Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಾಗೂ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಪರಿಣಾಮ ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಒಳನಾಡು ಭಾಗದಲ್ಲಿ ಬುಧವಾರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ನಾಳೆಯಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಕ್ಟೋಬರ್ 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಬಹುನಿರೀಕ್ಷಿತ ಕಾವೇರಿ 5ನೇ ಹಂತದ ಯೋಜನೆಯನ್ನು ಅಕ್ಟೋಬರ್ 16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಈ ಮೂಲಕ ಬೆಂಗಳೂರಿನ 110 ಹಳ್ಳಿಗಳ ಜನರಿಗೆ ಕಾವೇರಿ ನದಿ ನೀರು ಕುಡಿಯೋದಕ್ಕೆ ಸರಬರಾಜು ಮಾಡಿ, ಸಿಗುವಂತೆ ಆಗಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜಾಗುವ ಕಾವೇರಿ ಐದನೇ ಹಂತದ ಯೋಜನೆ ಇದೇ ಅ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರಿಗೆ ಹೊಸದಾಗಿ ಸೇರ್ಪಡೆಯಾದ ಹಳ್ಳಿಗಳಿಗೆ ಸಮರ್ಪಕ ನೀರನ್ನು ಒದಗಿಸುವ ಹಾಗೂ ಬೆಂಗಳೂರಿನ ದೂರದೃಷ್ಟಿಯನ್ನಿಟ್ಟುಕೊಂಡು ಮಹತ್ವದ ನಿರ್ಧಾರವನ್ನು 2014ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಈ ಯೋಜನೆ ರೂಪಿಸಿ ಚಾಲನೆ ನೀಡಿದ್ದನ್ನು ಸ್ಮರಿಸಬಹುದು. ಈ…
ಇಸ್ಲಾಮಾಬಾದ್ : ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಶೃಂಗಸಭೆಯಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಪಾಕಿಸ್ತಾನಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಇದು ಪಾಕಿಸ್ತಾನಕ್ಕೆ ಕಳೆದ 9 ವರ್ಷದಲ್ಲಿ ಭಾರತದ ವಿದೇಶಿ ಮಂತ್ರಿ ನೀಡುತ್ತಿರುವ ಮೊದಲ ಭೇಟಿಯಾಗಿದೆ. ಚೀನಾದ ಪ್ರಧಾನಿ ಲಿ ಕಿಯಾಂಗ್, ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಮತ್ತು ಜೈಶಂಕರ್ ಸೇರಿದಂತೆ ಹಿರಿಯ ಪ್ರಾದೇಶಿಕ ಸರ್ಕಾರಿ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬುಧವಾರ ನಡೆಯಲಿರುವ ಮುಖ್ಯ ಶೃಂಗಸಭೆಗೆ ಮುಂಚಿತವಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಆಯೋಜಿಸಿರುವ ಸ್ವಾಗತ ಔತಣಕೂಟಕ್ಕೆ ವಿದೇಶಾಂಗ ಸಚಿವರು ಸಮಯಕ್ಕೆ ಸರಿಯಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದ ಹೊರತಾಗಿ ಯಾವುದೇ ಔಪಚಾರಿಕ ದ್ವಿಪಕ್ಷೀಯ ಸಭೆಯನ್ನು ಎರಡೂ ನೆರೆಹೊರೆಯವರು ತಳ್ಳಿಹಾಕಿದ್ದರಿಂದ ಶೃಂಗಸಭೆ ಬಂದಿದೆ. ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಎಸ್ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಜೈಶಂಕರ್ ಪಾಕಿಸ್ತಾನಕ್ಕೆ ನಿಯೋಗವನ್ನು ಮುನ್ನಡೆಸಲಿದ್ದಾರೆ ಎಂದು ಭಾರತ ಈ ತಿಂಗಳ ಆರಂಭದಲ್ಲಿ ತಿಳಿಸಿತ್ತು. ಆದಾಗ್ಯೂ, ಸಚಿವ ಜೈಶಂಕರ್ ತಮ್ಮ ಭೇಟಿಯ ಸಮಯದಲ್ಲಿ ದ್ವಿಪಕ್ಷೀಯ ಮಾತುಕತೆಯ ಸಾಧ್ಯತೆಗಳನ್ನು ತಳ್ಳಿಹಾಕಿದರು.
