Subscribe to Updates
Get the latest creative news from FooBar about art, design and business.
Author: kannadanewsnow57
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ ಪ್ರತಿಯೊಬ್ಬರ ಅಗತ್ಯವಾಗಿದೆ. ಜನರು ಇದಕ್ಕೆ ಎಷ್ಟು ವ್ಯಸನಿಯಾಗಿದ್ದಾರೆ ಎಂದರೆ ಅದು ಇಲ್ಲದೆ ನಾವು ಆತ್ಮವಿಶ್ವಾಸವನ್ನು ಅನುಭವಿಸುವುದಿಲ್ಲ. ಸ್ಮಾರ್ಟ್ಫೋನ್ಗಳು ನಮ್ಮ ಜೀವನವನ್ನು ಸುಲಭಗೊಳಿಸಿವೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಅದೇ ಸಮಯದಲ್ಲಿ ಇದು ಹಲವಾರು ಹೊಸ ಸಮಸ್ಯೆಗಳನ್ನು ಸಹ ಸೃಷ್ಟಿಸುತ್ತಿದೆ. ಅದರಲ್ಲೂ ಫೋನ್ ನಮ್ಮ ಆರೋಗ್ಯದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರುತ್ತದೆ. ಪ್ರತಿದಿನ ಮತ್ತು ನಿರಂತರವಾಗಿ ಫೋನ್ ಬಳಸುವುದರಿಂದ ನಮ್ಮ ದೇಹವು ಒತ್ತಡಕ್ಕೆ ಒಳಗಾಗುತ್ತದೆ. ಅದಕ್ಕೆ ಸರಿಯಾದ ವಿಶ್ರಾಂತಿ ಸಿಗುವುದಿಲ್ಲ ಮತ್ತು ದೇಹದ ಅನೇಕ ಭಾಗಗಳಲ್ಲಿ ಈ ಆಯಾಸದ ಪರಿಣಾಮ ಕಂಡುಬರುತ್ತದೆ. ಸ್ಮಾರ್ಟ್ಫೋನ್ಗಳ ಬಳಕೆಯಿಂದ ಉಟಾಗುವ ಸಮಸ್ಯೆಗಳು ಕೈ ಕಿರುಬೆರಳಿನಲ್ಲಿ ನೋವು ಇತ್ತೀಚಿನ ದಿನಗಳಲ್ಲಿ ಬರುವ ಸ್ಮಾರ್ಟ್ಫೋನ್ಗಳ ಗಾತ್ರವು ಸಾಕಷ್ಟು ದೊಡ್ಡದಾಗಿದೆ. ದಿನವಿಡೀ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವುದರಿಂದ ನಮ್ಮ ಕೈಯ ಕಿರುಬೆರಳು ತುಂಬಾ ಬಾಗುತ್ತದೆ. ಇದರಿಂದ ನೋವು ಉಂಟಾಗುತ್ತದೆ. ಕುತ್ತಿಗೆ ನೋವು ಫೋನ್ ಅನ್ನು ನಿರಂತರವಾಗಿ ನೋಡುವುದು ಕುತ್ತಿಗೆಯನ್ನು ನಿರಂತರವಾಗಿ…
ಬೆಂಗಳೂರು: ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿದೆ. ನೀವು ನಿಮ್ಮೂರಿನ ಕಂದಾಯ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ. ಅತಿ ಪುರಾತನ ಕಾಲದಿಂದಲೂ ಯಾವುದೇ ರೀತಿಯ ಸರ್ಕಾರದಲ್ಲಾಗಲೀ, ಅಂದರೆ, ಚಕ್ರಾದಿsಪತ್ಯ, ರಾಜಪ್ರಭುತ್ವ, ನಿರಂಕುಶಪ್ರಭುತ್ವ ಅಥವಾ ಪ್ರಜಾಪ್ರಭುತ್ವ ಕಾಲದಿಂದಲೂ ಭೂನಿರ್ವಹಣೆ, ಭೂಕಂದಾಯ ಸಂಗ್ರಹಣೆ, ಭೂಮಾಲಿಕತ್ವ ನಿರ್ಬಂಧನೆ ಮತ್ತು ಭೂ ಉಪಯೋಗ ಮತ್ತು ಭೂಸ್ವಾಧೀನ ಹಕ್ಕುಗಳು ಮುಂತಾದವುಗಳೆಲ್ಲವೂ ರಾಜ್ಯ ಸರ್ಕಾರದ ಪ್ರಮುಖ ಜವಾಬ್ದಾರಿಗಳಾಗಿದ್ದವು. ಪ್ರಾಚೀನ ಭಾರತದಲ್ಲಿ ವಾಸ್ತವವಾಗಿ ಸರ್ಕಾರದಲ್ಲಿ ಎರಡು ಇಲಾಖೆಗಳು ಮಾತ್ರ ಅಸ್ತಿತ್ವದಲ್ಲಿರುತ್ತಿದ್ದವು. ಮೊದಲನೆಯದೆಂದರೆ ಭೂನಿರ್ವಹಣೆ ಮತ್ತು ಭೂಕಂದಾಯ ಇಲಾಖೆ ಮತ್ತು ಎರಡನೆಯದೆಂದರೆ ರಾಜ್ಯವನ್ನು ಬಾಹ್ಯ ದಾಳಿಯ ವಿರುದ್ಧ ಹೋರಾಡಲು ಅಗಾಧವಾದ ಭೂಸೇನೆಯ ರಕ್ಷಣಾ ಇಲಾಖೆ. ಮೊದಲನೇ ಇಲಾಖೆಯು ರಾಜಸ್ವ ಸಂಗ್ರಹಣೆ ಹಾಗೂ ಒಳಾಡಳಿತ ನಿರ್ವಹಣೆಯನ್ನು ಹಾಗೂ ಎರಡನೇ ಇಲಾಖೆಯು ಪ್ರಾಂತ್ಯಗಳ ರಕ್ಷಣೆ ಮತ್ತು ಸಮಗ್ರತೆಯನ್ನು ಬಾಹ್ಯದಾಳಿಗೀಡಾಗುವುದರಿಂದ ರಕ್ಷಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದವು. ಸಮಾಜವು…
ನವದೆಹಲಿ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಒಟ್ಟಿಗೆ ಡಿನ್ನರ್ ನಲ್ಲಿ ಭಾಗಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯ ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಡಿನ್ನರ್ ನಲ್ಲಿ ಭಾಗಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ. ಡಿನ್ನರ್ ಗೆ ಬರುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರೇ ಸತೀಶ್ ಜಾರಕಿಹೊಳಿ ಅವರನ್ನು ಆಹ್ವಾನಿಸಿದ್ದರು ಎನ್ನಲಾಗಿದ್ದು, ಈ ವೇಳೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದು, ಏಪ್ರಿಲ್ 15 ರಂದು ಸಿಎಂ ನಿವಾಸದ ಮುಂದೆ ಧರಣಿ ನಡೆಸಲು ನಿರ್ಧರಿಸಲಾಗಿದೆ. ಡಿಸೆಂಬರ್ 31 ರಂದು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಈ ವೇಳೆ ನೌಕರರ ಬೇಡಿಕೆ ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು, ಸಂಕ್ರಾಂತಿ ಹಬ್ಬದ ಬಳಿಕ ಕರೆದು ಸಭೆ ನಡೆಸುವುದಾಗಿ ಹೇಳಿದ್ದರು. ಈಗಾಗಲೇ ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿದೆ. ಆದರೆ ಕೊಟ್ಟ ಮಾತಿನಂತೆ ನೌಕರರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ಕರೆದಿಲ್ಲ. 2 ತಿಂಗಳು ಕಳೆದ್ರೂ ನೌಕರರನ್ನು ಮಾತುಕತೆಗೆ ಕರೆಯದ ಹಿನ್ನೆಲೆಯಲ್ಲಿ ಏಪ್ರಿಲ್ 15 ರ ಬೆಳಗ್ಗೆ11 ರಿಂದ ಸಂಜೆ 5 ಗಂಟೆಯವರೆಗೆ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಧರಣಿ ಸತ್ಯಾಗ್ರಹಕ್ಕೆ ನೌಕರರು ಮುಂದಾಗಿದ್ದಾರೆ.
