Author: kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಿಗಣಿ ಪೊಲೀಸರು ಪ್ರಮುಖ ಆರೋಪಿ ಫರ್ವೇಜ್ ನನ್ನು ಬಂಧಿಸಿದ್ದಾರೆ. ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಮೆಹದಿ ಪೌಂಡೇಷನ್ ಸಂಸ್ಥೆಯ ಪ್ರಮುಖ ನಾಯಕನಾಗಿದ್ದ ಆರೋಪಿ ಫರ್ವೇಜ್, ಪಾಕಿಸ್ತಾನದ ಪ್ರಜೆಗಳು ಭಾರತಕ್ಕೆ ಬರಲು ನೆರವು ನೀಡಿದ್ದ. ಬಂಧಿತರ ಪಾಕ್ ಪ್ರಜೆಗಳಿಗೆ ಭಾರತೀಯ ದಾಖಲೆಗಳನ್ನು ಮಾಡಿಸಿಕೊಟ್ಟಿದ್ದ. ಯೂನಸ್ ಆಲ್ಗೋರ್ ಧರ್ಮಗುರುವಿನ ಪ್ರಚಾರಕನಾಗಿದ್ದ ಫರ್ವೇಜ್, ಯೂನಸ್ ಆಲ್ಗೋರ್ ಸೂಚನೆಯಂತೆ ಪಾಕ್ ಪ್ರಜೆಗಳನ್ನು ಭಾರತಕ್ಕೆ ಕರೆಸಿದ್ದ ಎನ್ನಲಾಗಿದೆ. ಸದ್ಯ ಫರ್ವೇಜ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿ ಫರ್ವೆಜ್ ನ ಸಂಪರ್ಕದಲ್ಲಿರುವ ಮತ್ತಷ್ಟು ಮಂದಿಗೆ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

Read More

ನವದೆಹಲಿ : ಅಪ್ರಾಪ್ತರು ವಾಹನ ಚಲಾಯಿಸುವ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ನಿಯಮಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇನ್ನು ಮುಂದೆ ಅಂತಹ ವಾಹನಗಳ ಗರಿಷ್ಠ ವೇಗದ ಮಿತಿಯನ್ನು ಗಂಟೆಗೆ 25 ಕಿಲೋಮೀಟರ್ ಎಂದು ನಿಗದಿಪಡಿಸಲಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಮೋಟಾರು ವಾಹನ ಕಾನೂನಿನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುತ್ತಿದೆ. ಅಪ್ರಾಪ್ತ ವಯಸ್ಕರಿಗೆ ವಾಹನದ ಎಂಜಿನ್ ಸಾಮರ್ಥ್ಯವನ್ನು 50 ಸಿಸಿ ಮತ್ತು ಮೋಟಾರ್ ಶಕ್ತಿಯನ್ನು ಗರಿಷ್ಠ 1,500 ವ್ಯಾಟ್‌ಗಳಿಗೆ ಸೀಮಿತಗೊಳಿಸಲು ಸಚಿವಾಲಯ ನಿರ್ಧರಿಸಿದೆ. ಅಸ್ತಿತ್ವದಲ್ಲಿರುವ ಕಾನೂನಿಗೆ 67 ತಿದ್ದುಪಡಿಗಳನ್ನು ಸಚಿವಾಲಯ ಪ್ರಸ್ತಾಪಿಸಿದ್ದು, ಅಕ್ಟೋಬರ್ 15 ರವರೆಗೆ ಜನರು ಸಲಹೆಗಳನ್ನು ನೀಡಬಹುದು. ಈ ತಿದ್ದುಪಡಿಗಳಿಗೆ ಸಂಬಂಧಿಸಿದ ಮಸೂದೆಯನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಬಹುದು. ಪ್ರಸ್ತಾವನೆಯ ಪ್ರಕಾರ, 16 ವರ್ಷಗಳನ್ನು ಪೂರೈಸಿದ ಹದಿಹರೆಯದವರು ಸಾರ್ವಜನಿಕ ಸ್ಥಳಗಳಲ್ಲಿ ಶುದ್ಧ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಓಡಿಸಲು ಅನುಮತಿಸಲಾಗುವುದು, ಅವರು ನಿಗದಿತ ವೇಗದ ಮಿತಿ ಮತ್ತು ಎಂಜಿನ್ ಶಕ್ತಿಯ ಮಿತಿಯನ್ನು ಅನುಸರಿಸಬೇಕು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ…

