Author: kannadanewsnow57

ನವದೆಹಲಿ: 2002 ರ ಸಬರಮತಿ ಎಕ್ಸ್ಪ್ರೆಸ್ ರೈಲು ಹತ್ಯಾಕಾಂಡದ ಅಪರಾಧಿ ಫಾರೂಕ್ ಭಾನಾ ಸಲ್ಲಿಸಿದ್ದ ತಾತ್ಕಾಲಿಕ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ. ಪ್ರಾಸಿಕ್ಯೂಷನ್ನ ವಿರೋಧವನ್ನು ಪರಿಗಣಿಸಿದ ಗುಜರಾತ್ ಹೈಕೋರ್ಟ್ ಗುರುವಾರ “ಇತರ ಕುಟುಂಬ ಸದಸ್ಯರು” ವೈದ್ಯಕೀಯ ಚಿಕಿತ್ಸೆಯನ್ನು ನೋಡಿಕೊಳ್ಳಬಹುದು ಎಂದು ಹೇಳಿದೆ. ವಾದದ ಎರಡೂ ಬದಿಗಳನ್ನು ಆಲಿಸಿದ ಮತ್ತು ಭಾನಾ ಅವರ ವಕೀಲರು ಸಲ್ಲಿಸಿದ ವೈದ್ಯಕೀಯ ವರದಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಸಂಜೀವ್ ಠಾಕರ್ ಅವರ ಏಕಸದಸ್ಯ ಪೀಠವು ಅಪರಾಧಿಯ ತಂದೆಗೆ ಡಯಾಸ್ಟೊಲಿಕ್ ಅಪಸಾಮಾನ್ಯ ಕ್ರಿಯೆಯಿಂದ ಬಳಲುತ್ತಿದ್ದಾರೆ ಮತ್ತು ಗಂಭೀರ ಮೂತ್ರಪಿಂಡದ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಒತ್ತಿಹೇಳಿದರು. ಶುಕ್ರವಾರ ಅಪ್ಲೋಡ್ ಮಾಡಿದ ಆದೇಶದಲ್ಲಿ, ಹೈಕೋರ್ಟ್, “ಅರ್ಜಿದಾರರನ್ನು ಇತ್ತೀಚೆಗೆ ಮೇ 1, 2024 ರಂದು ಎಂಟು ದಿನಗಳವರೆಗೆ ಬಿಡುಗಡೆ ಮಾಡಲಾಗಿದೆ ಎಂಬ ಆಧಾರದ ಮೇಲೆ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ (ಎಪಿಪಿ) ವಿರೋಧಿಸಿದ್ದಾರೆ… ಐಪಿಸಿಯ ಸೆಕ್ಷನ್ 302 ರ ಅಡಿಯಲ್ಲಿ ಅಪರಾಧಕ್ಕಾಗಿ ಅರ್ಜಿದಾರರನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ ಮತ್ತು ಶಿಕ್ಷೆ ವಿಧಿಸಲಾಗಿದೆ ಎಂದು ಜೈಲಿನ…