ನವದೆಹಲಿ : ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಭೂಪೇಶ್ ಬಾಘೇಲ್ ಅವರ ನಿವಾಸದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಜೆನ್ಸಿ ತಂಡಗಳು ರಾಯ್ಪುರ ಮತ್ತು ಭಿಲಾಯಿಯಲ್ಲಿರುವ ಬಾಘೇಲ್ ಅವರ ನಿವಾಸದ ಮೇಲೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಮಾಜಿ ಮುಖ್ಯಮಂತ್ರಿಯ ಆಪ್ತ ಸಹಾಯಕರ ಮನೆಯ ಮೇಲೂ ದಾಳಿ ನಡೆಸಿವೆ. ಸಿಬಿಐ ಅಧಿಕಾರಿಗಳು ಅವರ ಆಪ್ತರಾದ ವಿನೋದ್ ವರ್ಮಾ ಮತ್ತು ದೇವೇಂದ್ರ ಯಾದವ್ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದು, ಸಿಬಿಐ ಅಧಿಕಾರಿಗಳು ಅವರ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಅಂಡಮಾನ್ : ಅಂಡಮಾನ್ ಸಮುದ್ರದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4 ಎಂದು ದಾಖಲಾಗಿದೆ. ಇಂದು ಬೆಳ್ಳಂಬೆಳಗ್ಗೆ ಅಂಡಮಾನ್ ಸಮುದ್ರದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರ ಆಳ 75 ಕಿಲೋಮೀಟರ್ ಆಗಿತ್ತು. ಆದರೆ, ಈ ಭೂಕಂಪದಿಂದ ಯಾವುದೇ ಜೀವಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಇದಕ್ಕೂ ಮೊದಲು ಬಂಗಾಳಕೊಲ್ಲಿಯಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿತ್ತು. https://twitter.com/NCS_Earthquake/status/1904686710614855826?ref_src=twsrc%5Etfw%7Ctwcamp%5Etweetembed%7Ctwterm%5E1904686710614855826%7Ctwgr%5Ecb59caa0fa1dde9ac2478592b81ce64146e554a8%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Fkhabarindiatv-epaper-dh0578a8eab9504bc89b94918499d3e35c%2Fandamansagarmeaayabhukampriktarpaimaneparmapigaiitanitivrata-newsid-n657555224
ಬೆಂಗಳೂರು : ಹಣದುಬ್ಬರ ಸಂಬಂಧಿತ ವಾರ್ಷಿಕ ವ್ಯಾಯಾಮದ ಭಾಗವಾಗಿ ಏಪ್ರಿಲ್ 1 ರಂದು ರಾಜ್ಯಾದ್ಯಂತ ಟೋಲ್ ದರಗಳು ಶೇಕಡಾ 3-5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವು ದಿನಗಳಲ್ಲಿ ಅಧಿಸೂಚನೆಗಳನ್ನು ಹೊರಡಿಸಲಾಗುವುದು. ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನವುಗಳಿಗೆ ಪರಿಷ್ಕೃತ ದರಗಳು ರಿಯಾಯಿತಿ ಅವಧಿಯನ್ನು ಅವಲಂಬಿಸಿ ಅನ್ವಯವಾಗುತ್ತವೆ. ಗರಿಷ್ಠ ಹೆಚ್ಚಳವು ಶೇಕಡಾ 5 ಮತ್ತು ಕನಿಷ್ಠ ಶೇಕಡಾ 3 ಆಗಿರುತ್ತದೆ ಎಂದು ಬೆಂಗಳೂರಿನ NHAI ಯೋಜನಾ ನಿರ್ದೇಶಕ ಕೆ ಬಿ ಜಯಕುಮಾರ್ ಹೇಳಿದ್ದಾರೆ. ಕಣಿಮಿಣಿಕೆ ಮತ್ತು ಶೇಷಗಿರಿಹಳ್ಳಿಯ ಬೆಂಗಳೂರು-ಮೈಸೂರು, ನಂಗ್ಲಿ ಬೆಂಗಳೂರು-ತಿರುಪತಿ, ಬಾಗೇಪಲ್ಲಿ ಬೆಂಗಳೂರು-ಹೈದರಾಬಾದ್, ಸಾದಹಳ್ಳಿ ಬೆಂಗಳೂರು ವಿಮನ ನಿಲ್ದಾಣ ರಸ್ತೆ, ಹುಲಿಕುಂಟೆ ಮತ್ತು ನಲ್ಲೂರು ದೇವನಹಳ್ಳಿ-ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ಟೋಲ್ ಪ್ಲಾಜಾಗಳು ಸೇರಿದಂತೆ 66 ಟೋಲ್ ಪ್ಲಾಜಾಗಳಲ್ಲಿ ಟೋಲ್ ಸುಂಕ ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾರ್ಚ್ 19 ರಂದು ರಾಜ್ಯಸಭೆಗೆ ತಿಳಿಸಿದ್ದು,…
