Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಇ.ಇ.ಡಿಎಸ್. ತಂತ್ರಾಂಶದಲ್ಲಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಬೋಧಕ /ಬೋಧಕೇತರ ನೌಕರರ ಸೇವಾ ವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ(1) ಸುತ್ತೋಲೆಯಲ್ಲಿ ರಾಜ್ಯದ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಯಮಾನುಸಾರ ಅನುದಾನ ಸಹಿತ ಅನುಮೋದನೆಯಾದ ಶಿಕ್ಷಕರ ಸೇವಾ ವಿವರಗಳನ್ನು ಆಯಾ ಶಾಲಾ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಲಾಗಿನ್ ಮೂಲಕವೇ ಗಣಕೀಕರಿಸುವ ಸಂಬಂದ ಆಡಳಿತ ಮಂಡಳಿಗಳಿಂದ ಸೇವಾ ವಹಿಗಳನ್ನು ಪಡೆದು ಪರಿಶೀಲಿಸಿ ಕರಾರುವಾಕ್ಕಾದ ಸೇವಾ ವಿವರಗಳನ್ನು ತಮ್ಮ ಲಾಗಿನ್ ಮೂಲಕ ಗಣಕೀಕರಿಸಲು ತಿಳಿಸಲಾಗಿರುತ್ತದೆ. ಪ್ರಸ್ತುತ ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಅನುದಾನಿತ ಶಿಕ್ಷಕರ ಮಾಹಿತಿಯನ್ನು ಪರಿಶೀಲಿಸಲಾಗಿ ಬೋಧಕ/ಬೋಧಕೇತರ ನೌಕರರ ಸೇವಾ ವಿವರಗಳು ಸಮರ್ಪಕವಾಗಿ ಗಣಕೀಕರಣಗೊಂಡಿಲ್ಲದಿರುವುದನ್ನು ಗಮನಿಸಲಾಗಿದೆ. ಖಜಾನೆಯಿಂದ ವೇತನ ಸೆಳೆಯುತ್ತಿರುವ ಅನುದಾನಿತ ಶಾಲಾ ಸಿಬ್ಬಂದಿಯು ಯಾವುದೇ ಕಾರಣಕ್ಕೂ ಇ.ಇ.ಡಿ.ಎಸ್ ತಂತ್ರಾಂಶದಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಗಣಕೀಕರಣಕ್ಕಾಗಿ ಅವಕಾಶ ಕಲ್ಪಿಸಲಾಗಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಸದರಿ ಕಾರ್ಯ ಪೂರ್ಣ ಪ್ರಮಾಣದಲ್ಲಿ…
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಅಕ್ಟೋಬರ್ 3ರ ಇಂದು ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಬೆಳಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡುವರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ. ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಝ್ಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ.ಪಾಟೀಲ್, ರಾಮಲಿಂಗ ರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸುವರು. ಇಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು…
ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಒಟ್ಟು 17 ದಿನ ಇರಲಿದೆ. 2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 17 ದಿನ ಇರಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.
BIG NEWS : ಇಂದು ರಾಜ್ಯಾದ್ಯಂತ 402 ‘PSI’ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಬೆಂಗಳೂರು : ಇದೆ ಅಕ್ಟೊಬರ್ 3 ರ ಇಂದು ರಾಜ್ಯಾದ್ಯಂತ 402 PSI ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಅತ್ಯಂತ ಕಠಿಣ ರೂಲ್ಸ್ ಜಾರಿ ಮಾಡಲಾಗಿದೆ. ಕಳದ ಬಾರಿ ಆದ ಅಕ್ರಮದ ಹಿನ್ನಲೆ ಈ ಬಾರಿ ಬೀಗಿಭದ್ರತೆ ಮಾಡಲಾಗಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಎಲ್ಲಾ ಪರೀಕ್ಷಾ ಕೊಠಡಿಯನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಇದನ್ನು ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಇನ್ನು…
