Author: kannadanewsnow57

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೇವಲ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೆ ಸುಪ್ರೀಂಕೋರ್ಟ್ ಆದೇಶದಂತೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅನುಮತಿ ಇದೆ. ಇದೆ ವೇಳೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ ಆದೇಶದಂತೆ ರಾತ್ರಿ 8 ರಿಂದ 10ರ ವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಸಂಬಂಧ ಬೆಂಗಳೂರು ಪೊಲೀಸ್‌ ಇಲಾಖೆಯು ಪಟಾಕಿ ಸಿಡಿಸುವ ಕುರಿತಾಗಿ ಮಾರ್ಗಸೂಚಿ ಪ್ರಕಟಿಸಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ 1) ಹಸಿರು ಪಟಾಕಿಗಳನ್ನೇ ಖರೀದಿಸಿ, ಪರಿಸರ ಸ್ನೇಹಿ ದೀಪಾವಳಿ ಆಚರಿಸಬೇಕು. 2) ಹಸಿರು ಪಟಾಕಿ ಸಂದರ್ಭದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಖಚಿತಪಡಿಸಿಕೊಳ್ಳಬೇಕು. 3) ಅಧಿಕೃತ ಪರವಾನಗಿ ಪಡೆದ ಅಂಗಡಿ / ಮಳಿಗೆಗಳಿಂದಲೇ ಪಟಾಕಿ ಖರೀದಿಸಬೇಕು. 4) ಕೆಲವು ಅಂಗಡಿಗಳಲ್ಲಿ ಅನಧಿಕೃತವಾಗಿ ಪಟಾಕಿ ಮಾರಾಟ ಮಾಡುವ ಸಾಧ್ಯತೆಯಿದ್ದು, ಅಂತಹ…

Read More

ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಹೈಕೋರ್ಟ್‌ ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್‌ ಆಫ್‌ ಇನ್‌ಕ್ವೈರಿ ಆ್ಯಕ್ಟ್‌ 1952ರ ಅನ್ವಯ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಸದರಿ ಆಯೋಗವು 3 ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಷರತ್ತು ವಿಧಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಂದಿನ ತೀರ್ಮಾನದವರೆಗೆ ರಾಜ್ಯ ಸರ್ಕಾರದ ಅಧೀನದ ಸಿವಿಲ್‌ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸದಿರುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ ಎಂದರು. ತೆಲಂಗಾಣ ಸರ್ಕಾರ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಡಿ ಅಧಿಕಾರಿಗಳು ತನಿಖೆಯನ್ನು ಕೈಗೊಂಡಿದ್ದಾರೆ. ಇದರ ಬೆನ್ನಲ್ಲೇ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಮುಡಾದಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಜೆಪಿ ಶಾಸಕ ಶ್ರೀವತ್ಸ ಅವರು ಈ ಕೂಡಲೇ 50:50 ಅನುಪಾತದಲ್ಲಿ ಪಡೆದಂತಹ ಎಲ್ಲಾ ಅಕ್ರಮ ಸೈಟ್ ಗಳನ್ನು ರದ್ದು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಶ್ರೀವತ್ಸ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಬಿಜೆಪಿ ಶಾಸಕ ಶ್ರೀವತ್ಸ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದು, ಮೈಸೂರು ನಗರಾಭಿವೃದ್ಧಿ ಪ್ರಧಿಕಾರದಲ್ಲಿ 50:50 ಅನುಪಾತದ ಸೈಟ್ ಹಿಂಪಡೆಯಲು ಕ್ರಮ ಕೈಗೊಳ್ಳಿ ಎಂದು ಸಿಎಂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಲಿಖಿತ ರೂಪದಲ್ಲಿ ಸೂಚನೆ ಕೊಟ್ಟಿದ್ದಾರೆ. ಹಾಗಾಗಿ ಸೈಟ್ ಪಡೆದವರಿಗೆ ಇದೀಗ ಟೆನ್ಶನ್ ಶುರುವಾಗಿದೆ.

