Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ನಗರದಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜೂನ್ 26 ರ ಇಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯದ ಬಗ್ಗೆ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 26.06.2024 ರ ಇಂದು ಬೆಳಿಗ್ಗೆ 10:30 ಗಂಟೆಯಿಂದ ಮದ್ಯಾಹ್ನ 4:00 ಗಂಟೆಯವರೆಗೆ ‘66/11KV ಯೆಲ್ಲಾರ್ ಬಂಡೆ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. 26.06.2024 (ಬುಧವಾರ) ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ…
ಬೆಂಗಳೂರು : ಸರ್ಕಾರಿ ಆಸ್ತಿ ಸಂರಕ್ಷಣೆ ನಿಟ್ಟಿನಲ್ಲಿ ಪ್ರತಿ ಮೂರ್ನಾಲ್ಕು ತಿಂಗಳಿಗೊಮ್ಮೆ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರಿ ಆಸ್ತಿ ಇರುವ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ಮಾಡಲು ʼಲ್ಯಾಂಡ್ ಬೀಟ್ʼ ಕಾರ್ಯಕ್ರಮ ಜಾರಿಗೆ ತರಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ಕಂದಾಯ ಇಲಾಖೆಯ 14 ಲಕ್ಷ ಸರ್ಕಾರಿ ಆಸ್ತಿಗಳ ಡಿಜಿಟಲ್ ದಾಖಲೆಗಳನ್ನೊಳಗೊಂಡ (ಸರ್ವೆ ಸಂಖ್ಯೆ, ಭೌಗೋಳಿಕ ಗಡಿ ಸೇರಿದಂತೆ) ಆಪ್ ಅಭಿವೃದ್ಧಿಪಡಿಸಿದ್ದೇವೆ. ಜಿಪಿಎಸ್ ಬಳಸಿಕೊಂಡು ಪ್ರತಿ ಆಸ್ತಿಯನ್ನು ಅಪ್ಲಿಕೇಶನ್ನಲ್ಲಿ ಮ್ಯಾಪ್ ಮಾಡಲಾಗುತ್ತದೆ. ಒತ್ತುವರಿ ಪರಿಶೀಲಿಸಲು ನಮ್ಮ ಅಧಿಕಾರಿಗಳು ಪ್ರತಿ ಸ್ಥಳಕ್ಕೆ ಭೇಟಿ ನೀಡುತ್ತಾರೆ. ಯಾವುದೇ ಸಮಸ್ಯೆಗಳನ್ನು ನೇರವಾಗಿ ಅಪ್ಲಿಕೇಶನ್ ಮೂಲಕ ವರದಿ ಮಾಡುತ್ತಾರೆ. ನಂತರ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಈವರೆಗೆ ಗ್ರಾಮ ಆಡಳಿತ ಅಧಿಕಾರಿಗಳು 5,90,000 ಕ್ಕೂ ಹೆಚ್ಚು ಆಸ್ತಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಂದೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಲಿದೆ. ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಇಲಾಖಾ ಅಧಿಕಾರಿಗಳ ಪರಿಶ್ರಮದಿಂದಾಗಿ,…
ಬೆಂಗಳೂರು : ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5,374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಪ್ರಕರಣಗಳು ವರದಿಯಾಗಿವೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ. ಈ ಕಡೆಗಳಲ್ಲಿ ರೋಗ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. * ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಿಕೊಳ್ಳಬೇಕು. * ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ…
