Author: kannadanewsnow57

ತುಮಕೂರು: ತುಮಕೂರಿನಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು, ಹುಡುಗಿ ವಿಚಾರಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ತುಮಕೂರಿನ ಮರಳೂರು ದಿಣ್ಣೆಯಲ್ಲಿ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿಕೊಂಡು ಕೊಲೆ ಮಾಡಿದ್ದಾರೆ. ಹುಡುಗಿಯ ವಿಚಾರಕ್ಕೆ 20 ವರ್ಷದ ರಿಹಾನ್ ಪಾಷಾನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಾತನಾಡಬೇಕಿದೆ ಬಾ ಎಂದು ಕರೆಸಿಕೊಂಡು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಮರಳೂರು ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತುಮಕೂರಿನ ತಿಲಕ್ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಮುಂಬೈ : ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಎರಡನೇ ಬಾರಿಗೆ ತಂದೆಯಾಗಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ ರೋಹಿತ್ ಪತ್ನಿ ರಿತಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಮತ್ತು ರಿತಿಕಾ ದಂಪತಿಗೆ ಇದು ಎರಡನೇ ಮಗು. ಇದಕ್ಕೂ ಮುನ್ನ ಅವರಿಗೆ ಸಮೈರಾ ಎಂಬ ಮಗಳೂ ಇದ್ದಾಳೆ. ಸಮೈರಾ 30 ಡಿಸೆಂಬರ್ 2018 ರಂದು ಜನಿಸಿದರು. ಮಾಧ್ಯಮ ವರದಿಗಳ ಪ್ರಕಾರ, ರೋಹಿತ್ ಅವರ ಎರಡನೇ ಮಗು ನವೆಂಬರ್ 15 ರಂದು ಅಂದರೆ ಶುಕ್ರವಾರ ಜನಿಸಿತು. ಆದರೆ, ಈ ಬಗ್ಗೆ ರೋಹಿತ್ ಅಥವಾ ರಿತಿಕಾ ತಂಡದಿಂದ ಅಧಿಕೃತ ಮಾಹಿತಿ ಬಂದಿಲ್ಲ. ನವೆಂಬರ್ 22 ರಂದು ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರೋಹಿತ್ ಭಾರತವನ್ನು ಮುನ್ನಡೆಸಲಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಭಾರತ ತಂಡ ಆಸ್ಟ್ರೇಲಿಯಾ ತಲುಪಿದೆ, ಆದರೆ ರೋಹಿತ್ ಭಾರತದಲ್ಲಿಯೇ ಉಳಿದುಕೊಂಡಿದ್ದಾರೆ.

Read More

ನವದೆಹಲಿ : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಕಳೆದ 10 ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ನಿರಂತರವಾಗಿ ಅಗ್ಗವಾಗುತ್ತಿವೆ. ಅಚ್ಚರಿಯ ವಿಷಯವೆಂದರೆ ಕೇವಲ 10 ದಿನಗಳಲ್ಲಿ ಚಿನ್ನವು ಅದರ ಮೇಲಿನ ಹಂತದಿಂದ ಶೇಕಡಾ 6 ರಷ್ಟು ಅಗ್ಗವಾಗಿದೆ ಮತ್ತು 4750 ರೂಪಾಯಿಗಳಷ್ಟು ಕಡಿಮೆಯಾಗಿದೆ. ಇದೇ ವೇಳೆ ಬೆಳ್ಳಿ ದಾಖಲೆ ಕುಸಿತ ಕಂಡಿದ್ದು, 10 ದಿನಗಳಲ್ಲಿ 10 ಸಾವಿರ ರೂ. ಬೆಳ್ಳಿ 1 ಲಕ್ಷ ದಾಟಿತ್ತು ಆದರೆ ಈಗ ಪ್ರತಿ ಕೆಜಿಗೆ 90 ಸಾವಿರ ರೂ. 79,700 ತಲುಪಿದ್ದ ಚಿನ್ನ ಈಗ ಸುಮಾರು 74,950 ರೂ.ಗೆ ಮಾರಾಟವಾಗುತ್ತಿದೆ. ನವೆಂಬರ್ 4 ರಂದು ಅಮೆರಿಕದಲ್ಲಿ ಚುನಾವಣೆಗಳು ಮತ್ತು ಡೊನಾಲ್ಡ್ ಟ್ರಂಪ್ ಅವರ ವಿಜಯದ ನಂತರ, ಬಿಟ್‌ಕಾಯಿನ್ ಬೆಲೆಗಳು ನಿರಂತರವಾಗಿ ಏರುತ್ತಿವೆ, ಆದರೆ ಸುರಕ್ಷಿತ ಆಸ್ತಿಯ ಚಿನ್ನ ಮತ್ತು ಬೆಳ್ಳಿಯ ದರಗಳು ನಿರಂತರವಾಗಿ ಕುಸಿಯುತ್ತಿವೆ. ರೂಪಾಯಿಯ ಅನುಕ್ರಮ ಕುಸಿತ ಮತ್ತು ಡಾಲರ್‌ನ ಏರಿಕೆಯೊಂದಿಗೆ ವೇಗವನ್ನು ಕಾಯ್ದುಕೊಳ್ಳುವುದು, ಚಿನ್ನ ಮತ್ತು ಬೆಳ್ಳಿ ತಮ್ಮ ವೇಗವನ್ನು…

