Author: kannadanewsnow57

ಗದಗ : ಗದಗ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬಸ್ ಹತ್ತುವಾಗ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರಿನಲ್ಲಿ ಬಸ್ ಹತ್ತುವಾಗ ಕಾಲು ಜಾರಿ ಬಿದ್ದ ಪರಿಣಾಮ ತಲೆ ಮೇಲೆ ಬಸ್ ಹತ್ತಿ ವಿದ್ಯಾರ್ಥಿ ರಾಘವೇಂದ್ರ (21) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರಾಘವೇಂದ್ರ ಕೊಣ್ಣೂರಿನಿಂದ ನರಗುಂದಕ್ಕೆ ಹೋಗುತ್ತಿದ್ದ ವೇಳೆ ಬಸ್ ರಶ್ ಇದ್ದ ಕಾರಣ ಮುಂಬಾಗಿಲಿನಲ್ಲಿ ಹತ್ತಲು ಹೋದ ವೇಳೆ ಕಾಲು ಜಾರಿ ಬಿದ್ದು ರಾಘವೇಂದ್ರ ಮೃತಪಟ್ಟಿದ್ದಾನೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಇತ್ತೀಚೆಗಷ್ಟೇ ಬಾಲಿವುಡ್ ನ ಖ್ಯಾತ ನಟ ಶಾರುಖ್ ಖಾನ್ ಗೆ ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವುದು ಗೊತ್ತೇ ಇದೆ. ಬೆದರಿಕೆ ಹಾಕಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆರೋಪಿಯನ್ನು ರಾಯ್‌ಪುರದ ಫೈಜಲ್ ಖಾನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಮುಂಬೈ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಶಾರುಖ್ ಖಾನ್ ರು.50 ಲಕ್ಷ ಕೊಡದಿದ್ದರೆ ಅವರಿಗೆ ತೊಂದರೆಯಾಗುತ್ತದೆ ಎಂದು ಹೇಳಿದ್ದ. ಇದರಿಂದ ಎಚ್ಚೆತ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದೂರವಾಣಿ ಕರೆಯನ್ನು ಟ್ರೇಸ್ ಮಾಡಲಾಗಿದ್ದು, ಛತ್ತೀಸ್‌ಗಢದ ರಾಯ್‌ಪುರ ಮೂಲದ ಫೈಜಾನ್ ಖಾನ್ ಎಂಬ ವ್ಯಕ್ತಿಯ ಹೆಸರಿನಲ್ಲಿ ನಂಬರ್ ದಾಖಲಾಗಿರುವುದು ಪತ್ತೆಯಾಗಿದೆ. ಪೊಲೀಸರು ಮಂಗಳವಾರ ಛತ್ತೀಸ್ ಗಢಕ್ಕೆ ತೆರಳಿ ಅಲ್ಲಿ ಫೈಜಾನ್ ಖಾನ್ ನನ್ನು ಬಂಧಿಸಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿಯೂ ಶಾರುಖ್‌ಗೆ ಇದೇ ರೀತಿ ಜೀವ ಬೆದರಿಕೆ ಬಂದಿತ್ತು. ಇದೇ ವೇಳೆ.. ನಟ ಸಲ್ಮಾನ್ ಖಾನ್ ಗೆ ಕಳೆದ ಕೆಲವು ದಿನಗಳಿಂದ ಸರಣಿ ಬೆದರಿಕೆಗಳು ಬರುತ್ತಿವೆ. ಇತ್ತೀಚೆಗಷ್ಟೇ ಲಾರೆನ್ಸ್ ಬಿಷ್ಣೋಯ್…

Read More

ಮಂಡ್ಯ : ಅಕ್ರಮ ಆಸ್ತಿ ಆರೋಪಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ ನಗರಸಭೆ ಆಯುಕ್ತನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಅವರ ಶ್ರೀರಂಗಪಟ್ಟಣದ ನಿವಾಸದ ಮೇಲೆ ಮೈಸೂರು ಲೋಕಾಯುಕ್ತ ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಹಿಂದೆ ಮಂಡ್ಯದ ಶ್ರೀರಂಗಪಟ್ಟಣದ ತಹಶಿಲ್ದಾರ್ ಆಗಿದ್ದ ನಾಗೇಶ್. ತಹಶಿಲ್ದಾರ್ ಆಗಿದ್ದಾಗ ಶ್ರೀರಂಗಪಟ್ಟಣದ ಡಾಲರ್ಸ್ ಕಾಲೋನಿಯಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಿದ್ದರು. ಇದೀಗ ಲೋಕಾಯುಕ್ತ ಅಧಿಕಾರಿಗಳು ನಾಗೇಶ್ ಅಪಾರ್ಟ್ಮೆಂಟ್ ಪಕ್ಕದ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Read More

ನವದೆಹಲಿ: ಕೆವೈಸಿ ಪ್ರಕ್ರಿಯೆಗೆ ಸಂಬಂಧಿಸಿದ ದೇಶದ 10 ಕೋಟಿಗೂ ಹೆಚ್ಚು ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ದೊಡ್ಡ ನವೀಕರಣವನ್ನು ನೀಡಿದೆ. ಈ ಖಾತೆಗಳ ಕೆವೈಸಿಯನ್ನು ಮತ್ತೊಮ್ಮೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಸರ್ಕಾರ ಹೇಳಿದೆ. ಈ ಮಾಹಿತಿಯು ಮುಖ್ಯವಾಗಿದೆ ಏಕೆಂದರೆ ಈ ಖಾತೆಗಳ KYC ಅನ್ನು ನವೀಕರಿಸದಿದ್ದರೆ, ಬ್ಯಾಂಕ್ ಖಾತೆಗಳನ್ನು ಸಂಭಾವ್ಯವಾಗಿ ಮುಚ್ಚಬಹುದು. ಈ ವಿಚಾರದಲ್ಲಿ ಎಲ್ಲ ಖಾತೆದಾರರು ಎಚ್ಚರಿಕೆಯಿಂದ ಇರುವಂತೆ ಸರ್ಕಾರ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ನೀವು ಯಾವುದೇ ಸಂದೇಶವನ್ನು ಸಹ ಸ್ವೀಕರಿಸಿದ್ದರೆ, ಅದನ್ನು ನಿರ್ಲಕ್ಷಿಸಬೇಡಿ. KYC ಕುರಿತು ಸರ್ಕಾರವು ಇತರ ಯಾವ ಸೂಚನೆಗಳನ್ನು ನೀಡಿದೆ ಎಂಬುದನ್ನು ನಮಗೆ ತಿಳಿಸಿ. ಬ್ಯಾಂಕ್‌ನಿಂದ KYC ಅಪ್‌ಡೇಟ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು, ನಿಮ್ಮ ಅಗತ್ಯ ದಾಖಲೆಗಳನ್ನು ನೀವು ಸಿದ್ಧವಾಗಿಟ್ಟುಕೊಳ್ಳಬೇಕು. ಇದು ಗುರುತಿನ ಚೀಟಿ, ವಿಳಾಸ ಪುರಾವೆ ಇತ್ಯಾದಿಗಳನ್ನು ಒಳಗೊಂಡಿರುತ್ತದೆ. ಆದ್ದರಿಂದ, ಖಾತೆದಾರರು ತಮ್ಮ KYC ಅನ್ನು ಸಮಯಕ್ಕೆ ನವೀಕರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. KYC ಅನ್ನು ನವೀಕರಿಸಬೇಕು ಹಣಕಾಸು ಸೇವೆಗಳ ಕಾರ್ಯದರ್ಶಿ ಎಂ ನಾಗರಾಜು ಅವರು…

Read More

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಉಚಿತವಾಗಿ ನಡೆಸುವ 13 ದಿನಗಳ ಸಿಸಿ.ಟಿ.ವಿ ಮತ್ತು ಸ್ಮೋಕ್ ಡಿಟೆಕ್ಟರ್ ಅಳವಡಿಕೆ ತರಬೇತಿ ಕಾರ್ಯಕ್ರಮವು ನವೆಂಬರ್ 19 ರಿಂದ ಡಿಸೆಂಬರ್ 02 ವರೆಗೂ ನಡೆಯಲಿದ್ದು, ಕರ್ನಾಟಕ ರಾಜ್ಯದಲ್ಲಿನ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಸಂಪೂರ್ಣವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ,…