Read More

ಬೆಂಗಳೂರು: ಅಕ್ರಮ ನೋಂದಣಿ ಹಾಗೂ ತೆರಿಗೆ ವಂಚನೆಯನ್ನು ತಡೆಯುವ ಸಲುವಾಗಿ ನೋಂದಣಿ ಸಮಯದಲ್ಲಿ ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮವನ್ನು ಜಾರಿಗೊಳಿಸಲಾಗಿದೆ. ನಿಜವಾದ ಸ್ವತ್ತಿಗೆ ಖಾತೆ ಇಲ್ಲದಿದ್ದರೂ ಕೆಲವರು ಕೇವಲ ಪೇಪರ್ನಲ್ಲಿ ಖಾತೆ ಪ್ರಿಂಟ್ ಮಾಡಿಸಿ ಅದರ ಮೂಲಕ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯತ್-ಬಿಬಿಎಂಪಿ ನಗರಸಭೆ ಖಾತೆ ಮಾಡಿಸದಿದ್ದರೂ ಇಂತಹ ಬೋಗಸ್ ಖಾತೆ ಮೂಲಕ ಅಕ್ರಮ ನೋಂದಣಿ ಮಾಡಲಾಗುತ್ತಿದೆ. ಇದರಿಂದ ಹಲವು ಅಮಾಯಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಹೀಗಾಗಿ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ನಿಮ್ಮ ಆಸ್ತಿಗಳನ್ನು ಮಾರಲು ಅಥವಾ ಯಾವುದೇ ಆಸ್ತಿ ವಹಿವಾಟಿಗಾಗಿ ಈಗಲೇ ನಿಮ್ಮ ಇ-ಖಾತಾ ಪಡೆಯಿರಿ. * ವಂಚನೆಯುಕ್ತ, ಅಕ್ರಮ ನೋಂದಣಿಗಳು ಮತ್ತು ನಕಲಿ ಖಾತೆಗಳಿಗೆ ತಡೆ * ಒಂದೇ ಆಸ್ತಿಯ ಮೇಲಿನ ಬಹು-ನೋಂದಣಿಗಳಿಗೆ ಕಡಿವಾಣ * ಆಸ್ತಿ ವಿವಾದಗಳ ನಿಯಂತ್ರಣ * ತ್ವರಿತ, ಪಾರದರ್ಶಕ ವಹಿವಾಟು * ಮುಗ್ಗ ಖರೀದಿದಾರರಿಗೆ ರಕ್ಷಣೆ

