Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ:ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲಾದ ವಸತಿ ಆವರಣಗಳನ್ನು ಸೀಲ್ ಮಾಡಲು ನ್ಯಾಯಾಲಯಕ್ಕೆ ಸಹಾಯ ಮಾಡುವ ಸಮಿತಿಗೆ ನೋಟಿಸ್ ನೀಡಿರುವ ಬಗ್ಗೆ ಸುಪ್ರೀಂ ಕೋರ್ಟ್ ಆದಾಯ ತೆರಿಗೆ ಇಲಾಖೆಯಿಂದ ಪ್ರತಿಕ್ರಿಯೆ ಕೋರಿದೆ ಮತ್ತು ವಿವರಣೆಗಾಗಿ ಸಂಬಂಧಪಟ್ಟ ಅಧಿಕಾರಿಗೆ ಸಮನ್ಸ್ ನೀಡಿದೆ ಮಾಜಿ ಅಧಿಕಾರಿ ವಿಜಯ್ ಚಿಬ್ಬರ್ ಮತ್ತು ಮೇಜರ್ ಜನರಲ್ (ನಿವೃತ್ತ) ಸೋಮ್ ಜಿಂಗಾನ್ ಅವರನ್ನು ಒಳಗೊಂಡ ಭುರೆ ಲಾಲ್ ನೇತೃತ್ವದ ಮೂವರು ಸದಸ್ಯರ ಸಮಿತಿಯ ವರದಿಯನ್ನು ಪರಿಗಣಿಸಿದ ನಂತರ ನ್ಯಾಯಮೂರ್ತಿಗಳಾದ ಎ.ಎಸ್.ಓಕಾ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠ ಸೋಮವಾರ ಈ ನಿರ್ದೇಶನಗಳನ್ನು ನೀಡಿದೆ. ತನ್ನದೇ ಆದ ಯಾವುದೇ ಗಳಿಕೆಯನ್ನು ಹೊಂದಿಲ್ಲ ಎಂದು ಸಮಿತಿ ನ್ಯಾಯಾಲಯಕ್ಕೆ ತಿಳಿಸಿದೆ. ಆಸ್ತಿಗಳ ಶಾಶ್ವತ ಡಿ-ಸೀಲ್ಗಾಗಿ ಸಂಗ್ರಹಿಸಿದ ಶುಲ್ಕವನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ ಠೇವಣಿ ಇಡಲಾಗುತ್ತದೆ ಎಂದು ಅದು ಹೇಳಿದೆ. ಸಂಬಂಧಪಟ್ಟ ಆದಾಯ ತೆರಿಗೆ ಅಧಿಕಾರಿಯ ವಿರುದ್ಧ ಕೆಲವು ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ. ಅಮಿಕಸ್ ಕ್ಯೂರಿಯಾಗಿ ನ್ಯಾಯಾಲಯಕ್ಕೆ ಸಹಾಯ ಮಾಡುತ್ತಿರುವ ಹಿರಿಯ ವಕೀಲ…
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾನು ಮೊದಲು ಹೈಕೋರ್ಟ್ ತೀರ್ಪು ಏನಿದೆ ಎಂದು ತಿಳಿದುಕೊಳ್ಳಬೇಕು. ಸಿಎಂ ಸಿದ್ದರಾಮಯ್ಯ ಮೇಲೆ, ಕುಟುಂಬದ ಮೇಲೆ ದೊಡ್ಡ ಷಡ್ಯಂತ್ರ ಮಾಡಿದ್ದಾರೆ. ಯಾವುದೇ ತನಿಖೆ ಮಾಡಿದ್ರೂ ಸಿಎಂ ಸಿದ್ದರಾಮಯ್ಯ ಕ್ಲೀನ್ ಆಗಿ ಹೊರಬರ್ತಾರೆ. ಅವರು ಮಾಡಿರುವ ಕಾರ್ಯಕ್ರಮ, ಕೊಡುಗೆ ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದ್ದಾರೆ. ಕೋರ್ಟ್ ಆದೇಶದ ಪ್ರತಿ ನೋಡಿ ನಾನು ಪ್ರತಿಕ್ರಿಯೆ ನೀಡುತ್ತೇನೆ. ಸಿಎಂ ಹಾಗೂ ಅವರ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಇದರಿಂದ ಹೊರಗೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ಇಂದು ಹೈಕೋರ್ಟ್ ಮುಡಾ ಹಗರಣ ಸಂಬಂಧ ಮಹತ್ವದ ತೀರ್ಪು ನೀಡಿದ್ದು, ಹೈಕೋರ್ಟ್ ತೀರ್ಪಿನಲ್ಲಿ ಸಿಎಂ ಕುಟುಂಬಸ್ಥರೇ ಫಲಾನುಭವಿಗಳಾಗಿದ್ದಾರೆ. ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಗೆ ಖಾಸಗಿ ದೂರುದಾರರೇ ಅನುಮತಿ ಕೊರಬಹುದು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 17A ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸು ತಿರುಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ತಮ್ಮ ವಿವೇಚನೆ ಬಳಸಿದ್ದಾರೆ. ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. 17A ಅಡಿಯಲ್ಲಿ ಆದೇಶ ಸಮರ್ಪಕವಾಗಿದೆ. ಸಿಎಂ ಸಲ್ಲಿರುವ ಅರ್ಜಿ ವಜಾಗೊಳಿಸಿ ಆದೇಶಿಸಲಾಗಿದೆ. ಸಿಎಂ ಎತ್ತಿದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.
ಬೆಂಗಳೂರು :ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಪರಿಶೀಲಿಸಿ ವರದಿ ನೀಡಲು ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸದಿರುವುದು, ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸುವುದು ಹಾಗೂ ಪದವಿ ಪೂರೈಸಿದ ಶಿಕ್ಷಕರನ್ನು 6 ರಿಂದ 8ಕ ಸೇವಾ ನಿರತ ಪದವೀಧರ ಶಿಕ್ಷಕರೆಂದು ಒಂದು ಬಾರಿ (One Time) ವದನಾಮೀಕರಿಸುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರು ಮೇಲೆ ಓದಲಾದ ವತ್ರದಲ್ಲಿ ಕೋರಿರುತ್ತಾರೆ. ಮೇಲ್ಕಂಡ ಬೇಡಿಕೆಗಳ ಕುರಿತು ನಿಯಮಾನುಸಾರ ಕೂಲಂಕವವಾಗಿ ವರಿಶೀಲಿಸಿ ಸದರಿ ಬೇಡಿಕೆಗಳನ್ನು ಪರಿಗಣಿಸಲು ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ಅವಕಾಶವಿರುವ ಕುರಿತು ಹಾಗೂ ಇದರಿಂದ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಉಂಟಾಗಬಹುದಾದ ವರಿಣಾಮಗಳು ಮತ್ತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಗ್ರವಾದ ವರದಿ ನೀಡಲು ಸಮಿತಿಯನ್ನು ರಚಿಸಲು ಸರ್ಕಾರವು ತೀರ್ಮಾನಿಸಿ…
ನವದೆಹಲಿ: ಸೈನಿಕ ಶಾಲೆಗಳು ಸಮಾಜಕ್ಕೆ ಮಾರ್ಗದರ್ಶನ ನೀಡುವಲ್ಲಿ ಮತ್ತು ಶಿಸ್ತು, ದೇಶಭಕ್ತಿ ಮತ್ತು ಧೈರ್ಯದಂತಹ ವಿದ್ಯಾರ್ಥಿ ಮೌಲ್ಯಗಳನ್ನು ಬೆಳೆಸುವಲ್ಲಿ ಹೊಸ ವೇಗವನ್ನು ನೀಡುತ್ತವೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೋಮವಾರ ಹೇಳಿದ್ದಾರೆ ಶ್ರೀ ಭವಾನಿ ನಿಕೇತನ ಸೈನಿಕ ಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. “ಸೈನಿಕ ಶಾಲೆಗಳು ವಿದ್ಯಾರ್ಥಿಗಳಿಗೆ ಪುಸ್ತಕ ಜ್ಞಾನವನ್ನು ನೀಡುವುದಲ್ಲದೆ, ಅವರಲ್ಲಿ ಮೌಲ್ಯಗಳ ಬಗ್ಗೆ ಬದ್ಧತೆಯನ್ನು ಬೆಳೆಸಲು ಪ್ರಯತ್ನಿಸುತ್ತವೆ. ಸೈನಿಕ ಶಾಲೆಗಳು ತಮ್ಮ ವಿದ್ಯಾರ್ಥಿಗಳಲ್ಲಿ ಶಿಸ್ತು, ದೇಶಭಕ್ತಿ ಮತ್ತು ಧೈರ್ಯದಂತಹ ಮೌಲ್ಯಗಳನ್ನು ಬೆಳೆಸುತ್ತವೆ” ಎಂದು ರಾಜನಾಥ್ ಸಿಂಗ್ ಹೇಳಿದರು. “ಈ ಮೌಲ್ಯಗಳಿಂದಾಗಿ ವಿದ್ಯಾರ್ಥಿಗಳ ವ್ಯಕ್ತಿತ್ವದ ಸರ್ವಾಂಗೀಣ ಅಭಿವೃದ್ಧಿಯು ಸ್ವಾಭಾವಿಕವಾಗಿ ದೇಶವನ್ನು ಮುಂದೆ ಕೊಂಡೊಯ್ಯಲು ಅವರನ್ನು ಪ್ರೇರೇಪಿಸುತ್ತದೆ” ಎಂದು ರಕ್ಷಣಾ ಸಚಿವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಹೊಸ ಶಿಕ್ಷಣ ನೀತಿಯ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡುವ ಪ್ರಯತ್ನಗಳಿಗೆ ಹೊಸ ಆವೇಗವನ್ನು ನೀಡುವಲ್ಲಿ ಸೈನಿಕ ಶಾಲೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ರಾಜನಾಥ್ ಸಿಂಗ್ ವಿಶ್ವಾಸ…
ಸಂಪತ್ತು ವೃದ್ಧಿಯಾಗಲು, ಸುಖವಾಗಿರಲು, ಮನೆಯಲ್ಲಿನ ಹಣದ ಸಮಸ್ಯೆ ದೂರವಾಗಲು, ಸಾಲ ಬಾಧೆ ದೂರವಾಗಿ ಜೀವನದಲ್ಲಿ ಪ್ರಗತಿ ಹೊಂದಲು ತಾಯಿ ಮಹಾಲಕ್ಷ್ಮಿಯ ಕೃಪೆ ಬಹಳ ಮುಖ್ಯ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಮಾತೆ ಮಹಾಲಕ್ಷ್ಮಿಗೆ ಸರಳ ಪೂಜೆ ಮಾಡಿದರೆ ಮನೆಯಲ್ಲಿ ಹಣದ ಹರಿವು ಹೆಚ್ಚಾಗುತ್ತದೆ. ಶುಕ್ರವಾರ ಶುಕ್ರ ಹೋರೈಯಂದು ಈ ಪೂಜೆಯನ್ನು ಮಾಡುವುದರಿಂದ ಉತ್ತಮ ಪ್ರಗತಿಯ ಲಾಭಗಳು ದ್ವಿಗುಣಗೊಳ್ಳುತ್ತವೆ. ತಾಯಿ ಮಹಾಲಕ್ಷ್ಮಿ ನಮ್ಮ ಮನೆಯಲ್ಲಿ ಉಳಿಯುವಂತೆ ಮಾಡಲು ನಾವು ಮಾಡಬೇಕಾಗಿರುವುದು ಈ ಸರಳ ಹಂತಗಳನ್ನು ಅನುಸರಿಸಿ. ಹಣದ ಹರಿವು ಹೆಚ್ಚಿಸಲು ಪೂಜೆ ನಡೆಸಬೇಕು ಶುಕ್ರ ಹೋರಾವಾದ 6 ರಿಂದ 7 ಗಂಟೆಯ ನಡುವಿನ ಬ್ರಾಹ್ಮೀ ಮುಹೂರ್ತದ ಸಮಯದಲ್ಲಿ ಈ ನಿರ್ದಿಷ್ಟ ಪೂಜೆಯನ್ನು ಮಾಡುವುದು ಉತ್ತಮ. ತಾಯಿ ಮಹಾಲಕ್ಷ್ಮಿಗೆ ಬಿಳಿ ಬಣ್ಣದ ಹೂವುಗಳನ್ನು ಕಲ್ಕಂಡು ಪೊಂಗಲ್ ಅಥವಾ ಬಿಳಿ ಪೊಂಗಲ್ ಮಾಡಲು ಬಳಸಬಹುದು. ಈ ಪವಿತ್ರ ಕುಂಕುಮವನ್ನು ಬೆಳ್ಳಿಯ…
ತಿರುವನಂತಪುರಂ: ನಟಿಯೊಬ್ಬಳು ತನ್ನ ವಿರುದ್ಧ ದಾಖಲಿಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ ಈ ವರ್ಷದ ಆಗಸ್ಟ್ನಲ್ಲಿ ನಟಿಯೊಬ್ಬರು ಮಾಡಿದ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದಿಕ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ದೂರಿನ ಆಧಾರದ ಮೇಲೆ ತಿರುವನಂತಪುರಂ ಮ್ಯೂಸಿಯಂ ಪೊಲೀಸರು ಅತ್ಯಾಚಾರದ ಜಾಮೀನು ರಹಿತ ಅಪರಾಧದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಲೈಂಗಿಕ ಕಿರುಕುಳದ ಘಟನೆಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡಕ್ಕೆ ಅವರು ತಮ್ಮ ಹೇಳಿಕೆಯನ್ನು ನೀಡಿದ್ದರು. ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಸಿದ್ದೀಕ್ ಅವರು ಎಎಂಎಂಎ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಕಳೆದ ಐದು ವರ್ಷಗಳಿಂದ ನಟಿ 2016 ರಲ್ಲಿ ಚಿತ್ರಮಂದಿರದಲ್ಲಿ ಲೈಂಗಿಕ ದುರ್ವರ್ತನೆ ಮತ್ತು “ಮೌಖಿಕ ಲೈಂಗಿಕ ಆಫರ್” ಗಳ ಬಗ್ಗೆ ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಸಿದ್ದೀಕ್ ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ಹೇಳಿದ್ದಾರೆ ಎಂದು…
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಅರ್ಜಿ ವಜಾ ಬೆನ್ನಲ್ಲೇ ನಾಳೆಯೇ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ಇದೀಗ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು, ಇದೀಗ ದೂರುದಾರರಾದ ಟಿ.ಜೆ. ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಲಿದ್ದಾರೆ. ನಾಳೆ ಅಥವಾ ನಾಡಿದ್ದು ಈ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಒಂದು ವೇಳೆ ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಅನುಮತಿ ನೀಡಿದ್ರೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು…
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ತಡೆಗೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈಹಿನ್ನೆಲೆಯಲ್ಲಿ ಹಿರಿಯ ವಕೀಲ ಭಿಷೇಕ್ ಮನುಸಿಂಘ್ವಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹಾಗೂ ರಾಜ್ಯಪಾಲರ ನಿರ್ಧಾರ ಸರಿ ಇದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ.