Read More

ಬಳ್ಳಾರಿ : ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 97 ಜನರಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ಜಾಮೀನು ಮಂಜೂರು ಮಾಡಿದ್ದು, ಇಂದು ಜೈಲಿನಿಂದ ಬಿಡುಗಡೆ ಅಗಲಿದ್ದಾರೆ. 97 ಜನರ ಜಾಮೀನಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಕೆಳಹಂತದ ನ್ಯಾಯಾಲಯದಿಂದ ಬಿಡುಗಡೆ ಆದೇಶ ಬಂದಿದ್ದು, ಇಂದು ಬಿಡುಗಡೆ ಆಗಲಿದ್ದಾರೆ. ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಜಾಮೀನಾಗಿ ಅರ್ಜಿ ಸಲ್ಲಿಸಲಾಗಿತ್ತು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಪ್ರಕರಣದ ಎ1 ಆರೋಪಿ ಮಂಜುನಾಥ್ ಹೊರತುಪಡಿಸಿ 97 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಮಂಜುನಾಥ್ ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲ. ಈ ಕುರಿತು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ವಿಭಾಗೀಯ ಪೀಠವು 98 ಅಪರಾಧಿಗಳ ಪೈಕಿ 97 ಜನರಿಗೆ ಜಾಮೀನು ಮುಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಹಾಕದ ಎ1 ಮಂಜುನಾಥ…

Read More

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ 10 ಮಕ್ಕಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಕಾಲೇಜಿನ ಎನ್‌ಐಸಿಯು (ಶಿಶು ವಾರ್ಡ್) ಒಳಗಿನ ಘಟಕದಲ್ಲಿ ರಾತ್ರಿ 10.30 ರಿಂದ 10.45 ರ ನಡುವೆ ಬೆಂಕಿ ಕಾಣಿಸಿಕೊಂಡಿದೆ ಎಂದು ಜಿಲ್ಲಾ ಅಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.ಪ್ರಾಥಮಿಕ ಮಾಹಿತಿ ಪ್ರಕಾರ 10 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಈ ವೇಳೆ ವಾರ್ಡ್‌ನಲ್ಲಿದ್ದ ಸಿಬ್ಬಂದಿ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಒಳಗಿನ ಘಟಕದ ಕೆಲವು ಮಕ್ಕಳನ್ನು ಸಹ ರಕ್ಷಿಸಲಾಗಿದೆ, ಇದುವರೆಗೆ 40 ಮಕ್ಕಳನ್ನು ರಕ್ಷಿಸಲಾಗಿದೆ. https://twitter.com/i/status/1857594827334176847 ಝಾನ್ಸಿ ವಿಭಾಗದ ಆಯುಕ್ತ ಬಿಮಲ್ ಕುಮಾರ್ ದುಬೆ ಮಾತನಾಡಿ, ಘಟನೆಯ ಸಮಯದಲ್ಲಿ 54-55 ಮಕ್ಕಳು ವಾರ್ಡ್‌ನಲ್ಲಿ ದಾಖಲಾಗಿದ್ದರು. ಗಾಯಗೊಂಡಿರುವ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಝಾನ್ಸಿ ವಿಭಾಗದ ಡಿಐಜಿ ಕಲಾನಿಧಿ ನೈತಾನಿ ತಿಳಿಸಿದ್ದಾರೆ. https://twitter.com/i/status/1857585411813679273 ಆರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು,…