Read More

ನವದೆಹಲಿ: ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಸೈಬರ್ ಕ್ರೈಂ ಹೆಚ್ಚಾಗುತ್ತಿದೆ. ಸೈಬರ್ ಕ್ರೈಂ ಮಾಡುವ ಮೂಲಕ ಜನರ ಬ್ಯಾಂಕ್ ಖಾತೆಗಳಿಂದ ಹಣ ಇದ್ದಕ್ಕಿದ್ದಂತೆ ಕಣ್ಮರೆಯಾಗುತ್ತದೆ. ವಂಚನೆಗಾಗಿ ಡಿಜಿಟಲ್ ಬಂಧನವು ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಪ್ರಾಮುಖ್ಯತೆ ಪಡೆಯುತ್ತಿದೆ. ಈ ನಡುವೆ ಸೈಬರ್ ಅಪರಾಧ ತಡೆಯಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಕಳೆದ ವರ್ಷ, ಸೈಬರ್ ಅಪರಾಧಗಳಿಂದ ಹಣವನ್ನು ಕಪ್ಪು ಬಣ್ಣದಿಂದ ಬಿಳಿಗೆ ಪರಿವರ್ತಿಸಲು ಬಳಸಲಾದ ಸುಮಾರು 4.5 ಲಕ್ಷ ಬ್ಯಾಂಕ್ ಖಾತೆಗಳನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ. ಮೂಲಗಳ ಪ್ರಕಾರ, ಅಂತಹ ಖಾತೆಗಳು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತವೆ, ಆದರೆ ಇವುಗಳಲ್ಲಿ ಹೆಚ್ಚಿನ ಖಾತೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕೆನರಾ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಏರ್‌ಟೆಲ್ ಪೇಮೆಂಟ್ಸ್ ಬ್ಯಾಂಕ್‌ನಲ್ಲಿ ಕಂಡುಬಂದಿವೆ. ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಿರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (ಐ4ಸಿ) ಅಧಿಕಾರಿಗಳು ಇತ್ತೀಚೆಗೆ ಪ್ರಧಾನ ಮಂತ್ರಿಗಳ ಕಚೇರಿಗೆ ಬ್ಯಾಂಕಿಂಗ್ ವ್ಯವಸ್ಥೆಯ ನ್ಯೂನತೆಗಳ ಬಗ್ಗೆ…

Read More

ಬೆಂಗಳೂರು : ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂತಿಮ ಇ-ಖಾತಾ ವನ್ನು ಪಡೆಯಲು ಬೆಂಗಳೂರು ಒನ್ ಕೇಂದ್ರದ ಮೂಲಕ ಸಹಾಯವನ್ನು ಪಡೆಯಬಹುದು. ಪ್ರತಿ ಆಸ್ತಿಗೆ ಪಾವತಿಸಬೇಕಾದ ಶುಲ್ಕ: * ಬೆಂಗಳೂರು ಒನ್ ಕೇಂದ್ರದಲ್ಲಿ 45 ರೂ. ಶುಲ್ಕ ಮತ್ತು ಪ್ರತಿ ದಾಖಲೆಯ ಪುಟ ಸ್ಕ್ಯಾನ್ ಮಾಡಲು 5 ರೂ. ಪಾವತಿಸಬೇಕು. * ಬಿಬಿಎಂಪಿಗೆ 125 ರೂ.(ಅಂತಿಮ ಇ-ಖಾತಾ ಮುದ್ರಣಕ್ಕೆ ಸಿದ್ಧವಾದಾಗ ಮಾತ್ರ) ಪಾವತಿಸಬೇಕು. ಕೆಳಗಿನ ದಾಖಲೆಗಳ ಪ್ರತಿಯೊಂದಿಗೆ ನೀವು ಬೆಂಗಳೂರು ಒನ್ ಕೇಂದ್ರವನ್ನು ಸಂಪರ್ಕಿಸಬೇಕು(ಅವುಗಳಲ್ಲಿ ಕೆಲವನ್ನು ತೋರಿಸಲು ಮತ್ತು ಸ್ಕ್ಯಾನ್ ಮಾಡಲು ಮಾತ್ರ ಅಲ್ಲಿ ಸಲ್ಲಿಸುವ/ನೀಡುವ ಅಗತ್ಯವಿಲ್ಲ) (1) ನಿಮ್ಮ ಆಸ್ತಿ ತೆರಿಗೆ ರಶೀದಿ (2) ನಿಮ್ಮ ಮಾರಾಟ ಅಥವಾ ನೋಂದಾಯಿತ ಪತ್ರ (3) ಎಲ್ಲಾ ಮಾಲೀಕರ ಆಧಾರ್ (4) ಬೆಸ್ಕಾಂ ಬಿಲ್ (5) ಜಲಮಂಡಳಿ ಬಿಲ್ (ನೀವು ಕಾವೇರಿ ಸಂಪರ್ಕವನ್ನು ಹೊಂದಿದ್ದರೆ) (6) ಬಿಡಿಎ ಅಥವಾ ಯೋಜನಾ ಪ್ರಾಧಿಕಾರದಿಂದ ಲೇಔಟ್ ಅಥವಾ ಸೈಟ್ ಅನುಮೋದನೆ (ಇದರ ದಾಖಲೆ ಹೊಂದಿದ್ದರೆ) (7) ಬಿಬಿಎಂಪಿಯಿಂದ…