Read More

ಮಡಿಕೇರಿ : ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಟೈಲರಿಂಗ್, ಪ್ಲಂಬರ್ ಮತ್ತು ಸ್ಯಾನಿಟರಿ, ಟೈಲ್ಸ್ ಫಿಟ್ಟರ್ ಮತ್ತು ಗಾರೆ ಕಸುಬಿನ ಪವರ್ ಉಪಕರಣಗಳನ್ನು ಉಚಿತವಾಗಿ ಪಡೆಯಲು ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಂದ ಆನ್‍ಲೈನ್ (ವೆಬ್ ಸೈಟ್ https://kodagu.nic.in/en/application-for-free-toolkits-for-rural-artisans-during-the-year-2024-25) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ. ಅರ್ಜಿಯೊಂದಿಗೆ ಪಾಸ್ ಪೆÇೀರ್ಟ್ ಗ್ರಾತದ ಭಾವಚಿತ್ರ. ಜಾತಿ ಪ್ರಮಾಣ ಪತ್ರ (ಎಸ್‍ಸಿ, ಎಸ್‍ಟಿ, ಮೈನಾರಿಟಿ), ಪಡಿತರ ಚೀಟಿ (ರೇಷನ್ ಕಾರ್ಡ್ ಪ್ರತಿ). ಮತದಾರರ ಗುರುತಿನ ಪ್ರತಿ. ವಿಕಲಚೇತನರಾಗಿದ್ದಲ್ಲಿ ದೃಢೀಕರಣ ಪತ್ರ ಸಲ್ಲಿಸುವುದು. ಆಯಾಯ ಗ್ರಾಮ ಪಂಚಾಯತಿಯ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ರವರಿಂದ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ. (ಟೈಲರಿಂಗ್, ಪ್ಲಂಬರ್–ಸ್ಯಾನಿಟರಿ, ಸಿರಾಮಿಕ್ ಟೈಲ್ಸ್ ಫಿಟ್ಟರ್ ಮತ್ತು ಗಾರೆ ಕಸುಬು -ನಿಗಧಿತ ನಮೂನೆಯಲ್ಲಿ) ವಿದ್ಯುತ್ ಚಾಲಿತ ಹೊಲಿಗೆಯಂತ್ರ(ಟೈಲರಿಂಗ್) ಪ್ಲಂಬರ್ ಮತ್ತು ಸ್ಯಾನಿಟರಿ, ಸಿರಾಮಿಕ್ ಟೈಲ್ಸ್ ಫಿಟ್ಟರ್ ಮತ್ತು ಗಾರೆಕಸುಬಿನ ಉಪಕರಣ ಪಡೆಯಲು ಕೊಡಗು ಜಿಲ್ಲೆಯ…

Read More

ನವದೆಹಲಿ: ಉತ್ತರ ಪ್ರದೇಶದ ಸೋನ್ಭದ್ರ ಜಿಲ್ಲೆಯಲ್ಲಿ ನಕಲಿ ಕರೆನ್ಸಿ ನೋಟುಗಳನ್ನು ತಯಾರಿಸುವ ದಂಧೆ ನಡೆಸುತ್ತಿದ್ದ ಮತ್ತು 30,000 ರೂ.ಗಳ ನಕಲಿ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ ಪೊಲೀಸರ ಪ್ರಕಾರ, ಆರೋಪಿಗಳಾದ ಸತೀಶ್ ರೈ ಮತ್ತು ಪ್ರಮೋದ್ ಮಿಶ್ರಾ ಕಂಪ್ಯೂಟರ್ ಪ್ರಿಂಟರ್ನಲ್ಲಿ 10 ರೂ.ಗಳ ಸ್ಟಾಂಪ್ ಪೇಪರ್ಗಳಲ್ಲಿ 500 ರೂ.ಗಳ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದರು. ಅವರು ಮಿರ್ಜಾಪುರದಿಂದ ಸ್ಟಾಂಪ್ ಪೇಪರ್ ಖರೀದಿಸಿದರು. ಎಲ್ಲಾ ನೋಟುಗಳು ಒಂದೇ ಕ್ರಮ ಸಂಖ್ಯೆಯನ್ನು ಹೊಂದಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಇವರಿಬ್ಬರು ಸೋನ್ಭದ್ರದ ರಾಮಗಢ ಮಾರುಕಟ್ಟೆಯಲ್ಲಿ ನಕಲಿ ಕರೆನ್ಸಿ ನೋಟುಗಳಿಗಾಗಿ ಇನ್ನೂ 10,000 ರೂ.ಗಳನ್ನು ಖರ್ಚು ಮಾಡಲು ಹೊರಟಿದ್ದರು, ಅಲ್ಲಿ ಅವರನ್ನು ಬಂಧಿಸಲಾಯಿತು. “ನಾವು 500 ರೂ.ಗಳ 20 ನಕಲಿ ನೋಟುಗಳನ್ನು ಕಂಡುಕೊಂಡಿದ್ದೇವೆ. ಕರೆನ್ಸಿ ನೋಟುಗಳ ವಿವರವಾದ ವೈಶಿಷ್ಟ್ಯಗಳನ್ನು ತಿಳಿದುಕೊಳ್ಳದ ಹೊರತು ಅವು ನಿಜವಲ್ಲ ಎಂದು ಗುರುತಿಸಲು ಯಾರಿಗೂ ಸಾಧ್ಯವಾಗುವುದಿಲ್ಲ” ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾಲು ಸಿಂಗ್ ಹೇಳಿದ್ದಾರೆ. ಆರೋಪಿಗಳು…

