Author: kannadanewsnow57

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-07-2025ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ. ಸೂಚಿತ ವಿಷಯದನ್ವಯ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿರುತ್ತದೆ. ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2025ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ.(ಪ್ರತಿ ಲಗತ್ತಿಸಿದೆ) ಆದ್ದರಿಂದ, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ ದಿನಾಂಕ: 01-07-2025 ರಿಂದ ಅನ್ವಯವಾಗುವಂತೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಕೋರಿದೆ.

Read More

ಹಾವೇರಿ : ಸೀರೆಯಲ್ಲಿ ಜೋಕಾಲಿ ಆಡುಲು ಹೋದ ಬಾಲಕನೊಬ್ಬ ದುರಂತ ಅಂತ್ಯ ಕಂಡ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ನಡೆದಿದೆ. ರಾಣೆಬೆನ್ನೂರು ತಾಲ್ಲೂಕಿನ ಕೂನಬೇವು ಗ್ರಾಮದ ಮನೆಯೊಂದರಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ರಾಹುಲ್ ಮಲ್ಲಿಕಾರ್ಜುನ ಬಾವಿಹಳ್ಳಿ (16) ಎಂಬ ಬಾಲಕ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ತೆಲಗಿ ಗ್ರಾಮದ ರಾಹುಲ್, ಕೂನಬೇವು ಗ್ರಾಮದಲ್ಲಿರುವ ಅಜ್ಜ ರಾಮಣ್ಣ ತಂಡೂರ ಅವರ ಮನೆಗೆ ಬಂದಿದ್ದ, ಅಜ್ಜ ರಾಮಣ್ಣ ಅವರ ಮನೆಯ ಮೇಲಿನ ಮಹಡಿಯಲ್ಲಿ ಸೀರೆಯಿಂದ ಜೋಕಾಲಿ ಕಟ್ಟಲಾಗಿತ್ತು. ಅದರಲ್ಲಿ ಕುಳಿತು ರಾಹುಲ್ ಆಟವಾಡುತ್ತಿದ್ದ ವೇಳೆ ಜೋಕಾಲಿಯ ಸೀರೆ, ರಾಹುಲ್ನ ಕುತ್ತಿಗೆಗೆ ಸುತ್ತಿಕೊಂಡಿತ್ತು. ಅದರಿಂದ ಬಿಡಿಸಿಕೊಳ್ಳಲು ಸಾಧ್ಯವಾಗದೇ ಬಾಲಕನಿಗೆ ಉಸಿರುಗಟ್ಟಿತ್ತು. ಪ್ರಜ್ಞೆ ತಪ್ಪಿದ್ದ ಆತನನ್ನು ಪೋಷಕರು ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ರಾಣೆಬೆನ್ನೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಮಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯದಲ್ಲಿ ಶೀಘ್ರವೇ 18,800 ಹೊಸ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಶಾಲೆಗಳಿಗೆ 13 ಸಾವಿರ ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5,800 ಶಿಕ್ಷಕರು ಸೇರಿದಂತೆ ಒಟ್ಟು 18,800ಕ್ಕೂ ಅಧಿಕ ಶಿಕ್ಷಕರ ನೇಮಕ ಪ್ರಕ್ರಿಯೆ ಸಿದ್ದತೆ ನಡೆಯುತ್ತಿದ್ದು, ಶೀಘ್ರವೇ ನೋಟಿಫಿಕೇಶನ್ ಹೊರಡಿಸಲಾಗುವುದು ಎಂದು ಹೇಳಿದ್ದಾರೆ. ಜಸ್ಟಿಸ್ ನಾಗಮೋಹನ್ ದಾಸ್ ವರದಿ ಹಿನ್ನೆಲೆಯಲ್ಲಿ ನೇಮಕ ಪ್ರಕ್ರಿಯೆಯಲ್ಲಿ ವಿಳಂಬವಾಗಿತ್ತು, ಹೀಗಾಗಿ ಶೀಘ್ರವೇ ರಾಜ್ಯದಲ್ಲಿ 18,800 ಶಿಕ್ಷಕರ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Read More