Read More

ತಿರುಪತಿ : ತಿರುಪತಿಯ ರೇಣಿಗುಂಟಾ ವಿಮಾನ ನಿಲ್ದಾಣಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಮಾಡಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪರಿಚಿತ ವ್ಯಕ್ತಿಗಳು ಹಿಂದಿಯಲ್ಲಿ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. ಈ ಕುರಿತು ತಿರುಪತಿ ವಿಮಾನ ನಿಲ್ದಾಣದ ಸಿಐಎಸ್‌ಎಫ್‌ ಅಪರಾಧ ಗುಪ್ತಚರ ವಿಭಾಗದ ಎಸ್‌ಎಸ್‌ ನಾಗರಾಜು ಎರ್ಪೇಡು ಅವರಿಗೆ ದೂರು ನೀಡಲಾಗಿದೆ. ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ತಿರುಮಲ ದೇಗುಲದಲ್ಲಿರುವ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ದೇಶ ವಿದೇಶಗಳಿಂದಲೂ ಭಕ್ತರು ತಿರುಪತಿಗೆ ಬರುತ್ತಾರೆ. ರೇಣಿಗುಂಟಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಕ್ತರು ತಿರುಪತಿಯಿಂದ ರಸ್ತೆ ಮಾರ್ಗವಾಗಿ ತಿರುಮಲ ತಲುಪಲಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು, ರಾಜಕಾರಣಿಗಳು, ವಿಐಪಿಗಳು ಮತ್ತು ವಿವಿಐಪಿಗಳು ತಿರುಪತಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಾರೆ. ಅಲ್ಲಿಂದ ತಿರುಮಲಕ್ಕೆ ತೆರಳಿ ಸ್ವಾಮಿಯ ದರ್ಶನ ಪಡೆಯುತ್ತಾರೆ. ಇತ್ತೀಚೆಗೆ ತಿರುಮಲ ಲಡ್ಡುವಿನಲ್ಲಿ ಕಲಬೆರಕೆ ತುಪ್ಪದ ವಿಚಾರ ದೇಶಾದ್ಯಂತ ಸಂಚಲನ ಮೂಡಿಸಿದೆ. ಸುಪ್ರೀಂ ಕೋರ್ಟ್ ಕೂಡ ಸ್ಪಂದಿಸಿ ತನಿಖೆಗೆ…

Read More

ನವದೆಹಲಿ : ಅನೇಕ ಜನರಿಗೆ ಆಸ್ತಿಗೆ ಸಂಬಂಧಿಸಿದ ನಿಯಮಗಳು ತಿಳಿದಿಲ್ಲ ಮತ್ತು ಅದಕ್ಕಾಗಿಯೇ ಅವರು ಕಾಲಾನಂತರದಲ್ಲಿ ದೊಡ್ಡ ಸಮಸ್ಯೆಗಳಿಗೆ ಸಿಲುಕುತ್ತಾರೆ. ಅಂತೆಯೇ, ಆಸ್ತಿಯ ಸ್ವಾಧೀನಕ್ಕೆ ಸಂಬಂಧಿಸಿದ ವಿವಾದವು ಸುಪ್ರೀಂ ಕೋರ್ಟ್‌ಗೆ ಬಂದಿದ್ದು, ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಯಾವ ಸಂದರ್ಭಗಳಲ್ಲಿ ಆಸ್ತಿಯ ಮೇಲೆ ತನ್ನ ಮಾಲೀಕತ್ವದ ಹಕ್ಕುಗಳನ್ನು ಸ್ವಾಧೀನಪಡಿಸಿಕೊಳ್ಳಬಹುದು ಎಂಬುದನ್ನು ಸುಪ್ರೀಂ ಕೋರ್ಟ್ ನಿರ್ಧಾರದಲ್ಲಿ ವಿವರಿಸಿದೆ. ಸುಪ್ರೀಂ ಕೋರ್ಟ್‌ನಿಂದ ಈ ಆದೇಶವನ್ನು ಹೊರಡಿಸಲಾಗಿದ್ದು, ಖಾಸಗಿ ಮತ್ತು ಸರ್ಕಾರಿ ಆಸ್ತಿಗಳೆರಡನ್ನೂ ಉಲ್ಲೇಖಿಸಲಾಗಿದೆ. ಹೆಚ್ಚಿನ ಜನರು ತಮ್ಮ ಮನೆಗಳನ್ನು ಬಾಡಿಗೆಗೆ ತೆಗೆದುಕೊಳ್ಳುತ್ತಾರೆ. ಮನೆ ಬಾಡಿಗೆಯು ತಾತ್ಕಾಲಿಕ ಆದಾಯವಾಗಿದೆ, ಆದ್ದರಿಂದ ಜನರು ತಮ್ಮ ಆಸ್ತಿಯಲ್ಲಿ ಹೂಡಿಕೆ ಮಾಡುತ್ತಾರೆ. ಜನರು ಹೆಚ್ಚಿನ ಮನೆ, ಅಂಗಡಿ, ಆಸ್ತಿ ಮತ್ತು ಭೂಮಿಯನ್ನು ಖರೀದಿಸಲು ಬಯಸುತ್ತಾರೆ. ಮನೆ, ಅಂಗಡಿ, ಆಸ್ತಿ ಇತ್ಯಾದಿಗಳನ್ನು ಖರೀದಿಸಲು ಅವರು ಬಯಸಿದ ತಕ್ಷಣ ಅದನ್ನು ಬಾಡಿಗೆಗೆ ಇಡುತ್ತಾರೆ. ಮಾಲೀಕನು ತನ್ನ ಬಾಡಿಗೆ ಆಸ್ತಿಗೆ ಬಾಡಿಗೆಯನ್ನು ತೆಗೆದುಕೊಳ್ಳದೆ ವಿದೇಶಕ್ಕೆ ಹೋಗುತ್ತಾನೆ ಅಥವಾ ದೇಶದಲ್ಲಿ ಉಳಿದುಕೊಂಡು ತನ್ನ ಕೆಲಸದಲ್ಲಿ ನಿರತನಾಗಿರುತ್ತಾನೆ…

