿವೆ. ಇವುಗಳಲ್ಲಿ ಒಂದು ಬಾಯಿ ಕ್ಯಾನ್ಸರ್. ಬಾಯಿ ಕ್ಯಾನ್ಸರ್ ಒಂದು ಗಂಭೀರವಾದ ಕ್ಯಾನ್ಸರ್, ಇದು ಕೆಲವೊಮ್ಮೆ ನಮ್ಮ ಅಜಾಗರೂಕತೆ ಅಥವಾ ತಪ್ಪು ಅಭ್ಯಾಸಗಳಿಂದ ಉಂಟಾಗುತ್ತದೆ. ಈ ರೋಗದ ಅಪಾಯವನ್ನು ಹೆಚ್ಚಿಸುವ ಕೆಲವು ಸಾಮಾನ್ಯ ಅಭ್ಯಾಸಗಳಿವೆ. ಬನ್ನಿ, ಬಾಯಿಯ ಕ್ಯಾನ್ಸರ್‌ಗೆ ಕಾರಣವಾಗುವ ಆ ಐದು ಅಭ್ಯಾಸಗಳು ಮತ್ತು ಅದನ್ನು ತಡೆಯುವ ವಿಧಾನಗಳ ಬಗ್ಗೆ ತಿಳಿಯೋಣ. ಈ ಅಭ್ಯಾಸಗಳು ಬಾಯಿ ಕ್ಯಾನ್ಸರ್‌ಗೆ ಕಾರಣವಾಗುತ್ತವೆ 1. ಧೂಮಪಾನ ಅಮೇರಿಕನ್ ಕ್ಯಾನ್ಸರ್ ಅಸೋಸಿಯೇಷನ್ ​​ಪ್ರಕಾರ, ಒಬ್ಬ ವ್ಯಕ್ತಿಯು ಧೂಮಪಾನ ಮಾಡಿದರೆ, ಅವನು ಬಾಯಿಯ ಕ್ಯಾನ್ಸರ್ನ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾನೆ. ಬಾಯಿಯ ಕ್ಯಾನ್ಸರ್ ಮಹಿಳೆಯರಿಗಿಂತ ಪುರುಷರಲ್ಲಿ ಎರಡು ಅಥವಾ ಮೂರು ಪಟ್ಟು ಹೆಚ್ಚು ಸಾಮಾನ್ಯವಾಗಿದೆ. ಟೈಮ್ಸ್ ನೌ ವರದಿಯ ಪ್ರಕಾರ ಪುರುಷರು ಕೂಡ ಮದ್ಯಪಾನ ಮಾಡಿದರೆ ಈ ಕ್ಯಾನ್ಸರ್ ಬರುವ ಅಪಾಯ ಮತ್ತಷ್ಟು ಹೆಚ್ಚುತ್ತದೆ. 2. ತಂಬಾಕು ತಂಬಾಕು, ಗುಟ್ಕಾ ಅಥವಾ ಪಾನ್ ಮಸಾಲದಂತಹ ವಸ್ತುಗಳ…

Read More

ನವದೆಹಲಿ : ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನಿಗೆ ಪೊಲೀಸ್ ರಕ್ಷಣೆ ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಪತಿಯನ್ನು ತೊರೆದು ಪ್ರಿಯಕರನೊಂದಿಗೆ ವಾಸಿಸಲು ಮಹಿಳೆ ನಿರ್ಧರಿಸಿದ್ದು, ಈ ವಿಷಯದಲ್ಲಿ ರಕ್ಷಣೆ ಕೋರಿದ್ದಾಳೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಇದು ಲಿವ್-ಇನ್ ಸಂಬಂಧಗಳಿಗೆ ವಿರುದ್ಧವಾಗಿಲ್ಲ, ಆದರೆ ಅಕ್ರಮ ಸಂಬಂಧಗಳನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಸಾಮಾಜಿಕ ರಚನೆಗೆ ಧಕ್ಕೆ ತರುವ ಅಕ್ರಮ ಸಂಬಂಧಗಳಿಗೆ ಕಾನೂನು ರಕ್ಷಣೆ ನೀಡುವುದು ಸರಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಪ್ರಕರಣದಲ್ಲಿ ವಿವಾಹಿತ ವ್ಯಕ್ತಿ ಬೇರೊಬ್ಬರ ಜತೆಗಿನ ಸಂಬಂಧವನ್ನು ಅಕ್ರಮ ಎಂದು ಪರಿಗಣಿಸಲಾಗುವುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಸಮಾಜ ಮತ್ತು ಕಾನೂನಿನ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಅಗತ್ಯ ಎಂದೂ ನ್ಯಾಯಾಲಯ ಹೇಳಿದೆ. ಅಕ್ರಮ ಸಂಬಂಧ ಹೊಂದಿರುವವರಿಗೆ ರಕ್ಷಣೆ ನೀಡುವುದು ಎಂದರೆ ಅಕ್ರಮ ಲಿವ್-ಇನ್ ಸಂಬಂಧವನ್ನು ಒಪ್ಪಿಕೊಳ್ಳುವುದು ಎಂದು ನ್ಯಾಯಾಲಯ ಹೇಳಿದೆ. ಇದರೊಂದಿಗೆ ಇನ್ನೊಬ್ಬ ವ್ಯಕ್ತಿಯೊಂದಿಗೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿರುವ ಅರ್ಜಿದಾರರ ವಿವಾಹಿತ ಪತ್ನಿ ತನ್ನ ಪತಿಯಿಂದ…

Read More

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸ್ವಚ್ಛ ಅಬಕಾರಿ ಅಭಿಯಾನದಡಿ ನ. 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್‌ ಅಸೋಸಿಯೇಶನ್ ಕರ್ನಾಟಕ ಕರೆ ನೀಡಿದೆ. ಗುರುವಾರ ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದ ಅಸೋಶಿ ಯೇಶನ್ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ, ಅಬಕಾರಿ ಇಲಾಖೆ ಯನ್ನು ಆರ್ಥಿಕ ಸಚಿವರೇನಿರ್ವಹಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಬೇಕು. ವ್ಯಾಪಾರಿಗಳು ಪರವಾನಗಿ ಪಡೆಯುವಾಗ ಹಾಗೂ ಮರು ನೋಂದಣಿ ಮಾಡಿಕೊಳ್ಳುವಾಗ ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಅಬಕಾರಿ ಕಾಯ್ದೆಯ ಕಲಂ 29 ಪುನರ್ ವಿಮರ್ಶಿಸಿ, ತಿದ್ದುಪಡಿ ಮಾಡಬೇಕು. ಚಿಲ್ಲರೆ ಲದೆ ಮಾರಾಟದ ಮೇಲೆ ಮದ್ಯ ಕನಿಷ್ಠ ಶೇ 20 ರಷ್ಟು ಲಾಭಾಂಶ ನೀಡಬೇಕು. ನಕಲಿ ಮದ್ಯ ತಯಾರಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮದ್ಯದ ಪಾರ್ಸಲ್‌ಗೆ ಸಂಬಂಧಿಸಿದಂತೆ ಕಾನೂನು…

Read More

ಭಾರತ ಚುನಾವಣಾ ಆಯೋಗ ನಿರ್ದೇಶನದನ್ವಯ ಮತದಾರ ಪಟ್ಟಿಯ ಸಂಕ್ಷಿಪ್ತ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ  ನವಂಬರ್ 28 ರೊಳಗಾಗಿ ಸಲ್ಲಿಸಲು ಅವಕಾಶ ಇದೆ ಎಂದು ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ರೇಷ್ಮೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ಮತ್ತು ಮತದಾರರ ಪಟ್ಟಿ ವಿಶೇಷ ವೀಕ್ಷಕರಾದ ಡಾ; ಶಮ್ಲಾ ಇಕ್ಬಾಲ್ ತಿಳಿಸಿದರು.  ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತಂತೆ ಮಾಹಿತಿ ನೀಡುವ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಅಕ್ಟೋಬರ್ 29 ರಂದು ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿದ್ದು ನವೆಂಬರ್ 28 ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ನವೆಂಬರ್ 23 ನಾಲ್ಕನೇ ಶನಿವಾರ ಹಾಗೂ 24 ರ ಭಾನುವಾರ ರಜಾ…

Read More

ಮಹಾರಾಷ್ಟ್ರ: ಪ್ರಧಾನಿ ಬರ್ತಾರೆ ಹಸಿ ಹಸಿ ಸುಳ್ಳು ಹೇಳಿ ಹೋಗ್ತಾರೆ. ಅವರ ಆರೋಪ ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ ಅಂತ ಸವಾಲು ಹಾಕಿದ್ದೀನಿ ಎಂಬುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮಹಾರಾಷ್ಟ್ರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ. ಶಕ್ತಿ ಯೋಜನೆ: ಇಲ್ಲಿಯವರೆಗೂ ಈ ಗ್ಯಾರಂಟಿಯಿಂದ 325 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ಗೃಹಜ್ಯೋತಿ : ಒಂದು ಕೋಟಿ 62 ಲಕ್ಷ ಕುಟುಂಬಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ. ಅನ್ನಭಾಗ್ಯ : ಒಂದು ಕೋಟಿ 20 ಲಕ್ಷ ಕುಟುಂಬಗಳು ಐದು ಕೆಜಿ ಉಚಿತ ಅಕ್ಕಿ ಜೊತೆಗೆ ಐದು ಕೆಜಿ ಅಕ್ಕಿಯ ಬಾಬ್ತು 170 ರೂಪಾಯಿಗಳನ್ನು ತಲಾ ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ: ಒಂದು ಕೋಟಿ 22 ಲಕ್ಷ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು 2,000 ರೂಪಾಯಿ ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದಾರೆ. ಹೆಚ್ಚೂ ಕಡಿಮೆ ಈ…

Read More

ಮಡಿಕೇರಿ: ಅಕ್ರಮ-ಸಕ್ರಮ ನಿರೀಕ್ಷೆಯಲ್ಲಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮವಹಿಸಲಾಗುವುದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ವಿದ್ಯುತ್ ಉಪ ಕೇಂದ್ರಗಳು ಎಲ್ಲೆಲ್ಲಿ ಅಗತ್ಯವಿದೆ. ಅಂತಹ ಕಡೆಗಳಲ್ಲಿ ವಿದ್ಯುತ್ ಉಪ ಕೇಂದ್ರ ನಿರ್ಮಾಣಕ್ಕೆ ಮುಂದಾಗಲಾಗುವುದು. ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮವಹಿಸಲಾಗುವುದು. ರಾಜ್ಯದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಸೋಲಾರ್ ಬಳಕೆಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಿವಿಧ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ 208 ಕೋಟಿ ರೂ. ವಿನಿಯೋಗ ಮಾಡಲಾಗುತ್ತದೆ. ಸೋಮವಾರಪೇಟೆ, ಮಾದಾಪುರ, ಮೂರ್ನಾಡು, ಹುದಿಕೇರಿ, ಬಾಳೆಲೆ, ಸಿದ್ದಾಪುರ, ಕೂಡಿಗೆ, ಕೋಪಟ್ಟಿ, ಸಂಪಾಜೆ, ಕೊಡ್ಲಿಪೇಟೆ, ಕಾಟಕೇರಿ, ಕಳತ್ಮಾಡು, ಮರುಗೋಡು ಕೇಂದ್ರಗಳಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಮುಂದಾಗಲಾಗಿದೆ. ಆ ನಿಟ್ಟಿಲ್ಲಿ ಈಗಾಗಲೇ ಹಲವು ವಿದ್ಯುತ್…

Read More