ನವದೆಹಲಿ : ದೇಶಾದ್ಯಂತ ರೈಲ್ವೆ ಪ್ರದೇಶಗಳಲ್ಲಿ 2025 ರ ವರ್ಷಕ್ಕೆ ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವೀಧರ ಮತ್ತು ಪದವಿಪೂರ್ವ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಮಂಡಳಿ (RRB) ಕೇಂದ್ರೀಕೃತ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 8,050 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದರಲ್ಲಿ 5,000 ಪದವೀಧರ ಹುದ್ದೆಗಳು ಮತ್ತು 3,050 ಪದವಿಪೂರ್ವ ಹುದ್ದೆಗಳು ಸೇರಿವೆ. ಈ ಪದವೀಧರ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳು ಅಕ್ಟೋಬರ್ 21 ರಿಂದ ಪ್ರಾರಂಭವಾಗುತ್ತವೆ. ಪದವಿಪೂರ್ವ ಹುದ್ದೆಗಳಿಗೆ ಅರ್ಜಿಗಳು ಅಕ್ಟೋಬರ್ 28, 2025 ರಿಂದ ಪ್ರಾರಂಭವಾಗುತ್ತವೆ. ಇತರ ವಿವರಗಳನ್ನು ಕೆಳಗೆ ಪರಿಶೀಲಿಸಬಹುದು. ಆರ್ಆರ್ಬಿ ಅಹಮದಾಬಾದ್, ಅಜ್ಮೀರ್, ಬೆಂಗಳೂರು, ಭೋಪಾಲ್, ಭುವನೇಶ್ವರ, ಬಿಲಾಸ್ಪುರ್, ಚಂಡೀಗಢ, ಚೆನ್ನೈ, ಗುವಾಹಟಿ, ಗೋರಖ್ಪುರ, ಜಮ್ಮು – ಶ್ರೀನಗರ, ಕೋಲ್ಕತ್ತಾ, ಮಾಲ್ಡಾ, ಮುಂಬೈ, ಮುಜಫರ್ಪುರ್, ಪಾಟ್ನಾ, ಪ್ರಯಾಗ್ರಾಜ್, ರಾಂಚಿ, ಸಿಕಂದರಾಬಾದ್, ಸಿಲಿಗುರಿ, ತಿರುವನಂತಪುರಂ ಪ್ರದೇಶಗಳಿಂದ ಈ ಹುದ್ದೆಗಳನ್ನು ಭರ್ತಿ ಮಾಡುತ್ತದೆ. RRB NTPC ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುವ ಹುದ್ದೆಗಳು…

Read More

ಬೆಂಗಳೂರು :ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ನರಕ ಚತುರ್ದಶಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಮೀಕ್ಷೆಯ ವೇಳೆ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು. ಸಮೀಕ್ಷಾದಾರರಿಗೆ ₹20,000 ಗೌರವಧನ ಕೊಡಲಾಗುವುದು. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ ಎಂದರು. ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಸಂದರ್ಭದಲ್ಲಿ ಮೂವರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅವರಿಗೆ ರಾಜ್ಯ ಸರ್ಕಾರದಿಂದ ತಲಾ 20 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಯಾರು ಸರ್ವೆ ಕಾರ್ಯದಲ್ಲಿ ತೊಡಗಿಸಿಕೊಳ್ಳೋದಿಲ್ಲ. ಸಮೀಕ್ಷೆ ಮಾಡಲು ಒಪ್ಪೋದಿಲ್ಲ ಅವರ ವಿರುದ್ಧ ರಾಜ್ಯ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ. ಅಕ್ಟೋಬರ್.19ಕ್ಕೆ ಮೊದಲು ರಾಜ್ಯದಲ್ಲಿ ಸಂಪೂರ್ಣವಾಗಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ಮುಕ್ತಾಯಗೊಳಿಸಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದರು.…

Read More

ಬೆಂಗಳೂರು : ಕುರುಬರನ್ನು ಎಸ್.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಎಸ್ಸಿ/ಎಸ್ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್ಸಿ/ಎಸ್ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದರು. ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು…

Read More

ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆದಿದ್ದು, ನಾಳೆ ದೇವಾಲಯದ ಬಾಗಿಲು ತೆರೆಯಲಿದೆ. ಸಾರ್ವಜನಿಕರಿಗೆ ಶುಕ್ರವಾರದಿಂದ (ಅ. 10) ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಶ್ರೀ ಹಾಸನಾಂಬ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ. ಸದರಿ ದೇವಾಲಯದಲ್ಲಿ ಪ್ರತೀ ವರ್ಷ ಶ್ರೀ ಹಾಸನಾಂಬ ದೇವಿಯ ಜಾತ್ರೋತ್ಸವ ಕಾರ್ಯಕ್ರಮವು ಅಭೂತಪೂರ್ವವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದೆ. ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲು ಡೇಟ್ ಫಿಕ್ಸ್ ಆಗಿದೆ. ಅಕ್ಟೋಬರ್ 9 ರಂದು ಬಾಗಿಲು ಓಪನ್ ಆಗಲಿದ್ದು, ಅಕ್ಟೋಬರ್ 23ರಂದು ಬಾಗಿಲು ಮುಚ್ಚಲಾಗುವುದು. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಸೆಕ್ಷನ್ 58ರಡಿಯಲ್ಲಿ ದೇವಸ್ಥಾನದ ರೂಢಿ, ಸಂಪ್ರದಾಯ ಮತ್ತು ಆಚರಣೆಯಂತೆ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಮತ್ತು ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ವಸ್ತ್ರ ಸಂಹಿತೆಯನ್ನು ಪಾಲಿಸುವುದು ಸೂಕ್ತವಾಗಿದ್ದು,…