Read More

ಬೆಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಗಾಗಿ 14 ನವಂಬರ್ 2024ರಿಂದ 24 ಜನವರಿ 2025 ರವರೆಗೆ, 10 ವಾರಗಳ ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ’ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಒಂದು ದಿನ “ಮಕ್ಕಳ ವಿಶೇಷ ಗ್ರಾಮ ಸಭೆ ನಡೆಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಭಾಗವಹಿಸುವಿಕೆ ಹಕ್ಕು ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿಗಳಿಂದ ಮಕ್ಕಳ ಗ್ರಾಮ ಸಭೆಯನ್ನು ನಡೆಸಲು 2006 ರಲ್ಲಿ ಉಲ್ಲೇಖ(1) ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅಧ್ಯಾಯ || ರ ಪ್ರಕರಣ 3(ಎಚ್)(2)(1) (2015ರ ತಿದ್ದುಪಡಿಯಂತೆ)ರಲ್ಲಿ ನಿರ್ದೇಶಿಸಿರುವಂತೆ ಪ್ರಮುಖವಾದ ನಿಲುವನ್ನು ತೆಗೆದುಕೊಂಡಿದೆ. ಇದು ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ 1989, ಭಾರತದ ಸಂವಿಧಾನದಲ್ಲಿ ಮಕ್ಕಳಿಗಿರುವ ಹಕ್ಕುಗಳನ್ನು ಮಾನ್ಯ ಮಾಡುವುದರಲ್ಲಿ ಮಹತ್ತರವಾದ ಹೆಜ್ಜೆಯಾಗಿದೆ. 2006ರಲ್ಲಿ ಉಲ್ಲೇಖ(2)ರ ಸುತೋಲೆಯನ್ನು ಹೊರಡಿಸುವುದರ ಮೂಲಕ ಗ್ರಾಮೀಣಾಭಿವೃದ್ಧಿಯಲ್ಲಿ ಮಕ್ಕಳ ಭಾಗವಹಿಸುವಿಕೆಗೆ ಅವಕಾಶ ನೀಡಲಾಗಿದೆ. 2006 ರಿಂದ…

Read More

ದಾವಣಗೆರೆ : ಸಮಾಜದ ಅನಿಷ್ಟ ಪದ್ದತಿಯಾದ ಬಾಲ್ಯವಿವಾಹವನ್ನು ಕಟ್ಟುನಿಟ್ಟಾಗಿ ತಡೆಗಟ್ಟುವ ಹಿನ್ನಲೆಯಲ್ಲಿ ಇದಕ್ಕೆ ಸಹಕಾರ ನೀಡುವ ಪೋಷಕರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದ್ವೈಮಾಸಿಕ ಸಭೆ, ಜಿಲ್ಲಾ ಮಟ್ಟದ ಪೋಸ್ಕೋ ಸಭೆ, ವಿಶೇಷ ಕಾರ್ಯಪಡೆ ಸಭೆ, ಯುಟಿಆರ್‍ಸಿ ಸಭೆ, ಬಾಲನ್ಯಾಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಘಟಿಸಿದ 20 ಬಾಲ್ಯ ವಿವಾಹ ಪ್ರಕರಣಗಳಲ್ಲಿ 16 ರನ್ನು ತಡೆದು 4 ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಆದರೆ ಎಲ್ಲಾ ಪ್ರಕರಣಗಳಲ್ಲಿ ಎಫ್‍ಐಆರ್ ದಾಖಲಿಸಲು ಕ್ರಮ ವಹಿಸಬೇಕು. ಬಾಲ್ಯ ವಿವಾಹ ಪ್ರಕರಣಗಳಲ್ಲಿ ಸಹಕಾರ ನೀಡುವ ಅಂತಹ ಎರಡೂ ಕಡೆಯ ಪೋಷಕರ ಮೇಲೆ ಎಫ್‍ಐಆರ್ ದಾಖಲಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಯಾವುದೇ ಕಾರಣಕ್ಕೂ ಎಫ್‍ಐಆರ್ ದಾಖಲಿಸದೇ ಪ್ರಕರಣವನ್ನು ಕೈಬಿಡಬಾರದೆಂದು ಸೂಚನೆ…