Read More

ಲಖನೌ : ದೇಶಾದ್ಯಂತ ಹಲವು ದರೋಡೆ ಪ್ರಕರಣಗಳಲ್ಲಿ ಬೇಕಾಗಿದ್ದ ನಟೋರಿಯಸ್ ಕಳ್ಳನನ್ನು ಬೆಂಗಳೂರಿನ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನ ಕೋಡಿಗೆಹಳ್ಳಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕಳ್ಳನನ್ನು ಉತ್ತರಪ್ರದೇಶದ ಮುರ್ದಾಬಾದ್ ಪೊಲೀಸರು ಬಂಧಿಸಿದ್ದಾರೆ. ಫಹೀಮ್ ಅಲಿಯಾಸ್ ಎಟಿಎಂ ನನ್ನು ಬಂಧಿಸಿದ್ದು, ಅಲ್ಲಿದ್ದ ಆತನ ಮನೆಯನ್ನು ಬುಲ್ಡೋಜರ್ ಮೂಲಕ ನೆಲಸಮಗೊಳಿಸಲಾಗಿದೆ. ಸದ್ಯ ಪೊಲೀಸರು ಆರೋಪಿ ಫಹಿಮ್ ನನ್ನು ಬಾಡಿ ವಾರೆಂಟ್ ಪಡೆದು ವಶಕ್ಕೆ ಪಡೆದುಕೊಂಡಿದ್ದಾರೆ. ಫಹೀಮ್ ದೇಶಾದ್ಯಂತ ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕರ್ನಾಟಕದ ಬೆಂಗಳೂರು, ಉತ್ತರ ಪ್ರದೇಶದ ವಿವಿಧ ನಗರ ಸೇರಿದಂತೆ ಹಲವೆಡೆ ಕಳ್ಳತನ ಮಾಡಿದ್ದ.

Read More

ಚೆನೈ: ಅಂತರರಾಷ್ಟ್ರೀಯ ಕಡಲ ಗಡಿಯನ್ನು ದಾಟಿದ್ದಕ್ಕಾಗಿ ವೆಲ್ವ್ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.ಮೀನುಗಾರರು ದೋಣಿಯಲ್ಲಿ ಸಮುದ್ರಕ್ಕೆ ಇಳಿದಿದ್ದರು ಮತ್ತು ಪರುಥಿಥುರೈ ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಶ್ರೀಲಂಕಾ ನೌಕಾಪಡೆಯಿಂದ ಸುತ್ತುವರೆದಿದ್ದರು. ನಂತರ ಅವರನ್ನು ಬಂಧಿಸಲಾಯಿತು ಮತ್ತು ಕಡಲ ಗಡಿಯ ಶ್ರೀಲಂಕಾದ ಭಾಗವನ್ನು ದಾಟಿದ್ದಕ್ಕಾಗಿ ಅವರ ದೋಣಿಯನ್ನು ವಶಪಡಿಸಿಕೊಳ್ಳಲಾಯಿತು. ಅವರನ್ನು ಜಾಫ್ನಾದ ಕಂಕೆಸಂತುರೈ ನೌಕಾ ಶಿಬಿರಕ್ಕೆ ಕರೆದೊಯ್ಯಲಾಯಿತು. ತನಿಖೆಯ ನಂತರ ಮೀನುಗಾರರನ್ನು ಮಯಿಲಿಟ್ಟಿ ಬಂದರಿನಲ್ಲಿ ಜಾಫ್ನಾ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು. ಒಂದು ವಾರದಲ್ಲಿ ತಮಿಳುನಾಡು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿರುವುದು ಇದು ಎರಡನೇ ಘಟನೆಯಾಗಿದೆ. ಭಾನುವಾರ ರಾಮನಾಥಪುರಂನ 23 ಮೀನುಗಾರರನ್ನು ಬಂಧಿಸಲಾಗಿದ್ದು, ಅವರ ಮೂರು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಅಕ್ಟೋಬರ್ನಲ್ಲಿ ರಾಮೇಶ್ವರಂನ 16 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿತ್ತು. ಶ್ರೀಲಂಕಾ ನೌಕಾಪಡೆಯಿಂದ ಬಂಧನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ರಾಜತಾಂತ್ರಿಕವಾಗಿ ಪರಿಹರಿಸುವಂತೆ ಒತ್ತಾಯಿಸಿದ್ದಾರೆ. ಅಕ್ಟೋಬರ್ 3 ರಂದು, ಹಲವಾರು…

Read More

ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ  ಆರಂಭಗೊಂಡಿದ್ದು, ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ. ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಹತೆ – ಎಸ್ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು. ಆಯ್ಕೆಯ ವಿಧಾನ- ಸಹನ ಶಕ್ತಿ ಪರೀಕ್ಷೆಯ ಕನಿಷ್ಠ…

Read More