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ರೈತರು ತಮ್ಮ ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ. ರೈತರು ಸರ್ಕಾರದ ಯಾವುದೇ ಸೌಲಭ್ಯದ ಫಲಾನುಭವಿಯಾಗಲು ರೈತರು ತಮ್ಮ ಆರ್ಟಿಸಿ ಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕು. ಈ ಕುರಿತು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದ್ದು ಇದನ್ನು ರೈತರು ತಮ್ಮ ಮೊಬೈಲ್ ಮೂಲಕ ಅಥವಾ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಸದರಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿರುತ್ತದೆ. ಆರ್ಟಿಸಿ ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲು ಉದಾಸೀನ ಮಾಡಿದರೆ ಮುಂದಿನ ದಿನಗಳಲ್ಲಿ ಅಂತಹ ರೈತರಿಗೆ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಕ್ಕೆ ತೊಂದರೆ ಉಂಟಾಗಲಿದೆ. ಆರ್ಟಿಸಿ ಗೆ ಆಧಾರ್ ಜೋಡಣೆ ಮಾಡುವುದರಿಂದ ಜಮೀನಿನ ದಾಖಲೆ ಮತ್ತಷ್ಟು ಸುರಕ್ಷಿತವಾಗಿರುತ್ತದೆ. ಭೂ ದಾಖಲೆ ಪಡೆಯುವುದು ಸುಲಭ. ಸರ್ಕಾರಿ ಯೋಜನೆಗೆ ಅರ್ಜಿ ಸಲ್ಲಿಕೆ ಸರಳವಾಗುತ್ತದೆ. ಖಾತಾ ವಿವಾದವನ್ನು ತಪ್ಪಿಸಲು ಅನುಕೂಲ, ಸಾಲ ಪ್ರಕ್ತಿಯೆ ಸುಲಭ ಹಾಗೂ ಜಮೀನು ಮಾರಾಟ ಸಮಯದಲ್ಲಿ ಹೆಚ್ಚಿನ ಪಾರದರ್ಶಕತೆ…
ಬೆಂಗಳೂರು: ಕೆಎಂಎಫ್ ನಿಂದ ರಾಜ್ಯಾಧ್ಯಂತ ನಂದಿನಿ ಹಾಲಿನ ( Nandini Milk ) ದರ ಏರಿಕೆಯ ನಿರ್ಧಾರವನ್ನು ಪ್ರಕಟಿಸಿದೆ. ಈ ಹಿನ್ನಲೆಯಲ್ಲಿ ನಂದಿನಿ ವಿವಿಧ ಹಾಲಿನ ದರಗಳು ಇಂದಿನಿಂದ ಹೆಚ್ಚಳವಾಗಲಿದ್ದಾವೆ. ಹಾಗಾದ್ರೇ ನಂದಿನಿ ಹಾಲಿನ ಉತ್ಪನ್ನಗಳಲ್ಲಿ ಯಾವುದಕ್ಕೆ ಎಷ್ಟು ಹೆಚ್ಚಾಗಲಿದೆ ಎನ್ನುವ ಮಾಹಿತಿ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ( KMF) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಹಕಾರ ಹಾಲು ಮಹಾಮಂಡಳವಾಗಿ ಹೈನೋದ್ಯಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು ರಾಷ್ಟ್ರದಲ್ಲಿಯೇ ಎರಡನೆಯ ದೊಡ್ಡ ಮಹಾಮಂಡಳವಾಗಿದ್ದು, ದಕ್ಷಿಣ ಭಾರತದ ಕಾರ್ಯನಿರ್ವಹಿಸುತ್ತಿರುತ್ತದೆ. ಕಹಾಮವು ಕಳೆದ 05 ದಶಕಗಳಿಂದಲೂ ತನ್ನ ಸದಸ್ಯ ಹಾಲು ಒಕ್ಕೂಟಗಳ ಮೂಲಕ ರಾಜ್ಯದ 27 ಲಕ್ಷಕ್ಕೂ ಹೆಚ್ಚು ಹೈನುಗಾರರಿಂದ ಹಾಲು ಖರೀದಿಸಿ, ಸಂಸ್ಕರಿಸಿ, “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ಯಾಂಡ್ನಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಅಭಿರುಚಿಗೆ ತಕ್ಕಂತೆ ಪರಿಚಯಿಸಿರುತ್ತದೆ ಎಂದಿದೆ. ಪ್ರಸ್ತುತ…