Read More

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್‌ 18 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಗೆ  ಅರ್ಜಿ ಆಹ್ವಾನಿಸಲಾಗಿದೆ. ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್‌ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು. ಇದರಲ್ಲಿ ಇಲೆಕ್ಟ್ರಾನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4K, ಟಿವಿ LED ಮತ್ತು LCD ಟಿವಿ ಯಾ ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೈ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಸಹ ಇರುತ್ತದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌…

Read More

ಬೆಂಗಳೂರು : ಪ್ರಸಕ್ತ(2024-25) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವೀಡರ್, ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ಸೆಟ್, ಪ್ಲೋರ್‍ಮಿಲ್, ಯಂತ್ರ ಚಾಲಿತ ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ಹಾಗೂ ತುಂತುರು ನೀರಾವರಿ ಯೋಜನೆಯಡಿಯಲ್ಲಿ ಶೇ.90ರ ರಿಯಾಯ್ತಿ ದರದಲ್ಲಿ ತುಂತುರು ನೀರಾವರಿ ಘಟಕ(ಹೆಚ್‍ಡಿಪಿಇ ಪೈಪ್ಸ್) ವಿತರಿಸಲಾಗುತ್ತಿದೆ. ಆಸಕ್ತ ರೈತರು ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಎರಡು ಭಾವಚಿತ್ರ, ರೂ.100 ರ ಛಾಪಾ ಕಾಗಗದೊಂದಿಗೆ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ರೈತರಿಗೆ ನೀರು ಸಂಗ್ರಹಣಾ ರಚನೆ(ಕೃಷಿ ಹೊಂಡ), ಕೃಷಿ ಹೊಂಡದ ಸುತ್ತಲೂ ತಂತಿ…

Read More

ನವೆಂಬರ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದೆ.  ನವೆಂಬರ 2024 ರ ಮಾಹೆಯ ಪಡಿತರ ವಿತರಣೆಯಲ್ಲಿ ಅಂತ್ಯೋದಯ (ಎಎವೈ) ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 21 ಕೆಜಿ ಅಕ್ಕಿ, 14 ಕೆಜಿ ಜೋಳ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪಿಎಚ್‍ಎಚ್ (ಬಿಪಿಎಲ್) ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 3 ಕೆಜಿ ಅಕ್ಕಿ, 2 ಕೆಜಿ ಜೋಳ ಉಚಿತವಾಗಿ ವಿತರಿಸಲಾಗುತ್ತದೆ. ಅಂತರರಾಜ್ಯ ಪೋರ್ಟೆಬಿಲಿಟಿ ಮೂಲಕ ಪಡಿತರ ಪಡೆಯುವವರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತದೆ. ಜಿಲ್ಲೆಯಲ್ಲಿ 29,360 ಅಂತ್ಯೋದಯ ಹಾಗೂ 3,54,357 ಬಿಪಿಎಲ್ ಒಟ್ಟು 3,83,717 ಪಡಿತರ ಚೀಟಿಗಳು ಚಾಲ್ತಿಯಲ್ಲಿವೆ.  ನವೆಂಬರ ಮಾಹೆ 1ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಮಂಗಳವಾರ ರಜಾ ಹೊರತುಪಡಿಸಿ ಪ್ರತಿ ದಿನ ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಸಾಯಂಕಾಲ 4 ರಿಂದ ರಾತ್ರಿ…

Read More