Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ :ಭಾರತದಲ್ಲಿ ಇತರ ಕಾಯಿಲೆಗಳಿಗಿಂತ ಹೃದಯ ಕಾಯಿಲೆಗಳ ಅಪಾಯ ಹೆಚ್ಚಾಗಿ ಕಂಡುಬರುತ್ತಿದೆ, ಇದು ಪ್ರತಿ ವರ್ಷವೂ ಸಾವಿಗೆ ಪ್ರಮುಖ ಕಾರಣವಾಗಿದೆ. ಕೆಲವು ದಶಕಗಳ ಹಿಂದಿನವರೆಗೆ, ಹೃದಯ ಕಾಯಿಲೆಗಳನ್ನು ವಯಸ್ಸಾದಂತೆ ಬರುವ ಕಾಯಿಲೆಗಳು ಎಂದು ಕರೆಯಲಾಗುತ್ತಿತ್ತು, ಆದರೆ ಈಗ ಕಿರಿಯ ವಯಸ್ಸಿನ ಜನರು, 20 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಹ ಇದಕ್ಕೆ ಬಲಿಯಾಗುತ್ತಿದ್ದಾರೆ. ಅಂಕಿಅಂಶಗಳು ಪ್ರತಿ ವರ್ಷ ಲಕ್ಷಾಂತರ ಭಾರತೀಯರು ಹೃದಯ ಕಾಯಿಲೆಗಳಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ಯುವ ಪೀಳಿಗೆಯವರು ಎಂದು ತೋರಿಸುತ್ತವೆ. ತಮ್ಮನ್ನು ತಾವು ಸದೃಢರು ಮತ್ತು ಶಕ್ತಿಯುತರು ಎಂದು ಪರಿಗಣಿಸುತ್ತಿದ್ದ 30-35 ವರ್ಷ ವಯಸ್ಸಿನ ಯುವಕರು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ನೀವು ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ಇಂತಹ ಸುದ್ದಿಗಳನ್ನು ನೋಡುತ್ತಿರಬೇಕು. ಹೃದಯ ಕಾಯಿಲೆ ಮತ್ತು ಅದರಿಂದ ಉಂಟಾಗುವ ಸಾವುಗಳ ಕುರಿತಾದ ಇತ್ತೀಚಿನ ವರದಿಯು ಈ ಅಪಾಯದ ಬಗ್ಗೆ ಎಚ್ಚರಿಸಿದೆ. ಭಾರತದ ರಿಜಿಸ್ಟ್ರಾರ್ ಜನರಲ್ ಅಡಿಯಲ್ಲಿ ನಡೆಸಲಾದ ಮಾದರಿ ನೋಂದಣಿ ಸಮೀಕ್ಷೆಯ ವರದಿಯಲ್ಲಿ, ತಜ್ಞರ ತಂಡವು ಭಾರತದಲ್ಲಿನ ಎಲ್ಲಾ…
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಡಗು ಇವರ ವತಿಯಿಂದ 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದ ಯುವಕ, ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನಿಡುವ ಯೋಜನೆಗಳನ್ನು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಹಯೋಗದೊಂದಿಗೆ ಎಲಿವೇಟ್(ಇಎಲ್ಇವಿಎಟಿಇ)(ಮೈನಾರಿಟೀಸ್)-2025 ರಲ್ಲಿನ ಮಾರ್ಗಸೂಚಿಗಳೊಂದಿಗೆ ಜಾರಿಗೊಳಿಸಲಾಗಿದೆ. ಈ ಯೋಜನೆಗೆ https://eitbt.karnataka.gov.in/en ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.080-2223100 ಅಥವಾ ಇ-ಮೇಲ್ elevate.ktech@ka.gov.in ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ಆರು ಪಥಗಳ 28 ಕಿ.ಮೀ ಉದ್ದದ ಸುರಂಗ ರಸ್ತೆ ನಿರ್ಮಾಣವಾಗಲಿದೆ. ಬೆಂಗಳೂರು ಮಹಾನಗರದ ಸಂಚಾರ ದಟ್ಟಣೆ ಪರಿಹಾರಕ್ಕೆ ಪೂರ್ವ–ಪಶ್ಚಿಮ ಕಾರಿಡಾರ್ ಸುರಂಗ ಮಾರ್ಗದಲ್ಲಿ ‘ಟ್ವಿನ್ ಟ್ಯೂಬ್ ಟನಲ್’ನಲ್ಲಿ (ಡಬಲ್ ಡೆಕ್) ಆರು ಪಥಗಳ 28 ಕಿ.ಮೀ ಉದ್ದದ ಸುರಂಗ ರಸ್ತೆ ನಿರ್ಮಾಣವಾಗಲಿದೆ. ಕೆ.ಆರ್. ಪುರದಿಂದ ನಾಯಂಡಹಳ್ಳಿ ಬಳಿಯ ನೈಸ್ ರಸ್ತೆ ಜಂಕ್ಷನ್ವರೆಗೆ ಪೂರ್ವ–ಪಶ್ಚಿಮ ಕಾರಿಡಾರ್ ಸುರಂಗ ಮಾರ್ಗ ನಿರ್ಮಿಸುವ ಮೂಲಕ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಯೋಜನೆ ರೂಪಿಸಿದೆ. https://twitter.com/INCKarnataka/status/1963877906381422995?ref_src=twsrc%5Egoogle%7Ctwcamp%5Eserp%7Ctwgr%5Etweet
ಆಧಾರ್ ಕಾರ್ಡ್ನ ಭೌತಿಕ ಪ್ರತಿಯನ್ನು ಕೊಂಡೊಯ್ಯಬೇಕಂತಿಲ್ಲ. ಮಹಿಳೆಯರ ಮೊಬೈಲ್ ಫೋನ್ ನಲ್ಲಿ ಆಧಾರ್ನ ಡಿಜಿಟಲ್ ನಕಲು ಅಥವಾ ಆಧಾರ್ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿದ ಆಧಾರ್ ಪಿಡಿಎಫ್ನ್ನು ಕಂಡಕ್ಟರ್ಗೆ ತೋರಿಸಬಹುದು. ಇದು ಮಹಿಳೆಯರಿಗೆ ಮತ್ತಷ್ಟು ಅನುಕೂಲವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ ಅವರು ಹೇಳಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶದಿಂದಾಗಿ ಹಿಂದೆ ದ್ವಿಚಕ್ರ ವಾಹನ ಅಥವಾ ಇತರೆ ಖಾಸಗಿ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ಅನೇಕ ಮಹಿಳೆಯರು ಈಗ ಬಸ್ಸುಗಳನ್ನು ಆಶ್ರಯಿಸಿದ್ದಾರೆ. ಇದರ ಜೊತೆಗೆ, ತಮ್ಮ ಕುಟುಂಬದ ಮಹಿಳೆಯರೊಂದಿಗೆ ತೆರಳುವ ಪುರುಷರೂ ಸಹ ಬಸ್ ಪ್ರಯಾಣಕ್ಕೆ ಆದ್ಯತೆ ನೀಡುತ್ತಿದ್ದಾರೆ. ಇದು ಒಟ್ಟಾರೆ ಬಸ್ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸಿದ್ದು, ಪುರುಷರಿಂದ ಟಿಕೆಟ್ ದರದಿಂದ ಆದಾಯ ಸಂಗ್ರಹವಾಗಿ ಸರ್ಕಾರದ ಬೊಕ್ಕಸಕ್ಕೆ ಲಾಭ ತಂದಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ…
ಧಾರವಾಡ : ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಹೊಸದಾಗಿ ಮಂಜೂರಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಗಂಜಿಗಟ್ಟಿ ಇಲ್ಲಿಗೆ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಪಿ.ಯು.ಸಿ. ತರಗತಿ ಪ್ರಾರಂಭವಾಗಿದ್ದು, ಪ್ರಥಮ ಪಿ.ಯು.