Read More

ಬೆಂಗಳೂರು : ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಅಕ್ಟೋಬರ್‌ 9ರಿಂದ 12ರ ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಅ.13 ಮತ್ತು 14ರಂದು ವಿವಿಧ ಪ್ರದೇಶಗಳಿಂದ ಬೆಂಗಳೂರಿಗೆ ಈ ವಿಶೇಷ ಬಸ್‌ಗಳ ಸಂಚಾರ ಇರಲಿದೆ. ಕರ್ನಾಟಕ ಸಾರಿಗೆ (ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ಗಳ ಸಂಚಾರ ಇರಲಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಕೊಲ್ಲೂರು, ಗೋಕರ್ಣ, ವಿವಿದ ಜಿಲ್ಲಾ ಕೇಂದ್ರಗಳು ಹಾಗೂ ನೆರೆ ರಾಜ್ಯಗಳ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪುಣೆ, ಎರ್ನಾಕುಲಂ, ಪಾಲ್‌ಘಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಬಸ್‌ಗಳ ಕಾರ್ಯಾಚರಣೆ ಇರಲಿದೆ. 660 ವಿಶೇಷ ಬಸ್‌: ಬೆಂಗಳೂರಿನ…

Read More

ಧಾರವಾಡ : ಬೆಂಗಳೂರಿನಲ್ಲಿ 10 ಸಾವಿರ ವಿದೇಶಿಗರು ವಾಸಿಸುತ್ತಿದ್ದು, ಆಫ್ರಿಕಾ ಪ್ರಜೆಗಳ ಮೇಲೆ ಹೆಚ್ಚು ನಿಗಾ ಇಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರಕಾರವು ಡ್ರಗ್ಸ ವಿರುದ್ಧ ಸಮರ ಸಾರಿದ್ದು ಸ್ವತಃ ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಈ ಬಗ್ಗೆ ವಿಶೇಷ ಕಾರ್ಯಪಡೆ ರಚಿಸಿದ್ದಾರೆ. ಕಳೆದೊಂದು ವರ್ಷದಲ್ಲಿ 150 ಕೋಟಿ ರೂ. ಡ್ರಗ್ಸ ಬರುತ್ತಿದ್ದು ಸಾಕಷ್ಟು ಎಚ್ಚರದ ಕ್ರಮಗಳನ್ನು ವಹಿಸಲಾಗುತ್ತಿದೆ. ಈಗಾಗಲೇ ಹೈಡ್ರೊ ಗಾಂಜಾ ಎಲ್ಲೆಂದರಲ್ಲಿ ನಾಲ್ಕು ಕೋಣೆಗಳಲ್ಲಿ ಬೆಳೆಯಲಾಗುತ್ತಿದ್ದು ಇದನ್ನು ಕಂಡು ಹಿಡಿಯುವುದು ಸವಾಲಾಗಿದೆಯೆಂದರು. ಸಾಕಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ 10 ಸಾವಿರ ವಿದೇಶಿಗರು ವಾಸಿಸುತ್ತಿದ್ದು ಆಫ್ರಿಕಾ ಪ್ರಜೆಗಳ ಮೇಲೆ ಹೆಚ್ಚು ನಿಗಾ ಇಡಲಾಗಿದೆ. ಕಳೆದೊಂದು ವರ್ಷದಲ್ಲಿ ಡ್ರಗ್ಸ ಧಂದೆಯಲ್ಲಿ ತೊಡಗಿದ ನೂರಾರು ವಿದ್ಯಾರ್ಥಿಗಳನ್ನು ಅವರವರ ದೇಶಕ್ಕೆ ವಾಪಸ್ ಕಳಸಲಾಗಿದೆಂದು ತಿಳಿಸಿದರು. ನಂತರ ವಿಧಿ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಈ ವಿದ್ಯಾರ್ಥಿಗಳಿಗೆ ಬರುವ ದಿನಮಾನಗಳಲ್ಲಿ ವಿಫುಲ ಅವಕಾಶಗಳಿವೆ…