Read More

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನ. 11 ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ, ನ.11 ರ ಸಂಜೆ 06 ಗಂಟೆಯಿAದ ನ.13 ಸಂಜೆ 06.30 ಗಂಟೆಯವರೆಗೆ ಚುನಾವಣೆಗೆ ಸಂಬAಧಿಸಿದAತೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿ, ಮಾಧ್ಯಮಗಳು, ಟಿ.ವಿ. ವಾಹಿನಿಗಳಲ್ಲಿ ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ಸಂದರ್ಶನ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ…

Read More

ಕೇಂದ್ರ ಸರ್ಕಾರವು 4 ತಿಂಗಳು ಮೇಲ್ಪಟ್ಟ ಗರ್ಭಿಣಿ ಮಹಿಳೆಯ ಹಾಗೂ ಒಂದು ವರ್ಷದೊಳಗಿನ ಮಕ್ಕಳಿಗೆ ಕುಟುಂಬದ ಸದಸ್ಯರು ವಹಿಸಬೇಕಾದ ಕಾಳಜಿ, ಲಸಿಕೆ ಒದಗಿಸುವಿಕೆ ಹಾಗೂ ಇತರೆ ತಪಾಸಣೆ ಕೈಗೊಳ್ಳಲು ಸಹಾಯಕವಾಗುವ ದಿಶೆಯಲ್ಲಿ ದೇಶಾದ್ಯಂತ ಎಲ್ಲ ಭಾಷೆಗಳಲ್ಲಿ ವಿನೂತನ ಕಾರ್ಯಕ್ರಮ ‘ಕಿಲ್ಕಾರಿ’ ಮೊಬೈಲ್ ಕರೆ ಆರಂಭಿಸಲಾಗಿದೆ ಎಂದು ಕಿಲ್ಕಾರಿ ಕಾರ್ಯಕ್ರಮದ ರಾಜ್ಯ ಸಲಹೆಗಾರರಾದ ಡಾ.ಶ್ವೇತಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿ ಜಿಲ್ಲಾ ಮಟ್ಟದಲ್ಲಿ ಆಶಾ ಮೇಲ್ವಿಚಾರಕರು ಹಾಗೂ ಗ್ರಾಮೀಣ ಭಾಗದಲ್ಲಿಯ ಆಶಾ ಸುಗಮಕಾರರಿಗೆ ನಗರದ ಜಿಲ್ಲಾ ಲಸಿಕಾ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತರಬೇತಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ ಅಕ್ಟೋಬರ್ ತಿಂಗಳಲ್ಲಿ ಅನುಷ್ಠಾನಗೊಳಿಸಿರುವ ‘ಕಿಲ್ಕಾರಿ’ ಕಾರ್ಯಕ್ರಮದಡಿ ಅರ್‌ಸಿಹೆಚ್ ಪೋರ್ಟಲ್‌ನಲ್ಲಿ ನೋಂದಾಯಿಸಿದ ಗರ್ಭಿಣಿ ಅಥವಾ ಕುಟುಂಬದ ಸದಸ್ಯರ ಮೊಬೈಲ್ ಸಂಖ್ಯೆಗೆ ಪ್ರತಿವಾರ ಕರೆ ಮಾಡುವ ಮೂಲಕ ಕಾಳಜಿ ವಹಿಸಲಾಗುವುದು ಎಂದು ತಿಳಿಸಿದರು. ಮೊಬೈಲ್ ಸಂಖ್ಯೆ 0124-4588000 ರ ಮೂಲಕ ಸಂಪರ್ಕಿಸಿ ಪಾಲಕರೊಂದಿಗೆ ಮಾತನಾಡಲಾಗುವುದು.…