ನವದೆಹಲಿ : ಆಯುಷ್ಮಾನ್ ಭಾರತ್ ಯೋಜನೆಯು ವಿಶ್ವದ ಅತಿದೊಡ್ಡ ಸರ್ಕಾರ ಒದಗಿಸುವ ಆರೋಗ್ಯ ವಿಮಾ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ದೇಶದ ಸುಮಾರು 12 ಕೋಟಿ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂ. ಮೌಲ್ಯದ ಚಿಕಿತ್ಸೆಯ ಪ್ರಯೋಜನವನ್ನು ಪಡೆಯುತ್ತವೆ. ಈ ಯೋಜನೆಯ ಫಲಾನುಭವಿಗಳು ಈ ಯೋಜನೆಯ ಪ್ರಯೋಜನಗಳು ಲಭ್ಯವಿರುವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಇದಲ್ಲದೆ, ಯಾವುದೇ ಭಾರತೀಯ ನಾಗರಿಕನು ಎಪ್ಪತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವನಾಗಿದ್ದರೆ, ಅವರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆ ಸಿಗುತ್ತದೆ. ಅಂದರೆ, ಎಪ್ಪತ್ತು ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಭಾರತೀಯರು ಈ ಯೋಜನೆಯಡಿಯಲ್ಲಿ ಉಚಿತ ಆರೋಗ್ಯ ಸೇವೆಗಳನ್ನು ಪಡೆಯುತ್ತಾರೆ. ಆಯುಷ್ಮಾನ್ ಕಾರ್ಡ್ OPD ಯಲ್ಲಿ ಪರಿಣಾಮಕಾರಿಯಾಗಿರುವುದಿಲ್ಲ – ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲದ ಯಾವುದೇ ಕಾಯಿಲೆ ಇದ್ದರೆ, OPD ಚಿಕಿತ್ಸೆ ಮಾತ್ರ ಸಾಧ್ಯ, ಆಗ ಆ ರೋಗದ ಚಿಕಿತ್ಸೆಯ ವೆಚ್ಚವನ್ನು ಈ ಯೋಜನೆಯಡಿಯಲ್ಲಿ ಭರಿಸಲಾಗುವುದಿಲ್ಲ. ಆಯುಷ್ಮಾನ್ ಯೋಜನೆಯಡಿ ಖಾಸಗಿ ಆಸ್ಪತ್ರೆಯ OPD ಯಲ್ಲಿ ಚಿಕಿತ್ಸೆ ಪಡೆದರೆ, ಆ…
ಬೆಂಗಳೂರು: ಕರ್ನಾಟಕ ರಾಜ್ಯವನ್ನು ಕ್ಷಯ ರೋಗ ಮುಕ್ತ ರಾಜ್ಯವನ್ನಾಗಿ ರೂಪಿಸುವತ್ತ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿರುವ ಆರೋಗ್ಯ ಇಲಾಖೆ, ಇದೀಗ BCG ಲಸಿಕೆ ಹಾಕುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ವಿಶ್ವ ಕ್ಷಯರೋಗ ದಿನವಾದ ಇಂದು ಬಸಿಜಿ ಲಸಿಕಾ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ರಾಜ್ಯದಲ್ಲಿ 16 ಜಿಲ್ಲೆಗಳಲ್ಲಿ ಬಸಿಜಿ ಲಸಿಕೆ ಹಾಕುವ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಕ್ಷಯ ರೋಗ ಬರದಂತೆ ತಡೆಯುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಲಿದೆ ಎಂದರು. ಈಗಾಗಲೇ ರಾಜ್ಯದಲ್ಲಿ 1060 ಗ್ರಾಮ ಪಂಚಾಯತಿಗಳನ್ನ ಕ್ಷಯ ರೋಗ ಮುಕ್ತ ಪಂಚಾಯತಿಗಳನ್ನಾಗಿ ರೂಪಿಸಲಾಗಿದೆ. ಅಲ್ಲದೇ ಕ್ಷಯ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ ಕ್ಷಯ ರೋಗಿಗಳಿಗೆ 98721 ಪೌಷ್ಠಿಕ ಆಹಾರದ ಕಿಟ್ ಗಳನ್ನ ವಿತರಿಸಲಾಗಿದೆ. ಸಾರ್ವಜನಿಕರು ಕ್ಷಯ ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಬಿಸಿಜಿ ಲಸಿಕಾ ಕಾರ್ಯಕ್ರಮದ ಲಾಭ ಪಡೆಯಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬಿಸಿಜಿ ಲಸಿಕೆ ಸುರಕ್ಷಿತ ಲಸಿಕೆಯಾಗಿದ್ದು, ಸಾರ್ವಜನಿಕರು…
ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗಾಳಿ ಮಳೆಗೆ ನಿರ್ಮಾಣ ಹಂತದ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದಲ್ಲಿ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರನ್ನು ಹಳೇಹುಬ್ಬಳಿಯ ಧಾರವಾಡ ಫ್ಲಾಟ್ ನ ನಿವಾಸಿ ದಾವೂದ್ ಸವಣೂರು (32) ಹಾಗೂ ಹಳೇಹುಬ್ಬಳ್ಳಿ ನೂರಾನಿ ಫ್ಲಾಟ್ ನಿವಾಸಿ ರಫಿಕ್ ಸಾಬ್ ಚನ್ನಾಪುರ (50) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.