Read More

ಧಾರವಾಡ : ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ, ಸೈಬರ್ ಆರ್ಥಿಕ ಹಾಗೂ ನಾರ್ಕೊಟಿಕ್ಸ) ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವರಾದ ಜಿ. ಪರಮೇಶ್ವರ ಅವರು ಇಂದು ತಿಳಿಸಿದರು. ರಾಷ್ಟ್ರೀಯ ವಿಧಿ ವಿಜ್ಞಾನ ಸಂಸ್ಥೆಯ ವಿವಿಧ ವಿಭಾಗಗಳಿಗೆ ಹಾಗೂ ಪ್ರಯೋಗಾಲಯಗಳಿಗೆ ಭೇಟಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಎಲ್ಲೆಡೆ ಯಾವುದೇ ಅಡೆತಡೆಗಳಿಲ್ಲದೇ ರಾಜ್ಯ, ದೇಶ, ವಿದೇಶದಾದ್ಯಂತ ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಆಧುನಿಕ ಅಪರಾಧ ತನಿಖೆಗಳಿಗೆ ತಕ್ಕಂತೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಯಾವುದೇ ಸೈಬರ್ ಅಪರಾಧವಾದರೆ ಹೊಸ ಕಾನೂನುಗಳನ್ವಯ ತನಿಖೆ ನಡೆಸಬೇಕಾಗುತ್ತದೆ ಎಂದರು. ಪ್ರತಿ ಜಿಲ್ಲೆಗೊಂದರಂತೆ ರಾಜ್ಯದಲ್ಲಿ ಒಟ್ಟು 43 ಸೆನ್ ಪೊಲೀಸ್ ಠಾಣೆಗಳಿದ್ದು, ಸದ್ಯ ಡಿವೈಎಸ್ಪಿ ಅಧಿಕಾರಿಗಳು ಇರುತ್ತಾರೆ. ಮುಂದಿನ ದಿನಗಳಲ್ಲಿ ಎಸ್.ಪಿ ರ್ಯಾಂಕ್ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ತಿಳಿಸಿದರು. ಸೆನ್ ಠಾಣೆಯ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ವಿಶೇಷ ರೀತಿಯ ತರಬೇತಿಗಳನ್ನು ರೂಪಿಸಲಾಗುವುದು. ಈ…

Read More

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಮ್ ನಾಪತ್ತೆಯಾಗಿದ್ದು, ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಕಾರು ಪತ್ತೆಯಾಗಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಮನೆಯಿಂದ ಹೋಗಿರುವ ಮುಮ್ತಾಜ್ ಅವರ ಕಾರು ಕುಳೂರಿನ ಸೇತುವೆ ಮೇಲೆ ಪತ್ತೆಯಾಗಿದ್ದು, ಸ್ಥಳಕ್ಕೆ ಮೊಯಿದ್ದೀನ್ ಕುಟುಂಬಸ್ಥರು ಆಗಮಿಸಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮುಮ್ತಾಜ್ ಅವರ ಕಾರು ಸೇತುವೆ ಮೇಲೆ ಪತ್ತೆಯಾಗಿದ್ದು, ಕಾರು ಡ್ಯಾಮೇಜ್ ಆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅಗರ್ವಾಲ್ ಭೇಟಿ ನೀಡಿದ್ದಾರೆ. ನದಿಯಲ್ಲಿ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ತಂಡಗಳಿಂದ ಪರಿಶೀಲನೆ ನಡೆಸಲಾಗಿದೆ.

