Author: kannadanewsnow57

ನವದೆಹಲಿ : ಆಭರಣ ಪ್ರಿಯರಿಗೆ ಇಂದು ಬೆಳ್ಳಂಬೆಳಗ್ಗೆ ಸಿಹಿಸುದ್ದಿ ಸಿಕ್ಕಿದ್ದು, ಸತತ ನಾಲ್ಕನೇ ದಿನವೂ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಕುಸಿಯುತ್ತಿದೆ. ನವೆಂಬರ್ 13 ರ ಬುಧವಾರದಂದು ಚಿನ್ನದ ಬೆಲೆಗಳು ನಿನ್ನೆಗೆ ಹೋಲಿಸಿದರೆ 2000 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 77650 ರೂ.ಗೆ ಇಳಿಕೆಯಾಗಿದೆ. ಹಾಗೂ 22ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 71650 ರೂ.ಗೆ ಕುಸಿದಿದೆ. ಕಳೆದ ನಾಲ್ಕು ದಿನಗಳಲ್ಲಿ ಚಿನ್ನದ ಬೆಲೆ ನೋಡಿದರೆ ಸುಮಾರು 3 ಸಾವಿರ ರೂಪಾಯಿ ಇಳಿಕೆಯಾಗಿದೆ. ಚಿನ್ನದ ಬೆಲೆ ಒಂದು ಹಂತದಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ 82,000 ರೂ. ಅದಕ್ಕೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸುಮಾರು 5 ಸಾವಿರ ರೂಪಾಯಿ ಇಳಿಕೆಯಾಗಿದೆ. ನಿನ್ನೆ 78,000 ಇದ್ದ ಚಿನ್ನದ ಬೆಲೆ ಈಗ 77,000 ರೂ.ಗೆ ಕುಸಿದಿದೆ. ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿರುವುದಕ್ಕೆ ಹಲವು ಕಾರಣಗಳಿವೆ. ಅದರಲ್ಲೂ ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್…

Read More

ಬೆಂಗಳೂರು : ರಾಜ್ಯದ ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆಯನ್ನು ಸರಳೀಕರಣ ಹಾಗೂ ಸಬಲೀಕರಣಗೊಳಿಸುವ ಸಲುವಾಗಿ ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯಪಡೆ ರಚಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.  ಇ- ಖಾತೆ ಸಂಬಂಧ ಬುಧವಾರ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿಗಳೊಂದಿಗೆ ಅವರು ಚರ್ಚೆ ನಡೆಸಿದ್ದಾರೆ. ಗ್ರಾಮಠಾಣ ವ್ಯಾಪ್ತಿಯ ಹೊರ ಭಾಗದ ಬಹಳಷ್ಟು ಪ್ರದೇಶಗಳಲ್ಲಿ ಶಾಲೆಗಳು, ಉದ್ದಿಮೆಗಳು ಹಾಗೂ ವಸತಿ ಸಮುಚ್ಛಯಗಳು ನಿರ್ಮಾಣಗೊಂಡಿದ್ದು, ಬಹುಪಾಲು ಆಸ್ತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡದೆ ಇರುವುದರಿಂದ ಗ್ರಾಮ ಪಂಚಾಯತಿಗಳ ಸಂಪನ್ಮೂಲ ಕ್ರೋಢೀಕರಣದಲ್ಲಿ ಹಿನ್ನಡೆ ಉಂಟಾಗಿದೆ ಎಂದರು. ಗ್ರಾಮ ಪಂಚಾಯತಿಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು ಹಾಗೂ ನಾಗರಿಕರಿಗೆ ಇ-ಸ್ವತ್ತು ದಾಖಲೆ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವ ಅನಿವಾರ್ಯತೆ ಇರುವುದರಿಂದ ಸಮಸ್ಯೆಗಳನ್ನು ಬಗಹರಿಸಿ ಪರಿಹಾರಗಳನ್ನು ಕಂಡುಕೊಳ್ಳಲು ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ. ಗ್ರಾಮಗಳಿಗೆ ಹೊಂದಿಕೊಂಡಂತೆ ಕಂದಾಯ ಭೂಮಿಯಲ್ಲಿ ಬಡಾವಣೆಗಳು ನಿರ್ಮಾಣಗೊಂಡಿದ್ದು, ಇಂತಹ ಬಡಾವಣೆಗಳಲ್ಲಿನ ನಿವಾಸಿಗಳು ಇ-ಸ್ವತ್ತು…