Read More

ನವದೆಹಲಿ : ನವೆಂಬರ್ 1, 2024 ರಿಂದ ಪ್ಲಾಟ್‌ಫಾರ್ಮ್ ಎರಡು ಮಹತ್ವದ ನವೀಕರಣಗಳಿಗೆ ಒಳಗಾಗುವುದರಿಂದ UPI ಲೈಟ್ ಬಳಕೆದಾರರು ಕೆಲವು ಒಳ್ಳೆಯ ಸುದ್ದಿಗಳನ್ನು ಹೊಂದಿದ್ದಾರೆ. ಮೊದಲನೆಯದಾಗಿ, ವಹಿವಾಟನ್ನು ಹೆಚ್ಚಿಸಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚಿನ ನಿರ್ಧಾರಕ್ಕೆ ಧನ್ಯವಾದಗಳು, ಬಳಕೆದಾರರು ಹೆಚ್ಚಿನ ಪಾವತಿಗಳನ್ನು ಮಾಡಲು ಸಾಧ್ಯವಾಗುತ್ತದೆ. UPI ಲೈಟ್‌ಗೆ ಮಿತಿ. ಎರಡನೆಯದಾಗಿ, ಹೊಸ ಸ್ವಯಂ ಟಾಪ್-ಅಪ್ ವೈಶಿಷ್ಟ್ಯವು ನವೆಂಬರ್ 1 ರಂದು ಪ್ರಾರಂಭವಾಗಲಿದೆ. UPI ಲೈಟ್ ಬ್ಯಾಲೆನ್ಸ್ ಒಂದು ನಿರ್ದಿಷ್ಟ ಮಿತಿಗಿಂತ ಕಡಿಮೆಯಾದರೆ, ಸ್ವಯಂ ಟಾಪ್-ಅಪ್ ಸ್ವಯಂಚಾಲಿತವಾಗಿ ಹಣವನ್ನು ಸೇರಿಸುತ್ತದೆ, ಹಸ್ತಚಾಲಿತ ರೀಚಾರ್ಜ್‌ಗಳ ಅಗತ್ಯವನ್ನು ತೆಗೆದುಹಾಕುತ್ತದೆ. ಈ ವೈಶಿಷ್ಟ್ಯವು UPI ಲೈಟ್‌ನಲ್ಲಿ ತಡೆರಹಿತ ಪಾವತಿಗಳನ್ನು ಖಚಿತಪಡಿಸುತ್ತದೆ. ಸ್ವಯಂ ಟಾಪ್-ಅಪ್ ವೈಶಿಷ್ಟ್ಯವು ಯುಪಿಐ ಲೈಟ್ ಅನ್ನು ಸ್ಟ್ರೀಮ್‌ಲೈನ್ ಮಾಡಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ (ಎನ್‌ಪಿಸಿಐ) ನಡೆಯುತ್ತಿರುವ ಪ್ರಯತ್ನದ ಭಾಗವಾಗಿದೆ. UPI PIN ಇಲ್ಲದೆಯೇ ಸಣ್ಣ ವಹಿವಾಟುಗಳಿಗಾಗಿ ವಿನ್ಯಾಸಗೊಳಿಸಲಾದ UPI Lite, ಪ್ರಸ್ತುತ ಬಳಕೆದಾರರ ಬ್ಯಾಂಕ್ ಖಾತೆಗಳಿಂದ ಹಸ್ತಚಾಲಿತ ರೀಚಾರ್ಜ್‌ಗಳ ಅಗತ್ಯವಿದೆ.…