Read More

2024-25 ನೇ ಸಾಲಿನಲ್ಲಿ ಮುಂಗಾರು ಋತುವಿನಲ್ಲಿ ಬೆಳೆದ ಎಫ್.ಎ.ಕ್ಯೂ. ಗುಣಮಟ್ಟದ ಭತ್ತ ಹಾಗೂ ಬಿಳಜೋಳ ಉತ್ಪನ್ನವನ್ನು ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ನೇರ ಖರೀದಿಸಲು ಸರ್ಕಾರದ ಆದೇಶದಂತೆ ಜಿಲ್ಲಾ ಟಾಸ್ಕಪೆÇೀರ್ಸ ಸಮಿತಿ ನಿರ್ಧರಿಸಿದೆ ಎಂದು ಜಿಲ್ಲಾ ಟಾಸ್ಕಪೆÇೀರ್ಸ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನಲ್ಲಿ ಬೆಳೆದ ಭತ್ತಕ್ಕೆ ರೂ.2,300 ಹಾಗೂ ಗ್ರೇಡ್-ಎ ಭತ್ತಕ್ಕೆ ರೂ.2,320 ನಿಗದಿಪಡಿಸಿದೆ. ಮತ್ತು ಎಫ್.ಎ.ಕ್ಯೂ. ಗುಣಮಟ್ಟದ ಬೀಳಿಜೋಳ ಹೈಬ್ರಿಡ್‍ಗೆ ರೂ.3,371, ಬಿಳಿಜೋಳ ಮಾಲ್ದಂಡಿಗೆ ರೂ.3,421 ನಿಗದಿಪಡಿಸಿದೆ ಎಂದು ಅವರು ತಿಳಿಸಿದ್ದಾರೆ. ಭತ್ತ ಖರೀದಿ: ಧಾರವಾಡ ಮತ್ತು ಕಲಘಟಗಿ ಭಾಗದಲ್ಲಿ 10,904 ಹೇಕ್ವೆರ್ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದ್ದು 1,09,040 ಕ್ವಿಂಟಲ್ ಭತ್ತದ ಇಳುವರಿಯನ್ನು ನೀರಿಕ್ಷಿಸಲಾಗಿದೆ. ಭತ್ತ ಖರೀದಿಗಾಗಿ ಧಾರವಾಡ ಮತ್ತು ಕಲಘಟಗಿ ಎ.ಪಿ.ಎಮ್.ಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಖರೀದಿ ಕೇಂದ್ರ ಸ್ಥಾಪಿಸಲು…

Read More

ಬೆಂಗಳೂರು : ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ಪೋರ್ಟಲ್‌ನಲ್ಲಿ Randomization ಮೂಲಕ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ರಾಜ್ಯಪತ್ರ ಹೊರಡಿಸಿದೆ. ಉಲ್ಲೇಖ (1) ರಲ್ಲಿನ ಸರ್ಕಾರದ ಆದೇಶದಲ್ಲಿ ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರು ಕಾಮಗಾರಿಗಳ ಟೆಂಡರ್‌ಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಮಾದರಿ ಟೆಂಡರ್ ದಾಖಲೆಗಳಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ. ಉಲ್ಲೇಖ (2) ರಲ್ಲಿನ ಸರ್ಕಾರದ ಆದೇಶದಲ್ಲಿ, ಉಲ್ಲೇಖ (1) ರಲ್ಲಿನ ಆದೇಶದಲ್ಲಿ ಮಾದರಿ ಟೆಂಡ‌ರ್ ದಾಖಲೆಗಳ ಷರತ್ತುಗಳಿಗೆ ತರಲಾದ ಎಲ್ಲಾ ಮಾರ್ಪಾಡುಗಳನ್ನು ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ II(A) ರಲ್ಲಿನ ಜಾತಿಗಳ ಟೆಂಡರ್‌ದಾರರುಗಳಿಗೂ ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳ ಟೆಂಡರ್‌ಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಅನ್ವಯಿಸಿ ಅವಕಾಶ ಕಲ್ಪಿಸಲಾಗಿರುತ್ತದೆ. ಮುಂದುವರೆದು, ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರು ಹಾಗೂ ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ II(A) ರಲ್ಲಿನ ಜಾತಿಗಳ ಟೆಂಡರ್‌ದಾರರು ಟೆಂಡರ್‌ಗಳಲ್ಲಿ ಭಾಗವಹಿಸುವ ಕುರಿತು…