Read More

ಪೇಶಾವರ: ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿ ಮದುವೆ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಸಿಂಧೂ ನದಿಗೆ ಬಿದ್ದ ಪರಿಣಾಮ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬ ಮಹಿಳೆ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಯಾಮರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಸ್ ಅಸ್ಟೋರ್ನಿಂದ ಪಂಜಾಬ್ನ ಚಕ್ವಾಲ್ ಜಿಲ್ಲೆಗೆ ಪ್ರಯಾಣಿಸುತ್ತಿದ್ದಾಗ ತೇಲ್ಚಿ ಸೇತುವೆಯಿಂದ ನದಿಗೆ ಬಿದ್ದಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. 16 ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಉಳಿದ ಸಂತ್ರಸ್ತರಿಗಾಗಿ ಶೋಧ ಪ್ರಯತ್ನಗಳು ನಡೆಯುತ್ತಿವೆ ಎಂದು ಡಯಾಮರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೇರ್ ಖಾನ್ ಖಚಿತಪಡಿಸಿದ್ದಾರೆ. “ನದಿಯಿಂದ ಹದಿನಾರು ಮೃತ ದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಉಳಿದ ವ್ಯಕ್ತಿಗಳಿಗಾಗಿ ಶೋಧ ಮುಂದುವರೆದಿದೆ” ಎಂದು ಖಾನ್ ಪತ್ರಿಕೆಗೆ ತಿಳಿಸಿದ್ದಾರೆ. ವಧುವಾಗಿದ್ದ ಮಹಿಳೆಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು. ಆದಾಗ್ಯೂ, 22 ಜನರು ಮುಳುಗಿದ್ದು, ಒಬ್ಬ ವ್ಯಕ್ತಿಯನ್ನು ರಕ್ಷಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ವಿವರಗಳನ್ನು ಹಂಚಿಕೊಂಡ ರೆಸ್ಕ್ಯೂ 1122 ವಕ್ತಾರ ಶೌಕತ್ ರಿಯಾಜ್,…

Read More

ನವದೆಹಲಿ:ವಿದ್ಯುತ್ ಕ್ಷೇತ್ರದಲ್ಲಿನ ಹೂಡಿಕೆಯ ಅವಶ್ಯಕತೆಗಳನ್ನು ಪೂರೈಸಲು, ಹೆಚ್ಚುತ್ತಿರುವ ಬೇಡಿಕೆಯಿಂದಾಗಿ, ತಮ್ಮ ವಿದ್ಯುತ್ ಉತ್ಪಾದನೆ, ಪ್ರಸರಣ ಮತ್ತು ವಿತರಣಾ ಕಂಪನಿಗಳನ್ನು ಸ್ಟಾಕ್ ಎಕ್ಸ್ಚೇಂಜ್ಗಳಲ್ಲಿ ಪಟ್ಟಿ ಮಾಡಲು ಪರಿಗಣಿಸುವಂತೆ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು 2030 ರ ವೇಳೆಗೆ ದೇಶದ ವಿದ್ಯುತ್ ಕ್ಷೇತ್ರಕ್ಕೆ ಅಂದಾಜು 42 ಲಕ್ಷ ಕೋಟಿ ರೂ.ಗಳ ಹೂಡಿಕೆಯ ಅಗತ್ಯವಿದೆ ಎಂದು ಕೇಂದ್ರ ಇಂಧನ ಸಚಿವ ಮನೋಹರ್ ಲಾಲ್ ಖಟ್ಟರ್ ಮಂಗಳವಾರ ಹೇಳಿದ್ದಾರೆ. ವಿದ್ಯುತ್ ಉಪಯುಕ್ತತೆಗಳ ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಮತ್ತು ನಂತರದ ವಿದ್ಯುತ್ ಕಂಪನಿಗಳ ಪಟ್ಟಿಯಿಂದ ಇದನ್ನು ಸಾಧಿಸಬಹುದು ಎಂದು ಅವರು ಹೇಳಿದರು. ಅಂತಹ ದೊಡ್ಡ ಹೂಡಿಕೆಗಾಗಿ, ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುವುದರ ಜೊತೆಗೆ, ಕಂಪನಿಗಳು ಪಟ್ಟಿ ಮಾಡಲು ಮುಂದೆ ಬರಬೇಕು. ಗುಜರಾತ್ ಮತ್ತು ಹರಿಯಾಣದ ಕಂಪನಿಗಳು ಮುಂದೆ ಬಂದು ಪಟ್ಟಿ ಮಾಡಲು ಸಿದ್ಧವಾಗಿವೆ ಎಂದು ಮಾಹಿತಿ ನೀಡಿವೆ. ನಾವು ಮೊದಲು ಪ್ರಸರಣ ಕಂಪನಿಗಳನ್ನು ಪಟ್ಟಿ ಮಾಡಲು ಸೂಚಿಸಿದ್ದೇವೆ, ನಂತರ ಉತ್ಪಾದನಾ ಕಂಪನಿಗಳು…