ದಾವಣಗೆರೆ : ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ, ಅದರಲ್ಲೂ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಇನ್ನು ಮುಂದೆ ಕನ್ನಡದಲ್ಲೂ ಪರೀಕ್ಷೆ ಬರೆಯಬಹುದು ಎಂದು ಕೇಂದ್ರ ಸಚಿವರಾದಂತಹ ವಿ.ಸೋಮಣ್ಣ ಅವರು ಘೋಷಣೆ ಮಾಡಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿ ಖಾಲಿ ಇರುವ 46 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು ಕಳೆದ ಎರಡೂವರೆಗೆ ತಿಂಗಳಿಂದ ಇದರ ಪ್ರಗತಿ ವೇಗ ಹೆಚ್ಚಿಸಲಾಗಿದೆ. ಒಟ್ಟು ಈ…
ನವದೆಹಲಿ:ಖೋ ಖೋ ಫೆಡರೇಶನ್ ಆಫ್ ಇಂಡಿಯಾ (ಕೆಕೆಎಫ್ಐ), ಅಂತರರಾಷ್ಟ್ರೀಯ ಖೋ ಖೋ ಫೆಡರೇಶನ್ ಸಹಯೋಗದೊಂದಿಗೆ 2025 ರಲ್ಲಿ ಭಾರತದಲ್ಲಿ ನಡೆಯಲಿರುವ ಮೊದಲ ಖೋ ಖೋ ವಿಶ್ವಕಪ್ ಅನ್ನು ಘೋಷಿಸಿತು. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ 6 ಖಂಡಗಳ 24 ದೇಶಗಳು ಭಾಗವಹಿಸಲಿದ್ದು, 16 ಪುರುಷರ ಮತ್ತು 16 ಮಹಿಳಾ ತಂಡಗಳು ಖೋ ಖೋ ಉತ್ಸಾಹವನ್ನು ಆಚರಿಸಲು ಮತ್ತು ಜಾಗತಿಕ ಏಕತೆಯನ್ನು ಬೆಳೆಸಲು ಒಗ್ಗೂಡಲಿವೆ. ಖೋ ಖೋ ಭಾರತದಲ್ಲಿ ತನ್ನ ಬೇರುಗಳನ್ನು ಹೊಂದಿದೆ, ಮತ್ತು ಈ ವಿಶ್ವಕಪ್ ಕ್ರೀಡೆಯ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇಂದು, ಮಣ್ಣಿನಲ್ಲಿ ಪ್ರಾರಂಭವಾದ ಕ್ರೀಡೆಯು ಈಗ ಜಾಗತಿಕ ಉಪಸ್ಥಿತಿಯನ್ನು ಹೊಂದಿದೆ, ವಿಶ್ವದಾದ್ಯಂತ 54 ದೇಶಗಳು ಈ ಕ್ರೀಡೆಯನ್ನು ಆಡುತ್ತಿವೆ. ವಿಶ್ವಕಪ್ಗೆ ಮುಂಚಿತವಾಗಿ, ಕ್ರೀಡೆಯನ್ನು ಉತ್ತೇಜಿಸಲು 10 ನಗರಗಳ 200 ಗಣ್ಯ ಶಾಲೆಗಳಿಗೆ ಕ್ರೀಡೆಯನ್ನು ಕೊಂಡೊಯ್ಯಲು ಕೆಕೆಎಫ್ಐ ಯೋಜಿಸಿದೆ. ವಿಶ್ವಕಪ್ಗೆ ಮುಂಚಿತವಾಗಿ ಕನಿಷ್ಠ 50 ಲಕ್ಷ ಆಟಗಾರರನ್ನು ನೋಂದಾಯಿಸುವ ಉದ್ದೇಶದಿಂದ ಫೆಡರೇಶನ್ ಶಾಲಾ ವಿದ್ಯಾರ್ಥಿಗಳಿಗೆ…
ನವದೆಹಲಿ : 10 ನೇ ತರಗತಿ ಪಾಸಾದವರಿಗೆ ನಬಾರ್ಡ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿವಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 21 ಕೊನೆಯ ದಿನವಾಗಿದೆ. ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಬಂಪರ್ ನೇಮಕಾತಿಯನ್ನು ಹೊರಡಿಸಿದೆ. 2ನೇ ಅಕ್ಟೋಬರ್ 2024 ರಿಂದ ನೀವು ಈ ನೇಮಕಾತಿಗಳಿಗೆ ಅರ್ಜಿ ಸಲ್ಲಿಸಬಹುದು. ಇದಲ್ಲದೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅಕ್ಟೋಬರ್ 21 ಎಂದು ಇರಿಸಲಾಗಿದೆ. ಅರ್ಹತೆ ಈ ನಿಟ್ಟಿನಲ್ಲಿ ಬಂದಿರುವ ಮಾಹಿತಿಯ ಪ್ರಕಾರ, ನಬಾರ್ಡ್ನಿಂದ ಮಾಡುವ ನೇಮಕಾತಿಗಳಿಗೆ ಅರ್ಜಿ ಸಲ್ಲಿಸಲು, ನಿಮ್ಮ ವಯಸ್ಸು ಕನಿಷ್ಠ 18 ವರ್ಷವಾಗಿರಬೇಕು. ಗರಿಷ್ಠ ವಯಸ್ಸು 30 ವರ್ಷಗಳಿಗಿಂತ ಹೆಚ್ಚಿರಬಾರದು. ಇದರ ಹೊರತಾಗಿ, ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ. ನಿಮ್ಮ 10 ನೇ ತರಗತಿಯ ವರದಿ ಕಾರ್ಡ್ ಅನ್ನು ನೀವು ಹೊಂದಿರುವುದು ಅವಶ್ಯಕ. ಅರ್ಜಿ ಸಲ್ಲಿಸುವಾಗ ಈ ವರದಿ ಕಾರ್ಡ್ ಅನ್ನು ನಿಮ್ಮಿಂದ ಕೇಳಬಹುದು. ನೀವು…