Read More

ಬೆಂಗಳೂರು: ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚಿಸಿರುವಂತೆ, ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷಗಳು ಸಂದಿರುವ ಈ ಶುಭ ಸಂದರ್ಭದಲ್ಲಿ ಎಲ್ಲಾ ಶಾಲೆಗಳಲ್ಲಿ ನವಂಬರ್-1 ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವನ್ನು ಆಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಧ್ವಜಸಂಹಿತೆಯನ್ವಯ ಧ್ವಜಾರೋಹಣ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ 69ನೇ ಕನ್ನಡ ರಾಜ್ಯೋತ್ಸವವನ್ನು ಯಶಸ್ವಿಯಾಗಿ ಆಚರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಪರಿಷ್ಕರಣೆ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಯಾವ ಗ್ಯಾರಂಟಿಯೂ ನಿಲ್ಲುವುದಿಲ್ಲ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಮುಂದಿನ ಎರಡೂವರೆ ವರ್ಷವೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ . ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಹೀಗಾಗಿ ಎಂಟೂವರೆ ವರ್ಷವೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಹೇಳಿದ್ದಾರೆ. ಈ ವಿಚಾರವಾಗಿ ನಿನ್ನೆ ವಿಧಾನಸೌಧದ ಗ್ರ‍್ಯಾಂಡ್ ಮೆಟ್ಟಿಲು ಮೇಲೆ ನಡೆದ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಉದ್ಘಾಟನೆ ವೇಳೆ ಮಾತನಾಡಿದ ಡಿಸಿಎಂ, ಅನೇಕ ಜನರು ನನಗೆ ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್‌ಗೆ ಹಣ ಕೊಡುವುದಕ್ಕೆ ಸಿದ್ದವಾಗಿದ್ದೇವೆ.ನಮಗೆ ಉಚಿತ ಪ್ರಯಾಣ ಬೇಡ ಎಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್‌ಗೆ ದುಡ್ಡು ಕೊಡುತ್ತೇವೆ ಆದರೆ ಬಸ್‌ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

Read More

ನವದೆಹಲಿ : ದೇಶಾದ್ಯಮತ ಸಂಭ್ರಮ, ಸಡಗದಿಂದ ದೀಪಾವಳಿ ಹಬ್ಬ ಆಚರಿಸಲಾಗುತ್ತಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಕಚ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದಾರೆ.  ಪ್ರಧಾನಿ ಮೋದಿ ಅವರು ಪ್ರತಿ ವರ್ಷ ಯೋಧರೊಂದಿಗೆ ದೀಪಾವಳಿ ಆಚರಿಸುತ್ತಾರೆ. ಈ ವರ್ಷವೂ ಕೂಡ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಿಸಿದ್ದಾರೆ. https://twitter.com/ANI/status/1851901734572163344?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಟ್ರ್ಯಾಕ್ಟರ್ ಗೆ ಟೆಂಪೋ ಡಿಕ್ಕಿ ಹೊಡೆದು ಘೋರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಡೌನ್‌ನಲ್ಲಿ ನಡೆದಿದೆ. ಟ್ರ್ಯಾಕ್ಟರ್‌ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ನೋಯ್ಡಾದಲ್ಲಿ ತರಕಾರಿ ಮಾರಾಟಗಾರರಾಗಿ ಕೆಲಸ ಮಾಡುತ್ತಿದ್ದ ಸಂತ್ರಸ್ತರೆಲ್ಲರೂ ದೀಪಾವಳಿ ಆಚರಿಸಲು ಮನೆಗೆ ಮರಳುತ್ತಿದ್ದರು. ಅವರು ಮೂರು ಚಕ್ರದ ಲೋಡರ್ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದರು. ಹತ್ಯೆಗೀಡಾದವರಲ್ಲಿ ಮಿರ್ಜಾಪುರದ ಅತುಲ್, 31, ಬರೇಲಿಯ ಕನ್ಹೈ, 35, ಅವರ ಪತ್ನಿ ಕುಸುಮ್, 30, ಮತ್ತು ಅವರ ಮಕ್ಕಳಾದ ಕಾರ್ತಿಕ್ ಮತ್ತು ಶೀನು ಎಂಟು ಮತ್ತು ಐದು ವರ್ಷದವರು ಎಂದು ಬುಡೌನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಧಿ ಶ್ರೀವಾಸ್ತವ್ ಹೇಳಿದ್ದಾರೆ. ಒಬ್ಬ ವ್ಯಕ್ತಿಯನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಅವರು ಹೇಳಿದರು. ಘಟನೆಯ ಬಳಿಕ ಪರಾರಿಯಾಗಿರುವ ಟ್ರ್ಯಾಕ್ಟರ್ ಚಾಲಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