ಚಿತ್ರದುರ್ಗ : ಜೀವನದಲ್ಲಿ ದೃಷ್ಠಿ ಬಹು ಮುಖ್ಯ. ಯಾವುದೇ ಒಂದು ವಸ್ತು, ಬಣ್ಣ, ಸನ್ನಿವೇಶ ಅರ್ಥ ಮಾಡಿಕೊಳ್ಳಬೇಕಾದರೆ ದೃಷ್ಢಿ ಬೇಕೇ ಬೇಕು. ನಾವೆಲ್ಲರೂ ಕಣ್ಣಿನ ದೃಷ್ಠಿ ಕಾಪಾಡಿಕೊಳ್ಳುವ ಬಗ್ಗೆ ಜಾಗೃತೆವಹಿಸಬೇಕು ಎಂದು ಜಿಲ್ಲಾಸ್ಪತ್ರೆ ಹಿರಿಯ ನೇತ್ರ ತಜ್ಞೆ ಡಾ.ಐ.ಎಂ.ಶಿಲ್ಪಾ ಹೇಳಿದರು. ನಗರದ ಜಿಲ್ಲಾಸ್ಪತ್ರೆಯ ಅಧೀನದ ಸರ್ಕಾರಿ ಬಿ.ಎಸ್ಸಿ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ದೃಷ್ಠಿ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹುಟ್ಡಿದ ಮಕ್ಕಳಲ್ಲಿ ಅನೇಕ ಕಾರಣಗಳಿಂದ ಹುಟ್ಟು ಕುರುಡು ಉಂಟಾಗುವ ಸಾಧ್ಯತೆಗಳು ಇರುತ್ತವೆ. ಯಾವುದೇ ನ್ಯೂನತೆಗಳನ್ನು ಹುಟ್ಟಿದ ಹನ್ನೆರೆಡು ವರ್ಷಗಳಲ್ಲಿ ಬಹಳಷ್ಟು ತೊಂದರೆಗಳನ್ನು ಸೂಕ್ತ ಚಿಕಿತ್ಸೆ ನೀಡುವುದರ ಮುಖಾಂತರ ಸರಿಪಡಿಸಬಹುದಾಗಿದೆ. ಯಾವುದೇ ಮಗು ದೃಷ್ಠಿಗೆ ಸಂಬಂಧಿಸಿದ ತೊಂದರೆ ಇರುವುದು ಕಂಡುಬಂದಲ್ಲಿ ಹತ್ತಿರದ ತಜ್ಞ ವೈದ್ಯರಿಗೆ ತೋರಿಸಿ ಚಿಕಿತ್ಸೆ ಕೊಡಿಸಿದರೆ ಗುಣವಾಗುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದ ಅವರು, ಮೊಬೈಲ್ ವೀಕ್ಷಣೆ ಮಕ್ಕಳಿಗೆ ಅತಿಯಾದ ಅಭ್ಯಾಸ…
ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ, ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ.3000 ದಂತೆ 15 ವರ್ಷಗಳವರೆಗೆ ಒಟ್ಟು ರೂ.45,000 ಗಳನ್ನು ಅಂಚೆ ಇಲಾಖೆಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ. ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಪರಿಪಕ್ವ ಮೊತ್ತ ಅಂದಾಜು ರೂ.1.27 ಲಕ್ಷ ನೀಡಲಾಗುತ್ತದೆ. ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ಮಗುವನ್ನು ನೋಂದಾಯಿಸಲು ಅವಶ್ಯಕ ದಾಖಲೆಗಳು; ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆ ಅರ್ಜಿ ನಮೂನೆ, ಪೋಷಕರೊಂದಿಗೆ ಮಗುವಿನ ಭಾವಚಿತ್ರ, ಮಗುವಿನ ಮೂಲ ಜನನ ಪ್ರಮಾಣ ಪತ್ರ, ಆದ್ಯತಾ ಕುಟುಂಬ ಪಡಿತರ ಚೀಟಿಯ ಪ್ರತಿ(ಪಡಿತರ ಚೀಟಿಯಲ್ಲಿ ತಂದೆಯ ಹೆಸರು ಇರಬೇಕು). ಪೋಷಕರ ಆಧಾರ್ ಕಾರ್ಡ್, ಮಗುವಿನ ಆಧಾರ್ ಕಾರ್ಡ್ ಪ್ರತಿ, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಪೋಷಕರ ಸ್ವಯಂ ಘೋಷಣಾ ವಿವಾಹ ದೃಢೀಕರಣ ಪತ್ರ(ನಮೂನೆ-6ರಲ್ಲಿ), ಭರ್ತಿ…