ನವದೆಹಲಿ: ಜಪಾನ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಶಿಗೆರು ಇಶಿಬಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಅಭಿನಂದಿಸಿದ್ದಾರೆ “ಪ್ರಧಾನಿ @shigeruishiba ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಇಂಡೋ-ಪೆಸಿಫಿಕ್ ಮತ್ತು ಅದರಾಚೆ ಶಾಂತಿ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ.” ಎಂದು ಅಭಿನಂದಿಸಿದ್ದಾರೆ. ಹಗರಣಗಳು ತಮ್ಮ ಸರ್ಕಾರವನ್ನು ಕಾಡಿದ ನಂತರ ಹೊಸ ನಾಯಕನಿಗೆ ದಾರಿ ಮಾಡಿಕೊಡಲು ಅಧಿಕಾರದಿಂದ ಕೆಳಗಿಳಿದ ಫ್ಯೂಮಿಯೊ ಕಿಶಿಡಾ ಅವರ ಸ್ಥಾನಕ್ಕೆ ಇಶಿಬಾ ಅವರನ್ನು ನೇಮಿಸಲಾಯಿತು
ಜಿಬೌಟಿ: ಜಿಬೌಟಿ ಕರಾವಳಿಯಲ್ಲಿ ಎರಡು ವಲಸೆ ದೋಣಿಗಳು ಮುಳುಗಿದ ಪರಿಣಾಮ ಕನಿಷ್ಠ 45 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಕಾಣೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ವಲಸೆ ಸಂಸ್ಥೆ ಮಂಗಳವಾರ ತಿಳಿಸಿದೆ. ಪೂರ್ವ ಆಫ್ರಿಕನ್ ರಾಷ್ಟ್ರದ ಕೆಂಪು ಸಮುದ್ರದಲ್ಲಿ ಸಂಭವಿಸಿದ ದುರಂತವು ಆಫ್ರಿಕಾದಿಂದ ವಲಸೆ ಬಂದವರಿಗೆ ಪೂರ್ವ ಮಾರ್ಗ ಎಂದು ಕರೆಯಲ್ಪಡುವ ಅಪಾಯಕಾರಿ ಅಪಘಾತವಾಗಿದೆ. 310 ಜನರನ್ನು ಹೊತ್ತ ದೋಣಿಗಳು ಯೆಮೆನ್ ನಿಂದ ಹೊರಟಿವೆ ಎಂದು ಅಂತರರಾಷ್ಟ್ರೀಯ ವಲಸೆ ಸಂಸ್ಥೆ (ಐಒಎಂ) ತಿಳಿಸಿದೆ. “ಇಲ್ಲಿಯವರೆಗೆ 32 ಬದುಕುಳಿದವರನ್ನು ರಕ್ಷಿಸಲಾಗಿದೆ” ಎಂದು ಐಒಎಂ ಎಕ್ಸ್ ನಲ್ಲಿ ಹೇಳಿದೆ, ಇದು ಶೋಧ ಮತ್ತು ರಕ್ಷಣಾ ಪ್ರಯತ್ನಗಳಿಗೆ ಸಹಾಯ ಮಾಡುತ್ತಿದೆ ಎಂದು ಹೇಳಿದರು. ವಾಯುವ್ಯ ಖೋರ್ ಅಂಗಾರ್ ಪ್ರದೇಶದ ಬಳಿಯ ಕಡಲತೀರದಿಂದ ಸುಮಾರು 150 ಮೀಟರ್ ದೂರದಲ್ಲಿ ಈ ದುರಂತ ಸಂಭವಿಸಿದೆ ಎಂದು ಜಿಬೌಟಿಯ ಕರಾವಳಿ ಕಾವಲು ಪಡೆ ತಿಳಿಸಿದೆ. ಫ್ರೆಂಚ್ ನೌಕಾಪಡೆಯ ಬೆಂಬಲದೊಂದಿಗೆ ಸೋಮವಾರ ಮುಂಜಾನೆ ಪ್ರಾರಂಭವಾದ ಜಂಟಿ ರಕ್ಷಣಾ ಪ್ರಯತ್ನ ನಡೆಯುತ್ತಿದೆ ಎಂದು ಅದು ಹೇಳಿದೆ.…
ಬೆಂಗಳೂರು : ಧಾರವಾಹಿ ನಟಿಯ ವ್ಯಾಮೋಹಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೀರಿಯಲ್ ನಟಿ ವೀಣಾ ಅವರನ್ನು ಪ್ರೀತಿಸುತ್ತಿದ್ದ ಯುವಕ ಮದನ್ (25) ಎಂಬಾತ ವೀಣಾ ಮದುವೆಗೆ ನಿರಾಕರಿಸಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವೀಣಾ ಹಾಗೂ ಮದನ್ ಸೆಪ್ಟೆಂಬರ್ 1 ರಂದು ರಾತ್ರಿ ಒಟ್ಟಿಗೆ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಆದರೆ ವೀಣಾ ಮದುವೆಗೆ ನಿರಾಕರಿಸಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮನ ನೊಂದು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು ಮದುವೆ ನಿರಾಕರಿಸಿದ್ದಕ್ಕೆ ಆತ್ಮಹತ್ಯೆ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಯುವತಿ ನಟಿ ವೀಣಾರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.