Read More

ಬಹುತೇಕ ಮನೆಗಳಲ್ಲಿ ಇಡೀ ಕುಟುಂಬ ಒಂದೇ ಸೋಪಿನಲ್ಲಿ ಸ್ನಾನ ಮಾಡುತ್ತಾರೆ. ನಂತರ ಯಾರಾದರೂ ಅನಾರೋಗ್ಯ ಅಥವಾ ಆರೋಗ್ಯವಂತರಾಗಿದ್ದರೂ, ಎಲ್ಲರಿಗೂ ಒಂದೇ ಸಾಬೂನು ಬಳಸಲಾಗುತ್ತದೆ. ಅದೇ ಸೋಪ್ ಅನ್ನು ಬಳಸುವುದರಿಂದ ಸೋಂಕು ಒಂದು ದೇಹದಿಂದ ಇನ್ನೊಂದಕ್ಕೆ ಹರಡಬಹುದು ಎಂದು ಹಲವರು ಭಯಪಡುತ್ತಾರೆ. ಅದಕ್ಕಾಗಿಯೇ ಸ್ನಾನದ ಸೋಪನ್ನು ಹಂಚಿಕೊಳ್ಳದ ಕೆಲವರು ಇದ್ದಾರೆ. ಆರೋಗ್ಯ ತಜ್ಞರ ಪ್ರಕಾರ ಸ್ನಾನ ಮಾಡುವಾಗ ಪರಸ್ಪರ ಹಂಚುವ ಸಾಬೂನಿನಿಂದ ಕೋಲಿ, ಸಾಲ್ಮೊನೆಲ್ಲಾ, ಶಿಗೆಲ್ಲದಂತಹ ಬ್ಯಾಕ್ಟೀರಿಯಾಗಳು ಬೆಳೆಯುವ ಭಯವಿದೆ. ಆದರೆ ರೋಗ ಹರಡುವ ಭೀತಿ ಇದೆಯೇ? ಸೋಪಿನ ಬಾರ್ ಮೇಲೆ ಗಂಭೀರವಾದ ಬ್ಯಾಕ್ಟೀರಿಯಾವಿದೆ ಗಂಭೀರವಾದ ಬ್ಯಾಕ್ಟೀರಿಯಾಗಳು ಸೋಪಿನ ಬಾರ್ನಲ್ಲಿ ಉಳಿಯುತ್ತವೆ. ‘ಇಂಡಿಯನ್ ಜರ್ನಲ್ ಆಫ್ ಡೆಂಟಲ್ ರಿಸರ್ಚ್’ ಪ್ರಕಾರ, 2006 ಏಪ್ರಿಲ್-ಜೂನ್ ಅವಧಿಯಲ್ಲಿ, 2-5 ವಿವಿಧ ರೀತಿಯ ಬ್ಯಾಕ್ಟೀರಿಯಾಗಳು ಸಾಬೂನಿನ ಮೇಲೆ ಸಂಗ್ರಹವಾಗುತ್ತವೆ. 2015 ರಲ್ಲಿ ಅಮೇರಿಕನ್ ಜರ್ನಲ್ ಆಫ್ ಇನ್ಫೆಕ್ಷನ್ ಕಂಟ್ರೋಲ್ ಆಸ್ಪತ್ರೆಯೊಂದರಲ್ಲಿ ನಡೆಸಿದ ಸಂಶೋಧನೆಯ ಪ್ರಕಾರ, 62 ಪ್ರತಿಶತದಷ್ಟು ಸೋಪ್ಗಳು ಕೊಳಕು ಎಂದು ಕಂಡುಬಂದಿದೆ. 3 ಪ್ರತಿಶತ ದ್ರವ…

Read More