ಬಳ್ಳಾರಿ : ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯಾಗುತ್ತಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಸಂಡೂರು ಪಟ್ಟಣದ ಅಗ್ನಿಶಾಮಕದಳ ಮುಂಭಾಗದ ವಿಶ್ವಾಸ್ ಯು.ಲಾಡ್ ಮೈದಾನದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳಿಗೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸಂಡೂರು ಭಾಗದಲ್ಲಿ 280 ಕೋಟಿ ರೂ. ವೆಚ್ಚದಲ್ಲಿ ವಿವಿಧ ಯೋಜನೆಗಳ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. 2004 ರಿಂದ 2024 ರವರೆಗೆ 1,216 ಕೋಟಿ ರೂ. ಅನುದಾನ ನೀಡಲಾಗಿದೆ. ರೂ.160.00 ಕೋಟಿ ವೆಚ್ಚದಲ್ಲಿ ನಿಡುಗುರ್ತಿ ಸೇರಿದಂತೆ 58 ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. 2013 ರ ನಮ್ಮ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 15 ಲಕ್ಷ ಮನೆಗಳನ್ನು ಕಟ್ಟಲು ಗುರಿ ಹೊಂದಲಾಗಿತ್ತು. ಸಂಡೂರು ಭಾಗದಲ್ಲಿಯೇ 12,000 ಮನೆಗಳನ್ನು…
ಬೆಂಗಳೂರು : ಬೆಂಗಳೂರಿನಲ್ಲಿ ಇಂದಿನಿಂದ (ಅಕ್ಟೋಬರ್ 15) ರಿಂದ ಗುರುವಾರ (ಅಕ್ಟೋಬರ್ 17) ವರೆಗೆ ನಿಗದಿತ ವಿದ್ಯುತ್ ವ್ಯತ್ಯಯವಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಉಪಯುಕ್ತತೆಗಳು ಅಗತ್ಯ ನಿರ್ವಹಣಾ ಚಟುವಟಿಕೆಗಳನ್ನು ನಡೆಸುತ್ತಿರುವ ಕಾರಣ ವಿದ್ಯುತ್ ಕಡಿತವಾಗಿದೆ. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಿರ್ವಹಣಾ ಕಾರ್ಯವು ಜಲಸಿರಿ 24×7 ನೀರು ಸರಬರಾಜು ಯೋಜನೆ, HT ಲೈನ್ ಮರುನಿರ್ಮಾಣ, RMU ಸೇವೆ, HT ಜಂಪ್ ಸಂಪರ್ಕಗಳ ದುರಸ್ತಿ ಮತ್ತು ಬದಲಿ, ಮರಗಳ ಸಮರುವಿಕೆ, ಸಿಸ್ಟಮ್ ನವೀಕರಣಗಳು ಮತ್ತು HT ವರದಿಯ ಪ್ರಕಾರ ಇತರ ಅಗತ್ಯ ಕಾರ್ಯಗಳನ್ನು ಒಳಗೊಂಡಿದೆ. ಅಕ್ಟೋಬರ್ 15, ಮಂಗಳವಾರ ಬೆಂಗಳೂರಿನಲ್ಲಿ ವಿದ್ಯುತ್ ಕಡಿತ ಕೆಳಗಿನ ಪ್ರದೇಶಗಳು ಸ್ಥಗಿತವನ್ನು ಅನುಭವಿಸುತ್ತವೆ: ದೇವನಹಳ್ಳಿ, ವಿಜಯಪುರ, ದೊಡ್ಡಲಹಳ್ಳಿ, M/s GRT ಜ್ಯುವೆಲರ್ಸ್ Ipp, ಶಿವನಹಳ್ಳಿ ಮೇಘಾ ಡೈರಿ ಮತ್ತು ಸುತ್ತಮುತ್ತಲಿನ ಹಳ್ಳಿಗಳು. ಹೆಚ್ಚುವರಿ ಪ್ರದೇಶಗಳಲ್ಲಿ ಕಾವೇರಿ ನಗರ,…