ಸಿ. ವಿಷಯಗಳ (ವಿಜ್ಞಾನ ವಿಭಾಗ) ಬೋಧನೆಗಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ 10, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರಾತಿನಿದ್ಯತೆ ನೀಡಲಾಗುವುದು. ವಸತಿ ಶಾಲೆ, ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರು ಅಥವಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201, 7411934749 ಹಾಗೂ 7975156674 ಗೆ ಅಥವಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಅಥವಾ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಭ್ರಷ್ಟಾಚಾರ ಆರೋಪದ ವೀಡಿಯೋ ವೈರಲ್ ಆಗಿದ್ದರಿಂದ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಗೆ ಸಿಎಂ ಸಿದ್ಧರಾಮಯ್ಯ ರಾಜೀಮಾಮೆ ಕೊಟ್ಟು ಹೊರ ಹೋಗುವಂತೆ ಖಡಕ್ ಸೂಚಿಸಿದ್ದರು. ಈ ಬೆನ್ನಲ್ಲೇ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿ ಕುಮಾರ್ ಅವರು ನಿಗಮದ ಯೋಜನೆಗಳಡಿ ಸೌಲಭ್ಯ ನೀಡಲು ಫಲಾನುಭವಿಗಳಿಂದ ಶೇ.60ರಷ್ಟ ಲಂಚ ಕೇಳಿದ್ದಂತ ವೀಡಿಯೋ ವೈರಲ್ ಆಗಿತ್ತು. ಈ ವೈರಲ್ ವೀಡಿಯೋ ಗಮನಿಸಿದ್ದಂತ ಸಿಎಂ ಸಿದ್ಧರಾಮಯ್ಯ ಗರಂ ಆಗಿದ್ದರು. ಜೊತೆಗೆ ರಾಜೀನಾಮೆಗೂ ಸೂಚಿಸಿದ್ದರು. ಈ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ. ಅಂದಹಾಗೇ ರವಿಕುಮಾರ್ ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸಿನಲ್ಲಿ ಶಿಸ್ತು, ಪಾರದರ್ಶಕತೆ ರೂಪಿಸಿದ್ದಕ್ಕೆ ನನ್ನ ವಿರುದ್ಧ ಈ ಷಡ್ಯಂತ್ರ ನಡೆದಿದೆ. ಇದಷ್ಟೇ ಅಲ್ಲದೇ ಎಐ ಬಳಸಿ ನನ್ನ ವಿರುದ್ಧ ಪಿತೂರು ಮಾಡಲಾಗಿದೆ. ನಿಗಮದ ಕಚೇರಿಯಲ್ಲಿಯೇ ವೀಡಿಯೋ ಶೂಟ್ ಮಾಡಲಾಗಿದೆ. ಹೀಗಾಗಿ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು…
ಇಂದೋರ್ : ಇಂದು ಇಂದೋರ್ನಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿತ್ತು. ದೆಹಲಿ ತಲುಪಿದ ವಿಮಾನದ ಒಂದು ಎಂಜಿನ್ ಗಾಳಿಯಲ್ಲಿ ಕೆಲಸ ಮಾಡುವುದನ್ನು ನಿಲ್ಲಿಸಿತ್ತು, ನಂತರ ವಿಮಾನವನ್ನು ತುರ್ತು ಪರಿಸ್ಥಿತಿಯಲ್ಲಿ ಇಳಿಸಲಾಯಿತು. ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ (AXB 1028) ಬಗ್ಗೆ ಇಂದೋರ್ ವಿಮಾನ ನಿಲ್ದಾಣದಲ್ಲಿ ಗದ್ದಲ ಉಂಟಾಯಿತು, ವಿಮಾನದ ಒಂದು ಎಂಜಿನ್ ಕೆಲಸ ಮಾಡುವುದನ್ನು ನಿಲ್ಲಿಸಿದೆ ಎಂದು ಪೈಲಟ್ ATC ಗೆ ತಿಳಿಸಿದಾಗ. ಮಾಹಿತಿ ಪಡೆದ ನಂತರ, ಅಗ್ನಿಶಾಮಕ ದಳ, ಆಂಬ್ಯುಲೆನ್ಸ್ ಮತ್ತು CISF ತಂಡವು ವಿಮಾನ ನಿಲ್ದಾಣದಲ್ಲಿ ಜವಾಬ್ದಾರಿ ವಹಿಸಿಕೊಂಡಿತು. ಅದೃಷ್ಟವಶಾತ್, ವಿಮಾನವನ್ನು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಬೆಳಿಗ್ಗೆ ದೆಹಲಿಯಿಂದ ಇಂದೋರ್ಗೆ ಬಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಎಂಜಿನ್ನಲ್ಲಿ ತಾಂತ್ರಿಕ ದೋಷದಿಂದಾಗಿ ಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ATC ನಿಯಂತ್ರಣದಿಂದ ಮಾಹಿತಿ ಬಂದ ತಕ್ಷಣ, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ ತಂಡಗಳನ್ನು ವಿಮಾನ ನಿಲ್ದಾಣದಲ್ಲಿ…
ಬೆಳಗಾವಿ :ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಹೋಟೆಲ್ ಕಾರ್ಮಿಕನನ್ನು ಕೂಡಿಹಾಖಿ ಚಿತ್ರಹಿಂಸೆ ನೀಡಿದ್ದು, ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿಯ ಹೋಟೆಲ್ ಒಂದರಲ್ಲಿ ಹೋಟೆಲ್ ಕಾರ್ಮಿಕ ಯುವಕನನ್ನು ಕೂಡಿ ಹಾಕಿ ಚಿತ್ರಹಿಂಸೆ ನೀಡಲಾಗಿದ್ದು, ಗಂಭೀರವಾಗಿ ಹಲ್ಲೆಗೊಳಗಾದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವೆಂಕಪ್ಪ ಮೈಯೆಕರ್ (18) ಮೃತ ಕಾರ್ಮಿಕ. ಮಾಣಿಕವಾಡಿ ಗ್ರಾಮದ ನಿವಾಸಿ. ವೆಂಕಪ್ಪ ಮೂರು ತಿಂಗಳ ಹಿಂದೆ ಖಾನಾಪುರ ಹೊರವಲಯದ ಸ್ವರಾಜ್ ಹೋಟೆಲ್ ನಲ್ಲಿ ಕೆಲಸಕ್ಕೆ ಸೇರಿದ್ದ. ಆ.20ರಂದು ಯುವಕನ ಮೇಲೆ ಕಳ್ಳತನದ ಆರೋಪ ಹೋರಿಸಿ ಆತನನ್ನು ಹೋಟೆಲ್ ರೂಮ್ ನಲ್ಲಿ ಕೂಡಿ ಹಾಕಲಾಗಿದೆ. ಅಲ್ಲದೇ ಹೋಟೆಲ್ ಮಾಲೀಕ ನಾಗೇಶ್ ಬೆಡರೆ ಹಾಗೂ ಸಹೋದರ ವಿಜಯ್ ಬೆಡರೆ, ಯುವಕನ ಮೇಲೆ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ್ದಾರೆ.ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ. ತನ್ನ ಮಗನ ಸಾವಿನ ಬಗ್ಗೆ ನ್ಯಾಯಕೇಳಲು ಹೋಟೆ…
ಸ್ಮಾರ್ಟ್ಫೋನ್’ಗಳಿಲ್ಲದ ಜೀವನ ಬಹುತೇಕ ಸ್ಥಬ್ಧವಾಗಿದೆ. ಕರೆಗಳು ಮತ್ತು ಸಂದೇಶ ಕಳುಹಿಸುವಿಕೆ ಮಾತ್ರವಲ್ಲದೆ ಇನ್ನೂ ಅನೇಕ ಕೆಲಸಗಳನ್ನ ಸ್ಮಾರ್ಟ್ ಫೋನ್ ಮೂಲಕ ಮಾಡಬಹುದು. ಪ್ರತಿಯೊಬ್ಬರೂ ಸಾಮಾನ್ಯವಾಗಿ ಮನೆಗೆ ಹೋಗಿ ದಿನದ ಕೊನೆಯಲ್ಲಿ ಫೋನ್ ಚಾರ್ಜ್ ಮಾಡಲು ಇಷ್ಟಪಡುತ್ತಾರೆ. ಅನೇಕ ಜನರು ಕೆಲಸದಲ್ಲಿಯೂ ಫೋನ್ ಚಾರ್ಜರ್ ತಮ್ಮೊಂದಿಗೆ ಇಟ್ಟುಕೊಳ್ಳುತ್ತಾರೆ ಮತ್ತು ಅಗತ್ಯವಿದ್ದಾಗ ಅದನ್ನು ಚಾರ್ಜ್ ಮಾಡುತ್ತಾರೆ. ಚಾರ್ಜ್ ಮಾಡಿದ ನಂತರ ಚಾರ್ಜರ್ ಪ್ರಸ್ತುತ ಬೋರ್ಡ್’ಗೆ ಬಿಡುವುದು ಅನೇಕ ಬಾರಿ ಕಂಡುಬರುತ್ತದೆ. ಹೆಚ್ಚಿನ ಜನರು ಈಗಲೂ ಚಾರ್ಜರ್’ನ್ನ ಸ್ವಿಚ್ ಬೋರ್ಡ್ಗೆ ಜೋಡಿಸಿ ಬಿಡುತ್ತಾರೆ. ಕೆಲವರು ಸ್ವಿಚ್ ಆಫ್ ಮಾಡುವುದನ್ನೂ ಮರೆಯುತ್ತಾರೆ. ಚಾರ್ಜರ್ ಈ ರೀತಿ ಬಿಟ್ಟರೆ ಸಾಕಷ್ಟು ಹಾನಿಯಾಗುತ್ತದೆ. ಚಾರ್ಜರ್’ನ್ನ ಪ್ಲಗ್ ಇನ್ ಮಾಡಿದರೆ, ಅದು ನಿರಂತರ ವಿದ್ಯುತ್ ಸಂಪರ್ಕವನ್ನ ಪೂರೈಸುತ್ತದೆ. ಹೀಗೆ ಹೆಚ್ಚು ಹೊತ್ತು ಇಟ್ಟರೆ ವಿದ್ಯುತ್ ಪೂರೈಕೆ ಇರುವ ಕಾರಣ ಸ್ಫೋಟಗೊಳ್ಳಬಹುದು. ಇಲ್ಲವೇ ಹೆಚ್ಚು ಹೊತ್ತು ಸೇವೆ ನೀಡಲು ಸಾಧ್ಯವಾಗದೇ ಇರಬಹುದು ಎನ್ನುತ್ತಾರೆ ಟೆಕ್ ತಜ್ಞರು. ಇದು ಸಾಮಾನ್ಯವಾಗಿ ಸಣ್ಣ ವಿಷಯವೆಂದು ತೋರುತ್ತದೆಯಾದರೂ,…
ನವದೆಹಲಿ: ಬೆಳ್ಳಿ ಆಭರಣಗಳು ಮತ್ತು ಇತರ ವಸ್ತುಗಳಿಗೆ ಸ್ವಯಂಪ್ರೇರಿತ ಹಾಲ್ಮಾರ್ಕಿಂಗ್ ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಿದೆ. ಸರ್ಕಾರ ಗುರುವಾರ ಈ ಮಾಹಿತಿಯನ್ನು ನೀಡಿದೆ. ಗ್ರಾಹಕರಿಗೆ ಲೋಹದ ಶುದ್ಧತೆಯನ್ನು ಖಚಿತಪಡಿಸಿಕೊಳ್ಳಲು ಇದು ಡಿಜಿಟಲ್ ಗುರುತಿನ ವ್ಯವಸ್ಥೆಯನ್ನು ಜಾರಿಗೆ ತರುತ್ತದೆ. ಭಾರತೀಯ ಮಾನದಂಡಗಳ ಬ್ಯೂರೋ (ಬಿಐಎಸ್) IS 2112:2025 ಪ್ರಕಟಣೆಯೊಂದಿಗೆ ತನ್ನ ಹಾಲ್ಮಾರ್ಕಿಂಗ್ ಮಾನದಂಡವನ್ನು ಪರಿಷ್ಕರಿಸಿದೆ. ಇದು ಹಿಂದಿನ IS 2112:2014 ಆವೃತ್ತಿಯನ್ನು ಬದಲಾಯಿಸುತ್ತದೆ. ಈ ತಿದ್ದುಪಡಿಯೊಂದಿಗೆ, ಬೆಳ್ಳಿ ಆಭರಣಗಳು ಮತ್ತು ಇತರ ವಸ್ತುಗಳಿಗೆ ಹಾಲ್ಮಾರ್ಕಿಂಗ್ ವಿಶಿಷ್ಟ ಗುರುತಿನ ಚೀಟಿ (HUID) ಆಧಾರಿತ ಹಾಲ್ಮಾರ್ಕಿಂಗ್ ಅನ್ನು ಪರಿಚಯಿಸಲಾಗಿದೆ. ಇದು ಪತ್ತೆಹಚ್ಚುವಿಕೆಯನ್ನು ಹೆಚ್ಚಿಸಿದೆ ಮತ್ತು ಅಸ್ತಿತ್ವದಲ್ಲಿರುವ ಚಿನ್ನದ ಹಾಲ್ಮಾರ್ಕಿಂಗ್ ವ್ಯವಸ್ಥೆಗೆ ಅನುಗುಣವಾಗಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಹೊಸ ವ್ಯವಸ್ಥೆಯ ಅಡಿಯಲ್ಲಿ, ಗ್ರಾಹಕರು ಸೆಪ್ಟೆಂಬರ್ 1, 2025 ರ ನಂತರ ಹಾಲ್ಮಾರ್ಕಿಂಗ್ ಮಾಡಿದ ಬೆಳ್ಳಿ ಆಭರಣಗಳ ಪ್ರಕಾರ, ಶುದ್ಧತೆಯ ದರ್ಜೆ, ಹಾಲ್ಮಾರ್ಕಿಂಗ್ ದಿನಾಂಕ, ಪರೀಕ್ಷಾ ಕೇಂದ್ರದ ವಿವರಗಳು ಮತ್ತು ಆಭರಣ ನೋಂದಣಿ ಸಂಖ್ಯೆಯನ್ನು ಬಿಐಎಸ್ ಕೇರ್ ಮೊಬೈಲ್…