Read More

ಚೆನ್ನೈ: ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ದೇವಾಲಯವೊಂದರ ಬಳಿ ಕಾವೇರಿ ನದಿ ದಡದಲ್ಲಿ ಭಕ್ತರು ರಾಕೆಟ್ ಲಾಂಚರ್ ಅನ್ನು ಪತ್ತೆ ಮಾಡಿದ್ದಾರೆ. ಪೊಲೀಸರು ಲೋಹದ ವಸ್ತುವನ್ನು ಸೇನೆಗೆ ಹಸ್ತಾಂತರಿಸಿದ್ದಾರೆ. ಬುಧವಾರ ಸಂಜೆ, ಅಂಡನಲ್ಲೂರ್ ದೇವಸ್ಥಾನಕ್ಕೆ ಭೇಟಿ ನೀಡಿದ ಭಕ್ತರು ನದಿಯ ದಡಕ್ಕೆ ಹೋದರು, ಅಲ್ಲಿ ಅವರು ರಾಕೆಟ್ ಲಾಂಚರ್ ಅನ್ನು ಹೋಲುವ ತಿಳಿ ನೀಲಿ ಮತ್ತು ಕಪ್ಪು ಲೋಹದ ವಸ್ತುವನ್ನು ನೋಡಿದರು. ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು ಮತ್ತು ಒಂದು ತಂಡವು ವಸ್ತುವನ್ನು ಭದ್ರಪಡಿಸಿ 117 ಆರ್ಮಿ ಇನ್ಫೆಂಟ್ರಿ ಬೆಟಾಲಿಯನ್ಗೆ ಹಸ್ತಾಂತರಿಸಿತು. ರಾಕೆಟ್ ಲಾಂಚರ್ನ ಮೂಲ ಮತ್ತು ಅದು ನದಿಯ ದಡದಲ್ಲಿ ಹೇಗೆ ಕೊನೆಗೊಂಡಿತು ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ

Read More

ಮುಂಬೈ : ಎಂಟು ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ 2025 ಅನ್ನು ಪಾಕಿಸ್ತಾನ ಆಯೋಜಿಸಲಿದೆ. ಈ ಟೂರ್ನಿ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ನಡೆಯಲಿದೆ. ವರದಿಗಳ ಪ್ರಕಾರ 15 ಪಂದ್ಯಗಳಲ್ಲಿ 8 ತಂಡಗಳು ಮುಖಾಮುಖಿಯಾಗಲಿವೆ. 2023ರಲ್ಲಿ ನಡೆಯುವ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸುವ ಅಗ್ರ ಎಂಟು ತಂಡಗಳು ಇದರಲ್ಲಿ ಭಾಗವಹಿಸಲಿವೆ. ಈ ಎಲ್ಲಾ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಪಂದ್ಯಾವಳಿಯನ್ನು 2017 ರಲ್ಲಿ ಆಡಲಾಯಿತು, ಇದರಲ್ಲಿ ಪಾಕಿಸ್ತಾನವು ಭಾರತವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದಿತ್ತು. ಪಂದ್ಯಾವಳಿಯ ಗುಂಪುಗಳು ಗುಂಪು ಎ- ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್, ಬಾಂಗ್ಲಾದೇಶ. ಗುಂಪು ಬಿ- ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ. ಈ ಮೂರು ತಂಡಗಳನ್ನು ಟೀಂ ಇಂಡಿಯಾ ಎದುರಿಸಲಿದೆ ಸುದ್ದಿ ಪ್ರಕಾರ, ಪಂದ್ಯಾವಳಿ ಫೆಬ್ರವರಿ 19 ರಿಂದ ಪ್ರಾರಂಭವಾಗಲಿದ್ದು, ಮೊದಲ ಪಂದ್ಯ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಪಾಕಿಸ್ತಾನವನ್ನು ಹೊರತುಪಡಿಸಿ, ಟೀಂ ಇಂಡಿಯಾ ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ಸೇರಿದಂತೆ ಇತರ ಎರಡು ತಂಡಗಳೊಂದಿಗೆ ಪಂದ್ಯಗಳನ್ನು ಆಡಬೇಕಾಗಿದೆ.…

Read More