Read More

ಬೆಂಗಳೂರು : ಪೂರ್ವದ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು, ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ, ಹಾಸನ, ತುಮಕೂರು, ರಾಮನಗರ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಎರಡು ದಿನ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ,ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ನವೆಂಬರ್ 15 ರಿಂದ 16 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Read More

ನವದೆಹಲಿ:ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಮಂಗಳವಾರ ಒಡಿಶಾದ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ನಿಂದ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿಯ (ಎಲ್ಆರ್ಎಲ್ಎಸಿಎಂ) ಮೊದಲ ಹಾರಾಟ ಪರೀಕ್ಷೆಯನ್ನು ನಡೆಸಿತು ಈ ಕ್ಷಿಪಣಿಯನ್ನು ಮೊಬೈಲ್ ಲಾಂಚರ್ ನಿಂದ ಉಡಾಯಿಸಲಾಯಿತು. ಪರೀಕ್ಷೆಯ ಸಮಯದಲ್ಲಿ, ಎಲ್ಲಾ ಉಪ-ವ್ಯವಸ್ಥೆಗಳು ನಿರೀಕ್ಷೆಗಳ ಪ್ರಕಾರ ಕಾರ್ಯನಿರ್ವಹಿಸಿದವು ಮತ್ತು ಪ್ರಾಥಮಿಕ ಮಿಷನ್ ಉದ್ದೇಶಗಳನ್ನು ಪೂರೈಸಿದವು. ಹಾರಾಟದ ಮಾರ್ಗದ ಸಂಪೂರ್ಣ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳಲು ಐಟಿಆರ್ ವಿವಿಧ ಸ್ಥಳಗಳಲ್ಲಿ ನಿಯೋಜಿಸಿದ ರಾಡಾರ್ ಮತ್ತು ಎಲೆಕ್ಟ್ರೋ ಆಪ್ಟಿಕಲ್ ಟ್ರ್ಯಾಕಿಂಗ್ ಸಿಸ್ಟಮ್ನಂತಹ ಹಲವಾರು ಶ್ರೇಣಿಯ ಸಂವೇದಕಗಳಿಂದ ಕ್ಷಿಪಣಿಯನ್ನು ಮೇಲ್ವಿಚಾರಣೆ ಮಾಡಲಾಯಿತು. ಕ್ಷಿಪಣಿಯು ವೇ ಪಾಯಿಂಟ್ ನ್ಯಾವಿಗೇಷನ್ ಬಳಸಿ ಅಪೇಕ್ಷಿತ ಮಾರ್ಗವನ್ನು ಅನುಸರಿಸಿತು ಮತ್ತು ವಿವಿಧ ಎತ್ತರ ಮತ್ತು ವೇಗದಲ್ಲಿ ಹಾರುವಾಗ ವಿವಿಧ ಕುಶಲತೆಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಪ್ರದರ್ಶಿಸಿತು. ಉತ್ತಮ ಮತ್ತು ವಿಶ್ವಾಸಾರ್ಹ ಕಾರ್ಯಕ್ಷಮತೆಯನ್ನು ಖಚಿತಪಡಿಸಿಕೊಳ್ಳಲು ಕ್ಷಿಪಣಿಯು ಸುಧಾರಿತ ಏವಿಯಾನಿಕ್ಸ್ ಮತ್ತು ಸಾಫ್ಟ್ವೇರ್ ಅನ್ನು ಹೊಂದಿದೆ. ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್…

Read More

ಬೆಂಗಳೂರು: ರಾಜ್ಯದಲ್ಲಿ ಇ-ಖಾತಾ ವ್ಯವಸ್ಥೆ ಕಡ್ಡಾಯಗೊಳಿಸಿದ ನಂತ್ರ ಹಲವು ಸಮಸ್ಯೆಗೆ ಕಾರಣವಾಗಿತ್ತು. ಈ ಸಮಸ್ಯೆ ನಿವಾರಣೆಗಾಗಿ ನವೆಂಬರ್.13ರಂದು ಕಂದಾಯ, ಗ್ರಾಮೀಣಾಭಿವೃದ್ಧಿ ಹಾಗೂ ನಗರಾಭಿವೃದ್ಧಿ ಸಚಿವ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಸಭೆಯಲ್ಲಿ ಇ-ಖಾತಾ ಸಮಸ್ಯೆಯಲ್ಲಿನ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಇಂದು ಕಂದಾಯ ಸಚಿವ ವಿಶೇಷ ಕರ್ತವ್ಯಾಧಿಕಾರಿ ನಿಶ್ಚಯ್ ಎನ್.ಕೆ ಅವರು ಸಭಾ ಸೂಚನಾ ಪತ್ರವನ್ನು ಹೊರಡಿಸಿದದಾರೆ. ಅದರಲ್ಲಿ ಸ್ಥಿರಾಸ್ತಿಗಳ ನೋಂದಣಿಗಾಗಿ, ಗ್ರಾಮಪಂಚಾಯಿತಿ ಮತ್ತು ಸ್ಥಳೀಯ ನಗರ ಸಂಸ್ಥೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇ-ಖಾತೆಗಳನ್ನು ಶೀಘ್ರವಾಗಿ ವಿತರಿಸುವ ಕುರಿತು ಚರ್ಚಿಸಲು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ, ಮಾನ್ಯ ನಗರಾಭಿವೃದ್ಧಿ ಸಚಿವರ ಹಾಗೂ ಪೌರಾಡಳಿತ ಮತ್ತು ಹಜ್ ಸಚಿವರ ಉಪಸ್ಥಿತಿಯಲ್ಲಿ ದಿನಾಂಕ:13/11/2024 ರಂದು ಬೆಳಿಗ್ಗೆ 11:00 ಗಂಟೆಗೆ ಕೊಠಡಿ ಸಂಖ್ಯೆ:222, ವಿಕಾಸ ಸೌಧ, ಬೆಂಗಳೂರು ಇಲ್ಲಿ ಸಭೆಯನ್ನು ಏರ್ಪಡಿಸಿದ್ದು, ಸದರಿ ಸಭೆಗೆ ಹಾಜರಾಗುವಂತೆ ತಮ್ಮನ್ನು ಕೋರಲು ಮಾನ್ಯ ಸಚಿವರಿಂದ ನಿರ್ದೇಶಿತನಾಗಿದ್ದೇನೆ…