Read More

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ ಒಟ್ಟು 1.22 ಕೋಟಿ ಮಹಿಳೆಯರು ಧನಸಹಾಯ ಪಡೆದುಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಹೌದು, ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 2023 ರಿಂದ ಈವರೆಗೆ ಪ್ರತಿ ಮನೆಯ ಯಜಮಾನಿಯ ಖಾತೆಗೆ ಮಾಸಿಕ ₹2,000 ದಂತೆ 1.22 ಕೋಟಿ ಮಹಿಳೆಯರಿಗೆ ಒಟ್ಟು 30,285 ಕೋಟಿ ಧನಸಹಾಯ ಪಡೆದುಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇನ್ನು ಆರೋಗ್ಯ ಪುಷ್ಟಿ ಯೋಜನೆಯನ್ನು ಪ್ರಾಯೋಗಿಕವಾಗಿ ರಾಜ್ಯದ 102 ತಾಲೂಕುಗಳಲ್ಲಿ ಜಾರಿಗೊಳಿಸಿದ್ದು, ಅರ್ಹ ವಿವಾಹಿತ ಮಹಿಳೆಯರಿಗೆ ಪೌಷ್ಟಿಕ ಕಿಟ್ ವಿತರಣೆ ಮಾಡಲಾಗುತ್ತಿದೆ. ಜೊತೆಗೆ ಮಾಜಿ ದೇವದಾಸಿಯರ ಉತ್ಪನ್ನಗಳ ಮಾರಾಟಕ್ಕಾಗಿ ಸವದತ್ತಿಯಲ್ಲಿ 48 ಮಾರಾಟ ಮಳಿಗೆಗಳ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಲಾಗಿದೆ.

Read More

ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭಗೊಳ್ಳಲಿದ್ದು, ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ. ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಹತೆ – ಎಸ್ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು. ಆಯ್ಕೆಯ ವಿಧಾನ- ಸಹನ ಶಕ್ತಿ ಪರೀಕ್ಷೆಯ…

Read More

ಬೆಂಗಳೂರು : ನವೆಂಬರ್ 14 ಜವಾಹರ್ ಲಾಲ್ ನೆಹರು ಜನ್ಮ ದಿನದ ಅಂಗವಾಗಿ ‘ಮಕ್ಕಳ ದಿನಾಚರಣೆ’ ಹಾಗೂ ನವೆಂಬರ್ 20 ರಂದು ‘ಅಂತಾರಾಷ್ಟ್ರೀಯ ಮಕ್ಕಳ ದಿನಾಚರಣೆ’ ಅಂಗವಾಗಿ ಅರಿವು ಕೇಂದ್ರಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚಿಸಲಾಗಿದೆ. ಗ್ರಾಮೀಣ ಮಕ್ಕಳನ್ನು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆರಂಭಿಸಿರುವ ‘ಓದುವ ಬೆಳಕು’ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಉಪಯುಕ್ತ ಚಟುವಟಿಕೆಯನ್ನು ಆಯೋಜಿಸಲಾಗಿದೆ. ಮಕ್ಕಳ ಸೃಜನಶೀಲತೆ ಮತ್ತು ಗ್ರಹಿಸುವಿಕೆ ಸಾಮರ್ಥ್ಯವನ್ನು ವೃದ್ಧಿಸಲು ಈ ತಿಂಗಳು ಕಡಲತೀರದ ದೃಶ್ಯ, ಮಾರುಕಟ್ಟೆ, ಜಾತ್ರೆ, ಆಟದ ಮೈದಾನ ಮತ್ತು ಮಕ್ಕಳು ಆನಂದಿಸುವ ಇತರ ಸ್ಥಳಗಳಂತಹ ವರ್ಣರಂಜಿತ ಚಿತ್ರಗಳನ್ನು ರಚಿಸಿ, ವಿವರಿಸಲು ಮಕ್ಕಳಿಗೆ ಸೂಚಿಸಲಾಗಿದೆ. ಮಕ್ಕಳು ಇಂತಹ ಚಿತ್ರಗಳ ಬಗ್ಗೆ ತಮ್ಮ ಸ್ನೇಹಿತರಿಗೆ ವಿವರಿಸಲು ಅಥವಾ ಚರ್ಚೆ ನಡೆಸಲು ಹಾಗೂ ಈ ವಸ್ತುವನ್ನು ಇರಿಸಿಕೊಂಡು ಕಥೆಯನ್ನು ರಚಿಸಲು ಉತ್ತೇಜನ ನೀಡಲಾಗುವುದು.

Read More