ಲಕ್ನೋ: ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಶನಿವಾರ ದಸರಾ ಸಂದರ್ಭದಲ್ಲಿ ರಾಮಲೀಲಾ ಸಂದರ್ಭದಲ್ಲಿ ವೇದಿಕೆಯಲ್ಲಿ ರಾಮ ಮತ್ತು ರಾವಣನ ಪಾತ್ರಗಳನ್ನು ನಿರ್ವಹಿಸುವ ನಟರ ನಡುವೆ ‘ನಿಜ ಜೀವನದ’ ಜಗಳ ಪ್ರಾರಂಭವಾಯಿತು ಪತ್ರಕರ್ತ ಸಚಿನ್ ಗುಪ್ತಾ ಅವರು ಎಕ್ಸ್ನಲ್ಲಿ ಹಂಚಿಕೊಂಡಿರುವ ವೈರಲ್ ವೀಡಿಯೊದಲ್ಲಿ, ನಾಟಕದ ಭಾಗವಾಗಿ ‘ರಾಮ’ ಮತ್ತು ‘ಲಕ್ಷ್ಮಣ’ ‘ರಾವಣ’ ಮೇಲೆ ಬಾಣಗಳನ್ನು ಹೊಡೆಯುವುದನ್ನು ತೋರಿಸುತ್ತದೆ. ರಾಮ ಮತ್ತು ರಾವಣನ ಪಾತ್ರವನ್ನು ನಿರ್ವಹಿಸುವ ಇಬ್ಬರು ಪುರುಷರು ನಂತರ ಪ್ರೇಕ್ಷಕರ ಜನರು ಮಧ್ಯಪ್ರವೇಶಿಸಿ ಅವರನ್ನು ಬೇರ್ಪಡಿಸುವವರೆಗೆ ಪರಸ್ಪರರ ಕೂದಲನ್ನು ಎಳೆಯಲು ಪ್ರಾರಂಭಿಸುತ್ತಾರೆ. “ಉತ್ತರ ಪ್ರದೇಶದ ಅಮ್ರೋಹಾದಲ್ಲಿ ರಾಮಲೀಲಾ ಪ್ರದರ್ಶನದ ಸಮಯದಲ್ಲಿ ರಾಮ ಮತ್ತು ರಾವಣ ನಿಜ ಜೀವನದಲ್ಲಿ ಮುಖಾಮುಖಿಯಾದರು. ರಾವಣನು ರಾಮನನ್ನು ತಳ್ಳಿದನು. ಜನರು ವೇದಿಕೆಯನ್ನು ತಲುಪಿ ಮಧ್ಯಪ್ರವೇಶಿಸಿದರು” ಎಂದು ಗುಪ್ತಾ ಹಿಂದಿಯಲ್ಲಿ ಬರೆದಿದ್ದಾರೆ. ಈ ವೀಡಿಯೊ 11,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಕಾಮೆಂಟ್ ವಿಭಾಗದಲ್ಲಿ “ಜನರು ತಾಳ್ಮೆ ಕಳೆದುಕೊಂಡಿದ್ದಾರೆ. ಪ್ರತಿಯೊಬ್ಬರೂ ಸಣ್ಣ ವಿಷಯಗಳಿಗೆ ಕೋಪಗೊಳ್ಳುತ್ತಾರೆ…
ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಬುಧವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಒಳನಾಡು ಭಾಗದಲ್ಲಿ ಬುಧವಾರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ನಾಳೆಯಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಕ್ಟೋಬರ್ 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು : ಬೆಂಗಳೂರಿನ ಕಾಲೇಜ್ ವೊಂದರಲ್ಲಿ ಪ್ರಾಂಶುಪಾಲರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳಾ ಪ್ರೊಫೆಸರ್ ಯೊಬ್ಬರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬೆಂಗಳೂರಿನ SSMRV ಕಾಲೇಜಿನ ಶಬಾನಾ ಎಂಬ ಪ್ರೋಫೆಸರ್ ಗೆ ಪ್ರಾಂಶುಪಾಲರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು, ಕಾಲೇಜಿನಲ್ಲೇ ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಪ್ರೊಫೇಸರ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.