Read More

ನವದೆಹಲಿ: ದೇಶಾದ್ಯಂತ ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಸೇನೆಗೆ ಸೇರಲು ಹೆಚ್ಚಿನವರನ್ನು ಉತ್ತೇಜಿಸುವ ಮಹತ್ವದ ಕ್ರಮವಾಗಿ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ನ ಮೊದಲ ಮಹಿಳಾ ಮೀಸಲು ಬೆಟಾಲಿಯನ್ ಸ್ಥಾಪನೆಗೆ ಕೇಂದ್ರ ಸರ್ಕಾರ ಮಂಗಳವಾರ ಅನುಮೋದನೆ ನೀಡಿದೆ. ಈ ಬೆಟಾಲಿಯನ್ 1,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಒಳಗೊಂಡಿರುತ್ತದೆ ಮತ್ತು ಪಡೆಗಳ ವಿಸ್ತೃತ ಕರ್ತವ್ಯಗಳನ್ನು ಬೆಂಬಲಿಸುತ್ತದೆ. ಅಧಿಕಾರಿಗಳ ಪ್ರಕಾರ, ಈ ಹೊಸ ಘಟಕವನ್ನು ಸಿಐಎಸ್ಎಫ್ನ ಅಸ್ತಿತ್ವದಲ್ಲಿರುವ ಸುಮಾರು 200,000 ಸಿಬ್ಬಂದಿಯೊಳಗೆ ರಚಿಸಲಾಗುವುದು. ಸಿಐಎಸ್ಎಫ್ ಈ ಹಿಂದೆ ಸಂಪೂರ್ಣ ಮಹಿಳಾ ಬೆಟಾಲಿಯನ್ ಸ್ಥಾಪಿಸಲು ವಿನಂತಿಸಿತ್ತು, ಅದನ್ನು ಈಗ ಮಂಜೂರು ಮಾಡಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಸಿಐಎಸ್ಎಫ್ ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ದೀಪಕ್ ವರ್ಮಾ ಹೇಳಿಕೆಯಲ್ಲಿ, “ಸಿಐಎಸ್ಎಫ್ ಪ್ರಧಾನ ಕಚೇರಿ ಹೊಸ ಬೆಟಾಲಿಯನ್ನ ಪ್ರಧಾನ ಕಚೇರಿಗಳಿಗೆ ಶೀಘ್ರ ನೇಮಕಾತಿ, ತರಬೇತಿ ಮತ್ತು ಸ್ಥಳದ ಆಯ್ಕೆಗೆ ಸಿದ್ಧತೆಗಳನ್ನು ಪ್ರಾರಂಭಿಸಿದೆ” ಎಂದು ಹೇಳಿದರು. “ವಿಐಪಿ ಭದ್ರತೆ ಮತ್ತು ವಿಮಾನ ನಿಲ್ದಾಣಗಳ ಭದ್ರತೆ, ದೆಹಲಿ ಮೆಟ್ರೋ ರೈಲು…

Read More

ಬೆಂಗಳೂರು : 2024 – 25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬ ಅಭ್ಯರ್ಥಿಯನ್ನು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತಿಂಗಳಿಗೆ ರೂ. 15,000 ಗಳ ಸ್ಟೈಫಂಡ್‌  ನೀಡಲಾಗುವುದು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ…

Read More

ಬೆಂಗಳೂರು: ನಗರದ 66/11 ಕೆ.ವಿ. ಸಾರಕ್ಕಿ ನವೆಂಬರ್ 13 ರ ಇಂದು ಹಾಗೂ. ನ.14 ರ ನಾಳೆ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲವೆಂದು ಬೆಸ್ಕಾಂ ಇಇ ಯೋಗೇಶ್ ತಿಳಿಸಿದ್ದಾರೆ. ನವೆಂಬರ್ 13 ರ ಇಂದು ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ ಶಾಕಂಬರಿನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗ‍ಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 4, 5, 7, 8ನೇ ಬ್ಲಾಕ್, ಐಟಿಐ ಲೇಹ್ಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮ್ಯೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಜಿ.ಪಿ.ನಗರ 5ನೇ ಹಂತ, ಸಾಯಿ ನಸ‍ರಿ ರಸ್ತೇ, ಜಿ.ಪಿ.ನಗರ 1,2,3,4,5,6ನೇ ಹಂತ, 15ನೇ ಕ್ರಾಸ್, 16 & 12 ನೇ ಅಡ್ಡ ರಸ್ತೇ, ಸಿಂದೂರ ಕನ್ವೇಷನ್ ಹಾಲ್ ಸುತ್ತಮುತ್ತಲ ಪ್ರದೇಶಗಳು, ಅಸ್ಡರ್ ಹಾಸ್ಪಟಲ್,15ನೇ…

Read More