ಬೆಂಗಳೂರು : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2024ರ ಪರೀಕ್ಷೆಯನ್ನು ಕೇಂದ್ರೀಕೃತ ದಾಖಲಾತಿ ಘಟಕ ಬೆಂಗಳೂರು ಇವರ ವತಿಯಿಂದ ಜೂ.30 ರಂದು ಮೊದಲ ಅಧಿವೇಶನ ಬೆಳಿಗ್ಗೆ 9.30 ರಿಂದ 12 ಗಂಟೆಯವರೆಗೆ 12 ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಎರಡನೇ ಅಧಿವೇಶನ ಮಧ್ಯಾಹ್ನ 2 ಗಂಟೆಯಿಂದ 4.30 ರವರೆಗೆ 18 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು https://schooleducation.karnataka.gov.in/cacell/kn ವೆಬ್ಸೈಟ್ನಲ್ಲಿ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವುದರ ಮೂಲಕ ಪ್ರವೇಶ ಪತ್ರಗಳ ಡೌನ್ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರತಿ ಅಧಿವೇಶನದ ಪರೀಕ್ಷಾ ಪ್ರಾರಂಭದ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪರೀಕ್ಷೆ ಪತ್ರ ಇಲ್ಲದೇ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ. ಈ ಬಗ್ಗೆ ಯಾವುದೇ ವಿನಾಯಿತಿ ಇರುವುದಿಲ್ಲ. ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗ್ರತಾ ದಳದ ಅಧಿಕಾರಿಗಳನ್ನು ಮತ್ತು ಮೊಬೈಲ್ ಸ್ವಾಧೀನ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಕೊಠಡಿಯಲ್ಲಿ…
48 ವರ್ಷಗಳ ಬಳಿಕ ಇಂದು ʻಲೋಕಸಭೆ ಸ್ಪೀಕರ್ ಚುನಾವಣೆ : ʻNDAʼ ಯಿಂದ ಓಂ ಬಿರ್ಲಾ, ʻಇಂಡಿಯಾʼದಿಂದ ಕೆ.ಸುರೇಶ್ ಸ್ಪರ್ಧೆ
ನವದೆಹಲಿ : ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ತಮ್ಮ ಸಂಸದರಿಗೆ ವಿಪ್ ಜಾರಿ ಮಾಡಿದ್ದು, ನಿರ್ಣಾಯಕ ಸ್ಪೀಕರ್ ಚುನಾವಣೆಗೆ 26 ಜೂನ್ 2024 ರಂದು ಲೋಕಸಭೆಯಲ್ಲಿ ಹಾಜರಾಗುವಂತೆ ಸೂಚಿಸಿದೆ. ಸ್ವಾತಂತ್ರ್ಯೋತ್ತರ ಭಾರತದಲ್ಲಿ ಲೋಕಸಭಾ ಸ್ಪೀಕರ್ ಚುನಾವಣೆ ನಡೆಯುತ್ತಿರುವುದು ಇದು ಮೂರನೇ ಬಾರಿ. ಇದಕ್ಕೂ ಮುನ್ನ 1976 ಮತ್ತು 1952ರಲ್ಲಿ ಲೋಕಸಭಾ ಸ್ಪೀಕರ್ ಚುನಾವಣೆ ನಡೆದಿತ್ತು. ಕಾಂಗ್ರೆಸ್ ಮುಖ್ಯ ಸಚೇತಕ ಕೆ.ಸುರೇಶ್ ಅವರು ಲೋಕಸಭೆಯಲ್ಲಿ ಪಕ್ಷದ ಎಲ್ಲಾ ಸದಸ್ಯರು ಬೆಳಿಗ್ಗೆ 11.00 ರಿಂದ ಹಾಜರಾಗಬೇಕು ಮತ್ತು ಅಧಿವೇಶನದುದ್ದಕ್ಕೂ ಪಕ್ಷದ ನಿಲುವನ್ನು ಬೆಂಬಲಿಸಬೇಕು ಎಂದು ಕೋರಿದ್ದಾರೆ. ಸುರೇಶ್ ಅವರು ಸ್ಪೀಕರ್ ಚುನಾವಣೆಯಲ್ಲಿ ಪ್ರತಿಪಕ್ಷ ಇಂಡಿಯಾ ಬಣವನ್ನು ಪ್ರತಿನಿಧಿಸುವ ಜಂಟಿ ಅಭ್ಯರ್ಥಿಯಾಗಿದ್ದು, ಅಲ್ಲಿ ಅವರು ಎನ್ಡಿಎಯ ಓಂ ಬಿರ್ಲಾ ವಿರುದ್ಧ ಸ್ಪರ್ಧಿಸಲಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರು ದಯವಿಟ್ಟು ಬೆಳಿಗ್ಗೆ 11:00 ರಿಂದ 2024 ರ ಜೂನ್ 26 ರಂದು ಸದನವನ್ನು ಮುಂದೂಡುವವರೆಗೆ ತಪ್ಪದೇ ಸದನದಲ್ಲಿ ಹಾಜರಿರಬೇಕು ಮತ್ತು ಪಕ್ಷದ ನಿಲುವನ್ನು…
ಬೆಂಗಳೂರು : ಯುವನಿಧಿಗೆ ನೋಂದಾಯಿಸಕೊಂಡಿರುವ ಫಲಾನುಭವಿಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿಯಲ್ಲ, ನಿರುದ್ಯೋಗಿ ಎಂದು ಪ್ರತಿ ತಿಂಗಳು 25ನೇ ತಾರೀಖಿನೊಳಗೆ ಸ್ವಯಂ ಘೋಷಣೆ ಸಲ್ಲಿಸಬೇಕು. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಾಂಗ ಮಾಡಿ 2023 ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ನಲ್ಲಿ ನೊಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ ನಗದು ವರ್ಗಾವಣೆ ಮಾಡಲಾಗಿದೆ. ಅಭ್ಯರ್ಥಿಗಳು ಈ ಪ್ರಯೋಜನವನ್ನು ಪಡೆಯಬೇಕಿದ್ದರೆ, ಪ್ರತಿ ತಿಂಗಳ 25 ನೇ ತಾರೀಖಿನೊಳಗೆ ತಾನು ನಿರುದ್ಯೋಗಿ, ವ್ಯಾಸಂಗ ಮಾಡುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗವಿಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ. ಮಾರ್ಚ್, ಏಪ್ರಿಲ್, ಮೇ, ಜೂನ್ ತಿಂಗಳ ಸ್ವಯಂ ಘೋಷಣೆಯನ್ನು ಸೇವಾ ಸಿಂಧು ಪೋರ್ಟಲ್ನಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯೋಜನ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ…
ಬೆಂಗಳೂರು : ಎಪಿಎಲ್, ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಉಳಿಕೆ ಇರುವ ಕಾರ್ಡ್ ಗಳಲ್ಲಿ ಎಪಿಲ್ ,ಬಿಪಿಎಲ್ ಕಾರ್ಡ್ ಗಳನ್ನು ಗುರುತಿಸಿ ವಿಲೇವಾರಿ ಮಾಡಲು ಸಚಿವ ಕೆ.ಹೆಚ್. ಮುನಿಯಪ್ಪ ಸೂಚನೆ ನೀಡಿದ್ದಾರೆ. ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಯಲ್ಲಿ ಪಡಿತರದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ,ರಾಗಿ, ಜೋಳ, ಇವು ಗುಣಮಟ್ಟದಿಂರಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಉಗ್ರಾಣಗಳಲ್ಲಿ ಶುಚಿತ್ವವನ್ನು ಕಾಪಾಡಬೇಕು ಮತ್ತು ವಿಲೇವಾರಿ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಆಹಾರ ಧಾನ್ಯ ಗಳನ್ನು ಸರಬರಾಜು ಮಾಡಬೇಕು. ಉಳಿಕೆ ಇರುವ ಕಾರ್ಡ್ ಗಳಲ್ಲಿ ಎಪಿಲ್ ,ಬಿಪಿಎಲ್ ಕಾರ್ಡ್ ಗಳನ್ನು ಗುರುತಿಸಿ ವಿಲೇವಾರಿ ಮಾಡಲು ಸೂಚನೆ ನೀಡಿದರು. ಡಿಬಿಟಿ ಹಣವು ಪ್ರತಿ ತಿಂಗಳ ಅಂತ್ಯದ ಒಳಗೆ ಫಲಾನುಭವಿಗಳ ಖಾತೆಗೆ ಸಂದಾಯವಾಗುವಂತೆ ಕ್ರಮ ತೆಗೆದುಕೊಳ್ಳುಬೇಕು. ಇಲಾಖೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ರಮಣದೀಪ್ ಚೌದರಿ,ಆಯುಕತ್ತರಾದ ವಾಸಿ ರೆಡ್ಡಿ…
ಬೆಂಗಳೂರು : ರಾಜ್ಯದಲ್ಲಿ ಕೆಎಂಎಫ್ ನಂದಿನಿ ಹಾಲಿ ದರ ಪ್ರತಿ ಲೀಟರ್ ಗೆ 2.10 ರೂ ಹೆಚ್ಚಳ ಮಾಡಲಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂದಿನ ಹಾಲಿನ ದರವನ್ನು ರಾಜ್ಯ ಸರ್ಕಾರ ಏರಿಕೆ ಮಾಡಿಲ್ಲ. ಹಾಲಿನ ದರವನ್ನು ಏರಿಕೆ ಮಾಡುವುದು ಕೆಎಂಎಫ್. ದರ ಏರಿಕೆ ಕುರಿತು ಕೆ.ಎಂ. ಎಫ್. ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವುದಾಗಿ ಹೇಳಿದ್ದಾರೆ. ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20 ರಿಂದ ಮೂರು ದಿನಗಳವರೆಗೆ ನಡೆಸಲು ನಿರ್ಧರಿಸಲಾಗಿದೆ. ಬರದ ಹಿನ್ನೆಲೆಯಲ್ಲಿ ಕಳೆದ ವರ್ಷ ಮಂಡ್ಯದಲ್ಲಿ ನಡೆಯಬೇಕಿದ್ದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತು ಮುಂದೂಡಿತ್ತು. ಇದೀಗ ಡಿಸೆಂಬರ್ 20 ರಿಂದ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ












