Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು, ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ. ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಹತೆ – ಎಸ್ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು. ಆಯ್ಕೆಯ ವಿಧಾನ- ಸಹನ ಶಕ್ತಿ ಪರೀಕ್ಷೆಯ ಕನಿಷ್ಠ…
ನವದೆಹಲಿ : ಉತ್ತರ ಪ್ರದೇಶದ ಝಾನ್ಸಿ ಮೆಡಿಕಲ್ ಕಾಲೇಜಿನಲ್ಲಿ ಭೀಕರ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ ಮಕ್ಕಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. https://twitter.com/PMOIndia/status/1857610379976929355?ref_src=twsrc%5Etfw ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಝಾನ್ಸಿಯ ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ಬೆಂಕಿಯ ಘಟನೆ ಹೃದಯ ವಿದ್ರಾವಕವಾಗಿದೆ. ತಮ್ಮ ಮುಗ್ಧ ಮಕ್ಕಳನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪ. ಈ ಅಗಾಧವಾದ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇವೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣೆಗಾಗಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದ್ದಾರೆ.
ಚೆನ್ನೈ : ತಮಿಳು ನಿರ್ದೇಶಕ ಸುರೇಶ್ ಸಂಗಯ್ಯ ಅವರು ಶುಕ್ರವಾರ, ನವೆಂಬರ್ 15 ರಂದು ಚೆನ್ನೈನಲ್ಲಿ ಯಕೃತ್ತು ವೈಫಲ್ಯದಿಂದ ಹೋರಾಡಿ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ನಿಧನರಾದರು. ಸಾವಿನ ಸುದ್ದಿಯನ್ನು ಛಾಯಾಗ್ರಾಹಕ ಸರಣ್ ಅವರು ದೃಢಪಡಿಸಿದ್ದಾರೆ, ಅವರು ತಮಿಳು ಚಿತ್ರ ಒರು ಕಿದಾಯಿನ್ ಕರುನೈ ಮನು ಚಿತ್ರದಲ್ಲಿ ಅವರೊಂದಿಗೆ ಕೆಲಸ ಮಾಡಿದ್ದಾರೆ. ಚಿತ್ರ ನಿರ್ಮಾಪಕರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ನಿರ್ದೇಶಕಿ ಹಲಿತಾ ಶಮೀಮ್ ಅವರು ತಮ್ಮ ಆತ್ಮೀಯ ಸ್ನೇಹಿತನ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಹೃತ್ಪೂರ್ವಕ ಶ್ರದ್ಧಾಂಜಲಿಯನ್ನು ಪೋಸ್ಟ್ ಮಾಡಿದ್ದಾರೆ. ಅವರು ನಿರ್ದೇಶಕರ ಫೋಟೋವನ್ನು ಟಿಪ್ಪಣಿಯೊಂದಿಗೆ ಹಂಚಿಕೊಂಡಿದ್ದಾರೆ.
ಬೆಂಗಳೂರು : ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸ್ವಚ್ಛ ಅಬಕಾರಿ ಅಭಿಯಾನದಡಿ ನ. 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ಗೆ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಕರ್ನಾಟಕ ಕರೆ ನೀಡಿದೆ. ಗುರುವಾರ ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದ ಅಸೋಶಿ ಯೇಶನ್ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ, ಅಬಕಾರಿ ಇಲಾಖೆ ಯನ್ನು ಆರ್ಥಿಕ ಸಚಿವರೇನಿರ್ವಹಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಬೇಕು. ವ್ಯಾಪಾರಿಗಳು ಪರವಾನಗಿ ಪಡೆಯುವಾಗ ಹಾಗೂ ಮರು ನೋಂದಣಿ ಮಾಡಿಕೊಳ್ಳುವಾಗ ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಅಬಕಾರಿ ಕಾಯ್ದೆಯ ಕಲಂ 29 ಪುನರ್ ವಿಮರ್ಶಿಸಿ, ತಿದ್ದುಪಡಿ ಮಾಡಬೇಕು. ಚಿಲ್ಲರೆ ಲದೆ ಮಾರಾಟದ ಮೇಲೆ ಮದ್ಯ ಕನಿಷ್ಠ ಶೇ 20 ರಷ್ಟು ಲಾಭಾಂಶ ನೀಡಬೇಕು. ನಕಲಿ ಮದ್ಯ ತಯಾರಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮದ್ಯದ ಪಾರ್ಸಲ್ಗೆ ಸಂಬಂಧಿಸಿದಂತೆ ಕಾನೂನು…
ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ 10 ಮಕ್ಕಳು ಸುಟ್ಟು ಕರಕಲಾದ ಘಟನೆ ನಡೆದಿದೆ. https://twitter.com/i/status/1857615031992725925 ಕಾಲೇಜಿನ ಎನ್ಐಸಿಯು (ಶಿಶು ವಾರ್ಡ್) ಒಳಗಿನ ಘಟಕದಲ್ಲಿ ರಾತ್ರಿ 10.30 ರಿಂದ 10.45 ರ ನಡುವೆ ಬೆಂಕಿ ಕಾಣಿಸಿಕೊಂಡಿದೆ ಎಂದು ಜಿಲ್ಲಾ ಅಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.ಪ್ರಾಥಮಿಕ ಮಾಹಿತಿ ಪ್ರಕಾರ 10 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಈ ವೇಳೆ ವಾರ್ಡ್ನಲ್ಲಿದ್ದ ಸಿಬ್ಬಂದಿ, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಒಳಗಿನ ಘಟಕದ ಕೆಲವು ಮಕ್ಕಳನ್ನು ಸಹ ರಕ್ಷಿಸಲಾಗಿದೆ, ಇದುವರೆಗೆ 40 ಮಕ್ಕಳನ್ನು ರಕ್ಷಿಸಲಾಗಿದೆ. https://twitter.com/i/status/1857594827334176847 ಝಾನ್ಸಿ ವಿಭಾಗದ ಆಯುಕ್ತ ಬಿಮಲ್ ಕುಮಾರ್ ದುಬೆ ಮಾತನಾಡಿ, ಘಟನೆಯ ಸಮಯದಲ್ಲಿ 54-55 ಮಕ್ಕಳು ವಾರ್ಡ್ನಲ್ಲಿ ದಾಖಲಾಗಿದ್ದರು. ಗಾಯಗೊಂಡಿರುವ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಝಾನ್ಸಿ ವಿಭಾಗದ ಡಿಐಜಿ ಕಲಾನಿಧಿ ನೈತಾನಿ ತಿಳಿಸಿದ್ದಾರೆ. https://twitter.com/i/status/1857585411813679273 ಆರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ…
ಮಾಟ ಮಂತ್ರ ಮನೆಗೆ ತಗಳ ಬಾರದು ಎಂದರೆ ಏನು ಮಾಡಬೇಕು ಎಂಬುದು ಗೊತ್ತೇ ? ಒಂದು ವೇಳೆ ನಿಮ್ಮ ಮನೆಯಲ್ಲಿ ಯಾವುದೇ ರೀತಿಯ ಮಾಟ ಮಂತ್ರ ಪ್ರಯೋಗವಾಗಿದ್ದರೆ ಹಾಗೂ ಕೆಟ್ಟ ದೃಷ್ಟಿ ಬಿದ್ದಿದ್ದರೆ ಅದನ್ನು ಹೋಗಲಾಡಿಸಿ ಮನೆಯಲ್ಲಿ ಶಾಂತಿ ಹಾಗೂ ನೆಮ್ಮದಿ ದೊರಕಬೇಕು ಎಂದರೆ ನಾವು ಹೇಳುವ ಈ ಸರಳ ತಂತ್ರವನ್ನು ಪ್ರಯೋಗ ಮಾಡಿದರೆ ಈ ಎಲ್ಲಾ ತೊಂದರೆಗಳಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ…
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಬೆಳಕಿಗೆ ಬಂದಿದ್ದು, ಬೆಳಗಾವಿಯಲ್ಲಿ ಸಾರ್ವಜನಿಕವಾಗಿ ಮಹಿಳೆಯ ಬಟ್ಟೆಯನ್ನು ಹರಿದು ಹಾಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಮಗಳು ವೇಶ್ಯಾವಾಟಿಕೆ ಮಾಡುತ್ತಿದ್ದಾಳೆ ಎಂದು ಆರೋಪಿಸಿ ತಾಯಿ, ಮಗಳ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.ಸದ್ಯ ಹಲ್ಲೆಯ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಪಕ್ಕದ ಮನೆಯ ಅಷ್ಟೇಕರ್ ಕುಟುಂಬದಿಂದ ಹಲ್ಲೆ ಮಾಡಲಾಗಿದೆ. ಸಂಬಂಧ ಇಲ್ಲದವರೆಲ್ಲ ಮನೆಗೆ ಬಂದು ಹೋಗುತ್ತಾರೆ. ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದೀರಿ ಎಂದು ಹಲ್ಲೆ ನಡೆಸಲಾಗಿದೆ. ತಾಯಿ, ಮಗಳನ್ನು ಮನೆ ಬಿಡಿಸಲು ಜಗಳ ತೆಗೆದು ಹಲ್ಲೆ ಮಾಡಲಾಗಿದೆ ಎನ್ನಲಾಗಿದ್ದು, ತಮಗೆ ಜೀವ ಭಯ ಇದೆ ರಕ್ಷಣೆ ಕೊಡಿ ಎಂದು ಸಂತ್ರಸ್ತರು ಮನವಿ ಮಾಡಿದ್ದಾರೆ. ಬೆಳಗಾವಿ ಕಮಿಷನರ್ ಗೆ ದೂರು ನೀಡಿದ ಬಳಿಕ ನಿನ್ನೆ ರಾತ್ರಿ ಮೂವರ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ವೃದ್ಧರಿಂದ ಹಿಡಿದು ಮಕ್ಕಳವರೆಗೂ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತೆಲಂಗಾಣದಲ್ಲಿ 12 ವರ್ಷದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ತೆಲಂಗಾಣದ ಚೆನ್ನೂರು ಪಟ್ಟಣದ ಪದ್ಮನಗರ ಕಾಲೋನಿಯ ನಿವೃತಿ(12) ಎಂಬ ಬಾಲಕಿ ಬೆಳಗ್ಗೆ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದಿದೆ. ಇದನ್ನು ಗಮನಿಸಿದ ಮನೆಯವರು ನಿವೃತಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ನಿವೃತಿ ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಆ ನಿವೃತಿ 6ನೇ ತರಗತಿ ಓದುತ್ತಿದ್ದಳು. ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವುದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನವದೆಹಲಿ : ಅಪ್ರಾಪ್ತ ಪತ್ನಿಯೊಂದಿಗೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತನ್ನ ಪತ್ನಿ ಅತ್ಯಾಚಾರದ ದೂರು ದಾಖಲಿಸಿದ್ದ ವ್ಯಕ್ತಿಗೆ 10 ವರ್ಷಗಳ ಶಿಕ್ಷೆಯನ್ನು ಎತ್ತಿಹಿಡಿಯುವ ಸಂದರ್ಭದಲ್ಲಿ ಹೈಕೋರ್ಟ್ನ ನಾಗ್ಪುರ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಒಪ್ಪಿಗೆಯ ವಯಸ್ಸು 18 ವರ್ಷಕ್ಕಿಂತ ಹೆಚ್ಚಿದೆ ಎಂದು ನಿರ್ದಿಷ್ಟಪಡಿಸಿದ ನ್ಯಾಯಮೂರ್ತಿ ಜಿಎ ಸನಪ್ ಅವರ ಪೀಠ, “18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯೊಂದಿಗೆ ಲೈಂಗಿಕ ಸಂಪರ್ಕವು ಅತ್ಯಾಚಾರ ಎಂದು ಹೇಳಬೇಕಾಗಿದೆ, ಅವಳು ಮದುವೆಯಾಗಿದ್ದರೂ ಅಥವಾ ಇಲ್ಲದಿದ್ದರೂ ಸಹ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹೆಂಡತಿಯೆಂದು ಹೇಳಲಾದ ಹುಡುಗಿಯ ವಯಸ್ಸು 18 ವರ್ಷಕ್ಕಿಂತ ಕಡಿಮೆ ಇರುವಾಗ ಹೆಂಡತಿಯೊಂದಿಗೆ ಸಮ್ಮತಿಯ ಲೈಂಗಿಕತೆಯ ರಕ್ಷಣೆ ಲಭ್ಯವಿಲ್ಲ ಎಂದು ಹೈಕೋರ್ಟ್ ಒತ್ತಿಹೇಳಿತು. ಕೆಳ ನ್ಯಾಯಾಲಯವು ನೀಡಿದ್ದಂತೆ ಆರೋಪಿಗಳಿಗೆ ಶಿಕ್ಷೆ ಮತ್ತು 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ಪೀಠ ಎತ್ತಿಹಿಡಿದಿದೆ. ಪ್ರಕರಣದ ವಿವರಗಳ ಪ್ರಕಾರ, ಪುರುಷನು ದೂರುದಾರರೊಂದಿಗೆ ಬಲವಂತದ ಲೈಂಗಿಕ ಸಂಭೋಗದಲ್ಲಿ ತೊಡಗಿದ್ದನು,…
ಬೆಂಗಳೂರು: ನಗರದ ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದ ವತಿಯಿಂದ ಒಂದು ಬಾರಿ ಪರಿಹಾರ(OTS) ಯೋಜನೆಯನ್ನು ಬಿಬಿಎಂಪಿಯಲ್ಲಿ ದಿನಾಂಕ:30-11-2024 ರವರೆಗೆ ವಿಸ್ತರಿಸಲಾಗಿದೆ. ಬಿಬಿಎಂಪಿ ಐತಿಹಾಸಿಕ ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿದಾರರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗಿದೆ. ಆದರೆ ಆಸ್ತಿ ತೆರಿಗೆ ಬಾಕಿ ಇರುವ ನಾಗರೀಕರು ಇದರ ಲಾಭವನ್ನು ಸರಿಯಾಗಿ ಪಡೆಯುತ್ತಿಲ್ಲ. 250 ಕೋಟಿ ರೂ.ಗಿಂತ ಹೆಚ್ಚು ಬಾಕಿ ಇರುವ 1,6000ಕ್ಕೂ ಹೆಚ್ಚು ಪರಿಷ್ಕರಣೆ ಪ್ರಕರಣಗಳು ಮತ್ತು 400 ಕೋಟಿ ರೂ.ಗಿಂತ ಹೆಚ್ಚು ಬಾಕಿ ಇರುವ ಸುಮಾರು 2.4 ಲಕ್ಷ ಸುಸ್ತಿದಾರರ ಪ್ರಕರಣಗಳು ಪಾವತಿಸುವುದು ಬಾಕಿಯಿರುತ್ತದೆ.ಆದ್ದರಿಂದ OTS ಯೋಜನೆಯಡಿ ತಕ್ಷಣವೇ ಬಾಕಿ ಆಸ್ತಿ ತೆರಿಗೆ ಪಾವತಿಸುವ ಸಲುವಾಗಿ ಪಾಲಿಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಯೋಜಿಸಿದೆ ಮತ್ತು ಅಭಿಯಾನವನ್ನು ಪ್ರಾರಂಭಿಸುತ್ತಿದೆ. ಆಸ್ತಿ ತೆರಿಗೆಯನ್ನು ಸಂಪೂರ್ಣ ಬಡ್ಡಿ ಮನ್ನಾ ಹಾಗೂ ಸಂಪೂರ್ಣ ಬಡ್ಡಿ ರಹಿತವಾಗಿ ಪ್ರತಿ ವರ್ಷಕ್ಕೆ ಕೇವಲ 100 ರೂ. ಪಾವತಿಸಿ ಆಸ್ತಿ ತೆರಿಗೆ ಕಟ್ಟಬಹುದಾಗಿದೆ.…