Read More

ಬಿಲಾಸ್ಪುರ : ಮಂಗಳವಾರ ಸಂಜೆ ತಡರಾತ್ರಿ ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಖಾಸಗಿ ಬಸ್ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದು, ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ರಕ್ಷಿಸಲ್ಪಟ್ಟಿದ್ದಾರೆ. ಹರಿಯಾಣದ ರೋಹ್ಟಕ್ ನಿಂದ ಬಿಲಾಸ್ಪುರ ಬಳಿಯ ಘುಮಾರ್ವಿನ್ ಗೆ ಸುಮಾರು 30 ರಿಂದ 35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್, ಭಾರೀ ಮಳೆಯಿಂದಾಗಿ ಇಡೀ ಬೆಟ್ಟವು ಬಸ್ ಮೇಲೆ ಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪಿಎಂಒ ಹೇಳಿಕೆ ತಿಳಿಸಿದೆ. https://twitter.com/ANI/status/1975705089450061915?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಿದೆ. ನಮೂನೆ-18 ರಲ್ಲಿ ಮತಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಭಾರತ ಚುನಾವಣಾ ಆಯೋಗದ ಸೂಚನೆಯಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆಗೆ ವೇಳಾಪಟ್ಟಿ ನಿಗಧಿಪಡಿಸಿದ್ದಾರೆ. 1 ನವೆಂಬರ್ 2025 ಕ್ಕೆ ಇದ್ದಂತೆ ಮತದಾರರ ಪಟ್ಟಿ ಸಿದ್ದಪಡಿಸಲಾಗವುದು. ಈ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು, ನಗರಸಭೆ ವ್ಯಾಪ್ತಿಯಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ ಹಾಗೂ ನಿರ್ಧಿಷ್ಟಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು. ಮತದಾರ ಪಟ್ಟಿ ತಯಾರಿಕೆಗೆ ಸೆ.30 ರಂದು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 15 ರಂದು ಮೊದಲ ಬಾರಿಗೆ ಹಾಗೂ 25 ರಂದು ಎರಡನೇ ಬಾರಿಗೆ ಅಧಿಸೂಚನೆಯನ್ನು ಪತ್ರಿಕೆಗಳಲ್ಲಿ ಪ್ರಕಟಣೆ ನೀಡಲಾಗುವುದು. ನಮೂನೆ-18 ರಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 6 ಕಡೆಯ ದಿನವಾಗಿದೆ. ನವೆಂಬರ್ 20 ವರೆಗೆ…

Read More

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.  ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಲೀಲಾವತಿ ಆಸ್ಪತ್ರೆಯ ಮುಂಭಾಗ ತಡರಾತ್ರಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಕ್ರೌರ್ಯ ನಡೆದಿದ್ದು, ಮಧ್ಯರಾತ್ರಿ 2 ಗಂಟೆಗೆ ಕಾರಲ್ಲಿ ಅಗಮಿಸಿದ್ದ ದುಷ್ಕರ್ಮಿಗಳು ವೆಂಕಟೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ನೇಹಿತರೊಂದಿಗೆ ಊಟ ಮುಗಿಸಿದ ವೆಂಕಟೇಶ್ ದೇವಿ ಕ್ಯಾಂಪ್ ನಿಂದ ಗಂಗಾವತಿಗೆ ಹೋಗುತ್ತಿದ್ದ ವೇಳೆ ಬೈಕ್ ಫಾಲೋ ಮಾಡಿದ ದುಷ್ಕರ್ಮಿಗಳು ಕಾರಿನಿಂದ ವೆಂಕಟೇಶ್ ಇದ್ದ ಬೈಕ್ ಗೆ ಗುದ್ದಿಸಿದ್ದಾರೆ. ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಗಂಗಾವತಿ ಡಿವೈಎಸ್ಪಿ ಸಿದ್ಧನಗೌಡ ಪಾಟೀಲ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More